ಸೂರ್ಯ ಔಟ್; ಭಾರತ ಟಿ20 ತಂಡಕ್ಕೆ ಶ್ರೇಯಸ್ ಅಯ್ಯರ್ ನಾಯಕ?
ತಮ್ಮ ನಾಯಕತ್ವದಲ್ಲಿ ಭಾರತ ತಂಡಕ್ಕೆ 2026ರ ಟಿ20 ವಿಶ್ವಕಪ್ ಗೆದ್ದುಕೊಟ್ಟ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಅವರಿಗೆ ಗೇಟ್ ಪಾಸ್ ನೀಡಲು ಬಿಸಿಸಿಐ ನಿರ್ಧಾರ ತೆಗೆದುಕೊಂಡಿದ್ದು, ಚುಟುಕು ತಂಡದ ನಾಯಕತ್ವದ ಜವಾಬ್ದಾರಿಯನ್ನು ಶ್ರೇಯಸ್ ಅಯ್ಯರ್ ನೀಡುವ ಸಾಧ್ಯತೆ ಇದೆ. 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಹಾಗೂ ಟಿ20 ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ನಿರ್ಧಾರ ತೆಗೆದುಕೊಂಡಿದೆ ಎಂದು ವರದಿಯಾಗಿದೆ.