ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Ramesh Kote

[email protected]

Articles
ʻಅವರಿಗೆ ಯಾವುದೂ ಸುಲಭವಾಗಿ ಸಿಕ್ಕಿಲ್ಲʼ: ಸೂರ್ಯಕುಮಾರ್‌ಗೆ ಕೊಕ್‌ ನೀಡಿದ ಬಗ್ಗೆ ರೋಹಿತ್‌ ಶರ್ಮಾ ಪ್ರತಿಕ್ರಿಯೆ!

ʻಸೂರ್ಯಕುಮಾರ್‌ಗೆ ಯಾವುದೂ ಸುಲಭವಾಗಿ ಲಭಿಸಿಲ್ಲʼ: ರೋಹಿತ್‌ ಶರ್ಮಾ!

ಭಾರತ ಟಿ20 ತಂಡದಿಂದ ಸೂರ್ಯಕುಮಾರ್‌ ಯಾದವ್‌ ಅವರನ್ನು ಕೈ ಬಿಟ್ಟಿರುವ ಬಗ್ಗೆ ಟೀಮ್‌ ಇಂಡಿಯಾ ಮಾಜಿ ನಾಯಕ ಹಾಗೂ ಹಿಟ್‌ಮ್ಯಾನ್‌ ರೋಹಿತ್‌ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ. ಮುಂಬೈ ಟಿ20 ಲೀಗ್‌ ಪಂದ್ಯದ ವೇಳೆ ಪ್ರತಿಕ್ರಿಯಿಸಿದ ಅವರು, ಸೂರ್ಯಕುಮಾರ್‌ ಯಾದವ್‌ ಅವರಿಗೆ ಭಾರತೀಯ ಕ್ರಿಕೆಟ್‌ನಲ್ಲಿ ಯಾವುದೂ ಕೂಡ ಸುಲಭವಾಗಿ ಲಭಿಸಿಲ್ಲ ಎಂದು ಹೇಳಿದ್ದಾರೆ.

ಗೌತಮ್‌ ಗಂಭೀರ್‌ ಇಟ್ಟಿರುವ ನಂಬಿಕೆಯಿಂದ ಉತ್ತಮ ಪ್ರದರ್ಶನ ತೋರಲು ಸಾಧ್ಯವಾಯಿತು: ಸಾಯಿ ಸುದರ್ಶನ್‌!

ತಮ್ಮ ಬ್ಯಾಟಿಂಗ್‌ ಸಕ್ಸಸ್‌ಗೆ ಗಂಭೀರ್‌ ಕಾರಣ ಎಂದ ಸುದರ್ಶನ್!

ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್‌ ಪಂದ್ಯದ ಮೊದಲನೇ ದಿನ 81 ರನ್‌ ಗಳಿಸಿದ ಸಾಯಿ ಸುದರ್ಶನ್‌ ಭಾರತ ತಂಡದ ನಂಬಿಕೆಯನ್ನು ಉಳಿಸಿಕೊಂಡರು. ಮೊದಲನೇ ದಿನದಾಟದ ಅಂತ್ಯಕ್ಕೆ ತಮ್ಮ ಬ್ಯಾಟಿಂಗ್‌ ಪ್ರದರ್ಶನದ ಹಿಂದೆ ಹೆಡ್‌ ಕೋಚ್‌ ಗೌತಮ್‌ ಗಂಭೀರ್‌ ಅವರ ಬೆಂಬಲ ಹಾಗೂ ನಂಬಿಕೆ ಇದೆ ಎಂದು ಹೇಳಿಕೊಂಡಿದ್ದಾರೆ.

15ನೇ ವಯಸ್ಸಿನಲ್ಲಿ ಭಾರತ ತಂಡಕ್ಕೆ ಆಯ್ಕೆಯಾಗುವ ಮೂಲಕ ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ!

ಭಾರತ ತಂಡಕ್ಕೆ ಆಯ್ಕೆಯಾಗಿ ತೆಂಡೂಲ್ಕರ್‌ ದಾಖಲೆ ಮುರಿದ ವೈಭವ್!

ಐರ್ಲೆಂಡ್‌ ಹಾಗೂ ಇಂಗ್ಲೆಂಡ್‌ ವಿರುದ್ಧದ ಟಿ20ಐ ಸರಣಿಗಳ ಭಾರತ ತಂಡಕ್ಕೆ ಆಯ್ಕೆಯಾಗುವ ಮೂಲಕ 15ನೇ ವಯಸ್ಸಿನ ವೈಭವ್‌ ಸೂರ್ಯವಂಶಿ, ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಅವರ 37 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ಈ ದಾಖಲೆಯ ಬಗ್ಗೆ ಇಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ.

