ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Ramesh Kote

[email protected]

Articles
DC vs PBKS: ಪಂಜಾಬ್‌ ಕಿಂಗ್ಸ್‌ಗೆ ಸತತ ನಾಲ್ಕನೇ ಸೋಲು, ಜಯದೊಂದಿಗೆ ಡೆಲ್ಲಿ ಪ್ಲೇಆಫ್ಸ್‌ ಆಸೆ ಜೀವಂತ!

IPL 2026: ಪಂಜಾಬ್‌ ಎದುರು ಗೆದ್ದ ಡೆಲ್ಲಿ ಪ್ಲೇಆಫ್ಸ್‌ ಆಸೆ ಜೀವಂತ!

DC vs PBKS Match Highlights: ಡೇವಿಡ್‌ ಮಿಲ್ಲರ್‌ ಹಾಗೂ ಅಕ್ಷರ್‌ ಪಟೇಲ್‌ ಅವರ ನಿರ್ಣಾಯಕ ಅರ್ಧಶತಕಗಳ ಬಲದಿಂದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ, ಎದುರಾಳಿ ಪಂಜಾಬ್‌ ಕಿಂಗ್ಸ್‌ ಎದುರು 3 ವಿಕೆಟ್‌ಗಳ ಗೆಲುವು ಪಡೆಯಿತು. ಆ ಮೂಲಕ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪ್ಲೇಆಫ್ಸ್‌ ಆಸೆಯನ್ನು ಜೀವಂತವಾಗಿಸಿಕೊಂಡಿದೆ. ಇನ್ನು ಪಂಜಾಬ್‌ ತಂಡದ ಸೋಲಿನ ಸರಪಳಿ ಮುಂದುವರಿದಿದೆ.

DC vs PBKS: ಪಂದ್ಯದ ಮೊದಲ ಎಸೆತದಲ್ಲಿಯೇ ಸಿಕ್ಸರ್‌ ಬಾರಿಸಿ ವಿಶಷ ದಾಖಲೆ ಬರೆದ ಪ್ರಿಯಾಂಶ್‌ ಆರ್ಯ!

ಮೊದಲ ಎಸೆತದಲ್ಲಿಯೇ ಸಿಕ್ಸರ್‌ ಬಾರಿಸಿ ದಾಖಲೆ ಬರೆದ ಪ್ರಿಯಾಂಶ್‌ ಆರ್ಯ!

ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದ ಮೊದಲ ಎಸೆತದಲ್ಲಿಯೇ ಪ್ರಿಯಾಂಶ್‌ ಆರ್ಯ ಸಿಕ್ಸರ್‌ ಬಾರಿಸುವ ಮೂಲಕ ದೊಡ್ಡ ದಾಖಲೆಯನ್ನು ಬರೆದಿದ್ದಾರೆ. ಐಪಿಎಲ್‌ ಟೂರ್ನಿಯಲ್ಲಿ ವಿವಿಧ ಪಂದ್ಯಗಳ ಮೊಟ್ಟ ಎಸೆತದಲ್ಲಿಯೇ ಸಿಕ್ಸರ್‌ ಬಾರಿಸಿದ ಮೊದಲ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

ICC ODI Ranking: ವಾರ್ಷಿಕ ನವೀಕರಣದ ಬಳಿಕ ಅಗ್ರ ಸ್ಥಾನವನ್ನು ಉಳಿಸಿಕೊಂಡ ಭಾರತ ತಂಡ!

ICC ODI Ranking: ಅಗ್ರ ಸ್ಥಾನವನ್ನು ಉಳಿಸಿಕೊಂಡ ಭಾರತ!

ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯು ವಾರ್ಷಿಕ ಒಡಿಐ ತಂಡಗಳ ಶ್ರೇಯಾಂಕವನ್ನು ನವೀಕರಣಗೊಳಿಸಿದ ಬಳಿಕವೂ ಶುಭಮನ್‌ ಗಿಲ್‌ ನಾಯಕತ್ವದ ಭಾರತ ತಂಡ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದೆ. ಭಾರತ ತಂಡ 118 ಅಂಕಗಳನ್ನು ಹೊಂದಿದ್ದರೆ, ಐದು ಅಂಕಗಳನ್ನು ಕಡಿಮೆ ಹೊಂದಿರುವ ನ್ಯೂಜಿಲೆಂಡ್‌ ತಂಡ ಎರಡನೇ ಸ್ಥಾನದಲ್ಲಿದೆ.

