ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Ramesh Kote

[email protected]

Articles
IPL 2026: ಟೂರ್ನಿಯ ಎರಡನೇ ಅವಧಿಯಲ್ಲಿ ಪಂಜಾಬ್‌ ಕಿಂಗ್ಸ್‌ ವೈಫಲ್ಯಕ್ಕೆ ಕಾರಣ ತಿಳಿಸಿದ ಸಚಿನ್‌ ತೆಂಡೂಲ್ಕರ್‌!

ಪಂಜಾಬ್‌ ಕಿಂಗ್ಸ್‌ ವೈಫಲ್ಯಕ್ಕೆ ಕಾರಣ ತಿಳಿಸಿದ ಸಚಿನ್‌ ತೆಂಡೂಲ್ಕರ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಎರಡನೇ ಅವಧಿಯಲ್ಲಿ ಪಂಜಾಬ್‌ ಕಿಂಗ್ಸ್‌ ಸತತ ವೈಫಲ್ಯಕ್ಕೆ ಕಾರಣವೇನೆಂದು ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ವಿವರಿಸಿದ್ದಾರೆ. ಮೊದಲ ಅವಧಿಯಲ್ಲಿ ಒಂದೂ ಪಂದ್ಯದಲ್ಲಿ ಸೋಲದ, ಪಂಜಾಬ್‌ ಎರಡನೇ ಅವಧಿಯಲ್ಲಿ ಸತತ ಆರು ಪಂದ್ಯಗಳನ್ನು ಸೋತು ಟೂರ್ನಿಯಿಂದ ಹೊರಬಿದ್ದಿತ್ತು.

ಹರ್ಷ ಭೋಗ್ಲೆ ಕಟ್ಟಿದ 2026ರ ಐಪಿಎಲ್‌ ಪ್ಲೇಯಿಂಗ್‌ XIನಲ್ಲಿ ನಾಲ್ವರು ಆರ್‌ಸಿಬಿ ಸ್ಟಾರ್ಸ್‌!

ತಮ್ಮ ನೆಚ್ಚಿನ 2026ರ ಐಪಿಎಲ್‌ ಪ್ಲೇಯಿಂಗ್‌ XI ಆರಿಸಿದ ಹರ್ಷ ಬೋಗ್ಲೆ!

ಕ್ರಿಕೆಟ್‌ ನಿರೂಪಕ ಹರ್ಷ ಭೋಗ್ಲೆ ಅವರು 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ತನ್ನ ನೆಚ್ಚಿನ ಪ್ಲೇಯಿಂಗ್‌ XI ಅನ್ನು ಆರಿಸಿದ್ದಾರೆ. ಇದರಲ್ಲಿ ಚಾಂಪಿಯನ್‌ ಆರ್‌ಸಿಬಿ ತಂಡದಿಂದ ಒಟ್ಟು ನಾಲ್ವರು ಆಟಗಾರರಿಗೆ ಬೋಗ್ಲೆ ಅವಕಾಶ ನೀಡಿದ್ದಾರೆ. ವಿರಾಟ್‌ ಕೊಹ್ಲಿ, ಕೃಣಾಲ್‌ ಪಾಂಡ್ಯ, ರಜತ್‌ ಪಾಟಿದಾರ್‌ ಹಾಗೂ ಭುವನೇಶ್ವರ್‌ ಕುಮಾರ್‌ಗೆ ಅವಕಾಶ ನೀಡಲಾಗಿದೆ.

ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ಟ್ರೋಫಿ ಗೆದ್ದ ವಿದೇಶಿ ಆಟಗಾರರು!

ಅತಿ ಹೆಚ್ಚು ಐಪಿಎಲ್‌ ಟ್ರೋಫಿ ಗೆದ್ದ ವಿದೇಶಿ ಆಟಗಾರರು!

ಇಂಡಿಯನ್‌ ಪ್ರೀಮಿಯರ್‌ ಲೀಗ್‌ 2026ರ ಟೂರ್ನಿ ಮುಕ್ತಾಯವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೈನಲ್‌ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸುವ ಮೂಲಕ ಸತತ ಎರಡನೇ ಬಾರಿ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಇದೀಗ ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ಟ್ರೋಫಿಯನ್ನು ಗೆದ್ದ ವಿದೇಶಿ ಆಟಗಾರರ ಬಗ್ಗೆ ಇಲ್ಲಿ ವಿವರಿಸಲಾಗಿದೆ.

