ಕ್ರಿಕೆಟ್ ದೇವರು ಹಾಗೂ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್, ರೋಹಿತ್ ಶರ್ಮಾ, ಇರ್ಫಾನ್ ಪಠಾಣ್, ಗೌತಮ್ ಗಂಭೀರ್ ಮತ್ತು ವೀರೇಂದ್ರ ಸೆಹ್ವಾಗ್ ಸೇರಿದಂತೆ ಹಲವು ಹಾಲಿ ಹಾಗೂ ಮಾಜಿ ಕ್ರಿಕೆಟ್ ಸ್ಟಾರ್ಗಳು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು ಹಾಗೂ ತಮ್ಮ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ವಿಶೇಷ ಸಂದೇಶಗಳನ್ನು ಬರೆದು ತಮ್ಮ ಅಭಿಮಾನಿಗಳಿಗೆ ಶುಭ ಹಾರೈಸಿದ್ದಾರೆ.
ಭಾರತ ತನ್ನ 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಿಂದ ದೇಶವನ್ನು ಉದ್ದೇಶಿಸಿ ಮಾತನಾಡಿದರು. ಈ ವಿಶೇಷ ಸಂದರ್ಭದಲ್ಲಿ, ಭಾರತೀಯ ಕ್ರಿಕೆಟಿಗರು ಚಿತ್ರಗಳನ್ನು ಹಂಚಿಕೊಂಡು ಸ್ವಾತಂತ್ರ್ಯ ದಿನದಂದು ತಮ್ಮ ಅಭಿಮಾನಿಗಳಿಗೆ ಶುಭಾಶಯ ಕೋರಿದರು. ಭಾರತೀಯ ಕ್ರಿಕೆಟ್ ತಂಡದ ಹೆಡ್ಕೋಚ್ ಗೌತಮ್ ಗಂಭೀರ್ ಮತ್ತು ಅನುಭವಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ದೇಶಿ ಪ್ರಜೆಗಳಿಗೆ ಶುಭಾಶಯ ಕೋರಿದ್ದಾರೆ.