ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Ramesh Ballamoole

Senior Sub Editor

[email protected]

ಗಡಿನಾಡು ಕಾಸರಗೋಡು ಜಿಲ್ಲೆಯ ಆದೂರು ಗ್ರಾಮದ ರಮೇಶ್ ಬಳ್ಳಮೂಲೆ ಉದಯವಾಣಿ ದಿನ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದರು. ಬಳಿಕ ವಿಜಯವಾಣಿ, ಅಧಾನ್ ನ್ಯೂಸ್ ಆ್ಯಪ್, ನ್ಯೂಸ್ ಆ್ಯರೋ ವೆಬ್‌ಸೈಟ್‌, ವಿಸ್ತಾರ ನ್ಯೂಸ್ ವೆಬ್‌ಸೈಟ್‌ನಲ್ಲಿ ಕಾರ್ಯ ನಿರ್ವಹಿಸಿದರು. 2024ರ ಆಗಸ್ಟ್‌ನಿಂದ ವಿಶ್ವವಾಣಿ ವೆಬ್‌ಸೈಟ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ. ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುಮಾರು 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಬರವಣಿಗೆ, ಓದು, ಸಿನಿಮಾ ವೀಕ್ಷಣೆ, ಪ್ರವಾಸ ಇವರ ನೆಚ್ಚಿನ ಹವ್ಯಾಸ.

Articles
ಅಹಿಂದ ನಾಯಕ, ಕರ್ನಾಟಕದ ದೀರ್ಘಾವಧಿಯ ಸಿಎಂ ಸಿದ್ದರಾಮಯ್ಯ: ನಡೆದು ಬಂದ ಹಾದಿ ಹೀಗಿತ್ತು

ಕರ್ನಾಟಕದ ದೀರ್ಘಾವಧಿಯ ಸಿಎಂ ಸಿದ್ದರಾಮಯ್ಯ: ನಡೆದು ಬಂದ ಹಾದಿ

Siddaramaiah: ಅತಿ ಹೆಚ್ಚು ಅವಧಿಗೆ ರಾಜ್ಯದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಅತೀ ಹೆಚ್ಚು ಬಜೆಟ್‌ ಮಂಡಿಸಿದ ಜನಪ್ರತಿನಿಧಿ ಎಂಬ ದಾಖಲೆಗೆ ಪಾತ್ರರಾದ ಸಿದ್ದರಾಮಯ್ಯ ಸದ್ಯ ಸಿಎಂ ಪಟ್ಟದಿಂದ ಕೆಳಗೆ ಇಳಿದಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿದ್ದು, ಹಲವು ದಿನಗಳಿಂದ ನಡೆಯುತ್ತಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ. ಅಹಿಂದ ಪ್ರಬಲ ನಾಯಕನಾಗಿ ಬೆಳೆದ ಸಿದ್ದರಾಮಯ್ಯ ಅವರ ನಡೆದು ಬಂದ ಹಾದಿ ಹೇಗಿತ್ತು ಎನ್ನುವ ವಿವರ ಇಲ್ಲಿದೆ.

Gold Price Today On 27th May 2026: ಸತತ 2ನೇ ದಿನವೂ ಚಿನ್ನದ ದರದಲ್ಲಿ ಇಳಿಕೆ; ಬೆಂಗಳೂರಿನಲ್ಲಿ ಎಷ್ಟಿದೆ ಬೆಲೆ?

ಸತತ 2ನೇ ದಿನವೂ ಚಿನ್ನದ ದರದಲ್ಲಿ ಇಳಿಕೆ

Gold Silver Price Today: ಸತತ 2ನೇ ದಿನವೂ ಚಿನ್ನದ ದರದಲ್ಲಿ ಇಳಿಕೆ ಕಂಡು ಬಂದಿದೆ. ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 55 ರುಪಾಯಿ ಕಡಿಮೆಯಾಗಿದ್ದು, 14,510 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 60 ರುಪಾಯಿ ಅಗ್ಗವಾಗಿದ್ದು, 15,829 ರುಪಾಯಿ ಕಂಡು ಬಂದಿದೆ.

