ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

Ramesh B

Senior Sub Editor

rameshballamule@gmail.com

ಗಡಿನಾಡು ಕಾಸರಗೋಡು ಜಿಲ್ಲೆಯ ಆದೂರು ಗ್ರಾಮದ ರಮೇಶ್ ಬಳ್ಳಮೂಲೆ ಉದಯವಾಣಿ ದಿನ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದರು. ಬಳಿಕ ವಿಜಯವಾಣಿ, ಅಧಾನ್ ನ್ಯೂಸ್ ಆ್ಯಪ್, ನ್ಯೂಸ್ ಆ್ಯರೋ ವೆಬ್‌ಸೈಟ್‌, ವಿಸ್ತಾರ ನ್ಯೂಸ್ ವೆಬ್‌ಸೈಟ್‌ನಲ್ಲಿ ಕಾರ್ಯ ನಿರ್ವಹಿಸಿದರು. 2024ರ ಆಗಸ್ಟ್‌ನಿಂದ ವಿಶ್ವವಾಣಿ ವೆಬ್‌ಸೈಟ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ. ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುಮಾರು 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಬರವಣಿಗೆ, ಓದು, ಸಿನಿಮಾ ವೀಕ್ಷಣೆ, ಪ್ರವಾಸ ಇವರ ನೆಚ್ಚಿನ ಹವ್ಯಾಸ.

Articles
X Down: ಸೋಶಿಯಲ್‌ ಮೀಡಿಯಾ ಎಕ್ಸ್‌ ಸ್ಥಗಿತ; ಬಳಕೆದಾರರ ಪರದಾಟ

ಸೋಶಿಯಲ್‌ ಮೀಡಿಯಾ ಎಕ್ಸ್‌ ಸ್ಥಗಿತ; ಕಾರಣವೇನು?

ಜನಪ್ರಿಯ ಸೋಶಿಯಲ್‌ ಮೀಡಿಯಾ ಫ್ಲಾಟ್‌ಫಾರ್ಮ್‌ ಎಕ್ಸ್‌ (X) ಮಂಗಳವಾರ (ನವೆಂಬರ್‌ 18) ಕೆಲಹೊತ್ತು ಸ್ಥಗಿತಗೊಂಡಿತು. ಇದರಿಂದ ಹಲವು ಮಂದಿ ಬಳಕೆದಾರರು ಪರದಾಡಿದರು. ಅನೇಕ ಬಳಕೆದಾರರು ಇತರ ಸೋಶಿಯಲ್‌ ಮೀಡಿಯಾ ಫ್ಲಾಟ್‌ಫಾರ್ಮ್‌ ಮೂಲಕ ಈ ಬಗ್ಗೆ ಪ್ರಶ್ನಿಸಿದ್ದಾರೆ.

IB Recruitment 2025: ಗುಪ್ತಚರ ಇಲಾಖೆಯಲ್ಲಿದೆ 362 ಹುದ್ದೆ; 10ನೇ ತರಗತಿ ಪಾಸಾದವರು ಅಪ್ಲೈ ಮಾಡಿ

10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; IBಯಲ್ಲಿದೆ 362 ಹುದ್ದೆ

Job Guide: ಭಾರತ ಸರ್ಕಾರದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 362 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ ಹುದ್ದೆ ಇದಾಗಿದ್ದು,10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ನವೆಂಬರ್‌ 22ರಿಂದ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಡಿಸೆಂಬರ್‌ 14.

ಚಲಿಸುತ್ತಿದ್ದ ಆಂಬ್ಯುಲೆನ್ಸ್‌ಗೆ ಬೆಂಕಿ; 1 ದಿನದ ನವಜಾತ ಶಿಶು ಸೇರಿ ನಾಲ್ವರು ಸಜೀವ ದಹನ

ಆಂಬ್ಯುಲೆನ್ಸ್‌ಗೆ ಬೆಂಕಿ; ನವಜಾತ ಶಿಶು ಸೇರಿ ನಾಲ್ವರು ಸಜೀವ ದಹನ

ಗುಜರಾತ್‌ನಲ್ಲಿ ನವೆಂಬರ್‌ 18ರಂದು ಭೀಕರ ದುರಂತವೊಂದು ನಡೆದಿದ್ದು, ಚಲಿಸುತ್ತಿದ್ದ ಆಂಬ್ಯಲೆನ್ಸ್‌ಗೆ ಬೆಂಕಿ ಹತ್ತಿಕೊಂಡು ನವಜಾತ ಶಿಶು, ವೈದ್ಯ ಸೇರಿ ನಾಲ್ವರು ಸಜೀವ ದಹನವಾಗಿದ್ದಾರೆ. ಅರವಲ್ಲಿ ಜಿಲ್ಲೆಯ ಮೋಡಸಾ ಪಟ್ಟಣದಲ್ಲಿ ಈ ದುರಂತ ನಡೆದಿದೆ ಎಂದು ಮೂಲಗಳು ತಿಳಿಸಿವೆ.

Saudi Arabia Bus Accident: ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ; ಹೈದರಾಬಾದ್‌ನ ಒಂದೇ ಕುಟುಂಬದ 18 ಮಂದಿ ಸಾವು

ಮದೀನಾ ರಸ್ತೆ ಅಪಘಾತ; ಹೈದರಾಬಾದ್‌ನ ಒಂದೇ ಕುಟುಂಬದ 18 ಮಂದಿ ಸಾವು

ಸೌದಿ ಅರೇಬಿಯಾದಲ್ಲಿ ನವೆಂಬರ್‌ 17ರ ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 42 ಮಂದಿ ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿದ್ದಾರೆ. ಮೃತರ ಪೈಕಿ ಹೈದರಾಬಾದ್‌ನ ಒಂದೇ ಕುಟುಂಬದ 18 ಮಂದಿ ಸೇರಿದ್ದಾರೆ.

Delhi Blast: ದೆಹಲಿ ಬಾಂಬ್‌ ಸ್ಫೋಟದ ಮಹತ್ವದ ರಹಸ್ಯ ಬಯಲು; ನೇಪಾಳದಿಂದ ಸೆಕೆಂಡ್‌ ಹ್ಯಾಂಡ್‌ ಮೊಬೈಲ್‌ ಖರೀದಿಸಿದ್ದ ಉಗ್ರರು

ನೇಪಾಳದಿಂದ ಸೆಕೆಂಡ್‌ ಹ್ಯಾಂಡ್‌ ಮೊಬೈಲ್‌ ಖರೀದಿಸಿದ್ದ ಉಗ್ರರು

ನವೆಂಬರ್‌ 10ರಂದು ನಡೆದ ದೆಹಲಿ ಕೆಂಪು ಕೋಟೆ ಸಮೀಪದ ಕಾರ್‌ ಬಾಂಬ್‌ ಸ್ಫೋಟಕ್ಕೆ ಸಂಬಂಧಿಸಿದ ಮಹತ್ವದ ವಿವರ ಹೊರ ಬಿದ್ದಿದೆ. ಈ ಸಂಚಿನಲ್ಲಿ ಭಾಗಿಯಾದ ಉಗ್ರರು ಸಂವಹನಕ್ಕಾಗಿ ನೇಪಾಳದಿಂದ ಸೆಕೆಂಡ್‌ ಹ್ಯಾಂಡ್‌ ಮೊಬೈಲ್‌ ಫೋನ್‌ ಮತ್ತು ಉತ್ತರ ಪ್ರದೇಶದ ಕಾನ್ಪುರದಿಂದ ಸಿಮ್‌ ಖರೀದಿಸಿರುವ ವಿವರ ಗೊತ್ತಾಗಿದೆ.

AIIMS Recruitment 2025: ಏಮ್ಸ್‌ನಲ್ಲಿದೆ ಬರೋಬ್ಬರಿ  1,383 ಹುದ್ದೆ; 10, 12ನೇ ತರಗತಿ, ಐಟಿಐ ಪಾಸಾದವರು ಅಪ್ಲೈ ಮಾಡಿ

ಏಮ್ಸ್‌ನಲ್ಲಿದೆ ಬರೋಬ್ಬರಿ 1,383 ಹುದ್ದೆ

Job Guide: ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸಸ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 1,383 ಹುದ್ದೆಗಳಿವೆ. ಪದವಿ, 12ನೇ ತರಗತಿ, ಡಿಪ್ಲೋಮಾ ಮುಂತಾದ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಲಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಡಿಸೆಂಬರ್‌ 2.

Ricin Terror Plot: ಉತ್ತರ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ದಳ ಅಧಿಕಾರಿಗಳಿಂದ ದಾಳಿ; ಐಸಿಸ್ ಧ್ವಜ  ಪತ್ತೆ

ಭಯೋತ್ಪಾದನಾ ನಿಗ್ರಹ ದಳ ಅಧಿಕಾರಿಗಳಿಂದ ಮಹತ್ವದ ದಾಖಲೆ ವಶ

ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಉತ್ತರ ಪ್ರದೇಶದಲ್ಲಿ ದಾಳಿ ನಡೆಸಿದೆ. ಈ ವೇಳೆ ಐಸಿಸ್ ಸಂಬಂಧಿತ ಭಯೋತ್ಪಾದಕ ಚಟುವಟಿಕೆಯಲ್ಲಿ ಬಂಧಿತನಾಗಿರುವ ಮೊಹಮ್ಮದ್ ಸುಹೈಲ್ ಖಾನ್ ಮನೆ ಮಹತ್ವದ ದಾಖಲೆ ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುವ ಜನತೆಯೇ ಟಾರ್ಗೆಟ್‌; ಉಗ್ರ ಜಾಲವನ್ನು ವಿಸ್ತರಿಸಲು ಸೋಶಿಯಲ್‌ ಮೀಡಿಯಾ ಬಳಸುತ್ತಿದ್ದ ಆತ್ಮಹತ್ಯಾ ಬಾಂಬರ್‌ ಉಮರ್‌

