ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

Ramesh B

Senior Sub Editor

rameshballamule@gmail.com

ಗಡಿನಾಡು ಕಾಸರಗೋಡು ಜಿಲ್ಲೆಯ ಆದೂರು ಗ್ರಾಮದ ರಮೇಶ್ ಬಳ್ಳಮೂಲೆ ಉದಯವಾಣಿ ದಿನ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದರು. ಬಳಿಕ ವಿಜಯವಾಣಿ, ಅಧಾನ್ ನ್ಯೂಸ್ ಆ್ಯಪ್, ನ್ಯೂಸ್ ಆ್ಯರೋ ವೆಬ್‌ಸೈಟ್‌, ವಿಸ್ತಾರ ನ್ಯೂಸ್ ವೆಬ್‌ಸೈಟ್‌ನಲ್ಲಿ ಕಾರ್ಯ ನಿರ್ವಹಿಸಿದರು. 2024ರ ಆಗಸ್ಟ್‌ನಿಂದ ವಿಶ್ವವಾಣಿ ವೆಬ್‌ಸೈಟ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ. ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುಮಾರು 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಬರವಣಿಗೆ, ಓದು, ಸಿನಿಮಾ ವೀಕ್ಷಣೆ, ಪ್ರವಾಸ ಇವರ ನೆಚ್ಚಿನ ಹವ್ಯಾಸ.

Articles
ನೌಗಾಂ ಪೊಲೀಸ್ ಠಾಣೆಯಲ್ಲಿ ಸ್ಫೋಟ ಸಂಭವಿಸಿದ್ದು ಹೇಗೆ? ಫರಿದಾಬಾದ್‌ನಲ್ಲಿ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರಕ್ಕೆ ಸಾಗಿಸಿದ್ದೇಕೆ?

ನೌಗಾಂ ಪೊಲೀಸ್ ಠಾಣೆಯಲ್ಲಿ ಸ್ಫೋಟ ಸಂಭವಿಸಿದ್ದು ಹೇಗೆ?

Nowgam Blast: ಭಯೋತ್ಪಾದಕ ಚಟುವಟಿಕೆಗಳ ವಿರುದ್ಧದ ಕಾರ್ಯಾಚರಣೆ ವೇಳೆ ಜಪ್ತಿ ಮಾಡಿ ಸಂಗ್ರಹಿಸಿ ಇಟ್ಟಿದ್ದ ಸ್ಫೋಟಕಗಳ ಪರಿಶೀಲನೆ ವೇಳೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿರುವ ನೌಗಾಂ ಪೊಲೀಸ್ ಠಾಣೆಯಲ್ಲಿ ಶುಕ್ರವಾರ (ನವೆಂಬರ್‌ 14) ತಡರಾತ್ರಿ ಅವು ಸಿಡಿದು 9 ಮಂದಿ ಬಲಿಯಾಗಿದ್ದಾರೆ. ಇದು ಉದ್ದೇಶಪೂರ್ವಕ ಕೃತ್ಯವಲ್ಲ ಎನ್ನುವುದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ.

Bihar Assembly Election Results 2025: ಬಿಹಾರ ಚುನಾವಣೆ ಟ್ರೆಂಡ್‌ ನಿಖರವಾಗಿ ಗುರುತಿಸಿದ್ದ ಸಮೀಕ್ಷೆಗಳು

ಬಿಹಾರ ಚುನಾವಣೆ ಟ್ರೆಂಡ್‌ ನಿಖರವಾಗಿ ಗುರುತಿಸಿದ್ದ ಸಮೀಕ್ಷೆಗಳು

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎಗೆ ಬಹುಮತ ಗಳಿಸಲಿದೆ ಎಂದು ಸಮೀಕ್ಷೆಯಂತೆಯೇ ಫಲಿತಾಂಶ ಹೊರ ಬಿದ್ದಿದೆ. ಬಿಜೆಪಿ-ಜೆಡಿಯು ನೇತೃತ್ವದಲ್ಲಿ ಎನ್‌ಡಿಎ ಒಟ್ಟು 202 ಸ್ಥಾನಗಳಲ್ಲಿ ಜಯ ಗಳಿಸಿ. ಕಾಮಾಖ್ಯಾ ಅನಾಲಿಟಿಕ್ಸ್‌ 167-187 ಸೀಟುಗಳನ್ನು ಎನ್‌ಡಿಎ ಗೆಲ್ಲಲಿದೆ ಎಂದು ತಿಳಿಸಿತ್ತು.