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರಿ ದುರಂತ; ಟೇಕಾಫ್ ವೇಳೆ ಇಂಡಿಗೋ ವಿಮಾನದಲ್ಲಿ ಕಾಣಿಸಿಕೊಂಡ ಹೊಗೆ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರಿ ದುರಂತ

IndiGo Flight: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ (ಮೇ 26) ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚೆನ್ನೈಗೆ ಹಾರಲು ಸಿದ್ಧವಾಗುತ್ತಿದ್ದ ಇಂಡಿಗೋ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಪ್ರಯಾಣಿಕರು, ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಘಟನೆಗೆ ಕಾರಣ ತಿಳಿದು ಬಂದಿಲ್ಲ.

ರೀಲ್ಸ್‌ಗೆ ಲೈಕ್‌ ಮಾಡುತ್ತಲೇ 40 ವರ್ಷದ ಆಂಟಿಯನ್ನು ಪಟಾಯಿಸಿದ 14ರ ಬಾಲಕ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ವಿಚಿತ್ರ ಪ್ರಕರಣ

14ರ ಬಾಲಕನ ಪ್ರೀತಿಯಲ್ಲಿ ಬಿದ್ದ 4 ಮಕ್ಕಳ ತಾಯಿ

Viral News: ಉತ್ತರ ಪ್ರದೇಶದ ಮಹಾರಾಜ್‌ಗಂಜನ್‌ನ 4 ಮಕ್ಕಳ ತಾಯಿ, 40 ವರ್ಷದ ಮಹಿಳೆ ತಮಿಳುನಾಡಿನ 14 ವರ್ಷದ ಬಾಲಕನನ್ನು ಪ್ರೀತಿಸಿದ್ದಾಳೆ. ಸದ್ಯ ಈ ಪ್ರಕರಣ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದು, ದೇಶದ ಗಮನ ಸೆಳೆದಿದೆ.

ಪಡುಬಿದ್ರಿ ಬ್ರಹ್ಮಕಲಶೋತ್ಸವ: ಭಕ್ತಿಯ ಮಹಾಸಾಗರ

ಪಡುಬಿದ್ರಿಯಲ್ಲಿ ಭಕ್ತಿಯ ಮಹಾಸಾಗರ

Pravasi Prapancha: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪಡುಬಿದ್ರಿಯ ಜನಜೀವನದ ಕೇಂದ್ರಬಿಂದು. ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಕ್ಷೇತ್ರದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಸಿದ್ಧತೆಗಳು ತಿಂಗಳುಗಳ ಹಿಂದೆಯೇ ಆರಂಭವಾಗಿದ್ದವು. ಡಾ. ಪ್ರಕಾಶ್ ಶೆಟ್ಟಿ ಬಂಜಾರ ಮತ್ತು ಧರ್ಮಪತ್ನಿ ಆಶಾ ಅವರ ಮುಂದಾಳತ್ವದಲ್ಲಿ ನಡೆದ ದೇವಸ್ಥಾನದ ಜೀರ್ಣೋದ್ಧಾರ, ಅಲಂಕಾರ, ಯಾಗಶಾಲೆ ನಿರ್ಮಾಣ, ಭಕ್ತರ ವ್ಯವಸ್ಥೆ, ಪ್ರತಿ ಕೆಲಸದಲ್ಲೂ ಊರಿನ ಜನರ ಪಾಲ್ಗೊಳ್ಳುವಿಕೆ ಸ್ಪಷ್ಟವಾಗಿ ಕಾಣಿಸುತ್ತಿತ್ತು.

Pravasi Prapancha: ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲ: ಭಕ್ತಿಯ ಹೆಜ್ಜೆಯನ್ನಿಟ್ಟು ಬನ್ನಿ

