ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

ಹರೀಶ್‌ ಕೇರ

columnist

harish@vishwavani.news

ದಶಕದ ಕಾಲ ಪತ್ರಿಕೋದ್ಯಮ ಅನುಭವ ಹೊಂದಿದ ಹರೀಶ್‌ ಕೇರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ಹೊಸದಿಗಂತ, ವಿಜಯ ಕರ್ನಾಟಕ, ಕನ್ನಡಪ್ರಭ, ವಿಸ್ತಾರ ನ್ಯೂಸ್‌ಗಳಲ್ಲಿ ಮುದ್ರಣ, ಡಿಜಿಟಲ್‌ ಹಾಗೂ ಯುಟ್ಯೂಬ್‌ ಮೂರೂ ಸ್ವರೂಪಗಳಲ್ಲಿ ಕೆಲಸ ಮಾಡಿದ ಅನುಭವ. ಸಾಹಿತ್ಯ, ಸಾಂಸ್ಕೃತಿಕ, ನಾಡು ಹಾಗೂ ರಾಷ್ಟ್ರ ರಾಜಕೀಯ, ವಿಜ್ಞಾನ, ಪರಿಸರ ಇತ್ಯಾದಿ ಆಸಕ್ತಿಗಳು. ಕವಿ, ಕತೆಗಾರ, ವಿಮರ್ಶಕ. ಗಿಣಿಬಾಗಿಲು, ನಕ್ಷತ್ರ ನೇಯುವ ಹಕ್ಕಿಗಳು, ಮೇಧಾ ಪಾಟ್ಕರ್‌, ಪ್ರಜ್ವಲ ಮಾತು ಉಜ್ವಲ ಬೆಳಕು, ನಿಮ್ಮೊಳಗಿದೆ ಸಕ್ಸಸ್‌ ಇವರ ಕೃತಿಗಳು. ಉತ್ಥಾನ, ಸಂಚಯ, ಸಂಕ್ರಮಣ ಸಾಹಿತ್ಯ ಸ್ಪರ್ಧೆಗಳಲ್ಲಿ ಪುರಸ್ಕಾರ ದೊರೆತಿದೆ. ಅಭಿವೃದ್ದಿ ಪತ್ರಿಕೋದ್ಯಮ ಮತ್ತು ಅಂಕಣ ಬರಹ ಜೀವದ್ರವ್ಯ.

Articles
K Raghunath Murder Case: ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌: ಸಿಬಿಐಗೆ ಸಿಕ್ಕಿಬಿದ್ದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು

ಉದ್ಯಮಿ ಹತ್ಯೆ: ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಸಿಬಿಐ ವಶಕ್ಕೆ

ಹೆಚ್‌ಎಎಲ್‌ ಠಾಣಾ ವ್ಯಾಪ್ತಿಯ ಕುಂದಲಹಳ್ಳಿ ಬಳಿ ಮೇ 14, 2019 ರಲ್ಲಿಆದಿಕೇಶವುಲು ಗೆಸ್ಟ್ ಹೌಸ್‌ನಲ್ಲಿ ರಘುನಾಥ್ ಮೃತಪಟ್ಟಿದ್ದರು. ತನಿಖೆ ಆರಂಭಿಸಿದ ಚೆನ್ನೈ ಸಿಬಿಐ ಕೊಲೆ ಕೇಸ್‌ ದಾಖಲಿಸಿ ಈಗ ಆದಿಕೇಶವುಲು ಮಗ ಶ್ರೀನಿವಾಸ್‌ ಹಾಗೂ ಮಗಳು ಕಲ್ಪಜರನ್ನು ಬಂಧಿಸಿದೆ. ತನಿಖೆ ನಡೆಸಿದ್ದ ಅಂದಿನ ಹೆಚ್‌ಎಎಲ್‌ ಇನ್ಸ್‌ಪೆಕ್ಟರ್‌ ಮೋಹನ್‌ ಅವರನ್ನೂ ಸಿಬಿಐ ಬಂಧಿಸಿ ವಿಚಾರಣೆ ನಡೆಸುತ್ತಿದೆ.

Virat Kohli: ವಿರಾಟ್‌ ಕೊಹ್ಲಿ ಭಾಗವಹಿಸಬೇಕಿದ್ದ ಪಂದ್ಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ಇಲ್ಲ, ಮತ್ತೆಲ್ಲಿ?

