ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

Siddalinga Swamy

siddalinga@vishwavani.news

Articles
BJP Protest: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ನೆಲಮಂಗಲದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಬೃಹತ್ ಪ್ರತಿಭಟನೆ

ನೆಲಮಂಗಲದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಬೃಹತ್ ಪ್ರತಿಭಟನೆ

Nelamangala News: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರವನ್ನು ಆಗ್ರಹಿಸಿ, ಭಾರತೀಯ ಜನತಾ ಪಕ್ಷದ ರೈತ ಮೋರ್ಚಾ ವತಿಯಿಂದ ನೆಲಮಂಗಲದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ಗ್ರಾಮಾಂತರ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ. ಭೃಂಗೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

Laxmi Hebbalkar: ಮಠಗಳ ಸೇವಾ ಕಾರ್ಯ ಸರ್ಕಾರಕ್ಕೆ ಸ್ಫೂರ್ತಿ: ಲಕ್ಷ್ಮಿ ಹೆಬ್ಬಾಳ್ಕರ್

ಮಠಗಳ ಸೇವಾ ಕಾರ್ಯ ಸರ್ಕಾರಕ್ಕೆ ಸ್ಫೂರ್ತಿ: ಲಕ್ಷ್ಮಿ ಹೆಬ್ಬಾಳ್ಕರ್

ಸರ್ಕಾರಕ್ಕೆ ಸಮಾನವಾಗಿ ಸಾಮಾಜಿಕ ಕೆಲಸ ಕಾರ್ಯಗಳನ್ನು ನಮ್ಮ ಶ್ರೀಮಠಗಳು ಮಾಡುತ್ತಿವೆ. ಅಕ್ಷರ ದಾಸೋಹ, ಅನ್ನ, ಆರೋಗ್ಯ ದಾಸೋಹಗಳನ್ನು ಸರ್ಕಾರ ಕಾಪಿ ಮಾಡುತ್ತಿವೆ. ಮಠಗಳ ಕೆಲಸವೇ ಸರ್ಕಾರಕ್ಕೆ ಸ್ಫೂರ್ತಿಯಾಗಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ 200 ರೈತರ ಆತ್ಮಹತ್ಯೆ ನಿಮ್ಮ ಕೊಡುಗೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿ

ಮಂಡ್ಯ ಜಿಲ್ಲೆಯಲ್ಲಿ 200 ರೈತರ ಆತ್ಮಹತ್ಯೆ ನಿಮ್ಮ ಕೊಡುಗೆ; ಕುಮಾರಸ್ವಾಮಿ

HD Kumaraswamy: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ನಾನು ಕೊಟ್ಟಿದ್ದನ್ನು ಪಟ್ಟಿ ಮಾಡಿ ಹೇಳುತ್ತೇನೆ, ಮೊದಲು ಐದು ವರ್ಷ ಮುಖ್ಯಮಂತ್ರಿ ಆಗಿದ್ದಾಗ, ಈಗ ಏನೇನು ಕೊಟ್ಟಿದ್ದೀರಿ ಎಂಬುದನ್ನು ಹೇಳಿ ಎಂದು ಒತ್ತಾಯಿಸಿದ್ದಾರೆ.

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ ಸರ್ಕಾರ: ಡಿ.ಕೆ. ಶಿವಕುಮಾರ್

ಉ.ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ ಸರ್ಕಾರ: ಡಿಕೆಶಿ

DK Shivakumar: ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Expensive watch row: ನನ್ನ ದುಡ್ಡಲ್ಲಿ ನಾನು ಎಷ್ಟು ವಾಚ್ ಬೇಕಾದ್ರೂ ಖರೀದಿ ಮಾಡ್ತೇನೆ ಎಂದ ಡಿಕೆಶಿ

