ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

Ramesh B

Senior Sub Editor

rameshballamule@gmail.com

ಗಡಿನಾಡು ಕಾಸರಗೋಡು ಜಿಲ್ಲೆಯ ಆದೂರು ಗ್ರಾಮದ ರಮೇಶ್ ಬಳ್ಳಮೂಲೆ ಉದಯವಾಣಿ ದಿನ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದರು. ಬಳಿಕ ವಿಜಯವಾಣಿ, ಅಧಾನ್ ನ್ಯೂಸ್ ಆ್ಯಪ್, ನ್ಯೂಸ್ ಆ್ಯರೋ ವೆಬ್‌ಸೈಟ್‌, ವಿಸ್ತಾರ ನ್ಯೂಸ್ ವೆಬ್‌ಸೈಟ್‌ನಲ್ಲಿ ಕಾರ್ಯ ನಿರ್ವಹಿಸಿದರು. 2024ರ ಆಗಸ್ಟ್‌ನಿಂದ ವಿಶ್ವವಾಣಿ ವೆಬ್‌ಸೈಟ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ. ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುಮಾರು 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಬರವಣಿಗೆ, ಓದು, ಸಿನಿಮಾ ವೀಕ್ಷಣೆ, ಪ್ರವಾಸ ಇವರ ನೆಚ್ಚಿನ ಹವ್ಯಾಸ.

Articles
Karnataka Weather: ಕಡಿಮೆಯಾಯ್ತು ಹಿಂಗಾರು ಮಳೆ ಅಬ್ಬರ; ಹೆಚ್ಚಾಯ್ತು ಉಷ್ಣಾಂಶ

ರಾಜ್ಯಾದ್ಯಂತ ಕಡಿಮೆಯಾಯ್ತು ಹಿಂಗಾರು ಮಳೆ ಅಬ್ಬರ

ಕರ್ನಾಟಕ ಹವಾಮಾನ ವರದಿ: ಶುಕ್ರವಾರ ರಾಜ್ಯಾದ್ಯಂತ ಮಳೆ ಬರುವ ಸಾಧ್ಯತೆ ತೀರಾ ಕಡಿಮೆ. ಇನ್ನು ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನಾಳೆ ಉಡುಪಿಗೆ ನರೇಂದ್ರ ಮೋದಿ ಭೇಟಿ; ಕನ್ನಡದಲ್ಲೇ ಪೋಸ್ಟ್‌ ಹಂಚಿಕೊಂಡ ಪ್ರಧಾನಿ

ನಾಳೆ ಉಡುಪಿಗೆ ನರೇಂದ್ರ ಮೋದಿ ಭೇಟಿ; ಕನ್ನಡದಲ್ಲೇ ಸಂತಸ ಹಂಚಿಕೊಂಡ ಪ್ರಧಾನಿ

Laksha Kantha Gita Parayana: ಶುಕ್ರವಾರ (ನವೆಂಬರ್‌ 28) ಉಡುಪಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಮೋದಿ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ದೇವರ ದರ್ಶನ ಹಾಗೂ ರೋಡ್‌ ಶೋ ಮಾಡಲಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಕನ್ನಡದಲ್ಲೇ ಪೋಸ್ಟ್‌ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಡಿ.ಕೆ. ಶಿವಕುಮಾರ್‌ಗೆ ಸಿದ್ದರಾಮಯ್ಯ ʼಪವರ್‌ʼ ಫುಲ್‌ ಡಿಚ್ಚಿ?; ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದೇನು?

ಡಿ.ಕೆ. ಶಿವಕುಮಾರ್‌ಗೆ ತಿರುಗೇಟು ಕೊಟ್ರಾ ಸಿದ್ದರಾಮಯ್ಯ?

Karnataka CM Row: ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ನಡುವಿನ ಕುರ್ಚಿ ಕಾಳಗ ತಾರಕಕ್ಕೇರಿದೆ. ಸಿಎಂ ಪಟ್ಟಕ್ಕಾಗಿ ಇಬ್ಬರು ನಾಯಕರ ಬಣ ಪೈಪೋಟಿ ನಡೆಸುತ್ತಿದೆ. ಈ ಮಧ್ಯೆ ಡಿಕೆಶಿ ಮತ್ತು ಸಿದ್ದರಾಮಯ್ಯ ಎಕ್ಸ್‌ ಪೋಸ್ಟ್‌ ಮೂಲಕ ಪರಸ್ಪರ ಟೀಕಿಸುತ್ತಿದ್ದಾರಾ ಎನ್ನುವ ಅನುಮಾನ ಮೂಡ ತೊಡಗಿದೆ. ಆ ಕುರಿತಾದ ವಿವರ ಇಲ್ಲಿದೆ.

