ಮೈಸೂರಿನ ಮೈಲಾರಿ ಹೋಟೆಲ್ನಲ್ಲಿ ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಸೂರಿನ ಮೈಲಾರಿ ಹೋಟೆಲ್, ಮೃದುವಾದ ದೋಸೆ ಹಾಗೂ ಮಲ್ಲಿಗೆ ಇಡ್ಲಿಗೆ ಸಾಕಷ್ಟು ಫೇಮಸ್. ಸಿಎಂ ಅವರು ಪ್ರತಿ ಬಾರಿ ಮೈಸೂರಿಗೆ ಬಂದಾಗ ಸಿಎಂ ಬೆಣ್ಣೆ ದೋಸೆ, ಕಾಯಿ ಚಟ್ನಿ, ಆಲೂಗಡ್ಡೆ ಈರುಳ್ಳಿ ಪಲ್ಯ, ಇಡ್ಲಿ-ಚಟ್ನಿ ಸವಿಯುತ್ತಾರೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಇಲದೋಣಿ ಗ್ರಾಮದವರಾದ ಇವರು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಜಾವಾಣಿಯಲ್ಲಿ ಪತ್ರಕರ್ತರಾಗಿ ವೃತ್ತಿಜೀವನ ಆರಂಭಿಸಿದ ಇವರು, ನಂತರ ವಿಜಯವಾಣಿ, ವಿಸ್ತಾರ ನ್ಯೂಸ್ನಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದು, ರಾಜ್ಯ, ರಾಷ್ಟ್ರೀಯ ಸುದ್ದಿ, ಪ್ರಚಲಿತ ವಿದ್ಯಮಾನಗಳ ಕುರಿತ ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ. ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 6 ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದು, ಪ್ರಸ್ತುತ ವಿಶ್ವವಾಣಿ ವೆಬ್ಸೈಟ್ನಲ್ಲಿ ಹಿರಿಯ ಉಪ ಸಂಪಾದಕರಾಗಿದ್ದಾರೆ.
ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ಪೊಲೀಸರು ಮಾನವೀಯತೆಯಿಂದ ಕೆಲಸ ಮಾಡಬೇಕು. ಸಾರ್ವಜನಿಕರ ಜೊತೆಗೆ ಸ್ನೇಹದಿಂದ ಇರಬೇಕು ಎಂದು ಸಲಹೆ ನೀಡಿದ್ದಾರೆ.
Four children drown in farm pond: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಶಾಲೆಗೆ ರಜೆ ಇದ್ದ ಕಾರಣ ಕೃಷಿಹೊಂಡದಲ್ಲಿ ಮಕ್ಕಳು ಈಜಲು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ಸ್ಥಳದಲ್ಲಿ ಮಕ್ಕಳ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
RCB vs SRH: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆರ್ಸಿಬಿ ಅಭಿಮಾನಿಗಳಿಗಾಗಿ ಆಟೋ ಚಾಲಕರೊಬ್ಬರು ಫ್ರೀ ರೈಡ್ ಆಫರ್ ನೀಡಿದ್ದು, ಈ ಕುರಿತ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Third Language In SSLC Exam: ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಬಗ್ಗೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ತೃತೀಯ ಭಾಷೆ ಹಿಂದಿ ವಿಷಯವನ್ನು ಕಡ್ಡಾಯ ಮಾಡಬಾರದು ಎಂದು ತೀರ್ಮಾನಿಸಿದ್ದೇವೆ. ಈ ನಿಯಮ ಈ ವರ್ಷದಿಂದಲೇ ಜಾರಿಯಾಗುತ್ತದೆ ಎಂದು ಅವರು ಹೇಳಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಅಪಘಾತ ನಡೆದಿದೆ. ವೇಗವಾಗಿ ಬಂದ ಕಾರು ಡಿಕ್ಕಿಯಾಗಿದ್ದರಿಂದ ಗಂಭೀರವಾಗಿ ಗಾಯಗೊಂಡು ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಅತಿಯಾದ ವೇಗ ಹಾಗೂ ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ.
ನಾವೆಲ್ಲರೂ ವೇದಿಕೆಯ ಮೇಲೆ ನಮ್ಮನ್ನು 'ಜನಸೇವಕರು' ಎಂದು ಕರೆದುಕೊಳ್ಳುತ್ತೇವೆ. ಇಂತಹ ಹಿನ್ನೆಲೆಯಲ್ಲಿ ಈ ವಿಐಪಿ ಸಂಸ್ಕೃತಿಗೆ ಇಂದು ಪುರಸ್ಕಾರ ಸಿಗುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಸ್ಪಷ್ಟ ಮಾತುಗಳಲ್ಲಿ ಹೇಳುವುದಾದರೆ, ದಯವಿಟ್ಟು ನನಗೆ ಐಪಿಎಲ್ ಟಿಕೆಟ್ಗಳು ಖಂಡಿತ ಬೇಡ ಎಂದು ಶಾಸಕ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗಿರುವುದಿಲ್ಲ. ಸದರಿ ನೌಕರರಿಗೆ 'ಸಿ' ಮತ್ತು 'ಡಿ' ದರ್ಜೆ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಆಡಳಿತಾತ್ಮಕವಾಗಿ ಸಾಧ್ಯವಾಗುವುದಿಲ್ಲ. ಸಿಬ್ಬಂದಿಗೆ ಸೇವಾ ಹಿರಿತನದ ವೇತನ ನಿಗದಿಪಡಿಸಲು ಮತ್ತು ವೇತನ ಹೆಚ್ಚಳ ಮಾಡುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕೋಲಾರ ನಗರದಲ್ಲಿ ಶ್ರೀರಾಮ ಸೇನಾ ವತಿಯಿಂದ ಶ್ರೀರಾಮ ನವಮಿ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಶ್ರೀ ರಾಮೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ದಾರೆ. ಶಾಸಕರ ಇಂತಹ ನಡವಳಿಕೆಯಿಂದ ವಿಧಾನಸಭೆಯ ಘನತೆ ಕಡಿಮೆ ಆಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಯುವತಿಯು ಬೇರೊಬ್ಬರ ಜತೆ ಮದುವೆಯಾದ ವಿಷಯ ತಿಳಿದ ಆರೋಪಿ, ಆಕೆ ವಿರುದ್ಧ ದ್ವೇಷ ಬೆಳೆಸಿಕೊಂಡಿದ್ದ. ಆಕೆಯ ಖಾಸಗಿ ಫೋಟೊ ಮತ್ತು ವಿಡಿಯೊಗಳನ್ನು ಸೋಷಿಯಲ್ ಮೀಡಿಯಾ ಹಾಗೂ ಅಶ್ಲೀಲ ವೆಬ್ಸೈಟ್ಗಳಲ್ಲಿ ಹರಿಬಿಟ್ಟ ಹಿನ್ನೆಲೆಯಲ್ಲಿ ಆತನಿಗೆ ಬೆಂಗಳೂರಿನ ಕೋರ್ಟ್ ಶಿಕ್ಷೆ ವಿಧಿಸಿದೆ.
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯ ಮತದಾನ ಏಪ್ರಿಲ್ 9ರಂದು ನಡೆಯಲಿದೆ. ಮೇ 4 ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ 40 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.
Karnataka By-Election: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಕಣದಿಂದ ಹಿಂದೆ ಸರಿದಿದ್ದು, ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.
RCB vs SRH IPL 2026 Match: ಮಾರ್ಚ್ 28ರಂದು ನಡೆಯಲಿರುವ ಐಪಿಎಲ್ ಕ್ರಿಕೆಟ್ನ ಉದ್ಘಾಟನಾ ಪಂದ್ಯ ವೀಕ್ಷಿಸಲು ಶಾಸಕರಿಗೆ ತಲಾ 4 ಟಿಕೆಟ್ಗಳನ್ನು ನೀಡಬೇಕೆಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಆದರೆ, ಒಬ್ಬ ಶಾಸಕರಿಗೆ ಎರಡು ಟಿಕೆಟ್ನಂತೆ ಎಲ್ಲ ಶಾಸಕರಿಗೂ ಕ್ರಿಕೆಟ್ ಮ್ಯಾಚ್ ನೋಡಲು ಅವಕಾಶ ಮಾಡಿಕೊಡುತ್ತೇವೆ ಎಂದು ಕೆಎಸ್ಸಿಎ ತಿಳಿಸಿದೆ.
ನಮ್ಮಲ್ಲಿ ಸದ್ಯಕ್ಕೆ ತ್ರಿಭಾಷಾ ನೀತಿ ಜಾರಿಯಲ್ಲಿದೆ. ಆದರೆ ಹಿಂದಿ ಭಾಷೆಯ ಅಂಕಗಳನ್ನು ಫಲಿತಾಂಶದಲ್ಲಿ ಅಂಕಗಳ ಬದಲಿಗೆ ಗ್ರೇಡ್ ರೂಪದಲ್ಲಿ ನೀಡುವುದರಿಂದ ವಿದ್ಯಾರ್ಥಿಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ. ಈ ವರ್ಷದಿಂದಲೇ ಈ ಎಲ್ಲಾ ಬದಲಾವಣೆಗಳು ಜಾರಿಗೆ ಬರಲಿವೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.
Lamborghini stunt case: ದೆಹಲಿಯಲ್ಲಿ ಆರ್ಟಿಒ ಹರಾಜಿನಲ್ಲಿ ಲ್ಯಾಂಬೋರ್ಗಿನಿ ಕಾರು ಖರೀದಿಸಿದ್ದ ರಿಕ್ಕಿ ರೈ, ಬಳಿಕ ಕಲರ್ ಬದಲಿಸಿ, ಅದಕ್ಕೆ ಫ್ಯಾನ್ಸಿ ನಂಬರ್ ಪಡೆದಿದ್ದಾರೆ. ಆದರೆ, ಕರ್ನಾಟಕದಲ್ಲಿ ರಿಜಿಸ್ಟರ್ ಮಾಡಿಸದೆ ತೆರಗೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸರ್ವಸದಸ್ಯರ ಸಭೆಯಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ. ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಸಾಹಿತ್ಯಶ್ರೀ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನಕ್ಕೆ ಆಯ್ಕೆಯಾದವರ ಪಟ್ಟಿ ಇಲ್ಲಿದೆ.
Karnataka budget session 2026: ಗ್ಯಾರಂಟಿಗಳಿಂದ ಸಾಲ ಹೆಚ್ಚಿದೆ ಎಂದು ಟೀಕಿಸಲಾಗಿದೆ. ಇದುವರೆಗೆ 1.31 ಲಕ್ಷ ಕೋಟಿ ಗ್ಯಾರಂಟಿಗಳಿಗೆ ವೆಚ್ಚ ಮಾಡಲಾಗಿದೆ. ಮಹಾರಾಷ್ಟ್ರ ಸರ್ಕಾರ, ಜನಕಲ್ಯಾಣ ಯೋಜನೆಗಳಿಗೆ ವರ್ಷದಿಂದ ವರ್ಷಕ್ಕೆ ಅನುದಾನ ಕಡಿಮೆ ಮಾಡಿದೆ. ಆದರೆ ನಮ್ಮ ಸರ್ಕಾರ ಗ್ಯಾರಂಟಿಗಳಿಗೆ ಪ್ರತಿ ವರ್ಷ ಒಂದೇ ರೀತಿಯಲ್ಲಿ ಅನುದಾನ ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಒಳಮೀಸಲಾತಿ ಇಲ್ಲದ ಹಳೆಯ ಮೀಸಲಾತಿ ಪದ್ಧತಿಯನ್ನೇ ಮುಂದುವರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಸಚಿವರು ಸ್ಥಳಕ್ಕೆ ತೆರಳಿ, ಒಕ್ಕೂಟದ ಮನವಿ ಸ್ವೀಕರಿಸಿ ಮಾತನಾಡಿದ್ದಾರೆ.
