ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ
Profile

ಹರೀಶ್‌ ಕೇರ

columnist

harish@vishwavani.news

ದಶಕದ ಕಾಲ ಪತ್ರಿಕೋದ್ಯಮ ಅನುಭವ ಹೊಂದಿದ ಹರೀಶ್‌ ಕೇರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ಹೊಸದಿಗಂತ, ವಿಜಯ ಕರ್ನಾಟಕ, ಕನ್ನಡಪ್ರಭ, ವಿಸ್ತಾರ ನ್ಯೂಸ್‌ಗಳಲ್ಲಿ ಮುದ್ರಣ, ಡಿಜಿಟಲ್‌ ಹಾಗೂ ಯುಟ್ಯೂಬ್‌ ಮೂರೂ ಸ್ವರೂಪಗಳಲ್ಲಿ ಕೆಲಸ ಮಾಡಿದ ಅನುಭವ. ಸಾಹಿತ್ಯ, ಸಾಂಸ್ಕೃತಿಕ, ನಾಡು ಹಾಗೂ ರಾಷ್ಟ್ರ ರಾಜಕೀಯ, ವಿಜ್ಞಾನ, ಪರಿಸರ ಇತ್ಯಾದಿ ಆಸಕ್ತಿಗಳು. ಕವಿ, ಕತೆಗಾರ, ವಿಮರ್ಶಕ. ಗಿಣಿಬಾಗಿಲು, ನಕ್ಷತ್ರ ನೇಯುವ ಹಕ್ಕಿಗಳು, ಮೇಧಾ ಪಾಟ್ಕರ್‌, ಪ್ರಜ್ವಲ ಮಾತು ಉಜ್ವಲ ಬೆಳಕು, ನಿಮ್ಮೊಳಗಿದೆ ಸಕ್ಸಸ್‌ ಇವರ ಕೃತಿಗಳು. ಉತ್ಥಾನ, ಸಂಚಯ, ಸಂಕ್ರಮಣ ಸಾಹಿತ್ಯ ಸ್ಪರ್ಧೆಗಳಲ್ಲಿ ಪುರಸ್ಕಾರ ದೊರೆತಿದೆ. ಅಭಿವೃದ್ದಿ ಪತ್ರಿಕೋದ್ಯಮ ಮತ್ತು ಅಂಕಣ ಬರಹ ಜೀವದ್ರವ್ಯ.

Articles
Self Harming: ತಿಂಗಳುಗಟ್ಟಲೆ ಮನೆಗೆ ಬಾರದ ಪತಿ, ನೊಂದು ಬೆಂಕಿ ಹಚ್ಚಿಕೊಂಡು ತಾಯಿ- ಮಗಳು ಆತ್ಮಹತ್ಯೆ

ಮನೆಗೆ ಬಾರದ ಪತಿ, ನೊಂದು ಬೆಂಕಿ ಹಚ್ಚಿಕೊಂಡು ತಾಯಿ- ಮಗಳು ಆತ್ಮಹತ್ಯೆ

ಪತಿ-ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಪತಿ ಗೋವಿಂದ್ ಪತ್ನಿ ಮತ್ತು ಮಗಳನ್ನು ಬಿಟ್ಟು ನೇಪಾಳಕ್ಕೆ ಹೋದರೆ 5-6 ತಿಂಗಳುಗಳ ಕಾಲ ಮರಳಿ ಬರುತ್ತಿರಲಿಲ್ಲ. ಇದರಿಂದ ಸೀತಾ ಮನಸ್ಸಿನಲ್ಲಿ ತುಂಬಾ ನೋವು ತುಂಬಿಕೊಂಡಿದ್ದರು. ಘಟನೆ ನಡೆದ ನಿನ್ನೆ ಸಂಜೆ ಕೂಡ ಪತಿ- ಪತ್ನಿ ಈ ವಿಚಾರದಲ್ಲಿ ಫೋನ್‌ನಲ್ಲಿ ಜಗಳವಾಡಿಕೊಂಡಿದ್ದರು.

DK Shivakumar: ಸಿಎಂ ಸ್ಥಾನ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ: ಡಿಕೆ ಶಿವಕುಮಾರ್

ಸಿಎಂ ಸ್ಥಾನ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ: ಡಿಕೆ ಶಿವಕುಮಾರ್

ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರ ಜೊತೆ ಸಿಎಂ ಸ್ಥಾನದ ಬಗ್ಗೆ ಚರ್ಚೆ ಮಾಡಲಾಯಿತೇ ಎಂದು ಕೇಳಿದಾಗ, ಈ ರೀತಿ ಉತ್ತರಿಸಿದರು. ಮೈಸೂರಿನಲ್ಲಿ ಮೊನ್ನೆ ಡಿಕೆ ಶಿವಕುಮಾರ್‌ ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ರಾಹುಲ್‌, ದಿಲ್ಲಿಗೆ ಬರಲು ಆಹ್ವಾನಿಸಿದ್ದರು.