2026ರ ಐಪಿಎಲ್‌ ಗೆದ್ದ ಬೆನ್ನಲ್ಲೆ ಪತ್ನಿ ಅನುಷ್ಕಾ ಜೊತೆ ಬೃಂದಾವನಕ್ಕೆ ತೆರಳಿದ ವಿರಾಟ್‌ ಕೊಹ್ಲಿ!

2026ರ ಐಪಿಎಲ್‌ ಗೆದ್ದ ಬೆನ್ನಲ್ಲೆ ವಿರಾಟ್‌ ಕೊಹ್ಲಿ ಟೆಂಪಲ್‌ ರನ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಪ್ರಶಸ್ತಿ ಗೆದ್ದುಕೊಟ್ಟ ಬಳಿಕ ಮಾಜಿ ನಾಯಕ ವಿರಾಟ್‌ ಕೊಹ್ಲಿ ಟೆಂಪಲ್‌ ರನ್‌ ಶುರು ಮಾಡಿದ್ದಾರೆ. ಅವರು ಹಾಗೂ ಅವರ ಪತ್ನಿ ಅನುಷ್ಕಾ ಶರ್ಮಾ ಅವರು ಬೃಂದಾವನದಲ್ಲಿರುವ ರಾಧಾ ಕೇಲಿ ಕುಂಜ್ ಆಶ್ರಮಕ್ಕೆ ಭೇಟಿ ನೀಡಿ ಪ್ರೇಮಾನಂದ ಮಹಾರಾಜ ಗುರೂಜಿ ಅವರ ಆಶಿರ್ವಾದ ಪಡೆದಿದ್ದಾರೆ.

ವೈಭವ್‌ ಸೂರ್ಯವಂಶಿಗೆ ಈಗಲೇ ಭಾರತ ತಂಡದಲ್ಲಿ ಚಾನ್ಸ್‌ ನೀಡಬೇಡಿ: ಸಂಜಯ್‌ ಮಾಂಜ್ರೇಕರ್‌!

ವೈಭವ್‌ಗೆ ಭಾರತ ತಂಡದಲ್ಲಿ ಈಗಲೇ ಅವಕಾಶ ಬೇಡ: ಮಾಂಜ್ರೇಕರ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿರುವ ರಾಜಸ್ಥಾನ್‌ ರಾಯಲ್ಸ್‌ ತಂಡದ ಎಡಗೈ ಬ್ಯಾಟ್ಸ್‌ಮನ್‌ ವೈಭವ್‌ ಸೂರ್ಯವಂಶಿಗೆ ತವರು ಸರಣಿಯ ಭಾರತ ತಂಡದಲ್ಲಿ ಮೊದಲು ಅವಕಾಶ ನೀಡಬೇಕೆಂದು ಮಾಜಿ ಕ್ರಿಕೆಟಿಗ ಸಂಜಯ್‌ ಮಾಂಜ್ರೇಕರ್‌ ಬಿಸಿಸಿಐಗೆ ಸಲಹೆ ನೀಡಿದ್ದಾರೆ.

IPL 2026: ಆರ್‌ಸಿಬಿ ಕ್ಯಾಂಪ್‌ನಲ್ಲಿ ಕಠಿಣ ಪರಿಶ್ರಮಪಡುವ ವ್ಯಕ್ತಿಯನ್ನು ಹೆಸರಿಸಿದ ವೆಂಕಟೇಶ ಅಯ್ಯರ್!

ಆರ್‌ಸಿಬಿಯಲ್ಲಿ ಕಠಿಣ ಪರಿಶ್ರಮ ಪಡುವ ವ್ಯಕ್ತಿಯನ್ನು ಆರಿಸಿದ ಅಯ್ಯರ್‌

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಕೋಚಿಂಗ್‌ ಸಿಬ್ಬಂದಿಯನ್ನು ಆಲ್‌ರೌಂಡರ್‌ ವೆಂಕಟೇಶ ಅಯ್ಯರ್‌ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. ಅದರಲ್ಲಿಯೂ ವಿಶೇಷವಾಗಿ ಬ್ಯಾಟಿಂಗ್‌ ಕೋಚ್‌ ದಿನೇಶ್‌ ಕಾರ್ತಿಕ್‌ ಅವರು ಆರ್‌ಸಿಬಿ ಕ್ಯಾಂಪ್‌ನಲ್ಲಿ ಸಾಕಷ್ಟು ಕಠಿಣ ಪರಿಶ್ರಮಪಡುತ್ತಾರೆಂದು ಹೇಳಿದ್ದಾರೆ.

