ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

ಹರೀಶ್‌ ಕೇರ

columnist

harish@vishwavani.news

ದಶಕದ ಕಾಲ ಪತ್ರಿಕೋದ್ಯಮ ಅನುಭವ ಹೊಂದಿದ ಹರೀಶ್‌ ಕೇರ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ಹೊಸದಿಗಂತ, ವಿಜಯ ಕರ್ನಾಟಕ, ಕನ್ನಡಪ್ರಭ, ವಿಸ್ತಾರ ನ್ಯೂಸ್‌ಗಳಲ್ಲಿ ಮುದ್ರಣ, ಡಿಜಿಟಲ್‌ ಹಾಗೂ ಯುಟ್ಯೂಬ್‌ ಮೂರೂ ಸ್ವರೂಪಗಳಲ್ಲಿ ಕೆಲಸ ಮಾಡಿದ ಅನುಭವ. ಸಾಹಿತ್ಯ, ಸಾಂಸ್ಕೃತಿಕ, ನಾಡು ಹಾಗೂ ರಾಷ್ಟ್ರ ರಾಜಕೀಯ, ವಿಜ್ಞಾನ, ಪರಿಸರ ಇತ್ಯಾದಿ ಆಸಕ್ತಿಗಳು. ಕವಿ, ಕತೆಗಾರ, ವಿಮರ್ಶಕ. ಗಿಣಿಬಾಗಿಲು, ನಕ್ಷತ್ರ ನೇಯುವ ಹಕ್ಕಿಗಳು, ಮೇಧಾ ಪಾಟ್ಕರ್‌, ಪ್ರಜ್ವಲ ಮಾತು ಉಜ್ವಲ ಬೆಳಕು, ನಿಮ್ಮೊಳಗಿದೆ ಸಕ್ಸಸ್‌ ಇವರ ಕೃತಿಗಳು. ಉತ್ಥಾನ, ಸಂಚಯ, ಸಂಕ್ರಮಣ ಸಾಹಿತ್ಯ ಸ್ಪರ್ಧೆಗಳಲ್ಲಿ ಪುರಸ್ಕಾರ ದೊರೆತಿದೆ. ಅಭಿವೃದ್ದಿ ಪತ್ರಿಕೋದ್ಯಮ ಮತ್ತು ಅಂಕಣ ಬರಹ ಜೀವದ್ರವ್ಯ.

Articles
Music Mailari: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಯುಟ್ಯೂಬ್‌ ಸ್ಟಾರ್‌ ಮ್ಯೂಸಿಕ್‌ ಮೈಲಾರಿ ಮೇಲೆ ಕೇಸ್

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ, ಯುಟ್ಯೂಬ್‌ ಸ್ಟಾರ್‌ ಮೈಲಾರಿ ಮೇಲೆ ಕೇಸ್

ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡಲು ಮ್ಯೂಸಿಕ್ ಮೈಲಾರಿ ಆಗಮಿಸಿದ್ದ. ಇದೇ ಆರ್ಕೆಸ್ಟ್ರಾದಲ್ಲಿ ಅಪ್ರಾಪ್ತ ಬಾಲಕಿ ಡ್ಯಾನ್ಸ್ ಮಾಡಲು ಬಂದಿದ್ದಳು ಎನ್ನಲಾಗಿದೆ. ಕಾರ್ಯಕ್ರಮದ ವೇಳೆ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ.

Monkey Disease: ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಆತಂಕ, 8 ಜನರಲ್ಲಿ ಕೆಎಫ್‌ಡಿ ವೈರಸ್

ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಆತಂಕ, 8 ಜನರಲ್ಲಿ ಕೆಎಫ್‌ಡಿ ವೈರಸ್

ಸಾಮಾನ್ಯವಾಗಿ ಈ ಸೋಂಕು (Kyasanur Forest Disease) ಪ್ರತಿ ವರ್ಷ ಬೇಸಿಗೆ ಸಮಯದಲ್ಲಿ ಕಂಡುಬರುತ್ತಿತ್ತು. ಆರೋಗ್ಯ ಇಲಾಖೆ ಇದಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನ ಸಹ ತೆಗೆದುಕೊಳ್ಳುತ್ತಿತ್ತು. ಆದರೆ ಈ ವರ್ಷ ಡಿಸೆಂಬರ್ ತಿಂಗಳಲ್ಲೇ ಈ ಸೋಂಕು ಕಾಣಿಸಿಕೊಂಡಿದೆ. ಮಲೆನಾಡು ಭಾಗದ ಕಾಡಂಚಿನ ಪ್ರದೇಶಗಳ ಗ್ರಾಮಸ್ಥರ ಜೊತೆಗೆ, ಆರೋಗ್ಯ ಇಲಾಖೆಗೂ ಈಗ ದೊಡ್ಡ ಆತಂಕ ಎದುರಾಗಿದೆ.