Delhi Blast: ದೆಹಲಿ ಬಾಂಬ್‌ ಸ್ಫೋಟದ ರೂವಾರಿ ಡಾ. ಉಮರ್‌ನ ಮತ್ತೊಂದು ವಿಡಿಯೊ ಬೆಳಕಿಗೆ; ಮೊಬೈಲ್‌ ಅಂಗಡಿಗೆ ಹೋಗಿದ್ದೇಕೆ?

ದೆಹಲಿ ಬಾಂಬ್‌ ಸ್ಫೋಟದ ರೂವಾರಿ ಡಾ. ಉಮರ್‌ನ ಮತ್ತೊಂದು ವಿಡಿಯೊ ಬೆಳಕಿಗೆ

Dr. Umar Mohammad: ದೆಹಲಿ ಕೆಂಪು ಕೋಟೆ ಬಳಿ ನವೆಂಬರ್‌ 10ರಂದು ನಡೆದ ಕಾರ್‌ ಸ್ಫೋಟದಲ್ಲಿ 12 ಮಂದಿ ಬಲಿಯಾಗಿರುವ ಆಘಾತಕಾರಿ ಘಟನೆಯಿಂದ ಇನ್ನೂ ದೇಶ ಚೇತರಿಸಿಕೊಂಡಿಲ್ಲ. ಇದೀಗ ಉಗ್ರರ ಈ ಕೃತ್ಯದ ಒಂದೊಂದೇ ರಹಸ್ಯ ಬಯಲಾಗುತ್ತಿದೆ. ದಾಳಿಯ ರೂವಾರಿ ಜಮ್ಮು ಮತ್ತು ಕಾಶ್ಮೀರ ಮೂಲದ ವೈದ್ಯ ಡಾ. ಉಮರ್‌ ಮೊಹಮ್ಮದ್‌ ಮುಖವನ್ನು ಸ್ಪಷ್ಟವಾಗಿ ತೋರಿಸುವ ಸಿಸಿಟಿವಿ ದೃಶ್ಯಾವಳಿ ಹೊರ ಬಿದ್ದಿದೆ.

ಕಾಂಗ್ರೆಸ್‌ ಎಂದರೆ ಎಂಎಂಸಿ-ಮುಸ್ಲಿಂ ಲೀಗ್‌ ಮಾವೋಯಿಸ್ಟ್‌ ಕಾಂಗ್ರೆಸ್‌: ಬಿಹಾರ ವಿಧಾನಸಭೆ ಫಲಿತಾಂಶ ಬೆನ್ನಲ್ಲೇ ಮೋದಿ ಹೊಸ ವ್ಯಾಖ್ಯಾನ

ಬಿಹಾರ ವಿಧಾನಸಭೆ ಫಲಿತಾಂಶ ಬೆನ್ನಲ್ಲೇ ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

Narendra Modi: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 202ಕ್ಕಿಂತ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಈ ವೇಳೆ ಕಾಂಗ್ರೆಸ್‌ ನೇತೃತ್ವದ ಮಹಘಟಬಂಧನ್‌ ಮೈತ್ರಿಕೂಟದ ವಿರುದ್ದ ವಾಗ್ದಾಳಿ ನಡೆಸಿದರು.

Tejashwi Yadav: ಕೊನೆಗೂ ಗೆಲುವಿನ ನಿಟ್ಟುಸಿರು ಬಿಟ್ಟ ತೇಜಸ್ವಿ ಯಾದವ್‌; ಬಿಜೆಪಿ ವಿರುದ್ಧ 14 ಸಾವಿರ ಮತಗಳಿಂದ ಜಯ

ಬಿಜೆಪಿ ಅಭ್ಯರ್ಥಿ ವಿರುದ್ಧ ಗೆದ್ದ ಆರ್‌ಜೆಡಿಯ ತೇಜಸ್ವಿ ಯಾದವ್‌

Bihar Election Results 2025: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯದತ್ತ ದಾಪುಗಾಲು ಇರಿಸಿದ್ದು, ಮಹಾಘಟಬಂಧನ್‌ ಸೋಲಿನತ್ತ ಮುಖ ಮಾಡಿದೆ. 243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಮ್ಯಾಜಿಕ್‌ ಸಂಖ್ಯೆ 122. ಎನ್‌ಡಿಎ ಈಗಾಗಲೇ 202 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮಧ್ಯೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಕೊನೆಗೂ ಜಯಗಳಿಸಿದ್ದು, ಕಾರ್ಯಕರ್ತರಿಗೆ ಕೊಂಚ ಸಮಾಧಾನ ತಂದಿದೆ.

