ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

ಹರೀಶ್‌ ಕೇರ

columnist

harish@vishwavani.news

ದಶಕದ ಕಾಲ ಪತ್ರಿಕೋದ್ಯಮ ಅನುಭವ ಹೊಂದಿದ ಹರೀಶ್‌ ಕೇರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ಹೊಸದಿಗಂತ, ವಿಜಯ ಕರ್ನಾಟಕ, ಕನ್ನಡಪ್ರಭ, ವಿಸ್ತಾರ ನ್ಯೂಸ್‌ಗಳಲ್ಲಿ ಮುದ್ರಣ, ಡಿಜಿಟಲ್‌ ಹಾಗೂ ಯುಟ್ಯೂಬ್‌ ಮೂರೂ ಸ್ವರೂಪಗಳಲ್ಲಿ ಕೆಲಸ ಮಾಡಿದ ಅನುಭವ. ಸಾಹಿತ್ಯ, ಸಾಂಸ್ಕೃತಿಕ, ನಾಡು ಹಾಗೂ ರಾಷ್ಟ್ರ ರಾಜಕೀಯ, ವಿಜ್ಞಾನ, ಪರಿಸರ ಇತ್ಯಾದಿ ಆಸಕ್ತಿಗಳು. ಕವಿ, ಕತೆಗಾರ, ವಿಮರ್ಶಕ. ಗಿಣಿಬಾಗಿಲು, ನಕ್ಷತ್ರ ನೇಯುವ ಹಕ್ಕಿಗಳು, ಮೇಧಾ ಪಾಟ್ಕರ್‌, ಪ್ರಜ್ವಲ ಮಾತು ಉಜ್ವಲ ಬೆಳಕು, ನಿಮ್ಮೊಳಗಿದೆ ಸಕ್ಸಸ್‌ ಇವರ ಕೃತಿಗಳು. ಉತ್ಥಾನ, ಸಂಚಯ, ಸಂಕ್ರಮಣ ಸಾಹಿತ್ಯ ಸ್ಪರ್ಧೆಗಳಲ್ಲಿ ಪುರಸ್ಕಾರ ದೊರೆತಿದೆ. ಅಭಿವೃದ್ದಿ ಪತ್ರಿಕೋದ್ಯಮ ಮತ್ತು ಅಂಕಣ ಬರಹ ಜೀವದ್ರವ್ಯ.

Articles
LPG price hike: ಹೊಸ ವರ್ಷದ ಮೊದಲ ದಿನವೇ ಅಡುಗೆ ಅನಿಲ ಸಿಲಿಂಡರ್‌ ಬೆಲೆ ಏರಿಕೆ!

ಹೊಸ ವರ್ಷದ ಮೊದಲ ದಿನವೇ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ!

ಜನವರಿ 2025 ರಿಂದ ಡಿಸೆಂಬರ್ 2025 ರವರೆಗೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಿದ್ದವು. ಬೆಂಗಳೂರು, ದೆಹಲಿ, ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈನಂತಹ ಮಹಾನಗರಗಳಲ್ಲಿ ಪ್ರತಿ ಸಿಲಿಂಡರ್‌ಗೆ ಸರಾಸರಿ ₹238 ರಷ್ಟು ಬೆಲೆಗಳು ಕುಸಿದಿದ್ದವು. ಇದೀಗ ಮತ್ತೆ ಏರಿಕೆ ಮಾಡಲಾಗಿದೆ.

New year 2026: ನಗರದಾದ್ಯಂತ ಸಂಭ್ರಮಾಚರಣೆ, ಕೆಲ ಯುವಕರ ಪುಂಡಾಟ, ಅನುಚಿತ ವರ್ತನೆ

ನಗರದಾದ್ಯಂತ ಸಂಭ್ರಮಾಚರಣೆ, ಕೆಲ ಯುವಕರ ಪುಂಡಾಟ, ಅನುಚಿತ ವರ್ತನೆ

ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲದಲ್ಲಿ ಸಂಭ್ರಮಾಚರಣೆ ನಡೆದಿದ್ದು, ಯುವಜನತೆ ಕೇಕ್ ಕತ್ತರಿಸಿ ಹೊಸ ವರ್ಷವನ್ನು ಸ್ವಾಗತಿಸಿದರು. ಈ ಮಧ್ಯೆ ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಅಹಿತಕರ ಘಟನೆಯೊಂದು ನಡೆದಿದೆ. ಕುಡಿದ ಮತ್ತಿನಲ್ಲಿ ಓರ್ವ ವ್ಯಕ್ತಿ ಮಹಿಳಾ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿರುವಂತಹ ಘಟನೆ ನಡೆದಿದೆ. ಸದ್ಯ ಆತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Harish Kera Column: ಅಂಗಾಲಿನಡಿಗೆ ಕಾಲದ ಕಚಗುಳಿ