ಹೈಕಮಾಂಡ್ ಕರೆದರೆ ಸಿದ್ದರಾಮಯ್ಯ ಜತೆ ದೆಹಲಿಗೆ ಹೋಗುತ್ತೇನೆ: ಡಿ.ಕೆ. ಶಿವಕುಮಾರ್

ಹೈಕಮಾಂಡ್ ಕರೆದರೆ ಸಿದ್ದರಾಮಯ್ಯ ಜತೆ ದೆಹಲಿಗೆ ಹೋಗುತ್ತೇನೆ: ಡಿಕೆಶಿ

DK Shivakumar: ʼʼಹೈಕಮಾಂಡ್ ನಾಯಕರು ದೆಹಲಿಗೆ ಕರೆದರೆ ಹೋಗುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼʼಹೈಕಮಾಂಡ್ ನನ್ನನ್ನು ಹಾಗೂ ಮುಖ್ಯಮಂತ್ರಿಯನ್ನು ಕರೆದರೆ ನಾವು ಮಾತನಾಡಿಕೊಂಡು ದೆಹಲಿಗೆ ಹೋಗುತ್ತೇವೆ” ಎಂದರು.

ಕೊಟ್ಟ ಮಾತು ಉಳಿಸಿಕೊಳ್ಳದೆ ಇರುವುದು ಮಹಾ ದ್ರೋಹ: ಡಿ.ಕೆ. ಶಿವಕುಮಾರ್‌ ಹೆಸರು ಉಲ್ಲೇಖಿಸಿ ಜೆಡಿಎಸ್‌ ಹೀಗೆ ಹೇಳಿದ್ದೇಕೆ?

ಡಿ.ಕೆ. ಶಿವಕುಮಾರ್‌ ವಿರುದ್ಧ ಜೆಡಿಎಸ್‌ ವ್ಯಂಗ್ಯ

JDS: ಡಿ.ಕೆ. ಶಿವಕುಮಾರ್‌ ಅವರನ್ನು ಅಣಕಿಸಿ ಜೆಡಿಎಸ್‌ ಎಕ್ಸ್‌ನಲ್ಲಿ ಪೋಸ್ಟ್‌ ಶೇರ್‌ ಮಾಡಿದೆ. ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎನ್ನುವ ಅವರ ಮಾತನ್ನೇ ಉಲ್ಲೇಖಿಸಿ ಅವರನ್ನು ವ್ಯಂಗ್ಯವಾಡಿದೆ. ಕೊಟ್ಟ ಮಾತು ಉಳಿಸಿಕೊಳ್ಳದೆ ಇರುವುದು ಮಾಹಾ ದ್ರೋಹ! ಅಲ್ಲವೇ ಡಿ.ಕೆ. ಶಿವಕುಮಾರ್‌? ಎಂದು ಪ್ರಶ್ನಿಸಿದೆ.

Karnataka CM Row: ಡಿ.ಕೆ. ಶಿವಕುಮಾರ್‌ ಪರ ನಂಜಾವಧೂತ ಸ್ವಾಮೀಜಿ ಬ್ಯಾಟಿಂಗ್‌; ಸಿಎಂ ಪಟ್ಟ ನೀಡಲು ಆಗ್ರಹ

ಡಿ.ಕೆ. ಶಿವಕುಮಾರ್‌ ಪರ ನಂಜಾವಧೂತ ಸ್ವಾಮೀಜಿ ಬ್ಯಾಟಿಂಗ್‌

Nanjavadhoota Swamiji: ರಾಜ್ಯದಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಪೈಪೋಟಿ ತೀವ್ರವಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ನಡುವಿನ ಸಿಎಂ ಕುರ್ಚಿ ಕಾದಾಟ ಜೋರಾಗಿಯೇ ನಡೆಯುತ್ತಿದೆ. ಈ ಮಧ್ಯೆ ಶ್ರೀ ಆದಿಚುಂಚನಗಿರಿ ಮಠದ ಶಾಖಾ ಮಠಾಧೀಶರಾದ ನಂಜಾವಧೂತ ಸ್ವಾಮೀಜಿ ಡಿ.ಕೆ. ಶಿವಕುಮಾರ್‌ ಪರ ಬ್ಯಾಟ್‌ ಬೀಸಿದ್ದಾರೆ. ಡಿಕೆಶಿ ಅವರಿಗೆ ಸಿಎಂ ಪಟ್ಟ ಸಿಗಬೇಕು ಎಂದಿದ್ದಾರೆ.

