ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Ramesh Kote

[email protected]

Articles
ರನ್‌ ನೀಡದೆ 3 ವಿಕೆಟ್‌ ಕಿತ್ತು ಕೌಂಟಿ ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ತಲುಪಿದ ಮಾನವ್‌ ಸುತಾರ್‌!

ಕೌಂಟಿ ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ತಲುಪಿದ ಮಾನವ್‌ ಸುತಾರ್‌!

ಕೌಂಟಿ ಚಾಂಪಿಯನ್‌ಷಿಪ್‌ ಕ್ರಿಕೆಟ್‌ ಟೂರ್ನಿಯಲ್ಲಿಯೂ ಭಾರತದ ಸ್ಪಿನ್ನರ್‌ ಮಾನವ್‌ ಸುತಾರ್‌ ಅವರು ತಮ್ಮ ಅದ್ಭುತ ಫಾರ್ಮ್‌ ಅನ್ನು ಮುಂದುವರಿಸಿದ್ದಾರೆ. ಇಂಗ್ಲೆಂಡ್‌ನಲ್ಲಿ ವಾರ್ವಿಕ್‌ಶೈರ್‌ ಪರ ಆಡುತ್ತಿದ್ದು, ಒಂದೇ ಒಂದು ರನ್‌ ನೀಡದೆ 3 ವಿಕೆಟ್‌ಗಳನ್ನು ಕಬಳಿಸಿದರು. ಆ ಮೂಲಕ ವಿಶೇಷ ದಾಖಲೆಯನ್ನು ಸುತಾರ್‌ ಬರೆದಿದ್ದಾರೆ.

ʻವೈಟ್‌ಬಾಲ್‌ ಆಟಗಾರರನ್ನು ತುಂಬಿದ್ದಾರೆʼ: ಭಾರತ ಎ ತಂಡವನ್ನು ಪ್ರಶ್ನಿಸಿದ ಆಕಾಶ್‌ ಚೋಪ್ರಾ!

ಅನಧಿಕೃತ ಟೆಸ್ಟ್‌ನ ಭಾರತ ಎ ತಂಡವನ್ನು ಪ್ರಶ್ನಿಸಿದ ಆಕಾಶ್‌ ಚೋಪ್ರಾ!

ಆಸ್ಟ್ರೇಲಿಯಾ ಎ ವಿರುದ್ಧ ನಡೆಯಲಿರುವ ಅನಧಿಕೃತ ಟೆಸ್ಟ್ ಪಂದ್ಯಗಳಿಗಾಗಿ ಆಯ್ಕೆ ಮಾಡಲಾಗಿರುವ ಭಾರತ ಎ ತಂಡದ ಬಗ್ಗೆ ಮಾಜಿ ಕ್ರಿಕೆಟಿಗ ಹಾಗೂ ಕಾಮೆಂಟೇಟರ್ ಆಕಾಶ್ ಚೋಪ್ರಾ ಪ್ರಶ್ನೆ ಮಾಡಿದ್ದಾರೆ. ರೆಡ್‌ ಬಾಲ್‌ ಕ್ರಿಕೆಟ್‌ಗಾಗಿ ಆಯ್ಕೆ ಮಾಡಲಾಗಿರುವ ಭಾರತ ಎ ತಂಡವನ್ನು ದೇವದತ್ ಪಡಿಕ್ಕಲ್ ಮುನ್ನಡೆಸಲಿದ್ದು, ಸಾಯಿ ಸುದರ್ಶನ್ ಉಪನಾಯಕರಾಗಿ ತಂಡಕ್ಕೆ ನೆರವಾಗಲಿದ್ದಾರೆ.

ʻದೆಹಲಿ ಪರ ಮತ್ತೆ ಆಡಲಿದ್ದಾರೆʼ: ಕೊಹ್ಲಿ ಫ್ಯಾನ್ಸ್‌ಗೆ ಸಿಹಿ ಸುದ್ದಿ ನೀಡಿದಿ ಡಿಡಿಸಿಎ ಚೀಫ್‌ ರೋಹನ್‌ ಜೇಟ್ಲಿ!

ಕೊಹ್ಲಿ ಫ್ಯಾನ್ಸ್‌ಗೆ ಸಿಹಿ ಸುದ್ದಿ ನೀಡಿದ ಡಿಸಿಸಿಎ ಚೀಫ್ ರೋಹನ್‌ ಜೇಟ್ಲಿ!

