ವಚನ ಗ್ಲೋಬಲ್ ವಿಶ್ವವಿದ್ಯಾಲಯ ಸ್ಥಾಪನೆಗೆ ನೆರವು ನೀಡಲು ಸಿಎಂಗೆ ಮನವಿ
Vachana Global University: ಬಸವ ತತ್ವವನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ವಚನ ಗ್ಲೋಬಲ್ ವಿಶ್ವವಿದ್ಯಾಲಯವನ್ನು ಸಾರ್ವಜನಿಕ ದತ್ತಿಯ ಅಡಿಯಲ್ಲಿ ಸ್ಥಾಪನೆ ಮಾಡಲು ಭಾಲ್ಕಿಯ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಮುಂದಾಗಿದೆ. ಇದಕ್ಕಾಗಿ ಅಗತ್ಯ ಅನುದಾನ ಮತ್ತು ಭೂಮಿ ಮಂಜೂರು ಮಾಡಲು ಕೋರಿ ಸಿಎಂ ಸಿದ್ದರಾಮಯ್ಯ ಅವರಿಗೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಮನವಿ ಮಾಡಿದೆ.