Maithili Thakur: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆನ್‌ ಝಿ ಸಂಚಲನ; ಬಿಜೆಪಿಯ 25 ವರ್ಷದ ಗಾಯಕಿ ಮೈಥಿಲಿ ಠಾಕೂರ್‌ಗೆ ಭರ್ಜರಿ ಜಯ

ಬಿಹಾರ ವಿಧಾನಸಭಾ ಚುನಾವಣೆ; ಗಾಯಕಿ ಮೈಥಿಲಿ ಠಾಕೂರ್‌ಗೆ ಭರ್ಜರಿ ಜಯ

Bihar Election 2025 Results: ದೇಶದ ಕೂತೂಹಲ ಕೆರಳಿಸಿದ ಬಿಹಾರ ವಿಧಾನಸಭಾ ಚುನಾವಣೆಯ ಪಲಿತಾಂಶ ಹೊರ ಬೀಳುತ್ತಿದ್ದು, ಬಿಜೆಪಿ ಅಭ್ಯರ್ಥಿ 25 ವರ್ಷದ ಗಾಯಕಿ ಮೈಥಿಲಿ ಠಾಕೂರ್‌ ಬರೋಬ್ಬರಿ 12 ಸಾವಿರ ಮತಗಳಿಂದ ಜಯ ಗಳಿಸಿದ್ದಾರೆ. ಆ ಮೂಲಕ ಬಿಹಾರದ ಅತೀ ಕಿರಿಯ ಶಾಸಕಿ ಎನಿಸಿಕೊಂಡಿದ್ದಾರೆ. ಅಲಿನಗರ್‌ ಕ್ಷೇತ್ರದಿಂದ ಕಣಕ್ಕಿಳಿದ ಅವರು ಮೊದಲ ಪ್ರಯತ್ನದಲ್ಲೇ ತಮ್ಮ ನೇರ ಪ್ರತಿಸ್ಪರ್ಧಿ ಆರ್‌ಜೆಡಿಯ ಬಿನೋದ್‌ ಮಿಶ್ರಾ ಅವರನ್ನು ಸೋಲಿಸಿದ್ದಾರೆ.

Chennai Aircraft Crash: ತಮಿಳುನಾಡಿನಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ

ಚೆನ್ನೈಯಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ

ಭಾರತೀಯ ವಾಯುಪಡೆಗೆ ಸೇರಿದ Pilatus PC-7 ವಿಮಾನ ತಮಿಳುನಾಡಿನಲ್ಲಿ ಪತನವಾಗಿದೆ. ಚೆಂಗಳಪಟ್ಟು ಜಿಲ್ಲೆಯ ತಾಂಬರಮ್‌ನಲ್ಲಿ ವಿಮಾನ ಪತನವಾಗಿದ್ದು, ಪೈಲಟ್‌ ಅಪಾಯವಿಲ್ಲದೆ ಪಾರಾಗಿದ್ದಾರೆ. ದೈನಂದಿನ ತರಬೇತಿ ವೇಳೆ ಈ ಅವಘಡ ಸಂಭವಿಸಿದೆ. ಸದ್ಯ ವಿಮಾನ ಪತನವಾದ ದೃಶ್ಯ ವೈರಲ್‌ ಆಗಿದೆ.

Chirag Paswan: ಬಿಹಾರದಲ್ಲಿ ಎನ್‌ಡಿಎಗೆ ಬಹುಮತ; ಚಿರಾಗ್‌ ಪಾಸ್ವಾನ್‌ಗೆ ಉಪಮುಖ್ಯಮಂತ್ರಿ ಪಟ್ಟ?

ಬಿಹಾರದ ಮುಂದಿನ ಉಪಮುಖ್ಯಮಂತ್ರಿ ಚಿರಾಗ್‌ ಪಾಸ್ವಾನ್‌?

Bihar Election 2025 Results: ದೇಶದ ಗಮನ ಸೆಳೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಯಂತೆ ಎನ್‌ಡಿಎ ಭರ್ಜರಿ ಬಹುಮತದತ್ತ ಸಾಗಿದೆ. ಚುನಾವಣೋತ್ತರ ಸಮೀಕ್ಷೆಯ ಭವಿಷ್ಯದಂತೆ ಎನ್‌ಡಿಎ ಮ್ಯಾಜಿಕ್‌ ಮಾಡುವಲ್ಲಿ ಸಫಲವಾಗಿದ್ದು, ಈಗಾಗಲೇ 202 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕೇಂದ್ರ ಸಚಿವ, ಯುವ ನಾಯಕ ಚಿರಾಗ್‌ ಪಾಸ್ವಾನ್‌ ಅವರ ಲೋಕಜನಶಕ್ತಿ ಪಾರ್ಟಿ (ರಾಮ್‌ ವಿಲಾಸ್)‌ ಬಿಹಾರದ 4ನೇ ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು ಉಪಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಸಲ್ಲಿಸುವ ಸಾಧ್ಯತೆ ಇದೆ.

