ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

Lokesh Kaayarga

Kaayarga@gmail.com

ಲೋಕೇಶ್ ಕಾಯರ್ಗ ವಿಶ್ವವಾಣಿ ಪತ್ರಿಕೆ ಮತ್ತು ಲೋಕಧ್ವನಿ ಪತ್ರಿಕೆಯ ಕಾರ್ಯ ನಿರ್ವಾಹಕ ಸಂಪಾದಕರು. ಪತ್ರಕರ್ತನಾಗಿ ತಳಸ್ಪರ್ಶಿ ಅಧ್ಯಯನ, ವೃತ್ತಿಪರತೆ ಮತ್ತು ಜನಪರ ಕಾಳಜಿಯ ಅಂಕಣ ಬರಹಗಳಿಂದ ಮೆಚ್ಚುಗೆ ಪಡೆದವರು. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರ. ಕಳೆದ 32 ವರ್ಷಗಳಲ್ಲಿ ರಾಜ್ಯದ ನಾನಾ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿದ್ದು, ಆಯಾ ಪತ್ರಿಕೆಗಳ ಸುದ್ದಿ ಮನೆಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪತ್ರಿಕೆಯ ಮೂಲಕ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಸಂಘಟಿಸಿ ಗಮನ ಸೆಳೆದಿದ್ದಾರೆ

Articles
Lokesh Kaayarga Column: ಹೆತ್ತವರನ್ನು ಹೊರಗಟ್ಟಿ ಗಂಗೆಯಲ್ಲಿ ಮಿಂದರೇನು ಫಲ ?

ಹೆತ್ತವರನ್ನು ಹೊರಗಟ್ಟಿ ಗಂಗೆಯಲ್ಲಿ ಮಿಂದರೇನು ಫಲ ?

ಬದಲಾದ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಕಾಲ ಘಟ್ಟದಲ್ಲಿ ಅತ್ಯಂತ ಹೆಚ್ಚು ಶಿಥಿಲ ವಾಗಿರುವುದು ನಮ್ಮ ಕುಟುಂಬ ವ್ಯವಸ್ಥೆ. ಈ ಕುಟುಂಬ ವ್ಯವಸ್ಥೆಯನ್ನು ಪರಸ್ಪರ ಪ್ರೀತಿ, ವಿಶ್ವಾಸ, ಕಾಳಜಿ, ಗೌರವಗಳಿಂದಷ್ಟೇ ಬಲಪಡಿಸಲು ಸಾಧ್ಯ. ಸಹಾಯವಾಣಿ, ದೂರಿನ ವ್ಯವಸ್ಥೆ, ಕಾನೂನುಗಳು ಹಿರಿಯ ನಾಗರಿಕರಿಗೆ ತಾತ್ಕಾಲಿಕ ಉರುಗೋಲುಗಳಾಗಬಹುದೇ ವಿನಾ ಮನಸ್ಸಿಗೆ ನೆಮ್ಮದಿ, ಸಾಂತ್ವನ ನೀಡಲಾರದು. ಮಕ್ಕಳಿಗೆ ಎಳೆಯ ವಯಸ್ಸಿನಲ್ಲಿಯೇ ಪ್ರೀತಿ, ವಿಶ್ವಾಸದ ಒರತೆ ತುಂಬಿ ಮಾನವೀಯ ಮೌಲ್ಯಗಳು ಬತ್ತಿ ಹೋಗದಂತೆ ನೋಡಿಕೊಳ್ಳಬೇಕಿದೆ. ಹೆತ್ತವರ ಕೈಯಲ್ಲಿ ಆಸ್ತಿ ಬರೆಸಿಕೊಂಡು, ಹೊರ ತಳ್ಳುವ ಮಕ್ಕಳ ಸಂತಾನ ಹೆಚ್ಚಾಗದಿರಲೆಂದು ಪ್ರಾರ್ಥಿಸಬೇಕಿದೆ.

Lokesh Kaayarga Column: ಮತ್ತದೇ ಬೊಫೋರ್ಸ್‌ ಫಿರಂಗಿ ಸದ್ದು !

ಮತ್ತದೇ ಬೊಫೋರ್ಸ್‌ ಫಿರಂಗಿ ಸದ್ದು !

ಅಮೆರಿಕದ ಖಾಸಗಿ ಗೂಢಚರ, ಫೇರ್ ಫಾಕ್ಸ್ ಗ್ರೂಪ್‌ನ ಮುಖ್ಯಸ್ಥ ಮೈಕೆಲ್ ಹೆರ್ಷ್‌ಮನ್ ಬೊಫೋರ್ಸ್ ಹಗರಣ ಸಂಬಂಧ 2017ರಲ್ಲಿ ನೀಡಿದ ಹೇಳಿಕೆ ಆಧರಿಸಿ, ಹೆಚ್ಚಿನ ಮಾಹಿತಿ ಕೋರಿ ಸಿಬಿಐ ಅಮೆರಿಕದ ಮುಂದೆ ನ್ಯಾಯಾಂಗ ಕೋರಿಕೆ ಮಂಡಿಸಲು ಮುಂದಾಗಿದೆ. ಹಗರಣದ ಬಗ್ಗೆ ಮತ್ತೊಮ್ಮೆ ತನಿಖೆ‌ ನಡೆಸುವ ಸಿಬಿಐ ಮನವಿಯನ್ನು ಸುಪ್ರೀಂ ಕೋರ್ಟ್ ಈ ಹಿಂದೆಯೇ ತಿರಸ್ಕರಿಸಿದೆ. ಆದರೆ 37 ವರ್ಷಗಳ ಬಳಿಕ ಈ ಹಗರಣಕ್ಕೆ ಮತ್ತೊಮ್ಮೆ ಜೀವ ತುಂಬುವ ಪ್ರಯತ್ನ ನಡೆದಿದೆ.

Lokesh kaayarga Column: ಕೊಬ್ಬಿನ ಸಮಸ್ಯೆ ಕೊಬ್ಬಿದ ನಮ್ಮ ವ್ಯವಸ್ಥೆಯಲ್ಲಿದೆ !

ಕೊಬ್ಬಿನ ಸಮಸ್ಯೆ ಕೊಬ್ಬಿದ ನಮ್ಮ ವ್ಯವಸ್ಥೆಯಲ್ಲಿದೆ !

ಭಾರತೀಯರು ಪ್ರತಿ ತಿಂಗಳು ಶೇ.10ರಷ್ಟು ಕಡಿಮೆ ಅಡುಗೆ ಎಣ್ಣೆಯನ್ನು ಬಳಸಬೇಕೆಂದು ಪ್ರಧಾನಿ ಕರೆ ನೀಡಿದ್ದಾರೆ. ಈ ಸಂಬಂಧ ಜಾಗೃತಿ ಮೂಡಿಸಲು ಇನ್ಫೋಸಿಸ್ ಸಹ-ಸಂಸ್ಥಾ ಪಕ ನಂದನ್ ನಿಲೇಕಣಿ, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ, ಸಂಸದೆ ಸುಧಾಮೂರ್ತಿ ಸೇರಿದಂತೆ ನಾನಾ ಕ್ಷೇತ್ರಗಳ ಗಣ್ಯರ ತಂಡವೊಂದನ್ನು ಪ್ರಧಾನಿ ಹೆಸರಿಸಿದ್ದಾರೆ