ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Ramesh Kote

[email protected]

Articles
CWG 2026: ಫೈನಲ್‌ನಲ್ಲಿ ಸೋತ ಜದುಮಣಿ ಸಿಂಗ್ ಮಾಂಡೆಂಗ್‌ಬಾಮ್‌ಗೆ ಬೆಳ್ಳಿ ಪದಕ, ಭಾರತಕ್ಕೆ 30ನೇ ಪದಕ!

CWG 2026: ಫೈನಲ್‌ನಲ್ಲಿ ಸೋತ ಬಾಕ್ಸರ್‌ ಜದುಮಣಿ ಸಿಂಗ್‌ಗೆ ಬೆಳ್ಳಿ ಪದಕ!

2026ರ ಕಾಮನ್‌ವೆಲ್ತ್ ಕ್ರೀಡಾಕೂಟದ ಪುರುಷರ 55 ಕೆಜಿ ಬಾಕ್ಸಿಂಗ್ ವಿಭಾಗದ ಫೈನಲ್‌ನಲ್ಲಿ ಭಾರತದ ಜದುಮಣಿ ಸಿಂಗ್ ಮಾಂಡೆಂಗ್‌ಬಾಮ್ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು. ಫೈನಲ್‌ನಲ್ಲಿ ಆಸ್ಟ್ರೇಲಿಯಾದ ಜೇ ಡಿಕ್ಸನ್ ವಿರುದ್ಧ 5-0 ಅಂಕಗಳ ಅಂತರದಲ್ಲಿ ಏಕಪಕ್ಷೀಯ ತೀರ್ಪಿನಿಂದ ಸೋಲು ಅನುಭವಿಸಿದರು. ಆ ಮೂಲಕ ಬೆಳ್ಳಿ ಪದಕಕ್ಕೆ ಸೀಮಿತರಾದರು. ಭಾರತಕ್ಕೆ ಇದು 30ನೇ ಪದಕವಾಗಿದೆ.

2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗೆ ಭಾರತ ತಂಡವನ್ನು ಆರಿಸಿದ ಆರ್‌ ಅಶ್ವಿನ್‌!

2027ರ ಏಕದಿನ ವಿಶ್ವಕಪ್‌ಗೆ ಭಾರತ ತಂಡವನ್ನು ಆರಿಸಿದ ಅಶ್ವಿನ್‌!

2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ತಮ್ಮ ನೆಚ್ಚಿನ 15 ಆಟಗಾರರ ಭಾರತ ತಂಡವನ್ನು ಸ್ಪಿನ್‌ ದಿಗ್ಗಜ ರವಿಚಂದ್ರನ್‌ ಅಶ್ವಿನ್‌ ಅವರು ಆಯ್ಕೆ ಮಾಡಿದ್ದಾರೆ. ಆದರೆ, ಅವರು ಸಂಜು ಸ್ಯಾಮ್ಸನ್‌, ವೈಭವ್‌ ಸೂರ್ಯವಂಶಿ ಹಾಗೂ ರಿಷಭ್‌ ಪಂತ್‌ ಅವರನ್ನು ಕೈ ಬಿಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಆದರೆ, ಭಾರತ ತಂಡದಿಂದ ಹೊರಗೆ ಉಳಿದಿರುವ ಭುವನೇಶ್ವರ್‌ ಕುಮಾರ್‌ಗೆ ಸ್ಥಾನವನ್ನು ನೀಡಿದ್ದಾರೆ.

CWG 2026: ಬಾಕ್ಸಿಂಗ್‌ ವಿಭಾಗದಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡ ಜೈಸ್ಮಿನ್‌ ಲಂಬೋರಿಯಾ!

CWG 2026: ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡ ಜೈಸ್ಮಿನ್‌ ಲಂಬೋರಿಯಾ!

ಪ್ರಸ್ತುತ ನಡೆಯುತ್ತಿರುವ 2026ರ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಜೈಸ್ಮಿನ್‌ ಲಂಬೋರಿಯಾ ಅವರು ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಅವರು ಬಾಕ್ಸಿಂಗ್‌ 57 ಕೆಜಿ ವಿಭಾಗದ ಫೈನಲ್‌ ಪಂದ್ಯದಲ್ಲಿ ಐರ್ಲೆಂಡ್‌ನ ಮೈಕೇಲಾ ವಾಲ್ಶ್ ಅವರನ್ನು 5-0 ಅಂತರದಲ್ಲಿ ಮಣಿಸಿ ಚಾಂಪಿಯನ್‌ ಆದರು.