IPL 2026:  ವೈಭವ್‌ ಸೂರ್ಯವಂಶಿ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಸುನೀಲ್‌ ಗವಾಸ್ಕರ್‌!

ವೈಭವ್‌ ಸೂರ್ಯವಂಶಿ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಸುನೀಲ್‌ ಗವಾಸ್ಕರ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ತಮ್ಮ ಸ್ಪೋಟಕ ಬ್ಯಾಟಿಂಗ್‌ ಮೂಲಕ ಎಲ್ಲರ ಗಮನ ಸೆಳೆದಿದ್ದ ರಾಜಸ್ಥಾನ್‌ ರಾಯಲ್ಸ್‌ ತಂಡದ ಆರಂಭಿಕ ವೈಭವ್‌ ಸೂರ್ಯವಂಶಿ ಅವರನ್ನು ಬ್ಯಾಟಿಂಗ್‌ ದಿಗ್ಗಜ ಸುನೀಲ್‌ ಗವಾಸ್ಕರ್‌ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. 2026ರ ಐಪಿಎಲ್‌ ಟೂರ್ನಿಯಲ್ಲಿ ನನಗೆ ಮೊದಲು ನೆನಪಾಗುವುದು ವೈಭವ್‌ ಎಂದು ತಿಳಿಸಿದ್ದಾರೆ.

IPL 2026: ಆರ್‌ಸಿಬಿಯ ಎರಡನೇ ಕಪ್‌ ಗೆಲುವನ್ನು ಸಂಭ್ರಮಿಸಿದ ಪಾಕಿಸ್ತಾನಿ ಫ್ಯಾನ್ಸ್‌! ವಿಡಿಯೊ

ಆರ್‌ಸಿಬಿ ತಂಡದ ಗೆಲುವನ್ನು ಸಂಭ್ರಮಿಸಿದ ಪಾಕ್‌ ಅಭಿಮಾನಿಗಳು!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪ್ರಶಸ್ತಿ ಗೆಲುವನ್ನು ಯುಎಇಯಲ್ಲಿ ಪಾಕಿಸ್ತಾನದ ಅಭಿಮಾನಿಗಳು ಕೂಡ ಸಂಭ್ರಮಿಸಿದ್ದಾರೆ. ಈ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಇದಕ್ಕೆ ಭಾರತ ಹಾಗೂ ಪಾಕಿಸ್ತಾನ ಎರಡೂ ದೇಶಗಳ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ʻನೀವು ಆರ್‌ಸಿಬಿ ಡ್ರೆಸ್ಸಿಂಗ್‌ ರೂಂನ ಹೃದಯ ಬಡಿತʼ: ವಿರಾಟ್‌ ಕೊಹ್ಲಿಗೆ ಆಂಡಿ ಫ್ಲವರ್‌ ಮೆಚ್ಚುಗೆ!

ವಿರಾಟ್‌ ಕೊಹ್ಲಿ ಆರ್‌ಸಿಬಿ ಡ್ರೆಸ್ಸಿಂಗ್‌ ರೂಂನ ಹೃದಯ ಬಡಿತ: ಆಂಡಿ ಫ್ಲವರ್‌

IPL 2026: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಬಳಿಕ ಆರ್‌ಸಿಬಿ ಹೆಡ್‌ ಕೋಚ್‌ ಆಂಡಿ ಫ್ಲವರ್‌ ಅವರು, ವಿರಾಟ್‌ ಕೊಹ್ಲಿ ಅವರನ್ನು ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. ಕೊಹ್ಲಿ ಆರ್‌ಸಿಬಿ ಡ್ರೆಸ್ಸಿಂಗ್‌ ರೂಂನ ಹೃದಯ ಬಡಿತ ಎಂದು ಬಣ್ಣಿಸಿದ್ದಾರೆ.

