ಬಳ್ಳಾರಿ ಗಲಭೆ ಪ್ರಕರಣದ 25 ಆರೋಪಿಗಳಿಗೆ ಜಾಮೀನು ನೀಡಿದ ಕೋರ್ಟ್
ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಪುತ್ಥಳಿ ಉದ್ಘಾಟನಾ ಬ್ಯಾನರ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಆಗಿತ್ತು. ಈ ವೇಳೆ ಖಾಸಗಿ ಗನ್ ಮ್ಯಾನ್ ಹಾರಿಸಿದ ಗುಂಡು ತಗುಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಬಂಧನವಾಗಿದ್ದ 25 ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ.