ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Ramesh Kote

[email protected]

Articles
IND vs ZIM:29 ಎಸೆತಗಳಲ್ಲಿ 60 ರನ್‌ ಸಿಡಿಸಿ ಎಂಎಸ್‌ ಧೋನಿಯ ದಾಖಲೆಯನ್ನು ಮುರಿದ ತಿಲಕ್‌ ವರ್ಮಾ!

IND vs ZIM: ಎಂಎಸ್‌ ಧೋನಿಯ ದಾಖಲೆ ಮುರಿದ ತಿಲಕ್‌ ವರ್ಮಾ!

ಜಿಂಬಾಬ್ವೆ ವಿರುದ್ಧ ಎರಡನೇ ಟಿ20ಐ ಪಂದ್ಯದಲ್ಲಿ ಮ್ಯಾಚ್‌ ವಿನ್ನಿಂಗ್‌ ಇನಿಂಗ್ಸ್‌ ಆಡುವ ಮೂಲಕ ಭಾರತ ತಂಡದ ಉಪ ನಾಯಕ ತಿಲಕ್‌ ವರ್ಮಾ ಅವರು, ಮಾಜಿ ನಾಯಕ ಎಂಎಸ್‌ ಧೋನಿಯ ದಾಖಲೆಯನ್ನು ಮುರಿದಿದ್ದಾರೆ. ಅವರು ಆಡಿದ ಕೇವಲ 29 ಎಸೆತಗಳಲ್ಲಿ 200ಕ್ಕೂ ಅಧಿಕ ಸ್ಟ್ರೈಕ್‌ ರೇಟ್‌ನಲ್ಲಿ ರನ್‌ ಗಳಿಸಿ ಅಜೇಯ 60 ರನ್‌ಗಳನ್ನು ಬಾರಿಸಿದ್ದರು. ಈ ಪಂದ್ಯದಲ್ಲಿ ಭಾರತ ತಂಡ 90 ರನ್‌ಗಳಿಂದ ಭರ್ಜರಿ ಗೆಲುವು ಪಡೆಯಿತು.

ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ ಬೆನ್ನಲ್ಲೆ ಯುವ ಸಮುದಾಯಕ್ಕೆ ದಿನೇಶ್‌ ಕಾರ್ತಿಕ್‌ ವಿಶೇಷ ಸಂದೇಶ!

ಭಾರತದ ಯುವ ಸಮುದಾಯಕ್ಕೆ ವಿಶೇಷ ಸಂದೇಶ ರವಾನಿಸಿದ ದಿನೇಶ್‌ ಕಾರ್ತಿಕ್‌!

2026ರ ನೀಟ್‌-ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ ಸಂಬಂಧ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ಭಾರತ ಕ್ರಿಕೆಟ್‌ ತಂಡದ ಮಾಜಿ ವಿಕೆಟ್‌ ಕೀಪರ್‌ ದಿನೇಶ್‌ ಕಾರ್ತಿಕ್‌, ಯುವ ಸಮುದಾಯವನ್ನು ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. ಭಾರತದ ಯುವ ಸಮುದಾಯಕ್ಕೆ ಸ್ಪಷ್ಟ ದೃಷ್ಟಿಕೋನ, ಪರಸ್ಪರ ಸಹಕಾರ ಮತ್ತು ನಿರಂತರ ಹೋರಾಟದ ಮನೋಭಾವವನ್ನು ದಿನೇಶ್ ಕಾರ್ತಿಕ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

IND vs ZIM: ಕಿಶನ್‌, ತಿಲಕ್‌ ಅಬ್ಬರಕ್ಕೆ ನಡುಗಿದ ಜಿಂಬಾಬ್ವೆ, ಟಿ20ಐ ಸರಣಿ ವಶಪಡಿಸಿಕೊಂಡ ಭಾರತ!

ಜಿಂಬಾಬ್ವೆ ಎದುರು 2ನೇ ಪಂದ್ಯ ಗೆದ್ದು, ಟಿ20ಐ ಸರಣಿ ವಶಪಡಿಸಿಕೊಂಡ ಭಾರತ!