Theft Case: ಹುಡುಗರಂತೆ ಡ್ರೆಸ್‌ ಮಾಡಿಕೊಂಡು ಕಳವು ಮಾಡುತ್ತಿದ್ದ ಕಳ್ಳಿಯರ ಸೆರೆ

ಹುಡುಗರಂತೆ ಡ್ರೆಸ್‌ ಮಾಡಿಕೊಂಡು ಕಳವು ಮಾಡುತ್ತಿದ್ದ ಕಳ್ಳಿಯರ ಸೆರೆ

ಇಬ್ಬರೂ ಆರೋಪಿಗಳು ಟ್ಯಾನರಿ ರಸ್ತೆಯ‌ ನಿವಾಸಿಗಳಾಗಿದ್ದು ಹುಡುಗರ ರೀತಿ ಪ್ಯಾಂಟ್ ಶರ್ಟ್, ಟೋಪಿ ಹಾಕಿಕೊಂಡು ಬೈಕಿನಲ್ಲಿ ಓಡಾಡುತ್ತಿದ್ದರು. ನಿರ್ಜನ ಪ್ರದೇಶದ ಮನೆಗಳಲ್ಲಿ ಹಾಡುಹಗಲೇ ಕಳ್ಳತನ ಮಾಡುತ್ತಿದ್ದರು. ಸದ್ಯ ಇಬ್ಬರನ್ನು ಬಂಧಿಸಿ ಪೊಲೀಸರು ಮತ್ತಷ್ಟು ವಿಚಾರಣೆ ನಡೆಸುತ್ತಿದ್ದಾರೆ‌. ಇವರು ಇಬ್ಬರೇನಾ, ಅಥವಾ ಇವರ ಹಿಂದೆ ದೊಡ್ಡ ಗ್ಯಾಂಗ್‌ ಇದೆಯಾ ಎಂಬುದು ಪತ್ತೆ ಆಗಬೇಕಿದೆ.

Murder Case: ಮುಂದಿನ ವಾರ ಮದುವೆಯಾಗಲಿದ್ದವ ಅಣ್ಣನ ಮಕ್ಕಳಿಂದಲೇ ಹತ್ಯೆ!

ಮುಂದಿನ ವಾರ ಮದುವೆಯಾಗಲಿದ್ದವ ಅಣ್ಣನ ಮಕ್ಕಳಿಂದಲೇ ಹತ್ಯೆ!

ಬುಧವಾರ ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಇಂದು ಬೆಳಿಗ್ಗೆ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಆಸ್ತಿಗಾಗಿ ಸಹೋದರರ ನಡುವೆ ಆಗಿಂದಾಗ್ಗೆ ಜಗಳ ನಡೆಯುತ್ತಿತ್ತು. ಇಂದು ಜಗಳ ವಿಕೋಪಕ್ಕೆ ತಿರುಗಿ ಹತ್ಯೆಯಲ್ಲಿ ಅಂತ್ಯವಾಗಿದೆ ಎಂದು ತಿಳಿದುಬಂದಿದೆ.

Rajeev Gowda: ಇನ್ನೂ ಸೆರೆಸಿಗದ ಕಾಂಗ್ರೆಸ್ ಮುಖಂಡ ರಾಜೀವ್‌ ಗೌಡ,‌ 9 ಕ್ರಿಮಿನಲ್‌ ಕೇಸ್‌ಗಳ ಸರದಾರ!

9 ಕ್ರಿಮಿನಲ್‌ ಕೇಸ್‌ ಸರದಾರ, ಕೈ ಮುಖಂಡ ರಾಜೀವ್‌ ಗೌಡ ಇನ್ನೂ ನಾಪತ್ತೆ

ಎರಡು ದಿನಗಳಿಂದ ರಾಜೀವ್‌ ಗೌಡ ತಲೆಮರೆಸಿಕೊಂಡಿದ್ದು, ಫೋನ್‌ ಸ್ವಿಚ್‌ಆಫ್ ಮಾಡಿಕೊಂಡಿದ್ದಾರೆ. ಗುರುವಾರ ರಾಜೀವ್ ಗೌಡ ಮನೆ, ಸಂಬಂಧಿಕರು, ಸ್ನೇಹಿತರ ಮನೆಗಳಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ರಾಜೀವ್ ಗೌಡ ಬಂಧನಕ್ಕಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂದೆ ಸರಕಾರಿ ನೌಕರರ ಪ್ರತಿಭಟನೆ ನಡೆಯಲಿದೆ.