ವೈಭವ್‌ಗೆ ಇಷ್ಟು ಬೇಗ ಚಾನ್ಸ್‌ ಏಕೆ? ಸೂರ್ಯಕುಮಾರ್‌ಗೆ ಕೊಕ್‌ ನೀಡಿದ್ದೇಕೆ? ಬಿಸಿಸಿಐಗೆ ಅಶ್ವಿನ್‌ ಪ್ರಶ್ನೆ!

ʻಸೂರ್ಯಕುಮಾರ್‌ಗೆ ಅನ್ಯಾಯವಾಗಿದೆʼ: ಬಿಸಿಸಿಐ ವಿರುದ್ಧ ಅಶ್ವಿನ್‌ ಕಿಡಿ!

ವೈಭವ್‌ ಸೂರ್ಯವಂಶಿ ಇನ್ನೂ ಚಿಕ್ಕ ಹುಡುಗನಾಗಿದ್ದು, ಅವರು ಭಾರತ ತಂಡಕ್ಕೆ ಆಡಲು ಇನ್ನಷ್ಟು ದಿನಗಳ ಕಾಲ ಕಾಯಬಹುದಿತ್ತು ಹಾಗೂ ಸೂರ್ಯಕುಮಾರ್‌ ಯಾದವ್‌ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬೇಕಾಗಿತ್ತು ಎಂದು ಸ್ಪಿನ್‌ ದಿಗ್ಗಜ ವೈಭವ್‌ ಸೂರ್ಯವಂಶಿ ತಿಳಿಸಿದ್ದಾರೆ.

ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡ ಬಗ್ಗೆ ಸೂರ್ಯಕುಮಾರ್‌ ಯಾದವ್‌ ಪ್ರತಿಕ್ರಿಯೆ!

ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡ ಬಗ್ಗೆ ಸೂರ್ಯ ಪ್ರತಿಕ್ರಿಯೆ!

ಭಾರತದ ಟಿ20 ತಂಡದ ನೂತನ ನಾಯಕನಾಗಿ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಿರುವ ಹಿನ್ನೆಲೆಯಲ್ಲಿ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಟಿ20ಐ ತಂಡದ ನಾಯಕತ್ವದ ಜವಾಬ್ದಾರಿಯನ್ನು ಶ್ರೇಯಸ್ ಅಯ್ಯರ್ ಅವರಿಗೆ ವಹಿಸಿದೆ. ಡಿಸೆಂಬರ್ 2023ರಿಂದ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡದಿದ್ದ ಅಯ್ಯರ್ ಅವರಿಗೆ ಇದೀಗ ಮಹತ್ವದ ಜವಾಬ್ದಾರಿ ನೀಡಲಾಗಿದೆ.

ಸತತ ಎರಡು ಐಪಿಎಲ್‌ ಗೆದ್ದರೂ ರಜತ್‌ ಪಾಟಿದಾರ್‌ಗೆ ಭಾರತ ಟಿ20 ತಂಡದಲ್ಲಿ ಏಕೆ ಸ್ಥಾನವಿಲ್ಲ?

ರಜತ್‌ ಪಾಟಿದಾರ್‌ಗೆ ಭಾರತ ಟಿ20 ತಂಡದಲ್ಲಿ ಏಕೆ ಸ್ಥಾನವಿಲ್ಲ?

India's T20I Squad: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಸತತ ಎರಡು ಬಾರಿ ಚಾಂಪಿಯನ್‌ ಮಾಡಿದ ಹೊರತಾಗಿಯೂ ರಜತ್‌ ಪಾಟಿದಾರ್‌ ಅವರಿಗೆ ಭಾರತ ಟಿ20ಐ ತಂಡದಲ್ಲಿ ಸ್ಥಾನವನ್ನು ನೀಡಿಲ್ಲ. ಇದಕ್ಕೆ ಕಾರಣವೇನೆಂದು ಬಿಸಿಸಿಐ ಚೀಫ್‌ ಸೆಲೆಕ್ಟರ್‌ ಅಜಿತ್‌ ಅಗರ್ಕರ್‌ ವಿವರಿಸಿದ್ದಾರೆ.