IND vs ZIM 2nd T20I Highlights: ಇಶಾನ್‌ ಕಿಶನ್‌ ಹಾಗೂ ತಿಲಕ್‌ ವರ್ಮಾ ಅವರ ಅಬ್ಬರದ ಬ್ಯಾಟಿಂಗ್‌ ಬಲದಿಂದ ಭಾರತ ತಂಡ, ಎರಡನೇ ಪಂದ್ಯದಲ್ಲಿಯೂ ಜಿಂಬಾಬ್ವೆ ಎದುರು 90 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು. ಆ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಟೀಮ್‌ ಇಂಡಿಯಾ 2-0 ಅಂತರದಲ್ಲಿ ಟಿ20ಐ ಸರಣಿಯನ್ನು ವಶಪಡಿಸಿಕೊಂಡಿತು. 44 ಎಸೆತಗಳಲ್ಲಿ 81 ರನ್‌ ಸಿಡಿಸಿದ ಇಶಾನ್‌ ಕಿಶನ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

IND vs ZIM: ಭಾರತದ ಪರ ಎರಡನೇ ಪಂದ್ಯದಲ್ಲಿ ಟಿ20ಐ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಯಶ್‌ ಠಾಕೂರ್‌ ಯಾರು?

ಭಾರತದ ಪರ ಟಿ20ಐ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಯಶ್‌ ಠಾಕೂರ್‌ ಯಾರು?

ಹರಾರೆ ಸ್ಪೋರ್ಟ್ಸ್‌ ಕ್ಲಬ್‌ನಲ್ಲಿ ಜುಲೈ 25 ರಂದು ಶನಿವಾರ ನಡೆದಿದ್ದ ಎರಡನೇ ಪಂದ್ಯದಲ್ಲಿ ಭಾರತದ ಪರ ಯುವ ವೇಗಿ ಯಶ್‌ ಠಾಕೂರ್‌ ಅಂತಾರಾಷ್ಟ್ರೀಯ ಟಿ20ಐ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ. ಮೊದಲನೇ ಪಂದ್ಯದಲ್ಲಿ ಟಿ20ಐ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಅಶೋಕ್‌ ಶರ್ಮಾ ಅವರ ಸ್ಥಾನದಲ್ಲಿ ಎರಡನೇ ಪಂದ್ಯವನ್ನು ಆಡುವ ಅವಕಾಶವನ್ನು ಯಶ್‌ ಠಾಕೂರ್‌ ಪಡೆದರು.

Jhandu Kumar: ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟ ತರಕಾರಿ ವ್ಯಾಪಾರಿ!

ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದ ತರಕಾರಿ ವ್ಯಾಪಾರಿ!

ಪ್ರಸ್ತುತ ನಡೆಯುತ್ತಿರುವ 2026ರ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತ ತನ್ನ ಖಾತೆಯನ್ನು ತೆರೆದಿದೆ. ಜುಲೈ 24 ರಂದು ಪುರುಷರ ಹೆವೀವೇಟ್‌ ವಿಭಾಗದಲ್ಲಿ ಪ್ಯಾರಾ ಪವರ್‌ ಲಿಫ್ಟರ್‌ ಝಂಡು ಕುಮಾರ್‌ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಅಂದಹಾಗೆ ಝಂಡು ಕುಮಾರ್‌ ಅವರ ಬಗ್ಗೆ ಇಲ್ಲಿ ಆಸಕ್ತದಾಯಕ ಅಂಶಗಳನ್ನು ಇಲ್ಲಿ ವಿವರಿಸಿದ್ದಾರೆ.

ʻ3 ವೈಫಲ್ಯದ ಬಳಿಕ ವೈಭವ್‌ ಸೂರ್ಯವಂಶಿಗೆ ಕೊಕ್‌ʼ-ಕೋಚ್‌ ಗಂಭೀರ್‌ ಮೇಲೆ ರೇಗಿದ ಕೆ ಶ್ರೀಕಾಂತ್!

ವೈಭವ್‌ ವಿಚಾರವಾಗಿ ಗೌತಮ್‌ ಗಂಭೀರ್‌ ವಿರುದ್ಧ ಕೆ ಶ್ರೀಕಾಂತ್‌ ಕಿಡಿ!