ಸೋಶಿಯಲ್‌ ಮೀಡಿಯಾ ಮೂಲಕ ಉಗ್ರ ಜಾಲ ವಿಸ್ತರಿಸುತ್ತಿದ್ದ ಉಮರ್‌

ದೆಹಲಿ ಸ್ಫೋಟದ ರೂವಾರಿ, ಆತ್ಮಹತ್ಯಾ ಬಾಂಬರ್‌ ಡಾ. ಉಮರ್‌ ಉನ್‌ ನಬಿ ಆಲಿಯಾಸ್‌ ಉಮರ್‌ ಮೊಹಮ್ಮದ್‌ ಹೇಗೆ ಯುವ ಜನತೆಯನ್ನು ಬ್ರೈನ್‌ ವಾಷ್‌ ಮಾಡುತ್ತಿದ್ದ ಎನ್ನುವ ವಿಚಾರ ತನಿಖೆಯಿಂದ ಬೆಳಕಿಗೆ ಬರುತ್ತಿದೆ. ಸೋಶಿಯಲ್‌ ಮೀಡಿಯಾವನ್ನು ಬಳಸಿ ಯುವ ಜನತೆಯನ್ನು ಜೈಶ್‌-ಎ-ಮೊಹಮ್ಮದ್‌ ಗುಂಪಿನ ಸ್ಲೀಪರ್‌ ಸೆಲ್‌ಗಳನ್ನಾಗಿ ಮಾಡಲು ಯೋಜನೆ ರೂಪಿಸಿದ್ದ ಎಂದು ಅದಿಕಾರಿಗಳು ವಿವರಿಸಿದ್ದಾರೆ.

Saudi Arabia Bus Accident: ಮದೀನಾದಲ್ಲಿ ಭೀಕರ ರಸ್ತೆ ಅಪಘಾತ; ಭಾರತದ 42 ಮಂದಿ ಸಾವು

ಮದೀನಾದಲ್ಲಿ ಭೀಕರ ರಸ್ತೆ ಅಪಘಾತ; ಭಾರತದ 42 ಮಂದಿ ಸಾವು

Bus Accident in Madina: ಮೆಕ್ಕಾದಿಂದ ಮದೀನಾಕ್ಕೆ ತೆರಳುತ್ತಿದ್ದ ಬಸ್‌ ಡೀಸೆಲ್‌ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಕನಿಷ್ಠ 42 ಪ್ರಯಾಣಿಕರು ಮೃತಪಟ್ಟಿದ್ದಾರೆ ಮುಂದು ಮೂಲಗಳು ತಿಳಿಸಿವೆ. ನವೆಂಬರ್‌ 17ರ ಮುಂಜಾನೆ 1:30ರ ಸುಮಾರಿಗೆ ಮುಫ್ರಿಹತ್‌ನಲ್ಲಿ ಈ ಭೀಕರ ಅಪಘಾತ ನಡೆದಿದೆ.

43 ವಿವಿಐಪಿ ಝೋನ್‌ ಮೂಲಕ  ಕಾರ್‌ ಸಾಗಿದರೂ ಸ್ಫೋಟಕ ಪತ್ತೆಯಾಗಿಲ್ಲ; ಭದ್ರತಾ ಲೋಪ ದೆಹಲಿ ಬಾಂಬರ್‌ ಉಮರ್‌ಗೆ ನೆರವಾಯಿತೆ?