Drowned: ತಂದೆಯ ಎದುರೇ ಕೊಳದಲ್ಲಿ ಮುಳುಗಿ ಇಬ್ಬರು ಮಕ್ಕಳು ಜಲಸಮಾಧಿ

ತಂದೆಯ ಎದುರೇ ಕೊಳದಲ್ಲಿ ಮುಳುಗಿ ಇಬ್ಬರು ಮಕ್ಕಳು ಜಲಸಮಾಧಿ

ಮೃತ ಬಾಲಕರು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟಿ ಗ್ರಾಮದ ನಿವಾಸಿಗಳಾಗಿದ್ದು, ಸಂಕ್ರಾಂತಿ ಹಿನ್ನೆಲೆ ಕ್ವಾರಿಗೆ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ಇಬ್ಬರು ಬಾಲಕರು ತಂದೆ ಎದುರಲ್ಲೇ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಓದುತ್ತಿದ್ದರು ಎಂದು ತಿಳಿದು ಬಂದಿದೆ. ನೀರಲ್ಲಿ ಮುಳುಗುತ್ತಿದ್ದ ಮತ್ತೊಬ್ಬ ಬಾಲಕನನ್ನು ಸ್ಥಳೀಯರು ರಕ್ಷಿಸಿದ್ದಾರೆ.

Lakkundi gold treasure: ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನ ಆರಂಭ; ಇಡೀ ಗ್ರಾಮ ಸ್ಥಳಾಂತರ?

ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನ ಆರಂಭ; ಇಡೀ ಗ್ರಾಮ ಸ್ಥಳಾಂತರ?

ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ 101 ದೇವಸ್ಥಾನಗಳಿವೆ. ಹೀಗಾಗಿ ದೇವಸ್ಥಾನದ ಅಡಿಯಲ್ಲಿ ಸಾಕಷ್ಟು ಪ್ರಮಾಣದ ನಿಧಿಯಿದೆ ಎನ್ನಲಾಗುತ್ತಿದೆ. ಹೀಗಾಗಿ ಲಕ್ಕುಂಡಿ ಗ್ರಾಮವನ್ನು ಸ್ಥಳಾಂತರ ‌ಮಾಡಬೇಕು. ಆಗ ಮಾತ್ರ ಲಕ್ಕುಂಡಿ ಗ್ರಾಮದಲ್ಲಿ ನಿಧಿ ರಹಸ್ಯ ಬಯಲಾಗುತ್ತದೆ. ಇದರಿಂದ ಗ್ರಾಮವನ್ನ ಸ್ಥಳಾಂತರ ಮಾಡುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ ಎಂದು ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ಎಚ್​​​ಕೆ ಪಾಟೀಲ್ ಹೇಳಿದ್ದಾರೆ.

Dinesh Gundu Rao: ಸಂಕ್ರಾಂತಿ ಕಿಚ್ಚು: ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದಲ್ಲಿ ತಪ್ಪಿದ ಭಾರಿ ಅನಾಹುತ

ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದಲ್ಲಿ ತಪ್ಪಿದ ಭಾರಿ ಅನಾಹುತ

ಹಬ್ಬದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ದೇವಾಲಯದ ಮುಂದೆ ಆಯೋಜಕರು ಹುಲ್ಲು, ಹೂವು ಹಾಗೂ ಬ್ಯಾನರ್‌ಗಳಿಂದ ಸುಂದರವಾಗಿ ಸಿಂಗಾರ ಮಾಡಿದ್ದರು. ರಾತ್ರಿ 7 ಗಂಟೆ ಸುಮಾರಿಗೆ ಪಟಾಕಿ ಹಚ್ಚುವಾಗ ಆಕಸ್ಮಿಕವಾಗಿ ಬೆಂಕಿ ಕಿಡಿ ಸಿಂಗಾರಗೊಂಡಿದ್ದ ತೋರಣಕ್ಕೆ ತಾಕಿದೆ. ನೋಡ ನೋಡುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿತ್ತು.

Salary Package: ಸರಕಾರಿ ನೌಕರರಿಗೆ ಮಹತ್ವದ ಆದೇಶ: ಸಂಬಳ ಪ್ಯಾಕೇಜ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳದವರಿಗೆ ವೇತನವಿಲ್ಲ

ಸಂಬಳ ಪ್ಯಾಕೇಜ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳದವರಿಗೆ ವೇತನವಿಲ್ಲ

ಎಲ್ಲಾ ಅರ್ಹ “ಎ”, “ಬಿ” ಮತ್ತು “ಸಿ” ಗುಂಪಿನ ಅಧಿಕಾರಿಗಳು/ನೌಕರರಿಗೆ ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ದಿನಾಂಕ: 15.12.2025 ರೊಳಗಡೆ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು.