ಭಾರತ ತಂಡದ ಮುಂದಿನ ತಿಂಗಳುಗಳ ಏಕದಿನ ವೇಳಾಪಟ್ಟಿಯ ಬಳಿಕ ವಿರಾಟ್‌ ಕೊಹ್ಲಿ ವಿಜಯ್ ಹಝಾರೆ ಟ್ರೋಫಿಯಲ್ಲಿ ದೆಹಲಿ ತಂಡವನ್ನು ಪ್ರತಿನಿಧಿಸುವ ಸಾಧ್ಯತೆ ಇದೆ. ಭಾರತ ತಂಡದ ಪರ ನಿರಂತರವಾಗಿ ಏಕದಿನ ಪಂದ್ಯಗಳನ್ನು ಆಡಲಿರುವ ಕೊಹ್ಲಿ, ವೇಳಾಪಟ್ಟಿಗೆ ಅನುಗುಣವಾಗಿ ದೇಶಿ ಕ್ರಿಕೆಟ್‌ಗೆ ಮರಳುವ ಸಾಧ್ಯತೆಯಿದೆ ಎಂದು ದೆಹಲಿ ಕ್ರಿಕೆಟ್‌ ಸಂಸ್ಥೆಯ ಅಧ್ಯಕ್ಷ ರೋಹನ್‌ ಜೇಟ್ಲಿ ತಿಳಿಸಿದ್ದಾರೆ.

ವೈಭವ್‌ ಸೂರ್ಯವಂಶಿ ಬದಲು ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಬೇಕೆಂದ ಅಜಿಂಕ್ಯ ರಹಾನೆ!

ವೈಭವ್‌ ಬದಲು ಸಂಜುಗೆ ಸ್ಥಾನ ನೀಡಬೇಕೆಂದ ಅಜಿಂಕ್ಯ ರಹಾನೆ!

ವೈಭವ್‌ ಸೂರ್ಯವಂಶಿ ಇನ್ನೂ ಯುವ ಬ್ಯಾಟ್ಸ್‌ಮನ್‌ ಆಗಿದ್ದು, ಅವರಿಗೆ ಇನ್ನೂ ದೊಡ್ಡ ಭವಿಷ್ಯವಿದೆ. ಹಾಗಾಗಿ ಭಾರತ ಟಿ20 ತಂಡದಲ್ಲಿ ವೈಭವ್‌ ಬದಲು ಸಂಜು ಸ್ಯಾಮ್ಸನ್‌ಗೆ ಹೆಚ್ಚಿನ ಅವಕಾಶಗಳನ್ನು ನೀಡಬೇಕೆಂದು ಮಾಜಿ ಟೆಸ್ಟ್‌ ತಂಡದ ನಾಯಕ ಅಜಿಂಕ್ಯ ರಹಾನೆ ತಿಳಿಸಿದ್ದಾರೆ. ಭಾರತ ತಂಡ ಇದೇ 13 ರಂದು ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಟಿ20ಐ ಸರಣಿಯನ್ನು ಆಡಲಿದೆ.

ಡಿಆರ್‌ಎಸ್‌ ಶ್ರೇಯ ನಿಮಗೆ ಸಿಕ್ಕಿದೆ ಎಂದ ಇಶಾನ್‌ ಕಿಶನ್‌ಗೆ ತಿರುಗೇಟು ನೀಡಿದ ವೈಭವ್‌ ಸೂರ್ಯವಂಶಿ!

ಡಿಆರ್‌ಎಸ್‌ ಬಗ್ಗೆ ಇಶಾನ್‌ ಕಿಶನ್‌ರ ಕಾಲೆಳೆದ ವೈಭವ್‌ ಸೂರ್ಯವಂಶಿ!

ವೈಭವ್ ಸೂರ್ಯವಂಶಿ ಹಾಗೂ ಇಶಾನ್ ಕಿಶನ್ ನಡುವೆ ಕ್ಯಾಮೆರಾ ಮುಂದೆ ನಡೆದ ಹಾಸ್ಯಭರಿತ ಮಾತುಕತೆ ಇದೀಗ ಗಮನ ಸೆಳೆದಿದೆ. ಯಶಸ್ವಿ ಡಿಆರ್‌ಎಸ್‌ ನಿರ್ಧಾರಗಳ ಕ್ರೆಡಿಟ್‌ ಅನ್ನು 15 ವರ್ಷದ ವೈಭವ್ ಸೂರ್ಯವಂಶಿ ತೆಗೆದುಕೊಳ್ಳುತ್ತಿದ್ದಾರೆಂದು ಪೂರ್ವ ವಲಯ ನಾಯಕ ಇಶಾನ್ ಕಿಶನ್ ತಮಾಷೆಯಾಗಿ ಆರೋಪಿಸಿದ್ದಾರೆ. ಕ್ಯಾಮೆರಾ ಮುಂದೆ ನಡೆದ ಈ ಮೋಜಿನ ಸಂಭಾಷಣೆಯಲ್ಲಿ ಇಬ್ಬರೂ ಪರಸ್ಪರ ಕಾಲೆಳೆಯುವ ಮೂಲಕ ಅಭಿಮಾನಿಗಳಿಗೆ ಮನರಂಜನೆ ನೀಡಿದ್ದಾರೆ.

ಮೊಹಮ್ಮದ್‌ ಶಮಿಗೆ ಭಾರತ ತಂಡದಲ್ಲಿ ಸ್ಥಾನ ನೀಡದೇ ಇರಲು ಕಾರಣ ತಿಳಿಸಿದ ಸೌರವ್‌ ಗಂಗೂಲಿ!