ಪರ ಪುರುಷರೊಂದಿಗೆ ಹಾಸಿಗೆ ಹಂಚಿಕೊಳ್ಳುವಂತೆ ಬಲವಂತ ಮಾಡಿದ್ರು; ಪತಿಯ ದೌರ್ಜನ್ಯ ಎಳೆ ಎಳೆಯಾಗಿ ಬಿಚ್ಚಿಟ್ಟ ಸೆಲಿನಾ ಜೇಟ್ಲಿ

ಪತಿಯ ದೌರ್ಜನ್ಯ ಎಳೆ ಎಳೆಯಾಗಿ ಬಿಚ್ಚಿಟ್ಟ ಸೆಲಿನಾ ಜೇಟ್ಲಿ

Celina Jaitly: ಬಾಲಿವುಡ್‌ ನಟಿ ಸೆಲಿನಾ ಜೇಟ್ಲಿಯ 14 ವರ್ಷಗಳ ದಾಂಪತ್ಯ ಜೀವನ ಮುರಿದು ಬಿದ್ದಿದೆ. ಆಸ್ಟ್ರೀಯಾ ಉದ್ಯಮಿ ಪೀಟರ್‌ ಹೇಗ್‌ನನ್ನು ವರಿಸಿದ್ದ ಅವರು ಇದೀಗ ಡಿವೋಸರ್ಸ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜತೆಗೆ ಪತಿ ತನ್ನ ಮೇಲೆ ಯಾವ ರೀತಿ ದೌರ್ಜನ್ಯ ಎಸಗುತ್ತಿದ್ದರು ಎನ್ನುವುದನ್ನು ತಿಳಿಸಿದ್ದಾರೆ. ತನ್ನ ನಗ್ನ ಚಿತ್ರ ತೋರಿಸಿ ಪರ ಪುರುಷರೊಂದಿಗೆ ಮಲಗುವಂತೆ ಪೀಡಿಸುತ್ತಿದ್ದುದಾಗಿ ವಿವರಿಸಿದ್ದಾರೆ.

ಹಾಂಗ್‌ ಕಾಂಗ್‌ನಲ್ಲಿ ಭೀಕರ ಅಗ್ನಿ ದುರಂತ; 13 ಮಂದಿ ಸಾವು: 7 ಕಟ್ಟಡಗಳಿಗೆ ವ್ಯಾಪಿಸಿದ ಬೆಂಕಿ

ಹಾಂಗ್‌ ಕಾಂಗ್‌ನಲ್ಲಿ ಭೀಕರ ಅಗ್ನಿ ದುರಂತ; 13 ಮಂದಿ ಸಾವು

Hong Kong Fire: ಹಾಂಗ್‌ ಕಾಂಗ್‌ನಲ್ಲಿ ಭೀಕರ ಅಗ್ನಿ ದುರಂತ ನಡೆದಿದ್ದು ಕನಿಷ್ಠ 13 ಮಂದಿ ಬಲಿಯಾಗಿದ್ದಾರೆ. ಹಾಂಗ್‌ ಕಾಂಗ್‌ನ ತೈ ಪೊ ಜಿಲ್ಲೆಯ ಹೌಸಿಂಗ್‌ ಕಾಂಪ್ಲೆಕ್ಸ್‌ನಲ್ಲಿರುವ 7 ಬಹು ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ಬೆಂಕಿ ವ್ಯಾಪಿಸಿದ್ದು, ಇಡೀ ಕಟ್ಟಡಗಳೇ ಹೊತ್ತಿ ಉರಿದಿವೆ. ಅಗ್ನಿಶಾಮಕ ದಳದ 128 ವಾಹನಗಳು ಮತ್ತು 57 ಆಂಬ್ಯುಲೆನ್ಸ್‌ಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ಭೂಮಿಯ ಅಪರೂಪದ ಶಾಶ್ವತ ಆಯಸ್ಕಾಂತ ತಯಾರಿಕೆಗೆ ಉತ್ತೇಜನ; ಕೇಂದ್ರದಿಂದ 7,280 ಕೋಟಿ ರೂ. ಅನುಮೋದನೆ