Harish Kera Column: ಅಂಗಾಲಿನಡಿಗೆ ಕಾಲದ ಕಚಗುಳಿ

ಮೊಬೈಲು ಬರುವ ಮುನ್ನ ಗಡಿಯಾರದಂಗಡಿಯೂ ಅಲ್ಲಿ ರಿಪೇರಿಗೆ ಬಂದ ನೂರಾರು ಗಡಿಯಾರ ಗಳೂ ಸಾಮಾನ್ಯ ದೃಶ್ಯ ಆಗಿದ್ದವು. ಈಗ ಅಂಥ ಗಡಿಯಾರದಂಗಡಿಯ ಸಮಯವೂ ನಿಂತು ಹೋದಂತಿದೆ. ಮುಂದೆ ಹೋದಂತೆ ಕವಿಗೆ ವಸಂತಾದಿ ಋತುಗಳೆಲ್ಲವೂ ಭಿನ್ನಭಿನ್ನ ಚಿತ್ರಿಕೆಗಳಾಗಿ ಕಾಣಿಸುತ್ತವೆ.

New Year 2026: ಹೊಸ ವರ್ಷಾಚರಣೆಗೆ ಮೆಟ್ರೋ, ಬಿಎಂಟಿಸಿ ಕೊಡುಗೆ; ತಡರಾತ್ರಿಯವರೆಗೂ ಸೇವೆ

ಹೊಸ ವರ್ಷಾಚರಣೆಗೆ ಮೆಟ್ರೋ, ಬಿಎಂಟಿಸಿ ಕೊಡುಗೆ; ತಡರಾತ್ರಿಯವರೆಗೂ ಸೇವೆ

ಹೊಸ ವರ್ಷದ ಹಿನ್ನೆಲೆ ಇಂದು ರಾತ್ರಿ ಹಾಗೂ ಜನವರಿ 1ರಂದು ಮೆಟ್ರೋ ವಿಶೇಷ ವೇಳಾಪಟ್ಟಿ ಜಾರಿಯಲ್ಲಿರಲಿದೆ. ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳಲ್ಲಿ ಸೇವಾ ಸಮಯವನ್ನ ತಡರಾತ್ರಿವರೆಗೆ ವಿಸ್ತರಣೆ ಮಾಡಲಾಗಿದೆ. ಹೊಸ ವರ್ಷದ ಸಂಭ್ರಮದಲ್ಲಿ ಜನಸಂದಣಿ ಹೆಚ್ಚಾಗುವ ಹಿನ್ನೆಲೆ, ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ಕೊನೆಯ ರೈಲು ಸಮಯವನ್ನು ವಿಸ್ತರಿಸಲಾಗಿದೆ.

Bengaluru News: ಬಯೋಕಾನ್‌ ಉದ್ಯೋಗಿ 6ನೇ ಮಹಡಿಯಿಂದ ಬಿದ್ದು ಸಾವು

ಬಯೋಕಾನ್‌ ಉದ್ಯೋಗಿ 6ನೇ ಮಹಡಿಯಿಂದ ಬಿದ್ದು ಸಾವು

6ನೇ ಮಹಡಿಯ ಬಾಲ್ಕನಿಯಲ್ಲಿ ಗೆಳತಿಯೊಂದಿಗೆ ಮಾತನಾಡುತ್ತಾ ಕುಳಿತಿದ್ದ ಸಂದರ್ಭದಲ್ಲಿ ಅನಂತ್ ಕುಮಾರ್ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ. ಡಿ.30ರ ಮಧ್ಯಾಹ್ನ ಈ ಘಟನೆ ನಡೆದಿದೆ. ಬಾಲ್ಕನಿ ಬಳಿ ತನ್ನ ಸ್ನೇಹಿತೆಯೊಂದಿಗೆ ಮಾತನಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆತ್ಮಹತ್ಯೆಯ ಸಾಧ್ಯತೆಯನ್ನೂ ಪರಿಶೀಲಿಸಲಾಗುತ್ತಿದೆ.

Renuka swamy murder case: ರೇಣುಕಾಸ್ವಾಮಿ ತಾಯಿಯನ್ನು ಪ್ರತಿಕೂಲ ಸಾಕ್ಷಿಯಾಗಿ ಪರಿಗಣಿಸಲು ಪ್ರಾಸಿಕ್ಯೂಷನ್‌ ಮನವಿ