ಪಡುಬಿದ್ರಿಯ ಒಡೆಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ

ದೇವಸ್ಥಾನ ಎಂದರೆ ಕೇವಲ ಪೂಜೆ ನಡೆಯುವ ಕಟ್ಟಡವಲ್ಲ; ಒಂದು ಊರಿನ ಇತಿಹಾಸ, ಸಂಸ್ಕೃತಿ, ಸಮುದಾಯದ ಒಗ್ಗಟ್ಟು ಮತ್ತು ಜನರ ಬದುಕಿನ ರೀತಿ ಎಲ್ಲವೂ ಅಲ್ಲಿ ನೆಲೆಸಿರುತ್ತವೆ. ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವೂ ಅದೇ ರೀತಿಯ ಜೀವಂತ ಸಂಸ್ಕೃತಿಕೇಂದ್ರವಾಗಿದೆ. ವರ್ಷಗಳಿಂದ ಕಳೆಗುಂದಿದ ಸ್ಥಿತಿಯಲ್ಲಿದ್ದ ಈ ಕೇಂದ್ರದ ಜೀರ್ಣೋದ್ಧಾರಕ್ಕೆ ತನು ಮನ ಧನ ಸಹಾಯ ಮಾಡುವ ಮೂಲಕ ದೇವಾಲಯಕ್ಕೆ ಹೊಸ ರೂಪವನ್ನು ನೀಡಿದವರು ಡಾ. ಪ್ರಕಾಶ್‌ ಶೆಟ್ಟಿ ಬಂಜಾರ. ಇವರ ಶ್ರಮ, ದಿಟ್ಟ ಯೋಜನೆಗಳ ಮೂಲಕ ಕರಾವಳಿಯ ಪುಟ್ಟ ಗ್ರಾಮ ಇಂದು ಧಾರ್ಮಿಕ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿದೆ.

ತಾಂತ್ರಿಕ ದೋಷದಿಂದ ಕೇಬಲ್‌ ಕಾರ್‌ ಸ್ಥಗಿತ; ಆಗಸದಲ್ಲೇ 300 ಪ್ರವಾಸಿಗರು ಬಾಕಿ

ಕೇಬಲ್‌ ಕಾರ್‌ ಸ್ಥಗಿತ; ಗುಲ್ಮಾರ್ಗ್‌ ಸಿಕ್ಕಿ ಹಾಕಿಕೊಂಡ ಪ್ರವಾಸಿಗರು

Gulmarg Cable Car Snag: ಜಮ್ಮು ಕಾಶ್ಮೀರದ ಪ್ರವಾಸಿ ತಾಣ ಗುಲ್ಮಾರ್ಗ್‌ನಲ್ಲಿನ ಕೇಬಲ್‌ ಕಾರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಸುಮಾರು 300 ಪ್ರವಾಸಿಗರು ಆಗಸದಲ್ಲೇ ಬಾಕಿಯಾದ ಘಟನೆ ಸೋಮವಾರ ನಡೆದಿದೆ. ಕೂಡಲೇ ವಿವಿಧ ತಂಡಗಳು ಆಗಮಿಸಿ ಪ್ರವಾಸಿಗರು ಸುರಕ್ಷಿತವಾಗಿ ಕೆಳಗಿಳಿಸಲು ಕಾರ್ಯಾಚರಣೆ ಆರಂಭಿಸಿವೆ.

10 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ, ಹತ್ಯೆ ಪ್ರಕರಣದ ಪತ್ರಿಕಾಗೋಷ್ಠಿಯಲ್ಲಿ ನಕ್ಕ ಪೊಲೀಸ್‌ ಅಧಿಕಾರಿಗಳು; ವಿಡಿಯೊ ವೈರಲ್‌, ಭಾರಿ ಆಕ್ರೋಶ

ಹತ್ಯೆ ಪ್ರಕರಣದ ಪತ್ರಿಕಾಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್‌

Viral Video: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ 10 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದ ಪತ್ರಿಕಾಗೋಷ್ಠಿ ನಡೆಯುತ್ತಿದ್ದ ವೇಳೆ ಪೊಲೀಸ್‌ ಅಧಿಕಾರಿಗಳಿಬ್ಬರು ನಗುತ್ತಿರುವ ವಿಡಿಯೊ ವೈರಲ್‌ ಆಗಿದೆ. ಮಹಿಳಾ ಪೊಲೀಸ್‌ ಅಧಿಕಾರಿ ಆರ್.ವಿ. ರಮ್ಯಾ ಭಾರತಿ ಕೈಯ ನೈಲ್‌ ಪಾಲಿಷ್‌ ನೋಡಿ ಜೋರಾಗಿ ನಗುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

