ಜೆನ್ ಝೀ ಸಮುದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂದೇಶ
Narendra Modi: ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT Delhi) ಕ್ಯಾಂಪಸ್ನಲ್ಲಿ ಜೆನ್ ಝೀ ಸಮುದಾಯದ ಜತೆ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ, ವಿಕಸಿತ ಭಾರತದ ಗುರಿ ಸಾಧನೆಗೆ ಯುವ ಜನತೆ ಕೈ ಜೋಡಿಸುವಂತೆ ಮನವಿ ಮಾಡಿದರು.
ಗಡಿನಾಡು ಕಾಸರಗೋಡು ಜಿಲ್ಲೆಯ ಆದೂರು ಗ್ರಾಮದ ರಮೇಶ್ ಬಳ್ಳಮೂಲೆ ಉದಯವಾಣಿ ದಿನ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದರು. ಬಳಿಕ ವಿಜಯವಾಣಿ, ಅಧಾನ್ ನ್ಯೂಸ್ ಆ್ಯಪ್, ನ್ಯೂಸ್ ಆ್ಯರೋ ವೆಬ್ಸೈಟ್, ವಿಸ್ತಾರ ನ್ಯೂಸ್ ವೆಬ್ಸೈಟ್ನಲ್ಲಿ ಕಾರ್ಯ ನಿರ್ವಹಿಸಿದರು. 2024ರ ಆಗಸ್ಟ್ನಿಂದ ವಿಶ್ವವಾಣಿ ವೆಬ್ಸೈಟ್ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ. ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುಮಾರು 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಬರವಣಿಗೆ, ಓದು, ಸಿನಿಮಾ ವೀಕ್ಷಣೆ, ಪ್ರವಾಸ ಇವರ ನೆಚ್ಚಿನ ಹವ್ಯಾಸ.
Siddharth Mallya: ಮದ್ಯದ ದೊರೆ, ಆರ್ಸಿಬಿ ಫ್ರಾಂಚೈಸಿಯ ಮಾಜಿ ಮಾಲಕ ವಿಜಯ್ ಮಲ್ಯ ಅವರ ಪುತ್ರ ಸಿದ್ಧಾರ್ಥ್ ಮಲ್ಯ ಮದ್ಯಪಾನ ತ್ಯಜಿಸಿ 8 ವರ್ಷವಾಗಿದ್ದು, ಇದನ್ನು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಈ ಬಗ್ಗೆ ವಿಡಿಯೊ ಮಾಡಿರುವ ಸಿದ್ಧಾರ್ಥ್ ಮಲ್ಯ ಮನಸ್ಸು ಮಾಡಿದರೆ ಪ್ರತಿಯೊಬ್ಬರೂ ಮದ್ಯಪಾನ ತ್ಯಜಿಸಬಹುದು ಎಂದಿದ್ದಾರೆ.
Gold Price Today: ಬಂಗಾರದ ದರದಲ್ಲಿ ಶನಿವಾರವೂ (ಆಗಸ್ಟ್ 8) ಏರಿಕೆ ಕಂಡು ಬಂದಿದ್ದು, ಬೆಂಗಳೂರಿನಲ್ಲಿ 22 ಕ್ಯಾರಟ್ನ 1 ಗ್ರಾಂ ಚಿನ್ನಕ್ಕೆ ಬರೋಬ್ಬರಿ 100 ರುಪಾಯಿ ಹೆಚ್ಚಾಗಿ 13,965 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್ನ 1 ಗ್ರಾಂ ಚಿನ್ನ 109 ರುಪಾಯಿ ದುಬಾರಿಯಾಗಿ 15,235 ರುಪಾಯಿಗೆ ಬಂದಿದೆ.
KEA Recruitment: 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಕೊನೆಯ ದಿನಾಂಕವನ್ನು ವಿಸ್ತರಿಸಿ ಆದೇಸ ಹೊರಡಿಸಿದೆ. ಹೊಸ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಆಗಸ್ಟ್ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನ ಆಗಸ್ಟ್ 21.
