ದೆಹಲಿ ಸ್ಫೋಟದ ಬೆನ್ನಲ್ಲೇ ಉಗ್ರರಿಗೆ ಖಡಕ್ ಸಂದೇಶ
ದೆಹಲಿಯ ಕೆಂಪು ಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟದ ಹಿಂದೆ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಕೈವಾಡವಿರುವ ಶಂಖೆ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಸರ್ಕಾರ ಆಪರೇಷನ್ ಸಿಂದೂರ್ ಕಾರ್ಯಾಚರಣೆ ನಡೆಸಲು ಮುಂದಾಗಿದೆ ಎನ್ನುವ ಸೂಚನೆ ಸಿಕ್ಕಿದೆ.
Senior Sub Editor
rameshballamule@gmail.com
ಗಡಿನಾಡು ಕಾಸರಗೋಡು ಜಿಲ್ಲೆಯ ಆದೂರು ಗ್ರಾಮದ ರಮೇಶ್ ಬಳ್ಳಮೂಲೆ ಉದಯವಾಣಿ ದಿನ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದರು. ಬಳಿಕ ವಿಜಯವಾಣಿ, ಅಧಾನ್ ನ್ಯೂಸ್ ಆ್ಯಪ್, ನ್ಯೂಸ್ ಆ್ಯರೋ ವೆಬ್ಸೈಟ್, ವಿಸ್ತಾರ ನ್ಯೂಸ್ ವೆಬ್ಸೈಟ್ನಲ್ಲಿ ಕಾರ್ಯ ನಿರ್ವಹಿಸಿದರು. 2024ರ ಆಗಸ್ಟ್ನಿಂದ ವಿಶ್ವವಾಣಿ ವೆಬ್ಸೈಟ್ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ. ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುಮಾರು 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಬರವಣಿಗೆ, ಓದು, ಸಿನಿಮಾ ವೀಕ್ಷಣೆ, ಪ್ರವಾಸ ಇವರ ನೆಚ್ಚಿನ ಹವ್ಯಾಸ.
ದೆಹಲಿಯ ಕೆಂಪು ಕೋಟೆಯ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಕಾರು ಸ್ಫೋಟಕ್ಕೆ 10ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಜನ ನಿಬಿಡ ಪ್ರದೇಶದಲ್ಲಿ ಈ ಸ್ಫೋಟ ನಡೆದಿದ್ದು, ಮೇಲ್ನೋಟಕ್ಕೆ ಇದೊಂದು ಭಯೋತ್ಪಾದಕರ ಕೃತ್ಯದಂತೆ ಕಂಡು ಬಂದಿದೆ. ಈ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ದೆಹಲಿಯ ಎಲ್ಎನ್ಜೆಪಿ ಆಸ್ಪತ್ರೆಗೆ ಭೇಟಿ ನೀಡಿದರು.
Delhi Blast: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆ ಬಳಿ ನಿಲ್ಲಿಸಿದ್ದ ಕಾರು ಸೋಮವಾರ ಸ್ಫೋಟಗೊಂಡು ಕನಿಷ್ಠ 9 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಮಾತುಕತೆ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿ ಕೆಂಪು ಕೋಟೆ ಸಮೀಪ ಕಾರು ಸ್ಫೋಟಗೊಂಡು ಕನಿಷ್ಠ 8 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಈ ಮಧ್ಯೆ ದೆಹಲಿ ಸಮೀಪದ ಹರಿಯಾಣದ ಫರಿದಾಬಾದ್ನಲ್ಲಿ ಸುಮಾರು 350 ಕೆಜಿ ಸ್ಫೋಟಕದೊಂದಿಗೆ ಶಂಕಿತ ಉಗ್ರ ಸೆರೆಯಾಗಿದ್ದು, ಇದು ಭಯೋತ್ಪಾದಕರ ವಿದ್ವಂಸಕ ಕೃತ್ಯದ ಭಾಗವೇ ಎನ್ನುವ ಅನುಮಾನ ಹುಟ್ಟು ಹಾಕಿದೆ.
Delhi Red Fort Car Explosion: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆ ಬಳಿ ಕಾರೊಂದು ಸ್ಫೋಟಗೊಂಡಿದ್ದು, 8 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ನವೆಂಬರ್ 10ರ ಸಂಜೆ ಕೆಂಪು ಕೋಟೆ ಮೆಟ್ರೋ ಸ್ಟೇಷನ್ ಗೇಟ್ 1ರ ಸಮೀಪ ಕಾರು ಸ್ಫೋಟಗೊಂಡಿದೆ ಎಂದು ಮೂಲಗಳು ತಿಳಿಸಿವೆ.