ರೇಣುಕಾಸ್ವಾಮಿ ತಾಯಿ ಪ್ರತಿಕೂಲ ಸಾಕ್ಷಿಯಾಗಿಸಲು ಪ್ರಾಸಿಕ್ಯೂಷನ್‌ ಮನವಿ

ಹಿಂದಿನ ಹೇಳಿಕೆಗೂ ಈಗಿನ ಹೇಳಿಕೆಗೂ ದ್ವಂದ್ವದ ಹಿನ್ನೆಲೆಯಲ್ಲಿ ರತ್ನಪ್ರಭಾರನ್ನು ಪ್ರತಿಕೂಲ ಸಾಕ್ಷಿಯಾಗಿ ಪರಿಗಣಿಸಲು ಎಸ್‌ಪಿಪಿ (SPP) ಮನವಿ ಮಾಡಿದ್ದಾರೆ. ಎಸ್‌ಪಿಪಿ ಪ್ರಸನ್ನಕುಮಾರ್ ಸಲ್ಲಿಸಿದ ಮನವಿ ಬಗ್ಗೆ ಸೋಮವಾರ ನಿರ್ಧಾರ ಆಗಲಿದೆ. ರತ್ನಪ್ರಭಾ 8 ಅಂಶಗಳಲ್ಲಿ ಪ್ರಾಸಿಕ್ಯೂಷನ್ ವಿರುದ್ಧವೇ ವ್ಯತಿರಿಕ್ತ ಹೇಳಿಕೆ ಕೊಟ್ಟಿದ್ದಾರೆ.

New Year 2026: ಹೊಸ ವರ್ಷಾಚರಣೆ ಬಿಗಿ, ರಾಜಧಾನಿಯ ಈ ರಸ್ತೆಗಳಲ್ಲಿ ಸಂಚಾರ ಬಂದ್‌

ಹೊಸ ವರ್ಷಾಚರಣೆ ಬಿಗಿ, ರಾಜಧಾನಿಯ ಈ ರಸ್ತೆಗಳಲ್ಲಿ ಸಂಚಾರ ಬಂದ್‌

ಹೊಸ ವರ್ಷದ ಹಿಂದಿನ ದಿನದಿಂದಲೇ ಭದ್ರತಾ ದೃಷ್ಟಿಯಿಂದ ನಗರದ ಒಳಭಾಗದ ಕೆಲ ರಸ್ತೆಗಳನ್ನು ಬಂದ್ ಮಾಡಿದ್ದು, ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ರೆಸಿಡೆನ್ಸಿ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆಗಳಲ್ಲಿ ರಾತ್ರಿ 10 ರಿಂದ ಮುಂಜಾನೆ 3 ಗಂಟೆವರೆಗೆ ಸಂಚಾರ ಬಂದ್ ಆಗಲಿದೆ. ಸಂಜೆ 4 ಗಂಟೆಯಿಂದ ಬೆಳಗ್ಗೆ 3 ಗಂಟೆವರೆಗೆ ಈ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ.

India Economy: ಭಾರತ ಇದೀಗ ವಿಶ್ವದ 4ನೇ ದೊಡ್ಡ ಆರ್ಥಿಕತೆ, ಜಪಾನನ್ನೂ ಹಿಂದಿಕ್ಕಿದ ಇಂಡಿಯಾ

ಭಾರತ ಇದೀಗ ವಿಶ್ವದ 4ನೇ ದೊಡ್ಡ ಆರ್ಥಿಕತೆ, ಜಪಾನನ್ನೂ ಹಿಂದಿಕ್ಕಿದ ಇಂಡಿಯಾ

4.18 ಟ್ರಿಲಿಯನ್ ಡಾಲರ್ ಜಿಡಿಪಿಯೊಂದಿಗೆ, ಭಾರತವು ಜಪಾನ್ ಅನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು ಮುಂದಿನ 2.5 ರಿಂದ 3 ವರ್ಷಗಳಲ್ಲಿ ಜರ್ಮನಿಯನ್ನು ಹಿಂದಿಕ್ಕಲಿದೆ. 2030ರ ವೇಳೆಗೆ ಭಾರತವು ಜರ್ಮನಿಯನ್ನ ಹಿಂದಿಕ್ಕಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗಬಹುದು ಎಂದು ಅಂದಾಜಿಸಲಾಗಿದೆ, ಆಗ ಅದರ ಜಿಡಿಪಿ 7,300 ಬಿಲಿಯನ್ ಯುಎಸ್ ಡಾಲರ್ ತಲುಪುವ ನಿರೀಕ್ಷೆಯಿದೆ.

Lokayukta Raid: ಆದಾಯಕ್ಕೂ ಹೆಚ್ಚು ಆಸ್ತಿ, ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ದಾಳಿ

ಆದಾಯಕ್ಕೂ ಹೆಚ್ಚು ಆಸ್ತಿ, ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ದಾಳಿ

ಬೆಳಿಗ್ಗೆಯಿಂದ ಸುಮಾರು 10ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಆದಾಯ ಮೇರಿ ಆಸ್ತಿಗಳಿಗಕೆ ಸೇರಿದಂತೆ ಹಲವು ಆರೋಪ ಕೇಳಿ ಬಂದಿತ್ತು. ಹೀಗಾಗಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ.