ವಿರಾಟ್‌ ಕೊಹ್ಲಿ ಭಾಗವಹಿಸುವ ಪಂದ್ಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲ್ಲ

ಬೆಂಗಳೂರು ಪೊಲೀಸರು ಅನುಮತಿ ನಿರಾಕರಿಸಿದ ಕಾರಣ ಪಂದ್ಯ ಕೆಂಪೇಗೌಡ ವಿಮಾನ ನಿಲ್ದಾಣದ ಸಮೀಪ ಇರುವ ಸೆಂಟರ್‌ ಆಫ್‌ ಎಕ್ಸೆಲೆನ್ಸ್‌ ಮೈದಾನದಲ್ಲಿ ಈ ಪಂದ್ಯಗಳ ವೀಕ್ಷಣೆಗೆ ಪ್ರೇಕ್ಷಕರಿಗೆ ಅನುಮತಿ ಇಲ್ಲ. ಬಿಸಿಸಿಐ ನಿರ್ಮಾಣ ಮಾಡಿರುವ ಸೆಂಟರ್‌ ಆಫ್‌ ಎಕ್ಸೆಲೆನ್ಸ್‌ (Centre of Excellence) ಮೈದಾನದಲ್ಲಿ ನಡೆಯಲಿದೆ. ವಿರಾಟ್‌ ಕೊಹ್ಲಿ(Virat kohli) ಮೊದಲ ಬಾರಿಗೆ ದೆಹಲಿ ಪರ ಈ ಪಂದ್ಯದಲ್ಲಿ ಕಣಕ್ಕೆ ಇಳಿಯಲಿದ್ದಾರೆ.

Theft Case: ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್‌ನಿಂದ 80,000 ರೂ. ಎಗರಿಸಿದ ಖದೀಮರು!

ಅಪಘಾತವಾಗಿ ಬಿದ್ದ ವ್ಯಕ್ತಿ ಮೊಬೈಲ್‌ನಿಂದ 80,000 ರೂ. ಎಗರಿಸಿದ ಖದೀಮರು!

ಮೈಸೂರು ತಾಲೂಕಿನ ಕಡಕೊಳದ ಬಳಿ ಡಿ.19 ರಂದು ಗಣೇಶ್ ಎಂಬವರು ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ಮಧ್ಯರಾತ್ರಿ ಮನೆಗೆ ಬರುವಾಗ ಅಪಘಾತವಾಗಿತ್ತು. ಆಸ್ಪತ್ರೆಗೆ ಸೇರಿಸುವ ನೆಪದಲ್ಲಿ ಬಂದ ರಮೇಶ ಮತ್ತು ಮನು, ಗಣೇಶ್ ಮೊಬೈಲ್ ತೆಗೆದುಕೊಂಡು ಯುಪಿಐ (UPI) ಮೂಲಕ 80 ಸಾವಿರ ರೂ. ಹಣ ವರ್ಗಾವಣೆ ಮಾಡಿಕೊಂಡು ಆಸ್ಪತ್ರೆಗೆ ಸೇರಿಸದೇ ಪರಾರಿ ಆಗಿದ್ದರು.

Lokayukta Raid: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌, ನಾಲ್ಕು ಜಿಲ್ಲೆಗಳಲ್ಲಿ ದಾಳಿ

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌, ನಾಲ್ಕು ಜಿಲ್ಲೆಗಳಲ್ಲಿ ದಾಳಿ

ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ, ರಾಯಚೂರು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಹಲವು ಅಧಿಕಾರಿಗಳ ಮನೆಗಳು, ಕಚೇರಿಗಳು ಲೋಕಾಯುಕ್ತ ತಂಡಗಳ ದಾಳಿಗೆ ಈಡಾಗಿವೆ. ಈ ಅಧಿಕಾರಿಗಳ ಮೇಲೆ ವ್ಯಾಪಕ ಭ್ರಷ್ಟಾಚಾರ, ಹಗರಣಗಳ ಆರೋಪಗಳು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

Assault Case: ಅನೈತಿಕ ಸಂಬಂಧಕ್ಕೆ ಕರೆ, ಬರದಿದ್ದುದಕ್ಕೆ ಯುವಕನಿಗೆ ಮಚ್ಚಿನ ಅಟ್ಯಾಕ್!

ಅನೈತಿಕ ಸಂಬಂಧಕ್ಕೆ ಕರೆ, ಬರದಿದ್ದುದಕ್ಕೆ ಯುವಕನಿಗೆ ಮಚ್ಚಿನ ಅಟ್ಯಾಕ್!

ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಘಟನೆ ದೊಡ್ಡಬಳ್ಳಾಪುರದ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ದೀಪ ಎಂಬಾಕೆ ಜೊತೆ ಅದೇ ಗ್ರಾಮದಲ್ಲಿ ನೆಲೆಸಿದ್ದ ಕಾರ್ತಿಕ್​ ಎಂಬ ಯುವಕ ಅಕ್ರಮ ಸಂಬಂಧ ಹೊಂದಿದ್ದ. ವಿಚಾರ ತಿಳಿದು ಕಾರ್ತಿಕ್​ ಕುಟುಂಬಸ್ಥರು ಆತನಿಗೆ ಬುದ್ದಿವಾದ ಹೇಳಿದ್ದಾರೆ. ಆಕೆಯ ಸಹವಾಸ ಬಿಟ್ಟುಬಿಡು ಎಂದಿದ್ದಾರೆ.

Karnataka Weather: ರಾಜ್ಯದಲ್ಲಿ ಶೀತಗಾಳಿ ಉಲ್ಬಣ, ಇನ್ನೂ ಒಂದು ವಾರ ಗಡಗಡ!

ರಾಜ್ಯದಲ್ಲಿ ಶೀತಗಾಳಿ ಉಲ್ಬಣ, ಇನ್ನೂ ಒಂದು ವಾರ ಗಡಗಡ!

ರಾಜ್ಯಾದ್ಯಂತ (Karnatak weather) ಉಷ್ಣಮಟ್ಟದಲ್ಲಿ ಉತ್ತರ ಪೂರ್ವದಿಂದ ಪೂರ್ವ ದಿಕ್ಕಿಗೆ ತೇವಭರಿತ ಗಾಳಿ ಬೀಸಲಿದೆ. ಒಳನಾಡು ಕರ್ನಾಟಕದ ಎರಡು ಜಿಲ್ಲೆಗಳಾದ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಸಾಮಾನ್ಯ ಕನಿಷ್ಠ ತಾಪಮಾನದಲ್ಲಿ 5-7 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆ ಆಗಿದೆ. ಇದರಿಂದಾಗಿ ದಟ್ಟ ಮಂಜು ಸಹಿತ ವ್ಯಾಪಕ ಚಳಿ ಕಂಡು ಬಂದಿದೆ. ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಇದೇ ರೀತಿಯ ಗರಿಷ್ಠ ಚಳಿ ಮುಂದುವರಿಯಲಿದೆಯಂತೆ.

Murder Case: ಸಿನಿಮೀಯವಾಗಿ ಪತ್ನಿಯ ಕೊಲೆ ಮಾಡಿ ಅಪಘಾತದ ಡ್ರಾಮಾ, ಪತಿಯ ಸೆರೆ

ಸಿನಿಮೀಯವಾಗಿ ಪತ್ನಿಯ ಕೊಲೆ ಮಾಡಿ ಅಪಘಾತದ ಡ್ರಾಮಾ, ಪತಿಯ ಸೆರೆ

ಯಲಹಂಕದ ಬೊಮ್ಮಸಂದ್ರದ ಬಳಿ ವಾಸವಿದ್ದ ಅನಂತ್ (64) ಎಂಬಾತ ತನ್ನ ಪತ್ನಿ ಗಾಯತ್ರಿ (50) ಅವರನ್ನು ಸೈಟ್ ನೋಡಲೆಂದು ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಸೈಟ್​ನಲ್ಲಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿದ್ದಾನೆ. ನಂತರ ಗಾಯತ್ರಿ ಅಪಘಾತಕ್ಕೆ ಒಳಗಾಗಿದ್ದಾರೆ ಎಂಬಂತೆ ನಾಟಕವಾಡಿ ಅಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ಕರೆದೊಯ್ದಿದ್ದಾನೆ.

No Salary: 6 ತಿಂಗಳಿಂದ ಸಂಬಳ ಕೊಡಲಿಲ್ಲವೆಂದು ರಾಜೀನಾಮೆ ಕೊಟ್ಟ ವೈದ್ಯಾಧಿಕಾರಿ

6 ತಿಂಗಳಿಂದ ಸಂಬಳ ಕೊಡಲಿಲ್ಲವೆಂದು ರಾಜೀನಾಮೆ ಕೊಟ್ಟ ವೈದ್ಯಾಧಿಕಾರಿ

ವೈದ್ಯರಾದ ಡಾ.ಕುಲದೀಪ್ ಎಂ.ಡಿ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷದಿಂದ ವೈದ್ಯಾಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು. ಸಂಬಳ ಬಾರದೇ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

CM Siddaramaiah: ನಾಯಕತ್ವ ಬದಲಾವಣೆ ರಾಹುಲ್ ಗಾಂಧಿ ತೀರ್ಮಾನಿಸಬೇಕು: ಸಿಎಂ ಸಿದ್ದರಾಮಯ್ಯ

ನಾಯಕತ್ವ ಬದಲಾವಣೆ ರಾಹುಲ್ ಗಾಂಧಿ ತೀರ್ಮಾನಿಸಬೇಕು: ಸಿಎಂ ಸಿದ್ದರಾಮಯ್ಯ

ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವು ಬದ್ಧ ಎಂದು ಮುಖ್ಯಮಂತ್ರಿಗಳು (CM Siddaramaiah) ಪುನರುಚ್ಚರಿಸಿದರು. ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ? ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲೂ ಪುನಃ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.