43 ವಿವಿಐಪಿ ಝೋನ್‌ ಮೂಲಕ ಕಾರ್‌ ಸಾಗಿದರೂ ಸ್ಫೋಟಕ ಪತ್ತೆಯಾಗಿಲ್ಲ

ನವೆಂಬರ್‌ 10ರಂದು ಸಂಭವಿಸಿದ ದೆಹಲಿಯ ಕೆಂಪು ಕೋಟೆ ಬಳಿಯ ಕಾರ್‌ ಸ್ಫೋಟಕ್ಕೆ ಸಂಬಂಧಿಸಿದ ಒಂದೊಂದೇ ವಿಚಾರ ಬೆಳಕಿಗೆ ಬರುತ್ತಿದೆ. ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆಗೆ ಸೇರಿದ, ಹರಿಯಾಣದ ಫರಿದಾಬಾದ್‌ ಅಲ್‌ ಫಲಾಹ್‌ ವಿಶ್ವ ವಿದ್ಯಾನಿಲಯದ ವೈದ್ಯ ಡಾ. ಉಮರ್‌ ಮೊಹಮ್ಮದ್‌ ಚಲಾಯಿಸುತ್ತಿದ್ದ ಹ್ಯುಂಡೈ ಐ20 ಕಾರ್‌ ಸ್ಫೋಟಿಸಿ 13 ಮಂದಿಯ ಸಾವಿಗೆ ಕಾರಣವಾಗಿದ್ದ. ಈ ಕಾರ್‌ ಸುಮಾರು 43 ವಿವಿಐಪಿ ವಲಯವನ್ನು ದಾಟಿ ಬಂದರೂ ಭದ್ರತಾ ಪಡೆಗಳ ಕಣ್ಣಿಗೆ ಬೀಳಲಿಲ್ಲವೇ ಎನ್ನುವ ಅನುಮಾನ ಕಾಡುತ್ತಿದೆ.

Red Fort Blast: ದೆಹಲಿ ಬಾಂಬ್‌ ಸ್ಫೋಟದ ರೂವಾರಿ ಉಮರ್‌ನ ಸಹಾಯಕನನ್ನು ಬಂಧಿಸಿದ ಎನ್‌ಐಎ

ದೆಹಲಿ ಬಾಂಬ್‌ ಸ್ಫೋಟದ ರೂವಾರಿ ಉಮರ್‌ನ ಸಹಾಯಕನ ಅರೆಸ್ಟ್‌

Delhi Blast: ದೆಹಲಿ ಕೆಂಪು ಕೋಟೆ ಬಳಿ ನವೆಂಬರ್‌ 10ರಂದು ನಡೆದ ಬಾಂಬ್‌ ಸ್ಫೋಟ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ ಆತ್ಮಹತ್ಯಾ ಬಾಂಬರ್‌ ಡಾ. ಉಮರ್‌ ಉನ್‌ ನಬಿಗೆ ಸಹಾಯ ಮಾಡಿದ ಕಾಶ್ಮೀರದ ವ್ಯಕ್ತಿ ಅಮೀರ್‌ ರಶೀದ್‌ ಅಲಿಯನ್ನು ಬಂಧಿಸಿದೆ. ಸ್ಫೋಟಗೊಂಡ ಹ್ಯುಂಡೈ ಐ20 ಕಾರು ಈತನ ಹೆಸರಿನಲ್ಲಿ ನೋಂದಣಿಯಾಗಿತ್ತು.

ಬಿಹಾರದಲ್ಲಿ ಅಧಿಕಾರಕ್ಕೆ ಬರಲು ಎನ್‌ಡಿಎ ಅಡ್ಡ ದಾರಿ ಹಿಡಿಯಿತಾ? ವಿಶ್ವ ಬ್ಯಾಂಕ್‌ನ 14,000 ಕೋಟಿ ರೂ. ದುರ್ಬಳಕೆ ಆರೋಪ

ಬಿಹಾರದಲ್ಲಿ ಅಧಿಕಾರಕ್ಕೆ ಬರಲು ಅಡ್ಡ ದಾರಿ ಹಿಡಿದ ಎನ್‌ಡಿಎ?

Pavan Verma: ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬಂದಿದ್ದು ಎನ್‌ಡಿಎ 202 ಕ್ಷೇತ್ರಗಳಲ್ಲಿ ಬರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಮರಳಿದೆ. ಈ ಮಧ್ಯೆ ಕಾಂಗ್ರೆಸ್‌ ವೋಟ್‌ ಚೋರಿ ಆರೋಪ ಮಾಡಿದೆ. ಇತ್ತ ಜನ ಸುರಾಜ್‌ ಪಾರ್ಟಿ ವಿಶ್ವ ಬ್ಯಾಂಕ್‌ ಅನುದಾನವನ್ನು ಕೇಂದ್ರ ಬಳಸಿದೆ ಎಂದು ದೂರಿದೆ.