Gold Price Today On 25th May 2026: ಗ್ರಾಹಕರಿಗೆ ತಟ್ಟಿದ ʼಮಂಡೆʼ ಬಿಸಿ; ಪೆಟ್ರೋಲ್‌, ಡೀಸೆಲ್‌ ಜತೆಗೆ ಚಿನ್ನದ ದರವೂ ಏರಿಕೆ

ಪೆಟ್ರೋಲ್‌, ಡೀಸೆಲ್‌ ಜತೆಗೆ ಚಿನ್ನದ ದರವೂ ಏರಿಕೆ

Gold Silver Price Today: ಸೋಮವಾರ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಬೆನ್ನಲ್ಲೇ ಚಿನ್ನದ ದರದಲ್ಲಿಯೂ ಹೆಚ್ಚಳ ಕಂಡು ಬಂದಿದ್ದು, ಗ್ರಾಹಕರಿಗೆ ಡಬಲ್‌ ಶಾಕ್‌ ಎದುರಾಗಿದೆ. ಸೋಮವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 30 ರುಪಾಯಿ ಏರಿಕೆಯಾಗಿದ್ದು, 14,610 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 32 ರುಪಾಯಿ ಅಧಿಕವಾಗಿದ್ದು, 15,938 ರುಪಾಯಿ ಇದೆ.

ʼʼಭಾರತಕ್ಕೆ ಬಯಸಿದ್ದೆಲ್ಲ ಸಿಗಲಿದೆʼʼ: ಫೋನ್‌ ಕರೆಯಲ್ಲಿ ಡೊನಾಲ್ಡ್‌ ಟ್ರಂಪ್‌ ಘೋಷಣೆ: ಮೋದಿ ಉತ್ತಮ ಸ್ನೇಹಿತ ಎಂದು ಪುನರುಚ್ಚರಿಸಿದ ಅಮೆರಿಕ ಅಧ್ಯಕ್ಷ

ನಾನು ಮೋದಿಯ ಅಭಿಮಾನಿ ಎಂದ ಡೊನಾಲ್ಡ್‌ ಟ್ರಂಪ್‌

Donald Trump: ʼʼನಾನು ಪ್ರಧಾನಿ ಮೋದಿ ಅವರ ದೊಡ್ಡ ಅಭಿಮಾನಿ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮನ ಬಿಚ್ಚಿ ಹೇಳಿದ್ದಾರೆ. ಅಮೆರಿಕ ಸ್ವಾತಂತ್ರ್ಯ ಘೋಷಣೆಯ 250ನೇ ವಾರ್ಷಿಕೋತ್ಸವದ ಪ್ರಯುಕ್ತ ದೆಹಲಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಆತಿಥ್ಯ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಫೋನ್‌ ಮೂಲಕ ಮಾತನಾಡಿದ ಡೊನಾಲ್ಡ್ ಟ್ರಂಪ್ ಈ ಮಾತು ಹೇಳಿದರು.

ನರೇಂದ್ರ ಮೋದಿ ಜತೆ ಆಟವಾಡಿದ ಈ ಪುಟಾಣಿ ಫ್ರೆಂಡ್ಸ್‌ ಯಾರು? ಪ್ರಧಾನಿ ಹಂಚಿಕೊಂಡ ಕ್ಯೂಟ್‌ ಪೋಟೊ ಇಲ್ಲಿದೆ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಪುಟಾಣಿ ಫ್ರೆಂಡ್ಸ್‌

ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಿಕ್ಕ ಮಕ್ಕಳ ಜತೆ ಚೆನ್ನಾಗಿ ಬೆರೆಯುತ್ತಾರೆ. ಸಮಯ ಸಿಕ್ಕಾಗಲೆಲ್ಲ ಅವರೊಂದಿಗೆ ಮಕ್ಕಳಾಗಿ ಬಿಡುತ್ತಾರೆ. ಯಾವುದಾದರೂ ಕಾರ್ಯಕ್ರಮಕ್ಕೆ ಹೋದಾಗ ಮಕ್ಕಳು ಕಂಡರೆ ಅಥವಾ ಕಚೇರಿಗೆ ಮಕ್ಕಳು ಆಗಮಿಸಿದರೆ ಅವರೊಂದಿಗೆ ತಮಾಷೆ ಮಾಡುತ್ತಾರೆ. ಈಗಾಗಲೇ ಅಂತಹ ಹಲವು ಸಂದರ್ಭ ಕಂಡಿದ್ದೇವೆ. ಇದೀಗ ಮೋದಿ ಅವರ ಅಂತಹದ್ದೇ ಮತ್ತೊಂದು ಕ್ಷಣದ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ತಮ್ಮ ಕಚೇರಿಗೆ ಆಗಮಿಸಿದ ಇಬ್ಬರು ಪುಟಾಣಿಗಳೊಂದಿಗೆ ಮೋದಿ ಸಮಯ ಕಳೆದಿದ್ದಾರೆ. ಈ ಸುಂದರ ಕ್ಷಣದ ಫೋಟೊವನ್ನು ಅವರು ಹಂಚಿಕೊಂಡಿದ್ದಾರೆ. ಇಂಟರ್‌ನೆಟ್‌ನಲ್ಲಿ ಸೆನ್ಸೇಷನ್‌ ಸೃಷ್ಟಿಸಿದ, ಮೋದಿ ಮನಗೆದ್ದ ಈ ಪುಟಾಣಿಗಳು ಯಾರು?

ಹತ್ಯೆಗೈದವರಿಗೆ ಶಿಕ್ಷೆಯಾಗಲಿ ಎಂದು ಕಣ್ಣೀರಿಟ್ಟು ತ್ವಿಶಾ ಶರ್ಮಾ ಅಂತ್ಯ ಸಂಸ್ಕಾರ ನೆರವೇರಿಸಿದ ಹೆತ್ತವರು: ಭಾವುಕ ಕ್ಷಣಕ್ಕೆ ಸಾಕ್ಷಿಯಾಯ್ತು ದೇಶ

ಮೃತಪಟ್ಟು 12 ದಿನಗಳ ಬಳಿಕ ತ್ವಿಶಾ ಶರ್ಮಾ ಅಂತ್ಯ ಸಂಸ್ಕಾರ

Twisha Sharma Case: ತ್ವಿಶಾ ಶರ್ಮಾ ಮೃತದೇಹ ಪತ್ತೆಯಾದ 12 ದಿನಗಳ ಬಳಿಕ ಮಧ್ಯ ಪ್ರದೇಶದ ಭೋಪಾಲ್‌ನ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಈ ವೇಳೆ ಅವರ ತಾಯಿ ಕುಸಿದು ಬಿದ್ದು, ಕಣ್ಣೀರು ಸುರಿಸುತ್ತ ಮಗಳ ಸಾವಿಗೆ ಶೀಘ್ರದಲ್ಲೇ ನ್ಯಾಯ ಸಿಗಲಿ ಎಂದು ಆಗ್ರಹಿಸಿದರು.

ಭಟ್ಕಳದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ 8 ಮಂದಿ ಸಾವು, ಮಥುರಾ ದೋಣಿ ದುರಂತದಲ್ಲಿ 10 ಮಂದಿ ನೀರುಪಾಲು; ಈ ವರ್ಷದ ಭೀಕರ ಜಲ ದುರಂತಗಳಿವು

ಈ ವರ್ಷ ದೇಶದಲ್ಲಿ ನಡೆದ ಭೀಕರ ಜಲ ದುರಂತಗಳಿವು

ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ಜಲ ದುರಂತವೊಂದು ಸಂಭವಿಸಿದ್ದು, ಕಪ್ಪೆಚಿಪ್ಪು (ಚಪ್ಪೆಕಲ್ಲು) ಆರಿಸಲು ನದಿಗೆ ಇಳಿದಿದ್ದ ಒಂದೇ ಕುಟುಂಬಕ್ಕೆ ಸೇರಿದ 8 ಜನ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ​ ಭಟ್ಕಳ ತಾಲೂಕಿನ ಶಿರಾಲಿ ಸಮೀಪ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಭಾನುವಾರ (ಮೇ 24) ಈ ಭೀಕರ ದುರಂತ ಸಂಭವಿಸಿದೆ. ಕಪ್ಪೆಚಿಪ್ಪು ಆರಿಸಲು ಇಳಿದವರು ಒಬ್ಬರ ಕೈಯನ್ನು ಮತ್ತೊಬ್ಬರು ಹಿಡಿದು ಸಾಗುತ್ತಿದ್ದರು ಎನ್ನಲಾಗಿದೆ. ಈ ವೇಳೆ 8 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿತ್ತು. ಇದರೊಂದಿಗೆ ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಾಗಿದ್ದರಿಂದ ಹೊಳೆಯಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಇನ್ನು ಈ ವರ್ಷ ದೇಶದಲ್ಲಿ ನಡೆದ ಪ್ರಮುಖ ಜಲ ದುರಂತಗಳ ವಿವರ ಇಲ್ಲಿದೆ.

