ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Ramesh Ballamoole

Senior Sub Editor

[email protected]

ಗಡಿನಾಡು ಕಾಸರಗೋಡು ಜಿಲ್ಲೆಯ ಆದೂರು ಗ್ರಾಮದ ರಮೇಶ್ ಬಳ್ಳಮೂಲೆ ಉದಯವಾಣಿ ದಿನ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದರು. ಬಳಿಕ ವಿಜಯವಾಣಿ, ಅಧಾನ್ ನ್ಯೂಸ್ ಆ್ಯಪ್, ನ್ಯೂಸ್ ಆ್ಯರೋ ವೆಬ್‌ಸೈಟ್‌, ವಿಸ್ತಾರ ನ್ಯೂಸ್ ವೆಬ್‌ಸೈಟ್‌ನಲ್ಲಿ ಕಾರ್ಯ ನಿರ್ವಹಿಸಿದರು. 2024ರ ಆಗಸ್ಟ್‌ನಿಂದ ವಿಶ್ವವಾಣಿ ವೆಬ್‌ಸೈಟ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ. ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುಮಾರು 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಬರವಣಿಗೆ, ಓದು, ಸಿನಿಮಾ ವೀಕ್ಷಣೆ, ಪ್ರವಾಸ ಇವರ ನೆಚ್ಚಿನ ಹವ್ಯಾಸ.

Articles
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆಂದು ಒಂದೂವರೆ ವರ್ಷದ ಕಂದಮ್ಮನನ್ನು ನೆಲಕ್ಕೆ ಕುಕ್ಕಿ ಕುಕ್ಕಿ ಕೊಂದ ಪಾಪಿ; ಘೋರ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ಒಂದೂವರೆ ವರ್ಷದ ಕಂದಮ್ಮನನ್ನು ನೆಲಕ್ಕೆ ಕುಕ್ಕಿ ಕುಕ್ಕಿ ಕೊಂದ ಪಾಪಿ

Firozabad Horror: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದೆ ಎಂದು ಪಾಪಿಯೊಬ್ಬ ಒಂದೂವರೆ ವರ್ಷದ ಬಾಲಕನನ್ನು ನೆಲಕ್ಕೆ ಕುಕ್ಕಿ ಕುಕ್ಕಿ ಕೊಂದಿದ್ದಾನೆ. ಉತ್ತರ ಪ್ರದೇಶದ ಫಿರೋಝಾಬಾದ್‌ನಲ್ಲಿ ಈ ಘಟನೆ ನಡೆದಿದೆ. ಮಗುವನ್ನು ಕೊಲೆಗೈದ ವ್ಯಕ್ತಿ ಈ ಬಾಲಕನ ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ.

ಇದು ಅಪರೂಪದ ಗಜ ಪ್ರೇಮ ಪ್ರಸಂಗ; ಉತ್ತರಾಖಂಡದಲ್ಲಿ ಕಾಡಾನೆಗಳೊಂದಿಗೆ ʼಓಡಿ ಹೋದʼ ಕರ್ನಾಟಕದ ಸಾಕಾನೆಗಳು!

ಉತ್ತರಾಖಂಡದಲ್ಲಿ ಕಾಡಾನೆಗಳೊಂದಿಗೆ ಪರಾರಿಯಾದ ಸಾಕಾನೆಗಳು!

Kumki Elephants: ಕರ್ನಾಟಕದಿಂದ ಉತ್ತರಾಖಂಡಕ್ಕೆ ಹಸ್ತಾಂತರಿಸಲಾಗಿದ್ದ 2 ಕುಮ್ಕಿ ಹೆಣ್ಣಾನೆಗಳು ಕಾಡಾನೆ ಹಿಂದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ. ಉತ್ತರಾಖಂಡದ ಜಿಮ್‌ ಕಾರ್ಬೆಟ್‌ ರಾಷ್ಟ್ರೀಯ ಉದ್ಯಾನವನದಲ್ಲಿ ಅಪರೂಪದ ವಿದ್ಯಾಮಾನ ಜರುಗಿದೆ. ಕಾಡು ಗಸ್ತು ತಿರುಗುವ ಉದ್ದೇಶದಿಂದ ಇಲ್ಲಿಗೆ ಕರ್ನಾಟಕದಿಂದ 2 ಹೆಣ್ಣಾನೆಗಳನ್ನು ಕರೆತರಲಾಗಿತ್ತು. ಇದೀಗ ಇವು ʼಓಡಿ ಹೋಗಿದ್ದುʼ ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಯುತ್ತಿದೆ.