ʻವಿರಾಟ್‌ ಕೊಹ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರೆ ದುಡ್ಡು ಕೊಡ್ತಿವಿʼ: ಶಾಕಿಂಗ್‌ ಹೇಳಿಕೆ ಕೊಟ್ಟ ಜರ್ಮನ್‌ ಮಾಡೆಲ್‌!

ʻಕೊಹ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡುವಂತೆ ಆಮಿಷʼ: ಜರ್ಮನ್‌ ಮಾಡೆಲ್‌!

ಜರ್ಮನ್‌ ಮಾಡೆಲ್‌ ಲಿಝ್‌ಲ್ಯಾಝ್‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮಾಜಿ ನಾಯಕ ಹಾಗೂ ಆಧುನಿಕ ಕ್ರಿಕೆಟ್‌ ದಿಗ್ಗಜ ವಿರಾಟ್‌ ಕೊಹ್ಲಿ ವಿರುದ್ಧ ರೂಪಿಸಿದ್ದ ಷಡ್ಯಂತ್ರವೊಂದನ್ನು ರಿವೀಲ್‌ ಮಾಡಿದ್ದಾರೆ. ಕೊಹ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರೆ ನಿಮಗೆ ಹಣ ನೀಡುತ್ತೇವೆಂದು ಆಮಿಷ ಬಂದಿದ್ದ ಸಂಗತಿಯನ್ನು ಬೆಳಕಿಗೆ ತಂದಿದ್ದಾರೆ.

ʻಕೃಣಾಲ್‌ ಪಾಂಡ್ಯ ಸಾಯಲಿ ಬಿಡಿʼ ಎಂದಿದ್ದ ಎಸ್‌ ಬದ್ರಿನಾಥ್‌ ಕಾಮೆಂಟರಿ ಪ್ಯಾನೆಲ್‌ನಿಂದ ವಜಾ?

ಸ್ಟಾರ್‌ ಸ್ಪೋರ್ಟ್ಸ್‌ ಕಾಮೆಂಟರಿ ಪ್ಯಾನಲ್‌ನಿಂದ ಬದ್ರಿನಾಥ್‌ ವಜಾ?

ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಸಾಲಿನ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್‌ ನಡುವಿನ ಪಂದ್ಯದಲ್ಲಿ ಕಾಮೆಂಟರಿ ವೇಳೆ ಮಾಡುವ ವೇಳೆ ಚೆನ್ನೈ ಸೂಪರ್‌ ಕಿಂಗ್ಸ್‌ ಮಾಜಿ ಬ್ಯಾಟ್ಸ್‌ಮನ್‌ ಎಸ್‌ ಬದ್ರಿನಾಥ್‌ ಅವರು ನೀಡಿದ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಾಗಾಗಿ ಅವರನ್ನು ಸ್ಟಾರ್‌ ಸ್ಪೋರ್ಟ್ಸ್‌ ಕಾಮೆಂಟರಿ ಪ್ಯಾನಲ್‌ನಿಂದ ವಜಾಗೊಳಿಸುವ ಸಾಧ್ಯತೆ ಇದೆ.

RCB vs MI ಪಂದ್ಯದ ವೇಳೆ ಮಧ್ಯದ ಬೆರಳು ತೋರಿಸಿದ ಟಿಮ್‌ ಡೇವಿಡ್‌ ಬಿತ್ತು ಭಾರಿ ದಂಡ!

RCB vs MI ಪಂದ್ಯದಲ್ಲಿ ಮಧ್ಯದ ಬೆರಳು ತೋರಿಸಿದ ಟಿಮ್‌ ಡೇವಿಡ್‌ಗೆ ದಂಡ!