ಪ್ರಿಯತಮೆಯ ಖಾಸಗಿ ವಿಡಿಯೋ ಗಂಡನಿಗೆ ಕಳಿಸಿದ ಪಾಪಿ, ಪ್ರಿಯಕರನ ಮನೆ ಎದುರೇ ವಿವಾಹಿತೆ ಧರಣಿ

ಪ್ರಿಯತಮೆಯ ಖಾಸಗಿ ವಿಡಿಯೋ ಗಂಡನಿಗೆ ಕಳಿಸಿದ ಪಾಪಿ, ವಿವಾಹಿತೆ ಧರಣಿ

ಅವರಿಬ್ಬರು 4 ವರ್ಷ ಪರಸ್ಪರ ಪ್ರೀತಿಸಿದರೂ ಮದುವೆಯಾಗಲು ಜಾತಿ ಅಡ್ಡ ಬಂದಿತ್ತು. ಕೊನೆಗೆ ಪ್ರಿಯತಮೆ ಮನೆಯವರು ತೋರಿಸಿದ ಯುವಕನನ್ನು ಮದುವೆಯಾಗಿ ಗಂಡನ ಜೊತೆ ಹೋಗಿದ್ದಳು. ಆದರೆ ಮದುವೆಯಾಗಿ 20 ದಿನ ಕಳೆಯುವುದರೊಳಗೆ ಆಕೆಯ ಪ್ರಿಯಕರ ವಿಲನ್‌ ಆಗಿದ್ದು, ತಾವಿಬ್ಬರು ಜೊತೆಯಾಗದ್ದಾಗ ಮಾಡಿಕೊಂಡಿದ್ದ ಖಾಸಗಿ ವಿಡಿಯೋಗಳನ್ನು ಆಕೆಯ ಗಂಡನಿಗೆ ಕಳುಹಿಸಿದ್ದಾನೆ.

ದೆಹಲಿ- ಆಗ್ರಾ ಹೈವೇಯಲ್ಲಿ ಮಂಜಿನಿಂದ ಭೀಕರ ಸರಣಿ ಅಪಘಾತ, ಹೊತ್ತಿ ಉರಿದ ಬಸ್ಸುಗಳು, ಕಾರು, ಹಲವರು ಬಲಿ

ದೆಹಲಿ- ಆಗ್ರಾ ಹೈವೇಯಲ್ಲಿ ಮಂಜಿನಿಂದ ಭೀಕರ ಸರಣಿ ಅಪಘಾತ, ಉರಿದ ಬಸ್ಸುಗಳು

ಮಂಗಳವಾರ ಮುಂಜಾನೆ ದೆಹಲಿ-ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ ಈ ಚಳಿಗಾಲದಲ್ಲಿ ಸಂಭವಿಸಿದ ಅತ್ಯಂತ ಭೀಕರ ಮಂಜಿನ ಅಪಘಾತಗಳಲ್ಲಿ ಇದು ಒಂದಾಗಿದೆ. ಹಲವಾರು ಬಸ್ಗಳು ಮತ್ತು ಕಾರುಗಳು ಪರಸ್ಪರ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡವು. ಹಲವಾರು ಬಸ್‌ಗಳು ಬೆಂಕಿಗೆ ಸಂಪೂರ್ಣ ಆಹುತಿಯಾಗಿವೆ. ಜನನಿಬಿಡ ಪ್ರದೇಶ ಭೀಕರ ಕಾಡ್ಗಿಚ್ಚಿನಂತೆ ಪರಿವರ್ತನೆಯಾಗಿದೆ. ರಕ್ಷಣಾ ತಂಡಗಳು ಬೆಂಕಿ ನಂದಿಸಲು ಹೋರಾಡುತ್ತಿವೆ. ಹಲವಾರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