ಯಾರಿಗೂ ಬಗ್ಗದ ʼಬಂಡೆʼ ಡಿ.ಕೆ. ಶಿವಕುಮಾರ್‌ಗೆ ಕೊನೆಗೂ ಒಲಿದ ಮುಖ್ಯಮಂತ್ರಿ ಪಟ್ಟ; ಕಾಂಗ್ರೆಸ್‌ ನಾಯಕನ ರಾಜಕೀಯ ಜರ್ನಿ ಹೇಗಿತ್ತು?

ಡಿ.ಕೆ. ಶಿವಕುಮಾರ್‌ ರಾಜಕೀಯ ಜರ್ನಿ ಹೇಗಿತ್ತು?

D.K. Shivakumar: ʼಟ್ರಬಲ್ ಶೂಟರ್ʼ ಖ್ಯಾತಿಯ ಡಿ.ಕೆ. ಶಿವಕುಮಾರ್‌ ಇದೀಗ ಉಪಮುಖ್ಯಮಂತ್ರಿಯಿಂದ ಮುಖ್ಯಮಂತ್ರಿಯಾಗಿದ್ದಾರೆ. ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬರಲು ಮಹತ್ವದ ಕೊಡುಗೆ ನೀಡಿದ ಅವರಿಗೆ ಸಿಎಂ ಪಟ್ಟ ಲಭಿಸಿದೆ. ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಪ್ರವೇಶ ಹೇಗಿತ್ತು? ವಿಪಕ್ಷಗಳ, ಪಕ್ಷದೊಳಗಿನ ಸವಾಲು ಮೆಟ್ಟಿ ಮುಖ್ಯಮಂತ್ರಿಯಾಗಿದ್ದು ಹೇಗೆ? ಅವರ ರಾಜಕೀಯ ಹೋರಾಟ ಹೇಗಿತ್ತು? ಇಲ್ಲಿದೆ ವಿವರ.

Gold Price Today On 30th May 2026: ವೀಕೆಂಡ್‌ ಶಾಪಿಂಗ್‌ ಮಾಡುವವರಿಗೆ ಗುಡ್‌ನ್ಯೂಸ್‌; ಚಿನ್ನದ ದರದಲ್ಲಿ ಭರ್ಜರಿ ಇಳಿಕೆ

ಚಿನ್ನ ಕೊಳ್ಳಲು ಇದು ಸಕಾಲ; ಭರ್ಜರಿ ಬೆಲೆ ಇಳಿಕೆ

Gold Silver Price Today: ಶನಿವಾರ ಚಿನ್ನದ ದರದಲ್ಲಿ ಭಾರಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 55 ರುಪಾಯಿ ಕಡಿಮೆಯಾಗಿದ್ದು, 14,395 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 60 ರುಪಾಯಿ ಅಗ್ಗವಾಗಿದ್ದು, 15,704 ರುಪಾಯಿ ಕಂಡು ಬಂದಿದೆ.

ಧಾರಾಕಾರ ಮಳೆಗೆ ಬೆಂಗಳೂರು ತತ್ತರ: ನಾಳೆಯೂ ಗುಡುಗು ಸಹಿತ ಸುರಿಯಲಿದೆ ವರ್ಷಧಾರೆ

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

Bengaluru Rains: ಗುರುವಾರ ಸಂಜೆ ಬೆಂಗಳೂರು ಸೇರಿ ರಾಜ್ಯದ ವಿವಿಧ ಕಡೆಗಳಲ್ಲಿ ವರುಣನ ಆಗಮನವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅದರಲ್ಲೂ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಜೋರಾಗಿ ಮಳೆ ಸುರಿದಿದ್ದು, ವಾಹನ ಸವಾರರು ಪರದಾಡಿದರು. ಶುಕ್ರವಾರವೂ ಮಳೆ ಮುಂದುವರಿಯಲಿದೆ.