ನನ್ನ ದುಡ್ಡಲ್ಲಿ ನಾನು ಎಷ್ಟು ವಾಚ್ ಬೇಕಾದ್ರೂ ಖರೀದಿ ಮಾಡ್ತೇನೆ: ಡಿಕೆಶಿ

ನಾನು 1 ಸಾವಿರ ರೂಪಾಯಿ ವಾಚನ್ನೂ ಕಟ್ಟುವೆ, 10 ಲಕ್ಷ ರೂಪಾಯಿ ವಾಚನ್ನೂ ಕಟ್ಟುವೆ. ಅದು ನನಗೆ ಬಿಟ್ಟ ವಿಚಾರ. ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ. ಪಾಪ, ವಿರೋಧ ಪಕ್ಷದ ನಾಯಕರಿಗೆ ಅನುಭವದ ಕೊರತೆ ಇದೆ. ಅವರಿಗೆ ಚುನಾವಣೆ ನಿಂತ ಅನುಭವವೂ ಇಲ್ಲ. ಹೀಗಾಗಿ ಗೊತ್ತಿಲ್ಲದೆ ಮಾತನಾಡಿದ್ದಾರೆ. ಅವರು ವಿರೋಧ ಪಕ್ಷದ ನಾಯಕ ಸ್ಥಾನದಲ್ಲಿರುವುದರಿಂದ ಪ್ರತಿಕ್ರಿಯೆ ನೀಡಿದ್ದೇನೆ. ಬೇರೆಯವರಾಗಿದ್ದರೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

Pralhad Joshi: ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ರಾಷ್ಟ್ರ ಭಾರತ: ಪ್ರಲ್ಹಾದ್‌ ಜೋಶಿ

ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ರಾಷ್ಟ್ರ ಭಾರತ: ಜೋಶಿ

Solar Energy: ಕಳೆದ 11 ವರ್ಷಗಳಲ್ಲಿ ದೇಶದ ಸೌರ ಸಾಮರ್ಥ್ಯ ಕೇವಲ 2.8 GW ಇತ್ತು. ಇದೀಗ ಸುಮಾರು 130 GW ಗೆ ಬೆಳೆದಿದೆ. ಇದು 4,500% ಕ್ಕಿಂತ ಹೆಚ್ಚು ಏರಿಕೆಯಾಗಿದೆ. 2022 ಮತ್ತು 2024ರ ನಡುವೆ, ಭಾರತ ಜಾಗತಿಕ ಸೌರ ಸೇರ್ಪಡೆಗಳಿಗೆ 46 GW ಕೊಡುಗೆ ನೀಡಿದ್ದು, ಮೂರನೇ ಅತಿದೊಡ್ಡ ಕೊಡುಗೆದಾರ ರಾಷ್ಟ್ರವಾಗಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

HD Kumaraswamy: ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದ ಎಚ್.ಡಿ. ಕುಮಾರಸ್ವಾಮಿ

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಎಚ್‌ಡಿಕೆ

Karnataka Government: ಮಂಡ್ಯದ ವಿಸಿ ಫಾರಂನಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ, ಕುಮಾರಣ್ಣ ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ. ಜಿಲ್ಲೆಗೆ ಏನಾದರೂ ಕೈಗಾರಿಕೆ ತರಬಹುದು ಎಂಬ ನಿರೀಕ್ಷೆ ಜನರಲ್ಲಿದೆ. ಕನಿಷ್ಠ ಒಂದು ಕಾರ್ಖಾನೆಯನ್ನಾದರು ಮಂಡ್ಯಕ್ಕೆ ತರಲು ಒಂದು ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಇನ್ನೂ ಸರ್ಕಾರ ನಮಗೆ ಜಾಗ ನೀಡಿಲ್ಲ ಎಂದು ಹೇಳಿದ್ದಾರೆ.

HD Kumaraswamy: ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ?; ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ತಿರುಗೇಟು

ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ?: ಎಚ್‌ಡಿಕೆ

ಕುಮಾರಸ್ವಾಮಿ ಮನುವಾದಿ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ? ಹಾಗಾದರೆ, ಸಿದ್ದರಾಮಯ್ಯ ಅವರು ಮಕ್ಕಳಿಗೆ ಏನು ಬೋಧಿಸಲು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

HD Kumaraswamy: ಮೈಶುಗರ್‌ ಶಾಲೆ ಶಿಕ್ಷಕರಿಗೆ ನೆರವಾದ ಎಚ್.ಡಿ. ಕುಮಾರಸ್ವಾಮಿ; 19,94,200 ರೂ. ಚೆಕ್‌ ಹಸ್ತಾಂತರ

ಮೈಶುಗರ್‌ ಶಾಲೆ ಶಿಕ್ಷಕರಿಗೆ ವೇತನ ನೀಡಲು ಎಚ್.ಡಿ. ಕುಮಾರಸ್ವಾಮಿ ನೆರವು

Mandya Mysugar School: ಹದಿನೈದು ತಿಂಗಳಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ತಮ್ಮ ಸಂಸದರ ವೇತನವನ್ನೇ ನೀಡಿದ್ದಾರೆ. ಶನಿವಾರ ಬೆಳಗ್ಗೆ ಶಾಲೆಗೆ ಭೇಟಿ ನೀಡಿದ ಸಚಿವರು, ಶನಿವಾರ 19,94,200 ಮೊತ್ತದ ಚೆಕ್‌ ಅನ್ನು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದ್ದಾರೆ.

