ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Profile

Ramesh Ballamoole

Senior Sub Editor

[email protected]

ಗಡಿನಾಡು ಕಾಸರಗೋಡು ಜಿಲ್ಲೆಯ ಆದೂರು ಗ್ರಾಮದ ರಮೇಶ್ ಬಳ್ಳಮೂಲೆ ಉದಯವಾಣಿ ದಿನ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದರು. ಬಳಿಕ ವಿಜಯವಾಣಿ, ಅಧಾನ್ ನ್ಯೂಸ್ ಆ್ಯಪ್, ನ್ಯೂಸ್ ಆ್ಯರೋ ವೆಬ್‌ಸೈಟ್‌, ವಿಸ್ತಾರ ನ್ಯೂಸ್ ವೆಬ್‌ಸೈಟ್‌ನಲ್ಲಿ ಕಾರ್ಯ ನಿರ್ವಹಿಸಿದರು. 2024ರ ಆಗಸ್ಟ್‌ನಿಂದ ವಿಶ್ವವಾಣಿ ವೆಬ್‌ಸೈಟ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ. ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುಮಾರು 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಬರವಣಿಗೆ, ಓದು, ಸಿನಿಮಾ ವೀಕ್ಷಣೆ, ಪ್ರವಾಸ ಇವರ ನೆಚ್ಚಿನ ಹವ್ಯಾಸ.

Articles
ಕೋಲಾರ ಪಿಡಿಒ ಸಂಘದ ಚುನಾವಣೆ: ಜಿಲ್ಲಾಧ್ಯಕ್ಷ ಮಹೇಶ್ ಕುಮಾರ್, ಉಪಾಧ್ಯಕ್ಷೆ ಮಂಗಳಾಂಬ Video

ಕೋಲಾರ ಪಿಡಿಒ ಸಂಘದ ಜಿಲ್ಲಾಧ್ಯಕ್ಷರಾಗಿ ಮಹೇಶ್ ಕುಮಾರ್ ಆಯ್ಕೆ

ಕೋಲಾರ ಪಂಚಾಯತ್‌ ಅಭಿವೃದ್ದಿ ಸಂಘದ (PDO) ಜಿಲ್ಲಾಧ್ಯಕ್ಷರಾಗಿ ಕೆ. ಮಹೇಶ್‌ ಕುಮಾರ್, ಉಪಾಧ್ಯಕ್ಷರಾಗಿ ಎಂ. ಮಂಗಳಾಂಬ ಹಾಗೂ ಖಜಾಂಚಿಯಾಗಿ ಎನ್. ಸಂಪರಾಜ್ ಜಯಭೇರಿ ಭಾರಿಸಿದ್ದಾರೆ. ತಾಲೂಕು ಪಂಚಾಯತ್‌ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಪಿಡಿಒ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಮಹೇಶ್ ಕುಮಾರ್ 77 ಮತ, ಎ.ಚಂಗಲರಾಯಗೌಡ 42 ಮತ, ಉಪಾಧ್ಯಕ್ಷ ಸ್ಥಾನದ ಎಂ. ಮಂಗಳಾಂಬ 61 ಮತ, ಎಸ್.ಎನ್. ಮೇಘಾ 55 ಮತ, ಖಜಾಂಚಿ ಸ್ಥಾನದ ಅಭ್ಯರ್ಥಿ ಎನ್. ಸಂಪರಾಜ್ 66 ಮತ, ಆರ್.ಮಂಜುನಾಥ ಪ್ರಸಾದ್ 51 ಮತ ಪಡೆದುಕೊಂಡರು. ಆಯ್ಕೆ ವೇಳೆ ತಾ.ಪಂ. ಇಒ ಮಂಜುನಾಥ್, ಹುತ್ತೂರು ಪಿಡಿಒ ಜಿ. ಲಕ್ಷ್ಮೀ, ಐತರಾಸನಹಳ್ಳಿಯ ಜಿ.ಎಸ್. ಸತೀಶ್ ಕುಮಾರ್, ಕೊಂಡರಾಜನಹಳ್ಳಿಯ ಎಂ. ರಾಮಕೃಷ್ಣ,ಮಾರ್ಜೇನಹಳ್ಳಿಯ ಎಚ್.ಸಿ. ಮಧುಮತಿ, ಮುದುವತ್ತಿಯ ಎಚ್.ಎಂ.ರವಿ, ನರಸಾಪುರ ಎಂ. ಮುನಿರಾಜು, ಶಾಪೂರಿನ ಕೆ.ಸಿ. ಬಾಲಾಜಿ, ವಕ್ಕಲೇರಿಯ ಎ. ಭಾರತಮ್ಮ ಮತ್ತಿತರರು ಉಪಸ್ಥಿತರಿದ್ದರು.