Delhi smog: ದಟ್ಟ ಹೊಗೆ- ಮಂಜು, ದಿಲ್ಲಿಯಲ್ಲಿ 61 ವಿಮಾನ ಹಾರಾಟ ರದ್ದು, 400 ವಿಮಾನ ವಿಳಂಬ

ದಟ್ಟ ಹೊಗೆ- ಮಂಜು, ದಿಲ್ಲಿಯಲ್ಲಿ 61 ವಿಮಾನ ರದ್ದು, 400 ವಿಮಾನ ವಿಳಂಬ

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ (ಸಿಪಿಸಿಬಿ) ಸಮೀರ್ ಆ್ಯಪ್‌ನ ಅಂಕಿಅಂಶದ ಆಧಾರದ ಮೇಲೆ ಬೆಳಿಗ್ಗೆ 7:05 ಕ್ಕೆ, ರಾಷ್ಟ್ರ ರಾಜಧಾನಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 454 ರ ‘ತೀವ್ರ’ ಮಟ್ಟದಲ್ಲಿ ದಾಖಲಾಗಿದೆ. ಇದು ಭಾನುವಾರದ 461 ಎಕ್ಯೂಐ ಅನ್ನು ಅನುಸರಿಸಿತು, ಇದು ಡಿಸೆಂಬರ್‌ನಲ್ಲಿ ದಾಖಲೆಯ ಎರಡನೇ ಕೆಟ್ಟ ವಾಯು ಗುಣಮಟ್ಟದ ದಿನವಾಗಿದೆ.

President Draupadi Murmu: ಇಂದು ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಗಮನ

ಇಂದು ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಗಮನ

ಸುತ್ತೂರು ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತ್ಯುತ್ಸವಕ್ಕೆ ಇಂದು ರಾಷ್ಟ್ರಪತಿ ಅವರು ಆಗಮಿಸುತ್ತಿದ್ದು, ಅದ್ಧೂರಿಯಾಗಿ ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಂಗಳವಾರ ಮಧ್ಯಾಹ್ನ 3.15ಕ್ಕೆ ಮುರ್ಮು ಅವರು ಜಯಂತಿ ಮಹೋತ್ಸವ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋತ್ ವಹಿಸುವರು. ಸ್ಮರಣ ಸಂಚಿಕೆಯನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಿಡುಗಡೆಗೊಳಿಸುವರು.

Bengaluru Crime News: ಪಾರ್ಟಿಗೆ ದಾಳಿ ಮಾಡಿ ಹಣ ಕೇಳಿದ ಪೊಲೀಸರು, ಬಾಲ್ಕನಿಯಿಂದ ಜಿಗಿದ ಯುವತಿ ಗಂಭೀರ

ಪಾರ್ಟಿ ವೇಳೆ ಲಂಚ ಕೇಳಿದ ಪೊಲೀಸರು, ಬಾಲ್ಕನಿಯಿಂದ ಜಿಗಿದ ಯುವತಿ ಗಂಭೀರ

ಪಾರ್ಟಿಯ ವೇಳೆ ಪೊಲೀಸರು ಬಂದ ವಿಚಾರ ತಿಳಿದ ಯುವತಿ ವೈಷ್ಣವಿ ಭಯದಿಂದ ಬಾಲ್ಕನಿಗೆ ತೆರಳಿ, ಅಲ್ಲಿಂದ ಹಾರಿದ್ದಾಳೆ ಎಂದು ಹೇಳಲಾಗಿದೆ. ಕೆಳಗೆ ಬಿದ್ದ ವೇಳೆ ಕಬ್ಬಿಣದ ಗ್ರಿಲ್‌ಗೆ ತಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಪಾರ್ಟಿ ನಡೆಸುತ್ತಿದ್ದ ಯುವಕರ ಬಳಿ ಪೊಲೀಸರು ಹಣ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ದಾವಣಗೆರೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಬೆಳವಣಿಗೆಗೆ ಶಾಮನೂರು ಕಾರಣ: ಸದನದಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪ

ದಾವಣಗೆರೆಯ ಆರ್ಥಿಕ, ಶೈಕ್ಷಣಿಕ ಬೆಳವಣಿಗೆಗೆ ಶಾಮನೂರು ಕಾರಣ: ಸದನದಲ್ಲಿ ಸಿಎಂ

ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಕೇಂದ್ರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಕಾಶಿಯಾಗಿಸಿದರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಜವಳಿ ಕ್ಷೇತ್ರದ ಅವನತಿ ಪ್ರಾರಂಭವಾದಾಗ ದಾವಣಗೆರೆಗೆ ಒಂದು ಬ್ರಾಂಡ್ ಹೆಸರನ್ನು ಶಾಮನೂರರು (Shamanuru Shivashankarappa) ತಂದುಕೊಟ್ಟರು ಎಂದು ಸಿಎಂ ನೆನೆದುಕೊಂಡಿದ್ದಾರೆ.