IND vs AFG: ತಮ್ಮ ತವರು ಅಭಿಮಾನಿಗಳ ಎದುರು 11ನೇ ಟೆಸ್ಟ್‌ ಶತಕ ಪೂರೈಸಿದ ಶುಭಮನ್‌ ಗಿಲ್!

IND vs AFG: 11ನೇ ಟೆಸ್ಟ್‌ ಶತಕ ಪೂರೈಸಿದ ಶುಭಮನ್‌ ಗಿಲ್!

Shubman Gill century: 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿನ ಫಾರ್ಮ್‌ ಅನ್ನು ಇದೀಗ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿಯೂ ಶುಭಮನ್‌ ಗಿಲ್‌ ಮುಂದುವರಿಸಿದ್ದಾರೆ. ಅವರು ಪಂದ್ಯದ ಮೊದಲನೇ ದಿನ ತಮ್ಮ ಟೆಸ್ಟ್‌ ವೃತ್ತಿ ಜೀವನದ 11ನೇ ಶತಕವನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಭಾರತ ತಂಡ ದೊಡ್ಡ ಮೊತ್ತವನ್ನು ಕಲೆ ಹಾಕಲು ನೆರವು ನೀಡಿದ್ದಾರೆ.

ಭಾರತ ಟಿ20 ತಂಡದಿಂದ ಸೂರ್ಯಕುಮಾರ್‌ ಯಾದವ್‌ಗೆ ಕೊಕ್‌ ನೀಡಲು ಕಾರಣವೇನು?

ಭಾರತ ತಂಡದಿಂದ ಸೂರ್ಯಕುಮಾರ್‌ಗೆ ಕೊಕ್‌ ನೀಡಲು ಕಾರಣವೇನು?

ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳ ಟಿ20ಐ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, 2026ರ ಐಸಿಸಿ ಟಿ20 ವಿಶ್ವಕಪ್‌ ಗೆಲುವಿನ ಹೊರತಾಗಿಯೂ ಸೂರ್ಯಕುಮಾರ್‌ ಯಾದವ್‌ ಅವರನ್ನು ನಾಯಕತ್ವ ಹಾಗೂ ತಂಡದಿಂದ ಕೊಕ್‌ ನೀಡಲಾಗಿದೆ. ಶ್ರೇಯಸ್‌ ಅಯ್ಯರ್‌ಗೆ ನಾಯಕತ್ವ ನೀಡಲಾಗಿದ್ದು, ಸೂರ್ಯಕುಮಾರ್‌ ಅವರನ್ನು ಕೈ ಬಿಡಲು ಕಾರಣವೇನೆಂದು ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್‌ ಅಗರ್ಕರ್‌ ತಿಳಿಸಿದ್ದಾರೆ.

IND vs AFG: ತಮ್ಮ 12ನೇ ಟೆಸ್ಟ್‌ ಶತಕ ಸಿಡಿಸಿ ಸಂಭ್ರಮಿಸಿದ ಕನ್ನಡಿಗ ಕೆಎಲ್‌ ರಾಹುಲ್‌!

ತಮ್ಮ 12ನೇ ಟೆಸ್ಟ್‌ ಶತಕ ಸಿಡಿಸಿ ಸಂಭ್ರಮಿಸಿದ ಕೆಎಲ್‌ ರಾಹುಲ್‌!

KL Rahul Scored 12th Test Hundred: ಅಫ್ಘಾನಿಸ್ತಾನ ವಿರುದ್ಧ ಪ್ರಸ್ತುತ ನಡೆಯುತ್ತಿರುವ ಏಕೈಕ ಟೆಸ್ಟ್‌ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ ಕೆಎಲ್‌ ರಾಹುಲ್‌, ತಮ್ಮ ಟೆಸ್ಟ್‌ ವೃತ್ತಿ ಜೀವನದ 12ನೇ ಶತಕವನ್ನು ಬಾರಿಸಿದ್ದಾರೆ. ಆ ಮೂಲಕ ಭಾರತದ ಪರ ಆರಂಭಿಕ ಬ್ಯಾಟ್ಸ್‌ಮನ್‌ ಆಗಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ನಾಲ್ಕನೇ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

ಐಪಿಎಲ್‌ ಫೈನಲ್‌ ಬಳಿಕ ಭೀಕರ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರಾಗಿದ್ದ ಮೈಕಲ್‌ ಕ್ಲಾರ್ಕ್‌!