ದೆಹಲಿ ಬಾಂಬ್‌ ಸ್ಫೋಟದ ಒಂದೊಂದೇ ರಹಸ್ಯ ಬೆಳಕಿಗೆ; ಬಾಂಬರ್‌ ಹರಿಯಾಣದ ನುಹ್‌ನ ಬಾಡಿಗೆ ಮನೆಯಲ್ಲಿದ್ದ ವಿಚಾರ ಬಯಲು

ದೆಹಲಿ ಬಾಂಬರ್‌ ಬಾಡಿಗೆ ಮನೆಯಲ್ಲಿದ್ದ ವಿಚಾರ ಬಯಲು

Delhi Blast: ನವೆಂಬರ್‌ 10ರಂದು ದೆಹಲಿಯ ಕೆಂಪು ಕೋಟೆ ಸಮೀಪ ಕಾರು ಸ್ಫೋಟಗೊಂಡ ಘಟನೆಗೆ ಸಂಬಂಧಿಸಿದಂತೆ ಒಂದೊಂದೇ ವಿಚಾರ ಬೆಳಕಿಗೆ ಬರುತ್ತಿದೆ. ದೆಹಲಿ ಸ್ಫೋಟಕ್ಕೂ ಕೆಲವೇ ದಿನಗಳ ಮುನ್ನ ಬಾಂಬರ್‌ ಡಾ. ಉಮರ್‌ ಮೊಹಮ್ಮದ್‌ ಹರಿಯಾಣದ ನುಹ್‌ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎನ್ನುವುದು ತನಿಖೆ ವೇಳೆ ಗೊತ್ತಾಗಿದೆ.

ಶಾಲೆಗೆ 10 ನಿಮಿಷ ತಡವಾಗಿ ಬಂದ ಬಾಲಕಿಗೆ ಘೋರ ಶಿಕ್ಷೆ; ನೋವಿನಿಂದ ಒದ್ದಾಡಿ ಪ್ರಾಣಬಿಟ್ಟ ವಿದ್ಯಾರ್ಥಿನಿ: ಮಕ್ಕಳ ದಿನಾಚರಣೆಯಂದೇ ದುರಂತ

ಶಾಲೆಗೆ ತಡವಾಗಿ ಬಂದ ಬಾಲಕಿಗೆ ಶಿಕ್ಷೆ; ಪ್ರಾಣಬಿಟ್ಟ ವಿದ್ಯಾರ್ಥಿನಿ

Maharashtra News: ಕೇವಲ 10 ನಿಮಿಷ ತಡವಾಗಿ ಶಾಲೆಗೆ ಆಗಮಿಸಿದ 12 ವರ್ಷದ ವಿದ್ಯಾರ್ಥಿನಿಗೆ 100 ಬಸ್ಕಿ ಹೊಡೆಯುವ ಕಠಿಣ ನೀಡಿದ್ದರಿಂದ ಆಕೆ ಮೃತಪಟ್ಟಿದ್ದಾಳೆ. ಮೃತ ಬಾಲಕಿಯನ್ನು 6ನೇ ತರಗತಿಯ ವಿದ್ಯಾರ್ಥಿನಿ ಕಾಜಲ್‌ ಗೊಂಡ ಆಲಿಯಾಸ್‌ ಅಂಶಿಕಾ ಎಂದು ಗುರುತಿಸಲಾಗಿದೆ. ವಸಾಯಿಯ ಶ್ರೀ ಹನುಮಂತ ವಿದ್ಯಾ ಮಂದಿರ ಪ್ರೌಢ ಶಾಲೆಯಲ್ಲಿ ಈ ಅಮಾನುಷ ಘಟನೆ ನಡೆದಿದೆ.

ನೌಗಾಂ ಪೊಲೀಸ್ ಠಾಣೆಯಲ್ಲಿ ಸ್ಫೋಟ ಸಂಭವಿಸಿದ್ದು ಹೇಗೆ? ಫರಿದಾಬಾದ್‌ನಲ್ಲಿ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರಕ್ಕೆ ಸಾಗಿಸಿದ್ದೇಕೆ?

ನೌಗಾಂ ಪೊಲೀಸ್ ಠಾಣೆಯಲ್ಲಿ ಸ್ಫೋಟ ಸಂಭವಿಸಿದ್ದು ಹೇಗೆ?

Nowgam Blast: ಭಯೋತ್ಪಾದಕ ಚಟುವಟಿಕೆಗಳ ವಿರುದ್ಧದ ಕಾರ್ಯಾಚರಣೆ ವೇಳೆ ಜಪ್ತಿ ಮಾಡಿ ಸಂಗ್ರಹಿಸಿ ಇಟ್ಟಿದ್ದ ಸ್ಫೋಟಕಗಳ ಪರಿಶೀಲನೆ ವೇಳೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿರುವ ನೌಗಾಂ ಪೊಲೀಸ್ ಠಾಣೆಯಲ್ಲಿ ಶುಕ್ರವಾರ (ನವೆಂಬರ್‌ 14) ತಡರಾತ್ರಿ ಅವು ಸಿಡಿದು 9 ಮಂದಿ ಬಲಿಯಾಗಿದ್ದಾರೆ. ಇದು ಉದ್ದೇಶಪೂರ್ವಕ ಕೃತ್ಯವಲ್ಲ ಎನ್ನುವುದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ.