ಶಾಶ್ವತ ಆಯಸ್ಕಾಂತ ತಯಾರಿಕೆಗೆ 7,280 ಕೋಟಿ ರೂ. ಅನುಮೋದನೆ

ಪ್ರಮುಖ ಉದ್ಯಮಗಳಾದ ಎಲೆಕ್ಟ್ರಿಕ್‌ ವಾಹನ, ಏರೋಸ್ಪೇಸ್‌, ಎಲೆಕ್ಟ್ರಾನಿಕ್ಸ್‌, ವೈದ್ಯಕೀಯ ಸಲಕರಣೆ ಮತ್ತು ರಕ್ಷಣೆಯ ಉಪಕರಣಗಳಲ್ಲಿ ವ್ಯಾಪಕವಾಗಿ ಬಳಸುವ ಭೂಮಿಯ ಅಪರೂಪದ ಶಾಶ್ವತ ಆಯಸ್ಕಾಂತ ತಯಾರಿಕೆಗೆ ಕೇಂದ್ರ ಯೋಜನೆ ಪ್ರಕಟಿಸಿದ್ದು, 7,280 ಕೋಟಿ ರೂ. ಅನುಮೋದಿಸಿದೆ.

ಫರಿದಾಬಾದ್‌ ಅಲ್‌ ಪಲಾಹ್‌ ವಿವಿ ಪಕ್ಕದ ಮದ್ರಸಾಕ್ಕೂ ವ್ಯಾಪಿಸಿದ ದೆಹಲಿ ಬಾಂಬ್‌ ಸ್ಫೋಟದ ತನಿಖೆ; ನೆಲ ಮಾಳಿಗೆಯಲ್ಲಿ ಅಡಗಿದ್ಯಾ ಉಗ್ರ ಸಂಚಿನ ರಹಸ್ಯ?

ದೆಹಲಿ ಸ್ಫೋಟ: ಅಲ್‌ ಪಲಾಹ್‌ ವಿವಿ ಪಕ್ಕದ ಮದ್ರಸಾದ ನೆಳ ಮಾಳಿಗೆಯಲ್ಲಿ ಶೋಧ

ದೆಹಲಿ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಚುರುಕಾಗಿದ್ದು, ಫರಿದಾಬಾದ್‌ನ ಅಲ್‌ ಫಲಾಹ್‌ ವಿಶ್ವ ವಿದ್ಯಾನಿಲಯದ ಕೇವಲ 900 ಮೀಟರ್‌ ದೂರಲ್ಲಿರುವ ಮದ್ರಸಾದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಮದ್ರಸಾದ ನೆಲ ಮಾಳಿಗೆಯನ್ನು ತನಿಖಾಧಿಕಾರಿಗಳು ಶೋಧಿಸಿದ್ದು, ಪ್ರಕರಣದ ಸಂಚು ಹೊರ ಬೀಳುವ ಸಾಧ್ಯತೆ ಇದೆ.

Cyclone Senyar: ಭಾರತಕ್ಕೆ ಅಪ್ಪಳಿಸಲಿದೆ ಸೆನ್ಯಾರ್ ಚಂಡಮಾರುತ; ಭಾರಿ ಮಳೆಯ ಮುನ್ನೆಚ್ಚರಿಕೆ

ಭಾರತಕ್ಕೆ ಅಪ್ಪಳಿಸಲಿದೆ ಸೆನ್ಯಾರ್ ಚಂಡಮಾರುತ

IMD: ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ರೂಪುಗೊಳ್ಳುವ ಲಕ್ಷಣ ಗೋಚರಿಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಚಂಡಮಾರುತಕ್ಕೆ ಸೆನ್ಯಾರ್ ಎಂದು ಹೆಸರಿಡಲಾಗಿದೆ. ಮಲೇಷ್ಯಾ ಮತ್ತು ಮಲಕ್ಕಾ ಜಲಸಂಧಿಯ ಬಳಿ ವಾಯುಭಾರ ಕುಸಿತವಾಗಿದ್ದು, ಮುಂದಿನ 48 ಗಂಟೆಗಳಲ್ಲಿ ಇದು ಸೆನ್ಯಾರ್ ಚಂಡಮಾರುತವಾಗಿ ಪರಿವರ್ತನೆಯಾಗಲಿದ್ದು, ದಕ್ಷಿಣ ಭಾರತದಲ್ಲ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಶೂನ್ಯ ಸುಂಕ, ವೈದ್ಯಕೀಯ ವೀಸಾ ಹೆಚ್ಚಳ; ಅಫ್ಘಾನಿಸ್ತಾನ ಭಾರತಕ್ಕೆ ಇನ್ನಷ್ಟು ಹತ್ತಿರ