ʼʼಕೆಲವೇ ಗಂಟೆಗಳಲ್ಲಿ ಸಿಗಲಿದೆ ಗುಡ್‌ನ್ಯೂಸ್‌ʼʼ: ಹೊರ್ಮುಜ್‌ ಜಲಸಂಧಿ ಬಿಕ್ಕಟ್ಟು ಬಗೆಹರಿಯುವ ಸೂಚನೆ ನೀಡಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ

ಜಗತ್ತನ್ನೇ ಕಾಡುವ ಇಂಧನ ಬಿಕ್ಕಟ್ಟು ಬಗೆಹರಿಯುವ ಸೂಚನೆ ನೀಡಿದ ಅಮೆರಿಕ

Marco Rubio: ಭಾರತ ಪ್ರವಾಸದಲ್ಲಿರುವ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ಜಗತ್ತಿಗೆ ಕೆಲವೇ ಗಂಟೆಗಲಲ್ಲಿ ಗುಡ್‌ನ್ಯೂಸ್‌ ಸಿಗಲಿದೆ ಎಂದು ಹೇಳುವ ಮೂಲಕ ಪಶ್ಚಿಮ ಏಷ್ಯಾ ಸಂಘರ್ಷ ಬಗೆಹರಿಯುವ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಅವರು ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಜತೆ ಜಂಟಿ ಪ್ರತಿಗಾಗೋಷ್ಠಿ ನಡೆಸಿ ಮಾತನಾಡಿದರು.

Cockroach Janta Party: ದೇಶದ ಗಡಿ ದಾಟಿದ ಜಿರಳೆ; ಪಾಕಿಸ್ತಾನಕ್ಕೂ ತಲುಪಿದ ಭಾರತದ ಕಾಕ್ರೋಚ್‌ ಚಳುವಳಿ

ಭಾರತದಲ್ಲಿ ಜನ್ಮ ತಾಳಿ ಪಾಕಿಸ್ತಾನ ತಲುಪಿದ ಕಾಕ್ರೋಚ್‌ ಚಳುವಳಿ

Cockroach Janata Party: ಭಾರತದ ಜಿರಳೆ ಇದೀಗ ಗಡಿ ದಾಟಿ ಪಾಕಿಸ್ತಾನಕ್ಕೆ ಕಾಲಿಟ್ಟಿದೆ. ಹೌದು, ಭಾರತದ ಜಿರಳೆ ಚಳುವಳಿಯ ಚರ್ಚೆ ಇದೀಗ ಪಾಕಿಸ್ತಾನ ಸೋಷಿಯಲ್‌ ಮೀಡಿಯಾದಲ್ಲೂ ನಡೆಯುತ್ತಿದೆ. ಪಾಕಿಸ್ತಾನಾದಲ್ಲಿ ಒಂದಲ್ಲ ಹಲವು ಕಾಕ್ರೋಚ್‌ ಪಕ್ಷ ಆರಂಭವಾಗಿದೆ.

SSC Recruitment 2026: ಪದವೀಧರರಿಗೆ ಗುಡ್‌ನ್ಯೂಸ್‌; SSCಯಿಂದ 12,256 ಹುದ್ದೆಗಳಿಗೆ ಅರ್ಜಿ ಆಹ್ವಾನ

SSCಯಿಂದ ಬರೋಬ್ಬರಿ 12,256 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Guide: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 12,256 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅಪ್ಲೈ ಮಾಡಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 22.