Bomb Threat: ಆಲೂರು, ಸರಗೂರು ತಾಲೂಕು ಕಚೇರಿಗಳಿಗೆ ಬಾಂಬ್‌ ಬೆದರಿಕೆ

ಆಲೂರು, ಸರಗೂರು ತಾಲೂಕು ಕಚೇರಿಗಳಿಗೆ ಬಾಂಬ್‌ ಬೆದರಿಕೆ

ಆಲೂರು ಹಾಗೂ ಸರಗೂರು ತಾಲೂಕು ಕಚೇರಿಗಳಿಗೆ ಬಾಂಬ್‌ ಬೆದರಿಕೆಯನ್ನು ಅನಾಮಧೇಯ ವ್ಯಕ್ತಿ ಇಮೇಲ್‌ ಮೂಲಕ ಹಾಕಿದ್ದಾನೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆಯೂ ರಾಜ್ಯದಲ್ಲಿ ಹಲವು ಕಡೆ ಬಾಂಬ್‌ ಬೆದರಿಕೆ ಹಾಕಲಾಗಿದ್ದು, ಪರಿಶೀಲನೆಯ ಬಳಿಕ ಹುಸಿ ಬಾಂಬ್‌ ಬೆದರಿಕೆ ಎಂದು ತಿಳಿದುಬಂದಿತ್ತು.

Karnataka Politics: ರಾಜ್ಯ ಕಾಂಗ್ರೆಸ್ ಗೊಂದಲಕ್ಕೆ ನಾವಲ್ಲ ಕಾರಣ, ನೀವೇ ಪರಿಹರಿಸಿಕೊಳ್ಳಿ: ಕೈಚೆಲ್ಲಿದ ಮಲ್ಲಿಕಾರ್ಜುನ ಖರ್ಗೆ

ರಾಜ್ಯ ಕಾಂಗ್ರೆಸ್ ಗೊಂದಲ ಅವರೇ ಪರಿಹರಿಸಿಕೊಳ್ಳಲಿ: ಕೈಚೆಲ್ಲಿದ ಖರ್ಗೆ

ಕಾಂಗ್ರೆಸ್ ಯಾರೋ ಒಬ್ಬ ನಾಯಕನಿಂದ ಬೆಳೆದಿದ್ದಲ್ಲ. ಹೀಗಾಗಿ ಯಾರೊಬ್ಬರೂ ನನ್ನಿಂದ ಅಧಿಕಾರಕ್ಕೆ ಬಂತು, ನಾನೇ ಪಕ್ಷ ಕಟ್ಟಿದ್ದೇನೆಂದು ಹೇಳಬಾರದು. ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ. ಪಕ್ಷ ಅಂದ ಮೇಲೆ ಎಲ್ಲರ ಪಾತ್ರವೂ ಇರುತ್ತೆ. ಕೆಲ ಕಾರ್ಯಕರ್ತರು ಕೂಡ ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಎಂದು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನುಡಿದಿದ್ದಾರೆ.

Kukke Subrahmanya Temple: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ, ಅನ್ಯಧರ್ಮೀಯರಿಗೆ ಆಹ್ವಾನಕ್ಕೆ ವಿರೋಧ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ, ಅನ್ಯಮತೀಯರಿಗೆ ಆಮಂತ್ರಣಕ್ಕೆ ವಿರೋಧ

Kukke Subrahmanya Temple: ಇಂದಿನಿಂದ ಡಿ.26ರ ವರೆಗೆ ನಡೆಯಲಿರುವ ಕಿರುಷಷ್ಠಿ ಮಹೋತ್ಸವದ ಧರ್ಮಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅತಿಥಿಗಳಾಗಿ ಶಿಷ್ಟಾಚಾರದಂತೆ ಅನ್ಯಧರ್ಮೀಯರನ್ನೂ ಆಹ್ವಾನಿಸಲಾಗಿದೆ. ಹಿಂದೂ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರನ್ನ ಆಹ್ವಾನಿಸಿರೋದು ಸರಿಯಲ್ಲ. ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದವರಿಗೆ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಆಹ್ವಾನ ನೀಡೋದು ಖಂಡನೀಯ ಎಂದು ಆಕ್ರೋಶ ಕೇಳಿಬಂದಿದೆ.