ಮಾರ್ಚ್‌ 27ರ ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆ; ಕಾರಣವೇನು?

ನಾಳೆಯ ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆ

Special Cabinet Meeting: ಬಾಗಲಕೋಟೆ ಮತ್ತು ದಾವಣೆಗೆರೆ ದಕ್ಷಿಣ ಕ್ಷೇತ್ರಗಳಿಗೆ ಉಪ ಚುನಾವಣೆ (Byelection) ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರ (ಮಾರ್ಚ್‌ 26) ಮಧ್ಯಾಹ್ನ 12 ಗಂಟೆಗೆ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ ಎಂದು ಸರ್ಕಾರದ ಅಪರ ಕಾರ್ಯದರ್ಶಿ ಆರ್‌. ಚಂದ್ರಶೇಖರ್‌ ತಿಳಿಸಿದ್ದಾರೆ.

ಶಾಲೆಗಳಲ್ಲಿ ʼವಂದೇ ಮಾತರಂʼ 6 ಚರಣ ಹಾಡುವುದು ಕಡ್ಡಾಯ ಆದೇಶ ವಿರೋಧಿಸಿ ಅರ್ಜಿ; ಹೈಕೋರ್ಟ್‌ ಹೇಳಿದ್ದೇನು?

ʼವಂದೇ ಮಾತರಂʼ 6 ಚರಣ ಹಾಡುವುದು ಕಡ್ಡಾಯ ಆದೇಶ ವಿರೋಧಿಸಿ ಅರ್ಜಿ

Karnataka High Court: ಶಾಲೆಗಳಲ್ಲಿ ಪ್ರತಿದಿನ ಬಂಕಿಮ ಚಟರ್ಜಿ ಅವರ 'ವಂದೇ ಮಾತರಂ' ಗೀತೆಯನ್ನು ಎಲ್ಲ 6 ಚರಣಗಳೊಂದಿಗೆ ಕಡ್ಡಾಯವಾಗಿ ಹಾಡುವ ವಿಚಾರಕ್ಕೆ ಸಂಬಂಧಿಸಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ನಡೆಸಿತು. ಬಳಿಕ ಅರ್ಜಿ ವಿಚಾರಣೆಯನ್ನು ಏಪ್ರಿಲ್ 9ಕ್ಕೆ ಮುಂದೂಡಿತು.

ಎಸ್​​ಎಸ್​​ಎಲ್​ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಮಾರ್ಚ್‌ 30ರ ಬದಲು ಹೊಸ ದಿನಾಂಕ ನಿಗದಿ

ಎಸ್​​ಎಸ್​​ಎಲ್​ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ

SSLC Examination: ಮಾರ್ಚ್‌ 30ರಂದು ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಮಹಾವೀರ ಜಯಂತಿ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದ್ದು, ಅದರ ಬದಲು ಮಾರ್ಚ್‌ 31ರಂದು ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಪಾಲಕರಿಗೆ ಗುಡ್‌ನ್ಯೂಸ್‌; 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ

1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ ಸಡಿಲಿಕೆ ಘೋಷಿಸಿದ ರಾಜ್ಯ ಸರ್ಕಾರ

Madhu Bangarappa: ಶಾಲಾ ದಾಖಲಾತಿ ವಯಸ್ಸಿನ ಮಿತಿಯ ವಿಚಾರವಾಗಿ ಗೊಂದಲದಲ್ಲಿದ್ದ ಪಾಲಕರಿಗೆ ರಾಜ್ಯ ಸರ್ಕಾರ ತಾತ್ಕಾಲಿಕ ರಿಲೀಫ್‌ ಮೂಡಿದೆ. 1ನೇ ತರಗತಿ ಪ್ರವೇಶಕ್ಕೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ ಈ ವರ್ಷವೂ ಸಡಿಲಿಕೆ ಮಾಡುವುದಾಗಿ ಅಧಿವೇಶನದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೆ ಸುತ್ತಿಕೊಂಡ ಮುಡಾ ಹಗರಣ; ಹೈಕೋರ್ಟ್‌ನಿಂದ ತುರ್ತು ನೋಟಿಸ್‌