ಹವಾಮಾನ ವೈಪರೀತ್ಯ:  ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡಿಂಗ್‌

ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ಜೈಪುರದಲ್ಲಿ ಲ್ಯಾಂಡಿಂಗ್‌

Siddaramaiah: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿ ದೆಹಲಿಯತ್ತ ಹೊರಟಿದ್ದ ಸಿದ್ದರಾಮಯ್ಯ ಅವರಿದ್ದ ವಿಶೇಷ ವಿಮಾನ ಜೈಪುರದಲ್ಲಿ ಇಳಿದಿದೆ. ಹವಾಮಾನ ವೈಪರೀತ್ಯದ ಕಾರಣ ವಿಮಾನವನ್ನು ಜೈಪುರದಲ್ಲಿ ಲ್ಯಾಂಡಿಂಗ್‌ ಮಾಡಲಾಗಿದೆ. ವಿಮಾನದಲ್ಲಿದ್ದವರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ʼʼಮುಂದೆ ಇದೆ ಭಾರಿ ಸವಾಲು, ಎಚ್ಚರಿಕೆ ಅಗತ್ಯʼʼ:  ಡಿ.ಕೆ. ಶಿವಕುಮಾರ್‌ಗೆ ಸಿಎಂ ಪಟ್ಟ ದೊರೆಯುತ್ತಿದ್ದಂತೆ ಸ್ಫೋಟಕ ಭವಿಷ್ಯ ನುಡಿದ  ಕರಿಬಸವೇಶ್ವರ ಸ್ವಾಮೀಜಿ

ಡಿಕೆಶಿ ಸಿಎಂ ಪಟ್ಟ ದೊರೆಯುತ್ತಿದ್ದಂತೆ ಸ್ಫೋಟಕ ಭವಿಷ್ಯ ನುಡಿದ ಅಜ್ಜಯ್ಯ

DK Shivakumar: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸದ್ಯದಲ್ಲೇ ಸಿಎಂ ಪಟ್ಟಕ್ಕೆ ಏರಲಿದ್ದಾರೆ. ಹಾಗಂತ ಡಿಕೆಶಿ ಅವರ ಮುಂದಿನ ಹಾದಿ ಹೂವಿನ ಹಾಸಲ್ಲ. ಕಲ್ಲು-ಮುಳ್ಳುಗಳ, ಸವಾಲಿನ ಹಾದಿಯೇ ಮುಂದಿದೆ ಎಂದು ಡಿಕೆಶಿ ಅವರ ಪರಮ ದೈವ, ತುಮಕೂರಿನ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿಬಸವೇಶ್ವರ ಸ್ವಾಮೀಜಿ (ಅಜ್ಜಯ್ಯ) ಹೇಳಿದ್ದಾರೆ. ಸದ್ಯ ಈ ಭವಿಷ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿದೆ.

''ನಿಮ್ಮ ಪ್ರೀತಿಗೆ ಧನ್ಯವಾದʼʼ: ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಭಾವುಕ ಪೋಸ್ಟ್‌ ಹಂಚಿಕೊಂಡ ಸಿದ್ದರಾಮಯ್ಯ

ಭಾವುಕ ಪೋಸ್ಟ್‌ ಹಂಚಿಕೊಂಡ ಸಿದ್ದರಾಮಯ್ಯ

Siddaramaiah Resigns: ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮಧ್ಯೆ ಎಕ್ಸ್‌ನಲ್ಲಿ ಭಾವುಕ ಪೋಸ್ಟ್‌ ಹಂಚಿಕೊಂಡು, ʼʼನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರಋಣಿʼʼ ಎಂದಿದ್ದಾರೆ.

ವಿದಾಯ ಭಾಷಣದಲ್ಲಿ ಮೇರು ನಟ ಡಾ. ರಾಜ್‌ಕುಮಾರ್ ಸ್ಮರಿಸಿದ ಸಿದ್ದರಾಮಯ್ಯ; ಹೇಳಿದ್ದೇನು?