ʻಆರ್‌ಸಿಬಿಯ ನಿಜವಾದ ರಾಣಿʼ: ಅಸ್ಸಾಂ ಪ್ರವಾಹ ಪೀಡಿತರಿಗೆ ನೆರವಾದ ಅನನ್ಯಾ ಬಿರ್ಲಾ!

ಅಸ್ಸಾಂ ಪ್ರವಾಹ ಪೀಡಿತರಿಗೆ ನೆರವಾದ ಆರ್‌ಸಿಬಿ ಓನರ್‌ ಅನನ್ಯಾ!

ಅಸ್ಸಾಂನಲ್ಲಿ ಭಾರೀ ಪ್ರವಾಹದ ಹಿನ್ನೆಲೆಯಲ್ಲಿ ಉದ್ಯಮಿ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಕೋ ಓನರ್‌ ಅನನ್ಯಾ ಬಿರ್ಲಾ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸಿದರು. ಅಲ್ಲದೆ, ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತ ಸಮುದಾಯಗಳಿಗೆ ಅಗತ್ಯ ನೆರವು ಮತ್ತು ಬೆಂಬಲವನ್ನು ನೀಡಿದ್ದಾರೆ. ಇದನ್ನು ನೋಡಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ʻತನ್ನನ್ನು ನಿಂದಿಸಿದ ಯುವಕರನ್ನು ಕ್ಷಮಿಸಿದ್ದೇನೆʼ: ತಡರಾತ್ರಿ ವಿಡಿಯೊ ಹಂಚಿಕೊಂಡ ಪ್ರಧಾನಿ ಮೋದಿ!

ʻನನ್ನನ್ನು ನಿಂದಿಸಿದ ಯುವಕರನ್ನು ಕ್ಷಮಿಸಿದ್ದೇನೆʼ: ನರೇಂದ್ರ ಮೋದಿ!

ಜಂತರ್ ಮಂತರ್‌ನಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ತಮ್ಮ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ ಯುವಕರನ್ನು ಕ್ಷಮಿಸಲು ಬಯಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರನ್ನು ಶಿಕ್ಷಿಸುವ ಬದಲು ಸಮಾಜವು ಸರಿಯಾದ ಮಾರ್ಗದರ್ಶನ ನೀಡಬೇಕು ಎಂದು ಕರೆ ನೀಡಿದ ಪ್ರಧಾನಿ ಮೋದಿ, ಯುವಕರು ಸರಿದಾರಿಗೆ ಬರಲು ಪ್ರೋತ್ಸಾಹಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರ ದಾಳಿ: ವಲಸೆ ಕಾರ್ಮಿಕನ ಹತ್ಯೆ, ಮರ್ತೋರ್ವ ಗಾಯ!

ಕುಲ್ಗಾಂನಲ್ಲಿ ಉಗ್ರರ ದಾಳಿ: ವಲಸೆ ಕಾರ್ಮಿಕನ ಹತ್ಯೆ, ಮತ್ತೋರ್ವ ಗಾಯ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ ವಲಸೆ ಕಾರ್ಮಿಕ ಮೃತಪಟ್ಟಿದ್ದು, ಮತೋರ್ವ ಗಾಯಗೊಂಡಿದ್ದಾರೆ. ಶುಕ್ರವಾರ ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಕೆಲ್ಲಂ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Commonwealth Games 2026: 48 ಕೆಜಿ ಜುಡೋ ವಿಭಾಗದಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡ ಅಸ್ಮಿತಾ ಡೇ!

48 ಕೆಜಿ ಜುಡೋ ವಿಭಾಗದಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡ ಅಸ್ಮಿತಾ ಡೇ!

ಭಾರತದ ಅಸ್ಮಿತಾ ಡೇ ಅವರು 2026ರ ಕಾಮನ್‌ವೆಲ್ತ್‌ ಕ್ರೀಡಾಕೂಟದ ಜುಡೋ ವಿಭಾಗದಲ್ಲಿ ಮೊದಲ ಚಿನ್ನದ ಪದಕವನ್ನು ಇತಿಹಾಸದವನ್ನು ಸೃಷ್ಟಿಸಿದ್ದಾರೆ. ಅವರು 48 ಕೆ.ಜಿ ವಿಭಾಗದ ಫೈನಲ್‌ ಪಂದ್ಯದಲ್ಲಿ ಕೆನಡಾದ ಹೈಡಿ ಕ್ವಾಚ್‌ ಅವರನ್ನು ಮಣಿಸಿ ಭಾರತಕ್ಕೆ ಜುಡೋ ವಿಭಾಗದಲ್ಲಿ ಮೊದಲ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.