ಭಾರತ ತಂಡದಲ್ಲಿ ಶಮಿಗೆ ಸ್ಥಾನ ನೀಡದೇ ಇರಲು ಕಾರಣ ತಿಳಿಸಿದ ದಾದಾ!

ಭಾರತ ಕ್ರಿಕೆಟ್ ತಂಡದಿಂದ ಮೊಹಮ್ಮದ್ ಶಮಿ ಹೊರಗುಳಿದಿರುವ ಕುರಿತು ಮಾಜಿ ನಾಯಕ ಸೌರವ್ ಗಂಗೂಲಿ ಆಯ್ಕೆದಾರರನ್ನು ಸಮರ್ಥಿಸಿಕೊಂಡಿದ್ದಾರೆ. ಆಟಗಾರರ ವಯಸ್ಸು ಹೆಚ್ಚಾದಂತೆ ಇಂತಹ ಪರಿಸ್ಥಿತಿಗಳು ಎದುರಾಗುವುದು ಸಹಜ ಎಂದು ಗಂಗೂಲಿ ಹೇಳಿದ್ದಾರೆ. ಹಿರಿಯ ಆಟಗಾರರ ಆಯ್ಕೆ ಹಾಗೂ ತಂಡದ ಸಂಯೋಜನೆ ವಿಚಾರದಲ್ಲಿ ಬದಲಾವಣೆಗಳು ಸಾಮಾನ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

2026ರ ಇಂಡಿಯನ್ ರೇಸಿಂಗ್ ಫೆಸ್ಟಿವಲ್‌ಗೆ ಅದ್ಧೂರಿ ಚಾಲನೆ; ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ಕಣಕ್ಕೆ!

2026ರ ಇಂಡಿಯನ್ ರೇಸಿಂಗ್ ಫೆಸ್ಟಿವಲ್‌ಗೆ ಅದ್ಧೂರಿ ಚಾಲನೆ

ಇಂಡಿಯನ್ ರೇಸಿಂಗ್ ಫೆಸ್ಟಿವಲ್‌ಗೆ ಅದ್ಧೂರಿ ಚಾಲನೆ ದೊರೆತಿದ್ದು, ಈ ಬಾರಿಯ ಟೂರ್ನಿಯಲ್ಲಿ ಒಟ್ಟು ಆರು ತಂಡಗಳು ರೇಸಿಂಗ್ ಟ್ರ್ಯಾಕ್‌ನಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಸಜ್ಜಾಗಿವೆ. ಇವುಗಳಲ್ಲಿ ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡವೂ ಪ್ರಮುಖ ಆಕರ್ಷಣೆಯಾಗಿದೆ. ದೇಶದ ವಿವಿಧ ಭಾಗಗಳನ್ನು ಪ್ರತಿನಿಧಿಸುವ ಆರು ತಂಡಗಳು ಪ್ರಶಸ್ತಿಗಾಗಿ ರೋಚಕ ಪೈಪೋಟಿ ನಡೆಸಲಿವೆ. ಭಾರತೀಯ ಮೋಟಾರ್‌ಸ್ಪೋರ್ಟ್ಸ್ ಅಭಿಮಾನಿಗಳಲ್ಲಿ ಈ ಟೂರ್ನಿ ಭಾರೀ ಕುತೂಹಲ ಮೂಡಿಸಿದೆ.

ಕೌಂಟಿ ಪಂದ್ಯದಲ್ಲಿ 10 ವಿಕೆಟ್‌ ಕಿತ್ತು ಗೌತಮ್‌ ಗಂಭೀರ್‌ಗೆ ಬಲವಾದ ಸಂದೇಶ ರವಾನಿಸಿದ ಕುಲ್ದೀಪ್‌ ಯಾದವ್‌!

ಕೌಂಟಿ ಪಂದ್ಯದಲ್ಲಿ 10 ವಿಕೆಟ್‌ ಸಾಧನೆ ಮಾಡಿದ ಕುಲ್ದೀಪ್‌ ಯಾದವ್!

Kuldeep Yadav: ಭಾರತ ತಂಡದಲ್ಲಿ ನಿಯಮಿತವಾಗಿ ಅವಕಾಶ ವಂಚಿತರಾದ ಚೈನಾಮನ್‌ ಸ್ಪಿನ್ನರ್‌ ಕುಲ್ದೀಪ್‌ ಯಾದವ್‌ ಅವರು ಕೌಂಟಿ ಚಾಂಪಿಯನ್‌ಷಿಪ್‌ ಟೂರ್ನಿಯ ಪಂದ್ಯವೊಂದರಲ್ಲಿ 10 ವಿಕೆಟ್‌ ಸಾಧನೆ ಮಾಡಿದ್ದಾರೆ. ಅವರು ಎಸೆಕ್ಸ್‌ ವಿರುದ್ದದ ಪಂದ್ಯದಲ್ಲಿ ಯಾರ್ಕ್‌ಶೈರ್‌ ಪರ 10 ವಿಕೆಟ್‌ ಕಿತ್ತಿದ್ದಾರೆ.