Murder Case: ಕೋಲಾರ: ಪ್ರೀತಿಗೆ ಒಪ್ಪದ ವಿವಾಹಿತೆಯನ್ನು ಇರಿದು ಕೊಂದ ಎರಡು ಮಕ್ಕಳ ತಂದೆ!

ಪ್ರೀತಿಗೆ ಒಪ್ಪದ ವಿವಾಹಿತೆಯನ್ನು ಇರಿದು ಕೊಂದ ಎರಡು ಮಕ್ಕಳ ತಂದೆ!

ಇಂಡಸ್ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಚಿರಂಜೀವಿ ಸಾಲ ವಸೂಲಿ ಮಾಡಲು ತೆರಳಿದಾಗ ಸುಜಾತಾಳ ಪರಿಚಯವಾಗಿದೆ. ಈ ವೇಳೆ ನನ್ನನ್ನು ಪ್ರೀತಿಸುವಂತೆ ಚಿರಂಜೀವಿ, ಸುಜಾತಳ ಬೆನ್ನು ಬಿದ್ದಿದ್ದಾನೆ. ಆದರೆ ಸುಜಾತ ಇದಕ್ಕೆ ಒಪ್ಪಿಲ್ಲ. ದೂರ ಇರುವಂತೆ ಆತನಿಗೆ ಹಿತವಚನ ಹೇಳಿದ್ದಾರೆ. ಇದರಿಂದ ರೊಚ್ಚಿಗೆದ್ದ ಆತ ಆಕೆಯ ಕೊಲೆ ಮಾಡಿದ್ದಾನೆ.

Pratap Simha: ನಾನು ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ: ಪ್ರತಾಪ್ ಸಿಂಹ ಪ್ರಕಟ

ನಾನು ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ: ಪ್ರತಾಪ್ ಸಿಂಹ ಪ್ರಕಟ

ಅಭ್ಯರ್ಥಿ ಯಾರು ಎಂದು ನಮ್ಮ ಪಕ್ಷ ನಿರ್ಧಾರ ಮಾಡುತ್ತದೆ. ವಾಸು ಎಚ್ಎಸ್, ಶಂಕರಲಿಂಗೇಗೌಡ ಹಾದಿಯಲ್ಲಿ ನಾನು ನಡೆಯುತ್ತೇನೆ. ಮುಂದೆ ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಚಾಮರಾಜ ಕ್ಷೇತ್ರದ ಜನ ವಿದ್ಯಾವಂತ ಪ್ರತಿನಿಧಿ ಬಯಸುತ್ತಾರೆ ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದರು.

Cylinder Blast: ಗ್ಯಾಸ್‌ ಸಿಲಿಂಡರ್‌ ಸ್ಫೋಟ, ಬಾಂಗ್ಲಾದೇಶಿ ವಲಸಿಗರು ನೆಲೆಸಿದ್ದ ಶೆಡ್‌ಗಳು ಬೆಂಕಿಗಾಹುತಿ

ಸಿಲಿಂಡರ್‌ ಸ್ಫೋಟ, ಬಾಂಗ್ಲಾದೇಶಿ ವಲಸಿಗರ ಶೆಡ್‌ಗಳು ಬೆಂಕಿಗಾಹುತಿ

5 ಎಕ್ರೆ ಜಾಗದಲ್ಲಿ ಅಕ್ರಮವಾಗಿ ನೆಲೆಸಿದ್ದ ಇವರನ್ನು ಕೆಲ ದಿನಗಳ ಹಿಂದೆ ಸ್ಥಳದಿಂದ ಖಾಲಿ ಮಾಡಲಾಗಿತ್ತು. ಆದರೆ ರಾತ್ರೋರಾತ್ರಿ ಮತ್ತೆ ವಲಸಿಗರು ಇಲ್ಲಿಗೆ ಆಗಮಿಸಿ ಶೆಡ್‌ ಹಾಕಿದ್ದರು. ತಡರಾತ್ರಿ ಸಿಲಿಂಡರ್ ಸ್ಫೋಟದಿಂದ ಶೆಡ್‌ಗಳು ಹೊತ್ತಿ ಉರಿದಿದ್ದು ಆಗಸದೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ಚಾಚಿದೆ. ವಿಚಾರ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