New Year Celebration: ಹೊಸ ವರ್ಷದ ಆಚರಣೆಗೆ ಈ ತಾಣಗಳಿಗಿಲ್ಲ ಪ್ರವೇಶ

ಹೊಸ ವರ್ಷದ ಆಚರಣೆಗೆ ಈ ತಾಣಗಳಿಗಿಲ್ಲ ಪ್ರವೇಶ

ಹೊಸ ವರ್ಷಾಚರಣೆ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿತಾಣ ನಂದಿಗಿರಿಧಾಮಕ್ಕೆ ಡಿ.31ರ ಮಧ್ಯಾಹ್ನ 2ರಿಂದ ಜ.1ರ ಬೆಳಿಗ್ಗೆ 10 ಗಂಟೆಯವರೆಗೆ ಬಂದ್​​ ಆಗಿರಲಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿ ಪ್ರವಾಸಿತಾಣಗಳಿಗೆ ಡಿ.31ರ ಸಂಜೆ 6 ಗಂಟೆಯಿಂದ ಜ.1ರ ಬೆಳಗ್ಗೆ 6 ಗಂಟೆವರೆಗೆ ನಿರ್ಬಂಧ ವಿಧಿಸಲಾಗಿದೆ.

PM Narendra Modi: ಗಲ್ಫ್‌ನಲ್ಲಿ ಕನ್ನಡ ಕಲಿಸಿ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ಪಡೆದ ಪಾಠಶಾಲೆ, ಅಲ್ಲೀಗ 1200 ಮಕ್ಕಳು!

ಮೋದಿ ಮೆಚ್ಚುಗೆ ಪಡೆದ ದುಬೈಯ ಕನ್ನಡ ಪಾಠಶಾಲೆಯಲ್ಲೀಗ 1258 ಮಕ್ಕಳು!

ʼದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡ್ರು. ನಮ್ಮ ಮಕ್ಕಳು ಟೆಕ್‌ವರ್ಲ್ಡ್‌ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ. ಆದರೆ, ಅವರು ತಮ್ಮ ನೆಲದ ಭಾಷೆಯಾದ ಕನ್ನಡದಿಂದ ದೂರ ಆಗುತ್ತಿದ್ದಾರೆಯೇ ಅನ್ನೋ ಆತಂಕ ದುಬೈ ಕನ್ನಡಿಗರಿಗೆ ಬಂತು. ಆಗಿನಿಂದಲೇ ಅವರು ದುಬೈನಲ್ಲಿ ಕನ್ನಡ ಪಾಠ ಶಾಲೆ ಆರಂಭ‌ ಮಾಡಿದರುʼ ಎಂದು ಪ್ರಧಾನಿ ಮೋದಿ (PM Narendra Modi) ಹೇಳಿದ್ದರು.

Karnataka Weather: ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ, ಒಣ ಹವೆ, ಬೆಂಗಳೂರಿನಲ್ಲಿ ಮಂಜು

ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ, ಒಣ ಹವೆ, ಬೆಂಗಳೂರಿನಲ್ಲಿ ಮಂಜು

ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 28°C ಇರಲಿದೆ.

Knife Attack: ಸುರಿನಾಂನಲ್ಲಿ ವ್ಯಕ್ತಿಯಿಂದ ಚಾಕು ಇರಿತ, 5 ಮಕ್ಕಳು ಸೇರಿ 9 ಮಂದಿ ಸಾವು

ಸುರಿನಾಂನಲ್ಲಿ ವ್ಯಕ್ತಿಯಿಂದ ಚಾಕು ಇರಿತ, 5 ಮಕ್ಕಳು ಸೇರಿ 9 ಮಂದಿ ಸಾವು

ಶಂಕಿತನ ಹೆಂಡತಿ ಇತ್ತೀಚೆಗೆ ಆತನನ್ನು ಬಿಟ್ಟು ಹೋಗಿದ್ದು, ಅವರ ನಾಲ್ವರು ಮಕ್ಕಳನ್ನು ಆತನ ಆರೈಕೆಯಲ್ಲಿ ಬಿಟ್ಟು ಹೋಗಿದ್ದಾಳೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಶಂಕಿತನು ಚಾಕುವಿನಿಂದ ಶಸ್ತ್ರಸಜ್ಜಿತನಾಗಿ ಮೊದಲು ತನ್ನ ಮಕ್ಕಳ ಮೇಲೆ ಮತ್ತು ನಂತರ ಆರು ನೆರೆಹೊರೆಯವರ ಮೇಲೆ ಹಲ್ಲೆ ನಡೆಸಿದ್ದಾನೆ. ಯದ್ವಾತದ್ವಾ ಇರಿದು ಕೊಲೆಯ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