ನಾನು ವೆಸ್ಟ್‌ ಇಂಡೀಸ್‌ ತಂಡವನ್ನು ಪ್ರತಿನಿಧಿಸುತ್ತೇನೆ, ಡೆರೆನ್‌ ಸಾಮಿಯನ್ನು ಅಲ್ಲ: ಆಲ್ಝಾರಿ ಜೋಸೆಫ್‌ ತಿರುಗೇಟು!

ವಿಂಡೀಸ್‌ ಕೋಚ್‌ ವಿರುದ್ಧ ಆಲ್ಝಾರಿ ಜೋಸೆಫ್‌ ಆಕ್ರೋಶ!

ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಗೆ ವೆಸ್ಟ್ ಇಂಡೀಸ್ ವೇಗಿ ಆಲ್ಝಾರಿ ಜೋಸೆಫ್ ಮತ್ತು ಮುಖ್ಯ ಕೋಚ್ ಡೆರೆನ್ ಸಾಮಿ ನಡುವೆ ವಿವಾದ ಉಂಟಾಗಿದೆ. ಜೋಸೆಫ್ ಅವರ ಅಲಭ್ಯತೆಗೆ ಮಂಡಳಿಯು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿತ್ತು. ಈ ಬಗ್ಗೆ ವಿಂಡೀಸ್‌ ಕೋಚ್‌ ವಿರುದ್ಧ ಜೋಸೆಫ್‌ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

CWG 2026: ಭಾರತಕ್ಕೆ ಎರಡು ಪದಕಗಳನ್ನು ಖಚಿತಪಡಿಸಿದ ಹರ್ಷ್‌ ಸಿಂಗ್‌, ಅಷ್ಮಿತಾ ಡೇ!

ಭಾರತಕ್ಕೆ 2 ಪದಕಗಳನ್ನು ಖಚಿತಪಡಿಸಿದ ಹರ್ಷ್‌ ಸಿಂಗ್‌, ಅಷ್ಮಿತಾ ಡೇ!

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಜುಡೋಕಾಗಳು ಅದ್ಭುತ ಪ್ರದರ್ಶನ ನೀಡಿ ದೇಶಕ್ಕೆ ಎರಡು ಪದಕಗಳನ್ನು ಖಚಿತಪಡಿಸಿದ್ದಾರೆ. ಪುರುಷರ 60 ಕೆಜಿ ವಿಭಾಗದಲ್ಲಿ ಹರ್ಷ್ ಸಿಂಗ್ ಫೈನಲ್‌ಗೆ ಪ್ರವೇಶಿಸಿ ಕನಿಷ್ಠ ಬೆಳ್ಳಿ ಪದಕವನ್ನು ಖಚಿತಪಡಿಸಿಕೊಂಡಿದ್ದಾರೆ. ಇದೀಗ ಅವರು ಚಿನ್ನದ ಪದಕಕ್ಕಾಗಿ ಸೆಣಸಲಿದ್ದಾರೆ. ಇನ್ನೊಂದೆಡೆ, ಮಹಿಳೆಯರ 48 ಕೆಜಿ ವಿಭಾಗದಲ್ಲಿ ಅಷ್ಮಿತಾ ಡೇ ಸೆಮಿಫೈನಲ್‌ಗೆ ಪ್ರವೇಶಿಸುವ ಮೂಲಕ ಕನಿಷ್ಠ ಕಂಚಿನ ಪದಕವನ್ನು ಖಚಿತಪಡಿಸಿಕೊಂಡಿದ್ದಾರೆ.

ಶ್ರೀಲಂಕಾ ವಿರುದ್ಧದ ಟೆಸ್ಟ್‌ ಸರಣಿಗೆ ಭಾರತ ತಂಡದ ಬಲಿಷ್ಠ ಪ್ಲೇಯಿಂಗ್‌ XI ವಿವರ!