ಕಾಕ್ರೋಚ್‌ ಜನತಾ ಪಾರ್ಟಿಗೆ ಶೇಕಡ 80ರಷ್ಟು ಪಾಕಿಸ್ತಾನ, ಬಾಂಗ್ಲಾದೇಶದವರೇ ಫಾಲೋವರ್ಸ್‌; ಜಿರಳೆಯ ಹಿನ್ನೆಲೆ ಪತ್ತೆ ಹಚ್ಚಿದ ನೆಟ್ಟಿಗರು

ಕಾಕ್ರೋಚ್‌ ಜನತಾ ಪಾರ್ಟಿಯ ಫಾಲೋವರ್ಸ್‌ ಬಗ್ಗೆ ಸಂಸ್ಥಾಪಕ ಹೇಳಿದ್ದೇನು?

Cockroach Janta Party: ಸದ್ಯ ಇಂಟರ್‌ನೆಟ್‌ನಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ ಭಾರಿ ಸದ್ದು ಮಾಡುತ್ತಿದೆ. ಆರಂಭದಲ್ಲಿ ಇದರ ಬಗ್ಗೆ ಕುತೂಹಲ ಬೆಳೆಸಿಕೊಂಡಿದ್ದವರೆಲ್ಲ ಇದೀಗ ಅನುಮಾನದಿಂದ ನೋಡ ತೊಡಗಿದ್ದಾರೆ. ಇದು ಟೂಲ್‌ ಕಿಟ್‌ನ ಭಾಗವೇ ಎನ್ನುವ ಅನುಮಾನ ಕಾಡತೊಡಗಿದೆ. ಈ ಬಗ್ಗೆ ವಿವರ ಇಲ್ಲಿದೆ.

ಉತ್ತರ ಕನ್ನಡ ಜನತೆಗೆ ಗುಡ್‌ನ್ಯೂಸ್‌; ಕಾರವಾರದಲ್ಲಿ ನಿರ್ಮಾಣವಾಗಲಿದೆ 200 ಹಾಸಿಗೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಕಾರವಾರದಲ್ಲಿ ನಿರ್ಮಾಣವಾಗಲಿದೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

Sidaramaiah: ಉತ್ತರ ಕನ್ನಡ ಭಾಗದ ಜನರ ಬಹು ವರ್ಷಗಳ ಬೇಡಿಕೆಯಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 200 ಹಾಸಿಗೆಗಳ ಸಾಮರ್ಥ್ಯದ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100 ಕೋಟಿ ರುಪಾಯಿ ಅಂದಾಜು ಮೊತ್ತದಲ್ಲಿ ಕಾರವಾರದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಸಂಜೆಯಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆ; ಮೆಟ್ರೋ ಸಂಚಾರದಲ್ಲಿ ವ್ಯತ್ಯಯ, ಪ್ರಯಾಣಿಕರ ಪರದಾಟ

ಬೆಂಗಳೂರಿನಲ್ಲಿ ಅಬ್ಬರಿಸಿದ ವರುಣ; ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

Bengaluru Rains: ಮುಂಗಾರುಪೂರ್ವ ಮಳೆ ರಾಜ್ಯಾದ್ಯಂತ ಅಬ್ಬರಿಸುತ್ತಿದ್ದು, ಗುರುವಾರ ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಜನತೆ ಕಂಗಾಲಾಗಿದ್ದಾರೆ. ಬೆಂಗಳೂರಿನ ಜೀವನಾಡಿ ನಮ್ಮ ಮೆಟ್ರೋ ಸಂಚಾರರದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ಕಂಗಾಲಾದರು. ಬೆಂಗಳೂರು ಮೆಟ್ರೋ ರೈಲು ನಿಗಮ ವ್ಯಾಪ್ತಿಯ ಹಸಿರು ಮತ್ತು ನೇರಳೆ ಸೇರಿಎಲ್ಲ ಪ್ರಮುಖ ಮೆಟ್ರೋ ಮಾರ್ಗಗಳ ರೈಲು ಸೇವೆಗಳಲ್ಲಿ ವಿಳಂಬ ಉಂಟಾಯಿತು.