Shamanuru Shivashankarappa: ಪತ್ನಿಯ ಸಮಾಧಿ ಬಳಿಯೇ ಶಾಮನೂರು ಅಂತ್ಯಕ್ರಿಯೆ ಸಿದ್ಧತೆ, ಶಾಲೆ- ಕಾಲೇಜುಗಳಿಗೆ ರಜೆ

ಪತ್ನಿ ಸಮಾಧಿ ಬಳಿಯೇ ಶಾಮನೂರು ಅಂತ್ಯಕ್ರಿಯೆ ಸಿದ್ಧತೆ, ಶಾಲೆ- ಕಾಲೇಜಿಗೆ ರಜೆ

ಆನೆಕೊಂಡದ ಶಾಮನೂರ ಮನೆತನದ ಕಲ್ಲೇಶ್ವರ ರೈಸ್ ಮಿಲ್ ಜಾಗಕ್ಕೆ ಕರೆತಂದು, ಸಂಜೆ 5:30 ಸೂರ್ಯ ಮುಳುಗುವುದರ ಒಳಗಾಗಿ, ವೀರಶೈವ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಅವರ ಪತ್ನಿಯ ಸಮಾಧಿ ಪಕ್ಕವೇ ಶಾಮನೂರು ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ. ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

Delhi Smog: ದೆಹಲಿಯಲ್ಲಿ ದಟ್ಟ ಮಂಜು, ಇಂಡಿಗೋ ವಿಮಾನದಲ್ಲಿ ರಾಜ್ಯದ 21 ಶಾಸಕರು‌ ಬಾಕಿ

ದೆಹಲಿಯಲ್ಲಿ ದಟ್ಟ ಮಂಜು, ಇಂಡಿಗೋ ವಿಮಾನದಲ್ಲಿ ರಾಜ್ಯದ 21 ಶಾಸಕರು‌ ಬಾಕಿ

ಭಾನುವಾರ ಆಯೋಜನೆಗೊಂಡಿದ್ದ ವೋಟ್‌ ಚೋರಿ ಸಮಾವೇಶಕ್ಕೆ ಮಂತ್ರಿಗಳು, ಕಾಂಗ್ರೆಸ್ ಶಾಸಕರು ದೆಹಲಿಗೆ ಆಗಮಿಸಿದ್ದರು. ಇಂದು ದಾವಣಗೆರೆಯಲ್ಲಿ ನಡೆಯಲಿರುವ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ದೆಹಲಿಯಿಂದ (Delhi smog) ಬೆಳಗಾವಿಗೆ ಹೋಗುವ ವಿಮಾನ ಏರಿದ್ದರು.

Karnataka Weather: ತೀವ್ರವಾದ ಚಳಿ, ಉತ್ತರ ಕರ್ನಾಟಕದಲ್ಲಿ ಆರೆಂಜ್‌ ಅಲರ್ಟ್

ತೀವ್ರವಾದ ಚಳಿ, ಉತ್ತರ ಕರ್ನಾಟಕದಲ್ಲಿ ಆರೆಂಜ್‌ ಅಲರ್ಟ್

ಮುಂದಿನ ಎರಡು ದಿನಗಳಲ್ಲಿ ಇನ್ನೂ ಹೆಚ್ಚಿನ ಚಳಿ (Karnataka Weather) ಹಾಗೂ ಶೀತಗಾಳಿ ಇರಲಿದೆ. ಇದು ವಯಸ್ಸಾದವರ ಮೇಲೆ ತೀವ್ರ ಪರಿಣಾಮ ಬೀರಲಿದೆ. ಇದರ ಜೊತೆಗೆ ಬೆಳೆ ವೈಪರಿತ್ಯವೂ ಉಂಟಾಗಲಿದೆ ಎಂದ ಹವಾಮಾನ ಇಲಾಖೆ ತಿಳಿಸಿದೆ. ಈ ಶೀತಗಾಳಿಯಿಂದ ಮನುಷ್ಯರು ತಮ್ಮನ್ನು ರಕ್ಷಿಸಿಕೊಳ್ಳಬೇಕು. ಬೆಚ್ಚಗಿನ ನೀರು, ಆಹಾರವನ್ನೇ ಸೇವಿಸಬೇಕು. ಇದರ ಜೊತೆಗೆ ಬೆಳೆಗಳನ್ನು ಸಂರಕ್ಷಿಸಲು ಹವಾಮಾನ ತಜ್ಞರು ಕೆಲವೊಂದಿಷ್ಟು ಸೂಚನೆಗಳನ್ನು ನೀಡಿದ್ದಾರೆ.