ಭಾರತದೊಂದಿಗಿನ ಸಂಬಂಧ ವೃದ್ಧಿಗೆ ಅಫ್ಘಾನಿಸ್ತಾನದಿಂದ ಕ್ರಮ

Afghanistan-India: ಭಾರತದೊಂದಿಗಿನ ಸಂಬಂಧವನ್ನು ಅಫ್ಘಾನಿಸ್ತಾನ ಇನ್ನಷ್ಟು ಗಟ್ಟಿಗೊಳಿಸುತ್ತಿದೆ. ಈಗಾಗಲೇ ಅಫ್ಘಾನಿಸ್ತಾನ ಭಾರತೀಯ ಉದ್ಯಮಗಳಿಗೆ 5 ವರ್ಷಗಳ ತೆರಿಗೆ ವಿನಾಯಿತಿ ನೀಡಿದೆ. ಇದೀಗ ಅಫ್ಘಾನಿಸ್ತಾನದ ವಾಣಿಜ್ಯ ಸಚಿವ ಅಲ್ಹಾಜ್ ನೂರುದ್ದೀನ್, ಎರಡೂ ಕಡೆಯಲ್ಲಿ ಕಂಡು ಬಂದಿರುವ ವೀಸಾ ಮತ್ತು ಸಂಪರ್ಕ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಜತೆಗೆ ವ್ಯಾಪಾರವನ್ನು 1 ಬಿಲಿಯನ್ ಅಮೆರಿಕನ್‌ ಡಾಲರ್‌ ಏರಿಸಬೇಕೆಂಬ ಗುರಿ ಹೊಂದಿರುವುದಾಗಿ ಹೇಳಿದ್ದಾರೆ.

Ayodhya Ram Temple: ಕಳೆಗಟ್ಟಿದ ಅಯೋಧ್ಯೆ; ರಾಮ ಮಂದಿರದಲ್ಲಿ ನಾಳೆ ಧ್ವಜಾರೋಹಣ: ಪ್ರಧಾನಿ ನರೇಂದ್ರ ಮೋದಿ ಭಾಗಿ

ಅಯೋಧ್ಯೆ ರಾಮ ಮಂದಿರದಲ್ಲಿ ನಾಳೆ ಧ್ವಜಾರೋಹಣ

ಕಳೆದ ವರ್ಷ ಪ್ರಾಣ ಪ್ರತಿಷ್ಠೆಯ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಉತ್ತರ ಪ್ರದೇಶದ ಅಯೋಧ್ಯೆ ರಾಮ ಮಂದಿರ ಇದೀಗ ಮತ್ತೊಮ್ಮೆ ಜಗತ್ತಿನ ಗಮನ ಸೆಳೆಯಲು ಸಜ್ಜಾಗಿದೆ. ರಾಮ ಮಂದಿರದ ನಿರ್ಮಾನ ಕಾರ್ಯ ಪೂರ್ಣಗೊಂಡಿದ್ದು, ಅದರ ಭಾಗವಾಗಿ ನವೆಂಬರ್‌ 25ರಂದು ಧ್ವಜಾರೋಹರಣ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದಾರೆ. ಸದ್ಯ ಇಡೀ ನಗರ ಕೇಸರಿ ಬಣ್ಣದಲ್ಲಿ ಕಂಗೊಳಿಸುತ್ತಿದೆ.

Aadhaar Card Latest Update: ಆಧಾರ್‌ ಕಾರ್ಡ್‌ಗೆ ಬರಲಿದೆ ಹೊಸ ವಿನ್ಯಾಸ! ಏನಿದು ಬದಲಾವಣೆ?

ಆಧಾರ್‌ ಕಾರ್ಡ್‌ಗೆ ಬರಲಿದೆ ಹೊಸ ವಿನ್ಯಾಸ! ಏನಿದು ಬದಲಾವಣೆ?

Aadhaar Card: ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರವು ಆಧಾರ್‌ ಕಾರ್ಡ್‌ನಲ್ಲಿ ಡಿಸೆಂಬರ್‌ನಿಂದ ಹೊಸ ಮಹತ್ವದ ವಿನ್ಯಾಸವನ್ನು ಮಾಡುವ ನಿರೀಕ್ಷೆ ಇದೆ. ವರದಿಗಳ ಪ್ರಕಾರ ಹೊಸ ಬದಲಾವಣೆಯಲ್ಲಿ ಆಧಾರ್‌ ಕಾರ್ಡ್‌ನಲ್ಲಿ ಕಾರ್ಡ್‌ದಾರರ ಫೋಟೊ ಮತ್ತು ಕ್ಯುಆರ್‌ ಕೋಡ್‌ ಮಾತ್ರ ಇರಲಿದೆ. ಇದರಿಂದ ಕಾರ್ಡ್‌ದಾರರ ವೈಯಕ್ತಿಕ ವಿವರಗಳಾದ ಹೆಸರು, ವಿಳಾಸ, 12 ಅಂಕಿಗಳ ಆಧಾರ್‌ ಸಂಖ್ಯೆ ಬಹಿರಂಗವಾಗಿ ಕಾಣಿಸುವುದಿಲ್ಲ.