Bihar Election 2025 Results: ಬಿಹಾರಲ್ಲಿ ಎನ್‌ಡಿಎ ಸ್ಪಷ್ಟ ಬಹುಮತದತ್ತ; ಸಂಜೆ ದೆಹಲಿ ಬಿಜೆಪಿ ಕಚೇರಿಗೆ ಮೋದಿ ಭೇಟಿ

ಬಿಹಾರ ಚುನಾವಣೆ ಫಲಿತಾಂಶ; ಸಂಜೆ ದೆಹಲಿ ಬಿಜೆಪಿ ಕಚೇರಿಗೆ ಮೋದಿ ಭೇಟಿ

ದೇಶದ ಕುತೂಹಲ ಕೆರಳಿಸಿದ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬರುತ್ತಿದ್ದು, ಎನ್‌ಡಿಎ ಸ್ಪಷ್ಟ ಬಹುಮತದತ್ತ ಸಾಗಿದೆ. ಅಧಿಕಾರ ಉಳಿಸಿಕೊಳ್ಳುವತ್ತ ದಿಟ್ಟ ಹೆಜ್ಜೆ ಇಟ್ಟಿದ್ದು, ಸದ್ಯದ ಮಾಹಿತಿ ಪ್ರಕಾರ ಎನ್‌ಡಿಎ 200ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತ್ತ ಮಹಾಘಟಬಂಧನ್‌ ಕೇವಲ 39 ಸೀಟ್‌ಗಳಲ್ಲಿ ಮುಂದಿದೆ. ಸಂಜೆ 7 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಗೆ ಭೇಟಿ ನೀಡುವ ನಿರೀಕ್ಷೆ ಇದೆ.

Saalumarada Thimmakka Death: ಮರಗಳನ್ನೇ ಮಕ್ಕಳೆಂದು ಪ್ರೀತಿಸಿದ ಸಾಲುಮರದ ತಿಮ್ಮಕ್ಕ

ಮರಗಳನ್ನೇ ಮಕ್ಕಳೆಂದು ಪ್ರೀತಿಸಿದ ಸಾಲುಮರದ ತಿಮ್ಮಕ್ಕ

ಸಾಲುಮರದ ತಿಮ್ಮಕ್ಕ ನಿಧನ: ಮರಗಳನ್ನೇ ಮಕ್ಕಳೆಂದು ಪ್ರೀತಿಸುತ್ತಿದ್ದ ಖ್ಯಾತ ಪರಿಸರವಾದಿ ಸಾಲುಮರದ ತಿಮ್ಮಕ್ಕ ನಿಧನ ಹೊಂದಿದರು. ಅವರಿಗೆ 114 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ವೃಕ್ಷಮಾತೆ ಎಂದೇ ಖ್ಯಾತಿ ಪಡೆದ ಅವರು ರಸ್ತೆ ಬದಿಯಲ್ಲಿ ನೂರಾರು ಸಂಖ್ಯೆಯಲ್ಲಿ ಸಾಲು ಗಿಡಗಳನ್ನು ನೆಡುವ ಮೂಲಕ ಪರಿಸರಕ್ಕೆ ಗಣನೀಯ ಕೊಡುಗೆ ನೀಡಿದ್ದಾರೆ.

Delhi Blast: ದೆಹಲಿ ಸ್ಫೋಟವನ್ನು ಉಗ್ರರ ಭೀಕರ ಕೃತ್ಯ ಎಂದು ಘೋಷಿಸಿದ ಕೇಂದ್ರ ಸರ್ಕಾರ; ಶೀಘ್ರದಲ್ಲೇ ಪ್ರತೀಕಾರ?

ದೆಹಲಿ ಸ್ಫೋಟವನ್ನು ಉಗ್ರರ ಭೀಕರ ಕೃತ್ಯ ಎಂದು ಘೋಷಿಸಿದ ಕೇಂದ್ರ

Cabinet Committee: ಭೂತಾನ್‌ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಬೆನ್ನಲ್ಲೇ ಮಹತ್ವದ ಸಚಿವ ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ ದೆಹಲಿ ಸ್ಫೋಟವನ್ನು ಭಯೋತ್ಪಾದಕ ಕೃತ್ಯ ಎಂದು ಕರೆದಿದ್ದಾರೆ. ಈ ಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸೇರಿ ಪ್ರಮುಖರು ಹಾಜರಿದ್ದರು.