Bihar Assembly Election Results 2025: ಬಿಹಾರ ಚುನಾವಣೆ ಟ್ರೆಂಡ್‌ ನಿಖರವಾಗಿ ಗುರುತಿಸಿದ್ದ ಸಮೀಕ್ಷೆಗಳು

ಬಿಹಾರ ಚುನಾವಣೆ ಟ್ರೆಂಡ್‌ ನಿಖರವಾಗಿ ಗುರುತಿಸಿದ್ದ ಸಮೀಕ್ಷೆಗಳು

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎಗೆ ಬಹುಮತ ಗಳಿಸಲಿದೆ ಎಂದು ಸಮೀಕ್ಷೆಯಂತೆಯೇ ಫಲಿತಾಂಶ ಹೊರ ಬಿದ್ದಿದೆ. ಬಿಜೆಪಿ-ಜೆಡಿಯು ನೇತೃತ್ವದಲ್ಲಿ ಎನ್‌ಡಿಎ ಒಟ್ಟು 202 ಸ್ಥಾನಗಳಲ್ಲಿ ಜಯ ಗಳಿಸಿ. ಕಾಮಾಖ್ಯಾ ಅನಾಲಿಟಿಕ್ಸ್‌ 167-187 ಸೀಟುಗಳನ್ನು ಎನ್‌ಡಿಎ ಗೆಲ್ಲಲಿದೆ ಎಂದು ತಿಳಿಸಿತ್ತು.

Delhi Blast: ದೆಹಲಿ ಬಾಂಬ್‌ ಸ್ಫೋಟದ ರೂವಾರಿ ಡಾ. ಉಮರ್‌ನ ಮತ್ತೊಂದು ವಿಡಿಯೊ ಬೆಳಕಿಗೆ; ಮೊಬೈಲ್‌ ಅಂಗಡಿಗೆ ಹೋಗಿದ್ದೇಕೆ?

ದೆಹಲಿ ಬಾಂಬ್‌ ಸ್ಫೋಟದ ರೂವಾರಿ ಡಾ. ಉಮರ್‌ನ ಮತ್ತೊಂದು ವಿಡಿಯೊ ಬೆಳಕಿಗೆ

Dr. Umar Mohammad: ದೆಹಲಿ ಕೆಂಪು ಕೋಟೆ ಬಳಿ ನವೆಂಬರ್‌ 10ರಂದು ನಡೆದ ಕಾರ್‌ ಸ್ಫೋಟದಲ್ಲಿ 12 ಮಂದಿ ಬಲಿಯಾಗಿರುವ ಆಘಾತಕಾರಿ ಘಟನೆಯಿಂದ ಇನ್ನೂ ದೇಶ ಚೇತರಿಸಿಕೊಂಡಿಲ್ಲ. ಇದೀಗ ಉಗ್ರರ ಈ ಕೃತ್ಯದ ಒಂದೊಂದೇ ರಹಸ್ಯ ಬಯಲಾಗುತ್ತಿದೆ. ದಾಳಿಯ ರೂವಾರಿ ಜಮ್ಮು ಮತ್ತು ಕಾಶ್ಮೀರ ಮೂಲದ ವೈದ್ಯ ಡಾ. ಉಮರ್‌ ಮೊಹಮ್ಮದ್‌ ಮುಖವನ್ನು ಸ್ಪಷ್ಟವಾಗಿ ತೋರಿಸುವ ಸಿಸಿಟಿವಿ ದೃಶ್ಯಾವಳಿ ಹೊರ ಬಿದ್ದಿದೆ.

ಕಾಂಗ್ರೆಸ್‌ ಎಂದರೆ ಎಂಎಂಸಿ-ಮುಸ್ಲಿಂ ಲೀಗ್‌ ಮಾವೋಯಿಸ್ಟ್‌ ಕಾಂಗ್ರೆಸ್‌: ಬಿಹಾರ ವಿಧಾನಸಭೆ ಫಲಿತಾಂಶ ಬೆನ್ನಲ್ಲೇ ಮೋದಿ ಹೊಸ ವ್ಯಾಖ್ಯಾನ

ಬಿಹಾರ ವಿಧಾನಸಭೆ ಫಲಿತಾಂಶ ಬೆನ್ನಲ್ಲೇ ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

Narendra Modi: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 202ಕ್ಕಿಂತ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಈ ವೇಳೆ ಕಾಂಗ್ರೆಸ್‌ ನೇತೃತ್ವದ ಮಹಘಟಬಂಧನ್‌ ಮೈತ್ರಿಕೂಟದ ವಿರುದ್ದ ವಾಗ್ದಾಳಿ ನಡೆಸಿದರು.