ಪಾಕಿಸ್ತಾನದ ಪೇಶಾವರ ಅರೆಸೇನಾ ಪಡೆಯ ಕಚೇರಿ ಮೇಲೆ ಉಗ್ರರ ದಾಳಿ; 6 ಮಂದಿ ಸಾವು

ಪಾಕಿಸ್ತಾನದಲ್ಲಿ ಉಗ್ರರ ದಾಳಿ; 6 ಮಂದಿ ಸಾವು

ಪಾಕಿಸ್ತಾನದಲ್ಲಿ ಮತ್ತೆ ಭಯೋತ್ಪಾದಕರ ದಾಳಿ ನಡೆದಿದ್ದು, ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. ಪೇಶಾವರದಲ್ಲಿರುವ ಅರೆ ಸೇನಾ ಪಡೆಯ ಪ್ರಧಾನ ಕಚೇರಿ ಮೇಲೆ ನವೆಂಬರ್‌ 24ರಂದು ಬಂದೂಕುಧಾರಿಗಳು ದಾಳಿ ನಡೆಸಿದ್ದು, ಮೃತರಲ್ಲಿ ಮೂವರು ಉಗ್ರರು ಹಾಗೂ ಮೂವರು ಭದ್ರತಾ ಸಿಬ್ಬಂದಿ ಸೇರಿದ್ದಾರೆ.

Dharmendra: ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ನಿಧನ

ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ನಿಧನ

ಬಾಲಿವುಡ್‌ ಹೀ ಮ್ಯಾನ್‌ ಖ್ಯಾತಿಯ ಹಿರಿಯ ನಟ ಧರ್ಮೇಂದ್ರ ಮೃತಪಟ್ಟಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರ. ಕೆಲವು ದಿನಗಳ ಹಿಂದೆ 89 ವರ್ಷದ ಧರ್ಮೇಂದ್ರ ಅವರ ಆರೋಗ್ಯ ಹದಗೆಟ್ಟಿತ್ತು. ಬಳಿಕ ಅವರು ಚೇತರಿಸಿಕೊಂಡು ಮುಂಬೈಯ ಬ್ರೀಜ್‌ ಕ್ಯಾಂಡ್‌ ಆಸ್ಪತ್ರೆಯಿಂದ ಡಿಸ್‌ಚಾರ್ಚ್‌ ಆಗಿದ್ದರು.

ರಾಜ್ಯದ 2 ಲಕ್ಷ ಶಿಕ್ಷಕರ ಭವಿಷ್ಯ ಅತಂತ್ರ; ದೆಹಲಿಯಲ್ಲಿ ಸೋಮವಾರ ಪ್ರತಿಭಟನೆ

2 ಲಕ್ಷ ಶಿಕ್ಷಕರ ಭವಿಷ್ಯ ಅತಂತ್ರ; ದೆಹಲಿಯಲ್ಲಿ ನಾಳೆ ಪ್ರತಿಭಟನೆ

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಸೋಮವಾರ (ನವೆಂಬರ್‌ 24) ನವದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ಜರುಗಲಿದೆ. ʼʼಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ವತಿಯಿಂದ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಕರ್ನಾಟಕ ಸೇರಿದಂತೆ ದೇಶದ ಸಹಸ್ರಾರು ಶಿಕ್ಷಕರು ಪಾಲ್ಗೊಳ್ಳಲಿದ್ದಾರೆʼʼ ಎಂದು ಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್‌ನ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ತಿಳಿಸಿದ್ದಾರೆ.

Rajnath Singh: ಸಿಂಧ್‌ ಪ್ರಾಂತ್ಯ ಮತ್ತೆ ಭಾರತದ ಭಾಗವಾಗಲಿದೆ; ರಾಜನಾಥ್‌ ಸಿಂಗ್‌ ಎಚ್ಚರಿಕೆಗೆ ಪತರಗುಟ್ಟಿದ ಪಾಕಿಸ್ತಾನ

ಸಿಂಧ್‌ ಪ್ರಾಂತ್ಯ ಮತ್ತೆ ಭಾರತದ ಭಾಗವಾಗಲಿದೆ: ರಾಜನಾಥ್‌ ಸಿಂಗ್‌

Sindh Region: ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಪಾಕಿಸ್ತಾನದ ಸಿಂಧ್‌ ಪ್ರಾಂತ್ಯ ಭಾರತದ ಕೈವಶವಾಮಾಡುತ್ಗುತಿದೆ. ಇದಕ್ಕೆ ಕಾರಣವಾಗಿದ್ದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಹೇಳಿಕೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ʼʼಪಾಕಿಸ್ತಾನದ ಸಿಂಧ್‌ ಪ್ರಾಂತ್ಯ ಭಾರತದ ಕೈವಶವಾಗಬಹುದು, ಗಡಿ ಬದಲಾಗಬಹುದುʼʼ ಎಂದಿದ್ದಾರೆ.

