ಕಂಪನಿ ಕಾರ್ಯದರ್ಶಿಗಳ ಶಾಖೆ ಅಧ್ಯಕ್ಷರಾಗಿ ವಿಶ್ವಾಸ ಶಂಕರ ಹೆಗಡೆ ಆಯ್ಕೆ
ವಿಶ್ವಾಸ ಶಂಕರ ಹೆಗಡೆ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಗಡೆ ಗ್ರಾಮದ ನಿವಾಸಿಯಾಗಿದ್ದಾರೆ. 2015ರಲ್ಲಿ ಕಂಪನಿ ಕಾರ್ಯದರ್ಶಿಯಾಗಿ ಅರ್ಹತೆ ಪಡೆದಿದ್ದಾರೆ. ಸುಮಾರು ಹತ್ತು ವರ್ಷಗಳಿಗಿಂತ ಹೆಚ್ಚಿನ ವೃತ್ತಿಪರ ಅನುಭವ ಹೊಂದಿರುವ ಅವರು, ಪ್ರಸ್ತುತ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದಲ್ಲಿ (ಬಿಐಎಎಲ್) ಡೆಪ್ಯುಟಿ ಕಂಪನಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.