Tejashwi Yadav: ಕೊನೆಗೂ ಗೆಲುವಿನ ನಿಟ್ಟುಸಿರು ಬಿಟ್ಟ ತೇಜಸ್ವಿ ಯಾದವ್‌; ಬಿಜೆಪಿ ವಿರುದ್ಧ 14 ಸಾವಿರ ಮತಗಳಿಂದ ಜಯ

ಬಿಜೆಪಿ ಅಭ್ಯರ್ಥಿ ವಿರುದ್ಧ ಗೆದ್ದ ಆರ್‌ಜೆಡಿಯ ತೇಜಸ್ವಿ ಯಾದವ್‌

Bihar Election Results 2025: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯದತ್ತ ದಾಪುಗಾಲು ಇರಿಸಿದ್ದು, ಮಹಾಘಟಬಂಧನ್‌ ಸೋಲಿನತ್ತ ಮುಖ ಮಾಡಿದೆ. 243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಮ್ಯಾಜಿಕ್‌ ಸಂಖ್ಯೆ 122. ಎನ್‌ಡಿಎ ಈಗಾಗಲೇ 202 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮಧ್ಯೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಕೊನೆಗೂ ಜಯಗಳಿಸಿದ್ದು, ಕಾರ್ಯಕರ್ತರಿಗೆ ಕೊಂಚ ಸಮಾಧಾನ ತಂದಿದೆ.

Maithili Thakur: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆನ್‌ ಝಿ ಸಂಚಲನ; ಬಿಜೆಪಿಯ 25 ವರ್ಷದ ಗಾಯಕಿ ಮೈಥಿಲಿ ಠಾಕೂರ್‌ಗೆ ಭರ್ಜರಿ ಜಯ

ಬಿಹಾರ ವಿಧಾನಸಭಾ ಚುನಾವಣೆ; ಗಾಯಕಿ ಮೈಥಿಲಿ ಠಾಕೂರ್‌ಗೆ ಭರ್ಜರಿ ಜಯ

Bihar Election 2025 Results: ದೇಶದ ಕೂತೂಹಲ ಕೆರಳಿಸಿದ ಬಿಹಾರ ವಿಧಾನಸಭಾ ಚುನಾವಣೆಯ ಪಲಿತಾಂಶ ಹೊರ ಬೀಳುತ್ತಿದ್ದು, ಬಿಜೆಪಿ ಅಭ್ಯರ್ಥಿ 25 ವರ್ಷದ ಗಾಯಕಿ ಮೈಥಿಲಿ ಠಾಕೂರ್‌ ಬರೋಬ್ಬರಿ 12 ಸಾವಿರ ಮತಗಳಿಂದ ಜಯ ಗಳಿಸಿದ್ದಾರೆ. ಆ ಮೂಲಕ ಬಿಹಾರದ ಅತೀ ಕಿರಿಯ ಶಾಸಕಿ ಎನಿಸಿಕೊಂಡಿದ್ದಾರೆ. ಅಲಿನಗರ್‌ ಕ್ಷೇತ್ರದಿಂದ ಕಣಕ್ಕಿಳಿದ ಅವರು ಮೊದಲ ಪ್ರಯತ್ನದಲ್ಲೇ ತಮ್ಮ ನೇರ ಪ್ರತಿಸ್ಪರ್ಧಿ ಆರ್‌ಜೆಡಿಯ ಬಿನೋದ್‌ ಮಿಶ್ರಾ ಅವರನ್ನು ಸೋಲಿಸಿದ್ದಾರೆ.

Chennai Aircraft Crash: ತಮಿಳುನಾಡಿನಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ

ಚೆನ್ನೈಯಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ

ಭಾರತೀಯ ವಾಯುಪಡೆಗೆ ಸೇರಿದ Pilatus PC-7 ವಿಮಾನ ತಮಿಳುನಾಡಿನಲ್ಲಿ ಪತನವಾಗಿದೆ. ಚೆಂಗಳಪಟ್ಟು ಜಿಲ್ಲೆಯ ತಾಂಬರಮ್‌ನಲ್ಲಿ ವಿಮಾನ ಪತನವಾಗಿದ್ದು, ಪೈಲಟ್‌ ಅಪಾಯವಿಲ್ಲದೆ ಪಾರಾಗಿದ್ದಾರೆ. ದೈನಂದಿನ ತರಬೇತಿ ವೇಳೆ ಈ ಅವಘಡ ಸಂಭವಿಸಿದೆ. ಸದ್ಯ ವಿಮಾನ ಪತನವಾದ ದೃಶ್ಯ ವೈರಲ್‌ ಆಗಿದೆ.

Chirag Paswan: ಬಿಹಾರದಲ್ಲಿ ಎನ್‌ಡಿಎಗೆ ಬಹುಮತ; ಚಿರಾಗ್‌ ಪಾಸ್ವಾನ್‌ಗೆ ಉಪಮುಖ್ಯಮಂತ್ರಿ ಪಟ್ಟ?