ದೆಹಲಿ ಸ್ಫೋಟಕ್ಕೆ ಬಳಕೆಯಾದ ಫೋರ್ಡ್ ಇಕೋಸ್ಪೋರ್ಟ್‌ ಕಾರು ಪತ್ತೆ; ಕೃತ್ಯಕ್ಕೆ ವರ್ಷಗಳ ಹಿಂದೆಯೇ ಪ್ಲ್ಯಾನ್‌?

ದೆಹಲಿ ಸ್ಫೋಟ ಪ್ರಕರಣ; ಫೋರ್ಡ್ ಇಕೋಸ್ಪೋರ್ಟ್‌ ಕಾರು ಪತ್ತೆ

ದೇಶವನ್ನೇ ನಡುಗಿಸಿದ ದೆಹಲಿ ಕೆಂಪು ಕೋಟೆ ಸಮೀಪ ನಡೆದ ಕಾರು ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ಕೆಂಪು ಫೋರ್ಡ್ ಇಕೋಸ್ಪೋರ್ಟ್‌ ಕಾರು ಕೂಡ ಪತ್ತೆಯಾಗಿದೆ. ಇದು ತನಿಖೆಗೆ ಮಹತ್ವ ಪುರಾವೆ ಒದಗಿಸುವ ಸಾಧ್ಯತೆ ಇದೆ.

70 ಎಕ್ರೆ ಕ್ಯಾಂಪಸ್‌, 75 ಲಕ್ಷ ರೂ. ಎಂಬಿಬಿಎಸ್‌ ಫೀಸ್‌; ಫರಿದಾಬಾದ್‌ನ ಅಲ್‌ ಫಲಾಹ್‌ ವಿಶ್ವ ವಿದ್ಯಾನಿಲಯ ಉಗ್ರ ನೆಲೆಯಾಗಿದ್ದು ಹೇಗೆ?

ಫರಿದಾಬಾದ್‌ನ ಅಲ್‌ ಫಲಾಹ್‌ ವಿವಿ ಉಗ್ರ ನೆಲೆಯಾಗಿದ್ದು ಹೇಗೆ?

Al-Falah University: ನವೆಂಬರ್‌ 10ರಂದು ದೆಹಲಿಯ ಕೆಂಪು ಕೋಟೆ ಬಳಿ ಉಗ್ರರು ನಡೆಸಿದ ಕಾರು ಬಾಂಬ್‌ ಸ್ಫೋಟದ ಪ್ರಧಾನ ಸೂತ್ರಧಾರಿ ಡಾ. ಉಮರ್‌ ಮೊಹಮ್ಮದ್‌ ಹರಿಯಾಣದ ಫರಿದಾಬಾದ್‌ನ ಅಲ್‌ ಫಲಾಹ್‌ ವಿವಿಯ ಶಿಕ್ಷಕನಾಗಿದ್ದ. ಅಲ್ಲದೆ ಆತನೊಂದಿಗೆ ಸೆರೆಸಿಕ್ಕ ಡಾ. ಮುಜಮ್ಮಿಲ್ ಗನೈ, ಡಾ. ಶಾಹೀನ್‌ ಶಹೀದ್‌ ಈ ವಿವಿಯವರೇ. ಹೀಗಾಗಿ ಸದ್ಯ ಫರಿದಾಬಾದ್‌ನ ಅಲ್‌ ಫಲಾಹ್‌ ವಿವಿ ಉಗ್ರರ ಆಶ್ರಯ ತಾಣವಾಗಿ ಬದಲಾಗಿದೆಯೇ ಎನ್ನುವ ಅನುಮಾನ ಹುಟ್ಟು ಹಾಕಿದೆ.

Delhi Blast: ಆ 3 ಗಂಟೆಯ ರಹಸ್ಯ; ದೆಹಲಿ ಸ್ಫೋಟಕ್ಕೂ ಮುನ್ನ ಕಾರು ನಿಲ್ಲಿಸಿ ಬಾಂಬರ್‌ ಮಾಡಿದ್ದೇನು?

ದೆಹಲಿ ಸ್ಫೋಟಕ್ಕೂ ಮುನ್ನ ಬಾಂಬರ್‌ 3 ಗಂಟೆ ಕಾರು ನಿಲ್ಲಿಸಿದ್ದೇಕೆ?