ಮೇರು ನಟ ಡಾ. ರಾಜ್‌ಕುಮಾರ್ ಸ್ಮರಿಸಿದ ಸಿದ್ದರಾಮಯ್ಯ

Siddaramaiah Resigns: ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಹಲವು ವಿಚಾರಗಳಲ್ಲು ಹಂಚಿಕೊಂಡಿದ್ದಾರೆ. ʼʼಮೇರು ನಟ ಡಾ.ರಾಜ್ ಕುಮಾರ್ ಅಭಿಮಾನಿಗಳನ್ನು ʼಅಭಿಮಾನಿ ದೇವರು’ʼ ಎಂದು ಕರೆಯುತ್ತಿದ್ದರು. ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ʼಮತದಾರರೇ ದೇವರುʼʼ ಎಂದಿದ್ದಾರೆ.

'ʼಮುಂದಿನ 8 ವರ್ಷ ಡಿಕೆಶಿಯೇ ಸಿಎಂ": ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ

8 ವರ್ಷ ಡಿಕೆಶಿಯೇ ಸಿಎಂ ಎಂದ ರಾಜಗುರು ದ್ವಾರಕನಾಥ್ ಗುರೂಜಿ

DK Shivakumar: ಸಿದ್ದರಾಮಯ್ಯ ಮುಖ್ಯಮಂತ್ರಿ ಹಿದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಡಿಕೆಶಿ ಅವರ ಪರಮಾಪ್ತ ಗುರು ರಾಜಗುರು ದ್ವಾರಕನಾಥ್ ಗುರೂಜಿ ಅವರ ಭವಿಷ್ಯ ವೈರಲ್‌ ಆಗಿದೆ. ʼʼಮುಂದಿನ 8 ವರ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರನ್ನು ಅಲ್ಲಾಡಿಸಲು ಯಾರಿಗೂ ಆಗಲ್ಲʼʼ ಎಂದು ಅವರು ಹೇಳಿದ್ದಾರೆ.

Siddaramaiah Resigns: ʼʼರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲʼʼ: ಸಿದ್ದರಾಮಯ್ಯ ಸ್ಪಷ್ಟನೆ

ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರ ಸಿದ್ದರಾಮಯ್ಯ?

Siddaramaiah: ಗುರುವಾರ (ಮೇ 28) ಲೋಕ ಭವನಕ್ಕೆ ತೆರಳಿದ ಸಿದ್ದರಾಮಯ್ಯ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ್‌ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಬಳಿಕ ಭಾವುಕರಾಗಿ ವಿದಾಯ ಭಾಷಣ ಮಾಡಿ ನೆರವಾದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು. ಈ ವೇಳೆ ರಾಷ್ಟ್ರ ರಾಜಕೀಯಕ್ಕೆ ಹೋಗಲ್ಲ ಎಂದು ಸ್ಪಷ್ಟಪಡಿಸಿದರು.

ʼʼನಾನು ಮಾತು ತಪ್ಪುವ ಕೆಲಸ ಮಾಡಿಲ್ಲʼʼ: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ ಭಾವುಕ

ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ ಭಾವುಕ

Siddaramaiah Resigns: ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರ (ಮೇ 28) ಲೋಕ ಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ಕಾರ್ಯದರ್ಶಿ ಪ್ರಭು ಶಂಕರ್‌ ಅವರಿಗೆ ಸಿದ್ದರಾಮಯ್ಯ ರಾಜೀನಾಮೆ ಪತ್ರ ಹಸ್ತಾಂತರಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾವುಕರಾಗಿ ಮಾತನಾಡಿದರು.

ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

Karnataka Leadership Change: ಬಹುದೊಡ್ಡ ರಾಜಕೀಯ ಸ್ಥಿತ್ಯಂತರಕ್ಕೆ ರಾಜ್ಯ ಸಾಕ್ಷಿಯಾಗಿದ್ದು, 3 ವರ್ಷ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್‌ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಲೋಕ ಭವನದಲ್ಲಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ಕಾರ್ಯದರ್ಶಿ ಪ್ರಭು ಶಂಕರ್‌ ಅವರಿಗೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರು.

