ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಿ
Horoscope Today June 30, 2026: ಇಂದು (ಜೂನ್ 30) ಆಷಾಢ ಮಾಸ ಆರಂಭ. ಉತ್ತರ ಭಾರತದ ಪಂಚಾಂಗದ ಪ್ರಕಾರ ಇದು ಆಷಾಢ ಶುಕ್ಲ ಪಕ್ಷದ ಮೊದಲ ದಿನ. ಆಷಾಢ ಮಾಸದೊಂದಿಗೆ ಚಾತುರ್ಮಾಸ ಆರಂಭವಾಗುತ್ತದೆ. ಇಂದಿನ ನಿಮ್ಮ ಭವಿಷ್ಯ ಹೇಗಿರಲಿದೆ ಎನ್ನುವ ವಿವರ ಇಲ್ಲಿದೆ.
ಗಡಿನಾಡು ಕಾಸರಗೋಡು ಜಿಲ್ಲೆಯ ಆದೂರು ಗ್ರಾಮದ ರಮೇಶ್ ಬಳ್ಳಮೂಲೆ ಉದಯವಾಣಿ ದಿನ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದರು. ಬಳಿಕ ವಿಜಯವಾಣಿ, ಅಧಾನ್ ನ್ಯೂಸ್ ಆ್ಯಪ್, ನ್ಯೂಸ್ ಆ್ಯರೋ ವೆಬ್ಸೈಟ್, ವಿಸ್ತಾರ ನ್ಯೂಸ್ ವೆಬ್ಸೈಟ್ನಲ್ಲಿ ಕಾರ್ಯ ನಿರ್ವಹಿಸಿದರು. 2024ರ ಆಗಸ್ಟ್ನಿಂದ ವಿಶ್ವವಾಣಿ ವೆಬ್ಸೈಟ್ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ. ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುಮಾರು 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಬರವಣಿಗೆ, ಓದು, ಸಿನಿಮಾ ವೀಕ್ಷಣೆ, ಪ್ರವಾಸ ಇವರ ನೆಚ್ಚಿನ ಹವ್ಯಾಸ.
Viral Video: ಕುಡಿದ ಮತ್ತಿನಲ್ಲಿ ಗೆಳೆಯ ಕೆನ್ನೆಗೆ ಹೊಡೆದಿದ್ದಾನೆ ಎಂದು ಯುವಕ ಮೊಬೈಲ್ ಟವರ್ ಏರಿ ಹೈಡ್ರಾಮಾ ಸೃಷ್ಟಿಸಿದ್ದಾನೆ. ಗೆಳೆಯ ಕ್ಷಮೆ ಕೋರದ ಹೊರತು ಇಳಿಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾನೆ. ಸದ್ಯ ಘಟನೆಯ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Tamil Nadu Horror: 9 ವರ್ಷದ ಬಾಲಕನ ಮೇಲೆ 17 ವರ್ಷದ ಅಪ್ರಾಪ್ತ ಲೈಂಗಿಕ ದೌರ್ಜನ್ಯ ಎಸಗಿ ಕೊಂದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಸದ್ಯ ಅಪರಾಧಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂತ್ರಸ್ತನೊಂದಿಗೆ ಆಟವಾಡುತ್ತಿದ್ದ ಇತರ ಹುಡುಗರ ಸಹಾಯದಿಂದ ಕೃತ್ಯವನ್ನು ಪೊಲೀಸರು ಬಯಲಿಗೆಳೆದಿದ್ದಾರೆ.
Rajasthan Horror: ರಾಜಸ್ಥಾನದಲ್ಲಿ ಇಡೀ ದೇಶವೇ ಬೆಚ್ಚಿ ಬೀಳುವ ಅಪರಾಧ ಕೃತ್ಯವೊಂದು ನಡೆದಿದೆ. ಶ್ರೀ ಗಂಗಾನಗರದಲ್ಲಿ ಸತತ 5 ದಿನಗಳ ಕಾಲ 30ಕ್ಕೂ ಅಧಿಕ ಪುರುಷರು 13 ವರ್ಷದ ಬಾಲಕಿಯ ಮೇಲೆ ನಿರಂತರ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಸದ್ಯ ತನಿಖೆ ನಡೆಯುತ್ತಿದೆ.