ಐಪಿಎಲ್‌ ಫೈನಲ್‌ ಬಳಿಕ ಅಪಘಾತ, ಪ್ರಾಣಾಪಾಯದಿಂದ ಕ್ಲಾರ್ಕ್‌ ಪಾರು!

2026ರ ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಿದ ಬಳಿಕ ವಿಮಾನ ನಿಲ್ದಾಣದತ್ತ ತೆರಳುತ್ತಿದ್ದ ವೇಳೆ ಆಸ್ಟ್ರೇಲಿಯಾದ ಮಾಜಿ ನಾಯಕ ಮೈಕಲ್‌ ಕ್ಲಾರ್ಕ್‌ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಕ್ಲಾರ್ಕ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಅವರ ದೇಹದ ಕೆಲ ಭಾಗಗಳಲ್ಲಿ ಮೂಗೇಟುಗಳಾಗಿವೆ. ಈ ಬಗ್ಗೆ ಸ್ವತಃ ಆಸೀಸ್‌ ಮಾಜಿ ನಾಯಕ ಬಹಿರಂಗಪಡಿಸಿದ್ದಾರೆ.

ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾರ 2027ರ ವಿಶ್ವಕಪ್‌ ಭವಿಷ್ಯ ನುಡಿದ ಇರ್ಫಾನ್‌ ಪಠಾಣ್!

ರೋಹಿತ್‌, ಕೊಹ್ಲಿಯ 2027ರ ವಿಶ್ವಕಪ್‌ ಭವಿಷ್ಯ ನುಡಿದ ಪಠಾಣ್‌!

ಮುಂಬರುವ 2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಭಾರತ ತಂಡದಲ್ಲಿ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಉಪಸ್ಥಿತಿಯ ಮೌಲ್ಯವನ್ನು ಮಾಜಿ ಆಲ್‌ರೌಂಡರ್‌ ಇರ್ಫಾನ್‌ ಪಠಾಣ್‌ ಒತ್ತಿ ಹೇಳಿದ್ದಾರೆ. ಟಿ20ಐ ಹಾಗೂ ಟೆಸ್ಟ್‌ ಕ್ರಿಕೆಟ್‌ಗೆ ಈಗಾಗಲೇ ವಿದಾಯ ಹೇಳಿರುವ ಕೊಹ್ಲಿ, ರೋಹಿತ್‌ ಮುಂದಿನ ಏಕದಿನ ವಿಶ್ವಕಪ್‌ ನಿಮಿತ್ತ 50 ಓವರ್‌ಗಳ ಸ್ವರೂಪದಲ್ಲಿ ಮಾತ್ರ ಸಕ್ರಿಯರಾಗಿದ್ದಾರೆ.

IND vs AFG ಏಕೈಕ ಟೆಸ್ಟ್‌ಗೆ ಭಾರತದ ಪ್ಲೇಯಿಂಗ್‌ XI ಆರಿಸಿದ ಆಕಾಶ್‌ ಚೋಪ್ರಾ!

IND vs AFG: ಭಾರತದ ಪ್ಲೇಯಿಂಗ್‌ XI ಆರಿಸಿದ ಆಕಾಶ್‌ ಚೋಪ್ರಾ!

ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳ ನಡುವಣ ಏಕೈಕ ಟೆಸ್ಟ್‌ ಪಂದ್ಯ ಜೂನ್‌ 6 ರಂದು ಶನಿವಾರ ನವ ಚಂಡೀಗಢಧ ಮುಲ್ಲಾನ್‌ಪುರದಲ್ಲಿ ನಡೆಯಲಿದೆ. ಈ ಪಂದ್ಯದ ನಿಮಿತ್ತ ಮಾಜಿ ಕ್ರಿಕೆಟಿಗ ಹಾಗೂ ಕಾಮೆಂಟೇಟರ್‌ ಆಕಾಶ್‌ ಚೋಪ್ರಾ, ಭಾರತ ತಂಡದ ಪ್ಲೇಯಿಂಗ್‌ XI ಆರಿಸಿದ್ದಾರೆ. ಅವರು ಮೂರನೇ ಕ್ರಮಾಂಕಕ್ಕೆ ದೇವದತ್‌ ಪಡಿಕ್ಕಲ್‌ ಬದಲು ಸಾಯಿ ಸುದರ್ಶನ್‌ಗೆ ಅವಕಾಶ ನೀಡಿದ್ದಾರೆ.