ಇಂಗ್ಲೆಂಡ್‌ನಲ್ಲಿ ಮೂರು ಟಿ20ಐ ಪಂದ್ಯಗಳ ವೈಫಲ್ಯದ ಬಳಿಕ ಯುವ ಆರಂಭಿಕ ಬ್ಯಾಟ್ಸ್‌ಮನ್‌ ವೈಭವ್‌ ಸೂರ್ಯವಂಶಿಯನ್ನು ಕೈ ಬಿಟ್ಟ ಭಾರತ ತಂಡದ ಹೆಡ್‌ ಕೋಚ್‌ ಗೌತಮ್‌ ಗಂಭೀರ್‌ ವಿರುದ್ದ ಮಾಜಿ ಸೆಲೆಕ್ಟರ್‌ ಕೃಷ್ಣಮಾಚಾರಿ ಶ್ರೀಕಾಂತ್‌ ಕಿಡಿಕಾರಿದ್ದಾರೆ. ಕೇವಲ 3 ಪಂದ್ಯಗಳ ವೈಫಲ್ಯದ ಬಳಿಕ ಕೈ ಬಿಟ್ಟಿರುವುದು ಅವರ ವಿಶ್ವಾಸವನ್ನು ಕುಗ್ಗಿಸಿದಂತೆ ಎಂದು ಅಭಿಪ್ರಾಯಪಟ್ಟಿದ್ದಾರೆ.

IND vs ZIM 2nd T20I: ಟಾಸ್‌ ಗೆದ್ದು ಭಾರತ ತಂಡವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಿದ ಜಿಂಬಾಬ್ವೆ!

IND vs ZIM 2nd T20I: ಟಾಸ್‌ ಸೋತ ಭಾರತ ತಂಡ ಮೊದಲ ಬ್ಯಾಟಿಂಗ್!

IND vs ZIM 2nd T20I Match Toss, Playing XI: ಹರಾರೆ ಸ್ಪೋರ್ಟ್ಸ್‌ ಕ್ಲಬ್‌ನಲ್ಲಿ ಇದೀಗ ನಡೆಯುತ್ತಿರುವ ಎರಡನೇ ಟಿ20ಐ ಪಂದ್ಯದಲ್ಲಿ ಭಾರತ ಹಾಗೂ ಜಿಂಬಾಬ್ವೆ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಜಿಂಬಾಬ್ವೆ ನಾಯಕ ಸಿಕಂದರ್‌ ರಾಝಾ ಅವರು ಮೊದಲು ಬೌಲಿಂಗ್‌ ಆರಿಸಿಕೊಂಡಿದ್ದಾರೆ. ಆ ಮೂಲಕ ಭಾರತ ತಂಡವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ.

IND vs ZIM: ಮೊದಲನೇ ಟಿ20ಐ ಗೆದ್ದರೂ ಭಾರತ ತಂಡವನ್ನು ಪ್ರಶ್ನಿಸಿದ ಆಕಾಶ್‌ ಚೋಪ್ರಾ!

ಮೊದಲನೇ ಟಿ20ಐ ಗೆದ್ದರೂ ಭಾರತ ತಂಡವನ್ನು ಪ್ರಶ್ನಿಸಿದ ಆಕಾಶ್‌ ಚೋಪ್ರಾ!

IND vs ZIM: ಮೂರು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಭಾರತ ತಂಡ ಗೆಲುವು ಸಾಧಿಸಿದರೂ, ಮಾಜಿ ಭಾರತದ ಟೆಸ್ಟ್‌ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ತಂಡದ ಟೀಮ್‌ ಮ್ಯಾನೇಜ್‌ಮೆಂಟ್‌ನ ಪ್ಲೇಯಿಂಗ್‌ XI ನಿರ್ಧಾರದ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ.

ರೋಹಿತ್‌ ಶರ್ಮಾ ನಿವೃತ್ತಿ ವದಂತಿಗಳಿಗೆ ತೆರೆ ಎಳೆದ ಬಿಸಿಸಿಐ ಉಪಾಧ್ಯಕ್ಷ ರಾಜೀವ್‌ ಶುಕ್ಲಾ!

ರೋಹಿತ್‌ ಶರ್ಮಾ ನಿವೃತ್ತಿ ವದಂತಿಗಳಿಗೆ ತೆರೆ ಎಳೆದ ಬಿಸಿಸಿಐ ಉಪಾಧ್ಯಕ್ಷ!

