ಎಸ್ಐಆರ್ ಅಕ್ರಮಗಳ ತನಿಖೆಗೆ ಆದೇಶಿಸಿ: ರಾಜ್ಯ ಬಿಜೆಪಿ ದೂರು
ಹಲವಾರು ಸ್ಥಳಗಳಲ್ಲಿ SIR ಪ್ರಕ್ರಿಯೆಯನ್ನು ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ನಡೆಸುತ್ತಿಲ್ಲ ಎಂಬುದು ಕಂಡುಬಂದಿದೆ. ಕೆಲವು ಸಂದರ್ಭಗಳಲ್ಲಿ, ಈ ಪ್ರಕ್ರಿಯೆಯನ್ನು ನಿಗದಿತ ಅಧಿಕೃತ ಸ್ಥಳಗಳ ಬದಲಾಗಿ ಮಸೀದಿಗಳು, ಸಮುದಾಯ ಕೇಂದ್ರಗಳು, ಕಲ್ಯಾಣ ಮಂಟಪಗಳು ಹಾಗೂ ಶಾಸಕರಕಚೇರಿಗಳು ಮತ್ತು ನಿವಾಸಗಳಲ್ಲಿ ನಡೆಸಲಾಗುತ್ತಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗವನ್ನು ಬಿಜೆಪಿ ಒತ್ತಾಯಿಸಿದೆ.