Assault Case: ಬೆಂಗಳೂರಿನಲ್ಲಿ ರೌಡಿಗಳ ದಾಂಧಲೆ, ಪಾನ್‌ ಶಾಪ್‌ ಚಿಂದಿ, ಮಾರಕಾಸ್ತ್ರಗಳಿಂದ ಹಲ್ಲೆ

ಬೆಂಗಳೂರಿನಲ್ಲಿ ರೌಡಿಗಳ ದಾಂಧಲೆ, ಮಾರಕಾಸ್ತ್ರಗಳಿಂದ ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಬಷೀರ್ ಎಂಬವರ ಮನೆಗೆ ನುಗ್ಗಿ 10ಕ್ಕೂ ಹೆಚ್ಚು ಪುಡಿ ರೌಡಿಗಳು ಹಲ್ಲೆ ನಡೆಸಿ ದಾಂಧಲೆ ಮಾಡಿದ್ದಾರೆ. ಪಾನ್ ಶಾಪ್‌ನಲ್ಲಿದ್ದ ಬಾಟಲ್‌ಗಳನ್ನ ಒಡೆದು ಹಾಕಿ ಎಸ್ಕೇಪ್ ಆಗಿದ್ದಾರೆ. ಇದರ ಜೊತೆಗೆ, ಕಾರೊಂದರ ಮೇಲೂ ರೌಡಿಗಳು ದಾಳಿ ಮಾಡಿದ್ದಾರೆ. ಕಾರಿನ ಒಳಗೆ ಇದ್ದ ಇಬ್ಬರು ಯುವಕರ ಮೇಲೆ ಪುಡಿ ರೌಡಿಗಳು ದಾಳಿ ಮಾಡಲು ಯತ್ನಿಸಿದ್ದಾರೆ. ಕಾರಿನೊಳಗಿದ್ದ ಯುವಕರು ಅದೃಷ್ಟವಶಾತ್ ಗ್ರೇಟ್ ಎಸ್ಕೇಪ್ ಆಗಿದ್ದಾರೆ.

DK Shivakumar: ಕರಾವಳಿ,‌ ಮಲೆನಾಡು ಭಾಗಕ್ಕೆ ‌ಹೊಸ ಪ್ರವಾಸೋದ್ಯಮ ನೀತಿ ರೂಪಿಸಲು ಸಭೆ: ಡಿಸಿಎಂ ಡಿಕೆ ಶಿವಕುಮಾರ್

ಕರಾವಳಿ,‌ ಮಲೆನಾಡು ಭಾಗಕ್ಕೆ ‌ಹೊಸ ಪ್ರವಾಸೋದ್ಯಮ ನೀತಿ: ಡಿಕೆ ಶಿವಕುಮಾರ್

ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಕೇಳಿದಾಗ, "ಇದರಿಂದ ಯಾರಿಗೂ ತೊಂದರೆಯಾಗುವುದಿಲ್ಲ. 100- 200 ಎಕರೆಯಲ್ಲಿ ಸ್ಟೋರೇಜ್ ಪಾಯಿಂಟ್ ಮಾಡಲಾಗುತ್ತದೆ. ಅಲ್ಲಿಂದ ಪಂಪ್ ಮಾಡಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಶರಾವತಿಯಿಂದ ಈಗ ಉತ್ಪಾದನೆ ಮಾಡುತ್ತಿರುವ ಪ್ರಮಾಣದಷ್ಟೇ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ರಾಜ್ಯಕ್ಕೆ ದೊಡ್ಡ ಆಸ್ತಿಯಾಗುತ್ತದೆ. ಇದಕ್ಕೆ ವಿರೋಧ ಮಾಡುವ ಅವಶ್ಯಕತೆಯಿಲ್ಲ" ಎಂದರು.

Khaleda Zia: ಬಾಂಗ್ಲಾ ದೇಶ ಮಾಜಿ ಪ್ರಧಾನಿ ಖಲೀದಾ ಜಿಯಾ ಆರೋಗ್ಯ ಗಂಭೀರ

ಬಾಂಗ್ಲಾ ದೇಶ ಮಾಜಿ ಪ್ರಧಾನಿ ಖಲೀದಾ ಜಿಯಾ ಆರೋಗ್ಯ ಗಂಭೀರ

ಡಿಸೆಂಬರ್ 11 ರಂದು, ಅವರ ಶ್ವಾಸಕೋಶ ಮತ್ತು ಇತರ ಪ್ರಮುಖ ಅಂಗಗಳಿಗೆ ವಿಶ್ರಾಂತಿ ನೀಡಲು ಅವರನ್ನು ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಯಿತು. “ಆಕೆಯ ಸ್ಥಿತಿ ಸುಧಾರಿಸಿದೆ ಎಂದು ಹೇಳಲಾಗುವುದಿಲ್ಲ. ಅವರು ಅತ್ಯಂತ ಗಂಭೀರ ಹಂತವನ್ನು ಹಾದುಹೋಗುತ್ತಿದ್ದಾರೆ” ಎಂದು ಡಾ.ಎಝಡ್ಎಂ ಜಾಹಿದ್ ಶನಿವಾರ ಮಧ್ಯರಾತ್ರಿಯ ನಂತರ ಎವರ್ ಕೇರ್ ಆಸ್ಪತ್ರೆಯ ಹೊರಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