National Herald Case: ಇಡಿ ಸಮನ್ಸ್; ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ ಎಂದ ಡಿ.ಕೆ. ಶಿವಕುಮಾರ್‌

ಇಡಿ ಕಿರುಕುಳ ಖಂಡನೀಯ ಎಂದ ಡಿ.ಕೆ. ಶಿವಕುಮಾರ್

ಇಡಿ ಸಮನ್ಸ್ ನೀಡಿರುವ ಬಗ್ಗೆ ಮಾಧ್ಯಮಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಇಡಿ ಚಾರ್ಜ್ ಶೀಟ್ ಹಾಕಿರೋದು ಏಕೆ ಎಂಬುದೇ ಗೊತ್ತಿಲ್ಲ. ಇದರಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ ಎಂದು ತಿಳಿಸಿದ್ದಾರೆ.

Namma Metro Blue Line: ನಿಗದಿತ ಸಮಯದೊಳಗೆ ನೀಲಿ ಮೆಟ್ರೋ ಮಾರ್ಗ ಪೂರ್ಣಗೊಳಿಸಿ: ಗುತ್ತಿಗೆದಾರರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ನಿಗದಿತ ಸಮಯದೊಳಗೆ ನೀಲಿ ಮೆಟ್ರೋ ಮಾರ್ಗ ಪೂರ್ಣಗೊಳಿಸಿ: ಡಿ.ಕೆ. ಶಿವಕುಮಾರ್

DK Shivakumar: ಕೊಡಿಗೆಹಳ್ಳಿಯಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿ ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ವಿಮಾನ ನಿಲ್ದಾಣಕ್ಕೆ ಸಂಪರ್ಕ ಸಾಧಿಸುತ್ತಿರುವ ಮೆಟ್ರೋ ಮಾರ್ಗದ ಕಾಮಗಾರಿಯನ್ನು ನಾವು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕಿದೆ. ಇದಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರನ್ನು ಕರೆಸಿ ಚರ್ಚಿಸಿದ್ದೇವೆ ಎಂದು ತಿಳಿಸಿದ್ದಾರೆ.

MB Patil: ಕೆಎಸ್‌ಡಿಎಲ್ ವಿರುದ್ಧ ಅಕ್ರಮ ಆರೋಪ; ಹುರುಳಿದ್ದರೆ ಶಿಕ್ಷೆ, ಇಲ್ಲದಿದ್ದರೆ ಕಾನೂನು ಕ್ರಮ ಎಂದ ಎಂ.ಬಿ ಪಾಟೀಲ್‌

ಕೆಎಸ್‌ಡಿಎಲ್‌ನಲ್ಲಿ ಅಕ್ರಮ; ಹುರುಳಿದ್ದರೆ ಶಿಕ್ಷೆಎಂದ ಎಂ.ಬಿ ಪಾಟೀಲ್‌

ಕೆಎಸ್‌ಡಿಎಲ್‌ನಲ್ಲಿ ಸಾಮಗ್ರಿ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಜೆಡಿಎಸ್ ಶಾಸಕ ಎ. ಮಂಜು ಆರೋಪಿಸಿದ್ದಾರೆ. ಇದರಲ್ಲಿ ಹುರುಳಿದ್ದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಇಲ್ಲದೆ ಹೋದರೆ ಮಂಜು ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

DK Shivakumar: ನಾನು, ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ, ನಮ್ಮನ್ನು ವೈರಿಗಳಂತೆ ನೋಡಬೇಡಿ ಎಂದ ಡಿ.ಕೆ. ಶಿವಕುಮಾರ್‌

ನಾನು, ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ: ಡಿ.ಕೆ. ಶಿವಕುಮಾರ್‌

ನಾನು ಹಾಗೂ ಸತೀಶ್ ಜಾರಕಿಹೊಳಿ ನಿನ್ನೆ ರಾತ್ರಿ ಮದುವೆಯೊಂದರಲ್ಲಿ ಭೇಟಿಯಾಗಿದ್ದು ನಿಜ. ರಾಜ್ಯ ಹಾಗೂ ಪಕ್ಷದ ವಿಚಾರ ಮಾತನಾಡಿದ್ದೇವೆ. ನಾನು ಹಾಗೂ ಸತೀಶ್ ಜಾರಕಿಹೊಳಿ ಸಹೋದ್ಯೋಗಿಗಳು. ನಮ್ಮನ್ನು ವೈರಿಗಳಂತೆ ಯಾಕೆ ನೋಡುತ್ತೀರಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