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಕುಟುಂಬಸ್ಥರಿಗೆ ಹೈಕೋರ್ಟ್‌ ನೋಟಿಸ್‌

MUDA Scam Case: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ ಗುರುವಾರ ತುರ್ತು ನೋಟಿಸ್ ಜಾರಿ ಮಾಡಿದೆ. ಸಿದ್ದರಾಮಯ್ಯ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಸಲ್ಲಿಸಿದ ಬಿ ರಿಪೋರ್ಟ್‌ ಅನ್ನು ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಈ ನೋಟಿಸ್‌ ಜಾರಿ ಮಾಡಿದೆ.

ತೈಲ ಕೊರತೆ ವದಂತಿ; ಬೆಳಗಾವಿಯಲ್ಲಿ ನೀರು ತುಂಬುವ ಬ್ಯಾರೆಲ್‌ನೊಂದಿಗೆ ಪೆಟ್ರೋಲ್‌ ಬಂಕ್‌ಗೆ ಲಗ್ಗೆ ಇಟ್ಟ ಗ್ರಾಹಕರು Video

ತೈಲ ಕೊರತೆ ವದಂತಿ; ಬೆಳಗಾವಿ ಪೆಟ್ರೋಲ್‌ ಬಂಕ್‌ಗೆ ಲಗ್ಗೆ ಇಟ್ಟ ಗ್ರಾಹಕರು

Belagavi News: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದಿಂದಾಗಿ ತೈಲ ಮತ್ತು ಅನಿಲ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದರಿಂದ ಸಹಜವಾಗಿ ಜನ ಜೀವನದ ಮೇಲೆ ಪರಿಣಾಮ ಬೀರಿದೆ. ಈಗಾಗಲೇ ವಾಣಿಜ್ಯ ಸಿಲಿಂಡ್‌ರ್ ಪೂರೈಕೆ ಸ್ಥಗಿತಗೊಂಡು ಜನರು ಆತಂಕಗೊಂಡಿದ್ದಾರೆ. ಅದರ ಮಧ್ಯೆ ತೈಲ ಪೂರೈಕೆ ಕೂಡ ಸ್ಥಗಿತಗೊಳ್ಳಲಿದೆ ಎಂಬ ವದಂತಿ ಹಬ್ಬಿದ್ದರಿಂದ ಸೋಮವಾರ (ಮಾರ್ಚ್‌ 23) ರಾತ್ರೋರಾತ್ರಿ ಬೆಳಗಾವಿ ನಗರದ ಬಹುತೇಕ ಪೆಟ್ರೋಲ್ ಬಂಕ್‌ಗಳಿಗೆ ಜನರು ಮುಗಿಬಿದ್ದರು. ಹಲವರು ನೀರು ತುಂಬುವ ಬ್ಯಾರೆಲ್‌ನಲ್ಲಿ ಪೆಟ್ರೋಲ್‌, ಡೀಸೆಲ್‌ ತುಂಬಲು ಮುಂದಾದರು.

Gold Price Today On 24th March: ಮತ್ತೆ ಇಳಿಕೆಯಾಯ್ತು ಚಿನ್ನದ ದರ; ಇಂದು ಕಡಿಮೆಯಾಗಿದ್ದು ಬರೋಬ್ಬರಿ 2,160 ರುಪಾಯಿ

ಮತ್ತೆ ಇಳಿಕೆಯಾಯ್ತು ಚಿನ್ನದ ದರ

Gold Silver Price Today: ಸತತ 2ನೇ ದಿನವಾದ ಮಂಗಳವಾರ (ಮಾರ್ಚ್‌ 24)ವೂ ಚಿನ್ನದ ದರದಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ ಬರೋಬ್ಬರಿ 270 ರುಪಾಯಿ ಕಡಿಮೆಯಾಗಿದ್ದು 12,865 ರುಪಾಯಿಗೆ ಕುಸಿದಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 294 ರುಪಾಯಿ ಕಡಿಮೆಯಾಗಿದ್ದು, 15,775 ರುಪಾಯಿಗೆ ಬಂದು ತಲುಪಿದೆ.