Dharmendra: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈಯ ಬ್ರೀಜ್ ಕ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವರದಿಗಳ ಪ್ರಕಾರ 89 ವರ್ಷದ ಧರ್ಮೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು, ಕುಟುಂಬ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.
ಹರಿಯಾಣದ ಫರಿದಾಬಾದ್ನಲ್ಲಿ ಬರೋಬ್ಬರಿ 300 ಕೆಜಿ ಆರ್ಡಿಎಕ್ಸ್, ಎಕೆ -47 ರೈಫಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಮಹತ್ವದ ಬೆಳವಣಿಗೆ ಸಂಭವಿಸಿದೆ. ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಬಳಸಲಾದ ಕಾರನ್ನು ಪತ್ತೆ ಹಚ್ಚಲಾಗಿದ್ದು, ಇದು ಫರಿದಾಬಾದ್ ಆಸ್ಪತ್ರೆಯ ವೈದ್ಯೆಗೆ ಸೇರಿದ್ದು ಎಂದು ತನಿಖಾಧಿಕಾರಿಗಳು ತಿಳಿಸಿದಾರೆ. ಸದ್ಯ ಆಕೆಯನ್ನು ಬಂಧಿಸಲಾಗಿದೆ.
Tamil Actor Abhinay Passes Away: ಕಾಲಿವುಡ್ನ ಜನಪ್ರಿಯ ನಟ, ಬಹುಭಾಷಾ ಕಲಾವಿದ ಅಭಿನಯ್ ನವೆಂಬರ್ 10ರಂದು ನಿಧನ ಹೊಂದಿದರು. ಅವರಿಗೆ 44 ವರ್ಷ ವಯಸ್ಸಾಗಿತ್ತು. ಲಿವರ್ಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಸದ್ಯ ಮೃತದೇಹವನ್ನು ಅವರ ಚೆನ್ನೈ ನಿವಾಸದಲ್ಲಿ ಇರಿಸಲಾಗಿದೆ.
ಕಳೆದ ವರ್ಷ ಭಾರಿ ವಿವಾದ ಹುಟ್ಟು ಹಾಕಿದ ತಿರುಮಲ ತಿರುಪತಿ ದೇವಸ್ಥಾನಕ್ಕೆ ಕಲಬೆರಕೆಯ ತುಪ್ಪ ಪೂರೈಕೆಯ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಬೆಳವನಿಣಿಗೆಯೊದು ನಡೆದಿದೆ. ನಕಲಿ ತುಪ್ಪ ತಯಾರಿಸಲು ರಾಸಾಯನಿಕ ಪದಾರ್ಥ ಪೂರೈಸುತ್ತಿದ್ದ ದೆಹಲಿ ಮೂಲದ ವ್ಯಾಪಾರಿ ಅಜಯ್ ಕುಮಾರ್ ಸುಗಂಧನನ್ನು ವಿಶೇಷ ತನಿಖಾ ತಂಡ ಬಂಧಿಸಿದೆ.
IRONMAN 70.3: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗೋವಾದಲ್ಲಿ ನಡೆದ 5ನೇ ಆವೃತ್ತಿಯ ಐರನ್ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಈ ಓಟವನ್ನು ತೇಜಸ್ವಿ ಸೂರ್ಯ ಪೂರ್ಣಗೊಳಿಸುತ್ತಿರುವುದು ಇದು ಸತತ 2ನೇ ಬಾರಿ. ಈ ಸಲ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಕೂಡ ತಮ್ಮ ಓಟವನ್ನು ಪೂರ್ಣಗೊಳಿಸಿ ಗಮನ ಸೆಳೆದರು.
Rashtriya Swayamsevak Sangh: ಆರ್ಎಸ್ಎಸ್ ಕಾರ್ಯ ವೈಖರಿಯ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಎತ್ತಿದ್ದಾರೆ. ಆರ್ಎಸ್ಎಸ್ ಸ್ವಯಂಸೇವಕರು ನೀಡಿದ ದೇಣಿಗೆಯಿಂದ ಕಾರ್ಯ ನಿರ್ವಹಿಸುತ್ತದೆ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ಈ ಬಗ್ಗೆ ಅನೇಕ ಪ್ರಶ್ನೆಗಳು ಮೂಡುತ್ತವೆ ಎಂದು ಅವರು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
Actor Thiruveer: ತೆಲುಗು ಚಿತ್ರರಂಗದ ಉದಯೋನ್ಮುಖ ನಟ ತಿರುವೀರ್ ಮತ್ತು ಬಹುಭಾಷಾ ನಟಿ ಐಶ್ವರ್ಯಾ ರಾಜೇಶ್ ಮೊದಲ ಬಾರಿಗೆ ತೆರೆಮೇಲೆ ಒಂದಾಗುತ್ತಿರುವ, ಗಂಗಾ ಎಂಟರ್ಟೈನ್ಮೆಂಟ್ಸ್ನ ಪ್ರೊಡಕ್ಷನ್ ನಂ. 2 ಚಿತ್ರಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ. ಇನ್ನೂ ಹೆಸರಿಡದ ಈ ಚಿತ್ರವನ್ನು ಭರತ್ ದರ್ಶನ್ ನಿರ್ದೇಶಿಸುತ್ತಿದ್ದಾರೆ. ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ತೆರೆಗೆ ಬರಲಿದೆ.