IND vs AFG: ಪಡಿಕ್ಕಲ್‌ or ಸುದರ್ಶನ್‌? ಭಾರತದ ಮೂರನೇ ಕ್ರಮಾಂಕಕ್ಕೆ ಆಟಗಾರನನ್ನು ರಿವೀಲ್‌ ಮಾಡಿದ ಗಂಭೀರ್‌!

IND vs AFG: ಭಾರತದ ಮೂರನೇ ಕ್ರಮಾಂಕಕ್ಕೆ ಆಟಗಾರನನ್ನು ಆರಿಸಿದ ಗಂಭೀರ್‌!

IND vs AFG: ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳು ಜೂನ್‌ 6 ರಂದು ಚಂಡೀಗಢದಲ್ಲಿ ಮುಲ್ಲಾನ್‌ಪುರದಲ್ಲಿ ನಡೆಯುವ ಏಕೈಕ ಟೆಸ್ಟ್‌ ಪಂದ್ಯದಲ್ಲಿ ಕಾದಾಟ ನಡೆಲಿವೆ. ಈ ಪಂದ್ಯಕ್ಕೆ ಭಾರತ ತಂಡದ ಮೂರನೇ ಕ್ರಮಾಂಕದಲ್ಲಿ ಯಾರನ್ನು ಆಡಿಸಲಾಗುವುದು ಎಂದು ಹೆಡ್‌ ಕೋಚ್‌ ಗೌತಮ್‌ ಗಂಭೀರ್‌ ರಿವೀಲ್‌ ಮಾಡಿದ್ದಾರೆ.

IND vs AFG: ರಾಹುಲ್‌-ಜೈಸ್ವಾಲ್‌ ಓಪನರ್ಸ್‌,  ಏಕೈಕ ಟೆಸ್ಟ್‌ಗೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI

IND vs AFG ಏಕೈಕ ಟೆಸ್ಟ್‌ಗೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI

IND vs AFG one test Match Preview: ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳು ಜೂನ್‌ 6 ರಂದು ನವಚಂಡೀಗಢದ ಮುಲ್ಲಾನ್‌ಪುರದ ಮಹಾರಾಜ ಯದವೀಂದ್ರ ಸಿಂಗ್‌ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ನಡೆಯುವ ಏಕೈಕ ಟೆಸ್ಟ್‌ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯಕ್ಕೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್‌ XI ಸೇರಿದಂತೆ ಪ್ರಮುಖ ಅಂಶಗಳನ್ನು ಇಲ್ಲಿ ವಿವರಿಸಲಾಗಿದೆ.

IND vs AFG: ಟೆಸ್ಟ್‌ ಕ್ರಿಕೆಟ್‌ನಲ್ಲಿ ನೂತನ ದಾಖಲೆಯ ಸನಿಹದಲ್ಲಿ ರಿಷಭ್‌ ಪಂತ್‌!

ಟೆಸ್ಟ್‌ ಕ್ರಿಕೆಟ್‌ನಲ್ಲಿ ನೂತನ ದಾಖಲೆಯ ಸನಿಹದಲ್ಲಿ ರಿಷಭ್‌ ಪಂತ್‌!

ಭಾರತ ಟೆಸ್ಟ್‌ ತಂಡದ ವಿಕೆಟ್‌-ಬ್ಯಾಟ್ಸ್‌ಮನ್‌ ರಿಷಭ್‌ ಪಂತ್‌ ಅಫ್ಘಾನಿಸ್ಥಾನ ವಿರುದ್ಧದ ಏಕೈಕ ಟೆಸ್ಟ್‌ ಪಂದ್ಯದಲ್ಲಿ ವಿಶೇಷ ದಾಖಲೆಯ ಸನಿಹದಲ್ಲಿದ್ದಾರೆ. ಅವರು ಟೆಸ್ಟ್‌ ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ಗಳನ್ನು ಪೂರ್ಣಗೊಳಿಸಲು ಇನ್ನು ಕೇವಲ 6 ಸಿಕ್ಸರ್‌ ಅಗತ್ಯವಿದೆ. ಅವರು ಈ ಟೆಸ್ಟ್‌ ಪಂದ್ಯದಲ್ಲಿ 6 ಸಿಕ್ಸರ್‌ ಬಾರಿಸಿದರೆ ಭಾರತೀಯ ಕ್ರಿಕೆಟ್‌ನಲ್ಲಿ ನೂತನ ದಾಖಲೆಯನ್ನು ಬರೆಯಲಿದ್ದಾರೆ.