IPL 2026: ಮುಂಬೈ ಇಂಡಿಯನ್ಸ್‌ ವಿರುದ್ಧದ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ಮಧ್ಯದ ಬೆರಳು ತೋರಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಟಿಮ್‌ ಡೇವಿಡ್‌ಗೆ ಭಾರಿ ದಂಡವನ್ನು ವಿಧಿಸಲಾಗಿದೆ. ಅವರಿಗೆ ಪಂದ್ಯದ ಸಂಭಾವನೆಯಲ್ಲಿ ಶೇಕಡಾ 30 ರಷ್ಟು ದಂಡವನ್ನು ವಿಧಿಸಲಾಗಿದೆ.

Bhuvneshwar Kumar: ಆರ್‌ಸಿಬಿ ವೇಗಿಗೆ ಭಾರತ ತಂಡದಲ್ಲಿ ಸ್ಥಾನ ನೀಡಬೇಕೆಂದ ಆರ್‌ ಅಶ್ವಿನ್‌!

ಭಾರತ ತಂಡದಲ್ಲಿ ಭುವನೇಶ್ವರ್‌ ಕುಮಾರ್‌ಗೆ ಸ್ಥಾನ ನೀಡಬೇಕೆಂದ ಅಶ್ವಿನ್!

IPL 2026: ಮುಂಬೈ ಇಂಡಿಯನ್ಸ್‌ ವಿರುದ್ಧ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ಭುವನೇಶ್ವರ್‌ ಕುಮಾರ್‌ ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ಎರಡೂ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನವನ್ನು ತೋರಿದರು. ಬೌಲಿಂಗ್‌ನಲ್ಲಿ 4 ವಿಕೆಟ್‌ ಹಾಗೂ ಬ್ಯಾಟಿಂಗ್‌ನಲ್ಲಿ ಒಂದು ಸಿರ್ಣಾಯಕ ಸಿಕ್ಸರ್‌ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಸ್ಪಿನ್‌ ದಿಗ್ಗಜ ರವಿಚಂದ್ರನ್‌ ಅಶ್ವಿನ್‌ ಅವರು, ಭುವನೇಶ್ವರ್‌ ಕುಮಾರ್‌ಗೆ ಭಾರತ ತಂಡದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ.

RCB vs MI: ʻ4 ವಿಕೆಟ್‌ ಪಡೆದಿದ್ದು ವಿಶೇಷ ಎನ್ನಿಸಲಿಲ್ಲ, ಸಿಕ್ಸರ್‌ ಅನ್ನು ಆನಂದಿಸಿದ್ದೇನೆʼ-ಭುವನೇಶ್ವರ್‌ ಕುಮಾರ್‌

ಆರ್‌ಸಿಬಿ ತಂಡವನ್ನು ಗೆಲ್ಲಿಸಿದ ಬಳಿಕ ಭುವನೇಶ್ವರ್‌ ಕುಮಾರ್‌ ಹೇಳಿದ್ದೇನು?

Bhuvneshwar Kumar: 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಎರಡು ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ 4 ವಿಕೆಟ್‌ ಹಾಗೂ ಎರಡು ಎಸೆತಗಳಲ್ಲಿ 7 ರನ್‌ ಗಳಿಸಿ ಆರ್‌ಸಿಬಿಯನ್ನು ಗೆಲ್ಲಿಸಿದರು. ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಈ ಗಾಯದ ಗುರುತು ಹೋರಾಟಕ್ಕೆ ಸಾಕ್ಷಿ: ಕೃಣಾಲ್‌ ಪಾಂಡ್ಯ ಇನ್‌ಸ್ಟಾಗ್ರಾಮ್‌ ಸ್ಟೋರಿ!

ಗಾಯದ ಗುರುತನ್ನು ಅಭಿಮಾನಿಗಳಿಗೆ ತೋರಿಸಿದ ಕೃಣಾಲ್‌ ಪಾಂಡ್ಯ!

ಮುಂಬೈ ಇಂಡಿಯನ್ಸ್‌ ವಿರುದ್ದದ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದ ಚೇಸಿಂಗ್‌ ವೇಳೆ ಸಂಭವಿಸಿದ್ದ ಗಾಯದ ಗುರುತನ್ನು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಆಲ್‌ರೌಂಡರ್‌ ಕೃಣಾಲ್‌ ಪಾಂಡ್ಯ ಪ್ರದರ್ಶಿಸಿದ್ದಾರೆ. ಅವರು ಆರ್‌ಸಿಬಿಯ ಚೇಸಿಂಗ್‌ನಲ್ಲಿ 73 ರನ್‌ಗಳ ಹೋರಾಟದ ಇನಿಂಗ್ಸ್‌ ಆಡಿದ್ದರು. ಆ ಮೂಲಕ ಆರ್‌ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು.