ಅಹಿಂದ ನಾಯಕ, ಕರ್ನಾಟಕದ ದೀರ್ಘಾವಧಿಯ ಸಿಎಂ ಸಿದ್ದರಾಮಯ್ಯ: ನಡೆದು ಬಂದ ಹಾದಿ ಹೀಗಿತ್ತು

ಕರ್ನಾಟಕದ ದೀರ್ಘಾವಧಿಯ ಸಿಎಂ ಸಿದ್ದರಾಮಯ್ಯ: ನಡೆದು ಬಂದ ಹಾದಿ

Siddaramaiah: ಅತಿ ಹೆಚ್ಚು ಅವಧಿಗೆ ರಾಜ್ಯದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಅತೀ ಹೆಚ್ಚು ಬಜೆಟ್‌ ಮಂಡಿಸಿದ ಜನಪ್ರತಿನಿಧಿ ಎಂಬ ದಾಖಲೆಗೆ ಪಾತ್ರರಾದ ಸಿದ್ದರಾಮಯ್ಯ ಸದ್ಯ ಸಿಎಂ ಪಟ್ಟದಿಂದ ಕೆಳಗೆ ಇಳಿದಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿದ್ದು, ಹಲವು ದಿನಗಳಿಂದ ನಡೆಯುತ್ತಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ. ಅಹಿಂದ ಪ್ರಬಲ ನಾಯಕನಾಗಿ ಬೆಳೆದ ಸಿದ್ದರಾಮಯ್ಯ ಅವರ ನಡೆದು ಬಂದ ಹಾದಿ ಹೇಗಿತ್ತು ಎನ್ನುವ ವಿವರ ಇಲ್ಲಿದೆ.

Gold Price Today On 27th May 2026: ಸತತ 2ನೇ ದಿನವೂ ಚಿನ್ನದ ದರದಲ್ಲಿ ಇಳಿಕೆ; ಬೆಂಗಳೂರಿನಲ್ಲಿ ಎಷ್ಟಿದೆ ಬೆಲೆ?

ಸತತ 2ನೇ ದಿನವೂ ಚಿನ್ನದ ದರದಲ್ಲಿ ಇಳಿಕೆ

Gold Silver Price Today: ಸತತ 2ನೇ ದಿನವೂ ಚಿನ್ನದ ದರದಲ್ಲಿ ಇಳಿಕೆ ಕಂಡು ಬಂದಿದೆ. ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 55 ರುಪಾಯಿ ಕಡಿಮೆಯಾಗಿದ್ದು, 14,510 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 60 ರುಪಾಯಿ ಅಗ್ಗವಾಗಿದ್ದು, 15,829 ರುಪಾಯಿ ಕಂಡು ಬಂದಿದೆ.

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರಿ ದುರಂತ; ಟೇಕಾಫ್ ವೇಳೆ ಇಂಡಿಗೋ ವಿಮಾನದಲ್ಲಿ ಕಾಣಿಸಿಕೊಂಡ ಹೊಗೆ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರಿ ದುರಂತ

IndiGo Flight: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ (ಮೇ 26) ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚೆನ್ನೈಗೆ ಹಾರಲು ಸಿದ್ಧವಾಗುತ್ತಿದ್ದ ಇಂಡಿಗೋ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಪ್ರಯಾಣಿಕರು, ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಘಟನೆಗೆ ಕಾರಣ ತಿಳಿದು ಬಂದಿಲ್ಲ.

ರೀಲ್ಸ್‌ಗೆ ಲೈಕ್‌ ಮಾಡುತ್ತಲೇ 40 ವರ್ಷದ ಆಂಟಿಯನ್ನು ಪಟಾಯಿಸಿದ 14ರ ಬಾಲಕ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ವಿಚಿತ್ರ ಪ್ರಕರಣ

14ರ ಬಾಲಕನ ಪ್ರೀತಿಯಲ್ಲಿ ಬಿದ್ದ 4 ಮಕ್ಕಳ ತಾಯಿ

Viral News: ಉತ್ತರ ಪ್ರದೇಶದ ಮಹಾರಾಜ್‌ಗಂಜನ್‌ನ 4 ಮಕ್ಕಳ ತಾಯಿ, 40 ವರ್ಷದ ಮಹಿಳೆ ತಮಿಳುನಾಡಿನ 14 ವರ್ಷದ ಬಾಲಕನನ್ನು ಪ್ರೀತಿಸಿದ್ದಾಳೆ. ಸದ್ಯ ಈ ಪ್ರಕರಣ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದು, ದೇಶದ ಗಮನ ಸೆಳೆದಿದೆ.