ಶ್ರೀಲಂಕಾ ಟೆಸ್ಟ್‌ ಸರಣಿಗೆ ಭಾರತದ ಬಲಿಷ್ಠ ಪ್ಲೇಯಿಂಗ್‌ XI

India's Strongest Playing Xi: ಭಾರತ ತಂಡ ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್‌ ಸರಣಿಗೆ ಸಜ್ಜಾಗುತ್ತಿದೆ. ಈ ವಾರದ ಆರಂಭದಲ್ಲಿ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಆಯ್ಕೆ ಮಾಡಿತ್ತು. ಆಗಸ್ಟ್‌ 15 ರಂದು ಆರಂಭವಾಗಲಿರುವ ಮೊದಲನೇ ಪಂದ್ಯ ಆರಂಭವಾಗಲಿದೆ. ಈ ಟೆಸ್ಟ್‌ ಸರಣಿಗೆ ಭಾರತ ತಂಡದ ಬಲಿಷ್ಠ ಪ್ಲೇಯಿಂಗ್‌ Xi ಅನ್ನು ಇಲ್ಲಿ ವಿವರಿಸಲಾಗಿದೆ.

IPL 2027: ಅಜಿಂಕ್ಯ ರಹಾನೆ ನಿವೃತ್ತಿಯಿಂದ ಕೋಲ್ಕತಾ ನೈಟ್‌ ರೈಡರ್ಸ್‌ಗೆ ಮತ್ತೊಂದು ತಲೆ ನೋವು!

ಅಜಿಂಕ್ಯ ರಹಾನೆ ನಿವೃತ್ತಿಯಿಂದ ಕೆಕೆಆರ್‌ಗೆ ಮತ್ತೊಂದು ತಲೆ ನೋವು!

ಭಾರತೀಯ ಕ್ರಿಕೆಟ್‌ನ ಹಿರಿಯ ಬ್ಯಾಟ್ಸ್‌ಮನ್‌ ಅಜಿಂಕ್ಯ ರಹಾನೆ ಅವರು ತಮ್ಮ ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಬಳಿಕ ಕೋಲ್ಕತಾ ನೈಟ್‌ ರೈಡರ್ಸ್‌ ತಂಡದ ಮುಂದಿನ ನಾಯಕ ಯಾರೆಂಬ ಪ್ರಶ್ನೆ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕೋಲ್ಕತಾ ಫ್ರಾಂಚೈಸಿ 2027ರ ಟೂರ್ನಿಯ ನಿಮಿತ್ತ ಹೊಸ ನಾಯಕ ಹುಡುಕಾಟದಲ್ಲಿ ತೊಡಗಿದೆ.

2027ರ ಏಕದಿನ ವಿಶ್ವಕಪ್‌ ಭಾರತ ತಂಡದಲ್ಲಿ ಭುವನೇಶ್ವರ್‌ ಕುಮಾರ್‌ಗೆ ಚಾನ್ಸ್‌ ನೀಡಬೇಕೆಂದ ಆರ್‌ ಅಶ್ವಿನ್‌!

ಏಕದಿನ ವಿಶ್ವಕಪ್‌ ಭಾರತ ತಂಡದಲ್ಲಿ ಭುವನೇಶ್ವರ್‌ ಆಡಬೇಕೆಂದ ಅಶ್ವಿನ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಅತ್ಯುತ್ತಮ ಬೌಲಿಂಗ್‌ ಪ್ರದರ್ಶನವನ್ನು ತೋರಿದ್ದ ಭುವನೇಶ್ವರ್‌ ಕುಮಾರ್‌ ಅವರನ್ನು ಸ್ಪಿನ್‌ ದಿಗ್ಗಜ ರವಿಚಂದ್ರನ್‌ ಅಶ್ವಿನ್‌ ಗುಣಗಾಣ ಮಾಡಿದ್ದಾರೆ. 2027ರ ಐಸಿಸಿ ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಕುಮಾರ್ ಅವರನ್ನು ಭಾರತ ತಂಡದಲ್ಲಿ ಆಯ್ಕೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ದೇಶಿ ಕ್ರೀಡೆಗೆ ಭರ್ಜರಿ ಉತ್ತೇಜನ: ಮೂರನೇ ವರ್ಷಕ್ಕೆ ಕಾಲಿಟ್ಟ ಒಡಿಶಾ ಎಎಮ್/ಎನ್ಎಸ್ ಖೋ ಖೋ ಕೇಂದ್ರ!

ಮೂರನೇ ವರ್ಷಕ್ಕೆ ಕಾಲಿಟ್ಟ ಒಡಿಶಾ ಎಎಮ್/ಎನ್ಎಸ್ ಖೋ ಖೋ ಕೇಂದ್ರ!

