ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Siddalinga Swamy

[email protected]

Articles
ರಾಜ್ಯದಲ್ಲಿ ಬರ, ಬೆಳೆ ಹಾನಿ ಕುರಿತು ಸಚಿವ ಸಂಪುಟ‌ ಸಭೆಯಲ್ಲಿ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ

ಬರ, ಬೆಳೆ ಹಾನಿ ಕುರಿತು ಸಚಿವ ಸಂಪುಟ‌ ಸಭೆಯಲ್ಲಿ ಚರ್ಚೆ: ಪ್ರಿಯಾಂಕ್ ಖರ್ಗೆ

Priyank Kharge: ರಾಜ್ಯದಲ್ಲಿನ ಬರದ ಸ್ಥಿತಿ ಕುರಿತು ಈಗಾಗಲೇ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಕೇಂದ್ರಕ್ಕೆ ಪತ್ರ ಬರೆದು ಮನವರಿಕೆ‌ ಮಾಡಿಕೊಟ್ಟಿದ್ದಾರೆ. ಕೇಂದ್ರದ ಕಠಿಣ ಎನ್.ಡಿ.ಆರ್.ಎಫ್ ನಿಯಮಾವಳಿಯಿಂದ ರೈತರಿಗೆ‌ ನ್ಯಾಯಯುತ ಪರಿಹಾರ ನೀಡಲು ಸಾಧ್ಯವಾಗುತ್ತಿಲ್ಲ, ಇದನ್ನು ಸರಳಿಕರಣ ಮಾಡುವಂತೆ ರಾಜ್ಯದ ಬೇಡಿಕೆ ಇದ್ದು, ಅದನ್ನು ಕೇಂದ್ರ ಸರ್ಕಾರ ಪುರಸ್ಕರಿಸಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಡಾ. ವಿದ್ಯಾಭೂಷಣ್ - ಮೇಧಾ ಅವರ 'ಭಜ ಮನ' ಕಾರ್ಯಾಗಾರಕ್ಕೆ ಅಭೂತಪೂರ್ವ ಸ್ಪಂದನೆ

ಡಾ. ವಿದ್ಯಾಭೂಷಣ್‌ರ 'ಭಜ ಮನ' ಕಾರ್ಯಾಗಾರಕ್ಕೆ ಅಭೂತಪೂರ್ವ ಸ್ಪಂದನೆ

Bhaja Mana Pre-concert Workshop: ಬೆಂಗಳೂರಿನಲ್ಲಿ 'ಪರಮ್ ಕಲ್ಚರ್' ಸಂಸ್ಥೆಯು 'ಹರಿವಂಶ ಗ್ರೂಪ್' ಮತ್ತು ಜಯನಗರದ 'ಯುವಕ ಸಂಘ'ದ ಸಹಯೋಗದಲ್ಲಿ ಆಯೋಜಿಸಿದ್ದ 'ಭಜ ಮನ' ಎಂಬ ಎರಡು ದಿನಗಳ ವಿಶೇಷ ಪೂರ್ವ-ಕಛೇರಿ ಗಾಯನ ಕಾರ್ಯಾಗಾರ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು.

Annabrahma Chaturmasya: ಜಠರಾಗ್ನಿ ಜಾಗೃತಿಯೇ ಅನಾರೋಗ್ಯಕ್ಕೆ ಉತ್ತರ: ರಾಘವೇಶ್ವರ ಭಾರತೀ ಶ್ರೀ