IPL 2026: ಎರಡನೇ ಟ್ರೋಫಿ ಗೆದ್ದ ಆರ್‌ಸಿಬಿಗೆ ಆಘಾತ, 2027ರ ಐಪಿಎಲ್‌ ಮೊದಲನೇ ಪಂದ್ಯಕ್ಕೆ ಟಿಮ್‌ ಡೇವಿಡ್‌ ಬ್ಯಾನ್‌!

2027ರ ಐಪಿಎಲ್‌ ಮೊದಲನೇ ಪಂದ್ಯಕ್ಕೆ ಟಿಮ್‌ ಡೇವಿಡ್‌ ಬ್ಯಾನ್!‌

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಒಂದು ಹಿನ್ನಡೆಯಾಗಿದೆ. ಗುಜರಾತ್‌ ಟೈಟನ್ಸ್‌ ವಿರುದ್ಧ ಫೈನಲ್‌ ಪಂದ್ಯದಲ್ಲಿ ಐಪಿಎಲ್‌ ನಿಯಮ ಉಲ್ಲಂಘನೆ ಮಾಡಿದ ಆರ್‌ಸಿಬಿ ಆಲ್‌ರೌಂಡರ್‌ ಟಿಮ್‌ ಡೇವಿಡ್‌ಗೆ ಪಂದ್ಯದ ಸಂಭಾವನೆಯಲ್ಲಿ ಶೇ 50 ರಷ್ಟು ದಂಡ ಹಾಗೂ 2027ರ ಐಪಿಎಲ್‌ ಟೂರ್ನಿಯಲ್ಲಿ ಒಂದು ಪಂದ್ಯದಿಂದ ನಿಷೇಧ ಹೇರಲಾಗಿದೆ.

ʻಇನ್ನೂ ನಮ್ಮ ಕೆಲಸ ಮುಗಿದಿಲ್ಲ, ಹ್ಯಾಟ್ರಿಕ್‌ ಗೆಲುವು ನಮ್ಮ ಗುರಿʼ: ರಜತ್‌ ಪಾಟಿದಾರ್‌ ಮತ್ತೊಂದು ಶಪಥ!

ಹ್ಯಾಟ್ರಿಕ್‌ ಗೆಲುವು ನಮ್ಮ ಗುರಿ: ಶಪಥ ಮಾಡಿದ ರಜತ್‌ ಪಾಟಿದಾರ್‌!

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸಬೇಕೆಂದು ನಾಯಕ ರಜತ್‌ ಪಾಟಿದಾರ್‌ ಹೇಳಿದ್ದಾರೆ. ಮುಂದಿನ ವರ್ಷವೂ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಯಾವುದೇ ತಂಡದಿಂದ ಸಾಧ್ಯವಾಗದ ದಾಖಲೆಯನ್ನು ಬರೆಯಬೇಕೆಂದು ಅವರು ಹೇಳಿದ್ದಾರೆ.

ʻನಾವು 180 ರನ್‌ ಕಲೆ ಹಾಕಿದ್ರೆ ಕಥೆ ಬೇರೆ ಇರುತ್ತಿತ್ತುʼ: ಫೈನಲ್‌ ಸೋಲಿಗೆ ಕಾರಣ ತಿಳಿಸಿದ ಶುಭಮನ್‌ ಗಿಲ್‌!

ಆರ್‌ಸಿಬಿ ಎದುರು ಫೈನಲ್‌ ಸೋಲಿಗೆ ಕಾರಣ ತಿಳಿಸಿದ ಶುಭಮನ್‌ ಗಿಲ್‌!

Shubman Gill Statement: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ 5 ವಿಕೆಟ್‌ಗಳ ಸೋಲು ಅನುಭವಿಸುವ ಮೂಲಕ ಗುಜರಾತ್‌ ಟೈಟನ್ಸ್‌ ಎರಡನೇ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈ ಚೆಲ್ಲಿಕೊಂಡಿತು. ಪಂದ್ಯದ ಬಳಿಕ ಜಿಟಿ ನಾಯಕ ಶುಭಮನ್‌ ಗಿಲ್‌, ತಮ್ಮ ತಂಡದ ಸೋಲಿಗೆ ಬಲವಾದ ಕಾರಣ ಏನೆಂದು ಬಹಿರಂಗಪಡಿಸಿದ್ದಾರೆ.