Karnataka Weather: ಬೆಂಗಳೂರಿನಲ್ಲಿ ಮೈ ಕೊರೆಯುವ ಚಳಿ, 10 ವರ್ಷದಲ್ಲಿ ಕನಿಷ್ಠ ತಾಪಮಾನ ದಾಖಲು

ಬೆಂಗಳೂರಿನಲ್ಲಿ ಮೈ ಕೊರೆಯುವ ಚಳಿ, 10 ವರ್ಷದಲ್ಲಿ ಕನಿಷ್ಠ ತಾಪಮಾನ

Karnataka Weather: ಡಿಸೆಂಬರ್‌ನಲ್ಲಿ 12 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತದೆ ಅಂತ ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. 2016ರಲ್ಲಿ ಕನಿಷ್ಠ ತಾಪಮಾನ ದಾಖಲಾಗಿತ್ತು. ಈ ದಾಖಲೆಯ ಚಳಿ ಮತ್ತೆ ಡಿಸೆಂಬರ್‌ನಲ್ಲಿ ದಾಖಲಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳಲ್ಲಿ ಇನ್ನೂ ಹೆಚ್ಚಿನ ಚಳಿ ಹಾಗೂ ಶೀತಗಾಳಿ ಇರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Good news: ಕ್ರಿಸ್ಮಸ್, ಹೊಸ ವರ್ಷದ ಹಿನ್ನೆಲೆಯಲ್ಲಿ ವಿಶೇಷ ರೈಲುಗಳ ಸಂಚಾರ

ಕ್ರಿಸ್ಮಸ್, ಹೊಸ ವರ್ಷದ ಹಿನ್ನೆಲೆಯಲ್ಲಿ ವಿಶೇಷ ರೈಲುಗಳ ಸಂಚಾರ

ಕ್ರಿಸ್ಮಸ್​​ ಹಾಗೂ ಹೊಸ ವರ್ಷದ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಈ ವ್ಯವಸ್ಥೆ ಕಲ್ಪಿಸಿದೆ. ರೈಲು ಸಂಖ್ಯೆ 07379 ಮಧ್ಯಾಹ್ನ 12ಕ್ಕೆ ಹುಬ್ಬಳ್ಳಿಯಿಂದ ಹೊರಟು ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ಮೂಲಕ ರಾತ್ರಿ 8.30ಕ್ಕೆ ಯಶವಂತಪುರ ತಲುಪಲಿದೆ.

Shamanur Shivashankarappa: ಇಂದು ಸಂಜೆಯವರೆಗೆ ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ, ದಾವಣಗೆರೆಯಲ್ಲೇ ಅಂತ್ಯಕ್ರಿಯೆ,

ಇಂದು ಸಂಜೆಯವರೆಗೆ ಶಾಮನೂರು ಅಂತಿಮ ದರ್ಶನ, ದಾವಣಗೆರೆಯಲ್ಲೇ ಅಂತ್ಯಕ್ರಿಯೆ

ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆ ವರೆಗೆ ಶಾಮನೂರು ಪುತ್ರ ಎಸ್‌.ಎಸ್‌ ಮಲ್ಲಿಕಾರ್ಜುನ ಅವರ ಮನೆಯಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಂತರ ಹೈಸ್ಕೂಲ್ ಮೈದಾನದಲ್ಲಿ ಸಂಜೆ 4 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನಿನ್ನೆ ಅಖಿಲ ಭಾರತ ವೀರಶೈವ ಮಹಾಸಭಾ (Veerashaiva Mahasabha) ಕಟ್ಟಿದ್ದ ಶಿವಶಂಕರಪ್ಪನವರಿಗೆ ಮಹಾಸಭಾದಿಂದ ಅಂತಿಮ ನಮನ ಸಲ್ಲಿಸಲಾಗಿದೆ.