Bengaluru News: ಜಯನಗರ ಆಸ್ಪತ್ರೆಯಲ್ಲಿ ಭಾರಿ ನಿರ್ಲಕ್ಷ್ಯ, O+ ಗುಂಪಿನ ರೋಗಿಗೆ A+ ರಕ್ತ ನೀಡಿ ಎಡವಟ್ಟು

ಜಯನಗರ ಆಸ್ಪತ್ರೆಯಲ್ಲಿ O+ ಗುಂಪಿನ ರೋಗಿಗೆ A+ ರಕ್ತ ನೀಡಿ ಎಡವಟ್ಟು

ಪುನೀತ್ ಸೂರ್ಯ ಎಂಬ ರೋಗಿ ರಕ್ತಹೀನತೆ ಚಿಕಿತ್ಸೆ ಪಡೆಯಲು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದರು. ಅವರು ಓ ಪಾಸಿಟಿವ್ (O+) ರಕ್ತದ ಗುಂಪಿನವರಾಗಿದ್ದು, ಲ್ಯಾಬ್ ಟೆಕ್ನಿಷಿಯನ್ ನಿರ್ಲಕ್ಷ್ಯದಿಂದಾಗಿ ತಪ್ಪಾಗಿ ಎ ಪಾಸಿಟಿವ್ (A+) ರಕ್ತ ನೀಡಲಾಗಿದ್ದು, ಪುನೀತ್ ಸ್ಥಿತಿ ಗಂಭೀರವಾಗಿತ್ತು. ಐಸಿಯುವಿನಲ್ಲಿ ಮುಂದುವರಿದ ಚಿಕಿತ್ಸೆಯಿಂದ ಇದೀಗ ಅವರ ಆರೋಗ್ಯ ಸ್ಥಿತಿ ಕ್ರಮೇಣ ಸುಧಾರಿಸುತ್ತಿದೆ

Saritha Gnanananda: ಯಂಡಮೂರಿ ಕೃತಿಗಳ ಅನುವಾದಕಿ, ಕನ್ನಡ ಲೇಖಕಿ ಸರಿತಾ ಜ್ಞಾನಾನಂದ ನಿಧನ

ಯಂಡಮೂರಿ ಕೃತಿಗಳ ಅನುವಾದಕಿ, ಕನ್ನಡ ಲೇಖಕಿ ಸರಿತಾ ಜ್ಞಾನಾನಂದ ನಿಧನ

ಯಂಡಮೂರಿ ವೀರೇಂದ್ರನಾಥ್, ಸೂರ‍್ಯದೇವರ ರಾಮಮೋಹನರಾವ್, ಡಾ. ಕೊಂಡೂರು ವೀರರಾಘವಾಚಾರ್ಯಲು, ಬಲಿವಾಡ ಕಾಂತರಾವ್, ಮಲ್ಲಾದಿ ವೆಂಕಟ ಕೃಷ್ಣಮೂರ್ತಿ, ಡಾ. ಸಮರಂ ಮುಂತಾದ ತೆಲುಗು ಲೇಖಕರು, ತಮಿಳಿನ ಶಿವ ಶಂಕರಿ, ನಾರಾಯಣದತ್ತ ಶ್ರೀಮಾಲಿಯವರ ಹಿಂದಿ, ರಾಮ ಮೊಹಮದ್ ಡಿಸೌಜರವರ ಉರ್ದು ಮತ್ತು ಮರಾಠಿ ಭಾಷೆಗಳಿಂದ ಸುಮಾರು 50ಕ್ಕೂ ಹೆಚ್ಚು ಕಾದಂಬರಿಗಳನ್ನು ಕನ್ನಡಕ್ಕೆ ಸರಿತಾ ಜ್ಞಾನಾನಂದ ಅವರು ಅನುವಾದಿಸಿದ್ದಾರೆ.