ಫೈನಲ್‌ ಪಂದ್ಯದ ಸೋಲಿನ ಬೇಸರದಲ್ಲಿದ್ದರೂ ಆರ್‌ಸಿಬಿಗೆ ಅಭಿನಂದನೆ ಸಲ್ಲಿಸಿ ಫ್ಯಾನ್ಸ್‌ ಹೃದಯ ಗೆದ್ದ ಶುಭಮನ್‌ ಗಿಲ್‌!

ಆರ್‌ಸಿಬಿಗೆ ಅಭಿನಂದನೆ ಸಲ್ಲಿಸಿ ಫ್ಯಾನ್ಸ್‌ ಹೃದಯ ಗೆದ್ದ ಶುಭಮನ್‌ ಗಿಲ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಗುಜರಾತ್‌ ಟೈಟನ್ಸ್‌ ತಂಡದ ನಾಯಕ ಶುಭಮನ್‌ ಗಿಲ್‌ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಅಭಿನಂದನೆ ಸಲ್ಲಿಸಿ ಆರ್‌ಸಿಬಿ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ.

IPL 2026: ಆರ್‌ಸಿಬಿ ಎದುರು ಫೈನಲ್‌ಗೂ ಮೊದಲೇ ಸೋತಿದ್ದ ಗುಜರಾತ್ ಟೈಟನ್ಸ್!

ಆರ್‌ಸಿಬಿ ಎದುರು ಫೈನಲ್‌ಗೂ ಮೊದಲೇ ಸೋತಿದ್ದ ಗುಜರಾತ್ ಟೈಟನ್ಸ್!

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್‌ ಟೈಟನ್ಸ್‌ ಎದುರು 5 ವಿಕೆಟ್‌ಳಿಂದ ಗೆಲುವು ಪಡೆಯುವ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ, ಸತತ ಎರಡನೇ ಬಾರಿ ಐಪಿಎಲ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು. ಅಂದ ಹಾಗೆ ಈ ಪಂದ್ಯವನ್ನು ತವರು ಅಂಗಣದಲ್ಲಿ ಆಡಿದರೂ ಜಿಟಿ, ಆರ್‌ಸಿಬಿ ಎದುರು ಪರಾಭವಗೊಂಡಿತು. ಅಂದ ಹಾಗೆ ಫೈನಲ್‌ ಪಂದ್ಯಕ್ಕೂ ಜಿಟಿಗೆ ಆಗಿದ್ದ ಬಹುದೊಡ್ಡ ಹಿನ್ನಡೆಯನ್ನು ಇಲ್ಲಿ ವಿವರಿಸಲಾಗಿದೆ.

IPL 2026: 5 ಪ್ರಶಸ್ತಿಗಳಿಂದ 55 ಲಕ್ಷ ರು, ವೈಭವ್‌ ಸೂರ್ಯವಂಶಿ ಗಳಿಸಿದ್ದು ಒಟ್ಟು ಎಷ್ಟು ಕೋಟಿ ರು ಗೊತ್ತೆ?

15ನೇ ವಯಸ್ಸಿನಲ್ಲಿಯೇ ಎರಡೂವರೆ ಕೋಟಿ ರು ದುಡಿದ ವೈಭವ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ತಮ್ಮ ಸ್ಪೋಟಕ ಬ್ಯಾಟಿಂಗ್‌ ಮೂಲಕ ರಾಜಸ್ಥಾನ್‌ ರಾಯಲ್ಸ್‌ ತಂಡದ ಯುವ ಬ್ಯಾಟ್ಸ್‌ಮನ್‌ ವೈಭವ್‌ ಸೂರ್ಯವಂಶಿ ಬಹುತೇಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಐದು ಪ್ರಶಸ್ತಿಗಳ ಜೊತೆಗೆ ನಗದು ಬಹುಮಾನ 55 ಲಕ್ಷ ರುಗಳನ್ನು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅವರು ಈ ಟೂರ್ನಿಯಲ್ಲಿ ಒಟ್ಟು ಎಷ್ಟು ಹಣವನ್ನು ಗಳಿಸಿದ್ದಾರೆಂದು ಇಲ್ಲಿ ವಿವರಸಲಾಗಿದೆ.