Karnataka Weather: ರಾಜ್ಯದಲ್ಲಿ ಶೀತಗಾಳಿ, ವಿಜಯಪುರದಲ್ಲಿ 6.90 ಡಿಗ್ರಿಗಿಳಿದ ತಾಪಮಾನ

ರಾಜ್ಯದಲ್ಲಿ ಶೀತಗಾಳಿ, ವಿಜಯಪುರದಲ್ಲಿ 6.90 ಡಿಗ್ರಿಗಿಳಿದ ತಾಪಮಾನ

ಶೀತಗಾಳಿಯ ಪ್ರಭಾವದಿಂದ ವಿಜಯಪುರ ಜಿಲ್ಲೆಯಲ್ಲಿ ತಾಪಮಾನ ಅತ್ಯಂತ ಕನಿಷ್ಠಕ್ಕಿಳಿದು ದಾಖಲೆ ಮಾಡಿದೆ. ನಿನ್ನೆ ರಾತ್ರಿ ಇಲ್ಲಿನ ತಾಪಮಾನ 6.9 ಡಿಗ್ರಿಗೆ ಇಳಿದಿದೆ. ಬೆಂಗಳೂರಿನಲ್ಲಿ ರಾತ್ರಿ ಸತತ 14 ಡಿಗ್ರಿ ಸೆಲ್ಸಿಯಸ್‌ಗೆ ತಾಪಮಾನ ಇಳಿಯುತ್ತಿದೆ. ಉತ್ತರ ಕರ್ನಾಟಕದ ಜಿಲ್ಲೆಗಳು ಚಳಿಯಿಂದ ಥರಥರ ನಡುಗುತ್ತಿವೆ. ದೇಹವನ್ನು ಬೆಚ್ಚಗೆ ಕಾಪಾಡಿಕೊಳ್ಳಲು ನಿವಾಸಿಗಳಿಗೆ ಸೂಚಿಸಲಾಗಿದೆ.

Spying Case: ಪಾಕ್‌ ಪರ ಬೇಹುಗಾರಿಕೆ, ಉಡುಪಿಯಲ್ಲಿ ಮೂರನೇ ವ್ಯಕ್ತಿ ಬಂಧನ

ಪಾಕ್‌ ಪರ ಬೇಹುಗಾರಿಕೆ, ಉಡುಪಿಯಲ್ಲಿ ಮೂರನೇ ವ್ಯಕ್ತಿ ಬಂಧನ

ಎರಡು ವಾರಗಳ ಹಿಂದೆ ಮಲ್ಪೆಯ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಉತ್ತರಪ್ರದೇಶದ ರೋಹಿತ್‌ ಮತ್ತು ಸಂತ್ರಿ ಎಂಬವರು ಇಲ್ಲಿಗೆ ದುರಸ್ತಿಗೆ ಬರುತ್ತಿದ್ದ ಭಾರತೀಯ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್‌ ಮತ್ತಿತರ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು. ಇದೀಗ ಅವರಿಗೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಇನ್ನೊಬ್ಬ ಆರೋಪಿಯನ್ನು (Spying case) ಪೊಲೀಸರು ಭಾನುವಾರ ಬಂಧಿಸಿದ್ದಾರೆ.

MLA Byrathi Basavaraj: ರೌಡಿ ಹತ್ಯೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜುಗೆ ಲುಕ್‌ಔಟ್‌ ನೋಟಿಸ್‌ ಸಾಧ್ಯತೆ

ರೌಡಿ ಹತ್ಯೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜುಗೆ ಲುಕ್‌ಔಟ್‌ ನೋಟಿಸ್‌?

ಬೆಳಗಾವಿ ಅಧಿವೇಶನಕ್ಕೆ ಹೋಗಿದ್ದ ಶಾಸಕ ಬೈರತಿ ಬಸವರಾಜು ಅವರು ಅಲ್ಲಿಂದಲೇ ಮಹಾರಾಷ್ಟ್ರ ಅಥವಾ ಗೋವಾಕ್ಕೆ ತೆರಳಿದ್ದು, ಅಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಐಡಿಯ 3 ತಂಡಗಳು ಅವರಿಗಾಗಿ 2-3 ರಾಜ್ಯಗಳಲ್ಲಿ ಶೋಧ ನಡೆಸುತ್ತಿವೆ. ಈ ಮಧ್ಯೆ ಅವರು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಲು ಮುಂದಾಗಿದ್ದಾರೆ.