ರೋಹಿತ್‌ ಶರ್ಮಾ ಅವರ ಏಕದಿನ ಕ್ರಿಕೆಟ್‌ ನಿವೃತ್ತಿಗೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್‌ ಶುಕ್ಲಾ ತೆರೆ ಎಳೆದಿದ್ದಾರೆ. ರೋಹಿತ್‌ ಶರ್ಮಾ ಅವರು ಭಾರತ ತಂಡದ ಭಾಗವಾಗಿ ಉಳಿಯಲಿದ್ದಾರೆ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡುವುದನ್ನು ಮುಂದುವರಿಸಲಿದ್ದಾರೆಂದು ಅವರು ತಿಳಿಸಿದ್ದಾರೆ. ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯೇ ರೋಹಿತ್‌ ಪಾಲಿಗೆ ಕೊನೆ ಎಂದು ಹೇಳಲಾಗುತ್ತಿತ್ತು. ಆದರೆ, ಅವರು ಆ ಪಂದ್ಯದಲ್ಲಿ ಶತಕ ಸಿಡಿಸಿ ಎಲ್ಲಾ ವದಂತಿಗಳನ್ನು ತಳ್ಳಿ ಹಾಕಿದ್ದರು.

Breaking News: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಧರ್ಮೇಂದ್ರ ಪ್ರಧಾನ್‌!

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಧರ್ಮೇಂದ್ರ ಪ್ರಧಾನ್‌!

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರವಾದ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್‌ ಅವರು ಜುಲೈ 25 ರಂದು ಶನಿವಾರಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) ವಿವಾದದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಹಾಗೂ ಹೆಚ್ಚುತ್ತಿರುವ ರಾಜಕೀಯ ಒತ್ತಡದ ನಡುವೆ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

IND vs ZIM: ಮಯಾಂಕ್‌ ಯಾದವ್‌, ಅಶೋಕ ಶರ್ಮಾ ಬಗ್ಗೆ ದೊಡ್ಡ ಭವಿಷ್ಯ ನುಡಿದ ಸುನೀಲ್‌ ಜೋಶಿ!

ಮಯಾಂಕ್‌ ಯಾದವ್‌, ಅಶೋಕ ಶರ್ಮಾ ಬಗ್ಗೆ ದೊಡ್ಡ ಭವಿಷ್ಯ ನುಡಿದ ಜೋಶಿ!

ಯುವ ವೇಗದ ಬೌಲರ್‌ಗಳಾದ ಮಯಾಂಕ್ ಯಾದವ್ ಮತ್ತು ಅಶೋಕ್ ಶರ್ಮಾ ಅವರು ಭಾರತದ ವೇಗದ ಬೌಲಿಂಗ್ ವಿಭಾಗಕ್ಕೆ ಪ್ರಮುಖ ಸೇರ್ಪಡೆಗಳು ಎಂದು ಜಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯಕ್ಕೂ ಮುನ್ನ ಭಾರತ ತಂಡದ ಹಂಗಾಮಿ ಬೌಲಿಂಗ್ ಕೋಚ್ ಸುನಿಲ್ ಜೋಶಿ ಬಣ್ಣಿಸಿದ್ದಾರೆ. ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್ ದೃಷ್ಟಿಯಿಂದ ವೇಗದ ಬೌಲರ್‌ಗಳ ಹೆಚ್ಚಿನ ಆಯ್ಕೆಗಳನ್ನು ಹೊಂದುವುದು ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದ್ದಾರೆ.

ಇಬ್ಬರು ಹೊಸಬರಿಗೆ ಚೊಚ್ಚಲ ಸ್ಥಾನ? ಶ್ರೀಲಂಕಾ ಟೆಸ್ಟ್‌ ಸರಣಿಗೆ ಭಾರತ ಸಂಭಾವ್ಯ ಆಟಗಾರರ ತಂಡ!

ಶ್ರೀಲಂಕಾ ಟೆಸ್ಟ್‌ ಸರಣಿಗೆ ಭಾರತ ಸಂಭಾವ್ಯ ಆಟಗಾರರ ತಂಡದ ವಿವರ!