RCB vs GT ಫೈನಲ್‌ಗೂ ಮುನ್ನ ಆಟಗಾರರಿಗೆ ನೀಡಿದ್ದ ಸಂದೇಶವನ್ನು ರಿವೀಲ್‌ ಮಾಡಿದ ವಿರಾಟ್‌ ಕೊಹ್ಲಿ!

IPL 2026: ಆರ್‌ಸಿಬಿ ಆಟಗಾರರಿಗೆ ನೀಡಿದ್ದ ಸಂದೇಶ ರಿವೀಲ್‌ ಮಾಡಿದ ಕೊಹ್ಲಿ!

ಗುಜರಾತ್‌ ಟೈಟನ್ಸ್‌ ವಿರುದ್ಧ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ ಪಂದ್ಯಕ್ಕೂ ಮುನ್ನ ಆರ್‌ಸಿಬಿ ಆಟಗಾರರಿಗೆ ನೀಡಿದ್ದ ಸಂದೇಶವನ್ನು ವಿರಾಟ್‌ ಕೊಹ್ಲಿ ಚಾಂಪಿಯನ್ಸ್‌ ಆದ ಬಳಿಕ ರಿವೀಲ್‌ ಮಾಡಿದ್ದಾರೆ. ಈ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಗೆಲುವು ಪಡೆದ ಬಳಿಕ ಆರ್‌ಸಿಬಿ ಸತತ ಎರಡನೇ ಬಾರಿ ಐಪಿಎಲ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

IPL 2026 Award winners: ವೈಭವ್‌ ಸೂರ್ಯವಂಶಿಗೆ ಅಗ್ರ ಸ್ಥಾನ, ಪ್ರಶಸ್ತಿ ವಿಜೇತರ ಸಂಪೂರ್ಣ ವಿವರ!

ವೈಭವ್‌ಗೆ ಅಗ್ರ ಸ್ಥಾನ, 2026ರ ಐಪಿಎಲ್‌ ಟೂರ್ನಿಯ ಪ್ರಶಸ್ತಿ ವಿಜೇತರ ವಿವರ!

IPL 2026 award winners: 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಚಾಂಪಿಯನ್‌ ಆಗಿದೆ. ಫೈನಲ್‌ನಲ್ಲಿ ಗುಜರಾತ್‌ ಟೈಟನ್ಸ್‌ ತಂಡವನ್ನು ಮಣಿಸಿದ ಬಳಿಕ ಆರ್‌ಸಿಬಿ ಸತತ ಎರಡನೇ ಬಾರಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ಈ ಟೂರ್ನಿಯಲ್ಲಿನ ಪ್ರಶಸ್ತಿ ವಿಜೇತರ ಬಗ್ಗೆ ಇಲ್ಲಿ ವಿವರಿಸಲಾಗಿದೆ.

IPL 2026 Final: ಆರ್‌ಸಿಬಿಗೆ ಸತತ 2ನೇ ಟ್ರೋಫಿ ಗೆದ್ದುಕೊಟ್ಟು ಹಲವು ದಾಖಲೆಗಳನ್ನು ಮುರಿದ ರಜತ್‌ ಪಾಟಿದಾರ್‌!

ಸತತ 2ನೇ ಐಪಿಎಲ್‌ ಗೆದ್ದು ಹಲವು ದಾಖಲೆ ಬರೆದ ರಜತ್‌ ಪಾಟಿದಾರ್‌!

RCB vs GT: ನಾಯಕನಾಗಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್‌ ಟ್ರೋಫಿ ಗೆದ್ದುಕೊಡುವ ಮೂಲಕ ರಜತ ಪಾಟಿದಾರ್‌ ಹಲವು ದಾಖಲೆಗಳನ್ನು ಬರೆದಿದ್ದಾರೆ. ನಾಯಕನಾಗಿ ಆರಂಭಿಕ ಎರಡು ಟೂರ್ನಿಗಳಲ್ಲಿ ಐಪಿಎಲ್‌ ಗೆದ್ದ ಮೊದಲ ನಾಯಕ ಎಂಬ ಕೀರ್ತಿಗೆ ರಜತ್‌ ಭಾಜನರಾಗಿದ್ದಾರೆ.

RCB vs GT: ʻಈ ಸಲಾನು ಕಪ್‌ ನಮ್ದೇʼ-ಗುಜರಾತ್‌ ವಿರುದ್ಧ ಗೆದ್ದ ಆರ್‌ಸಿಬಿಗೆ ಸತತ ಎರಡನೇ ಐಪಿಎಲ್‌ ಗರಿ!