Murder Case: ಧಾರವಾಡದಲ್ಲಿ ಮರ್ಯಾದೆಗೇಡು ಹತ್ಯೆ: ದಲಿತ ಯುವಕನ ಪ್ರೀತಿಸಿ ಮದುವೆಯಾಗಿದ್ದಕ್ಕೆ ಗರ್ಭಿಣಿ ಮಗಳ ಥಳಿಸಿ ಕೊಂದ ತಂದೆ

ದಲಿತ ಯುವಕನ ಪ್ರೀತಿಸಿ ಮದುವೆಯಾಗಿ ತಂದೆಯಿಂದಲೇ ಹತ್ಯೆಯಾದ ಮಗಳು

ಯುವತಿ ಲಿಂಗಾಯತ ಸಮಾಜದವಳಾಗಿದ್ದರೆ ಯುವಕ ವಿವೇಕಾನಂದ ದಲಿತ ಸಮುದಾಯಕ್ಕೆ ಸೇರಿದ್ದ. ಹೀಗಾಗಿ ಯುವತಿ ಮನೆಯವರು ಮದುವೆಗೆ ವಿರೋಧ ಮಾಡಿದ್ದರು. ವಿವೇಕಾನಂದ ಆಕೆ ಜೊತೆ ಕಳೆದ ಜೂನ್ 19 ರಂದು ಹುಬ್ಬಳ್ಳಿಯಲ್ಲಿ ರಿಜಿಸ್ಟರ್ ವಿವಾಹವಾಗಿದ್ದ. ಯುವತಿ ಗರ್ಭಿಣಿಯಾಗಿದ್ದಳು. ಎರಡೂ ಕುಟುಂಬಗಳ ನಡುವೆ ಪೊಲೀಸರು ರಾಜಿ ಸಂಧಾನ ಮಾಡಿಸಿದ್ದರು. ಇದೀಗ ತಂದೆಯೇ ಮಗಳ ಕೊಲೆ ಮಾಡಿದ್ದಾನೆ.

Self Harming: ಕಲಬುರಗಿಯಲ್ಲಿ ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

ಕಲಬುರಗಿಯಲ್ಲಿ ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

ನಂದಿಕೂರ ಗ್ರಾಮದಲ್ಲಿ ಮಲ್ಲಿನಾಥ ಬಿರಾದಾರ್ ಎಂಬವರ ಮನೆಯಲ್ಲಿ ಜ್ಯೋತಿ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರೂ ಬಿಜೆಪಿ ಕಾರ್ಯಕರ್ತರು ಎಂದು ತಿಳಿದುಬಂದಿದೆ. ಜ್ಯೋತಿ ಪಾಟೀಲ್ ಕಲಬುರಗಿಯ ಬ್ರಹ್ಮಪುರ ಬಡಾವಣೆಯ ನಿವಾಸಿ ಎಂದು ತಿಳಿದುಬಂದಿದೆ. ಘಟನೆ ಕುರಿತು ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫುಟ್‌ಬಾಲ್‌ನಂತೆ ಮಗುವಿಗೆ ಒದ್ದ ಸೈಕೋ ರಂಜನ್‌ ಮೇಲೆ ಪೋಕ್ಸೋ ಕೇಸ್‌ ದಾಖಲಿಸಲು ಮುಂದಾದ ಪೊಲೀಸರು

ಸೈಕೋ ರಂಜನ್‌ ಮೇಲೆ ಪೋಕ್ಸೋ ಕೇಸ್‌ ದಾಖಲಿಸಲು ಮುಂದಾದ ಪೊಲೀಸರು

ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆ ವೇಳೆ ಸೈಕೋ ರಂಜನ್ ಮಕ್ಕಳ ಮೇಲೆ ನಡೆಸಿರೋ ವಿಕೃತಿಯ ಸಾಲು ಸಾಲು ಘಟನೆಗಳು ಬೆಳಕಿಗೆ ಬಂದಿವೆ. ಸೈಕಲ್‌ನಲ್ಲಿ ಹೋಗುತ್ತಿದ್ದ ಬಾಲಕನ ತಲೆ ಕೂದಲು ಹಿಡಿದು ಗರಗರನೇ ತಿರುಗಿಸಿ ಹಲ್ಲೆ ನಡೆಸಿದ್ದ. ಒಂದು ಮಗುವಿನ ಮೇಲೆ ಬೈಕ್‌ ಹತ್ತಿಸಲು ಯತ್ನಿಸಿದ್ದ. ಹೀಗೆ ಒಂದು ವಾರದ ಅಂತರದಲ್ಲಿ ನಾಲ್ಕು ಮಕ್ಕಳಿಗೆ ಹಲ್ಲೆ ಮಾಡಿ ಕಿರುಕುಳ ನೀಡಿದ್ದಾನೆ.