Women's Asia Cup: ಶಫಾಲಿ ವರ್ಮಾ ಮಿಂಚು, ಬಾಂಗ್ಲಾ ಎದುರು ಗೆದ್ದು ಫೈನಲ್‌ಗೇರಿದ ಭಾರತ ವನಿತೆಯರು!

ಬಾಂಗ್ಲಾ ವಿರುದ್ಧ ಗೆದ್ದು ಫೈನಲ್‌ಗೇರಿದ ಭಾರತ ವನಿತೆಯರು!

ಬಾಂಗ್ಲಾದೇಶವನ್ನು 40 ರನ್‌ಗಳಿಂದ ಮಣಿಸಿದ ಭಾರತ ಮಹಿಳಾ ತಂಡ, ಮಹಿಳಾ ಏಷ್ಯಾ ಕಪ್‌ನ ಫೈನಲ್‌ಗೆ ಭರ್ಜರಿ ಪ್ರವೇಶ ಪಡೆದಿದೆ. ಸೆಮಿಫೈನಲ್‌ನಲ್ಲಿ ಸಂಪೂರ್ಣ ಪ್ರಾಬಲ್ಯ ಮೆರೆದ ಭಾರತ, ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಬಾಂಗ್ಲಾದೇಶವನ್ನು ಸುಲಭವಾಗಿ ಮಣಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಇದೀಗ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದೆ.

IND vs AFG: ವೈಭವ್‌ ಸೂರ್ಯವಂಶಿ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಎಬಿ ಡಿ ವಿಲಿಯರ್ಸ್‌!

ವೈಭವ್‌ ಸೂರ್ಯವಂಶಿ ಬಗ್ಗೆ ಎಬಿ ಡಿವಿಲಿಯರ್ಸ್‌ ದೊಡ್ಡ ಹೇಳಿಕೆ!

ಅಫ್ಘಾನಿಸ್ತಾನ ವಿರುದ್ಧದ ಟಿ20ಐ ಸರಣಿಗೂ ಮುನ್ನ ಭಾರತೀಯ ಕ್ರಿಕೆಟ್‌ನ ಸೆನ್ಸೇಷನಲ್‌ ಬ್ಯಾಟ್ಸ್‌ಮನ್‌ ವೈಭವ್‌ ಸೂರ್ಯವಂಶಿಯನ್ನು ದಕ್ಷಿಣ ಆಫ್ರಿಕಾ ದಿಗ್ಗಜ ಎಬಿ ಡಿ ವಿಲಿಯರ್ಸ್‌ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. ವೈಭವ್‌ ಅವರನ್ನು ನೋಡಿದರೆ, ಅವರು 15 ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡುತ್ತಿರುವಂತೆ ಭಾಸವಾಗುತ್ತದೆ ಎಂದಿದ್ದಾರೆ.

ಅಜಿತ್‌ ಅಗರ್ಕರ್‌ಗೆ ಕೌಂಟರ್‌ ಕೊಟ್ರಾ ರೋಹಿತ್‌ ಶರ್ಮಾ? ಟೀ-ಶರ್ಟ್‌ ಮೇಲಿನ ಬರಹದ ರಹಸ್ಯವೇನು?

'Non-Committal': ಅಗರ್ಕರ್‌ಗೆ ಕೌಂಟರ್‌ ಕೊಟ್ರಾ ರೋಹಿತ್‌ ಶರ್ಮಾ?

ಟೀಮ್‌ ಇಂಡಿಯಾದ ಸ್ಟಾರ್ ಕ್ರಿಕೆಟಿಗ ರೋಹಿತ್ ಶರ್ಮಾ ಇದೀಗ ಕಿರುತೆರೆಯಲ್ಲಿ ಹೊಸ ಪಾತ್ರಕ್ಕೆ ಕಾಲಿಟ್ಟಿದ್ದಾರೆ. ಗೇಮ್ ಶೋ ‘ಫ್ಯಾಮಿಲಿ ಫುಲ್ ಹೌಸ್’ ಮೂಲಕ ಅವರು ಟಿವಿ ನಿರೂಪಕರಾಗಿ ತಮ್ಮ ಚೊಚ್ಚಲ ಪ್ರವೇಶ ಮಾಡುತ್ತಿದ್ದಾರೆ. ಶೋ ಸೆಟ್‌ನಲ್ಲಿ ರೋಹಿತ್ ಶರ್ಮಾ ‘Non-Committal?’ ಎಂದು ಬರೆಯಲಾಗಿದ್ದ ಟಿ-ಶರ್ಟ್ ಧರಿಸಿ ಕಾಣಿಸಿಕೊಂಡಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.

IND vs WI: ಟೀಮ್‌ ಇಂಡಿಯಾ ಫಿಸಿಯೊಥೆರಫಿಸ್ಟ್‌ ಕಮಲೇಶ್‌ ಜೈನ್‌ಗೆ ಕೊಕ್‌ ನೀಡಿದ ಬಿಸಿಸಿಐ!