RCB vs MI: ಮುಂಬೈ ಎದುರು ಕೊನೆಯ ಓವರ್‌ ಥ್ರಿಲ್ಲರ್‌ ಗೆದ್ದ ಆರ್‌ಸಿಬಿಗೆ ಅಗ್ರ ಸ್ಥಾನ!

ಮುಂಬೈ ಎದುರು ಕೊನೆಯ ಓವರ್‌ ಥ್ರಿಲ್ಲರ್‌ ಗೆದ್ದ ಆರ್‌ಸಿಬಿ!

RCB vs MI Match Highlights: ಕೃಣಾಲ್‌ ಪಾಂಡ್ಯ ಹಾಗೂ ಭುವನೇಶ್ವರ್‌ ಕುಮಾರ್‌ ಅವರ ನಿರ್ಣಾಯಕ ಪ್ರದರ್ಶನದ ಬಲದಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ, ಮುಂಬೈ ಇಂಡಿಯನ್ಸ್‌ ಎದುರು ಕೊನೆಯ ಓವರ್‌ನಲ್ಲಿ ರೋಚಕ ಗೆಲುವು ಸಾಧಿಸಿತು. ಆ ಮೂಲಕ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಆರ್‌ಸಿಬಿ ಅಗ್ರ ಸ್ಥಾನಕ್ಕೇರಿತು. ಆದರೆ, ಸೋತ ಮುಂಬೈ ಪ್ಲೇಆಫ್‌ ರೇಸ್‌ನಿಂದ ಅಧಿಕೃತವಾಗಿ ಎಲಿಮಿನೇಟ್‌ ಆಯಿತು.

CSK vs LSG: ಚೆನ್ನೈ ಎದುರು ಲಖನೌ ಸೋಲಿಗೆ ಈ ಇಬ್ಬರೇ ಕಾರಣ ಎಂದ ರಿಷಭ್‌ ಪಂತ್!

ಸಿಎಸ್‌ಕೆ ಎದುರು ಲಖನೌ ಸೋಲಿಗೆ ಈ ಇಬ್ಬರೇ ಕಾರಣ: ರಿಷಭ್‌ ಪಂತ್‌!

IPL 2026: 200ಕ್ಕೂ ಅಧಿಕರ ರನ್‌ಗಳ ಗುರಿಯನ್ನು ನೀಡಿದ ಹೊರತಾಗಿಯೂ ಚೆನ್ನೈ ಸೂಪರ್‌ ಕಿಂಗ್ಸ್‌ ಎದುರು ಲಖನೌ ಸೂಪರ್‌ ಜಯಂಟ್ಸ್‌ ತಂಡ 5 ವಿಕೆಟ್‌ಗಳಿಂದ ಸೋಲು ಅನುಭವಿಸಿತು. ಅದರಲ್ಲಿಯೂ ವಿಶೇಷವಾಗಿ ಆವೇಶ್‌ ಖಾನ್‌ ಓವರ್‌ನಲ್ಲಿ ಎರಡು ಕ್ಯಾಚ್‌ ಕೈಚೆಲ್ಲಿದ್ದು ಎಲ್‌ಎಸ್‌ಜಿಗೆ ಭಾರಿ ಹಿನ್ನಡೆಯನ್ನು ತಂದೊಡ್ಡಿತು. ಪಂದ್ಯದ ಬಳಿಕ ನಾಯಕ ರಿಷಭ್‌ ಪಂತ್‌ ಬೇಸರ ವ್ಯಕ್ತಪಡಿಸಿದರು.

CSK vs LSG: ಲಖನೌ ವಿಶ್ವಾಸವನ್ನು ಕುಗ್ಗಿಸಿದ ಚೆನ್ನೈ, ಹ್ಯಾಟ್ರಿಕ್‌ ಜಯದೊಂದಿಗೆ ಐದನೇ ಸ್ಥಾನಕ್ಕೆ ಸೂಪರ್‌ ಕಿಂಗ್ಸ್‌!