ಸತ್ಯ ಸಾಯಿ ಬಾಬಾ ಜನ್ಮ ಶತಮಾನೋತ್ಸವ: ವಿಶ್ವ ದಾಖಲೆ ಬರೆದ 'ಒಂದು ಜಗತ್ತು ಒಂದು ಕುಟುಂಬ' ಸಾಂಸ್ಕೃತಿಕ ಮಹೋತ್ಸವ

ಸತ್ಯ ಸಾಯಿ ಬಾಬಾ ಜನ್ಮ ಶತಮಾನೋತ್ಸವ ಸಂಪನ್ನ

Sri Sathya Sai Baba Birth Centenary: ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಚಿಕ್ಕಬಳ್ಳಾಪುರದ ಪ್ರಯುಕ್ತ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆದ 100 ದಿನಗಳ 'ಒಂದು ಜಗತ್ತು ಒಂದು ಕುಟುಂಬ' ವಿಶ್ವ ಸಾಂಸ್ಕೃತಿಕ ಮಹೋತ್ಸವವು ಸಂಪನ್ನವಾಯಿತು. ಇದೇ ವೇಳೆ 1 'ಒಂದು ಜಗತ್ತು ಒಂದು ಕುಟುಂಬ' ವಿಶ್ವ ಸಾಂಸ್ಕೃತಿಕ ಮಹೋತ್ಸವವು ವಿಶ್ವದ ಅತಿ ದೀರ್ಘ ಸಾಂಸ್ಕೃತಿಕ ಉತ್ಸವ ಎಂದು ಗಿನ್ನೆಸ್ ದಾಖಲೆಯನ್ನೂ ನಿರ್ಮಿಸಿದ್ದು ವಿಶೇಷ.

ಪಾಕಿಸ್ತಾನದ ಡ್ರೋನ್‌ ಮೂಲಕ ಏಕಕಾಲಕ್ಕೆ ಬಾಂಬ್‌ ಸಾಗಿಸಲು ಸಂಚು ರೂಪಿಸಿದ್ದ ಉಗ್ರರು; ಫರಿದಾಬಾದ್‌ ಸ್ಫೋಟಕ ಪತ್ತೆಯೊಂದಿಗೆ ಬಯಲಾಗಿದ್ದು ಬಹುದೊಡ್ಡ ವಿಧ್ವಂಸಕ ಕೃತ್ಯ

ಪಾಕ್‌ ಡ್ರೋನ್‌ ಮೂಲಕ ಬಾಂಬ್‌ ಸಾಗಿಸಲು ಸಂಚು ರೂಪಿಸಿದ್ದ ಉಗ್ರರು

White-Collar Terror Module: ನವೆಂಬರ್‌ 10ರಂದು ದೆಹಲಿ ಕೆಂಪು ಕೋಟೆ ಬಳಿ ನಡೆದ ಬಾಂಬ್‌ ದಾಳಿಯ ಜಾಡು ಹಿಡಿದು ಹೊರಟ ರಾಷ್ಟ್ರೀಯ ತನಿಖಾ ಸಂಸ್ಥೆಯ ಮುಂದೆ ಒಂದೊಂದೇ ರಹಸ್ಯ ಬಿಚ್ಚಿಕೊಳ್ಳುತ್ತಿದೆ. ಉಗ್ರರು ಪಾಕಿಸ್ತಾನದಿಂದ ಬಹು ದೂರ ಸಾಗಬಲ್ಲ ಡ್ರೋನ್‌ ತರಿಸಿಕೊಳ್ಳುವ ಯೋಜನೆ ಹಾಕಿಕೊಂಡಿದ್ದರು ಎನ್ನುವುದು ಇದೀಗ ಗೊತ್ತಾಗಿದೆ.