ಭಾರತ ತಂಡದ ಫಿಸಿಯೊಥೆರಫಿಸ್ಟ್‌ ಕಮಲೇಶ್‌ ಜೈನ್‌ಗೆ ಕೊಕ್‌ ನೀಡಿದ ಬಿಸಿಸಿಐ!

ಟೀಮ್‌ ಇಂಡಿಯಾದಲ್ಲಿ ಫಿಸಿಯೋಥೆರಪಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕಮಲೇಶ್ ಜೈನ್ ಅವರೊಂದಿಗಿನ ಒಪ್ಪಂದವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಂತ್ಯಗೊಳಿಸಿದೆ. ಭಾರತದ ಆಟಗಾರರ ಫಿಟ್‌ನೆಸ್ ಹಾಗೂ ಗಾಯದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಕಮಲೇಶ್ ಜೈನ್ ಅವರ ಒಪ್ಪಂದವನ್ನು ಬಿಸಿಸಿಐ ಮುಂದುವರಿಸದಿರಲು ನಿರ್ಧರಿಸಿದೆ. ಈ ಬೆಳವಣಿಗೆಯೊಂದಿಗೆ ಭಾರತ ತಂಡದ ಸಹಾಯಕ ಸಿಬ್ಬಂದಿಯಲ್ಲಿ ಮತ್ತೊಂದು ಮಹತ್ವದ ಬದಲಾವಣೆ ನಡೆದಿದೆ.

Asian Games: ಬಾಂಗ್ಲಾದೇಶ ಎದುರು ಹರ್ಮನ್‌ಪ್ರೀತ್‌ ಕೌರ್‌ ಪಡೆದ ಕ್ಯಾಚ್‌ನ ಅಸಲಿ ಸತ್ಯ ಇಲ್ಲಿದೆ!

ಬಾಂಗ್ಲಾ ಎದುರು ಹರ್ಮನ್‌ಪ್ರೀತ್‌ ಕೌರ್‌ ಕ್ಯಾಚ್‌ ಅಸಲಿ ಸತ್ಯ ಇಲ್ಲಿದೆ!

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರದ್ದು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಕ್ಯಾಚ್ ವಿಡಿಯೊ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ. ಆದರೆ ಈ ವಿಡಿಯೊ ನಿಜವಾದದ್ದಲ್ಲ ಎಂಬುದು ಬೆಳಕಿಗೆ ಬಂದಿದೆ. ಕೌರ್‌ ಅವರ ಅದ್ಭುತ ಕ್ಯಾಚ್ ವಿಡಿಯೊ ಸಂಪೂರ್ಣವಾಗಿ AI ಮೂಲಕ ಸೃಷ್ಟಿಸಲಾದ ನಕಲಿ ಕಂಟೆಂಟ್ ಎಂದು ತಿಳಿದುಬಂದಿದೆ.

2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ನೀವು ಆಡುತ್ತೀರಾ? ರೋಹಿತ್‌ ಶರ್ಮಾ ಉತ್ತರ ಹೀಗಿದೆ!

2027ರ ಏಕದಿನ ವಿಶ್ವಕಪ್‌ ಬಗ್ಗೆ ರೋಹಿತ್‌ ಶರ್ಮಾ ಪ್ರತಿಕ್ರಿಯೆ!

2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ತಾವು ಆಡಲಿದ್ದಾರೆಯೇ ಎಂಬ ಕುರಿತು ಹರಿದಾಡುತ್ತಿರುವ ಊಹಾಪೋಹಗಳಿಗೆ ಟೀಮ್‌ ಇಂಡಿಯಾ ಹಿರಿಯ ಬ್ಯಾಟರ್‌ ರೋಹಿತ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ. 2027ರ ವಿಶ್ವಕಪ್‌ ಟೂರ್ನಿಗೆ ಇನ್ನೂ ಬಹಳ ದೂರದಲ್ಲಿದ್ದು, ಈಗಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳುವುದು ಕಷ್ಟ ಎಂದು ರೋಹಿತ್ ಸ್ಪಷ್ಟಪಡಿಸಿದ್ದಾರೆ.

CPL 2026: 47ನೇ ವಯಸ್ಸಿನಲ್ಲಿ 5 ವಿಕೆಟ್‌ ಕಿತ್ತು ವಿಶ್ವ ದಾಖಲೆ ಬರೆದ ಇಮ್ರಾನ್‌ ತಾಹಿರ್‌!

47ನೇ ವಯಸ್ಸಿನಲ್ಲಿ 5 ವಿಕೆಟ್‌ ಕಿತ್ತು ದಾಖಲೆ ಬರೆದ ಇಮ್ರಾನ್‌ ತಾಹಿರ್!