ಹ್ಯಾಟ್ರಿಕ್‌ ಗೆಲುವು ಸಾಧಿಸಿ ಐದನೇ ಸ್ಥಾನಕ್ಕೆ ಲಗ್ಗೆಯಿಟ್ಟ ಸಿಎಸ್‌ಕೆ!

CSK vs LSG Match Highlights: ಊರ್ವಿಲ್‌ ಪಟೇಲ್‌ ದಾಖಲೆಯ ಅರ್ಧಶತಕ ಹಾಗೂ ಜೇಮಿ ಓವರ್ಟನ್‌ ಮಾರಕ ಬೌಲಿಂಗ್‌ ಸಹಾಯದಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ, ಎದುರಾಳಿ ಲಖನೌ ಸೂಪರ್‌ ಜಯಂಟ್ಸ್‌ ಎದುರು 5ವಿಕೆಟ್‌ ಗೆಲುವು ಸಾಧಿಸಿತು. ಆ ಮೂಲಕ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಹ್ಯಾಟ್ರಿಕ್‌ ಗೆಲುವು ಪಡೆದು ಪಾಯಿಂಟ್ಸ್‌ ಟೇಬಲ್‌ನಲ್ಲಿ ಐದನೇ ಸ್ಥಾನಕ್ಕೆ ಲಗ್ಗೆ ಇಟ್ಟಿತು. ಇನ್ನು ಸೋತ ಎಲ್‌ಎಸ್‌ಜಿ ಬಹುತೇಕ ಪ್ಲೇಆಫ್ಸ್‌ ರೇಸ್‌ನಿಂದ ಹೊರಬಿದ್ದಿದೆ.

CSK vs LSG: ಐಪಿಎಲ್‌ನ ಜಂಟಿ ವೇಗದ ಅರ್ಧಶತಕ ಬಾರಿಸಿ ವಿಭಿನ್ನವಾಗಿ ಸಂಭ್ರಮಿಸಿದ ಊರ್ವಿಲ್‌ ಪಟೇಲ್!

ಐಪಿಎಲ್‌ ಜಂಟಿ ವೇಗದ ಅರ್ಧಶತಕ ಸಿಡಿಸಿದ ಊರ್ವಿಲ್‌ ಪಟೇಲ್‌!

Urvil Patel Joint Fastest Fifty: ಲಖನೌ ಸೂಪರ್‌ ಜಯಂಟ್ಸ್‌ ವಿರುದ್ಧದ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಊರ್ವಿಲ್‌ ಪಟೇಲ್‌ ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದರು. ಅವರು ಐಪಿಎಲ್‌ ಇತಿಹಾಸದ ಅತ್ಯಂತ ವೇಗದ ಅರ್ಧಶತಕವನ್ನು ಬಾರಿಸಿ ಯಶಸ್ವಿ ಜೈಸ್ವಾಲ್‌ ದಾಖಲೆಯನ್ನು ಸರಿದೂಗಿಸಿದ್ದಾರೆ.

RCB vs MI: ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು!

IPL 2026: ಮುಂಬೈ ಎದುರು ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಆರ್‌ಸಿಬಿ!

RCB vs MI Match Toss: ರಾಯ್ಪುರದ ಸಹೀದ್‌ ವೀರ್‌ ನಾರಾಯಣ್‌ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 54ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

CSK vs LSG: ಲಖನೌ ಪರ ಅತ್ಯಂತ ವೇಗದ ಐಪಿಎಲ್‌ ಅರ್ಧಶತಕ ಬಾರಿಸಿದ ಜಾಶ್‌ ಇಂಗ್ಲಿಸ್‌!

ಲಖನೌ ಪರ ಅತ್ಯಂತ ವೇಗದ ಅರ್ಧಶತಕ ಬಾರಿಸಿದ ಜಾಶ್‌ ಇಂಗ್ಲಿಸ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಲಖನೌ ಸೂಪರ್ ಜಯಂಟ್ಸ್‌ ತಂಡದ ಜಾಶ್‌ ಇಂಗ್ಲಿಸ್ ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ್ದರು. ಅವರು ಕೇವಲ 33 ಎಸೆತಗಳಲ್ಲಿ 85 ರನ್ ಗಳಿಸಿದರು. ಆ ಮೂಲಕ ಲಖನೌ ಪರ ವೇಗದ ಅರ್ಧಶತಕ ಬಾರಿಸಿದ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

GT vs RR: ಯಶಸ್ವಿ ಜೈಸ್ವಾಲ್‌ ನಾಯಕತ್ವವನ್ನು ಟೀಕಿಸಿದ ಇರ್ಫಾನ್‌ ಪಠಾಣ್‌!