ಜಠರಾಗ್ನಿ ಜಾಗೃತಿಯೇ ಅನಾರೋಗ್ಯಕ್ಕೆ ಉತ್ತರ: ರಾಘವೇಶ್ವರ ಭಾರತೀ ಶ್ರೀ

Sri Raghaveshwara Bharathi Swamiji: ಭೋಜನವನ್ನು ತಪಸ್ಸೆಂದು ಹೇಳಿದ್ದು, ಆಹಾರದಲ್ಲಿ ಹಿತ - ಮಿತ ಎಂಬುದು ವ್ಯಕ್ತಿಗತವಾಗಿದ್ದು, ವೃತ್ತಿ ಪ್ರವೃತ್ತಿ, ಹಿನ್ನೆಲೆ ಇತ್ಯಾದಿಗಳನ್ನು ಆಧರಿಸಿ ವ್ಯಕ್ತಿಯ ಹಿತ ಮಿತಗಳು ನಿರ್ಧಾರವಾಗುತ್ತದೆ. ಯಜ್ಞಕ್ಕೆ ಯೋಗ್ಯವಾದ ಆಹಾರಕ್ಕೆ ಮೇಧ್ಯಾ ಎಂಬ ಹೆಸರಿದ್ದು, ಅಂತಹ ಉತ್ಕೃಷ್ಟ ಆಹಾರವನ್ನು ಸ್ವೀಕರಿಸುವುದರಿಂದ ನಮ್ಮೊಳಗಿನ ಅಗ್ನಿಯನ್ನು ಜಾಗೃತ ಗೊಳಿಸಬಹುದು. ದೇಹವೆಂಬ ಪೆಟ್ಟಿಗೆಯಲ್ಲಿ ಇರುವ ಎಲ್ಲಾ ಸಮಸ್ಯೆಗಳಿಗೂ ಅಗ್ನಿಜಾಗರಣ ಉತ್ತರವಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಆ.10ರಂದು ಬರ ಪರಿಶೀಲನೆಗಾಗಿ ಮಧುಗಿರಿಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ: ಎಂಎಲ್‌ಸಿ ಆರ್.ರಾಜೇಂದ್ರ ಮಾಹಿತಿ

ಆ.10ರಂದು ಬರ ಪರಿಶೀಲನೆಗಾಗಿ ಮಧುಗಿರಿಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ

Madhugiri News: ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಆಗಸ್ಟ್ 10ರಂದು ಸೋಮವಾರ ಬರ ಪರಿಶೀಲನೆಗೆ ಮಧುಗಿರಿಗೆ ಆಗಮಿಸುತ್ತಿದ್ದಾರೆ ಎಂದು ತುಮಕೂರು ವಿಧಾನ ಪರಿಷತ್ತು ಸದಸ್ಯ ಆರ್. ರಾಜೇಂದ್ರ ರಾಜಣ್ಣ ಮಾಹಿತಿ ನೀಡಿದ್ದಾರೆ.

ಮಕ್ಕಳಿಗೆ ಬಾಲ್ಯದಿಂದಲೇ ಧಾರ್ಮಿಕ ಸಂಸ್ಕಾರ ಕಲಿಸಿ: ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

ಮಕ್ಕಳಿಗೆ ಬಾಲ್ಯದಿಂದಲೇ ಧಾರ್ಮಿಕ ಸಂಸ್ಕಾರ ಕಲಿಸಿ

Madhugiri News: ಮಧುಗಿರಿ ಪಟ್ಟಣದ ದೊಡ್ಡಪೇಟೆಯಲ್ಲಿರುವ ಐತಿಹಾಸಿಕ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಆಷಾಢ ಮಾಸದ ಕೊನೆಯ ಶುಕ್ರವಾರದ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಶ್ರೀಕ್ಷೇತ್ರ ಸಿದ್ಧರಬೆಟ್ಟದ ಶ್ರೀ ರಂಭಾಪುರಿ ಖಾಸಾ ಶಾಖಾ ಮಠದ ಮಠಾಧ್ಯಕ್ಷರಾದ ಷ॥ ಬ್ರಹ್ಮ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ, ಆಶೀರ್ವಚನ ನೀಡಿದರು.

Karnataka Cabinet Expansion: ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ

CM DK Shivakumar: ಸದ್ಯದಲ್ಲೇ ಸಂಪುಟ ವಿಸ್ತರಣೆ ವಿಚಾರ ಬಗೆಹರಿಯಲಿದೆ. ಕಿರಣ್ ರಿಜಿಜು ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಚಿಂತಿಸುವುದು ಬೇಡ, ಅವರು ತಮ್ಮ ಪಕ್ಷ ಹಾಗೂ ಸರ್ಕಾರದ ಬಗ್ಗೆ ಆಲೋಚಿಸಲಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಮಧುಗಿರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಶಾಸಕ ಕೆ.ಎನ್‌.ರಾಜಣ್ಣ

ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಶಾಸಕ ಕೆ.ಎನ್‌.ರಾಜಣ್ಣ

Madhugiri News: ಜನರ ಅಗತ್ಯಗಳಿಗೆ ಸ್ಪಂದಿಸುವ, ಗುಣಮಟ್ಟದ ಹಾಗೂ ಶಾಶ್ವತ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡುವ ಮೂಲಕ ಮಧುಗಿರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಲಾಗುವುದು ಎಂದು ಮಾಜಿ ಸಚಿವರು ಹಾಗೂ ಶಾಸಕ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ: ಸದ್ಗುರು ಶ್ರೀ ಮಧುಸೂದನ ಸಾಯಿ