Tumkur News: ತುಮಕೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬುಧವಾರ ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಬಸ್ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
CM Siddaramaiah: ನೀವೇ ಸಿಎಂ ಆಗಿದ್ದರೆ ನಿಮ್ಮ ಪಕ್ಕದಲ್ಲಿ ಇರುವವರ ಕನಸು ನನಸಾಗೋದು ಯಾವಾಗ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ನಮ್ಮಲ್ಲಿ ಇರುವ ಎಲ್ಲಾ ಶಾಸಕರೂ ಸಿಎಂ ಆಗಲು ಅರ್ಹರೇ. ಎಲ್ಲರಿಗೂ ಯೋಗ್ಯತೆ ಇದೆ, ಆದರೆ ಅವಕಾಶಗಳು ಸಿಗಲ್ಲ ಎಂದು ಎಂದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಬಜೆಟ್ ಕುರಿತು ನಡೆದ ಚರ್ಚೆಯ ವೇಳೆ ವಿಪಕ್ಷ ನಾಯಕರ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯ ಆಗುತ್ತಿದೆ. ಜಿ.ಎಸ್.ಟಿ ಪರಿಹಾರ ನೀಡುವುದನ್ನು ನಿಲ್ಲಿಸಿದ ಕಾರಣ ರಾಜ್ಯದ ರಾಜಸ್ವ ಸಂಗ್ರಹಣೆ ಕಡಿಮೆಯಾಗಿ ರಾಜಸ್ವ ಕೊರತೆಯನ್ನು ಎದುರಿಸಬೇಕಾಯಿತು ಎಂದು ಟೀಕಿಸಿದ್ದಾರೆ.
Ravishankar Guruji: ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (ಬಿಎಂಟಿಎಫ್) ದಾಖಲಿಸಿರುವ ಎಫ್ಐಆರ್ ಪ್ರಶ್ನಿಸಿ ಶ್ರೀ ರವಿಶಂಕರ್ ಗುರೂಜಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಪುರಸ್ಕರಿಸಿದ್ದು, ಜಮೀನು ಒತ್ತುವರಿ ಆರೋಪ ಪ್ರಕರಣವನ್ನು ರದ್ದುಪಡಿಸಿದೆ.
Karnataka budget session 2026: ರಾಜ್ಯಕ್ಕೆ ಅನ್ಯಾಯವಾದಾಗ ಯಾವುದೇ ಸರ್ಕಾರವಿದ್ದರೂ, ವಿರೋಧಿಸಲೇಬೇಕು. ಕನ್ನಡಿಗರೆಲ್ಲರೂ ಒಗ್ಗಟ್ಟಾಗಿ ಈ ಅನ್ಯಾಯವನ್ನು ವಿರೋಧಿಸಬೇಕು. ಕರ್ನಾಟಕದಿಂದ 4.50 ಲಕ್ಷ ಕೋಟಿಗಿಂತಲೂ ಹೆಚ್ಚು ತೆರಿಗೆ ಸಂಗ್ರಹವಾಗುತ್ತಿದ್ದರೂ, ರಾಜ್ಯಕ್ಕೆ ಮರಳಿ ಬರುವುದು 14-15% ರಷ್ಟು ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ವಿರೋಧ ಪಕ್ಷದ ವಿಜಯೇಂದ್ರ ಮುಂತಾದವರು ರೆವಿನ್ಯೂ ಸರಿಯಾಗಿ ಸಂಗ್ರಹವಾಗದ ಕಾರಣ ಪ್ರತಿ ವರ್ಷ ಬಜೆಟ್ಟನ್ನು ಪರಿಷ್ಕರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಇದು ಕೇಂದ್ರ ಸರ್ಕಾರದ ಅಪಕ್ವ ಆರ್ಥಿಕ ನೀತಿಗಳಿಂದ ಉಂಟಾಗುತ್ತಿರುವ ಸಮಸ್ಯೆಯಾಗಿದೆ. ನಮ್ಮ ಅಕ್ಕ ಪಕ್ಕದ ರಾಜ್ಯಗಳಿಗೆ ಹೋಲಿಸಿದರೂ ಸಹ ನಮ್ಮ ಸ್ವಂತ ರಾಜಸ್ವ ಸಂಗ್ರಹ ಉತ್ತಮವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.