ನಟ ದರ್ಶನ್‌ ಜತೆ ಜೈಲಿನಲ್ಲಿ ಸಿಗರೇಟ್‌ ಸೇದುತ್ತ ವೈರಲ್‌ ಆಗಿದ್ದ ರೌಡಿ ವಿಲ್ಸನ್‌ ಗಾರ್ಡನ್‌ ನಾಗನಿಗೆ ಜಾಮೀನು; ಜೈಲಿನಿಂದ ಬಿಡುಗಡೆ

ರೌಡಿ ವಿಲ್ಸನ್‌ ಗಾರ್ಡನ್‌ ನಾಗನಿಗೆ ಜಾಮೀನು

Belagavi News: ಸಿದ್ದಾಪುರದ ಮಹೇಶ್ ಕೊಲೆ ಪ್ರಕರಣದ ಬಂಧಿತ ಆರೋಪಿ, ನಟೋರಿಯಸ್ ರೌಡಿಶೀಟರ್‌ ವಿಲ್ಸನ್ ಗಾರ್ಡನ್ ನಾಗನಿಗೆ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಸ್ಪತ್ರೆ ಕೈದಿ ವಾರ್ಡನಲ್ಲಿ ಆರೋಗ್ಯ ತಪಾಸಣೆ ನಡೆಸಿ ಬಿಡುಗಡೆ ಮಾಡಲಾಯಿತು.

Kalaburagi News: ಕರೆಂಟ್‌ ಹರಿಸಿ ಕಾಡು ಪ್ರಾಣಿಗಳ ಬಲಿ ಪಡೆಯುತ್ತಿದ್ದ ಇಬ್ಬರ ಬಂಧನ

ಕಾಡು ಪ್ರಾಣಿಗಳ ಬಲಿ ಪಡೆಯುತ್ತಿದ್ದ ಇಬ್ಬರ ಬಂಧನ

ತೆಲಂಗಾಣ ಗಡಿಭಾಗದ ಸಂಗಾಪೂರ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕರೆಂಟ್‌ ಹರಿಸಿ ಪ್ರಾಣಿಗಳನ್ನು ಬಲಿ ಪಡೆಯುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಸಂಗಾಪೂರ ಗ್ರಾಮದ ಮಾಣಿಕ ತಂದೆ ಹರಿಶ್ಚಂದ್ರ ಪವಾರ (40) ಹಾಗೂ ಸುನೀಲ ತಂದೆ ಧರ್ಮು ರಾಠೋಡ (30) ಬಂಧಿತರು.

ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ವಿಚಾರದಲ್ಲಿ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌; ನ್ಯಾಯಾಲಯ ಹೇಳಿದ್ದೇನು?

ʼಗೃಹಲಕ್ಷ್ಮಿʼ ಬಾಕಿ ಹಣ ವಿಚಾರದಲ್ಲಿ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Gruhalakshmi Scheme: ಗೃಹಲಕ್ಷ್ಮಿ ಯೋಜನೆ 2 ತಿಂಗಳ ಕಂತು ಪಾವತಿಯಾಗದಿರುವ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ಸರ್ಕಾರಕ್ಕೆ ನೋಟಿಸ್‌ ನೀಡಿದೆ. 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ‌ ಹಣವನ್ನು ಪಾವತಿ ಮಾಡದ ಹಿನ್ನೆಲೆಯಲ್ಲಿ ಫಲಾನುಭವಿಗಳು ಕೋರ್ಟ್‌ ಮೊರೆ ಹೋಗಿದ್ದರು.

ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಮುಂಗಾರು ಪೂರ್ವ ಮಳೆ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಮುಂಗಾರು ಪೂರ್ವ ಮಳೆ

Karnataka Weather: ಮುಂದಿನ 4 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜತೆಗೆ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯದಲ್ಲೂ ಜಿರಳೆ ಅಬ್ಬರ; ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆಗೊಳಿಸಿದ ಕಾಂಗ್ರೆಸ್‌ ನಾಯಕರು

ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆಗೊಳಿಸಿದ ಸಿದ್ದರಾಮಯ್ಯ

I am Cockroach Tshirt: ದೇಶಾದ್ಯಂತ ಕಾಕ್ರೋಚ್​​ ಜನತಾ ಪಾರ್ಟಿ ಸದ್ದು ಮಾಡುತ್ತಿದೆ. ಈ ಮಧ್ಯೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ನಾಯಕರು ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆಗೊಳಿಸಿದ್ದಾರೆ. ಸದ್ಯ ಈ ವಿಡಿಯೊ ಭಾರಿ ಸದ್ದು ಮಾಡುತ್ತಿದೆ.

Loading...