India's Likely Test Squad for Sri lanka series: 2025-27ರ ಸಾಲಿನ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಋತುವಿನಲ್ಲಿ ಎರಡು ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲು ಶುಭಮನ್‌ ಗಿಲ್‌ ನಾಯಕತ್ವದ ಭಾರತ ತಂಡ, ಶ್ರೀಲಂಕಕ್ಕೆ ಪ್ರವಾಸ ಕೈಗೊಳ್ಳಲಿದೆ. ಹಾಗಾಗಿ ಅತಿ ಶೀರ್ಘದಲ್ಲಿ ಭಾರತ ಟೆಸ್ಟ್‌ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಈ ಸರಣಿಯಲ್ಲಿ ಭಾರತ ತಂಡದ ಪರ ಇಬ್ಬರು ಯುವ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಬೆನ್‌ ಸ್ಟೋಕ್ಸ್‌ ನಿವೃತ್ತಿ ಬೆನ್ನಲ್ಲೆ ಇಂಗ್ಲೆಂಡ್‌ ಟೆಸ್ಟ್‌ ತಂಡದ ನಾಯಕತ್ವಕ್ಕೆ ಜೋ ರೂಟ್‌ ಮರಳಲು ಸಜ್ಜು!

ಇಂಗ್ಲೆಂಡ್‌ ಟೆಸ್ಟ್‌ ತಂಡದ ನಾಯಕತ್ವಕ್ಕೆ ಮರಳಲು ಜೋ ರೂಟ್‌ ಸಜ್ಜು!

Joe Root Likely to retun England Test Captaincy: ಬೆನ್‌ ಸ್ಟೋಕ್ಸ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ಇಂಗ್ಲೆಂಡ್‌ ಟೆಸ್ಟ್‌ ತಂಡದ ನಾಯಕತ್ವಕ್ಕೆ ಜೋ ರೂಟ್‌ ಮರಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯ ಸೋಲಿನ ಬಳಿಕ ಇಂಗ್ಲೆಂಡ್‌ ಟೆಸ್ಟ್‌ ತಂಡದಲ್ಲಿ ಈ ಬೆಳವಣಿಗೆಗೆಳು ನಡೆದಿವೆ.

ರಾಜಸ್ಥಾನ್‌ ರಾಯಲ್ಸ್‌ ತೊರೆದು ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಸೇರಲು ಬಲವಾದ ಕಾರಣ ತಿಳಿಸಿದ ಸಂಜು ಸ್ಯಾಮ್ಸನ್‌!

ರಾಜಸ್ಥಾನ್‌ ತೊರೆದು ಸಿಎಸ್‌ಕೆಗೆ ಸೇರಲು ಕಾರಣ ತಿಳಿಸಿದ ಸಂಜು ಸ್ಯಾಮ್ಸನ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಆರಂಭಕ್ಕೂ ಮುನ್ನ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ತೊರೆದು ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಸೇರ್ಪಡೆಯಾಗಲು ಕಾರಣವೇನೆಂದು ಸಂಜು ಸ್ಯಾಮ್ಸನ್‌ ಬಹಿರಂಗ ಪಡಿಸಿದ್ದಾರೆ. ಅಲ್ಲದೆ ಸಿಎಸ್‌ಕೆ ತಂಡದಲ್ಲಿ ನಾಯಕತ್ವವನ್ನು ಬಯಸಿ ಇಲ್ಲಿಗೆ ಬರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ತಾವು ಓದಿದ ಕಾಲೇಜಿನಲ್ಲಿ ಇಂಟರ್‌ ಕಾಲೇಜು ಹಾಕಿ ಟೂರ್ನಿಗೆ ಚಾಲನೆ ನೀಡಿದ ರಾಹುಲ್‌ ದ್ರಾವಿಡ್!

ತಾವು ಓದಿದ ಕಾಲೇಜಿನಲ್ಲಿ ಹಾಕಿ ಟೂರ್ನಿಗೆ ಚಾಲನೆ ನೀಡಿದ ದ್ರಾವಿಡ್‌!