Karunya Ram: ಬೆಟ್ಟಿಂಗ್‌ ಆಡಿ ವಂಚನೆ: ತಂಗಿಯ ವಿರುದ್ಧವೇ ನಟಿ ಕಾರುಣ್ಯ ರಾಮ್‌ ದೂರು

ಬೆಟ್ಟಿಂಗ್‌ ಆಡಿ ವಂಚನೆ: ತಂಗಿಯ ವಿರುದ್ಧವೇ ನಟಿ ಕಾರುಣ್ಯ ರಾಮ್‌ ದೂರು

ಮೇಕಪ್ ಆರ್ಟಿಸ್ಟ್‌ ಆಗಿರುವ ಸಹೋದರಿ ಸಮೃದ್ಧಿ ರಾಮ್ ಅವರು ಬೆಟ್ಟಿಂಗ್ ಆಡಿ ಸುಮಾರು 25 ಲಕ್ಷ ರೂ. ಸಾಲ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ವ್ಯವಹಾರದಲ್ಲೂ ಅಪಾರ ನಷ್ಟ ಅನುಭವಿಸಿದ್ದಾರೆ. ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆದಿದ್ದಾರೆ. ಹೀಗಾಗಿ ಮನೆಯಲ್ಲಿದ್ದ ಚಿನ್ನ ಹಾಗೂ ಹಣವನ್ನು ಸಾಲ ತೀರಿಸಲು ಬಳಸಿಕೊಂಡು ವಂಚಿಸಿದ್ದಾರೆ ಎಂದು ನಟಿ ದೂರು ನೀಡಿದ್ದಾರೆ.

Makara Sankranti 2026: ಮಕರ ಸಂಕ್ರಾಂತಿ ಸಂಭ್ರಮ: ದುಬಾರಿ ದುನಿಯಾ ನಡುವೆಯೂ ಖರೀದಿ ಜೋರು

ಮಕರ ಸಂಕ್ರಾಂತಿ ಸಂಭ್ರಮ: ದುಬಾರಿ ದುನಿಯಾ ನಡುವೆಯೂ ಖರೀದಿ ಜೋರು

ಸಿಲಿಕಾನ್ ಸಿಟಿ ಜನ ಸಹ ಹಬ್ಬಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಹಬ್ಬದ ಖರೀದಿ ಕೂಡ ಬಲು ಜೋರಾಗಿದೆ. ಆದರೆ ಹೂ, ಹಣ್ಣು, ಕಬ್ಬುಗಳ ಬೆಲೆ ಗ್ರಾಹಕರ ಜೇಬು ಸುಡುತ್ತಿದೆ. ಕೆಆರ್ ಮಾರುಕಟ್ಟೆ, ಯಶವಂತಪುರ, ಬಸವನಗುಡಿ, ವಿಜಯನಗರ, ಜಯನಗರ, ದಾಸರಹಳ್ಳಿ, ಕೆಆರ್ ಪುರ, ಮಲ್ಲೇಶ್ವರಂ ಸೇರಿದಂತೆ ವಿವಿಧ ಮಾರುಕಟ್ಟೆಗಳಲ್ಲಿ ಕಬ್ಬು, ಖರೀದಿ ಭರಾಟೆ ಜೋರಾಗಿದೆ.

Siddaramananda Swamiji: ಕಾಗಿನೆಲೆ ಕನಕಗುರು ಪೀಠದ ಶ್ರೀ ಸಿದ್ದರಾಮಾನಂದ ಸ್ವಾಮೀಜಿ ಇನ್ನಿಲ್ಲ

ಕಾಗಿನೆಲೆ ಕನಕಗುರು ಪೀಠದ ಶ್ರೀ ಸಿದ್ದರಾಮಾನಂದ ಸ್ವಾಮೀಜಿ ಇನ್ನಿಲ್ಲ

ಸ್ವಾಮೀಜಿ (Siddaramananda Swamiji) ಇದೇ ಜ.12, 13, 14 ರಂದು ಅದ್ದೂರಿಯಾಗಿ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ನಡೆಸಿದ್ದರು. ಹಾಲುಮತ ಸಾಹಿತ್ಯ ಸಮ್ಮೇಳನ ಹಾಗೂ ಹಾಲುಮತ (Halumatha) ಪೂಜಾರಿಗಳ ಶಿಬಿರ ಅದ್ದೂರಿಯಾಗಿ ನಡೆದಿತ್ತು. ಕಳೆದ ಒಂದು ವಾರದಿಂದ ಸರಿಯಾಗಿ ಊಟ, ನಿದ್ದೆ ಮಾಡದೇ ಕಾರ್ಯಕ್ರಮಲ್ಲಿ ಭಾಗಿಯಾಗಿದ್ದರಿಂದ ಬುಧವಾರ ರಾತ್ರಿ ಲೋ ಬಿಪಿಯಿಂದ ಸ್ವಾಮೀಜಿ ಬಳಲಿದ್ದರು.