DK Shivakumar: ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲು ಆಗುತ್ತದೆಯೇ? ಡಿನ್ನರ್‌ ಮೀಟ್‌ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್

ಊಟಕ್ಕೆ ಕರೆದರೆ ಇಲ್ಲ ಅನ್ನೋಕಾಗುತ್ತಾ: ಡಿನ್ನರ್‌ ಮೀಟ್‌ ಬಗ್ಗೆ ಡಿಸಿಎಂ

ಬೆಳಗಾವಿ ಹೊರವಲಯದಲ್ಲಿ ನಿನ್ನೆ ರಾತ್ರಿ ಶಾಸಕರ ಜತೆ ಔತಣಕೂಟ ಮಾಡಿದ ಕುರಿತು ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಅವರನ್ನು ಪತ್ರಕರ್ತರು ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ʼಅವರು ಪ್ರೀತಿಯಿಂದ ಹೇಳಿದಾಗ, ಕರೆದಾಗ ಬೇಡ ಎನ್ನಲು ಆಗುತ್ತದೆಯೇ? ನಾಳಿದ್ದು ನಮ್ಮ ಆಸೀಫ್ ಸೇಠ್, ಫಿರೋಜ್ ಸೇಠ್ ಅವರು ಊಟಕ್ಕೆ ಕರೆದಿದ್ದಾರೆʼ ಎಂದಿದ್ದಾರೆ.

Shivraj Patil Death: ಮುಂಬಯಿ ದಾಳಿ, ಕೋಟು ಮತ್ತು ಶಿವರಾಜ್‌ ಪಾಟೀಲ್‌ ರಾಜೀನಾಮೆ!

ಮುಂಬಯಿ ದಾಳಿ, ಕೋಟು ಮತ್ತು ಶಿವರಾಜ್‌ ಪಾಟೀಲ್‌ ರಾಜೀನಾಮೆ!

2008ರ ಮುಂಬೈ ಭಯೋತ್ಪಾದಕ ದಾಳಿ ನಡೆದಾಗ ಶಿವರಜ್‌ ಪಾಟೀಲ್‌ (Shivraj Patil Death) ಅವರು ಗೃಹ ಸಚಿವರಾಗಿದ್ದರು. ಮುಂಬೈ ದಾಳಿಯ ನಂತರ ಅವರು ಪಕ್ಷದ ಒಳಗಿನಿಂದ ಹಾಗೂ ಸಾರ್ವನಿಕವಾಗಿ ಒತ್ತಡ ಬಂದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಬೇಕಾಯಿತು. ದಾಳಿಯ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ನಡೆಸುತ್ತಿದ್ದ ಶಿವರಾಜ್‌ ಪಾಟೀಲ್‌, ದಿನಕ್ಕೆ ಮೂರು ಬಾರಿ ಕೋಟ್‌ ಬದಲಿಸಿಕೊಂಡು ಬಂದರು ಎಂದು ವಿಪಕ್ಷಗಳ ಟೀಕೆಗೆ ಗುರಿಯಾಗಿದ್ದರು.

Road Accident: ಮಾಜಿ ಸಚಿವ ಹೆಚ್‌ಎಂ ರೇವಣ್ಣ ಪುತ್ರನ ಕಾರು ಡಿಕ್ಕಿ, ಬೈಕ್‌ ಸವಾರ ಸಾವು

ಮಾಜಿ ಸಚಿವ ಹೆಚ್‌ಎಂ ರೇವಣ್ಣ ಪುತ್ರನ ಕಾರು ಡಿಕ್ಕಿ, ಬೈಕ್‌ ಸವಾರ ಸಾವು

HM Revanna Son: ಸಚಿವ ಹೆಚ್ಎಂ ರೇವಣ್ಣ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ್ದು, ನನ್ನ ಮಗನ ಕಾರು ಅಪಘಾತ ಆಗಿರುವುದು ನಿಜ. ಕಾರು ಓಡಿಸುತ್ತಿದ್ದದ್ದು ನನ್ನ ಮಗ ಅಲ್ಲ, ಡ್ರೈವರ್. ಓವರ್ಟೇಕ್ ಮಾಡುವಾಗ ಈ ಅಪಘಾತ ಆಗಿದೆ. ಮೃತ ಯುವಕನ ಕುಟುಂಬಸ್ಥರು ನನಗೆ ಪರಿಚಯ, ಕುಟುಂಬದವರ ಜೊತೆಗೆ ನಾನು ಮಾತನಾಡುತ್ತೇನೆ ಎಂದಿದ್ದಾರೆ.

Karnataka Politics: 40 ಆಪ್ತ ಶಾಸಕರ ಜೊತೆ ಡಿಕೆ ಶಿವಕುಮಾರ್‌ ಡಿನ್ನರ್‌ ಮೀಟಿಂಗ್, ಏನೇನು ಚರ್ಚೆ?

