ಪರಮೇಶ್ವರ್ ಬೆನ್ನಲ್ಲಿ ಕಾಣುತ್ತಿದೆ ರಾಮಬಾಣ ?
ರಾಜಣ್ಣ ಎಪಿಸೋಡಿನ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೆಸರು ಮುನ್ನೆಲೆಗೆ ಬಂದಿದೆ. ಅಂದ ಹಾಗೆ, ಪರ್ಯಾಯ ನಾಯಕತ್ವದ ರೇಸಿನಲ್ಲಿ ಈ ಹಿಂದೆಯೂ ಪರಮೇಶ್ವರ್ ಅವರ ಹೆಸರು ಕೇಳಿ ಬಂದಿತ್ತು ಮತ್ತು ಇದಕ್ಕೆ ಪೂರಕವಾಗಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಹಕಾರ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಅವರು ಪರಮೇಶ್ವರ್ ಅವರೊಂದಿಗೆ ಸೀಕ್ರೆಟ್ ಮೀಟಿಂಗುಗಳನ್ನು ನಡೆಸುತ್ತಿದ್ದರು.