Akhila Bhartiya Brahman Mahasangh: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಹೊಸ ಹುದ್ದೆದಾರರ ಪದಗ್ರಹಣ ಮತ್ತು ನೇಮಕಾತಿ ಪತ್ರ ವಿತರಣೆ ನೆರವೇರಿತು. ಸಂಘಟನೆಯ ವಿಸ್ತರಣೆ, ಯುವ ನಾಯಕತ್ವಕ್ಕೆ ಪ್ರೋತ್ಸಾಹ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡುವ ಉದ್ದೇಶದಿಂದ ಜಿಲ್ಲಾ ಅಧ್ಯಕ್ಷೆಯಾಗಿ ಪೂರ್ಣಿಮಾ ಜಿ.ಎಲ್. ಅವರನ್ನು ನೇಮಿಸಲಾಯಿತು.
CM Siddaramaiah: ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿನ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಐಸಿಸ್ ಭಯೋತ್ಪಾದಕ ಶಕೀಲ್ ಸೇರಿದಂತೆ ಹಲವರಿಗೆ ರಾಜಾತಿಥ್ಯ ದೊರೆಯುತ್ತಿರುವ ವಿಚಾರ ಇತ್ತೀಚೆಗೆ ಬೆಳಕಿಗೆ ಬಂತು ಭಾರಿ ಕೋಲಾಹಲಕ್ಕೆ ಕಾರಣವಾಗಿತ್ತು.
Koppal News: ಕೊಪ್ಪಳದಲ್ಲಿ 21 ವರ್ಷದ ಯುವಕನೊಬ್ಬ ತನ್ನ ಅಪ್ರಾಪ್ತ ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಸುಮಾರು 8 ತಿಂಗಳ ಬಳಿಕ ಬೆಳಕಿಗೆ ಬಂದಿದೆ. ಸಹೋದರನಿಂದ ಗರ್ಭ ಧರಿಸಿದ ಸಂತ್ರಸ್ತೆ ಅಕ್ಟೋಬರ್ 30ರಂದು ಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಕಾಮುಕ ಸಹೋದರನ್ನು ಪೊಲೀಸರು ಬಂಧಿಸಿದ್ದಾರೆ.
Superstar Rajinikanth: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಸಹೋದರ ಸತ್ಯನಾರಾಯಣ ರಾವ್ ಗಾಯಕ್ವಾಡ್ ಸದ್ಯ ಚೇತರಿಸಿಕೊಂಡಿದ್ದು, ಶನಿವಾರ (ನವೆಂಬರ್ 8) ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನಾರಾಯಣ ಹೃದಯಾಲಯದಲ್ಲಿ ಸತ್ಯನಾರಾಯಣ ರಾವ್ ಅವರಿಗೆ 2 ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು.
Health Tips: ಮಳೆಗಾಲ ಮರೆಯಾಗಿ ಚಳಿಗಾಲ ಮೆಲ್ಲನೆ ಅಡಿ ಇಟ್ಟಿದೆ. ಚಳಿಗಾಲವೆಂದರೆ ಚರ್ಮ ಬಿರಿಯುವ ಕಾಲವೂ ಹೌದು. ಹಾಗಾದರೆ ಹವಾಮಾನ ಬದಲಾಗುತ್ತಿರುವಾಗ, ಅದರಲ್ಲೂ ಶುಷ್ಕ ವಾತಾವರಣದಲ್ಲಿ ಚರ್ಮದ ದೇಖರೇಖಿ ಹೇಗಿರಬೇಕು? ಏನೆಲ್ಲಾ ಮಾಡಬೇಕು? ನಿಮ್ಮ ಮಿಲಿಯನ್ ಡಾಲರ್ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.
Narendra Modi: ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪಪ್ರಧಾನಿ, ಭಾರತ ರತ್ನ ಎಲ್.ಕೆ. ಅಡ್ವಾಣಿ ನವೆಂಬರ್ 8ರಂದು 98ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ. ದೇಶಕ್ಕಾಗಿ ಅಡ್ವಾಣಿ ನೀಡಿದ ಕೊಡುಗೆಯನ್ನು ಸ್ಮರಿಸಿದ ಮೋದಿ, ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.