ಕೆರಿಬಿಯನ್ ಪ್ರೀಮಿಯರ್ ಲೀಗ್‌ ಟೂರ್ನಿಯಲ್ಲಿ ಗಯಾನಾ ಆಮೆಜಾನ್ ವಾರಿಯರ್ಸ್ ಪರ ಆಡುತ್ತಿರುವ ದಕ್ಷಿಣ ಆಫ್ರಿಕಾದ ಹಿರಿಯ ಸ್ಪಿನ್ನರ್ ಇಮ್ರಾನ್ ತಾಹಿರ್ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಸೇಂಟ್ ಲೂಸಿಯಾ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅವರು 17 ರನ್‌ ನೀಡಿ 5 ವಿಕೆಟ್ ಕಬಳಿಸಿ ಪುರುಷರ ಟಿ20 ಕ್ರಿಕೆಟ್‌ನಲ್ಲಿ ಐದು ವಿಕೆಟ್‌ಗಳ ಸಾಧನೆ ಮಾಡಿದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆಯನ್ನು ಬರೆದಿದ್ದಾರೆ.

IND vs WI: ವೆಸ್ಟ್‌ ಇಂಡೀಸ್‌ ವಿರುದ್ಧದ ಏಕದಿನ ಸರಣಿಗೆ ತಯಾರಿ ಆರಂಭಿಸಿದ ರೋಹಿತ್‌ ಶರ್ಮಾ!

ವಿಂಡೀಸ್‌ ಏಕದಿನ ಸರಣಿಗೆ ತಯಾರಿ ಆರಂಭಿಸಿದ ರೋಹಿತ್‌ ಶರ್ಮಾ!

ವೆಸ್ಟ್‌ ಇಂಡೀಸ್‌ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡದ ಮಾಜಿ ನಾಯಕ ರೋಹಿತ್‌ ಶರ್ಮಾ ಸಜ್ಜಾಗುತ್ತಿದ್ದಾರೆ. ಸೆಪ್ಟಂಬರ್‌ 27 ರಂದು ತವರಿನಲ್ಲಿ ವಿಂಡೀಸ್‌ ಎದುರು ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿಯ ನಿಮಿತ್ತ ಹಿಟ್‌ಮ್ಯಾನ್‌ ರೋಹಿತ್‌ ಶರ್ಮಾ ತರಬೇತಿಯನ್ನು ಶುರು ಮಾಡಿದ್ದಾರೆ.

ENG vs PAK: ಮೊದಲ ಮಹಾಯುದ್ಧದ ಬಳಿಕ ಅತ್ಯುತ್ತಮ ಟೆಸ್ಟ್‌ ಸರಾಸರಿಯಲ್ಲಿ  100 ವಿಕೆಟ್‌ ಕಿತ್ತ ಓಲ್ಲಿ ರಾಬಿನ್ಸನ್‌!

100 ಟೆಸ್ಟ್‌ ವಿಕೆಟ್‌ ಕಬಳಿಸಿ ವಿಶೇಷ ದಾಖಲೆ ಬರೆದ ಓಲ್ಲಿ ರಾಬಿನ್ಸನ್‌!

ಪಾಕಿಸ್ತಾನ ವಿರುದ್ಧ ಮೂರನೇ ಟೆಸ್ಟ್‌ ಪಂದ್ಯದ ಮೊದಲನೇ ದಿನ ಅದ್ಭುತ ಬೌಲಿಂಗ್‌ ಸ್ಪೆಲ್‌ ಬೌಲ್‌ ಮಾಡಿದ ಓಲ್ಲಿ ರಾಬಿನ್ಸನ್‌ ಅವರು ಟೆಸ್ಟ್‌ ಕ್ರಿಕೆಟ್‌ನಲ್ಲಿ ನೂತನ ದಾಖಲೆಯನ್ನು ಬರೆದಿದ್ದಾರೆ. ಅವರು ಮೊದಲನೇ ಮಹಾಯುದ್ಧದ ಬಳಿಕ ಅತ್ಯುತ್ತಮ ಸರಾಸರಿಯಲ್ಲಿ 100 ಟೆಸ್ಟ್‌ ವಿಕೆಟ್‌ಗಳನ್ನು ಕಬಳಿಸಿದ ಮೊದಲ ಬೌಲರ್‌ ಎನಿಸಿಕೊಂಡಿದ್ದಾರೆ.

IPL 2027: ಕೋಲ್ಕತಾ ನೈಟ್‌ ರೈಡರ್ಸ್‌ಗೆ ಮುಂದಿನ ನಾಯಕನನ್ನು ಆರಿಸಿದ ಆಕಾಶ್‌ ಚೋಪ್ರಾ!

ಕೆಕೆಆರ್‌ಗೆ ಮುಂದಿನ ನಾಯಕನನ್ನು ಆರಿಸಿದ ಆಕಾಶ್‌ ಚೋಪ್ರಾ!