Awami League Party: 2024ರ ಆಗಸ್ಟ್ನಿಂಧ ಭಾರತದಲ್ಲಿರುವ ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಕ್ ಹಸೀನಾ ವರ್ಷಾಂತ್ಯದಲ್ಲಿ ಸ್ವದೇಶಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರ ವಿರುದ್ಧ ಮರಣದಂಡನೆ ತೀರ್ಪು ಪ್ರಕಟವಾಗಿದ್ದರೂ ತವರಿಗೆ ತೆರಳುವುದಾಗಿ ಘೋಷಿಸಿರುವ ಅವರ ನಡೆ ಕುತೂಹಲ ಮೂಡಿಸಿದೆ.
Helicopter Crashes: ಸೌದಿ ಅರೇಬಿಯಾದಲ್ಲಿ ಭಾನುವಾರ (ಜೂನ್ 28) ಹೆಲಿಕಾಪ್ಟರ್ ಪತನವಾಗಿ ಸುಮಾರು 14 ಮಂದಿ ಮೃತಪಟ್ಟಿದ್ದಾರೆ. ಹೊರ್ಮುಜ್ ಜಲಸಂಧಿಯ ಪಶ್ಚಿಮ ಭಾಗದಲ್ಲಿರುವ, ಸೌದಿ ಅರೇಬಿಯಾ ಪೂರ್ವ ಕರಾವಳಿಯ ರಾಸ್ ತನುರಾದಲ್ಲಿ ಈ ಅವಘಡ ಸಂಭವಿಸಿದೆ. ಕಾರನ ತಿಳಿದು ಬಂದಿಲ್ಲ.
Ram Temple Theft: ಉತ್ತರ ಪ್ರದೇಶದ ಅಯೋಧ್ಯೆ ಶ್ರೀ ರಾಮ ಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಗಳ ಪೈಕಿ ಸುಮಾರು 7.75 ಕೋಟಿ ರುಪಾಯಿ ಕಳವಾಗಿದ್ದು, ಎಸ್ಐಟಿ ಈ ಬಗ್ಗೆ ತನಿಖೆ ಕೈಗೆತ್ತಿಕೊಂಡಿದೆ. ಈಗಾಗಲೇ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ಆದಾಯದಲ್ಲಿ ಹಲವು ಪಟ್ಟು ಏರಿಕೆ ದಾಖಲಾಗಿದ್ದು ಕಂಡು ಬಂದಿದೆ. ಈ ಮಧ್ಯೆ ಆರೋಪಿಗಳ ಮನೆಯವರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.
Pranab Mukherjee's Daughter: ʼʼರಾಹುಲ್ ಗಾಂಧಿ ಕೆಲವೊಂದು ಅಭಿಯಾನ ಮಾಡಿ ಬಳಿಕ ಕೆಲವು ಸಮಯ ನಾಪತ್ತೆಯಾಗುತ್ತಾರೆ. ಇದರಿಂದ ನಿರಂತರವಾಗಿ ಜನರ ಮನಸ್ಸು ಗೆಲ್ಲಲು ಸಾಧ್ಯವಾಗುತ್ತಿಲ್ಲ. ಭಾರತ್ ಜೋಡೋ ಯಾತ್ರಾದ ಮೊದಲ ವಾರ್ಷಿಕೋತ್ಸವದಂದು ಅವರು ಎಲ್ಲಿದ್ದರು? ರಾಜಕೀಯ ಎಂದರೆ ಅದು 24 ಗಂಟೆ, 365 ದಿನಗಳ ಕೆಲಸʼʼ ಎಂದು ಪ್ರಣಬ್ ಮುಖರ್ಜಿಅವರ ಪುತ್ರಿ, ಕಾಂಗ್ರೆಸ್ನ ಮಾಜಿ ಕಾರ್ಯಕರ್ತೆ ಶರ್ಮಿಷ್ಠಾ ಮುಖರ್ಜಿ ಹೇಳಿದ್ದಾರೆ.
Ring Road Murder Case: ಮಹಾರಾಷ್ಟ್ರದ ಲೋನಾವಾಲಾ ಸಮೀಪದ ಲೋಹಗಢ ಕೋಟೆ ಮೇಲಿನಿಂದ ಸುಮಾರು 350 ಅಡಿಯ ಆಳದ ಕಂದಕಕ್ಕೆ ತಳ್ಳಿ ಉದ್ಯಮಿ ಕೇತನ್ ಅಗರ್ವಾಲ್ ಅವರನ್ನು ತಳ್ಳಿ ಕೊಲೆ ಮಾಡಿದ ಪ್ರಕರಣಕ್ಕೂ 2003ರಲ್ಲಿ ಬೆಂಗಳೂರಿನಲ್ಲಿ ನಡೆದ ಕೊಲೆ ಪ್ರಕರಣಕ್ಕೂ ಸಾಮ್ಯತೆ ಇದೆ. ಅದೇನು ಎನ್ನುವ ವಿವರ ಇಲ್ಲಿದೆ.
Malgudi Amrutha Chaha: 2020ರಲ್ಲಿ ಇಡೀ ಜಗತ್ತನ್ನೇ ಕೋವಿಡ್ ಆವರಿಸಿದಾಗ ಶಿವರಾಜಕುಮಾರ್ ಅವರ ಬದುಕು ತಲ್ಲಣಿಸಿತು. ಕಂಪೆನಿಯಲ್ಲಿ ಉಂಟಾದ ಸ್ಟ್ರೈಕ್ ಹಾಗೂ ಲಾಕ್ಡೌನ್ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟ ಎದುರಾಯಿತು. ಒಂದು ಹಂತದಲ್ಲಿ ಬೆಂಗಳೂರಿನಲ್ಲಿ ಬಾಡಿಗೆ ಕಟ್ಟಲು ಮತ್ತು ಮನೆಗೆ ರೇಷನ್ ತರಲೂ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಯಿತು. ಕಣ್ಣೆದುರೇ ಕತ್ತಲು ಆವರಿಸಿದಾಗ ಅವರು ತಮ್ಮ ಬದುಕಿನ ಅತ್ಯಂತ ದೊಡ್ಡ ನಿರ್ಧಾರ ಕೈಗೊಂಡರು. ಮನೆಯಲ್ಲಿದ್ದ ಚಿನ್ನದ ಒಡವೆಯನ್ನು ಅಡವಿಟ್ಟರು. ಆ ಹಣವನ್ನು ಬಂಡವಾಳವಾಗಿಸಿ, ಚಹಾ ಉದ್ಯಮಕ್ಕೆ ಕೈಹಾಕಿದರು.
Suniel Shetty: ತಮ್ಮ 15 ತಿಂಗಳ ಮೊಮ್ಮಗಳು ಇವಾರಾ ಪ್ರತಿದಿನ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊಕ್ಕೆ ಸ್ವೀಟ್ ಅರ್ಪಿಸುತ್ತಾಳೆ ಎಂದು ಬಾಲಿವುಡ್ ನಟ ಸುನೀಲ್ ಶೆಟ್ಟಿ ತಿಳಿಸಿದ್ದಾರೆ. 2023ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕನ್ನಡಿಗ, ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್ ಮತ್ತು ಸುನೀಲ್ ಶೆಟ್ಟಿ ಪುತ್ರಿ, ನಟಿ ಆಥಿಯಾ ಶೆಟ್ಟಿ ದಂಪತಿಗೆ 2025ರ ಮಾರ್ಚ್ನಲ್ಲಿ ಇವಾರಾ ಜನಿಸಿದಳು.
Ullas Gowda Passed Away: ಸ್ಯಾಂಡಲ್ವುಡ್ಗೆ ಮತ್ತೊಂದು ಆಘಾತ ಎದುರಾಗಿದೆ. ಹಿರಿಯ ನಿರ್ಮಾಪಕ ಭಾ.ಮಾ. ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು. ಶಿವಮೊಗ್ಗ ಜಿಲ್ಲೆಯ ಕೊಡಚಾದ್ರಿ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋದ ವೇಳೆ ಹೃದಯಘಾತವಾಗಿದೆ ಎಂದು ಮೂಲಗಳು ತಿಳಿಸಿವೆ.
Gold Silver Price Today: ಚಿನ್ನದ ದರ ಶನಿವಾರ (ಜೂನ್ 27) ಮತ್ತೆ ಭಾರಿ ಹೆಚ್ಚಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್ನ 1 ಗ್ರಾಂ ಚಿನ್ನಕ್ಕೆ 110 ರುಪಾಯಿ ಏರಿಕೆಯಾಗಿದ್ದು, 13,195 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್ನ 1 ಗ್ರಾಂ ಚಿನ್ನ 120 ರುಪಾಯಿ ಹೆಚ್ಚಾಗಿದ್ದು, 14,395 ರುಪಾಯಿ ಆಗಿದೆ.