ಯಶಸ್ವಿ ಜೈಸ್ವಾಲ್‌ ನಾಯಕತ್ವವನ್ನು ಟೀಕಿಸಿದ ಇರ್ಫಾನ್‌ ಪಠಾಣ್‌!

IPL 2026: ಜೈಪುರದಲ್ಲಿ ನಡೆದಿದ್ದ ಗುಜರಾತ್ ಟೈಟನ್ಸ್ ವಿರುದ್ಧದ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಸೋಲು ಅನುಭವಿಸಿತು. ಈ ಪಂದ್ಯದ ಬಳಿಕ ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್‌ ಪಠಾಣ್‌, ಯಶಸ್ವಿ ಜೈಸ್ವಾಲ್‌ ಅವರ ನಾಯಕತ್ವವನ್ನು ಟೀಕಿಸಿದ್ದಾರೆ. ರಿಯಾನ್‌ ಪರಾಗ್‌ ಗಾಯದ ಕಾರಣ ಜೈಸ್ವಾಲ್‌ ತಂಡವನ್ನು ಮುನ್ನಡೆಸಿದ್ದಾರೆ.

ರಾಜಸ್ಥಾನದಿಂದ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಬಂದಿದ್ದು ನಾಯಕತ್ವಕ್ಕಾಗಿ? ಅಸಲಿ ಸತ್ಯ ಬಾಯ್ಬಿಟ್ಟ ಸಂಜು ಸ್ಯಾಮ್ಸನ್‌!

IPL 2026: ಸಿಎಸ್‌ಕೆ ನಾಯಕತ್ವದ ಬಗ್ಗೆ ಸಂಜು ಸ್ಯಾಮ್ಸನ್‌ ಪ್ರತಿಕ್ರಿಯೆ!

IPL 2026: ಪ್ರಸ್ತುತ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನವನ್ನು ತೋರುತ್ತಿರುವ ವಿಕೆಟ್‌ ಕೀಪರ್‌ ಸಂಜು ಸ್ಯಾಮ್ಸನ್‌ ಅವರಿಗೆ ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕತ್ವವನ್ನು ನೀಡಲಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ, ಈ ಬಗ್ಗೆ ಊಹಾಪೋಹಗಳನ್ನು ಸ್ವತಃ ಸಂಜು ಸ್ಯಾಮ್ಸನ್‌ ಅವರೇ ತಳ್ಳಿ ಹಾಕಿದ್ದಾರೆ.

GT vs RR: ರಶೀದ್‌ ಖಾನ್‌ ಸ್ಪಿನ್‌ ಮೋಡಿಗೆ ರಾಯಲ್ಸ್ ತತ್ತರ, ಭರ್ಜರಿ ಜಯದೊಂದಿಗೆ ಎರಡನೇ ಸ್ಥಾನಕ್ಕೆ ಟೈಟನ್ಸ್‌!

ರಾಜಸ್ಥಾನ್‌ ರಾಯಲ್ಸ್‌ ಮೇಲೆ ಸೇಡು ತೀರಿಸಿಕೊಂಡ ಗುಜರಾತ್‌ ಟೈಟನ್ಸ್!

GT vs RR Match Highlights: ಶುಭಮನ್‌ ಗಿಲ್‌ ಸ್ಪೋಟಕ ಬ್ಯಾಟಿಂಗ್‌ ಹಾಗೂ ರಶೀದ್‌ ಖಾನ್‌ ಸ್ಪಿನ್‌ ಮೋಡಿಯ ನೆರವಿನಿಂದ ಗುಜರಾತ್‌ ಟೈಟನ್ಸ್‌, 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ 52ನೇ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 77 ರನ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿತು.

