Shashidhara Halady Column: ಕಾಡಿನ ನಡುವೆ ಕಟ್ಟಿಕೊಂಡ ಬದುಕು
ಹಸಿರನ್ನೇ ಒಡಲಲ್ಲಿ ತುಂಬಿಕೊಂಡಿರುವ ಕುಚ್ಚೂರು, ಸಂಜೆ ಹೊತ್ತಿನ ಕೆಂಬಣ್ಣದ ಲೋಕದಲ್ಲಿ, ಬೇರೊಂದೇ ವರ್ಣಛಾಯೆಯಲ್ಲಿ ಮಿಂದೇಳುತ್ತದೆ; ಮನದಲ್ಲಿ ಕಾವ್ಯಾನು ಭವವನ್ನೇ ಮೂಡಿ ಸುತ್ತದೆ. ಕೊನೆಯಲ್ಲಿ ಸೂರ್ಯ ಮರೆಯಾದಾಗ, ಆ ಸುತ್ತಲಿನ ಹಸಿರು ಲೋಕವು ಕತ್ತಲಿನಲ್ಲಿ ನಿಧಾನ ಅದೃಶ್ಯವಾಗುವಾಗ, ನೋಡುವವರ ಮನಸ್ಸಿನಲ್ಲಿ ಒಂದು ರೀತಿಯ ವಿಷಾದ ತುಂಬಿದ ಅನುಭವ, ಆ ವಿಷಾದದಲ್ಲೂ ಸೂರ್ಯಾಸ್ತದ ಅದ್ಭುತ ನೋಟ ಕಣ್ತುಂಬಿಕೊಂಡ ತೃಪ್ತಭಾವ.