ಗುಜರಾತ್‌ ಎದುರು ಗೆದ್ದ ಆರ್‌ಸಿಬಿಗೆ ಸತತ ಎರಡನೇ ಐಪಿಎಲ್‌ ಗರಿ!

RCB vs GT IPL 2026 Final Highlights: ಬೌಲರ್‌ಗಳ ಶಿಸ್ತುಬದ್ದ ಬೌಲಿಂಗ್‌ ದಾಳಿ ಹಾಗೂ ವಿರಾಟ್‌ ಕೊಹ್ಲಿಯ ಹೋರಾಟದ ಅರ್ಧಶತಕದ ಬಲದಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ, 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ಎದುರು 5 ವಿಕೆಟ್‌ಗಳ ಗೆಲುವು ಸಾಧಿಸಿತು. ಆ ಮೂಲಕ ರಜತ್‌ ಪಾಟಿದಾರ್‌ ನಾಯಕತ್ವದ ಆರ್‌ಸಿಬಿ ಎರಡನೇ ಐಪಿಎಲ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

IPL 2026: ಪವರ್‌ಪ್ಲೇನಲ್ಲಿ 35 ವಿಕೆಟ್‌ ಕಿತ್ತು ಮುಂಬೈ ಇಂಡಿಯನ್ಸ್‌ ದಾಖಲೆ ಮುರಿದ ಆರ್‌ಸಿಬಿ!

IPL 2026: ಮುಂಬೈ ಇಂಡಿಯನ್ಸ್‌ ದಾಖಲೆಯನ್ನು ಮುರಿದ ಆರ್‌ಸಿಬಿ!

ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ವಿಶೇಷ ದಾಖಲೆಯನ್ನು ಬರೆದಿದೆ. ಏಕೈಕ ಐಪಿಎಲ್‌ ಸೀಸನ್‌ನ ಪವರ್‌ಪ್ಲೇನಲ್ಲಿ 35 ವಿಕೆಟ್‌ ಕಿತ್ತ ಮೊದಲ ತಂಡ ಎಂಬ ದಾಖಲೆಯನ್ನುಆರ್‌ಸಿಬಿ ಬರೆದಿದೆ. ಆ ಮೂಲಕ 33 ವಿಕೆಟ್‌ ಕಿತ್ತಿದ್ದ ಮುಂಬೈ ಇಂಡಿಯನ್ಸ್‌ ದಾಖಲೆಯನ್ನು ಆರ್‌ಸಿಬಿ ಮುರದಿದೆ.

RCB vs GT ಫೈನಲ್‌ನಲ್ಲಿ ಆಶಿಶ್ ನೆಹ್ರಾರ 'ರಕ್ಷಣಾತ್ಮಕ' ತಂತ್ರದ ವಿರುದ್ಧ ಎಬಿ ಡಿವಿಲಿಯರ್ಸ್ ಆಕ್ರೋಶ!

RCB vs GT ಫೈನಲ್‌ ವೇಳೆ ಆಶಿಶ್‌ ನೆಹ್ರಾ ವಿರುದ್ಧ ಎಬಿಡಿ ಆಕ್ರೋಶ!

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ತಂಡದ ಹೆಡ್‌ ಕೋಚ್‌ ಆಶಿಶ್‌ ನೆಹ್ರಾ ಅವರ ರಕ್ಷಣಾತ್ಮಕ ರಣತಂತ್ರವನ್ನು ದಕ್ಷಿಣ ಆಫ್ರಿಕಾ ದಿಗ್ಗಜ ಎಬಿ ಡಿ ವಿಲಿಯರ್ಸ್‌ ಟೀಕಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡುವಂತಾದ ಜಿಟಿ, ತನ್ನ ಪಾಲಿನ 20 ಓವರ್‌ಗಳಿಗೆ 155 ರನ್‌ಗಳಿಗೆ ಸೀಮಿತವಾಯಿತು.

IPL 2026: 15ನೇ ವಯಸ್ಸಿನಲ್ಲೇ ಆರೆಂಜ್‌ ಕ್ಯಾಪ್‌ ಗೆದ್ದು ಇತಿಹಾಸ ಸೃಷ್ಟಿಸಿದ ವೈಭವ್‌ ಸೂರ್ಯವಂಶಿ!