ದೆಹಲಿ ಕಾರು ಸ್ಫೋಟದ ರೂವಾರಿ ಜಮ್ಮು ಮತ್ತು ಕಾಶ್ಮೀರ ಮೂಲದ ಡಾ. ಉಮರ್‌ ಮೊಹಮ್ಮದ್‌ ಎನ್ನುವ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಕೆಂಪು ಕೋಟೆ ಸಮೀಪದ ಪಾರ್ಕಿಂಗ್‌ ಏರಿಯಾಕ್ಕೆ ಅಪರಾಹ್ನ 3.19ಕ್ಕೆ ಬಂದ ಕಾರು ಬಳಿಕ ತೆರಳಿದ್ದು ಸಂಜೆ 6.28ಕ್ಕೆ. ನಿಧಾನವಾಗಿ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ಟ್ರಾಫಿಕ್‌ ಸಿಗ್ನಲ್‌ನಲ್ಲಿ ಸ್ಫೋಟಗೊಂಡಿತು. ಹಾಗಾದರೆ ಸುಮಾರು 3 ಗಂಟೆಗಿಂತ ಹೆಚ್ಚು ಕಾಲ ಕಾರನ್ನು ಉಮರ್‌ ಮೊಹಮ್ಮದ್‌ ಪಾರ್ಕಿಂಗ್‌ ಏರಿಯಾದಲ್ಲಿ ನಿಲ್ಲಿಸಿದ್ದು ಏಕೆ? ಅಷ್ಟೊತ್ತು ಪ್ಲ್ಯಾನ್‌ ಮಾಡುತ್ತಿದ್ದನೆ? ಇಲ್ಲಿದೆ ನಿಮ್ಮೆಲ್ಲ ಪ್ರಶ್ನೆಗೆ ಉತ್ತರ.

Encounter In Chhattisgarh: ಛತ್ತೀಸ್‌ಗಢದಲ್ಲಿ ಮಹತ್ವದ ಕಾರ್ಯಾಚರಣೆ;  6 ಮಾವೋವಾದಿಗಳನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಛತ್ತೀಸ್‌ಗಢದಲ್ಲಿ 6 ಮಾವೋವಾದಿಗಳು ಫಿನಿಷ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆ 6 ಮಾವೋವಾದಿಗಳನ್ನು ಹತ್ಯೆಗೈದಿವೆ. ಜತೆಗೆ ಮಾವೋವಾದಿಗಳ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಐಎನ್‌ಎಸ್‌ಎಎಸ್‌ ರೈಫಲ್‌, ಸ್ಟೆನ್‌ ಗನ್‌, .303 ರೈಫಲ್‌, ಸ್ಫೋಟಕ ವಸ್ತುಗಳು, ಮಾಮೋವಾದಿ ಸಾಹಿತ್ಯ ಸೇರಿವೆ.

Bihar Exit Polls: ಬಿಹಾರ ಎಕ್ಸಿಟ್‌ ಪೋಲ್‌ ವರದಿಯಲ್ಲಿ ಎನ್‌ಡಿಎಗೆ ಬಹುಮತ; ದಾಖಲೆಯ ಮತದಾನ ವರವಾಯ್ತಾ?

ಬಿಹಾರ ಎಕ್ಸಿಟ್‌ ಪೋಲ್‌ ವರದಿಯಲ್ಲಿ ಎನ್‌ಡಿಎಗೆ ಬಹುಮತ

NDA: ಬಹುನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆಯ ಎಕ್ಸಿಟ್‌ ಪೋಲ್‌ ರಿಸಲ್ಟ್‌ ಹೊರ ಬಿದ್ದಿದೆ. ಬಹುತೇಕ ಎಲ್ಲ ಸಮೀಕ್ಷೆಗಳು ಎನ್‌ಡಿಎ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಬಗ್ಗೆ ಭವಿಷ್ಯ ನುಡಿದಿವೆ. ಬಿಹಾರದಲ್ಲಿ ಈ ಬಾರಿ ದಾಖಲೆಯ ಪ್ರಮಾಣದ ಮತದಾನವಾಗಿದ್ದು, ಇದು ಎನ್‌ಡಿಎಗೆ ಅನುಕೂಲ ಮಾಡಿಕೊಟ್ಟಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Bihar Assembly Election: ಬಿಹಾರ ಎಕ್ಸಿಟ್‌ ಪೋಲ್‌ ರಿಸಲ್ಟ್‌ ಔಟ್‌; ಎನ್‌ಡಿಎಗೆ ಮತ್ತೆ ಅಧಿಕಾರ ಸಾಧ್ಯತೆ: ಮಹಾಘಟಬಂಧನ್‌ ಕಥೆ ಏನಾಗಲಿದೆ?