GT vs RR: 15ನೇ ವಯಸ್ಸಿನಲ್ಲಿಯೇ ಟಿ20 ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ ಬರೆದ ವೈಭವ್‌ ಸೂರ್ಯವಂಶಿ!

100 ಸಿಕ್ಸರ್‌ಗಳ ಮೂಲಕ ಕೈರೊನ್‌ ಪೊಲಾರ್ಡ್‌ ದಾಖಲೆ ಮುರಿದ ವೈಭವ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ 15ನೇ ವಯಸ್ಸಿನ ಪೋರ ವೈಭವ್‌ ಸೂರ್ಯವಂಶಿ, ಇದೀಗ ಟಿ20 ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆಯನ್ನು ಬರೆದಿದ್ದಾರೆ. 20ನೇ ವಯಸ್ಸಿಗೂ ಮುನ್ನ 100 ಟಿ20 ಸಿಕ್ಸರ್‌ ಪೂರ್ಣಗೊಳಿಸಿದ ಮೊದಲ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

GT vs RR: ಐಪಿಎಲ್‌ ಇತಿಹಾಸದ ಅತ್ಯಂತ ದೀರ್ಘಾವಧಿ ಓವರ್‌ ಬೌಲ್‌ ಮಾಡಿದ ಜೋಫ್ರಾ ಆರ್ಚರ್‌!

ಓವರ್‌ ಮುಗಿಸಲು 11 ಎಸೆತಗಳನ್ನು ತೆಗೆದುಕೊಂಡ ಜೋಫ್ರಾ ಆರ್ಚರ್‌!

GT vs RR: ರಾಜಸ್ಥಾನ್‌ ರಾಯಲ್ಸ್‌ ತಂಡದ ವೇಗಿ ಜೋಫ್ರಾ ಆರ್ಚರ್‌ ಅವರು 2026ರ ಐಪಿಎಲ್‌ ಟೂರ್ನಿಯಲ್ಲಿ ಬಹುಶಃ ತಮ್ಮ ಅತ್ಯಂತ ಕಳಪೆ ಓವರ್ ಅನ್ನು ಬೌಲ್‌ ಮಾಡಿ ಟೀಕೆಗೆ ಗುರಿಯಾಗಿದ್ದಾರೆ. ಗುಜರಾತ್‌ ಟೈಟನ್ಸ್‌ ವಿರುದ್ಧದ ಪಂದ್ಯದಲ್ಲಿ ಮೊದಲ ಓವರ್‌ ಬೌಲ್‌ ಮಾಡಿದ ಆರ್ಚರ್‌, ಓವರ್‌ ಅನ್ನು ಮುಗಿಸಲು ಬರೋಬ್ಬರಿ 11 ಎಸೆತಗಳನ್ನು ತೆಗೆದುಕೊಂಡಿದ್ದಾರೆ. ಆ ಮೂಲಕ ಅವರು 18 ರನ್‌ಗಳನ್ನು ನೀಡಿದ್ದಾರೆ.

RCB vs MI ಪಂದ್ಯದಲ್ಲಿ ಹಾರ್ದಿಕ್‌ ಪಾಂಡ್ಯ, ಸೂರ್ಯಕುಮಾರ್‌ ಆಡ್ತಾರಾ? ಬಿಗ್‌ ಅಪ್ಡೇಟ್‌ ಇಲ್ಲಿದೆ!

RCB vs MI ಪಂದ್ಯದಲ್ಲಿ ಹಾರ್ದಿಕ್‌, ಸೂರ್ಯ ಆಡ್ತಾರಾ?

RCB vs MI: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳು ಮೇ 10 ರಂದು ರಾಯ್ಪುರದಲ್ಲಿ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 54ನೇ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯಕ್ಕೆ ಹಾರ್ದಿಕ್‌ ಪಾಂಡ್ಯ ಹಾಗೂ ಸೂರ್ಯಕುಮಾರ್‌ ಯಾದವ್‌ ಲಭ್ಯತೆಯ ಬಗ್ಗೆ ಬಿಗ್‌ ಅಪ್ಡೇಟ್‌ ಹೊರಬಿದ್ದಿದೆ.