ತಾವು ಓದಿ ಬೆಳೆದ ಸಂತ ಜೋಸೆಫ್‌ ವಾಣಿಜ್ಯ ಕಾಲೇಜಿನಲ್ಲಿ ಆತಿಥಿಯಾಗಿ ಭಾಗವಹಿಸಿದ ಭಾರತೀಯ ಕ್ರಿಕೆಟ್‌ ದಿಗ್ಗಜ ರಾಹುಲ್‌ ದ್ರಾವಿಡ್‌, ಇಂಟರ್‌ ಕಾಲೇಜು ಹಾಕಿ ಟೂರ್ನಿಯನ್ನು ಉದ್ಘಾಟಿಸಿದ್ದಾರೆ ಹಾಗೂ ಹಾಕಿ ಆಟಗಾರರು ಹಾಗೂ ವಿದ್ಯಾರ್ಥಿಗಳಿಗೆ ಮಹತ್ವದ ಸಂದೇಶವನ್ನು ರವಾನಿಸಿದ್ದಾರೆ.

CWG 2026: ಕಾಮನ್‌ವೆಲ್ತ್‌ ಕ್ರೀಡಾಕೂಟದಿಂದ ತುಲಿಕಾ ಮಾನ್‌, ಭಾರತಕ್ಕೆ ಮತ್ತೊಂದು ಹಿನ್ನಡೆ!

CWG 2026: ಕಾಮನ್‌ವೆಲ್ತ್‌ ಕ್ರೀಡಾಕೂಟದಿಂದ ಭಾರತದ ತುಲಿಕಾ ಮಾನ್‌ ಔಟ್‌!

ಭಾರತದ ಒಲಿಂಪಿಯನ್ ಜೂಡೋ ಪಟು ತುಲಿಕಾ ಮಾನ್ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ತಾತ್ಕಾಲಿಕವಾಗಿ ಅಮಾನತುಗೊಳಿಸಿರುವ ಹಿನ್ನೆಲೆಯಲ್ಲಿ ಭಾರತದ ಕಾಮನ್‌ವೆಲ್ತ್ ಗೇಮ್ಸ್ ತಂಡದಿಂದ ಕೈಬಿಡಲಾಗಿದೆ. ನಾಡಾ ವಿಧಿಸಿರುವ ತಾತ್ಕಾಲಿಕ ಅಮಾನತು ಕಾರಣದಿಂದ ತುಲಿಕಾ ಮಾನ್ ಅವರಿಗೆ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶ ತಪ್ಪಿದೆ.

IND vs ZIM: ರಜತ್‌ ಪಾಟಿದಾರ್‌ಗೆ ಭಾರತ ತಂಡದಲ್ಲಿ ಸ್ಥಾನ ಏಕೆ ನೀಡಿಲ್ಲ? ಹನುಮ ವಿಹಾರಿ ಪ್ರಶ್ನೆ!

ಭಾರತ ತಂಡದಲ್ಲಿ ರಜತ್‌ ಪಾಟಿದಾರ್‌ಗೆ ಸ್ಥಾನ ಯಾಕಿಲ್ಲ? ಹನುಮ ವಿಹಾರಿ!

ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಯ ಭಾರತ ತಂಡದಲ್ಲಿ ರಜತ್‌ ಪಾಟಿದಾರ್‌ಗೆ ಅವಕಾಶ ನೀಡದ ಬಗ್ಗೆ ಮಾಜಿ ಕ್ರಿಕೆಟಿಗ ಹನುಮ ವಿಹಾರಿ ಪ್ರಶ್ನೆ ಮಾಡಿದ್ದಾರೆ. 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ತಮ್ಮ ಅದ್ಭುತ ಫಾರ್ಮ್‌ ಹೊರತಾಗಿಯೂ ಅವರನ್ನು ಬಿಸಿಸಿಐ ಆಯ್ಕೆದಾರರು ಕಡೆಗಣಿಸಿದ್ದಾರೆಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

IND vs ZIM: ಭಾರತ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿದ ಹಾದಿಯ ಬಗ್ಗೆ ಪ್ರತಿಕ್ರಿಯಿಸಿದ ಮಯಾಂಕ್‌ ಯಾದವ್!

ಭಾರತ ತಂಡಕ್ಕೆ ಮರಳಿದ ಬಗ್ಗೆ ಪ್ರತಿಕ್ರಿಯಿಸಿದ ಮಯಾಂಕ್‌ ಯಾದವ್‌!