ಭಾರತ ಟಿ20 ತಂಡದ ನಾಯಕತ್ವದಿಂದ ಸೂರ್ಯಕುಮಾರ್‌ ಯಾದವ್‌ರನ್ನು ತೆಗೆಯಬೇಡಿ: ಎಂಎಸ್‌ಕೆ ಪ್ರಸಾದ್‌!

ಸೂರ್ಯಕುಮಾರ್‌ ಯಾದವ್‌ಗೆ ಎಂಎಸ್‌ಕೆ ಪ್ರಸಾದ್‌ ಬೆಂಬಲ!

ಶ್ರೇಯಸ್ ಅಯ್ಯರ್ ಅವರನ್ನು ಭಾರತ ಟಿ20 ತಡದ ನಾಯಕನನ್ನಾಗಿ ನೇಮಿಸಬಹುದು ಎಂಬ ವರದಿಗಳು ನಿರಂತರವಾಗಿ ಕೇಳಿಬರುತ್ತಿವೆ. ಇದರ ನಡುವೆ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕತ್ವದಿಂದ ತೆಗೆದುಹಾಕುವುದು ಸರಿಯಾದ ಕ್ರಮವಲ್ಲ ಎಂದು ಮಾಜಿ ಮುಖ್ಯ ಆಯ್ಕೆದಾರ ಎಂಎಸ್‌ಕೆ ಪ್ರಸಾದ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

IPL 2026: ʻನಾನು ಈ ರೀತಿಯ ನೋಡಿರಲಿಲ್ಲʼ-ವೈಭವ್‌ ಸೂರ್ಯವಂಶಿ ಬಗ್ಗೆ ಲಿವಿಂಗ್‌ಸ್ಟೋನ್‌ ದೊಡ್ಡ ಹೇಳಿಕೆ!

ವೈಭವ್‌ ಸೂರ್ಯವಂಶಿ ಬಗ್ಗೆ ಲಿವಿಂಗ್‌ಸ್ಟೋನ್‌ ದೊಡ್ಡ ಹೇಳಿಕೆ!

ಇಂಗ್ಲೆಂಡ್ ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್ ಅನ್ನು ಶ್ಲಾಘಿಸಿದ್ದಾರೆ. ಅವರು ತಮ್ಮ ಏಳು ವರ್ಷಗಳ ಐಪಿಎಲ್ ವೃತ್ತಿಜೀವನದಲ್ಲಿ ಇಂತಹ ಬ್ಯಾಟಿಂಗ್ ಅನ್ನು ಎಂದಿಗೂ ನೋಡಿರಲಿಲ್ಲ ಎಂದು ಹೇಳಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ವೈಭವ್ 29 ಎಸೆತಗಳಲ್ಲಿ 97 ರನ್ ಗಳಿಸಿದ್ದರು.

ಸೂರ್ಯಕುಮಾರ್‌ ಯಾದವ್‌ ಔಟ್‌; ಭಾರತ ಟಿ20 ತಂಡಕ್ಕೆ ಶ್ರೇಯಸ್‌ ಅಯ್ಯರ್‌ ನಾಯಕ?

ಸೂರ್ಯ ಔಟ್‌; ಭಾರತ ಟಿ20 ತಂಡಕ್ಕೆ ಶ್ರೇಯಸ್‌ ಅಯ್ಯರ್‌ ನಾಯಕ?

ತಮ್ಮ ನಾಯಕತ್ವದಲ್ಲಿ ಭಾರತ ತಂಡಕ್ಕೆ 2026ರ ಟಿ20 ವಿಶ್ವಕಪ್‌ ಗೆದ್ದುಕೊಟ್ಟ ಹೊರತಾಗಿಯೂ ಸೂರ್ಯಕುಮಾರ್‌ ಯಾದವ್‌ ಅವರಿಗೆ ಗೇಟ್‌ ಪಾಸ್‌ ನೀಡಲು ಬಿಸಿಸಿಐ ನಿರ್ಧಾರ ತೆಗೆದುಕೊಂಡಿದ್ದು, ಚುಟುಕು ತಂಡದ ನಾಯಕತ್ವದ ಜವಾಬ್ದಾರಿಯನ್ನು ಶ್ರೇಯಸ್‌ ಅಯ್ಯರ್‌ ನೀಡುವ ಸಾಧ್ಯತೆ ಇದೆ. 2028ರ ಲಾಸ್‌ ಏಂಜಲೀಸ್‌ ಒಲಿಂಪಿಕ್ಸ್‌ ಹಾಗೂ ಟಿ20 ವಿಶ್ವಕಪ್‌ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ನಿರ್ಧಾರ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

Maharaja Trophy 2026ರ ಹರಾಜಿನಲ್ಲಿ ಮನೀಷ್‌ ಪಾಂಡೆ ಸೇರಿ ಮೂವರು ಸ್ಟಾರ್‌ ಆಟಗಾರರು!