ಉ.ಕರ್ನಾಟಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ: ಶ್ರೀ ಮಧುಸೂದನ ಸಾಯಿ

Sadguru Sri Madhusudan Sai: ಕರ್ನಾಟಕದಲ್ಲಿ ಪ್ರತಿದಿನ ಒಟ್ಟು 55 ಲಕ್ಷ ಮಕ್ಕಳಿಗೆ ಸಾಯಿ ಶ್ಯೂರ್ ಪೌಷ್ಟಿಕ ಉಪಾಹಾರ ಸಿಗುತ್ತಿದೆ. ವಿಜಯಪುರ ಜಿಲ್ಲೆಯ 3 ಲಕ್ಷ ಮಕ್ಕಳು ಇದರ ಫಲಾನುಭವಿಗಳಾಗಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಈ ಯೋಜನೆಯ ಅನುಷ್ಠಾನಕ್ಕೆ ವರ್ಷಕ್ಕೆ 100 ಕೋಟಿ ಖರ್ಚು ಬರುತ್ತಿದೆ ಎಂದು 'ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್' ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದ್ದಾರೆ.

Annabrahma Chaturmasya: ಭೋಜನವೆಂಬುದು ಯಜ್ಞ, ಸರಿಯಾಗಿ ಮಾಡಿದ ಊಟಕ್ಕೆ ಅಗ್ನಿಹೋತ್ರದ ಫಲ: ರಾಘವೇಶ್ವರ ಭಾರತೀ ಶ್ರೀ

Annabrahma Chaturmasya: ಭೋಜನವೆಂಬುದು ಯಜ್ಞ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ನಮ್ಮೊಳಗಿರುವ ಜಠರಾಗ್ನಿಯೇ ಅಗ್ನಿಯಾಗಿದ್ದು, ನಾವು ಮಾಡುವ ಊಟವೇ ಇದಕ್ಕೆ ಅರ್ಪಿಸುವ ಹವಿಸ್ಸಾಗಿದೆ. ನಮಗೇ ಎಂದು ಕೊಳ್ಳದೇ ನಮ್ಮೊಳಗಿರುವ ಪರಮಾತ್ಮನಿಗೆ ಎಂದು ಊಟವನ್ನು ವಿಧಿವತ್ತಾಗಿ ಸೇವಿಸಿದಾಗ ಅದು ನಿಜವಾಗಿ ಯಜ್ಞವೇ ಆಗುತ್ತದೆ. ಸರಿಯಾದ ಕ್ರಮ ಹಾಗೂ ಹೊತ್ತಿನಲ್ಲಿ ಮಾಡುವ ಭೋಜನವು ಅಗ್ನಿಹೋತ್ರವೇ ಆಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

Annabrahma chaturmasya: ನಮ್ಮೊಳಗೆ ಒಂದಾಗದೇ ಇರುವ ಆಹಾರವೇ ನಮಗೆ ಶತ್ರು; ರಾಘವೇಶ್ವರ ಶ್ರೀ ವಿಶ್ಲೇಷಣೆ

ಭೋಜನವೆಂದರೆ ಅದ್ವೈತ ಸಾಧನೆ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಜೀವವು ಉತ್ಕೃಷ್ಟ ಆಹಾರವನ್ನೇ ಸ್ವೀಕರಿಸಬೇಕಾಗುತ್ತದೆ. ದೋಷಯುಕ್ತ ಆಹಾರವನ್ನು ಸೇವಿಸಿದಾಗ ಅದು ನಮ್ಮ ಜೀವಕ್ಕೆ ಹಾನಿಯನ್ನು ಮಾಡುವುದರ ಜತೆಗೆ ಮುಂದಿನ ಪೀಳಿಗೆಗೂ ದೋಷವನ್ನು ವರ್ಗಾಯಿಸುತ್ತದೆ. ಹಾಗಾಗಿ ಜೀವವೆಂಬ ಯಂತ್ರಕ್ಕೆ ಉತ್ತಮವಾದ ಆಹಾರವೆಂಬ ಇಂಧನವನ್ನಷ್ಟೇ ನೀಡಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಕಾರವಾರದಲ್ಲಿ ಕಾರ್ಯಾಚರಣೆಗಿಳಿದ ಐಎನ್‌ಎಸ್ ಮಾಲವನ್‌, ಈ ಯುದ್ಧನೌಕೆಯ ಹಿಂದಿದೆ ಎಎಂ/ಎನ್ಎಸ್ ಇಂಡಿಯಾ ಉಕ್ಕಿನ ಶಕ್ತಿ!