ಪಡುಬಿದ್ರಿ ಬ್ರಹ್ಮಕಲಶೋತ್ಸವ: ಭಕ್ತಿಯ ಮಹಾಸಾಗರ

ಪಡುಬಿದ್ರಿಯಲ್ಲಿ ಭಕ್ತಿಯ ಮಹಾಸಾಗರ

Pravasi Prapancha: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪಡುಬಿದ್ರಿಯ ಜನಜೀವನದ ಕೇಂದ್ರಬಿಂದು. ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಕ್ಷೇತ್ರದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಸಿದ್ಧತೆಗಳು ತಿಂಗಳುಗಳ ಹಿಂದೆಯೇ ಆರಂಭವಾಗಿದ್ದವು. ಡಾ. ಪ್ರಕಾಶ್ ಶೆಟ್ಟಿ ಬಂಜಾರ ಮತ್ತು ಧರ್ಮಪತ್ನಿ ಆಶಾ ಅವರ ಮುಂದಾಳತ್ವದಲ್ಲಿ ನಡೆದ ದೇವಸ್ಥಾನದ ಜೀರ್ಣೋದ್ಧಾರ, ಅಲಂಕಾರ, ಯಾಗಶಾಲೆ ನಿರ್ಮಾಣ, ಭಕ್ತರ ವ್ಯವಸ್ಥೆ, ಪ್ರತಿ ಕೆಲಸದಲ್ಲೂ ಊರಿನ ಜನರ ಪಾಲ್ಗೊಳ್ಳುವಿಕೆ ಸ್ಪಷ್ಟವಾಗಿ ಕಾಣಿಸುತ್ತಿತ್ತು.

Pravasi Prapancha: ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲ: ಭಕ್ತಿಯ ಹೆಜ್ಜೆಯನ್ನಿಟ್ಟು ಬನ್ನಿ

ಪಡುಬಿದ್ರಿಯ ಒಡೆಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ

ದೇವಸ್ಥಾನ ಎಂದರೆ ಕೇವಲ ಪೂಜೆ ನಡೆಯುವ ಕಟ್ಟಡವಲ್ಲ; ಒಂದು ಊರಿನ ಇತಿಹಾಸ, ಸಂಸ್ಕೃತಿ, ಸಮುದಾಯದ ಒಗ್ಗಟ್ಟು ಮತ್ತು ಜನರ ಬದುಕಿನ ರೀತಿ ಎಲ್ಲವೂ ಅಲ್ಲಿ ನೆಲೆಸಿರುತ್ತವೆ. ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವೂ ಅದೇ ರೀತಿಯ ಜೀವಂತ ಸಂಸ್ಕೃತಿಕೇಂದ್ರವಾಗಿದೆ. ವರ್ಷಗಳಿಂದ ಕಳೆಗುಂದಿದ ಸ್ಥಿತಿಯಲ್ಲಿದ್ದ ಈ ಕೇಂದ್ರದ ಜೀರ್ಣೋದ್ಧಾರಕ್ಕೆ ತನು ಮನ ಧನ ಸಹಾಯ ಮಾಡುವ ಮೂಲಕ ದೇವಾಲಯಕ್ಕೆ ಹೊಸ ರೂಪವನ್ನು ನೀಡಿದವರು ಡಾ. ಪ್ರಕಾಶ್‌ ಶೆಟ್ಟಿ ಬಂಜಾರ. ಇವರ ಶ್ರಮ, ದಿಟ್ಟ ಯೋಜನೆಗಳ ಮೂಲಕ ಕರಾವಳಿಯ ಪುಟ್ಟ ಗ್ರಾಮ ಇಂದು ಧಾರ್ಮಿಕ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿದೆ.