Harish Kera Column: ಖಗೋಳ-ಭೂಗೋಳ ಬೆಸೆದ ಶ್ರೀನಿವಾಸ

Harish Kera Column: ಖಗೋಳ-ಭೂಗೋಳ ಬೆಸೆದ ಶ್ರೀನಿವಾಸ

ಸಿಹಿ ಸುದ್ದಿ ಏನೆಂದರೆ ಭಾರತ ಮೂಲದ ಖಗೋಳ ವಿಜ್ಞಾನಿ ಶ್ರೀನಿವಾಸ ಆರ್.ಕುಲಕರ್ಣಿ ಅವರಿಗೆ ಲಂಡನ್ನಿನ ಪ್ರತಿಷ್ಠಿತ ‘ರಾಯಲ್ ಅಸ್ಟ್ರೋನಾಮಿಕಲ್ ಸೊಸೈಟಿ’ ಕೊಡುವ 2026ನೇ ಸಾಲಿನ ಚಿನ್ನದ ಪದಕ ದೊರೆತಿದೆ. ಈ ಪ್ರಶಸ್ತಿಗೆ 200 ವರ್ಷಗಳ ಇತಿಹಾಸ. ಆಲ್ಬರ್ಟ್ ಐನ್ʼಸ್ಟೈನ್, ಸ್ಟೀಫನ್ ಹಾಕಿಂಗ್ ಮತ್ತು ಎಡ್ವಿನ್ ಹಬಲ್ʼರಂತಹ ಮಹಾನ್ ವಿಜ್ಞಾನಿಗಳು ಇದನ್ನು ಈ ಹಿಂದೆ ಪಡೆದವರು ಎಂದರೆ ಸಾಕಲ್ಲ. ಈ ಶ್ರೀನಿವಾಸ ಕುಲಕರ್ಣಿಯವರು ನಮ್ಮ ಹುಬ್ಬಳ್ಳಿಯವರು.

Murder case: ಬಾಲಕನ ಕೊಲೆ, ಹತ್ಯೆಗೈದ ಮೂವರು ಅಪ್ರಾಪ್ತ ವಯಸ್ಕರು ಅರೆಸ್ಟ್

ಬಾಲಕನ ಕೊಲೆ, ಹತ್ಯೆಗೈದ ಮೂವರು ಅಪ್ರಾಪ್ತ ವಯಸ್ಕರು ಅರೆಸ್ಟ್

ಕೊಲೆಯಾದ ನಿಂಗರಾಜ್, ಅನುದಾನಿತ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ. ಕ್ಷುಲ್ಲಕ ವಿಚಾರವಾಗಿ ಜಗಳ ಮಾಡಿಕೊಂಡು ಮೂವರು ಅಪ್ರಾಪ್ತ ಬಾಲಕರು ಸೇರಿ ನಿಂಗರಾಜನನ್ನು ಕೊಲೆ ಮಾಡಿದ್ದಾರೆ. ಸದ್ಯ ಪೊಲೀಸರು ಮೂವರು ಅಪ್ರಾಪ್ತರನ್ನು ಆರೆಸ್ಟ್ ಮಾಡಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Iran Protests: ಇರಾನ್ ಪ್ರತಿಭಟನೆಗಳಲ್ಲಿ 3,428ಕ್ಕೂ ಹೆಚ್ಚು ಮಂದಿ ಸಾವು, ದೇಶ ತೊರೆಯಲು ಭಾರತೀಯರಿಗೆ ಎಚ್ಚರಿಕೆ

ಇರಾನ್ ದಂಗೆಯಲ್ಲಿ 3,428 ಸಾವು, ದೇಶ ತೊರೆಯಲು ಭಾರತೀಯರಿಗೆ ಎಚ್ಚರಿಕೆ

ಇರಾನ್‌ನಲ್ಲಿರುವ ಭಾರತೀಯರಿಗೆ ಭಾರತೀಯ ರಾಯಭಾರಿ ಕಚೇರಿ ಎಚ್ಚರಿಕೆ ಸೂಚನೆ ನೀಡಿದ್ದು, ಸಾಧ್ಯವಾದಷ್ಟು ಬೇಗ ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ಮಾರ್ಗಗಳ ಮೂಲಕ ದೇಶ ತೊರೆಯುವಂತೆ ಮನವಿ ಮಾಡಿದೆ. ಅಲ್ಲದೆ ಪ್ರತಿಭಟನೆ ನಡೆಯುವ ಪ್ರದೇಶಗಳಿಂದ ದೂರವಿರಲು, ಎಚ್ಚರಿಕೆಯಿಂದ ಇರುವಂತೆ ಮತ್ತು ಸ್ಥಳೀಯ ಸುದ್ದಿಗಳನ್ನು ಗಮನಿಸುವಂತೆ ಸಲಹೆ ನೀಡಲಾಗಿದೆ.