ನಷ್ಟ ಪರಿಹಾರ ಸಿಗುವ ತನಕ ಯುದ್ಧ ಮುಂದುವರಿಯಲಿದೆ; ಅಮೆರಿಕದ ಕದನ ವಿರಾಮಕ್ಕೆ ಷರತ್ತು ವಿಧಿಸಿದ ಇರಾನ್‌

ಅಮೆರಿಕದ ಕದನ ವಿರಾಮ ಪ್ರಸ್ತಾವಕ್ಕೆ ಷರತ್ತು ವಿಧಿಸಿದ ಇರಾನ್‌

US-Israel-Iran War: ಅಮೆರಿಕ-ಇಸ್ರೇಲ್‌-ಇರಾನ್‌ ನಡುವಿನ ಕದನ ಅಂತ್ಯದತ್ತ ಸಾಗುವ ಎಲ್ಲ ಲಕ್ಷಣ ಕಾಣಿಸುತ್ತಿದೆ. ಇಸ್ರೇಲ್‌ ಜತೆಗೂಡಿ ದಾಳಿ ನಡೆಸುತ್ತಿರುವ ಅಮೆರಿಕ ಇದೀಗ ಶಾಂತಿ ಮಂತ್ರ ಜಪಿಸಲು ಮುಂದಾಗಿದೆ. ಅಮೆರಿಕ ನಷ್ಟ ಪರಿಹಾರ ಒದಗಿಸುವ ಯುದ್ಧ ನಿಲ್ಲುವುದಿಲ್ಲ ಎಂದು ಇರಾನ್‌ ತಿಳಿಸಿದೆ.

110 ಜನರನ್ನು ಹೊತ್ತೊಯ್ಯುತ್ತಿದ್ದ ಕೊಲಂಬಿಯಾ ಮಿಲಿಟರಿ ವಿಮಾನ ಪತನ; 80 ಮಂದಿ ಸಾವಿನ ಶಂಕೆ

ಕೊಲಂಬಿಯಾ ಮಿಲಿಟರಿ ವಿಮಾನ ಪತನ

Colombian Military Plane Crashes: ಸುಮಾರು 110 ಜನರನ್ನು ಹೊತ್ತೊಯ್ಯುತ್ತಿದ್ದ ಕೊಲಂಬಿಯಾದ ಮಿಲಿಟರಿ ವಿಮಾನ ಸೋಮವಾರ (ಮಾರ್ಚ್‌ 23) ಪತನವಾಗಿದ್ದು, ಸುಮಾರು 80 ಮಂದಿ ಮೃತಪಟ್ಟಿದ್ದಾರೆ. ಕೊಲಂಬಿಯಾದ ಪೋರ್ಟೊ ಲೆಗುಯಿಜಾಮೊದ ದಕ್ಷಿಣ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಣಾಳಿಕೆಯಲ್ಲಿ ಮಾತ್ರ, ಕಾರ್ಯರೂಪದಲ್ಲಿ ಇಲ್ಲ; ರಾಮ ಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿಸಲು ಪಕ್ಷಗಳಿಗೆ ನಿರಾಸಕ್ತಿ

ರಾಮ ಸೇತುವನ್ನು ಪಾರಂಪರಿಕ ಸ್ಮಾರಕವನ್ನಾಗಿಸಲು ಇಲ್ಲ ಆಸಕ್ತಿ

Ram Setu: ಪೌರಾಣಿಕ ಕೃತಿ ʼರಾಮಾಯಣʼದಲ್ಲಿ ಬರುವ ರಾಮ ಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸುವುದಾಗಿ ಚುನಾವಣೆ ವೇಳೆ ವಿವಿಧ ಪಕ್ಷಗಳು ಪ್ರಣಾಳಿಕೆಯಲ್ಲಿ ಹೇಳುತ್ತಿದ್ದರೂ, ಇದುವರೆಗೆ ಅಂತಹ ಯಾವುದೇ ಪ್ರಯತ್ನ ನಡೆದಿಲ್ಲ ಎನ್ನುವ ಸತ್ಯ ಇದೀಗ ಬಯಲಾಗಿದೆ. ಆರ್‌ಟಿಐ ಮೂಲಕ ಹೊರಬಿದ್ದ ಮಾಹಿತಿಯಲ್ಲಿ ರಾಮ ಸೇತು ಭಾರತೀಯ ಪುರಾತತ್ವ ಸಮೀಕ್ಷೆ ಅಡಿಯಲ್ಲಿ ರಕ್ಷಿಸ್ಪಟ್ಟಿಲ್ಲ ಎನ್ನುವುದು ಗೊತ್ತಾಗಿದೆ.