ಬಿಹಾರ ಎಕ್ಸಿಟ್‌ ಪೋಲ್‌ ರಿಸಲ್ಟ್‌ ಔಟ್‌; ಯಾರಿಗೆ ಗದ್ದುಗೆ?

Exit Poll Result: ನವೆಂಬರ್‌ 6 ಮತ್ತು 11-ಹೀಗೆ 2 ಹಂತದಲ್ಲಿ ಮತದಾನ ನಡೆದ ಬಿಹಾರ ಇದೀಗ ರಾಜಕೀಯ ಕಾವಿನಿಂದ ಮುಕ್ತವಾಗಿದೆ. ನವೆಂಬರ್‌ 14ರಂದು ಫಲಿತಾಂಶ ಘೋಷಣೆಯಾಗಲಿದ್ದು, ಅದಕ್ಕೆ ಮುಂಚಿತವಾಗಿ ಇದೀಗ ಎಕ್ಸಿಟ್‌ ಪೋಲ್‌ ರಿಸಲ್ಟ್‌ ಹೊರ ಬಿದ್ದಿದೆ.

ದೆಹಲಿಯಲ್ಲಿ ಕಾರಿನೊಂದಿಗೆ ಛಿದ್ರವಾದ ಆತ್ಮಹತ್ಯಾ ಬಾಂಬರ್‌ ಗುರುತು ಪತ್ತೆಗೆ ಡಿಎನ್‌ಎ ಟೆಸ್ಟ್;‌ ತಾಯಿ, ಸಹೋದರ ವಶಕ್ಕೆ

ದೆಹಲಿ ಆತ್ಮಹತ್ಯಾ ಬಾಂಬರ್‌ ಗುರುತು ಪತ್ತೆಗೆ ಡಿಎನ್‌ಎ ಟೆಸ್ಟ್

Delhi Blast: ಸೋಮವಾರ (ನವೆಂಬರ್‌ 10) ಸಂಜೆ ದೆಹಲಿಯ ಕೆಂಪು ಕೋಟೆ ಸಮೀಪ ನಡೆದ ಭಯೋತ್ಪಾದಕ ದಾಳಿಯ ಪ್ರಧಾನ ಸೂತ್ರಧಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ವೈದ್ಯ ಡಾ. ಉಮರ್‌ ಮೊಹಮ್ಮದ್‌ ಎಂದು ಗುರುತಿಸಲಾಗಿದೆ. ಇದೀಗ ಈತನ ತಾಯಿಯ ಡಿಎನ್‌ಎ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

Faridabad Terror Module: ದೆಹಲಿ ಸ್ಫೋಟದ ಹಿಂದೆ ಫರಿದಾಬಾದ್‌ನಲ್ಲಿ ಸೆರೆಸಿಕ್ಕ ಭಯೋತ್ಪಾದಕರ ಕೈವಾಡ?

ದೆಹಲಿ ಸ್ಫೋಟಕ್ಕೆ ಫರಿದಾಬಾದ್‌ನಲ್ಲಿ ಸಂಚು?

Delhi Blast: ನವೆಂಬರ್‌ 10ರ ಸಂಜೆ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಆತ್ಮಹತ್ಯಾ ಬಾಂಬರ್‌ಗಳು ಕಾರು ಸ್ಫೋಟಿಸಿ 10ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದ ಪ್ರಕರಣಕ್ಕೂ ಹರಿಯಾಣದ ಫರಿದಾಬಾದ್‌ನಲ್ಲಿ ಬರೋಬ್ಬರಿ 2,900 ಕೆಜಿ ಸ್ಫೋಟಕ ಪತ್ತೆಯಾದ ಪ್ರಕರಣಕ್ಕೂ ಸಂಬಂಧವಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

Delhi Blast: ಆಪರೇಷನ್‌ ಸಿಂದೂರ್‌ ಆನ್‌; ದೆಹಲಿ ಸ್ಫೋಟದ ಬೆನ್ನಲ್ಲೇ ಉಗ್ರರಿಗೆ ಖಡಕ್‌ ಸಂದೇಶ

ದೆಹಲಿ ಸ್ಫೋಟದ ಬೆನ್ನಲ್ಲೇ ಉಗ್ರರಿಗೆ ಖಡಕ್‌ ಸಂದೇಶ

ದೆಹಲಿಯ ಕೆಂಪು ಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟದ ಹಿಂದೆ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಕೈವಾಡವಿರುವ ಶಂಖೆ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಸರ್ಕಾರ ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆ ನಡೆಸಲು ಮುಂದಾಗಿದೆ ಎನ್ನುವ ಸೂಚನೆ ಸಿಕ್ಕಿದೆ.