Namma Metro: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ, ಇಂದಿನಿಂದ ಅನ್‌ಲಿಮಿಟೆಡ್‌ ಪಾಸ್‌

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇಂದಿನಿಂದ ಅನ್‌ಲಿಮಿಟೆಡ್‌ ಪಾಸ್‌

ಇದುವರೆಗೆ ಅನಿಯಮಿತ ಪ್ರಯಾಣ ಪಾಸ್‌ಗಳು, ಕೇವಲ ಕಾಂಟ್ಯಾಕ್ಟ್‌ಲೆಸ್ ಸ್ಮಾರ್ಟ್ ಕಾರ್ಡ್‌ಗಳ (ಸಿಎಸ್‌ಸಿ) ಮೂಲಕವೇ ಲಭ್ಯವಾಗುತ್ತಿದ್ದು, ₹50 ಭದ್ರತಾ ಠೇವಣಿ ಪಾವತಿಸುವುದು ಕಡ್ಡಾಯವಾಗಿತ್ತು. ಇದೀಗ ಮೊಬೈಲ್ ಕ್ಯೂಆರ್‌ ಕೋಡ್‌ ಪಾಸ್‌ಗಳ ಪರಿಚಯದೊಂದಿಗೆ, ಪಾಸ್‌ಗಳು ಮೊಬೈಲ್ ಫೋನ್‌ಗಳಲ್ಲಿ ಡಿಜಿಟಲ್ ರೂಪದಲ್ಲಿ ಲಭ್ಯವಾಗುತ್ತವೆ. ಪ್ರಯಾಣಿಕರಿಗೆ ಯಾವುದೇ ಭದ್ರತಾ ಠೇವಣಿ ಪಾವತಿಸುವ ಅಗತ್ಯವಿರುವುದಿಲ್ಲ.

DK Shivakumar: ರಾಹುಲ್‌ ಗಾಂಧಿ ಜೊತೆ ಮಾತುಕತೆ, ಟ್ವೀಟ್‌ ಬಗ್ಗೆ ಏನಂದ್ರು ಡಿಕೆ ಶಿವಕುಮಾರ್?

ರಾಹುಲ್‌ ಗಾಂಧಿ ಜೊತೆ ಮಾತುಕತೆ, ಟ್ವೀಟ್‌ ಬಗ್ಗೆ ಏನಂದ್ರು ಡಿಕೆ ಶಿವಕುಮಾರ್?

ನಮ್ಮ ಪಕ್ಷದ ನಾಯಕರ ಜತೆಗಿನ ಮಾತುಕತೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ನಾನು ಕೆಪಿಸಿಸಿ ಅಧ್ಯಕ್ಷ, ರಾಹುಲ್ ಗಾಂಧಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ. ಶಿಷ್ಟಾಚಾರದ ಮೂಲಕ ಅವರನ್ನು ನಾನು ಸ್ವಾಗತಿಸಿ, ಭೇಟಿ ಮಾಡಿದ ವಿಚಾರವನ್ನು ಸಾರ್ವಜನಿಕವಾಗಿ ಚರ್ಚೆ ಮಾಡಲು ಸಾಧ್ಯವೇ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಪ್ರಶ್ನಿಸಿದ್ದಾರೆ.

Shabarimale: ಕನ್ನಡದ ಅಯ್ಯಪ್ಪ ಭಕ್ತರ ಮೇಲೆ ತಮಿಳುನಾಡಿನಲ್ಲಿ ದೌರ್ಜನ್ಯ

ಕನ್ನಡದ ಅಯ್ಯಪ್ಪ ಭಕ್ತರ ಮೇಲೆ ತಮಿಳುನಾಡಿನಲ್ಲಿ ದೌರ್ಜನ್ಯ

ಕರ್ನಾಟಕದಿಂದ ಮಾಲೆ ಧರಿಸಿ ಶಬರಿಮಲೆಗೆ ತೆರಳಿದ್ದ ಕನ್ನಡಿಗರು ವಾಪಸ್​ ಬರುವ ವೇಳೆ ತಮಿಳುನಾಡಿನಲ್ಲಿ ಕೆಲವರು ನಮ್ಮ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿಯಿಂದ ಶಬರಿಮಲೆಗೆ ಹೋಗಿದ್ದ ಭಕ್ತರ ಜೊತೆ ತಮಿಳಿಗರು ಬಾವುಟ ತೆಗೆಯುವಂತೆ ಕಿರಿಕ್​ ತೆಗೆದಿದ್ದಾರೆ ಎನ್ನಲಾಗುತ್ತಿದೆ.