ಮಾಜಿ ಭಾರತ ಕ್ರಿಕೆಟಿಗ ಹಾಗೂ ವೀಕ್ಷಕ ವಿವರಣೆಗಾರ ಆಕಾಶ್ ಚೋಪ್ರಾ ಅವರು ಕೋಲ್ಕತ್ತಾ ನೈಟ್ ರೈಡರ್ಸ್‌ (ಕೆಕೆಆರ್‌) ತಂಡದ ಮುಂದಿನ ನಾಯಕನಾಗಿ ರಿಂಕು ಸಿಂಗ್‌ ಅವರನ್ನು ಆಯ್ಕೆ ಮಾಡಿದ್ದಾರೆ. ರಿಂಕು ಸಿಂಗ್‌ 2018ರಿಂದ ಕೆಕೆಆರ್‌ ತಂಡದ ಭಾಗವಾಗಿದ್ದಾರೆ. ತಂಡದೊಂದಿಗೆ ದೀರ್ಘಕಾಲದ ಅನುಭವ ಹೊಂದಿರುವ ರಿಂಕು ಅವರನ್ನು ಮುಂದಿನ ನಾಯಕನನ್ನಾಗಿ ಮಾಡುವುದು ಸೂಕ್ತ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

East Zone vs South Zone: ದುಲೀಪ್‌ ಟ್ರೋಫಿ ಇತಿಹಾಸದಲ್ಲಿ ದೊಡ್ಡ ದಾಖಲೆ ಬರೆದ ಇಶಾನ್‌ ಕಿಶನ್‌!

ದುಲೀಪ್‌ ಟ್ರೋಫಿ ಟೂರ್ನಿಯಲ್ಲಿ ದೊಡ್ಡ ದಾಖಲೆ ಬರೆದ ಇಶಾನ್‌ ಕಿಶನ್‌!

ದಕ್ಷಿಣ ವಲಯ ಎದುರು ದುಲೀಪ್‌ ಟ್ರೋಫಿ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಪೂರ್ವ ವಲಯ ಎದರು ದ್ವಿಶತಕ ಹಾಗೂ ಅರ್ಧಶತಕವನ್ನು ಬಾರಿದ್ದಾರೆ. ಆ ಮೂಲಕ ಈ ಟೂರ್ನಿಯ ಏಕೈಕ ಪಂದ್ಯದಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ವಿಕೆಟ್‌ ಕೀಪರ್‌-ಬ್ಯಾಟರ್‌ ಹಾಗೂ ಏಕೈಕ ಪಂದ್ಯದಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ಬರೆದಿದ್ದಾರೆ. ಇಶಾನ್‌ ಕಿಶನ್‌ ಪ್ರಥಮ ಇನಿಂಗ್ಸ್‌ನಲ್ಲಿ 270 ರನ್‌ ಹಾಗೂ ದ್ವಿತೀಯ ಇನಿಂಗ್ಸ್‌ನಲ್ಲಿ 80 ರನ್‌ಗಳನ್ನು ದಾಖಲಿಸಿದ್ದರು.

ಗುರ್ನೂರ್‌ ಬ್ರಾರ್‌ ಕೇವಲ ಟೆಸ್ಟ್‌ಗೆ ಮಾತ್ರವಲ್ಲ, ಎಲ್ಲಾ ಸ್ವರೂಪಗಳಲ್ಲಿಯೂ ಆಡಿಸಬೇಕೆಂದ ಆಕಾಶ್‌ ಚೋಪ್ರಾ!

ಗುರ್ನೂರ್‌ ಬ್ರಾರ್‌ ಎಲ್ಲಾ ಸ್ವರೂಪಗಳಲ್ಲಿ ಆಡಬೇಕೆಂದ ಆಕಾಶ್‌ ಚೋಪ್ರಾ!

ಮಾಜಿ ಕ್ರಿಕೆಟಿಗ ಹಾಗೂ ವೀಕ್ಷಕ ವಿವರಣೆಕಾರ ಆಕಾಶ್ ಚೋಪ್ರಾ ಅವರು ಯುವ ವೇಗಿ ಗುರ್ನೂರ್ ಬ್ರಾರ್ ಅವರನ್ನು ಟೆಸ್ಟ್ ಕ್ರಿಕೆಟ್‌ಗೆ ಮಾತ್ರ ಸೀಮಿತಗೊಳಿಸದೆ, ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲೂ ಆಡಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ನಿಯಮಿತವಾಗಿ ಅವಕಾಶ ನೀಡುವುದರಿಂದ ಬ್ರಾರ್‌ಗೆ ಹೆಚ್ಚಿನ ಅನುಭವ ದೊರೆಯಲಿದ್ದು, ಇದು 2027ರ ಏಕದಿನ ವಿಶ್ವಕಪ್‌ಗೆ ಸಿದ್ಧತೆ ನಡೆಸಲು ನೆರವಾಗಲಿದೆ ಎಂದು ಹೇಳಿದ್ದಾರೆ.

ENG vs PAK: ಸಚಿನ್‌ ತೆಂಡೂಲ್ಕರ್‌ರ ಮತ್ತೊಂದು ದಾಖಲೆ ಮುರಿಯುವ ಸನಿಹದಲ್ಲಿ ಜೋ ರೂಟ್‌!

ಸಚಿನ್‌ ತೆಂಡೂಲ್ಕರ್‌ರ ಮತ್ತೊಂದು ದಾಖಲೆಯ ಸನಿಹದಲ್ಲಿ ಜೋ ರೂಟ್‌!