Heart Attack: ಇತ್ತೀಚೆಗೆ ಯುವ ಜನತೆ ಅದರಲ್ಲೂ ಚಿಕ್ಕ ಚಿಕ್ಕ ಮಕ್ಕಳು ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಘಟನೆ ಹೆಚ್ಚಾಗುತ್ತಿದ್ದು, ಅದಕ್ಕೆ ಮತ್ತೊಂದು ಉದಾಹರಣೆ ಎಂಬಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ನಲ್ಲಿ ನಡೆದಿದೆ. ವಾಲಿಬಾಲ್ ಆಡುತ್ತಿದ್ದ ಲಿಖಿತ್ ಆಮೀನ್ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾನೆ.
Pride of Healthcare Award: ಆರೋಗ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವೈದ್ಯರು ಹಾಗೂ ಆರೋಗ್ಯ ವಲಯದ ಸಾಧಕರನ್ನು ಗುರುತಿಸಿ ವಿಶ್ವವಾಣಿ ಟಿವಿ ಬೆಂಗಳೂರಿನಲ್ಲಿ ಗೌರವಿಸಿದೆ. ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿದ ವೈದ್ಯಕೀಯ ಸಾಧಕರಿಗೆ ಪ್ರೈಡ್ ಆಫ್ ಹೆಲ್ತ್ಕೇರ್ ಅವಾರ್ಡ್ ಮಾಡಲಾಯಿತು. ಬುಧವಾರ (ಆಗಸ್ಟ್ 5) ಸಂಜೆ ಬೆಂಗಳೂರಿನ ರಾಡಿಸನ್ ಬ್ಲೂ ಹೋಟೆಲ್ನಲ್ಲಿ ನಡೆಯಿತು. ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ವಿವರ.
Sheikh Hasina: ಬಾಂಗ್ಲಾದೇಶದಲ್ಲಿ 2024ರಲ್ಲಿ ವಿದ್ಯಾರ್ಥಿ ದಂಗೆ ಭುಗಿಲೆದ್ದಾಗ ಆಶ್ರಯ ಕೋರಿ ಭಾರತಕ್ಕೆ ಬಂದ ಮಾಜಿ ಪ್ರಧಾನಿ ಶೇಕ್ ಹಸೀನಾ ಆಗಸ್ಟ್ 5ರಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಕಾರ್ಯಕ್ರಮಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಇದೀಗ ಸ್ಪಷ್ಟಪಡಿಸಿದೆ.
Udhayanidhi Stalin: ನಟಿ ತ್ರಿಷಾ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ನೀಡಿದ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರಿಗೆ ಮದ್ರಾಸ್ ಹೈಕೋರ್ಟ್ ರಿಲೀಫ್ ನೀಡಿದೆ. ಅವರನ್ನು ವಿಚಾರಣೆ ನಡೆಸಿ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.
Prashant Kishor: 3 ರಾಜ್ಯಗಳ 3 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸೋತಿದ್ದು, 1 ಸ್ಥಾನದಲ್ಲಷ್ಟೇ ಜಯಗಳಿಸಲು ಶಕ್ತವಾಗಿದೆ. ಬಿಜೆಪಿ ಆಡಳಿತದಲ್ಲಿರುವ ಗುಜರಾತ್, ಮಧ್ಯ ಪ್ರದೇಶ ಮತ್ತು ಬಿಹಾರದಲ್ಲಿ ಉಪಚುನಾವಣೆ ನಡೆದಿದ್ದು, ಗುಜರಾತ್ನಲ್ಲಿ ಮಾತ್ರ ಕಮಲ ಅರಳಿದೆ. ಮಧ್ಯ ಪ್ರದೇಶ ಮತ್ತು ಬಿಹಾರದಲ್ಲಿ ತೀವ್ರ ಮುಖಭಂಗ ಅನುಭವಿಸಿದೆ. ಇದು ಬಿಜೆಪಿಗೆ ಹಲವು ಪಾಠ ಕಲಿಸಿದೆ.