2026ರ ಮಹಾರಾಜ ಟ್ರೋಫಿ ಆಟಗಾರರ ಹರಾಜಿನಲ್ಲಿ ಮೂವರು ಸ್ಟಾರ್‌ಗಳು!

ಬಹುನಿರೀಕ್ಷಿತ 2026ರ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಲೀಗ್‌ ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆಗೆ ಕ್ಷಣಗಣನೆ ಶುರುವಾಗಿದೆ. ಜೂನ್‌ 5ರಂದು ಶುಕ್ರವಾರ ಹರಾಜು ಪ್ರಕ್ರಿಯೆ ನಡೆಯಲಿದ್ದು, ಮನೀಷ್‌ ಪಾಂಡೆ, ಕರುಣ್‌ ನಾಯರ್‌ ಸೇರಿದಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಸ್ಟಾರ್‌ ಆಟಗಾರರ ಹೆಸರುಗಳು ಕೂಡ ಹರಾಜಿನಲ್ಲಿ ಎಲ್ಲರ ಗಮನ ಸೆಳೆಯಲಿದೆ.

ಅಂತಾರಾಷ್ಟ್ರೀಯ, ಭಾರತೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ವಿಕೆಟ್‌ ಕೀಪರ್‌-ಬ್ಯಾಟರ್‌ ಕೆಎಸ್‌ ಭರತ್‌!

ಅಂತಾರಾಷ್ಟ್ರೀಯ, ಭಾರತೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕೆಎಸ್‌ ಭರತ್!

KS Bharat Retirement: ಭಾರತ ಹಾಗೂ ಅಂಧ್ರ ಪ್ರದೇಶದ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ಕೆಎಸ್‌ ಭರತ್‌ ಅವರು ಅಂತಾರಾಷ್ಟ್ರೀಯ ಹಾಗೂ ಭಾರತೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಅವರು ತಮ್ಮ 32ನೇ ವಯಸ್ಸಿನಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅವರು ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿಯೂ ಹಲವು ಫ್ರಾಂಚೈಸಿಗಳ ಪರ ಆಡಿದ್ದಾರೆ.

IND vs AFG: ಅಫ್ಘಾನಿಸ್ತಾನ ಏಕದಿನ ಸರಣಿಯಲ್ಲಿ ವಿರಾಟ್‌ ಕೊಹ್ಲಿ ಸ್ಥಾನಕ್ಕೆ ಋತುರಾಜ್‌ ಗಾಯಕ್ವಾಡ್‌?

ಅಫ್ಘಾನಿಸ್ತಾನ ಏಕದಿನ ಸರಣಿಯಲ್ಲಿ ಕೊಹ್ಲಿ ಸ್ಥಾನಕ್ಕೆ ಗಾಯಕ್ವಾಡ್‌?

IND vs AFG: ಭಾರತ ಹಾಗೂ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಭಾರತ ತಂಡಕ್ಕೆ ವಿರಾಟ್‌ ಕೊಹ್ಲಿ ಅಲಭ್ಯರಾಗಿದ್ದಾರೆ. ಅವರು ತಂಡಕ್ಕೆ ಆಯ್ಕೆಯಾಗಿದ್ದರೂ ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿದ್ದಾರೆ. ಹಾಗಾಗಿ ಅವರ ಸ್ಥಾನಕ್ಕೆ ಋತುರಾಜ್‌ ಗಾಯಕ್ವಾಡ್‌ಗೆ ಅವಕಾಶ ನೀಡುವ ಸಾಧ್ಯತೆ ಇದೆ.

ʻಕ್ರಾಸ್‌ ಬ್ಯಾಟಿಂಗ್‌ ಶಾಟ್ಸ್‌ ಆಡುವುದನ್ನು ನಿಲ್ಲಿಸಿʼ: ರಿಷಭ್‌ ಪಂತ್‌ಗೆ ಬಾಲ್ಯದ ಕೋಚ್‌ ಸಲಹೆ!