ದೇಶಿ ಕ್ರೀಡೆ 'ಖೋ ಖೋ'ದಲ್ಲಿ ಭರವಸೆಯ ಕ್ರೀಡಾಪಟುಗಳನ್ನು ರೂಪಿಸುತ್ತಿರುವ 'ಒಡಿಶಾ ಎಎಮ್/ಎನ್ಎಸ್ ಇಂಡಿಯಾ ಖೋ ಖೋ ಹೈ ಪರ್ಫಾರ್ಮೆನ್ಸ್ ಸೆಂಟರ್' ತನ್ನ ಕಾರ್ಯಾಚರಣೆಯ ಎರಡು ಯಶಸ್ವಿ ವರ್ಷಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು.

Duleep Trophy 2026:  ಪೂರ್ವ ವಲಯ ತಂಡಕ್ಕೆ ವೈಭವ್‌ ಸೂರ್ಯವಂಶಿ ಉಪ ನಾಯಕ!

ಪೂರ್ವ ವಲಯ ತಂಡಕ್ಕೆ ವೈಭವ್‌ ಸೂರ್ಯವಂಶಿ ಉಪ ನಾಯಕ!

2026ರ ದುಲೀಪ್ ಟ್ರೋಫಿ ಟೂರ್ನಿಗೆ ಪೂರ್ವ ವಲಯ ತಂಡವನ್ನು ಪ್ರಕಟಿಸಲಾಗಿದ್ದು, ಇಶಾನ್ ಕಿಶನ್‌ಗೆ ನಾಯಕತ್ವವನ್ನು ನೀಡಲಾಗಿದ್ದು, ವೈಭವ್ ಸೂರ್ಯವಂಶಿಗೆ ಉಪನಾಯಕನ ಜವಾಬ್ದಾರಿಯನ್ನು ನೀಡಲಾಗಿದೆ. ಆಗಸ್ಟ್ 23 ರಂದು ಆರಂಭವಾಗಲಿರುವ ಪ್ರತಿಷ್ಠಿತ ದುಲೀಪ್ ಟ್ರೋಫಿ ಟೂರ್ನಿಗೆ ಪೂರ್ವ ವಲಯದ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ.

Commonwealth Games 2026: ಭಾರತಕ್ಕೆ ಮತ್ತೊಂದು ಪದಕ ಖಚಿತಪಡಿಸಿದ ಸಾಕ್ಷಿ ಚೌಧರಿ!

CWG 2026: ಭಾರತಕ್ಕೆ ಪದಕ ಖಚಿತಪಡಿಸಿದ ಸಾಕ್ಷಿ ಚೌಧರಿ!

ಪ್ರಸ್ತುತ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಬಾಕ್ಸರ್ ಸಾಕ್ಷಿ ಚೌಧರಿ ಮತ್ತೊಂದು ಪದಕವನ್ನು ಖಚಿತಪಡಿಸಿದ್ದಾರೆ. ಮಹಿಳೆಯರ 51 ಕೆಜಿ ವಿಭಾಗದ ಕ್ವಾರ್ಟರ್‌ಫೈನಲ್‌ನಲ್ಲಿ ಉತ್ತರ ಐರ್ಲೆಂಡ್‌ನ ಕೈಟ್ಲಿನ್ ಫ್ರೈಯರ್ಸ್ ಅವರನ್ನು 5-0 ಅಂತರದಿಂದ ಮಣಿಸಿದ ಸಾಕ್ಷಿ, ಸೆಮಿಫೈನಲ್‌ಗೆ ಪ್ರವೇಶಿಸಿದ್ದಾರೆ. ಆ ಮೂಲಕ ಕಂಚಿನ ಪದಕವನ್ನು ಖಚಿತಪಡಿಸಿಕೊಂಡಿದ್ದಾರೆ.

ಶ್ರೀಲಂಕಾ ಟೆಸ್ಟ್‌ ಸರಣಿಗೂ ಮುನ್ನ ರಿಷಭ್‌ ಪಂತ್‌ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಎಬಿ ಡಿ ವಿಲಿಯರ್ಸ್!

ರಿಷಭ್‌ ಪಂತ್‌ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಎಬಿ ಡಿ ವಿಲಿಯರ್ಸ್‌!