Actor Anant Nag: ವಿಶ್ವವಾಣಿ ಪುಸ್ತಕ, ವಾಗ್ದೇವಿ ವಿದ್ಯಾವರ್ಧಕ ಟ್ರಸ್ಟ್ ಹಾಗೂ ವಾಗ್ದೇವಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಬೆಂಗಳೂರಿನ ಎಫ್ಕೆಸಿಸಿಐ ಸಭಾಂಗಣದಲ್ಲಿ 9 ಪುಸ್ತಕಗಳ ಬಿಡುಗಡೆ ಸಮಾರಂಭ ನೆರವೇರಿತು. ವಿಶ್ವವಾಣಿʼ ಮತ್ತು ʼಪ್ರವಾಸಿ ಪ್ರಪಂಚʼ ಪತ್ರಿಕೆ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್, ಖ್ಯಾತ ವಾಗ್ಮಿ ಹಾಗೂ ಚಿಂತಕ ಚಕ್ರವರ್ತಿ ಸೂಲಿಬೆಲೆ , ಹಿರಿಯ ನಟ ಅನಂತನಾಗ್ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಬಳಿಕ ಅಭಿಮಾನಿಗಳು ಅನಂತನಾಗ್ ಜತೆ ಫೋಟೊ ಕ್ಲಿಕ್ಕಿಸಿಕೊಂಡರು. ಇಲ್ಲಿದೆ ವಿಶೇಷ ಫೋಟೊ ಗ್ಯಾಲರಿ.
Actor Anant Nag: ವಿಶ್ವವಾಣಿ ಪುಸ್ತಕ, ವಾಗ್ದೇವಿ ವಿದ್ಯಾ ವರ್ಧಕ ಟ್ರಸ್ಟ್ ಹಾಗೂ ವಾಗ್ದೇವಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಭಾನುವಾರ (ಆಗಸ್ಟ್ 2) ಬೆಂಗಳೂರಿನ ಎಫ್ಕೆಸಿಸಿಐ ಸಭಾಂಗಣದಲ್ಲಿ ಆಯೋಜಿಸಿದ್ದ 9 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ನಟ ಅನಂತನಾಗ್, ಯುವ ತಲೆಮಾರಿನಲ್ಲಿ ಓದುವ ಹವ್ಯಾಸ ಬೆಳೆಯಬೇಕು ಎಂದು ಕರೆ ನೀಡಿದರು.
Vishwavani Pustaka: ಭಾನುವಾರ ಬೆಂಗಳೂರಿನಲ್ಲಿ ವಿಶ್ವವಾಣಿ ಪುಸ್ತಕ, ವಾಗ್ದೇವಿ ವಿದ್ಯಾ ವರ್ಧಕ ಟ್ರಸ್ಟ್ ಹಾಗೂ ವಾಗ್ದೇವಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ 9 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಹಿರಿಯ ನಟ ಅನಂತನಾಗ್ ಕೃತಿ ಬಿಡುಗಡೆಗೊಳಿಸಿದರು. ʼವಿಶ್ವವಾಣಿʼ ಮತ್ತು ʼಪ್ರವಾಸಿ ಪ್ರಪಂಚʼ ಪತ್ರಿಕೆ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
Vishwavani Pustaka: ವಾಗ್ದೇವಿ ವಿದ್ಯಾವರ್ಧಕ ಸಂಘ, ವಿಶ್ವವಾಣಿ ಪುಸ್ತಕ ಪ್ರಕಾಶನದ, ಪತ್ರಕರ್ತ ವಿಶ್ವೇಶ್ವರ ಭಟ್ ಅವರ 4 ಪುಸ್ತಕಗಳು 9 ಕೃತಿಗಳು ಭಾನುವಾರ ಬೆಳಗ್ಗೆ 10.30 ಗಂಟೆಗೆ ಬೆಂಗಳೂರಿನ ಮೈಸೂರ್ ಬ್ಯಾಂಕ್ ಸರ್ಕಲ್ನಲ್ಲಿರುವ ಎಫ್ಕೆಸಿಸಿಐ ಸಭಾಂಗಣದಲ್ಲಿ ಬಿಡುಗಡೆಯಾಗಲಿದೆ. ಪದ್ಮಭೂಷಣ ಪುರಸ್ಕೃತ ಹಿರಿಯ ನಟ ಅನಂತನಾಗ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
Toxic Trailer Release Date: ಬಹುನಿರೀಕ್ಷಿತ, ಯಶ್ ಅಭಿನಯದ ʼಟಾಕ್ಸಿಕ್ʼ ಚಿತ್ರದ ಟ್ರೈಲರ್ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಸ್ವತಃ ಯಶ್ ಈ ಸುದ್ದಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಟ್ರೈಲರ್ ಲಾಂಚ್ ಆಗಲಿದೆ. ಚಿತ್ರ ಆಗಸ್ಟ್ 26ರಂದು ತೆರೆ ಕಾಣಲಿದೆ.