ಔಟ್‌ ಆಫ್‌ ಫಾರ್ಮ್‌ ಪಂತ್‌ಗೆ ಬಾಲ್ಯದ ಕೋಚ್‌ ಮಹತ್ವದ ಸಲಹೆ!

ರಿಷಭ್ ಪಂತ್ ಅವರ ಬಾಲ್ಯದ ತರಬೇತುದಾರ ದೇವೇಂದರ್ ಶರ್ಮಾ, ಕ್ರಾಸ್-ಬ್ಯಾಟಿಂಗ್ ಶಾಟ್‌ಗಳನ್ನು ಆಡುವುದನ್ನು ನಿಲ್ಲಿಸಿ ಮತ್ತು ಆಫ್-ಸೈಡ್‌ನಲ್ಲಿ ಹೆಚ್ಚು ಆಡುವಂತೆ ಸಲಹೆ ನೀಡಿದ್ದಾರೆ. ಸತತ ಎರಡು ಕಳಪೆ ಐಪಿಎಲ್ ಋತುಗಳ ನಂತರ, ಪಂತ್ ಲಖನೌ ಸೂಪರ್ ಜಯಂಟ್ಸ್ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ ಮತ್ತು ಈಗ ಟೆಸ್ಟ್ ಸ್ವರೂಪದಲ್ಲಿ ಮಾತ್ರ ಆಡುತ್ತಿದ್ದಾರೆ.

IPL 2026ರ ಟೂರ್ನಿಯ ಟಾಪ್‌ 5 ಕ್ಯಾಚ್‌ಗಳನ್ನು ಪಡೆದ ಐವರು ಆಟಗಾರರು!

IPL 2026ರ ಟೂರ್ನಿಯ ಟಾಪ್‌ 5 ಕ್ಯಾಚ್‌ಗಳನ್ನು ಪಡೆದ ಐವರು ಆಟಗಾರರು!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯು ಅಂತ್ಯವಾಗಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ, ಫೈನಲ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ತಂಡವನ್ನು 5 ವಿಕೆಟ್‌ಳಿಂದ ಮಣಿಸುವ ಮೂಲಕ ಸತತ ಎರಡನೇ ಬಾರಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಈ ಟೂರ್ನಿಯಲ್ಲಿ ಆರ್‌ಸಿಬಿ ಎದುರಿನ ಪಂದ್ಯದಲ್ಲಿ ಸ್ಟನಿಂಗ್‌ ಕ್ಯಾಚ್‌ ಪಡೆದ ಕೋಲ್ಕತಾ ನೈಟ್‌ ರೈಡರ್ಸ್‌ ತಂಡದ ಮನೀಷ್‌ ಪಾಂಡ್ಯ, ಕ್ಯಾಚ್‌ ಆಫ್‌ ದಿ ಸೀಸನ್‌ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅಂದ ಹಾಗೆ 2026ರ ಟೂರ್ನಿಯಲ್ಲಿ ಟಾಪ್‌ 5 ಕ್ಯಾಚ್‌ಗಳ ಬಗ್ಗೆ ಇಲ್ಲಿ ವಿವರಿಸಲಾಗಿದೆ.

IND vs AFG: ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ರೋಹಿತ್‌ ಶರ್ಮಾ ಅನುಮಾನ!

ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ರೋಹಿತ್‌ ಶರ್ಮಾ ಅನುಮಾನ!

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಮುಂದಿನ ಏಕದಿನ ಸರಣಿಯಲ್ಲಿ ರೋಹಿತ್‌ ಶರ್ಮಾ ಆಡುವುದು ಅನುಮಾನ ಎಂದು ಹೇಳಲಾಗುತ್ತಿದೆ. ಜೂನ್‌ 13 ರಿಂದ 20ರ ವರೆಗೆ ಈ ಏಕದಿನ ಸರಣಿ ನಡೆಯಲಿದೆ. ಅಂದ ಹಾಗೆ ಇದೀಗ ವಿರಾಟ್‌ ಕೊಹ್ಲಿ ಜೊತೆಗೆ ರೋಹಿತ್‌ ಶರ್ಮಾ ಕೂಡ ಅಲಭ್ಯರಾಗಿದ್ದಾರೆ. ಇದು ಭಾರತ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ.

Loading...