ABD on Rishabh Pant ahead of Sri lanka tour: ಶುಭಮನ್‌ ಗಿಲ್‌ ನಾಯಕತ್ವದ ಭಾರತ ತಂಡ ಮುಂದಿನ ತಿಂಗಳು ಶ್ರೀಲಂಕಾ ಪ್ರವಾಸವನ್ನು ಹಮ್ಮಿಕೊಂಡಿದ್ದು ಟೆಸ್ಟ್‌ ಸರಣಿಯನ್ನು ಆಡಲಿದೆ. ಈ ಟೆಸ್ಟ್‌ ಸರಣಿಯು ರಿಷಭ್‌ ಪಂತ್‌ಗೆ ತುಂಬಾ ಮುಖ್ಯವಾಗಿದ್ದು, ಹಲವು ಮಾಜಿ ಆಟಗಾರರು ವಿಕೆಟ್‌ ಕೀಪರ್‌ ಮೇಲೆ ಹೆಚ್ಚಿನ ವಿಶ್ವಾಸವನ್ನು ಇಟ್ಟಿದ್ದಾರೆ. ಅದೇ ರೀತಿ ದಕ್ಷಿಣ ಆಫ್ರಿಕಾ ದಿಗ್ಗಜ ಎಬಿ ಡಿ ವಿಲಿಯರ್ಸ್‌ ಕೂಡ ಪಂತ್‌ ಬಗ್ಗೆ ತೀವ್ರ ಕುತೂಹಲವನ್ನು ವ್ಯಕ್ತಪಡಿಸಿದ್ದಾರೆ.

ʻಆಟಗಾರರಿಗೆ ನೀರು ಕೊಟ್ಟರೆ ತಪ್ಪೇನು?ʼ: ವೈಭವ್‌ ಬಗ್ಗೆ ನೀಡಿದ್ದ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ಆರ್‌ ಅಶ್ವಿನ್‌!

ವೈಭವ್‌ ಸೂರ್ಯವಂಶಿ ನೀರು ಕೊಟ್ಟರೆ ತಪ್ಪೇನು?: ಆರ್‌ ಅಶ್ವಿನ್!

ಸ್ಪಿನ್‌ ದಿಗ್ಗಜ ರವಿಚಂದ್ರನ್ ಅಶ್ವಿನ್ ಅವರು ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಉತ್ತಮ ಪ್ರದರ್ಶನ ನೀಡುವಂತೆ ಒತ್ತಡ ಹಾಕುವ ಬದಲು, ಕೆಲವೊಮ್ಮೆ ಹೊರಗಿನಿಂದ ಪಂದ್ಯಗಳನ್ನು ಗಮನಿಸಿ ಕಲಿಯುವುದು ಯುವ ಆಟಗಾರನ ಬೆಳವಣಿಗೆಗೆ ಸಹಾಯಕವಾಗುತ್ತದೆ ಎಂದು ಅಶ್ವಿನ್ ಈ ಹಿಂದೆ ಹೇಳಿದ್ದರು. ಇದೀಗ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

IPL 2027: ಎಲ್ಲಾ 10 ಫ್ರಾಂಚೈಸಿಗಳನ್ನು ಹಿಂದಿಕ್ಕಿ ತನ್ನ ಬ್ರ್ಯಾಂಡ್‌ ಮೌಲ್ಯವನ್ನು ಹೆಚ್ಚಿಸಿಕೊಂಡ ಆರ್‌ಸಿಬಿ!

ತನ್ನ ಬ್ರ್ಯಾಂಡ್‌ ಮೌಲ್ಯವನ್ನು ಹೆಚ್ಚಿಸಿಕೊಂಡು ದಾಖಲೆ ಬರೆದ ಆರ್‌ಸಿಬಿ!

IPL 2026: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಒಟ್ಟು ವ್ಯವಹಾರ ಮೌಲ್ಯ ಶೇ.11.4 ರಷ್ಟು ಏರಿಕೆಯಾಗಿ 1.96 ಲಕ್ಷ ಕೋಟಿಗೆ ತಲುಪಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಅತ್ಯಂತ ಮೌಲ್ಯಯುತ ಐಪಿಎಲ್ ತಂಡವಾಗಿದ್ದು, 2,982 ಕೋಟಿ ಬ್ರಾಂಡ್ ಮೌಲ್ಯವನ್ನು ಹೊಂದಿದೆ.

ICC Rankings: ಶುಭಮನ್‌ ಗಿಲ್‌ ನಂ 1 ಒಡಿಐ ಬ್ಯಾಟ್ಸ್‌ಮನ್‌;  230ರ ಸ್ಥಾನಗಳಲ್ಲಿ ಏರಿಕೆ ಕಂಡ ವೈಭವ್‌ ಸೂರ್ಯವಂಶಿ!