Namma Metro: ಪ್ರಯಾಣಿಕರ ಗಮನಕ್ಕೆ, ನಮ್ಮ ಮೆಟ್ರೋ ಹಳದಿ ರೈಲು ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ, ನಮ್ಮ ಮೆಟ್ರೋ ಹಳದಿ ರೈಲು ಸಂಚಾರದಲ್ಲಿ ವ್ಯತ್ಯಯ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಅನುಕೂಲವಾಗಲೆಂದು 96 ಹೊಸ ರೈಲುಗಳ ಸೇರ್ಪಡೆ ಮಾಡಲಾಗ್ತಿದೆ. ಹೊಸ ರೈಲುಗಳು ಬರುತ್ತಿದ್ದಂತೆ 4 ನಿಮಿಷಕ್ಕೊಂದರಂತೆ ಮೆಟ್ರೋ ರೈಲು ಸಂಚಾರಕ್ಕೆ ನೀಡಲು ಬಿಎಂಆರ್​ಸಿಎಲ್​ ಸಿದ್ದತೆ ಮಾಡಿಕೊಂಡಿದೆ. ಸದ್ಯ ನಮ್ಮ ಮೆಟ್ರೋದ ಹಸಿರು ಮಾರ್ಗ​, ನೇರಳೆ ಮಾರ್ಗ ಹಾಗೂ ಹಳದಿ ಮಾರ್ಗಗಳಿಗೆ 64 ರೈಲುಗಳು ಸೇರ್ಪಡೆಗೊಂಡಿವೆ.

Train Accident: ಆನೆ ಗುಂಪಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ‌, 8 ಆನೆಗಳ ದಾರುಣ ಸಾವು, ರೈಲು ಸಂಚಾರ ವ್ಯತ್ಯಯ

ಆನೆ ಗುಂಪಿಗೆ ರೈಲು ಡಿಕ್ಕಿ: 8 ಆನೆಗಳ ದಾರುಣ ಸಾವು, ರೈಲು ಸಂಚಾರ ವ್ಯತ್ಯಯ

ಸೈರಾಂಗ್– ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್ ಆನೆಗಳ ಗುಂಪಿಗೆ ಡಿಕ್ಕಿ ಹೊಡೆದ ಬಳಿಕ ಲೊಕೊಮೊಟಿವ್ ಹಾಗೂ ಐದು ಬೋಗಿಗಳು ಹಳಿ ತಪ್ಪಿವೆ. ಆದರೆ ಪ್ರಯಾಣಿಕರಿಗೆ ಯಾವುದೇ ಸಾವು ಅಥವಾ ಗಾಯಗಳಾಗಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳ ಪ್ರಕಾರ, ಅಪಘಾತದಲ್ಲಿ ಎಂಟು ಆನೆಗಳು ಸಾವನ್ನಪ್ಪಿದ್ದು, ಗಾಯಗೊಂಡಿದ್ದ ಒಂದು ಮರಿಯನ್ನು ರಕ್ಷಿಸಲಾಗಿದೆ.

DK Shivakumar: ನನ್ನ, ಸಿಎಂ ನಡುವೆ ಒಪ್ಪಂದ ಆಗಿದೆ: ಅಂಕೋಲಾದಲ್ಲಿ ಡಿಕೆ ಶಿವಕುಮಾರ್‌

ನನ್ನ, ಸಿಎಂ ನಡುವೆ ಒಪ್ಪಂದ ಆಗಿದೆ: ಅಂಕೋಲಾದಲ್ಲಿ ಡಿಕೆ ಶಿವಕುಮಾರ್‌

5 ವರ್ಷಗಳ ಹಿಂದೆ ಈ ಸ್ಥಳಕ್ಕೆ ಬಂದು ಕುಟುಂಬದ ಕೆಲಸಕ್ಕೆ ಪ್ರಾರ್ಥನೆ ಮಾಡಿದ್ದೆ, ಅದು ಈಡೇರಿತ್ತು. ಮತ್ತೆ ಇಲ್ಲಿಗೆ ಬರುತ್ತೇನೆ ಎಂದಿದ್ದೆ, ಬಂದಿದ್ದೇನೆ. ತಾಯಿ ಜಗದೀಶ್ವರಿ ಆಶೀರ್ವಾದ ಮಾಡು ಎಂದು ಕೇಳಿಕೊಂಡಿದ್ದೇನೆ. ತಾಯಿ ನನ್ನೊಂದಿಗೆ ಮಾತನಾಡಿದ್ದಾಳೆ, ಶುಭ ಸೂಚನೆ ಕೂಡ ನೀಡಿದ್ದಾಳೆ ಎಂದು ಅಂಕೋಲಾ ತಾಲೂಕಿನ ಆಂದ್ಲೆಯ ಶ್ರೀ ಜಗದೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಡಿಕೆ ಶಿವಕುಮಾರ್‌ ನುಡಿದರು.

