ಮಡಿಯಾಲದಲ್ಲಿ ಶೀಘ್ರ ಎಐ ಅಧ್ಯಯನ ಕೇಂದ್ರ: ಸದ್ಗುರು ಶ್ರೀ ಮಧುಸೂದನ ಸಾಯಿ
Sadguru Sri Madhusudan Sai: ಮಂಗಳೂರು ನಗರದಲ್ಲಿ ಎಲ್ಲ ಬಗೆಯ ಶಿಕ್ಷಣ ಕೋರ್ಸ್ಗಳೂ ಲಭ್ಯವಿವೆ. ಇದಕ್ಕೆ ಮತ್ತಷ್ಟು ಮೆರಗು ನೀಡಬೇಕು ಎಂದು ಯೋಚಿಸಿ ಇಲ್ಲಿ ಕೃತಕ ಬುದ್ಧಿಮತ್ತೆ, ಮಷೀನ್ ಲರ್ನಿಂಗ್ ಮತ್ತು ಕಂಪ್ಯೂಟರ್ ಶಿಕ್ಷಣಕ್ಕೆ ಒತ್ತು ಕೊಡುವ ವಿಶ್ವವಿದ್ಯಾಲಯದ ಉನ್ನತ ಶಿಕ್ಷಣ ಕೇಂದ್ರ ಆರಂಭಿಸುತ್ತಿದ್ದೇವೆ ಎಂದು "ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್" ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದ್ದಾರೆ.