ತಾಂತ್ರಿಕ ದೋಷದಿಂದ ಕೇಬಲ್‌ ಕಾರ್‌ ಸ್ಥಗಿತ; ಆಗಸದಲ್ಲೇ 300 ಪ್ರವಾಸಿಗರು ಬಾಕಿ

ಕೇಬಲ್‌ ಕಾರ್‌ ಸ್ಥಗಿತ; ಗುಲ್ಮಾರ್ಗ್‌ ಸಿಕ್ಕಿ ಹಾಕಿಕೊಂಡ ಪ್ರವಾಸಿಗರು

Gulmarg Cable Car Snag: ಜಮ್ಮು ಕಾಶ್ಮೀರದ ಪ್ರವಾಸಿ ತಾಣ ಗುಲ್ಮಾರ್ಗ್‌ನಲ್ಲಿನ ಕೇಬಲ್‌ ಕಾರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಸುಮಾರು 300 ಪ್ರವಾಸಿಗರು ಆಗಸದಲ್ಲೇ ಬಾಕಿಯಾದ ಘಟನೆ ಸೋಮವಾರ ನಡೆದಿದೆ. ಕೂಡಲೇ ವಿವಿಧ ತಂಡಗಳು ಆಗಮಿಸಿ ಪ್ರವಾಸಿಗರು ಸುರಕ್ಷಿತವಾಗಿ ಕೆಳಗಿಳಿಸಲು ಕಾರ್ಯಾಚರಣೆ ಆರಂಭಿಸಿವೆ.

10 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ, ಹತ್ಯೆ ಪ್ರಕರಣದ ಪತ್ರಿಕಾಗೋಷ್ಠಿಯಲ್ಲಿ ನಕ್ಕ ಪೊಲೀಸ್‌ ಅಧಿಕಾರಿಗಳು; ವಿಡಿಯೊ ವೈರಲ್‌, ಭಾರಿ ಆಕ್ರೋಶ

ಹತ್ಯೆ ಪ್ರಕರಣದ ಪತ್ರಿಕಾಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್‌

Viral Video: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ 10 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದ ಪತ್ರಿಕಾಗೋಷ್ಠಿ ನಡೆಯುತ್ತಿದ್ದ ವೇಳೆ ಪೊಲೀಸ್‌ ಅಧಿಕಾರಿಗಳಿಬ್ಬರು ನಗುತ್ತಿರುವ ವಿಡಿಯೊ ವೈರಲ್‌ ಆಗಿದೆ. ಮಹಿಳಾ ಪೊಲೀಸ್‌ ಅಧಿಕಾರಿ ಆರ್.ವಿ. ರಮ್ಯಾ ಭಾರತಿ ಕೈಯ ನೈಲ್‌ ಪಾಲಿಷ್‌ ನೋಡಿ ಜೋರಾಗಿ ನಗುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

Gold Price Today On 25th May 2026: ಗ್ರಾಹಕರಿಗೆ ತಟ್ಟಿದ ʼಮಂಡೆʼ ಬಿಸಿ; ಪೆಟ್ರೋಲ್‌, ಡೀಸೆಲ್‌ ಜತೆಗೆ ಚಿನ್ನದ ದರವೂ ಏರಿಕೆ

ಪೆಟ್ರೋಲ್‌, ಡೀಸೆಲ್‌ ಜತೆಗೆ ಚಿನ್ನದ ದರವೂ ಏರಿಕೆ

Gold Silver Price Today: ಸೋಮವಾರ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಬೆನ್ನಲ್ಲೇ ಚಿನ್ನದ ದರದಲ್ಲಿಯೂ ಹೆಚ್ಚಳ ಕಂಡು ಬಂದಿದ್ದು, ಗ್ರಾಹಕರಿಗೆ ಡಬಲ್‌ ಶಾಕ್‌ ಎದುರಾಗಿದೆ. ಸೋಮವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 30 ರುಪಾಯಿ ಏರಿಕೆಯಾಗಿದ್ದು, 14,610 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 32 ರುಪಾಯಿ ಅಧಿಕವಾಗಿದ್ದು, 15,938 ರುಪಾಯಿ ಇದೆ.