ʼʼಇರಾನ್‌ ವಿರುದ್ಧ ಕ್ರಮ ಕೈಗೊಳ್ಳಿʼʼ: ವಿಶ್ವ ನಾಯಕರಿಗೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕರೆ; ಯುದ್ಧ ಮತ್ತಷ್ಟು ತೀವ್ರಗೊಳ್ಳುವ ಸೂಚನೆ

ಇರಾನ್‌ ವಿರುದ್ಧ ಕ್ರಮ ಕೈಗೊಳ್ಳಲು ವಿಶ್ವ ನಾಯಕರಿಗೆ ಇಸ್ರೇಲ್‌ ಪ್ರಧಾನಿ ಕರೆ

Benjamin Netanyahu: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ 3ನೇ ವಾರಕ್ಕೆ ಕಾಲಿಟ್ಟಿದ್ದು, ಸದ್ಯ ತಣ್ಣಗಾಗುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಈ ಮಧ್ಯೆ ತಮ್ಮ ದೇಶದ ಮೇಲೆ ಇರಾನ್‌ ನಡೆಸಿರುವ ಕ್ಷಿಪಣಿ ದಾಳಿಗೆ ಕೆಂಡಾಮಂಡಲರಾಗಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಪ್ರತೀಕಾರದ ಎಚ್ಚರಿಕೆ ನೀಡಿದ್ದಾರೆ.

ಪಾಕಿಸ್ತಾನದಲ್ಲಿ ಶತ್ರು ನಿರ್ನಾಮ; ಕುಟುಂಬಸ್ಥರಿಂದಲೇ ಲಷ್ಕರ್‌-ಎ-ತೋಯ್ಬಾ ಕಮಾಂಡರ್‌ ಬಿಲಾಲ್‌ ಆರಿಫ್‌ ಸರಾಫಿ ಹತ್ಯೆ

ಲಷ್ಕರ್‌-ಎ-ತೋಯ್ಬಾ ಕಮಾಂಡರ್‌ ಬಿಲಾಲ್‌ ಆರಿಫ್‌ ಸರಾಫಿಯ ಹತ್ಯೆ

Bilal Arif Sarafi: ಉಗ್ರ ಸಂಘಟನೆ ಲಷ್ಕರ್‌-ಎ-ತೋಯ್ಬಾದ ಕಮಾಂಡರ್‌ ಬಿಲಾಲ್‌ ಆರಿಫ್‌ ಸರಾಫಿಯನ್ನು ಪಾಕಿಸ್ತಾನದಲ್ಲಿ ಹತ್ಯೆಯಾಗಿದೆ. ಆತನ ಕುಟುಂಬಸ್ಥರೇ ಇರಿದು, ಗುಂಡಿಟ್ಟು ಆತನನ್ನು ಕೊಲೆ ಮಾಡಿದ್ದಾರೆ. ಈದ್‌ ಆಚರಣೆಯ ಬಳಿಕ ಶನಿವಾರ ಈ ಹತ್ಯೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಕಚೇರಿಯಲ್ಲಿ 8,931 ದಿನಗಳು: ನರೇಂದ್ರ ಮೋದಿ ಮತ್ತೊಂದು ದಾಖಲೆ; ಸರ್ಕಾರದ ಮುಖ್ಯಸ್ಥರಾಗಿ ಸುದೀರ್ಘ ಸೇವೆ ಸಲ್ಲಿಸಿದ ರಾಜಕಾರಣಿ

ಮತ್ತೊಂದು ದಾಖಲೆ ಬರೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ

Narendra Modi: ಭಾರತದಲ್ಲಿ ಸರ್ಕಾರದ ಮುಖ್ಯಸ್ಥರಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ರಾಜಕಾರಣಿ ಎನ್ನುವ ಹೆಗ್ಗಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ಬರೋಬ್ಬರಿ 8,931 ದಿನಗಳನ್ನು ಮುಗಿಸಿರುವ ಅವರು ಅಭೂತಪೂರ್ವ ಇತಿಹಾಸ ಬರೆದಿದ್ದಾರೆ.