Mysuru Blast Case: ಮೈಸೂರು ಸ್ಪೋಟ; ಹೂವಿನ ವ್ಯಾಪಾರಿ ಮಂಜುಳಾ ಸಾವಿನ ಸುದ್ದಿ ಕೇಳಿ ಅಣ್ಣನೂ ಸಾವು

ಮೈಸೂರು ಸ್ಪೋಟ; ಹೂವಿನ ವ್ಯಾಪಾರಿ ಮಂಜುಳಾ ಸಾವಿನ ಸುದ್ದಿ ಕೇಳಿ ಅಣ್ಣನೂ ಸಾವು

ಹೀಲಿಯಂ ಸಿಲಿಂಡರ್ ಸ್ಫೋಟದಿಂದ ಮಂಜುಳ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಆಸ್ಪತ್ರೆಯಲ್ಲಿ ಮಂಜುಳಾ ಸಾವನ್ನಪ್ಪಿದ್ದಾರೆ. ತಂಗಿ ಮಂಜುಳಾ ಸಾವಿನ ಸುದ್ದಿ ಕೇಳಿ ನಂಜನಗೂಡು ತಾಲೂಕಿನ ಚಾಮಲಾಪುರದ ನಿವಾಸಿ ಪರಮೇಶ್ವರ್ ಸಾವನ್ನಪ್ಪಿದ್ದಾರೆ. ಪರಮೇಶ್ವರ್ ಮೊದಲೇ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಗೊತ್ತಾಗಿದೆ.

Aadhar Cards: 10 ವರ್ಷ ಹಳೆಯ ಆಧಾರ್ ಕಾರ್ಡ್ ಹೊಂದಿರುವವರು ಗಮನಿಸಿ, ಜನವರಿ 1ರಿಂದ ಈ ನಿಯಮಗಳು ಜಾರಿ

10 ವರ್ಷ ಹಳೆಯ ಆಧಾರ್ ಕಾರ್ಡ್ ಹೊಂದಿರುವವರು ಹೊಸ ನಿಯಮ ಗಮನಿಸಿ!

ನೀವು 10 ವರ್ಷಗಳಿಗಿಂತ ಹಳೆಯದಾದ ನಿಮ್ಮ ಆಧಾರ್ ಕಾರ್ಡ್‌ಗಳನ್ನು ನವೀಕರಿಸದಿದ್ದರೆ, ಅಂದರೆ ಹತ್ತು ವರ್ಷಗಳ ಹಿಂದೆ ಸಕ್ರಿಯಗೊಳಿಸಲಾದವುಗಳನ್ನು ನವೀಕರಿಸುವುದು ಈಗ ಕಡ್ಡಾಯವಾಗಿದೆ. ಹೆಸರು, ಜನ್ಮ ದಿನಾಂಕ, ವಿಳಾಸದಂತಹ ಮಾಹಿತಿಯನ್ನು ನವೀಕರಿಸುವುದು ನಿಮ್ಮ ಆಧಾರ್ ಅನ್ನು ಸಕ್ರಿಯವಾಗಿರಿಸಲಿದೆ. ಯುಐಡಿಎಐ ಈಗಾಗಲೇ ಡಿಸೆಂಬರ್ 1, 2025 ರಿಂದ ಆಧಾರ್‌ನ ಹೊಸ ವಿನ್ಯಾಸವನ್ನು ಘೋಷಿಸಿದೆ.

Drunk and Drive: ಕುಡಿದು ಬೆಂಗಳೂರಿನಿಂದ ಗೋವಾಗೆ ಬಸ್‌ ಚಲಾಯಿಸುತ್ತಿದ್ದ ಸೀಬರ್ಡ್‌ ಬಸ್‌ ಚಾಲಕ! ಪೊಲೀಸ್‌ ತಪಾಸಣೆ ವೇಳೆ ಪತ್ತೆ

ಕುಡಿದು ಬೆಂಗಳೂರು- ಗೋವಾ ಬಸ್‌ ಚಲಾಯಿಸುತ್ತಿದ್ದ ಸೀಬರ್ಡ್‌ ಬಸ್‌ ಚಾಲಕ!

Chitradurga Bus Accident: ಮದ್ಯಪಾನ ಮಾಡಿ ಬಸ್​ ಚಲಾಯಿಸುತ್ತಿದ್ದ ಸೀ ಬರ್ಡ್ ಚಾಲಕ ಪೊಲೀಸರ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ. ಉಪ್ಪಾರಪೇಟೆ ಸಂಚಾರಿ ಪೊಲೀಸರ ತಪಾಸಣೆ ವೇಳೆ ಚಾಲಕ ಸಿಕ್ಕಿಬಿದ್ದಿದ್ದು, ಆಲ್ಕೋಮೀಟರ್ ತಪಾಸಣೆ ವೇಳೆ ಕುಡಿದಿರೋದು ಬಯಲಾಗಿದೆ. ಕೂಡಲೇ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊನೆಗೆ ಬೇರೊಬ್ಬ ಡ್ರೈವರ್ ಕರೆಸಿ ಬಸ್​ ತೆಗೆದುಕೊಂಡು ಹೋಗುವಂತೆ ಪೊಲೀಸರು ತಿಳಿಸಿದರು. ಗೋವಾಗೆ ತೆರಳುತ್ತಿದ್ದ ಈ ಬಸ್​​ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು.

