ಹಠಕ್ಕೆ ಬಿದ್ದು ಕಂಬಳ ನಡೆಸುವುದರ ಉದ್ದೇಶವೇನು ?
ವಿಶ್ವಪ್ರಸಿದ್ಧ ಮೈಸೂರು ದಸರಾದಲ್ಲಿ ಕರಾವಳಿ ಭಾಗದ ಜಾನಪದ ಕ್ರೀಡೆ ಕಂಬಳದ ಆಯೋಜನೆಗೆ ತೀರ್ಮಾನ ಮಾಡಿರುವುದು ಪರ/ವಿರೋಧ ಚರ್ಚೆಗೆ ಗ್ರಾಸವಾಗಿದೆ. ಮೈಸೂರು ಸಂಸದ ಯದು ವೀರ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಕೆಲ ಸಾಂಸ್ಕೃತಿಕ ಸಂಘಟನೆಗಳು, ರೈತ ಮುಖಂಡರು ಕಂಬಳದ ಆಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದರೆ, ದಕ್ಷಿಣ ಕನ್ನಡದ ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ರೈ ಒತ್ತಾಯದ ಮೇರೆಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಕಂಬಳ ನಡೆಸುವ ನಿರ್ಧಾರ ಮಾಡಿದ್ದಾರೆ.