KJ George: ವೈಟ್‌ಫೀಲ್ಡ್‌ನ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಸಚಿವ ಕೆ.ಜೆ. ಜಾರ್ಜ್

ವೈಟ್‌ಫೀಲ್ಡ್‌ನ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಸಚಿವ ಕೆ.ಜೆ. ಜಾರ್ಜ್

13,687 ಚದರ ಅಡಿಯ ನೆಲ ಅಂತಸ್ತು ಸೇರಿದಂತೆ ಮೂರು ಅಂತಸ್ತುಗಳ ಬೆಸ್ಕಾಂನ ವೈಟ್‌ಫೀಲ್ಡ್ ವಿಭಾಗ ಮತ್ತು ಇ-4 ಉಪವಿಭಾಗ ಉಪ ವಿಭಾಗ ಕಚೇರಿ ಕಟ್ಟಡವನ್ನು ಅಂದಾಜು 4.25 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇವುಗಳನ್ನು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಶುಕ್ರವಾರ ಉದ್ಘಾಟಿಸಿದ್ದಾರೆ.

ರಾಜ್ಯ ಸರ್ಕಾರವನ್ನು ಟೀಕಿಸಲು ಹೋಗಿ ತಗ್ಲಾಕೊಂಡ್ರ ಆರ್‌. ಅಶೋಕ್‌? ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

ಆರ್. ಅಶೋಕ್‌ರ ಮತಿಗೇಡಿತನಕ್ಕೆ ಏನೆನ್ನಬೇಕು?; ಸಿಎಂ ಸಿದ್ದರಾಮಯ್ಯ

CM Siddaramaiah: ವಿಪಕ್ಷ ನಾಯಕ ಆರ್. ಅಶೋಕ್ ಇಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Kannada Pustaka Habba: ಡಿ.7ರಂದು ರಾಷ್ಟ್ರೋತ್ಥಾನ ಸಾಹಿತ್ಯದ 5ನೇ ಕನ್ನಡ ಪುಸ್ತಕ ಹಬ್ಬದ ಸಮಾರೋಪ

ಡಿ.7ರಂದು ರಾಷ್ಟ್ರೋತ್ಥಾನ ಸಾಹಿತ್ಯದ ಕನ್ನಡ ಪುಸ್ತಕ ಹಬ್ಬದ ಸಮಾರೋಪ

Rashtrotthana Sahitya: ರಾಷ್ಟ್ರೋತ್ಥಾನ ಸಾಹಿತ್ಯ ಆಯೋಜಿಸಿರುವ 37 ದಿನಗಳ ಕನ್ನಡ ಪುಸ್ತಕ ಹಬ್ಬದ ಸಮಾರೋಪ ಸಮಾರಂಭ ಡಿ.7ರಂದು ಭಾನುವಾರ ಸಂಜೆ 5 ಗಂಟೆಗೆ ನಡೆಯಲಿದೆ. ಶಿಕ್ಷಣ ತಜ್ಞ, ಲೇಖಕ ಡಾ. ಗುರುರಾಜ ಕರಜಗಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

DK Shivakumar: ನಾರಾಯಣಸ್ವಾಮಿ ಮನೆಯಿಂದಲೇ ವಾಚ್ ಕದ್ದಿದ್ದೇನೆ: ಡಿ.ಕೆ. ಶಿವಕುಮಾರ್‌ ಲೇವಡಿ

ನನ್ನ ವಾಚು, ನನ್ನ ಅಫಿಡವಿಟ್, ಅವರಿಗೇನು ಗೊತ್ತು: ಡಿಕೆಶಿ ಪ್ರಶ್ನೆ

ವಿಧಾನಸೌಧದ ಆವರಣದಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌, ನನ್ನ ಬಳಿ ಇರುವ ದುಬಾರಿ ವಾಚ್‌ಗಳ ಬಗ್ಗೆ ನಾನು ಎಲ್ಲವನ್ನೂ ಪಾರದರ್ಶಕವಾಗಿ ಹೇಳಿದ್ದೇನೆ. ಆ ವಾಚ್ ಖರೀದಿ ಬಗ್ಗೆ ನನಗೆ ಗೊತ್ತು, ಬಿಜೆಪಿಯವರಿಗೇನು ಗೊತ್ತು? ಎಂದು ತಿರುಗೇಟು ನೀಡಿದ್ದಾರೆ