DK Shivakumar: ರಾಹುಲ್‌ ಗಾಂಧಿ ಭೇಟಿ ಬೆನ್ನಲ್ಲೇ ಕುತೂಹಲ ಕೆರಳಿಸಿದ ಡಿಕೆ ಶಿವಕುಮಾರ್‌ ಪೋಸ್ಟ್!‌

ರಾಹುಲ್‌ ಭೇಟಿ ಬೆನ್ನಲ್ಲೇ ಕುತೂಹಲ ಕೆರಳಿಸಿದ ಡಿಕೆ ಶಿವಕುಮಾರ್‌ ಪೋಸ್ಟ್!‌

ಮೈಸೂರಿನ ಭೇಟಿಯ ವೇಳೆ ಇಬ್ಬರ ಹತ್ತಿರವೂ ರಾಹುಲ್‌ ಕೆಲವೇ ನಿಮಿಷಗಳ ಕಾಲ ಮಾತನಾಡಿದ್ದಾರೆ. ನಾಯಕತ್ವ ಬದಲಾವಣೆ ಕುರಿತು ಅವರು ಯಾವುದೇ ಸ್ಪಷ್ಟ ಸಂದೇಶ ನೀಡಿಲ್ಲ. ಆದರೆ ಡಿಕೆ ಶಿವಕುಮಾರ್ ಅವರಿಗೆ “ನಥಿಂಗ್ ಟೂ ವರಿ, ವಿ ವಿಲ್ ಕಾಲ್ ಟು ಡೆಲ್ಲಿ ಸೂನ್” ಎಂದು ಸಂದೇಶ ನೀಡಿದ್ದಾರೆ. ಹೀಗಾಗಿ ಸಿಎ, ಡಿಸಿಎಂ ಇಬ್ಬರೂ ಮತ್ತೆ ದಿಲ್ಲಿಗೆ ಹೋಗಬೇಕಾಗಬಹುದು ಎಂಬುದಷ್ಟೇ ಗೊತ್ತಾಗಿದೆ.

Murder case: ಶಬರಿಮಲೆಗೆ ಹೋಗಿ ಬಂದು ಮೊದಲ ಪತ್ನಿಯ ಕೊಲೆಗೈದ ಪಾತಕಿ!

ಶಬರಿಮಲೆಗೆ ಹೋಗಿ ಬಂದು ಮೊದಲ ಪತ್ನಿಯ ಕೊಲೆಗೈದ ಪಾತಕಿ!

ಕುಮಾರ ಶಬರಿಮಲೆಗೆ ತೆರಳಲು ಇರುಮುಡಿ ಕಟ್ಟುವ ವೇಳೆ ಪತ್ನಿ ಸ್ಥಾನದಲ್ಲಿ ಬೇರೊಬ್ಬ ಮಹಿಳೆ ಪೂಜೆ ಮಾಡಿದ ಬಗ್ಗೆ ಮೊದಲ ಹೆಂಡತಿ ರಾಧಾಗೆ ಮಾಹಿತಿ ತಿಳಿದಿತ್ತು. ಕುಮಾರ ಶಬರಿಮಲೆಗೆ ಹೋಗಿ ಬಂದ ದಿನವೇ ಇದೇ ವಿಚಾರವನ್ನು ಪ್ರಶ್ನೆ ಮಾಡಲು ಜ.10ರ ರಾತ್ರಿ ಯಡೂರಿಗೆ ರಾಧಾ ಬಂದಿದ್ದರು. ಅದೇ ದಿನ ರಾಧಾಳನ್ನು ಕುಮಾರ ಮನೆಯಲ್ಲಿಯೇ ಹತ್ಯೆ ಮಾಡಿ ಹಾಸನ ತಾಲೂಕಿನ ಕಂದಲಿ ಬಳಿಯ ಯಗಚಿ ನದಿಗೆ ಶವ ಬಿಸಾಡಿದ್ದ.

Road Accident: ಮತ್ತೊಂದು ಭೀಕರ ಅಪಘಾತ, ಬಸ್ಸಿಗೆ ಕಾರು ಡಿಕ್ಕಿಯಾಗಿ ಮೂವರು ಸಾವು

ಮತ್ತೊಂದು ಭೀಕರ ಅಪಘಾತ, ಬಸ್ಸಿಗೆ ಕಾರು ಡಿಕ್ಕಿಯಾಗಿ ಮೂವರು ಸಾವು

ಮೃತರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ. ಚಾಲಕ ಸೇರಿದಂತೆ ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿ ಒಂದೇ ಕುಟುಂಬದ 6 ಜನ ಪ್ರಯಾಣ ಮಾಡುತ್ತಿದ್ದರು. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದ ಮದುವೆ ಸಮಾರಂಭಕ್ಕೆ ತೆರಳಿ, ಮದುವೆ ಮುಗಿಸಿಕೊಂಡು ಶೃಂಗೇರಿಗೆ ವಾಪಸ್ಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ.

Loading...