ವೇಪ್‌ ಬಳಸಿದ ಯುಜ್ವೇಂದ್ರ ಚಹಲ್‌ಗೆ ಜೈಲು ಶಿಕ್ಷೆ ವಿಧಿಸಿ ಎಂದ ಲಕ್ಷ್ಮಣ್‌ ಶಿವರಾಮಕೃಷ್ಣನ್‌!

ಯುಜೇಂದ್ರ ಚಹಲ್‌ಗೆ ಜೈಲು ಶಿಕ್ಷೆ ವಿಧಿಸಿ ಎಂದ ಶಿವರಾಮಕೃಷ್ಣನ್!

ಪಂಜಾಬ್ ಕಿಂಗ್ಸ್ ತಂಡದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ವಿಮಾನದೊಳಗೆ ವೇಪ್ ಬಳಸುತ್ತಿರುವಂತೆ ಕಾಣುತ್ತಿರುವ ವಿಡಿಯಯೊವೊಂದು ವೈರಲ್ ಆಗಿದೆ. ಈ ವಿಡಿಯೊವನ್ನು ಅಧಿಕೃತವಾಗಿ ಪರಿಶೀಲಿಸದಿದ್ದರೂ, ಭಾರತದ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಇದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಜೈಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದಾರೆ.

IPL 2026: ʻಟ್ರಿಸ್ಟನ್‌ ಸ್ಟಬ್ಸ್‌ ಓವರ್‌ ರೇಟ್‌ ಆಟಗಾರʼ-ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಟೀಕಿಸಿದ ಕೆ ಶ್ರೀಕಾಂತ್‌!

IPL 2026: ಟ್ರಿಸ್ಟನ್‌ ಸ್ಟಬ್ಸ್‌ ವಿರುದ್ಧ ಕೆ ಶ್ರೀಕಾಂತ್‌ ಆಕ್ರೋಶ!

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ತಂಡದ ಬ್ಯಾಟಿಂಗ್ ವೈಫಲ್ಯವನ್ನು ಬಿಸಿಸಿಐ ಮಾಜಿ ಸೆಲೆಕ್ಟರ್‌ ಕೆ ಶ್ರೀಕಾಂತ್‌ ತೀವ್ರವಾಗಿ ಟೀಕಿಸಿದ್ದಾರೆ. ಕೋಲ್ಕತಾ ನೈಟ್‌ ರೈಡರ್ಸ್‌ ವಿರುದ್ಧ ಬ್ಯಾಟಿಂಗ್ ಕುಸಿತ ಅನುಭವಿಸಿದ ಬಳಿಕ, ವಿಶೇಷವಾಗಿ ಟ್ರಿಸ್ಟನ್‌ ಸ್ಟಬ್ಸ್ ಅವರ ಪ್ರದರ್ಶನವನ್ನು ಅವರು ಪ್ರಶ್ನಿಸಿದ್ದಾರೆ. ಕೆಕೆಆರ್ ವಿರುದ್ಧದ ಸೋಲಿನ ನಂತರ ಡೆಲ್ಲಿ ತಂಡದ ಮಧ್ಯಕ್ರಮಾಂಕ ಸಂಪೂರ್ಣವಾಗಿ ದುರ್ಬಲವಾಗಿದೆ ಎಂದು ಶ್ರೀಕಾಂತ್ ಅಭಿಪ್ರಾಯಪಟ್ಟಿದ್ದಾರೆ.

IPL 2026: ಮುಂಬೈ ಇಂಡಿಯನ್ಸ್‌ ಎದುರು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಗೆಲ್ಲುವುದು ಪಕ್ಕಾ?

IPL 2026: ಮುಂಬೈ ಎದುರು ಆರ್‌ಸಿಬಿ ಗೆಲ್ಲುವುದು ಪಕ್ಕಾ?

RCB vs MI Match Prediction: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳು ಮೇ 10ರಂದು ಭಾನುವಾರ ರಾಯ್ಪುರದ ಸಹೀದ್‌ ವೀರ್‌ ನಾರಾಯಣ್‌ ಸಿಂಗ್‌ ಕ್ರೀಡಾಂಗಣದಲ್ಲಿ ನಡೆಯುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 54ನೇ ಪಂದ್ಯದಲ್ಲಿ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಬಗ್ಗೆ ತೀವ್ರ ಕುತೂಹಲವಿದೆ.

Loading...