ಈದ್‌ ಆಚರಣೆ ವೇಳೆ ಕೋರ್ಮು ಸೌಹಾರ್ದತೆ; ಪಾರ್ಥನೆ ಸಲ್ಲಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂ ಸಹೋದರರು

ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂ ಸಹೋದರರು

Viral Video: ರಾಜಸ್ಥಾನದ ಜೈಪುರದ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಈದ್ ಉಲ್-ಫಿತರ್‌ನ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಹಿಂದೂಗಳು ಅವರ ಮೇಲೆ ಹೂವಿನ ಪಕಳೆ ಎಸೆಯುವ ಮೂಲಕ ಗಮನ ಸೆಳೆದರು. ಹಿಂದೂ-ಮುಸ್ಲಿಂ ಏಕತಾ ಸಮಿತಿಯ ನೇತೃತ್ವದಲ್ಲಿ ಈ ಅಪರೂಪದ ಸಂಗಮ ನಡೆಯಿತು.

ಹೋಟೆಲ್‌, ರೆಸ್ಟೋರೆಂಟ್‌ ಮಾಲಕರಿಗೆ ಗುಡ್‌ನ್ಯೂಸ್‌; ವಾಣಿಜ್ಯ ಎಲ್‌ಪಿಜಿ ವಿತರಣೆ ಶೇಕಡಾ 20ರಷ್ಟು ಹೆಚ್ಚಿಸಿದ ಸರ್ಕಾರ

ವಾಣಿಜ್ಯ ಎಲ್‌ಪಿಜಿ ವಿತರಣೆ ಶೇಕಡಾ 20ರಷ್ಟು ಹೆಚ್ಚಿಸಿದ ಸರ್ಕಾರ

Gas Shortage: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಕೊರತೆಯಿಂದ ತತ್ತರಿಸಿರುವ ಹೋಟೆಲ್ ಉದ್ಯಮಕ್ಕೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ರಾಜ್ಯಗಳ ವಾಣಿಜ್ಯ ಎಲ್‌ಪಿಜಿ ಹಂಚಿಕೆಯನ್ನು ಶೇಕಡಾ 20ರಷ್ಟು ಹೆಚ್ಚಿಸಿರುವುದಾಗಿ ತಿಳಿಸಿದೆ. ಈ ಮೂಲಕ ಒಟ್ಟಾರೆ ಹಂಚಿಕೆ ಶೇಕಡಾ 50ಕ್ಕೆ ಏರಿದೆ. ಮಾರ್ಚ್ 23ರಿಂದ ಇದು ಜಾರಿಗೆ ಬರಲಿದೆ.

ʼʼಕೃಷ್ಣನ ನೆಲ ಗುರುವಾಯೂರ್‌ಗೆ ಹಿಂದೂ ಶಾಸಕನ ಅಗತ್ಯವಿದೆʼʼ: ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ಅಭ್ಯರ್ಥಿಯ ಹೇಳಿಕೆ

ಗುರುವಾಯೂರ್‌ನಲ್ಲಿ ಹಿಂದೂ ಶಾಸಕ ಆಯ್ಕೆಯಾಗಲಿ ಎಂದ ಬಿಜೆಪಿ ಅಭ್ಯರ್ಥಿ

Keralam Assembly Election: ಕೇರಳಂ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದೆ. ವಿವಿಧ ಪಕ್ಷಗಳು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಈ ಮಧ್ಯೆ ಗುರುವಾಯೂರ್‌ ಬಿಜೆಪಿ ಅಭ್ಯರ್ಥಿ ಹಿಂದೂ ಶಾಸಕ ಆಯ್ಕೆಯಾಗಬೇಕು ಎಂದು ಕರೆ ನೀಡುವ ಮೂಲಕ ವಿವಾದದ ಅಲೆ ಎಬ್ಬಿಸಿದ್ದಾರೆ.

ಇರಾನ್‌ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ

ಇರಾನ್‌ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ

PM Narendra Modi: ಪ್ರಧಾನಿ ನರೇಂದ್ರ ಮೋದಿ ಸಂಘರ್ಷ ಪೀಡಿತ ಇರಾನ್‌ನ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಜತೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಈದ್‌ ಶುಭಾಶಯ ತಿಳಿಸಿದ ಮೋದಿ ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ.