ಶುಭಮನ್‌ ಗಿಲ್‌ ನಂ 1 ಒಡಿಐ ಬ್ಯಾಟ್ಸ್‌ಮನ್‌, ವೈಭವ್‌ಗೆ ಜಾಕ್‌ಪಾಟ್‌!

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿನ ಅಮೋಘ ಪ್ರದರ್ಶನದ ಬಳಿಕ ಶುಭಮನ್ ಗಿಲ್ ಐಸಿಸಿ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಇದೇ ವೇಳೆ, 15ರ ವಯಸ್ಸಿನ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಟಿ20ಐ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಭಾರೀ ಜಿಗಿತ ಕಂಡಿದ್ದಾರೆ. ಅವರು ಬರೋಬ್ಬರಿ 230 ಸ್ಥಾನಗಳ ಏರಿಕೆಯೊಂದಿಗೆ 48ನೇ ಸ್ಥಾನಕ್ಕೆ ತಲುಪಿದ್ದಾರೆ. ಇಶಾನ್ ಕಿಶನ್ ತಮ್ಮ ನಂ.1 ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಬಾಬರ್‌ ಆಝಮ್‌ ನಾಯಕನಾಗಿ ಮರಳಿದರೂ ಪಾಕಿಸ್ತಾನ ತಂಡದ ಹಣೆ ಬರಹ ಬದಲಾಗಲಿಲ್ಲ!

ವೆಸ್ಟ್‌ ಇಂಡೀಸ್‌ ಎದುರು ಪಾಕಿಸ್ತಾನ ತಂಡಕ್ಕೆ ಹೀನಾಯ ಸೋಲು!

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡ 90 ರನ್‌ಗಳಿಂದ ಸೋಲು ಅನುಭವಿಸಿದೆ. ಇದರೊಂದಿಗೆ ವಿದೇಶಿ ನೆಲದಲ್ಲಿ ಪಾಕಿಸ್ತಾನಕ್ಕೆ ಇದು ಸತತ ಎಂಟನೇ ಟೆಸ್ಟ್ ಸೋಲಾಗಿದೆ. 2023ರ ಬಳಿಕ ಪಾಕಿಸ್ತಾನ ತಂಡ ವಿದೇಶದಲ್ಲಿ ಒಂದೇ ಒಂದು ಟೆಸ್ಟ್ ಪಂದ್ಯವನ್ನೂ ಗೆಲ್ಲಲು ಸಾಧ್ಯವಾಗಿಲ್ಲ. ಈ ಮೂಲಕ ವಿದೇಶಿ ನೆಲದಲ್ಲಿ ತಂಡದ ನೀರಸ ಪ್ರದರ್ಶನ ಮುಂದುವರಿದಿದೆ.

ಭಾರತ ತಂಡವನ್ನು ತೊರೆದ ಬೆನ್ನಲ್ಲೆ ಕೆಕೆಆರ್‌ ತಂಡದಲ್ಲಿ ದೊಡ್ಡ ಹುದ್ದೆಯನ್ನು ಅಲಂಕರಿಸಿದ ರಯಾನ್‌ ಟೆನ್‌ ಡಶ್ಕಾಟೆ!

ಕೆಕೆಆರ್‌ನಲ್ಲಿ ದೊಡ್ಡ ಹುದ್ದೆಯನ್ನು ಅಲಂಕರಿಸಿದ ರಯಾನ್‌ ಟೆನ್‌ ಡಶ್ಕಾಟೆ!

ಭಾರತ ಕ್ರಿಕೆಟ್‌ ತಂಡದಲ್ಲಿ ಸಹಾಯಕ ಕೋಚ್‌ ಹುದ್ದೆಯನ್ನು ತೊರೆದ ಒಂದು ದಿನದ ಬೆನ್ನಲ್ಲೆ ನೆದರ್ಲೆಂಡ್ಸ್‌ ಮಾಜಿ ಕ್ರಿಕೆಟಿಗ ರಯಾನ್‌ ಟೆನ್‌ ಡಶ್ಕಾಟೆ ಅವರು ಕೋಲ್ಕತಾ ಫ್ರಾಂಚೈಸಿಯ ಕ್ರಿಕೆಟ್‌ ತಾಂತ್ರಿಕ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಹೊಸದಾಗಿ ಸೃಷ್ಟಿಸಲಾದ ಜಾಗತಿಕ ನಾಯಕತ್ವದ ಹುದ್ದೆಯನ್ನು ಅವರು ವಹಿಸಿಕೊಂಡಿದ್ದಾರೆ.