ʼʼಭಾರತಕ್ಕೆ ಬಯಸಿದ್ದೆಲ್ಲ ಸಿಗಲಿದೆʼʼ: ಫೋನ್‌ ಕರೆಯಲ್ಲಿ ಡೊನಾಲ್ಡ್‌ ಟ್ರಂಪ್‌ ಘೋಷಣೆ: ಮೋದಿ ಉತ್ತಮ ಸ್ನೇಹಿತ ಎಂದು ಪುನರುಚ್ಚರಿಸಿದ ಅಮೆರಿಕ ಅಧ್ಯಕ್ಷ

ನಾನು ಮೋದಿಯ ಅಭಿಮಾನಿ ಎಂದ ಡೊನಾಲ್ಡ್‌ ಟ್ರಂಪ್‌

Donald Trump: ʼʼನಾನು ಪ್ರಧಾನಿ ಮೋದಿ ಅವರ ದೊಡ್ಡ ಅಭಿಮಾನಿ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮನ ಬಿಚ್ಚಿ ಹೇಳಿದ್ದಾರೆ. ಅಮೆರಿಕ ಸ್ವಾತಂತ್ರ್ಯ ಘೋಷಣೆಯ 250ನೇ ವಾರ್ಷಿಕೋತ್ಸವದ ಪ್ರಯುಕ್ತ ದೆಹಲಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಆತಿಥ್ಯ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಫೋನ್‌ ಮೂಲಕ ಮಾತನಾಡಿದ ಡೊನಾಲ್ಡ್ ಟ್ರಂಪ್ ಈ ಮಾತು ಹೇಳಿದರು.

ನರೇಂದ್ರ ಮೋದಿ ಜತೆ ಆಟವಾಡಿದ ಈ ಪುಟಾಣಿ ಫ್ರೆಂಡ್ಸ್‌ ಯಾರು? ಪ್ರಧಾನಿ ಹಂಚಿಕೊಂಡ ಕ್ಯೂಟ್‌ ಪೋಟೊ ಇಲ್ಲಿದೆ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಪುಟಾಣಿ ಫ್ರೆಂಡ್ಸ್‌

ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಿಕ್ಕ ಮಕ್ಕಳ ಜತೆ ಚೆನ್ನಾಗಿ ಬೆರೆಯುತ್ತಾರೆ. ಸಮಯ ಸಿಕ್ಕಾಗಲೆಲ್ಲ ಅವರೊಂದಿಗೆ ಮಕ್ಕಳಾಗಿ ಬಿಡುತ್ತಾರೆ. ಯಾವುದಾದರೂ ಕಾರ್ಯಕ್ರಮಕ್ಕೆ ಹೋದಾಗ ಮಕ್ಕಳು ಕಂಡರೆ ಅಥವಾ ಕಚೇರಿಗೆ ಮಕ್ಕಳು ಆಗಮಿಸಿದರೆ ಅವರೊಂದಿಗೆ ತಮಾಷೆ ಮಾಡುತ್ತಾರೆ. ಈಗಾಗಲೇ ಅಂತಹ ಹಲವು ಸಂದರ್ಭ ಕಂಡಿದ್ದೇವೆ. ಇದೀಗ ಮೋದಿ ಅವರ ಅಂತಹದ್ದೇ ಮತ್ತೊಂದು ಕ್ಷಣದ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ತಮ್ಮ ಕಚೇರಿಗೆ ಆಗಮಿಸಿದ ಇಬ್ಬರು ಪುಟಾಣಿಗಳೊಂದಿಗೆ ಮೋದಿ ಸಮಯ ಕಳೆದಿದ್ದಾರೆ. ಈ ಸುಂದರ ಕ್ಷಣದ ಫೋಟೊವನ್ನು ಅವರು ಹಂಚಿಕೊಂಡಿದ್ದಾರೆ. ಇಂಟರ್‌ನೆಟ್‌ನಲ್ಲಿ ಸೆನ್ಸೇಷನ್‌ ಸೃಷ್ಟಿಸಿದ, ಮೋದಿ ಮನಗೆದ್ದ ಈ ಪುಟಾಣಿಗಳು ಯಾರು?

Loading...