ಜಿಂಬಾಬ್ವೆ ವಿರುದ್ಧ ಮೊದಲನೇ ಟಿ20ಐ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಗೆಲುವು ಪಡೆಯಿತು. ಆ ಮೂಲಕ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಟೀಮ್‌ ಇಂಡಿಯಾ 1-0 ಮುನ್ನಡೆ ಪಡೆದಿದೆ. ಈ ಪಂದ್ಯದಲ್ಲಿ ಮಾರಕ ದಆಳಿ ಎರಡು ವಿಕೆಟ್‌ ಕಿತ್ತ ಮಯಾಂಕ್‌ ಯಾದವ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

IND vs ZIM: ಸತತ ಎಂಟನೇ ಬಾರಿ ಟಾಸ್‌ ಗೆದ್ದು 87 ವರ್ಷಗಳ ದಾಖಲೆಯನ್ನು ಸರಿಗಟ್ಟಿದ ಶ್ರೇಯಸ್‌ ಅಯ್ಯರ್‌!

87 ವರ್ಷಗಳ ದಾಖಲೆಯನ್ನು ಸರಿಗಟ್ಟಿದ ಶ್ರೇಯಸ್‌ ಅಯ್ಯರ್‌!

ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಏಳು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಶ್ರೇಯಸ್‌ ಅಯ್ಯರ್ ಟಿ20ಐ ಕ್ರಿಕೆಟ್‌ನಲ್ಲಿ ನಾಯಕನಾಗಿ ತಮ್ಮ ಮೊದಲ ಗೆಲುವು ದಾಖಲಿಸಿದರು. ಈ ಪಂದ್ಯದಲ್ಲಿ ಟಾಸ್ ಗೆದ್ದ ಅವರು, ಸತತ ಎಂಟನೇ ಬಾರಿ ಟಾಸ್ ಗೆದ್ದ ನಾಯಕ ಎಂಬ ಅಪರೂಪದ ಸಾಧನೆಗೆ ಭಾಜನರಾಗಿದ್ದಾರೆ. ಇದರೊಂದಿಗೆ ಅವರು 87 ವರ್ಷಗಳ ಹಿಂದಿನ ವಿಶ್ವದಾಖಲೆಯನ್ನು ಸರಿಗಟ್ಟಿದ್ದಾರೆ.

NEET Protests: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ವಿಶೇಷ ಸಂದೇಶ ರವಾನಿಸಿದ ಶುಭಮನ್‌ ಗಿಲ್!

‌ ವಿದ್ಯಾರ್ಥಿಗಳ ನೀಟ್‌ ಪ್ರತಿಭಟನೆ ಬಗ್ಗೆ ಶುಭಮನ್‌ ಗಿಲ್‌ ಪ್ರತಿಕ್ರಿಯೆ!

ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಟೀಮ್‌ ಇಂಡಿಯಾ ನಾಯಕ ಶುಭಮನ್‌ ಗಿಲ್‌ ಪ್ರತಿಕ್ರಿಯಿಸಿದ್ದಾರೆ. ಯುವಜನರಿಗೆ ಹೆಚ್ಚಿನ ಅವಕಾಶಗಳು ದೊರೆಯಬೇಕು ಎಂದು ಕರೆ ನೀಡಿದ ಅವರು, ಸಹಾನುಭೂತಿ, ಪರಸ್ಪರ ಗೌರವ, ಶಿಕ್ಷಣ ಹಾಗೂ ಶಾಂತಿಯುತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಮಹತ್ವವನ್ನು ಒತ್ತಿ ಹೇಳಿದ್ದಾರೆ.

IND vs ZIM: 15ನೇ ವಯಸ್ಸಿನ ಚೊಚ್ಚಲ ಅರ್ಧಶತಕ ಬಾರಿಸಿ ವಿಶ್ವ ದಾಖಲೆ ಬರೆದ ವೈಭವ್‌ ಸೂರ್ಯವಂಶಿ!

ಚೊಚ್ಚಲ ಅರ್ಧಶತಕ ಬಾರಿಸಿ ವಿಶ್ವ ದಾಖಲೆ ಬರೆದ ವೈಭವ್‌ ಸೂರ್ಯವಂಶಿ!