ಶುಭದೀಪ್‌ ಘೋಷ್‌ ಭಾರತ ಕ್ರಿಕೆಟ್‌ ತಂಡಕ್ಕೆ ನೂತನ ಫೀಲ್ಡಿಂಗ್‌ ಕೋಚ್‌?

ಭಾರತ ತಂಡಕ್ಕೆ ಶುಭದೀಪ್‌ ಘೋಷ್‌ ನೂತನ ಫೀಲ್ಡಿಂಗ್‌ ಕೋಚ್‌?

ಭಾರತ ಕ್ರಿಕೆಟ್ ತಂಡದ ಸಹಾಯಕ ಕೋಚ್ ರಿಯಾನ್ ಟೆನ್ ಡಶ್ಕಾಟೆ ಹಾಗೂ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಅವರ ಅಧಿಕಾರಾವಧಿ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಕರೆ ತರಲು ಬಿಸಿಸಿಐ ಪ್ರಯತ್ನ ನಡೆಸುತ್ತಿದೆ. ಇತ್ತೀಚಿನ ವರದಿಗಳ ಪ್ರಕಾರ, ಶುಭದೀಪ್‌ ಘೋಷ್‌ ಅವರನ್ನು ಫೀಲ್ಡಿಂಗ್‌ ಕೋಚ್‌ ಆಗಿ ನೇಮಿಸಲಾಗಿದೆ.

ʻ3 ಗಂಟೆಗಳಲ್ಲಿ 1000 ಎಸೆತಗಳನ್ನು ಎದುರಿಸಿದ ಸ್ಕೈʼ: ಬಿಸಿಸಿಐಗೆ ಸೂರ್ಯಕುಮಾರ್‌ ಯಾದವ್‌ ಸಂದೇಶ!

ಕೇವಲ 3 ಗಂಟೆಗಳಲ್ಲಿ 1000 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್‌!

ಭಾರತ ತಂಡದಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡಿರುವ ಮಾಜಿ ನಾಯಕ ಸೂರ್ಯಕುಮಾರ್‌ ಯಾದವ್‌ ಅವರು ಕಳೆದುಕೊಂಡಿರುವ ಫಾರ್ಮ್‌ ಅನ್ನು ಮತ್ತೆ ಪಡೆಯಲು ಪ್ರಯತ್ನ ನಡೆಸುತ್ತಿದ್ದಾರೆ. ಅದಕ್ಕಾಗಿ ಅವರು ನೆಟ್ಸ್‌ನಲ್ಲಿ ಪ್ರತಿ ದಿನ ಬೆವರು ಸುರಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸೂರ್ಯ ತಮ್ಮ ಸೋಶಿಯಲ್‌ ಮೀಡಿಯಾ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದಾರೆ.

ಭಾರತ ಕ್ರಿಕೆಟ್‌ ತಂಡ ಸಹಾಯಕ ಕೋಚ್‌ ಹುದ್ದೆಯಿಂದ ಕೆಳಗಿಳಿದ ರಯಾನ್‌ ಡಿ ಡಶ್ಕಾಟೆ!

ಭಾರತ ತಂಡದ ಕೋಚ್‌ ಹುದ್ದೆಗೆ ರಯಾನ್‌ ಟೆನ್‌ ಡಶ್ಕಾಟೆ ಗುಡ್‌ ಬೈ!

ಭಾರತ ಕ್ರಿಕೆಟ್‌ ತಂಡದ ಸಹಾಯಕ ಕೋಚ್‌ ಹುದ್ದೆಗೆ ರಯಾನ್‌ ಟೆನ್‌ ಡಶ್ಕಾಟೆ ಅವರು ರಾಜೀನಾಮೆ ನೀಡಿದ್ದಾರೆ. ಎರಡು ವರ್ಷಗಳ ಕಾಲ ಭಾರತ ತಂಡದಲ್ಲಿ ಕಾರ್ಯನಿರ್ವಹಿಸಿದ ಬಳಿಕ ಅವರು ಇದೀಗ ದೂರ ಸರಿಯುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇದರೊಂದಿಗೆ 2027ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಅವರು ಕೋಲ್ಕತಾ ನೈಟ್‌ ರೈಡರ್ಸ್‌ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆಂದು ಹೇಳಲಾಗುತ್ತಿದೆ.

Loading...