International Day of Forests 2026: ದೇಶದ ದೊಡ್ಡ ಅರಣ್ಯಗಳಿವು; ಜೀವನದಲ್ಲಿ ಒಮ್ಮೆಯಾದರೂ ಭೇಟಿ ನೀಡಿ

ಇಂದು ವಿಶ್ವ ಅರಣ್ಯ ದಿನ; ದೇಶದ ಟಾಪ್‌ 5 ಕಾಡುಗಳಿವು

ಭೂಮಿಯ ಸಮತೋಲನ ಕಾಯ್ದುಕೊಳ್ಳುವಲ್ಲಿ ಅರಣ್ಯಗಳ ಪಾತ್ರ ಬಹುಮುಖ್ಯ. ಪ್ರತಿ ದೇಶದ ಶೇ. 33ರಷ್ಟು ಭೂಭಾಗ ಅರಣ್ಯ ಹೊಂದಿರಬೇಕು ಎನ್ನುತ್ತಾರೆ ಪರಿಸರ ತಜ್ಞರು. ಆದರೆ ವಾಸ್ತವ ಹಾಗಿಲ್ಲ. ಎಲ್ಲ ಕಡೆ ಅಭಿವೃದ್ಧಿ ಹೆಸರಲ್ಲಿ ಕಾಡು ನಾಶವಾಗುತ್ತಿದೆ. ಹೀಗೆ ಮುಂದುವರಿದರೆ ಮುಂದೊಂದು ದಿನ ಮಾನವನ ಅಸ್ತಿತ್ವಕ್ಕೇ ಇದು ಧಕ್ಕೆ ತರಲಿದೆ. ಹೀಗಾಗಿ ಅರಣ್ಯದ ಮಹತ್ವವನ್ನು ಸಾರುವ ಉದ್ದೇಶದಿಂದ ಪ್ರತಿ ವರ್ಷ ಮಾರ್ಚ್ 21ರಂದು ಅಂತಾರಾಷ್ಟ್ರೀಯ ಅರಣ್ಯ ದಿನ (International Day of Forests 2026) ಆಚರಿಸಲಾಗುತ್ತಿದೆ. ಈ ವರ್ಷದ ಥೀಮ್‌ ʼಅರಣ್ಯ ಮತ್ತು ಆರ್ಥಿಕತೆʼ. ಸಮಾಧಾನದ ಸಂಗತಿ ಎಂದರೆ ಅತಿ ಹೆಚ್ಚು ಅರಣ್ಯ ಹೊಂದಿದ ದೇಶಗಳ ಪೈಕಿ ಭಾರತ ಟಾಪ್‌ 10 ಪಟ್ಟಿಯಲ್ಲಿದೆ. ದೇಶದಲ್ಲಿರುವ ದೊಡ್ಡ 5 ಅರಣ್ಯಗಳ ವಿವರ ಇಲ್ಲಿದೆ.

ಇಸ್ರೇಲ್‌-ಅಮೆರಿಕಕ್ಕೆ ಸವಾಲೊಡ್ಡಿದ ಕೆಲವೇ ಹೊತ್ತಲ್ಲಿ ಇರಾನ್‌ ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿಯ ಹತ್ಯೆ

ಇರಾನ್‌ ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿಯ ಹತ್ಯೆ

Ali Mohammad Naini: ಮಾರ್ಚ್‌ 20ರಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಮೃತಪಟ್ಟಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಅಚ್ಚರಿ ಎಂದರೆ ಶತ್ರು ರಾಷ್ಟ್ರಗಳಿಗೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಅವರನ್ನು ಹೊಡೆದುರುಳಿಸಲಾಗಿದೆ.

ಸಮವಸ್ತ್ರದಲ್ಲೇ ರಾಮಚಂದ್ರ ರಾವ್‌ ಮಹಿಳೆಯರೊಂದಿಗೆ ನಡೆಸಿದ ಸರಸದ ವಿಡಿಯೊ ಅಸಲಿ; ತನಿಖಾ ತಂಡದಿಂದ ಬಯಲಾಯ್ತು ಸತ್ಯ

ರಾಮಚಂದ್ರ ರಾವ್‌ ಸರಸದ ವಿಡಿಯೊ ಅಸಲಿ ಎಂದ ತನಿಖಾ ತಂಡ

DGP Ramachandra Rao Case: ಐಪಿಎಸ್‌ ಅಧಿಕಾರಿ ರಾಮಚಂದ್ರ ರಾವ್ ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಅಸಲಿ ಎನ್ನುವುದು ಇದೀಗ ಸಾಬೀತಾಗಿದೆ. ನಡೆಸಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ನೇತೃತ್ವದ ಐಪಿಎಸ್​​ ಅಧಿಕಾರಿಗಳ ತಂಡದ 100 ಪುಟಗಳ ವರದಿಯಲ್ಲಿ ವಿಡಿಯೊದ ಸತ್ಯಾಸತ್ಯತೆ ಹೊರ ಬಿದ್ದಿದೆ.