Afghanistan-Pakistan: ಇಸ್ತಾಂಬುಲ್ನಲ್ಲಿ ಟರ್ಕಿ ಮತ್ತು ಕತಾರ್ನ ಮಧ್ಯಸ್ಥಿಕೆಯಲ್ಲಿ ನಡೆದ ಪಾಕಿಸ್ತಾನ-ಅಫ್ಘಾನಿಸ್ತಾನ ನಡುವಿನ ಮತ್ತೊಂದು ಸುತ್ತಿನ ಶಾಂತಿ ಮಾತುಕತೆ ಮುರಿದು ಬಿದ್ದಿದೆ. ಪಾಕಿಸ್ತಾನದ ಅಪ್ರಮಾಣಿಕ ಮತ್ತು ಅಪ್ರಬುದ್ಧ ನಡವಳಿಕೆಯನ್ನು ಅಫ್ಘಾನಿಸ್ತಾನ ಖಂಡಿಸಿದೆ. ಜತೆಗೆ ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ಸಿದ್ಧ ಎಂದು ಮತ್ತೊಮ್ಮೆ ಘೋಷಿಸಿದೆ.
Others Tamil Movie: ಉದಯೋನ್ಮಖ ನಟಿ ಗೌರಿ ಕಿಶನ್ ತೂಕದ ಬಗೆ ಸಹನಟನ ಬಳಿ ಪ್ರಶ್ನೆ ಕೇಳಿ ವಿವಾದ ಹುಟ್ಟು ಹಾಕಿದ್ದ ಯೂಟ್ಯೂಬರ್ ಆರ್.ಎಸ್. ಕಾರ್ತಿಕ್ ಕೊನೆಗೂ ಕ್ಷಮೆ ಕೋರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಕಾರ್ತಿಕ್ ನಟ ಆದಿತ್ಯ ಮಾಧವನ್ ಬಳಿ, ʼʼದೃಶ್ಯವೊಂದರಲ್ಲಿ ನೀವು ನಟಿ ಗೌರಿ ಅವರನ್ನು ಎತ್ತಿಕೊಳ್ಳುತ್ತೀರಿ. ಅವರು ಎಷ್ಟು ತೂಕ ಇದ್ದಾರೆ?ʼʼ ಎಂದು ಪ್ರಶ್ನಿಸುವ ಮೂಲಕ ಮುಜುಗರ ಉಂಟು ಮಾಡಿದ್ದರು.
Guruvayoor Temple: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರೀ ಕೃಷ್ಣನ ವರ್ಣಚಿತ್ರವನ್ನು ಉಡುಗೊರೆಯನ್ನಾಗಿ ನೀಡಿದ್ದ ಕೇರಳರದ ಮುಸ್ಲಿಂ ಕಲಾವಿದೆ ಜಸ್ನಾ ಸಲೀಂ ವಿರುದ್ದ ದೂರು ದಾಖಲಾಗಿದೆ. ಗುರುವಾಯೂರು ಶ್ರೀ ಕೃಷ್ಣ ದೇವಸ್ಥಾನದ ನಿಯಮ ಉಲ್ಲಂಘಿಸಿ ವಿಡಿಯೊ ಮಾಡಿದ ಆರೋಪದ ಮೇಲೆ ಜಸ್ನಾ ಸಲೀಂ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Rashmika Mandanna: ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಭಿನಯದ ತೆಲುಗು ಚಿತ್ರ ʼದಿ ಗರ್ಲ್ಫ್ರೆಂಡ್ʼ ತೆರೆ ಕಂಡಿದೆ. ರಶ್ಮಿಕಾ ಮೊದಲ ಬಾರಿಗೆ ದೀಕ್ಷಿತ್ ಶೆಟ್ಟಿ ಜತೆ ನಟಿಸಿದ್ದು ಪ್ರೇಕ್ಷಕರ, ವಿಮರ್ಶಕರ ಗಮನ ಸೆಳೆದಿದೆ. ಹಾಗಾದರೆ ಈ ಚಿತ್ರ ಮೊದಲ ದಿನ ಗಳಿಸಿದ್ದೆಷ್ಟು? ಇಲ್ಲಿದೆ ವಿವರ.
ಕರ್ನಾಟಕ ಹವಾಮಾನ ವರದಿ: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಅದಾಗ್ಯೂ ಮಂಗಳವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ. ರಾಜ್ಯದಲ್ಲಿ ನಿಧಾನವಾಗಿ ಸೆಕೆಯ ವಾತಾವರಣ ಕಂಡು ಬರಲಿದೆ. ಜತೆಗೆ ರಾಜ್ಯಾದ್ಯಂತ ಬೆಳಗ್ಗೆ ಮತ್ತು ರಾತ್ರಿ ಚಳಿಯ ವಾತಾವರಣ ಇರಲಿದೆ.