ರಾಜ್ಯದಲ್ಲಿ ಮೊಬೈಲ್, ಎಲೆಕ್ಟ್ರಾನಿಕ್ಸ್‌ ಉತ್ಪಾದನೆಗೆ 150 ಬಿಲಿಯನ್ ಡಾಲರ್ ಹೂಡಿಕೆ ಆಕರ್ಷಿಸಲು ಕ್ರಮ: ಎಂ.ಬಿ.ಪಾಟೀಲ್‌

ರಾಜ್ಯಕ್ಕೆ 150 ಬಿಲಿಯನ್ ಡಾಲರ್ ಹೂಡಿಕೆ ಆಕರ್ಷಿಸುವ ಉದ್ದೇಶ

ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ತಯಾರಿಕೆ ಯೋಜನೆಯನ್ನು ಘೋಷಿಸಿದೆ. ಇದಕ್ಕೆ ಸಮಾನಾಂತರವಾಗಿ ರಾಜ್ಯ ಸರ್ಕಾರವು ಕೂಡ ಒಂದು ಯೋಜನೆಯನ್ನು ರೂಪಿಸಲು ಚಿಂತಿಸುತ್ತಿದ್ದು, ಇದರ ಕಾರ್ಯಸಾಧ್ಯತೆಯ ಕುರಿತು ಅಧ್ಯಯನ ಮಾಡುತ್ತಿದೆ. ಇದು ಕರಡು ಹಂತದಲ್ಲಿದ್ದು, ಇದಕ್ಕೆ ಐಸಿಇಎ ನೀಡುವ ಸಲಹೆಗಳನ್ನು ಸ್ವಾಗತಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

Bengaluru Power Cut: ಬೆಂಗಳೂರಿನ ಹಲವೆಡೆ ಡಿ.6ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಹಲವೆಡೆ ಡಿ.6ರಂದು ವಿದ್ಯುತ್‌ ವ್ಯತ್ಯಯ

BESCOM News: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ 66/11ಕೆವಿ ಕಾಡುಗೋಡಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಡಿ.6ರಂದು ಶನಿವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

CM Siddaramaiah: ಸೆ.13 ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ: ಸಿಎಂ ಸಿದ್ದರಾಮಯ್ಯ ಭರವಸೆ

ಸೆ.13 ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ: ಸಿಎಂ ಸಿದ್ದರಾಮಯ್ಯ

Women's Employees Day: ಮಹಿಳೆಯರು ವೈಚಾರಿಕತೆ ಮತ್ತು ವೈಜ್ಞಾನಿಕತೆಯನ್ನು ಬೆಳೆಸಿಕೊಳ್ಳಬೇಕು. ಮಹಿಳಾ ನೌಕರರಿಗೆ ಋತುಚಕ್ರ ರಜೆಯನ್ನು ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆಯನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ. ಸೆಪ್ಟೆಂಬರ್ 13ರ ದಿನವನ್ನು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Laxmi Hebbalkar: ಮಹಿಳೆಯರು ಮುಖ್ಯವಾಹಿನಿಗೆ ಬರಬೇಕೆಂಬುದೇ ನಮ್ಮ ಸರ್ಕಾರದ ಉದ್ದೇಶ: ಹೆಬ್ಬಾಳ್ಕರ್‌

ಮಹಿಳೆಯರು ಮುಖ್ಯವಾಹಿನಿಗೆ ಬರಬೇಕೆಂಬುದೇ ಸರ್ಕಾರದ ಉದ್ದೇಶ: ಹೆಬ್ಬಾಳ್ಕರ್‌

ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗೃಹ ಇಲಾಖೆ ಸಹಯೋಗದಲ್ಲಿ ಅಕ್ಕ ಪಡೆಯನ್ನು ಜಾರಿಗೊಳಿಸಲಾಗಿದೆ. 31 ಜಿಲ್ಲೆಗಳಲ್ಲಿ ಅಕ್ಕ ಪಡೆ ಚಾಲ್ತಿಗೆ ಬರಲಿದೆ. ಇದರ ಬಗ್ಗೆ ಮಹಿಳಾ ನೌಕರರ ಜತೆಗೂಡಿ ಅರಿವು ಮೂಡಿಸುವ ಕೆಲಸ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಅಂಗನವಾಡಿ, ಅಕ್ಷರ ದಾಸೋಹ, ಆಶಾ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌; ಬಹುತೇಕ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸಮ್ಮತಿ