Gold Rate Today: ಮಾಸಾಂಭದಲ್ಲೇ ಗ್ರಾಹಕರಿಗೆ ಗುಡ್ನ್ಯೂಸ್ ಸಿಕ್ಕಿದೆ. ಚಿನ್ನದ ದರದಲ್ಲಿ ಶನಿವಾರ ಬಾರಿ ಇಳಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್ನ 1 ಗ್ರಾಂ ಚಿನ್ನಕ್ಕೆ 35 ರುಪಾಯಿ ಕಡಿಮೆಯಾಗಿ 13,220 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್ನ 1 ಗ್ರಾಂ ಚಿನ್ನ 38 ರುಪಾಯಿ ಅಗ್ಗವಾಗಿ 14,422 ರುಪಾಯಿಗೆ ಬಂದಿದೆ.
V Kamakoti: ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಟಾಸ್ಕ್ಫೋರ್ಸ್ಗೆ ಆಯ್ಕೆಯಾಗಿರುವ ಐಐಟಿ ಮದ್ರಾಸ್ ನಿರ್ದೇಶಕ ಪ್ರೊ. ವಿ. ಕಾಮಕೋಟಿ ಅವರನ್ನು ಗೋಮೂತ್ರ ತಜ್ಞ ಎಂದು ಕರೆದು ಅವಮಾನಿಸಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಸಿಕ್ಷಣ ತಜ್ಞರು ಸಿಡಿದೆದ್ದಿದ್ದಾರೆ. ದೇಶದ ಸುಮಾರು 215ರಷ್ಟು ಉಪಕುಲಪತಿಗಳು, ಮಾಜಿ ಉಪಕುಲಪತಿಗಳು ಮತ್ತು ಶಿಕ್ಷಣ ತಜ್ಞರು ಬಹಿರಂಗ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಶ್ನೆ ಪತ್ರಿ ಸೋರಿಕೆ ತಡೆ ಮಸೂದೆ ಚರ್ಚೆ ವೇಳೆ ಪ್ರಿಯಾಂಕ ಗಾಂಧಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು.
Wayanad Landslide: ದೇಶವನ್ನೇ ಬೆಚ್ಚಿ ಬೀಳಿಸಿದ ವಯನಾಡು ಭೂಕುಸಿತಕ್ಕೆ 2 ವರ್ಷ. 400ಕ್ಕೂ ಹೆಚ್ಚುನ ಜನರ ಜೀವನ ಕಸಿದ, ಮನೆಗಳನ್ನು ಇಟ್ಟಿಗೆಯ ರಾಶಿಯನ್ನಾಗಿಸಿದ ಈ ದುರಂತದಿಂದ ಕರಾಳ ನೆನಪಿನಿಂದ ಸಂತ್ರಸ್ತರು ಇನ್ನೂ ಹೊರ ಬಂದಿಲ್ಲ. ಗುರುವಾರ ಸಂತ್ರಸ್ತರು ಒಂದೆಡೆ ಸೇರಿ ತಮ್ಮರಿಗೆ ಶ್ರದ್ಧಾಂಜಲಿ ಅರ್ಪಿಸಿದರು.