40 ಆಪ್ತ ಶಾಸಕರ ಜೊತೆ ಡಿಕೆ ಶಿವಕುಮಾರ್‌ ಡಿನ್ನರ್‌ ಮೀಟಿಂಗ್, ಏನೇನು ಚರ್ಚೆ?

ಬುಧವಾರ ರಾತ್ರಿ ಮಾಜಿ ಶಾಸಕ ಫಿರೋಜ್ ಸೇಠ್ ಅವರ ನಿವಾಸದಲ್ಲಿ ನಡೆದ ಭೋಜನ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (CM Siddaramiah) ಆಪ್ತ ವಲಯದ ಸಚಿವರು ಮತ್ತು ಶಾಸಕರು ಭಾಗವಹಿಸಿದ್ದರು. ಆದರೆ, ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಹಾಗೂ ಅವರ ಬಣದ ಯಾವೊಬ್ಬ ಶಾಸಕರೂ ಭಾಗವಹಿಸಿರಲಿಲ್ಲ. ಇದೀಗ ಡಿಸಿಎಂ ಬಣ ಪ್ರತ್ಯೇಕ ಡಿನ್ನರ್ ಮೀಟಿಂಗ್ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

Bengaluru Weather: ಈ ಚಳಿಗಾಲದಲ್ಲಿ ಬೆಂಗಳೂರು ಗಡಗಡ! 10 ವರ್ಷದ ನಂತರ ಕನಿಷ್ಠ ತಾಪಮಾನ! ಏನಿದರ ಕಾರಣ?

ಈ ಚಳಿಗಾಲದಲ್ಲಿ ಬೆಂಗಳೂರು ಗಡಗಡ! 10 ವರ್ಷದ ನಂತರ ಕನಿಷ್ಠ ತಾಪಮಾನ!

ಕಳೆದ ವಾರದಿಂದ ಸುಮಾರು 16 ಡಿಗ್ರಿ ಸೆಲ್ಸಿಯಸ್‌ನಲ್ಲಿದ್ದ ಬೆಂಗಳೂರಿನಲ್ಲಿ ಮುಂದಿನ ವಾರದ ವೇಳೆಗೆ ಕನಿಷ್ಠ ತಾಪಮಾನ (bengaluru weather) ಸುಮಾರು 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಬಹುದು. ತಾಪಮಾನ 12 ಡಿಗ್ರಿಗೆ ಇಳಿದರೆ, 2016ರ ನಂತರ ಬೆಂಗಳೂರು ಕಂಡ ಅತೀ ಶೀತಲ ಡಿಸೆಂಬರ್‌ ಎನಿಸಲಿದೆ. ಮಂಜಿನೊಂದಿಗೆ ನಗರದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನವಿರುತ್ತದೆ ಎಂದು ಹವಾಮಾನ ಇಲಾಖೆ ಹೇಳುತ್ತದೆ.

Namma Metro Pink Line: ನಮ್ಮ ಮೆಟ್ರೋ ಗುಡ್‌ ನ್ಯೂಸ್‌, ಗುಲಾಬಿ ಮಾರ್ಗದಲ್ಲಿ ಮೊದಲ ಚಾಲಕರಹಿತ ರೈಲು ಅನಾವರಣ

ನಮ್ಮ ಮೆಟ್ರೋ ಗುಡ್‌ ನ್ಯೂಸ್‌, ಗುಲಾಬಿ ಮಾರ್ಗದಲ್ಲಿ ಮೊದಲ ಚಾಲಕರಹಿತ ರೈಲು

ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ ಸುಮಾರು ‌21.25 ಕಿಮೀ ಸಂಪರ್ಕಿಸುವ ಗುಲಾಬಿ ಮಾರ್ಗ (Namma Metro Pink Line) 2026ರ ಡಿಸೆಂಬರ್ ಅಥವಾ 2027 ರಲ್ಲಿ ಕಾರ್ಯಾರಂಭವಾಗುವ ನಿರೀಕ್ಷೆಯಿದೆ. ಈ ಭಾಗದಲ್ಲಿ ಮೊದಲ ಹಂತವಾಗಿ ಐದು ಹೊಸ ʻಚಾಲಕರಹಿತʼ ರೈಲುಗಳನ್ನ ಓಡಿಸಲು ಸಿದ್ಧತೆ ನಡೆಯುತ್ತಿದೆ. ಇದರ ಅಂಗವಾಗಿ ಇಂದು ಹೊಸ ರೈಲು ಮಾದರಿಯನ್ನ ಅನಾವರಣಗೊಳಿಸಿದೆ.

