ದಕ್ಷಿಣ ವಲಯ ತಂಡದಲ್ಲಿ ಸ್ಥಾನ ಸಿಗದ್ದಕ್ಕೆ ಕರುಣ್ ನಾಯರ್ ಪ್ರತಿಕ್ರಿಯೆ!
ಸತತ ಎರಡನೇ ಬಾರಿ ದುಲೀಪ್ ಟ್ರೋಫಿ ತಂಡದಿಂದ ಕೈಬಿಟ್ಟಿರುವುದಕ್ಕೆ ಕರುಣ್ ನಾಯರ್ ತಮ್ಮ ಬ್ಯಾಟ್ ಮೂಲಕ ಉತ್ತರ ನೀಡಿದ್ದಾರೆ. ಈ ಅನುಭವಿ ಬ್ಯಾಟರ್ ಶತಕ ಸಿಡಿಸುವುದರ ಜೊತೆಗೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತಮ್ಮ ಅಸಮಾಧಾನವನ್ನೂ ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ. ಪೂರ್ವ ವಲಯ ಎದುರಿನ ದಕ್ಷಿಣ ವಲಯ ತಂಡದಲ್ಲಿ ಸ್ಥಾನ ಕಳೆದುಕೊಂಡ ಕರುಣ್, ಕೆಎಸ್ಸಿಎ ಕಾರ್ಯದರ್ಶಿ ಇಲೆವೆನ್ ಪರ ಶತಕ ಬಾರಿಸಿದ್ದಾರೆ.