Delhi Blast: ದೆಹಲಿ ಕಾರು ಸ್ಫೋಟ ಪ್ರಕರಣ; ಇಬ್ಬರ ಬಂಧನ: ಆಸ್ಪತ್ರೆಗೆ ಅಮಿತ್‌ ಶಾ ಭೇಟಿ

ದೆಹಲಿಯಲ್ಲಿ ಸ್ಫೋಟಗೊಂಡ ಕಾರಿನ ಮಾಲಕರಿಬ್ಬರ ಬಂಧನ

ದೆಹಲಿಯ ಕೆಂಪು ಕೋಟೆಯ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಕಾರು ಸ್ಫೋಟಕ್ಕೆ 10ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಜನ ನಿಬಿಡ ಪ್ರದೇಶದಲ್ಲಿ ಈ ಸ್ಫೋಟ ನಡೆದಿದ್ದು, ಮೇಲ್ನೋಟಕ್ಕೆ ಇದೊಂದು ಭಯೋತ್ಪಾದಕರ ಕೃತ್ಯದಂತೆ ಕಂಡು ಬಂದಿದೆ. ಈ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಗೆ ಭೇಟಿ ನೀಡಿದರು.

ದೆಹಲಿ ಕಾರು ಸ್ಫೋಟ; ಪರಿಸ್ಥಿತಿ ಅವಲೋಕಿಸಿದ ಪ್ರಧಾನಿ ಮೋದಿ-ಗೃಹ ಸಚಿವ ಅಮಿತ್‌ ಶಾ

ದೆಹಲಿ ಕಾರು ಸ್ಫೋಟ; ಪರಿಸ್ಥಿತಿ ಅವಲೋಕಿಸಿದ ಮೋದಿ-ಅಮಿತ್‌ ಶಾ

Delhi Blast: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆ ಬಳಿ ನಿಲ್ಲಿಸಿದ್ದ ಕಾರು ಸೋಮವಾರ ಸ್ಫೋಟಗೊಂಡು ಕನಿಷ್ಠ 9 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಮಾತುಕತೆ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದಾರೆ.

Delhi Blast: ಕಾರು ಸ್ಫೋಟಕ್ಕೆ ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ ದೆಹಲಿ; ಇದು ಉಗ್ರರ ಕೃತ್ಯವೇ?

ದೆಹಲಿಯಲ್ಲಿ ಕಾರು ಸ್ಫೋಟ; ಇದು ಉಗ್ರರ ಕೃತ್ಯವೇ?

ರಾಷ್ಟ್ರ ರಾಜಧಾನಿ ದೆಹಲಿ ಕೆಂಪು ಕೋಟೆ ಸಮೀಪ ಕಾರು ಸ್ಫೋಟಗೊಂಡು ಕನಿಷ್ಠ 8 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಈ ಮಧ್ಯೆ ದೆಹಲಿ ಸಮೀಪದ ಹರಿಯಾಣದ ಫರಿದಾಬಾದ್‌ನಲ್ಲಿ ಸುಮಾರು 350 ಕೆಜಿ ಸ್ಫೋಟಕದೊಂದಿಗೆ ಶಂಕಿತ ಉಗ್ರ ಸೆರೆಯಾಗಿದ್ದು, ಇದು ಭಯೋತ್ಪಾದಕರ ವಿದ್ವಂಸಕ ಕೃತ್ಯದ ಭಾಗವೇ ಎನ್ನುವ ಅನುಮಾನ ಹುಟ್ಟು ಹಾಕಿದೆ.

Delhi Blast: ದೆಹಲಿ ಕೆಂಪು ಕೋಟೆ ಸಮೀಪ ಕಾರು ಸ್ಫೋಟ; 8 ಮಂದಿ ಸಾವು

ದೆಹಲಿ ಕೆಂಪು ಕೋಟೆ ಸಮೀಪ ಕಾರು ಸ್ಫೋಟ; 8 ಮಂದಿ ಸಾವು?

Delhi Red Fort Car Explosion: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆ ಬಳಿ ಕಾರೊಂದು ಸ್ಫೋಟಗೊಂಡಿದ್ದು, 8 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ನವೆಂಬರ್‌ 10ರ ಸಂಜೆ ಕೆಂಪು ಕೋಟೆ ಮೆಟ್ರೋ ಸ್ಟೇಷನ್‌ ಗೇಟ್‌ 1ರ ಸಮೀಪ ಕಾರು ಸ್ಫೋಟಗೊಂಡಿದೆ ಎಂದು ಮೂಲಗಳು ತಿಳಿಸಿವೆ.

Loading...