Cabinet meeting: ಒಳಮೀಸಲು ಬಡ್ತಿ ಜಾರಿ, ಚಿನ್ನಸ್ವಾಮಿಯಲ್ಲಿ ಕ್ರಿಕೆಟ್: ಕ್ಯಾಬಿನೆಟ್‌ ಸಭೆ ನಿರ್ಣಯಗಳು‌

ಒಳಮೀಸಲು ಬಡ್ತಿ, ಚಿನ್ನಸ್ವಾಮಿಯಲ್ಲಿ ಕ್ರಿಕೆಟ್: ಕ್ಯಾಬಿನೆಟ್‌ ನಿರ್ಣಯಗಳು

ನಿನ್ನೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವ ಸಂಪುಟ ಸಭೆ (Cabinet meeting) ನಡೆದಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶರತ್ತುಗಳೊಂದಿಗೆ ಕ್ರಿಕೆಟ್‌ ಆಡಿಸಲು ಅವಕಾಶ, ಒಳಮೀಸಲು ಮೊದಲಿದ್ದಂತೆ ಜಾರಿ, ಹೊಸ ವಾಹನ ಖರೀದಿದಾರರಿಗೆ ಕಾರಿನ ಬೆಲೆ ಆಧರಿಸಿ ಶೇಕಡವಾರು ಸೆಸ್ ಜಾರಿ,ಸಿಲ್ಕ್ ರಸ್ತೆ ಜಂಕ್ಷನ್‌ನಿಂದ ಕೆ.ಆರ್ ಪುರದವರೆಗೆ 307 ಕೋಟಿ ರೂ ವೆಚ್ಚದಲ್ಲಿ ನೂತನ ವಿನ್ಯಾಸದ ರಸ್ತೆ ಇತ್ಯಾದಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

Prajwal Revanna Case: ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು ಶಾಕ್

ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು ಶಾಕ್

ತಮ್ಮ ವಿರುದ್ಧ ಬಾಕಿ ಇರುವ ಇನ್ನೂ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು 81ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿಂದ ಬೇರೆ ಕೋರ್ಟ್ ಗೆ ವರ್ಗಾಯಿಸಬೇಕೆಂದು ಕೋರಿ ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್​​ ವಜಾಗೊಳಿಸಿತ್ತು. ಹೀಗಾಗಿ ಪ್ರಜ್ವಲ್ ಸುಪ್ರೀಂಕೋರ್ಟ್​​​ ಮೊರೆ ಹೋಗಿದ್ದು, ಅಲ್ಲೂ ಸಹ ಹಿನ್ನಡೆಯಾಗಿದೆ.

Yatindra Siddaramaiah: ಕಾಂಗ್ರೆಸ್‌ ನಾಯಕತ್ವ ಕುರಿತು ಮತ್ತೆ ಯತೀಂದ್ರ ಹೇಳಿಕೆ; ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು!

ನಾಯಕತ್ವ ಕುರಿತು ಮತ್ತೆ ಯತೀಂದ್ರ ಹೇಳಿಕೆ; ಡಿಕೆಶಿ ಪ್ರತಿಕ್ರಿಯೆ ಹೀಗಿತ್ತು!

ಬೆಳಗಾವಿಯಲ್ಲಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಹಿನ್ನೆಲೆಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ (Yatindra Siddaramaiah), 'ರಾಜ್ಯದಲ್ಲಿ ನಾಯಕತ್ವದ ವಿಚಾರದಲ್ಲಿ ಯಾವುದೇ ಜಗಳ ಇಲ್ಲ. ಸಿಎಂ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ' ಎಂದು ಘೋಷಿದರು.

Janaushadhi Kendra: ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಧಾನಮಂತ್ರಿ ಜನೌಷಧಿ ಕೇಂದ್ರ (Janaushadhi Kendra) ಮುಚ್ಚುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ರಾಕೇಶ್ ಮಹಾಲಿಂಗಪ್ಪ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ, ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ನಿರ್ದೇಶಿಸಿ ಮೇ 14 ರಂದು ಹೊರಡಿಸಲಾದ ಆದೇಶವನ್ನು ರದ್ದುಗೊಳಿಸಿ ಆದೇಶ ಆದೇಶಿಸಿದ್ದಾರೆ.

Loading...