Robbery Case: ಬುರ್ಖಾ ಧರಿಸಿ 80 ಲಕ್ಷ ರುಪಾಯಿ ಮೌಲ್ಯದ ಕಂಪ್ಯೂಟರ್‌ ಬಿಡಿಭಾಗಗಳನ್ನು ಕದ್ದ ಅಪ್ಪ-ಮಗ

80 ಲಕ್ಷ ರು. ಮೌಲ್ಯದ ಕಂಪ್ಯೂಟರ್‌ ಬಿಡಿಭಾಗ ಕದ್ದ ಅಪ್ಪ-ಮಗ

Bengaluru News: ಬುರ್ಖಾ ಧರಿಸಿ ಅಪ್ಪ-ಮಗನ ಜೋಡಿ ಬರೋಬ್ಬರಿ 80 ಲಕ್ಷ ರುಪಾಯಿ ಮೌಲ್ಯದ ಕಂಪ್ಯೂಟರ್‌ ಬಿಡಿ ಭಾಗಗಳನ್ನು ಕದ್ದ ಘಟನೆ ನಡೆದಿದೆ. ಸದ್ಯ ಇವರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಾಗಾವರದಲ್ಲಿ ಈ ಘಟನೆ ನಡೆದಿದೆ.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಹೋದರಿ ಜವರಮ್ಮ ನಿಧನ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಹೋದರಿ ಇನ್ನಿಲ್ಲ

Former PM HD Deve Gowda: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಸಹೋದರಿ ಜವರಮ್ಮ (88) ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದರು. ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಜವರಮ್ಮ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಬೆಂಗಳೂರಿನ 2ನೇ ವಿಮಾನ ನಿಲ್ದಾಣದ ಬಗ್ಗೆ ಡಿ.ಕೆ. ಶಿವಕುಮಾರ್‌ ಕೊಟ್ರು ಬಿಗ್‌ ಅಪ್‌ಡೇಟ್‌ Video

ಉಪಚುನಾವಣೆ ಟಿಕೆಟ್‌ ಹಂಚಿಕೆ ಬಗ್ಗೆ ಡಿ.ಕೆ. ಶಿವಕುಮಾರ್‌ ಹೇಳಿದ್ದೇನು?

DK Shivakumar: ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ʼʼರಾಜ್ಯದ ಎಲ್ಲ ಸಂಸದರನ್ನು ನಿವಾಸದಲ್ಲಿ ನಡೆದ ಸಭೆಗೆ ಆಹ್ವಾನಿಸಿದ್ದೆ. 24 ಸಂಸದರು ಆಗಮಿಸಿದ್ದರು. ಜೆಡಿಎಸ್‌ ಬಿಟ್ಟು ಬಿಜೆಪಿ, ಕಾಂಗ್ರೆಸ್‌ ಸಂಸತ್‌ ಸದಸ್ಯರು, ಸ್ವತಂತ್ರರು ಹಾಜರಿದ್ದರು. ಅವರ ಜತೆ ರಾಜ್ಯದ ಅನೇಕ ನೀರಾವರಿ ಯೋಜನೆಗಳನ್ನು ಪ್ರಸ್ತಾವಿಸಿದ್ದೇನೆ. ಸದ್ಯದಲ್ಲೇ ಸರ್ವ ಪಕ್ಷ ಸಭೆ ನಡೆಸಲು ನಿರ್ಧರಿಸಿದ್ದೇವೆ. ಕೃಷ್ಣ ನದಿ ನೀರಿನ ವಿಚಾರದಲ್ಲಿ ಚರ್ಚೆ ನಡೆಸಿದ್ದೇನೆʼʼ ಎಂದರು. ಜತೆಗೆ ಮಾಧ್ಯಮದವರು ಕೇಳಿದ ವಿವಿಧ ಪ್ರಶ್ನೆಗಳಿಗೆ ಉತ್ತರಿಸಿದರು.

Loading...