Karnataka Weather: ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ, 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ, 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

Karnataka Weather: ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣ ಜನರನ್ನು ಗಡ ಗಡ ನಡುಗಿಸುತ್ತಿದೆ. ಹಗಲು ಸಾಕಷ್ಟು ಬಿಸಿಲು ಮೈ ಚುರುಕ್‌ ಎನ್ನುವಂತೆ ಇರಲಿದೆ. ಆದರೆ ಸಂಜೆಯಾದ ಕೂಡಲೆ ಶೀತ ಗಾಳಿ ಬೀಸುತ್ತಿದ್ದು, ರಾತ್ರಿ ತಾಪಮಾನ 14 ಡಿಗ್ರಿ ಸೆಲ್ಷಿಯಸ್‌ವರೆಗೂ ಇಳಿಯುತ್ತಿದೆ. ಹನ್ನೆರಡು ಡಿಗ್ರಿಯವರೆಗೂ ಇಳಿದು ಹತ್ತು ವರ್ಷಗಳ ದಾಖಲೆ ಬರೆದಿತ್ತು. ಹಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್‌ ನೀಡಲಾಗಿದೆ.

Byrathi Basavaraj: ರೌಡಿ ಕೊಲೆ ಕೇಸ್‌ನಲ್ಲಿ ಬೈರತಿ ಬಸವರಾಜ್‌ಗೆ ಜಾಮೀನು ನಿರಾಕರಣೆ, ಮಾಜಿ ಸಚಿವರು ಅಜ್ಞಾತ ಸ್ಥಳಕ್ಕೆ

ರೌಡಿ ಕೊಲೆ ಕೇಸ್‌: ಬೈರತಿ ಬಸವರಾಜ್‌ಗೆ ಜಾಮೀನು ನಿರಾಕರಣೆ, ಸೆರೆ ಸಾಧ್ಯತೆ

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಮಾಜಿ ಸಚಿವ ಬೈರತಿ ಬಸವರಾಜ್‌ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಕೆಆರ್‌ ಪುರದಲ್ಲಿರುವ ನಿವಾಸದಲ್ಲೂ ಬೈರತಿ ಬಸವರಾಜ್ ಇಲ್ಲ. ಬೆಳಗಾವಿಯಲ್ಲಿ ನಡೆದ ವಿಧಾನಸಬೆ ಅಧಿವೇಶನದಲ್ಲಿ ಮೊದಲ ವಾರ ಕಲಾಪಕ್ಕೆ ಬೈರತಿ ಬಸವರಾಜ್ ಹಾಜರಾಗಿದ್ದರು. ಆದರೆ ಈ ವಾರ ಅಧಿವೇಶನಕ್ಕೆ ಬರದೇ ಕೆಆರ್‌ ಪುರ ಕ್ಷೇತ್ರದ ಶಾಸಕರು ಗೈರಾಗಿದ್ದರು.

Supreme Court: ಬೇರೆ ಜಾತಿ, ಧರ್ಮದ ಯುವಕನ ಮದುವೆಯಾದರೆ ಮಗಳಿಗೆ ಆಸ್ತಿಯಲ್ಲಿ ಪಾಲು ಕೊಡಬೇಕಿಲ್ಲ: ಸುಪ್ರೀಂ ಕೋರ್ಟ್‌

ಬೇರೆ ಧರ್ಮದ ಯುವಕನ ಮದುವೆಯಾದರೆ ಮಗಳಿಗೆ ಆಸ್ತಿ ಪಾಲು ಕೊಡಬೇಕಿಲ್ಲ!

ಮಹಿಳೆ ಬೇರೆ ಧರ್ಮದ ಯುವಕನನ್ನು ವಿವಾಹವಾಗಿದ್ದರು. ಹೀಗಾಗಿ, ‌ತಂದೆ ಶ್ರೀಧರನ್ ತನ್ನ ಮಗಳನ್ನು ದೂರವೇ ಇಟ್ಟಿದ್ದರು. ತಮ್ಮ ವಿಲ್​ನಲ್ಲಿ ಕೂಡ ಆಕೆಗೆ ಪಾಲು ಬರೆದಿರಲಿಲ್ಲ. ಇದನ್ನು ವಿರೋಧಿಸಿ, ತನ್ನ ತಂದೆಯ ಆಸ್ತಿಯಲ್ಲಿ ತನಗೂ ಪಾಲು ಬೇಕೆಂದು ಆಕೆ ಕಾನೂನು ಮೊರೆಹೋಗಿದ್ದರು. ವಿಲ್ ಪ್ರಕಾರ ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಯಾವುದೇ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

Loading...