Gruha Lakshmi Scheme: ಗೃಹಲಕ್ಷ್ಮಿ ಯೋಜನೆಗಳಲ್ಲಿ ಅಕ್ರಮ ನಡೆಯುತ್ತಿದೆ ಎನ್ನುವ ಆರೋಪ ಕೇಳಿ ಬಂದ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಹಲವು ಫಲಾನುಭವಿಗಳು ಒಂದೇ ಬ್ಯಾಂಕ್ ಖಾತೆಯನ್ನು ಹೊಂದಿರುವುದಾಗಿ, ಒಂದೇ ಫಲಾನುಭವಿ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿರುವುದಾಗಿ, ಬ್ಯಾಂಕ್ ಖಾತೆ ಹೊಂದಿರದ ಫಲಾನುಭವಿಗಳಿಗೂ ಧನಸಹಾಯ ಪಾವತಿಯಾಗುತ್ತಿರುವ ಬಗ್ಗೆ ತಿಳಿಸಿದೆ.
Bengaluru Metro: ಕೇವಲ 2 ದಿನಗಳ ಹಿಂದೆಯಷ್ಟೇ ಕೆಟ್ಟುನಿಂತು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದ ನಮ್ಮ ಮೆಟ್ರೋ ಗುರುವಾರ (ಜೂನ್ 25) ಮತ್ತೊಮ್ಮೆ ಕೈಕೊಟ್ಟಿತು. ಕಬ್ಬನ್ ಪಾರ್ಕ್ ಸ್ಟೇಷನ್ನಲ್ಲೇ ಮತ್ತೊಮ್ಮೆ ಯಡವಟ್ಟಾಗಿದ್ದು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು. ಸದ್ಯ ಸಮಸ್ಯೆ ಬಗೆ ಹರಿಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ಸ್ಯಾಂಡಲ್ವುಡ್ ನಟ ದರ್ಶನ್ ಅವರ ಪುತ್ರ ವಿನೀಶ್ ಕೂಡ ಇದೀಗ ಯಡವಟ್ಟು ಮಾಡಿಕೊಂಡಿದ್ದಾನೆ. ವಿನೀಶ್ ಚಲಾಯಿಸುತ್ತಿದ್ದ ಐಷಾರಾಮಿ ಕಾರು ರಾಜರಾಜೇಶ್ವರಿ ನಗರದಲ್ಲಿ ಅಪಘಾತಕ್ಕೀಡಾಗಿದೆ. ನೀಶ್ ಡ್ರೈವ್ ಮಾಡುತ್ತಿದ್ದ ಪೋರ್ಡ್ ಎಂಡೋವರ್ ಕಾರು, ಮುಂಭಾಗದಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಏಕಾಏಕಿ ಹಿಂಬದಿಯಿಂದ ಜೋರಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
Water Warrior: ಮೆಕ್ಯಾನಿಕಲ್ ಎಂಜಿನಿಯರ್ ಗುರುನಂದನ್ ಹ್ಯಾಂಡ್ಸ್ಆನ್ ಎನ್ಜಿಒ ಹುಟ್ಟು ಹಾಕಿ, ತಮ್ಮದೇ ತಂಡ ಕಟ್ಟಿಕೊಂಡು ಸುಮಾರು ಒಂದೂವರೆ ದಶಕದಿಂದ ಕೆರೆಗಳ ಪುನಶ್ಚೇತನ, ಗಿಡ ನಾಟಿ, ನೆಟ್ಟ ಗಿಡದ ಆರೈಕೆ ಹೀಗೆ ಸಮಾಜಮುಖಿ ಚಟುವಟಿಕೆಗಳಲ್ಲಿ ಬಿಡುವಿಲ್ಲದೆ ತೊಡಗಿಸಿಕೊಂಡಿದ್ದಾರೆ. ಸದ್ಯದಲ್ಲೇ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನ ಭಾಗವಾಗಲಿದ್ದಾರೆ.
Pradeep Eshwar: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ. ಅನಿತಕ್ಕ (ಅನಿತಾ ಕುಮಾರಸ್ವಾಮಿ) ಅವರಿಗೆ ಬಿಡದಿಯಲ್ಲಿ 32 ಎಕ್ರೆ ಎಲ್ಲಿಂದ ಬಂತು? ಬಿಡದಿ ಬಳಿ ನೂರಾರು ಎಕ್ರೆ ಹೇಗೆ ಬಂತು? ಇದನ್ನೆಲ್ಲ ರಾಮನಗರದಲ್ಲಿ ಬದನೆಕಾಯಿ ಮಾರಿ ಪಡೆದಿದ್ದಾ? ಎಂದು ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ.