IPL 2026: ಆರೆಂಜ್‌ ಕ್ಯಾಪ್‌ ಗೆದ್ದು ಇತಿಹಾಸ ಬರೆದ ವೈಭವ್‌ ಸೂರ್ಯವಂಶಿ!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ 15ನೇ ವಯಸ್ಸಿನ ರಾಜಸ್ಥಾನ್‌ ರಾಯಲ್ಸ್‌ ಆರಂಭಿಕ ವೈಭವ್‌ ಸೂರ್ಯವಂಶಿ ಆರೆಂಜ್‌ ಕ್ಯಾಪ್‌ ಮುಡಿಗೇರಿಸಿಕೊಂಡಿದ್ದಾರೆ. ಆ ಮೂಲಕ ಐಪಿಎಲ್‌ ಇತಿಹಾಸದಲ್ಲಿ ಆರೆಂಜ್‌ ಕ್ಯಾಪ್‌ ಗೆದ್ದ ಅತ್ಯಂತ ಕಿರಿಯ ಆಟಗಾರ ಎಂಬ ದೊಡ್ಡ ದಾಖಲೆಯನ್ನು ವೈಭವ್‌ ಸೂರ್ಯವಂಶಿ ಬರೆದಿದ್ದಾರೆ. ಅವರು 19ನೇ ಆವೃತ್ತಿಯಲ್ಲಿ 776 ರನ್‌ಗಳನ್ನು ಬಾರಿಸಿದ್ದಾರೆ.

INDW vs ENGW: ಶ್ರೀ ಚರಣಿ ಸ್ಪಿನ್‌ ಮೋಡಿ ವ್ಯರ್ಥ, ಭಾರತಕ್ಕೆ ತಿರುಗೇಟು ನೀಡಿದ ಇಂಗ್ಲೆಂಡ್‌ ವನಿತೆಯರು!

ಇಂಗ್ಲೆಂಡ್‌ ಎದುರು ಎರಡನೇ ಪಂದ್ಯದಲ್ಲಿ ಸೋತ ಭಾರತ ವನಿತೆಯರು!

INDW vs ENGW 2nd T20I Highlights: ಶೀ ಚರಣಿ ಸ್ಪಿನ್‌ ಮೋಡಿಯ ಹೊರತಾಗಿಯೂ ಭಾರತ ಮಹಿಳಾ ತಂಡ, ಎರಡನೇ ಟಿ20ಐ ಪಂದ್ಯದಲ್ಲಿ ಇಂಗ್ಲೆಂಡ್‌ನ ಫ್ರೆಯಾ ಕೆಂಪ್‌ ಅವರ ಆಲ್‌ರೌಂಡರ್‌ ಆಟದ ಎದುರು ಸೋಲು ಅನುಭವಿಸಿತು. ಇದೀಗ ಎರಡು ಪಂದ್ಯಗಳ ಅಂತ್ಯಕ್ಕೆ ಉಭಯ ತಂಡಗಳು 1-1 ಸಮಬಲ ಸಾಧಿಸಿದ್ದು, ಮೂರನೇ ಹಾಗೂ ಕೊನೆಯ ಪಂದ್ಯವನ್ನು ಗೆದ್ದ ತಂಡ ಸರಣಿಯನ್ನು ಮುಡಿಗೇರಿಸಿಕೊಳ್ಳಲಿದೆ.

RCB vs GT, IPL 2026 Final: ಟಾಸ್‌ ಗೆದ್ದು ಬೌಲಿಂಗ್‌ ಆರಿಸಿಕೊಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು!

RCB vs GT: ಟಾಸ್‌ ಗೆದ್ದು ಬೌಲಿಂಗ್‌ ಆರಿಸಿಕೊಂಡ ಆರ್‌ಸಿಬಿ!

RCB vs GT, IPL 2026 Final Toss: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಗುಜರಾತ್‌ ಟೈಟನ್ಸ್‌ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ನಾಯಕ ರಜತ್‌ ಪಾಟಿದಾರ್‌ ಬೌಲಿಂಗ್‌ ಆಯ್ದುಕೊಂಡಿದ್ದಾರೆ.

Loading...