Byrathi Suresh: ಚಿಲ್ಲರೆ ನೀಡದ ಕಾರಣ ಸಾರಿಗೆ ಸಚಿವ ಬೈರತಿ ಸುರೇಶ್ ಅವರನ್ನು ಬಸ್ನಿಂದ ಇಳಿಯುವಂತೆ ಹೇಳಿ ಅಮಾನತುಗೊಂಡಿದ್ದ ನಿರ್ವಾಹಕ ಟಿ.ಜಿ. ರಾಮಕೃಷ್ಣ ಇದೀಗ ಕ್ಷಮೆ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಅಮಾನತು ಆದೇಶವನ್ನು ಹಿಂಪಡೆಯುವಂತೆ ಅಧಿಕಾರಿಗಳಿಗೆ ಬೈರತಿ ಸುರೇಶ್ ಸೂಚಿಸಿದ್ದಾರೆ.
Rahul Gandhi: ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಲು ಗೃಹ ಸಚಿವ ಅಮಿತ್ ಶಾ ಆದೇಶ ನೀಡಿದ್ದರು ಎಂದು ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ, ಆರ್ಎಸ್ಎಸ್ ಕ್ಷಮೆ ಕೋರಲು ನಿರಾಕರಿಸಿದ್ದಾರೆ.
Public Examinations (Prevention of Unfair Means) Amendment Bill, 2026: ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಧ್ವನಿಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಯಿತು. ಪರೀಕ್ಷೆಯಲ್ಲಿ ಅಕ್ರಮ ಕಂಡುಬಂದರೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡುವ ಕಾನೂನು ಇದಾಗಿದೆ.
Jammu and Kashmir: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ನ ಬಾರಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ನೆಲ ಬಾಂಬ್ ಸ್ಫೋಟಗೊಂಡು ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ಶ್ರೀನಗರದ 92 ಬೇಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಇನ್ನಷ್ಟು ಭದ್ರತಾ ಪಡೆಗಳು ಧಾವಿಸಿದ್ದು, ಗಸ್ತು ಹೆಚ್ಚಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
Delhi-Amritsar-Katra Expressway: ದೆಹಲಿ-ಅಮೃತಸರ-ಕಟರ ಎಕ್ಸ್ಪ್ರೆಸ್ ವೇ ನಿರ್ಮಾಣಕ್ಕೆ ಕಳಪೆ ಗುಣಮಟ್ಟದ ಥರ್ಮೋಕಾಲ್ ಬಳಸಲಾಗುತ್ತಿದೆ ಎಂದು ಹೇಳುವ ವಿಡಿಯೊವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ಈ ಸುದ್ದಿ ನಕಲಿ ಎನ್ನುವುದು ಇದೀಗ ಸಾಬೀತಾಗಿದೆ. ಕೇಂದ್ರ ವಿರುದ್ದ ಆರೋಪ ಹೊರಿಸಲು ವಿರೋಧಿಗಳು ಹೋಡಿದ ಸಂಚು ಎನ್ನುವುದು ಗೊತ್ತಾಗಿದೆ.
Rahul Gandhi-Priyanka Gandhi: ಕೇಂದ್ರದ ನೂತನ ಸಿಕ್ಷಣ ಸಚಿವ ಪ್ರಲ್ಹಾದ ಜೋಶಿ ಅವರನ್ನು ಅತ್ಯಾಚಾರಿಗಳಿಗೆ ಬೆಂಬಲ ನೀಡಿದ ವ್ಯಕ್ತಿ ಎಂದು ಕರೆಯುವ ಮೂಲಕ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಿವಾದ ಹುಟ್ಟು ಹಾಕಿದ್ದಾರೆ. ಈ ಹೇಳಿಕೆಗೆ ಬಿಜೆಪಿ ಕಿಡಿ ಕಾರಿದೆ.