ಬಿಹಾರದ ಮುಂದಿನ ಉಪಮುಖ್ಯಮಂತ್ರಿ ಚಿರಾಗ್‌ ಪಾಸ್ವಾನ್‌?

Bihar Election 2025 Results: ದೇಶದ ಗಮನ ಸೆಳೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಯಂತೆ ಎನ್‌ಡಿಎ ಭರ್ಜರಿ ಬಹುಮತದತ್ತ ಸಾಗಿದೆ. ಚುನಾವಣೋತ್ತರ ಸಮೀಕ್ಷೆಯ ಭವಿಷ್ಯದಂತೆ ಎನ್‌ಡಿಎ ಮ್ಯಾಜಿಕ್‌ ಮಾಡುವಲ್ಲಿ ಸಫಲವಾಗಿದ್ದು, ಈಗಾಗಲೇ 202 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕೇಂದ್ರ ಸಚಿವ, ಯುವ ನಾಯಕ ಚಿರಾಗ್‌ ಪಾಸ್ವಾನ್‌ ಅವರ ಲೋಕಜನಶಕ್ತಿ ಪಾರ್ಟಿ (ರಾಮ್‌ ವಿಲಾಸ್)‌ ಬಿಹಾರದ 4ನೇ ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು ಉಪಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಸಲ್ಲಿಸುವ ಸಾಧ್ಯತೆ ಇದೆ.

Bihar Election 2025 Results: ಬಿಹಾರಲ್ಲಿ ಎನ್‌ಡಿಎ ಸ್ಪಷ್ಟ ಬಹುಮತದತ್ತ; ಸಂಜೆ ದೆಹಲಿ ಬಿಜೆಪಿ ಕಚೇರಿಗೆ ಮೋದಿ ಭೇಟಿ

ಬಿಹಾರ ಚುನಾವಣೆ ಫಲಿತಾಂಶ; ಸಂಜೆ ದೆಹಲಿ ಬಿಜೆಪಿ ಕಚೇರಿಗೆ ಮೋದಿ ಭೇಟಿ

ದೇಶದ ಕುತೂಹಲ ಕೆರಳಿಸಿದ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬರುತ್ತಿದ್ದು, ಎನ್‌ಡಿಎ ಸ್ಪಷ್ಟ ಬಹುಮತದತ್ತ ಸಾಗಿದೆ. ಅಧಿಕಾರ ಉಳಿಸಿಕೊಳ್ಳುವತ್ತ ದಿಟ್ಟ ಹೆಜ್ಜೆ ಇಟ್ಟಿದ್ದು, ಸದ್ಯದ ಮಾಹಿತಿ ಪ್ರಕಾರ ಎನ್‌ಡಿಎ 200ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತ್ತ ಮಹಾಘಟಬಂಧನ್‌ ಕೇವಲ 39 ಸೀಟ್‌ಗಳಲ್ಲಿ ಮುಂದಿದೆ. ಸಂಜೆ 7 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಗೆ ಭೇಟಿ ನೀಡುವ ನಿರೀಕ್ಷೆ ಇದೆ.

Saalumarada Thimmakka Death: ಮರಗಳನ್ನೇ ಮಕ್ಕಳೆಂದು ಪ್ರೀತಿಸಿದ ಸಾಲುಮರದ ತಿಮ್ಮಕ್ಕ

ಮರಗಳನ್ನೇ ಮಕ್ಕಳೆಂದು ಪ್ರೀತಿಸಿದ ಸಾಲುಮರದ ತಿಮ್ಮಕ್ಕ

ಸಾಲುಮರದ ತಿಮ್ಮಕ್ಕ ನಿಧನ: ಮರಗಳನ್ನೇ ಮಕ್ಕಳೆಂದು ಪ್ರೀತಿಸುತ್ತಿದ್ದ ಖ್ಯಾತ ಪರಿಸರವಾದಿ ಸಾಲುಮರದ ತಿಮ್ಮಕ್ಕ ನಿಧನ ಹೊಂದಿದರು. ಅವರಿಗೆ 114 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ವೃಕ್ಷಮಾತೆ ಎಂದೇ ಖ್ಯಾತಿ ಪಡೆದ ಅವರು ರಸ್ತೆ ಬದಿಯಲ್ಲಿ ನೂರಾರು ಸಂಖ್ಯೆಯಲ್ಲಿ ಸಾಲು ಗಿಡಗಳನ್ನು ನೆಡುವ ಮೂಲಕ ಪರಿಸರಕ್ಕೆ ಗಣನೀಯ ಕೊಡುಗೆ ನೀಡಿದ್ದಾರೆ.

Loading...