ಭಾರತ ತಂಡದ ಉದಯೋನ್ಮುಖ ಬ್ಯಾಟ್ಸ್‌ಮನ್‌ ವೈಭವ್‌ ಸೂರ್ಯವಂಶಿ ಅವರಿಂದ ಕೊನೆಗೂ ಚೊಚ್ಚಲ ಅರ್ಧಶತಕ ಮೂಡಿಬಂದಿದೆ. ಜಿಂಬಾಬ್ವೆ ವಿರುದ್ಧ ಮೊದಲನೇ ಟಿ20ಐ ಪಂದ್ಯದಲ್ಲಿ ಭರ್ಜರಿ ಬ್ಯಾಟ್‌ ಮಾಡಿದ ವೈಭವ್‌18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಆ ಮೂಲಕ ಟಿ20ಐ ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆಯನ್ನು ಬರೆದಿದ್ದಾರೆ.

IND vs ZIM: ವೈಭವ್‌ ಚೊಚ್ಚಲ ಅರ್ಧಶತಕ, ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲಿ ಭಾರತಕ್ಕೆ ಮೊದಲ ಜಯ!

ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲಿ ಭಾರತಕ್ಕೆ ಮೊದಲ ಜಯದ ನಗೆ!

IND vs ZIM 1st T20I Highlights: ಬೌಲರ್‌ಗಳ ಪರಿಣಾಮಕಾರಿ ಬೌಲಿಂಗ್‌ ಹಾಗೂ ವೈಭವ್‌ ಸೂರ್ಯವಂಶಿ ಅವರ ಚೊಚ್ಚಲ ಅರ್ಧಶತಕದ ಬಲದಿಂದ ಭಾರತ ತಂಡ, ಜಿಂಬಾಬ್ವೆ ಎದುರು ಮೊದಲನೇ ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲಿ ಭಾರತ ತಂಡ ಮೊದಲ ಗೆಲುವು ದಾಖಲಿಸಿತು.

2025-27ರ ಸಾಲಿನ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ಗೆ ದಿನಾಂಕ, ಸ್ಥಳ ಪ್ರಕಟಿಸಿದ ಐಸಿಸಿ!

4ನೇ ಆವೃತ್ತಿಯ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ಗೆ ದಿನಾಂಕ, ಸ್ಥಳ ಪ್ರಕಟ!

2025-27ರ ಸಾಲಿನ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ ಪಂದ್ಯದ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಜೆಟ್‌ ಕೌನ್ಸಿಲ್‌ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಫೈನಲ್‌ ಪಂದ್ಯವನ್ನು 2027ರ ಜೂನ್‌ 9 ರಿಂದ 13 ವರೆಗೆ ಲಂಡನ್‌ ದಿ ಓವಲ್‌ನಲ್ಲಿ ನಡೆಯಲಿದೆ. ಆ ಮೂಲಕ ಈ ಬಾರಿಯೂ ಇಂಗ್ಲೆಂಡ್‌ ಫೈನಲ್‌ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ.

IND vs ZIM: ಭಾರತದ ಪರ ಟಿ20ಐ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಅಶೋಕ್‌ ಶರ್ಮಾ ಯಾರು?

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಅಶೋಕ್‌ ಶರ್ಮಾ ಯಾರು?

ಭಾರತ ಹಗೂ ಜಿಂಬಾಬ್ವೆ ನಡುವಣ ಮೂರು ಪಂದ್ಯಗಳ ಟಿ20ಐ ಸರಣಿಯ ಮೊದಲನೇ ಪಂದ್ಯ ಇದೀಗ ಹರಾರೆ ಸ್ಪೋರ್ಟ್ಸ್‌ ಕ್ಲಬ್‌ನಲ್ಲಿ ನಡೆಯುತ್ತಿದೆ. ಮೊದಲನೇ ಪಂದ್ಯದ ಮೂಲಕ ಭಾರತ ತಂಡದ ಅಶೋಕ್‌ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ. ಅಂದ ಹಾಗೆ ಅಶೋಕ್‌ ಶರ್ಮಾ ಅವರ ಬಗ್ಗೆ ಇಲ್ಲಿ ಹೆಚ್ಚಿನ ಮಾಹಿತಯನ್ನು ವಿವರಿಸಲಾಗಿದೆ.

Loading...