2028ರಲ್ಲಿ ವಿಧಾನಸೌಧ ಪ್ರವೇಶ ಮಾಡುತ್ತೇನೆ: ಪ್ರತಾಪ್ ಸಿಂಹ
ಮೈಸೂರು ಕ್ಷೇತ್ರದಲ್ಲಿ ಬಿಜೆಪಿ ಎಂಪಿ ಟಿಕೆಟ್ ಕೈತಪ್ಪಿದಾದ ಕಾಂಗ್ರೆಸ್ ಶಾಸಕರು ತಮ್ಮ ಪಕ್ಷಕ್ಕೆ ಬರುವಂತೆ ಬೆನ್ನುಬಿದ್ದಿದ್ದರು. ನನಗಾಗಿ ಕಾಂಗ್ರೆಸ್ ಟಿಕೆಟ್ ಅನ್ನು ತಡೆಹಿಡಿದಿದ್ದರು. ಆದರೆ, ನಾನು ನಂಬಿದ ಸಿದ್ಧಾಂತಕ್ಕಾಗಿ ಕಾಂಗ್ರೆಸ್ ಆಫರ್ ತಿರಸ್ಕರಿಸಿದ್ದೆ. ಕಾಂಗ್ರೆಸ್ಗೆ ಹೋಗಿದ್ದರೂ ನಾನೇ ಗೆಲ್ಲುತ್ತಿದ್ದೆ. ಯಾಕೆಂದರೆ ಆ ರೀತಿ ಜನ ಸೇವೆ ಮಾಡಿದ್ದೇನೆ. ಆ ಬಲದಿಂದಲೇ ಮುಂದಿನ ಚುನಾವಣೆಯಲ್ಲಿ ನಾನು ವಿಧಾನಸೌಧ ಪ್ರವೇಶ ಮಾಡುವೆ ಎಂದು ವಿಶ್ವಾಸದಿಂದ ಹೇಳುತ್ತಿದ್ದೇನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.