ಅಂಗನವಾಡಿ, ಆಶಾ ನೌಕರರ ಬಹುತೇಕ ಬೇಡಿಕೆ ಈಡೇರಿಕೆಗೆ ಕೇಂದ್ರ ಸಮ್ಮತಿ

HD Kumaraswamy: ನನ್ನ ಮನವಿಗೆ ಓಗೊಟ್ಟು ಪ್ರತಿಭಟನೆ ನಿಲ್ಲಿಸಿ ದೆಹಲಿಗೆ ಬಂದ ಅಂಗನವಾಡಿ, ಅಕ್ಷರ ದಾಸೋಹ ಹಾಗೂ ಆಶಾ ಕಾರ್ಯಕರ್ತೆಯರ ಪ್ರಮುಖರ ಜತೆಗಿನ ಮಾತುಕತೆ ಉತ್ತಮವಾಗಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವರೊಂದಿಗೆ ನಡೆದ ಸಭೆಯಲ್ಲಿ ಎಲ್ಲಾ ಅಂಶಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವುದಾಗಿ , ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಅಂಗನವಾಡಿ, ಆಶಾ ನೌಕರರ ಬಹುತೇಕ ಬೇಡಿಕೆ ಈಡೇರಿಕೆಗೆ ಕೇಂದ್ರ ಸಮ್ಮತಿ

ಡಿಸೆಂಬರ್‌ 8ರಂದು ಸಿಎಂ ಕರೆದ ಸಭೆಗೆ ಪ್ರಲ್ಹಾದ್‌ ಜೋಶಿ ಗೈರು; ಕಾರಣವೇನು?

ಸಿಎಂ ಕರೆದ ಸಭೆಗೆ ಬರೋದು ಅಸಾಧ್ಯ: ಸಿಎಂಗೆ ಜೋಶಿ ಪತ್ರ

Pralhad Joshi: ಡಿಸೆಂಬರ್‌ 8ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಸಭೆಗೆ ಗೈರಾಗುವುದಾಗಿ ಧಾರವಾಡ ಸಂಸದರೂ ಆಗಿರುವ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಸಂಸತ್‌ ಚಳಿಗಾಲದ ಅಧಿವೇಶನ ಹಾಗೂ ಕಾರ್ಯದೊತ್ತಡದ ಕಾರಣ ಬರಲಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಸಿಎಂ ಬಳಿಕ ಇದೀಗ ಡಿಸಿಎಂಗೂ ಸುತ್ತಿಕೊಂಡ ವಾಚ್‌ ವಿವಾದ; 43 ಲಕ್ಷ ರೂಪಾಯಿಯ ವಾಚ್‌ ಎಂದ ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ

ದೆಹಲಿ ಪ್ರವಾಸಕ್ಕೆ ರಾಜಕೀಯ ಮಹತ್ವವೇನೂ ಇಲ್ಲ: ಡಿ.ಕೆ. ಶಿವಕುಮಾರ್‌

DK Shivakumar: ಡಿ. 8ರಂದು ದೆಹಲಿಯಲ್ಲಿ ನಡೆಸಲು ಉದ್ದೇಶಿಸಿದ್ದ ಸರ್ವಪಕ್ಷ ಸಭೆಯನ್ನು ಕೆಲವು ತಾಂತ್ರಿಕ ಕಾರಣಗಳಿಂದಾಗಿ ಮುಂದೂಡುವ ಸಾಧ್ಯತೆಗಳಿವೆ. ನಾವು ಈ ಸಭೆಗೆ ವಿರೋಧ ಪಕ್ಷಗಳ ನಾಯಕರನ್ನು ಕರೆದುಕೊಂಡು ಹೋಗಲು ತೀರ್ಮಾನಿಸಿದ್ದೆವು. ಆದರೆ ಅವರು ರಾಗ ಎಳೆಯುತ್ತಿದ್ದಾರೆ. ಹೀಗಾಗಿ ನಾನು ಹಾಗೂ ಸಿಎಂ ಚರ್ಚೆ ಮಾಡಿ, ವಿರೋಧ ಪಕ್ಷದವರಿಗೆ ಅವರಿಗೆ ಸರಿಹೋಗುವ ದಿನಾಂಕ ನಿಗದಿ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

Loading...