ಜಮ್ಮು ಕಾಶ್ಮೀರದ ವೈದ್ಯಕೀಯ ಕಾಲೇಜಿನ 50 ಸೀಟ್‌ಗಳ ಪೈಕಿ 42 ಮುಸ್ಲಿಂ ವಿದ್ಯಾರ್ಥಿಗಳು; ಬಿಜೆಪಿಯಿಂದ ವಿರೋಧ

ಜಮ್ಮು ವೈದ್ಯಕೀಯ ಕಾಲೇಜಿನಲ್ಲಿ ಬಹುತೇಕ ಮುಸ್ಲಿಂ ವಿದ್ಯಾರ್ಥಿಗಳು

ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಹೊಸದಾಗಿ ಆರಂಭವಾಗಿರುವ ಶ್ರೀ ಮಾತಾ ವೈಷ್ಣೋ ದೇವಿ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಎಕ್ಸಲೆನ್ಸ್‌ ವೈದ್ಯಕೀಯ ಕಾಲೇಜಿನ 2025-26ರ ಶೈಕ್ಷಣಿಕ ವರ್ಷದ 50 ವಿದ್ಯಾರ್ಥಿಗಳ ಬ್ಯಾಚ್‌ನಲ್ಲಿ 42 ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರವೇಶ ದೊರೆತಿದ್ದು, ವಿವಾದಕ್ಕೆ ಕಾರಣವಾಗಿದೆ. ಪ್ರವೇಶ ಪಡೆದ ಮುಸ್ಲಿಂ ವಿದ್ಯಾರ್ಥಿಗಳ ಸೀಟನ್ನು ಕೂಡಲೇ ಹಿಂಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ.

WCD Shivamogga Recruitment 2025: ಶಿವಮೊಗ್ಗ ಅಂಗನವಾಡಿಯಲ್ಲಿದೆ 544 ಹುದ್ದೆ; 10, 12ನೇ ತರಗತಿ ಪಾಸಾದವರು ಅಪ್ಲೈ ಮಾಡಿ

ಶಿವಮೊಗ್ಗ ಅಂಗನವಾಡಿಯಲ್ಲಿದೆ 544 ಹುದ್ದೆ

Job Guide: ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ 544 ಅಂಗನವಾಡಿ ವರ್ಕರ್‌ (ಕಾರ್ಯಕರ್ತೆ) ಮತ್ತು ಹೆಲ್ಪರ್‌ (ಸಹಾಯಕಿ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಡಿಸೆಂಬರ್‌ 15.

ಒತ್ತಡ, ನಿದ್ರೆ ನಿರ್ವಹಣೆ ಮಾನಸಿಕ ಆರೋಗ್ಯಕ್ಕೆ ಸಹಕಾರಿ

ಮಾನಸಿಕ ಆರೋಗ್ಯಕ್ಕೆ ಒತ್ತಡ, ನಿದ್ರೆ ನಿರ್ವಹಣೆ ಸಹಕಾರಿ

Mental Health: ಇತ್ತೀಚಿನ ದಿನಗಳಲ್ಲಿ ಮಾನಸಿಕ ಆರೋಗ್ಯ ಎನ್ನುವುದು ಬಹಳಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ. ಈ ಸ್ಪರ್ಧಾತ್ಮಕ ಯುಗದಲ್ಲಿ ಅನೇಕರು ಮಾನಸಿಕ ತುಮುಲ ಅನುಭವಿಸುತ್ತಿದ್ದಾರೆ. ಇದರಿಂದ ಹೊರ ಬರಲು ಉತ್ತಮ ನಿದ್ರೆ ಜತೆಗೆ ಒತ್ತಡ ನಿರ್ವಹಣೆ ಮುಖ್ಯ. ಈ ಬಗ್ಗೆ ವಿವರ ಇಲ್ಲಿದೆ.

ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪ ತನಿಖೆಗೆ ಎಸ್ಐಟಿ ರಚನೆ: ಡಿ.ಕೆ. ಶಿವಕುಮಾರ್

ಭೂಸ್ವಾಧೀನ ಕೋರ್ಟ್: ಕರ್ತವ್ಯ ಲೋಪ ತನಿಖೆಗೆ ಎಸ್ಐಟಿ ರಚನೆ

D.K. Shivakumar: ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಜಲ ಸಂಪನ್ಮೂಲ, ಬಿಡಿಎ ಭೂಸ್ವಾಧೀನ ಪ್ರಕರಣಗಳ ಕುರಿತು ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ವಿಧಾನಸೌಧದಲ್ಲಿ ಶನಿವಾರ ಸಭೆ ನಡೆಸಿದರು. ಈ ವೇಳೆ ವಿವಿಧ ವಿಚಾರಗಳ ಬಗ್ಗೆ ಮಾತನಾಡಿದರು.

Loading...