ಪಾಕಿಸ್ತಾನ ವಿರುದ್ಧ ಎಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಜೋ ರೂಟ್, ಅತಿ ಹೆಚ್ಚು ಟೆಸ್ಟ್ ಪಂದ್ಯಗಳಲ್ಲಿ ಆಡಿರುವ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ. ಆ ಮೂಲಕ ರೂಟ್, ಆಸ್ಟ್ರೇಲಿಯಾದ ದಿಗ್ಗಜರಾದ ರಿಕಿ ಪಾಂಟಿಂಗ್ ಮತ್ತು ಸ್ಟೀವ್ ವಾ ಅವರನ್ನು ಹಿಂದಿಕ್ಕಿದ್ದಾರೆ. ಇದರೊಂದಿಗೆ ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆಯ ಸನಿಹದಲ್ಲಿದ್ದಾರೆ.

SA vs NAM: ಚೊಚ್ಚಲ ಏಕದಿನ ಪಂದ್ಯದಲ್ಲಿಯೇ 150 ರನ್‌ ಚಚ್ಚಿದ ಜೋರ್ಡನ್‌ ಹರ್ಮನ್!

ಚೊಚ್ಚಲ ಏಕದಿನ ಪಂದ್ಯದಲ್ಲಿಯೇ 150 ರನ್‌ ಚಚ್ಚಿದ ಜೋರ್ಡನ್‌ ಹರ್ಮನ್!

ನಮೀಬಿಯಾ ಎದುರು ತಮ್ಮ ಚೊಚ್ಚಲ ಏಕದಿನ ಪಂದ್ಯದಲ್ಲಿಯೇ ದಕ್ಷಿಣ ಆಫ್ರಿಕಾ ತಂಡದ ಜೋರ್ಡನ್‌ ಹರ್ಮನ್‌ ಅವರು ಶತಕವನ್ನು ಬಾರಿಸಿದ್ದಾರೆ. ಅವರು ತಮ್ಮ 24ನೇ ವಯಸ್ಸಿನಲ್ಲಿಯೇ 126 ಎಸೆತಗಳಲ್ಲಿ 150 ರನ್‌ಗಳನ್ನು ಬಾರಿಸಿದರು. ಆ ಮೂಲಕ ಒಡಿಐ ಕ್ರಿಕೆಟ್‌ನಲ್ಲ ನೂತನ ದಾಖಲೆಯನ್ನು ಬರೆದಿದ್ದಾರೆ.

Duleep Trophy Final: ಸೋಲಿನ ಸುಳಿಯಲ್ಲಿ ದಕ್ಷಿಣ ವಲಯ, ಪೂರ್ವ ವಲಯಕ್ಕೆ 584 ರನ್‌ ಮುನ್ನಡೆ!

ದುಲೀಪ್‌ ಟ್ರೋಫಿ ಮುಡಿಗೇರಿಸಿಕೊಳ್ಳುವ ಸನಿಹದಲ್ಲಿ ಪೂರ್ವ ವಲಯ!

East Zone vs East Zone: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2026ರ ದುಲೀಪ್‌ ಟ್ರೋಫಿ ಟೂರ್ನಿಯ ಫೈನಲ್‌ ಪಂದ್ಯದ ನಾಲ್ಕನೇ ದಿನವೂ ಪೂರ್ವ ವಲಯ ಮುನ್ನಡೆ ಸಾಧಿಸಿದೆ. ಆ ಮೂಲಕ ದಕ್ಷಿಣ ವಲಯ ಎದುರು ಗೆಲುವಿನ ಸನಿಹದಲ್ಲಿದೆ.

ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾರ ಏಕದಿನ ವಿಶ್ವಕಪ್‌ ಭವಿಷ್ಯ ನುಡಿದ ಆಶಿಶ್‌ ನೆಹ್ರಾ!

ರೋಹಿತ್‌, ಕೊಹ್ಲಿಯ ಏಕದಿನ ವಿಶ್ವಕಪ್‌ ಭವಿಷ್ಯ ನುಡಿದ ನೆಹ್ರಾ!

ಟಿ20ಐ ಹಾಗೂ ಟೆಸ್ಟ್‌ ಕ್ರಿಕೆಟ್‌ಗೆ ಈಗಾಗಲೇ ವಿದಾಯ ಹೇಳಿರುವ ಭಾರತ ತಂಡದ ಮಾಜಿ ನಾಯಕರಾದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಸದ್ಯ ಏಕದಿನ ಕ್ರಿಕೆಟ್‌ನಲ್ಲಿ ಸಕ್ರಿಯರಾಗಿದ್ದಾರೆ. 2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯನ್ನು ಗೆದ್ದ ಬಳಿಕ ಅವರು 50 ಓವರ್‌ಗಳ ಸ್ವರೂಪಕ್ಕೆ ವಿದಾಯ ಹೇಳಬಹುದು. ಇದೀಗ ಅವರ ವಿಶ್ವಕಪ್‌ ಭವಿಷ್ಯದ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ.

Loading...