ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ 40ನೆಯ ಜನ್ಮವರ್ಧಂತಿ
ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ಕೇವಲ ಧಾರ್ಮಿಕ ಮುಖಂಡರಾಗಿರದೆ, ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅಪಾರ ದೂರದೃಷ್ಟಿಯುಳ್ಳ ಚೇತನ. ತಮ್ಮ 12-13ನೆಯ ವಯಸ್ಸಿನಲ್ಲೇ ಜನಸೇವೆಯ ಗುರಿಯನ್ನು ಇಟ್ಟುಕೊಂಡು ಗುರುಕುಲಕ್ಕೆ ಪ್ರವೇಶಿಸಿದ ಇವರು, ಇದೇ 'ಜನಾರ್ದನ ಸೇವೆ' ಎಂದು ಭಾವಿಸಿ ಸಮಾಜವನ್ನು ಮುನ್ನಡೆಸುತ್ತಿದ್ದಾರೆ. ಆರಂಭದಲ್ಲಿ ಸಣ್ಣ ಗುಡಿಸಲಾಗಿದ್ದ ಮಠವನ್ನು, ಭಕ್ತರ ಪ್ರೀತಿ-ವಿಶ್ವಾಸ ಮತ್ತು ಸ್ವಯಂಪ್ರೇರಿತ ಬೆಂಬಲದೊಂದಿಗೆ ಇಂದು ಅಭಿವೃದ್ಧಿಯ ಕೇಂದ್ರವನ್ನಾಗಿ ರೂಪಿಸಿದ್ದಾರೆ.