ಅಹಿಂದ ಮತಬ್ಯಾಂಕ್ ಹಿಡಿಯೋರ್ಯಾರು ?
ರಾಜಕೀಯವಾಗಿ ಹಾಗೂ ಸಾಮಾಜಿಕವಾಗಿ ‘ಶಕ್ತಿ’ಶಾಲಿಯಾಗಿ ಕಾಣಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಹರಿದು ಹಂಚಿ ಹೋಗಿದ್ದ ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಸಮುದಾಯ ಗಳನ್ನು ಒಂದೇ ವೇದಿಕೆಯಲ್ಲಿ ತರುವ ಪ್ರಯತ್ನಗಳು ನಡೆದವು. ಆದರೆ ಈ ಪ್ರಯತ್ನಕ್ಕೆ ಸ್ಪಷ್ಟ ರೂಪ ಸಿಕ್ಕಿದ್ದು ಮಾತ್ರ ಸಿದ್ದರಾಮಯ್ಯ ಅವರಿಂದ. ಜೆಡಿಎಸ್ನಿಂದ ಹೊರಬಂದ ಸಿದ್ದರಾಮಯ್ಯ ಅವರು ತಮ್ಮ ‘ಅಸ್ತಿತ್ವ’ ವನ್ನು ಗಟ್ಟಿಗೊಳಿಸಿಕೊಳ್ಳಲು ಅಹಿಂದ ಸಂಘಟನೆಗೆ ನೀರೆರೆದರು.