DK Shivakumar: ಕೆಲವು ಜಿಲ್ಲೆಗಳ ತಾತ್ಕಾಲಿಕ ಉಸ್ತುವಾರಿ ಸಚಿವರನ್ನು ನೇಮಿಸಲಾಗಿದೆ. ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಪ್ರಮುಖ ಜಿಲ್ಲೆಗಳ ಜವಾಬ್ದಾರಿಯನ್ನು ಹಿರಿಯ ನಾಯಕರಿಗೆ ಹಂಚಿಕೆ ಮಾಡಲಾಗಿದೆ. ಡಿಸಿಎಂ ಡಾ. ಜಿ. ಪರಮೇಶ್ವರ್, ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ ಮತ್ತು ಯತೀಂದ್ರ ಸಿದ್ದರಾಮಯ್ಯ ಅವರಿಗೆ ಪ್ರಮುಖ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.
Pralhad Joshi: ಹವಾಮಾನ ವೈಪರೀತ್ಯ ಹಾಗೂ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿರುವ ಕರ್ನಾಟಕದ ಮಾವು ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಧಾವಿಸಿದೆ. 1,30,000 ಮೆಟ್ರಿಕ್ ಟನ್ ತೋತಾಪುರಿ ಮಾವಿಗೆ ಪ್ರತಿ ಕ್ವಿಂಟಾಲ್ಗೆ 1,750 ರೂಪಾಯಿ ಸಹಾಯಧನವನ್ನು ರೈತರಿಗೆ ನೀಡಲು ಅನುಮೋದನೆ ನೀಡಿದೆ.
Pune Man Murder Case: ಮಹಾರಾಷ್ಟ್ರದ ಲೋನಾವಾಲಾ ಸಮೀಪದ ಲೋಹಗಢ ಕೋಟೆಯಲ್ಲಿ ಜೂ. 18ರಂದು ನಡೆದ ಯುವ ಉದ್ಯಮಿ 26 ವರ್ಷದ ಕೇತನ್ ವಿಶಾಲ್ ಅಗರ್ವಾಲ್ನ ಕೊಲೆ ಪ್ರಕರಣ ಸದ್ಯ ಭಾರಿ ಚರ್ಚೆಗೆ ಕಾರಣವಾಗುತ್ತಿದೆ. ಕಳೆದ ವರ್ಷದ ರಾಜ ರಘುವಂಶಿ ಹತ್ಯೆಯನ್ನು ಇದು ನೆನಪಿಸಿದೆ.
Pakistan Airspace: ಏರ್ ಇಂಡಿಯಾ ವಿಮಾನ ಪಾಕಿಸ್ತಾನದ ವಾಯು ಪ್ರದೇಶವನ್ನು ಪ್ರವೇಶಿಸಿ ಸ್ವಲ್ಪ ಹೊತ್ತು ಅಲ್ಲೇ ಇದ್ದ ಘಟನೆ ಜೂನ್ 22ರಂದು ನಡೆದಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ದೆಹಲಿಯಿಂದ ಪಂಜಾಬ್ನ ಅಮೃತಸರಕ್ಕೆ ಹೊರಟಿದ್ದ ಏರ್ ಇಂಡಿಯಾ AI479 ವಿಮಾನವು ಪಾಕಿಸ್ತಾನ ವಾಯು ಪ್ರದೇಶದಲ್ಲಿ ಕಾಣಿಸಿಕೊಂಡಿತ್ತು.
Siya Goyal: ಮಹಾರಾಷ್ಟ್ರದಲ್ಲಿ ನಡೆದ ಯುವ ಉದ್ಯಮಿಯ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. 26 ವರ್ಷದ ಯುವ ಉದ್ಯಮಿ ಕೇತನ್ ವಿಶಾಲ್ ಅಗರ್ವಾಲ್ ಅವರನ್ನು ಭಾವಿ ಪತ್ನಿ ಸಿಯಾ ಗೋಯಲ್ ತನ್ನ ಪ್ರಿಯಕರ ಚೇತನ್ ಜತೆ ಸೇರಿ ಕೊಲೆ ಮಾಡಿದ್ದು, ಇವರಿಬ್ಬರ ಸಂಚಿನ ವಿವರ ಇದೀಗ ಬೆಳಕಿವೆ ಬಂದಿದೆ.