Harassment: ಬೆಂಗಳೂರಿನ ರಸ್ತೆಯಲ್ಲಿ ಬೈಕ್‌ ಚಲಾಯಿಸುತ್ತಿದ್ದ ಯುವತಿಗೆ ಪುಂಡರಿಂದ ಕಿರುಕುಳ

ಬೆಂಗಳೂರಿನಲ್ಲಿ ಬೈಕ್‌ ಚಲಾಯಿಸುತ್ತಿದ್ದ ಯುವತಿಗೆ ಪುಂಡರಿಂದ ಕಿರುಕುಳ

ಒಂದೇ ಬೈಕ್‌ನಲ್ಲಿ ತ್ರಿಬಲ್ ರೈಡ್ ಮಾಡುತ್ತಿದ್ದ​​, ಹೆಲ್ಮೆಟ್​ ಕೂಡ ಧರಿಸಿರದ, ಅಡ್ಡಾದಿಡ್ಡಿ ಬೈಕ್‌ ಚಲಾಯಿಸುತ್ತಿದ್ದ ಯುವಕರು, ಸ್ಕೂಟಿಯಲ್ಲಿ ಹೋಗ್ತಿದ್ದ ಯುವತಿಯ ಬೆನ್ನು ಬಿದ್ದಿದ್ದಾರೆ. ಈ ವೇಳೆ ಯುವತಿಯನ್ನು ಫಾಲೋ ಮಾಡಿದ ಪುಂಡರು, ಬೈಕನ್ನು ಅಡ್ಡಾದಿಡ್ಡಿ ಓಡಿಸಿ ಯುವತಿಗೆ ಟಾರ್ಚರ್​ ಕೊಟ್ಟಿದ್ದಾರೆ. ಡಿಸೆಂಬರ್​ 25 ರಾತ್ರಿ 12 ಗಂಟೆ ಸುಮಾರಿಗೆ ಬಿಟಿಎಂ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ.

Karnakata Weather: ರಾಜ್ಯದಲ್ಲಿ ಮತ್ತಷ್ಟು ಚಳಿ, ಕನಿಷ್ಠ ತಾಪಮಾನ ದಾಖಲು, 19 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ರಾಜ್ಯದಲ್ಲಿ ಮತ್ತಷ್ಟು ಚಳಿ, ಕನಿಷ್ಠ ತಾಪಮಾನ, 19 ಜಿಲ್ಲೆಗಳಲ್ಲಿ ಮಳೆ ಸಂಭವ

Karnakata Weather forecast: ರಾಜ್ಯದ ಒಳನಾಡಿನ ಹಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 4-6 ಡಿಗ್ರಿ ಸೆಲ್ಸಿಯಸ್‌ವರೆಗೆ ಕಡಿಮೆಯಾಗಿದೆ. ವಿಜಯಪುರದಲ್ಲಿ 9.5 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ (cold) ದಾಖಲಾಗಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್‌ 31 ಹಾಗೂ ಜನವರಿ 1ರಂದು ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

Chitradurga Bus Accident: ಬಸ್‌ಗಳ ರಾತ್ರಿ ಪ್ರಯಾಣಕ್ಕೆ ವಿರಾಮ: ಕೇಂದ್ರಕ್ಕೆ ಪತ್ರ ಬರೆಯಲು ರಾಜ್ಯ ಚಿಂತನೆ

ರಾತ್ರಿ ಬಸ್‌ ಯಾನಕ್ಕೆ ಬ್ರೇಕ್: ಕೇಂದ್ರಕ್ಕೆ ಪತ್ರ ಕಳಿಸಲು ರಾಜ್ಯ ಚಿಂತನೆ

ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಅಪಘಾತಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಪ್ರಮುಖ ಕಾರಣ ಚಾಲಕರು ನಿದ್ರೆ ಮಂಪರಿನಲ್ಲಿ ವಾಹನ ಚಾಲನೆ ಮಾಡುತ್ತಿರೋದು. ಹೀಗಾಗಿ ರಾತ್ರಿ ಸಮಯ ಸಂಚಾರ ಮಾಡೋರು ಸಂಜೆಯೇ ನಿದ್ದೆ ಮಾಡಿ ಎದ್ದರೇ ಒಳ್ಳೆಯದು. ಈ ನಿದ್ದೆ ಮಂಪರಿನಿಂದ ಆಗೋ ಅನಾಹುತ ತಪ್ಪಿಸಲು ಚಾಲಕರು ಕೆಲಸಮಯ ವಾಹನಗಳನ್ನ ನಿಲ್ಲಿಸಿ ವಿಶ್ರಾಂತಿ ಮಾಡಬೇಕು ಎಂದು ಸಚಿವರು ಹೇಳಿದ್ದಾರೆ.

Loading...