ಕಾರವಾರದಲ್ಲಿ ಕಾರ್ಯಾಚರಣೆಗಿಳಿದ ಐಎನ್‌ಎಸ್ ಮಾಲವನ್‌

ಭಾರತೀಯ ನೌಕಾಪಡೆಗೆ ಇತ್ತೀಚೆಗೆ ಅತ್ಯಾಧುನಿಕ 'ಐಎನ್‌ಎಸ್ ಮಾಲವನ್‌' ಯುದ್ಧನೌಕೆ ಸೇರ್ಪಡೆಗೊಂಡಿತ್ತು. ಇದರ ನಿರ್ಮಾಣಕ್ಕೆ ಅಗತ್ಯವಿದ್ದ ಶೇ. 100ರಷ್ಟು ವಿಶೇಷ ಉಕ್ಕನ್ನು ಪ್ರಸಿದ್ಧ ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ ಪೂರೈಸಿದೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

ಬೆಂಗಳೂರಿನಲ್ಲಿ ಆಗಸ್ಟ್‌ 8ರಂದು ವಿಪ್ರ ವ್ಯವಹಾರ ವೇದಿಕೆಯಿಂದ "ವಿಪ್ರ ಸಮ್ಮಿಲನ–2026"

ಬೆಂಗಳೂರಿನಲ್ಲಿ ಆ.8ಕ್ಕೆ ವಿಪ್ರ ವ್ಯವಹಾರ ವೇದಿಕೆಯಿಂದ ವಿಪ್ರ ಸಮ್ಮಿಲನ–2026

Vipra Sammilana 2026: ವಿಪ್ರ ವ್ಯವಹಾರ ವೇದಿಕೆ ವತಿಯಿಂದ ಆಗಸ್ಟ್ 8ರಂದು ಶನಿವಾರ ಮಧ್ಯಾಹ್ನ 3.30 ರಿಂದ ರಾತ್ರಿ 8.00 ಗಂಟೆಯವರೆಗೆ ಬೆಂಗಳೂರು ನಗರದ ಕೆಜಿ ರಸ್ತೆಯಲ್ಲಿರುವ ಎಫ್‌ಕೆಸಿಸಿಐ ಸಂಸ್ಥೆಯ ಸರ್‌ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ "ವಿಪ್ರ ಸಮ್ಮಿಲನ–2026" ಹಮ್ಮಿಕೊಳ್ಳಲಾಗಿದೆ.

ಕರುಣೆಯಿಲ್ಲದ ಬುದ್ಧಿವಂತಿಕೆ ಸಮಾಜಕ್ಕೆ ಅಪಾಯಕಾರಿ: ಸದ್ಗುರು ಶ್ರೀ ಮಧುಸೂದನ ಸಾಯಿ

ಕರುಣೆಯಿಲ್ಲದ ಬುದ್ಧಿವಂತಿಕೆ ಸಮಾಜಕ್ಕೆ ಅಪಾಯ: ಮಧುಸೂದನ ಸಾಯಿ

Sadguru Sri Madhusudan Sai: ವಿದ್ಯಾಸಂಸ್ಥೆಗಳ ಮೂಲಕ ಚಾರಿತ್ರ್ಯದ ಶಕ್ತಿ ಇರುವ ದೈವೀ ಪುರುಷರನ್ನು ನಾವು ರೂಪಿಸಬೇಕು. ಶಿಕ್ಷಣ ಸುಧಾರಿಸಬೇಕಾದರೆ ಉತ್ತಮ ಶಿಕ್ಷಕರು ಬೇಕು. ಉತ್ತಮ ಶಿಕ್ಷಕರು ರೂಪುಗೊಳ್ಳಲು ಪೂರಕವಾದ ಸಂದರ್ಭ ಸಮಾಜದಲ್ಲಿ ನಿರ್ಮಾಣವಾಗಬೇಕು. ಶಿಕ್ಷಕರಿಗೆ ಉತ್ತಮ ಸಂಬಳ, ಗೌರವ ಸಿಗಬೇಕು. ಮಕ್ಕಳ ಪಾಲಿಗೆ ಶಿಕ್ಷಕರು ತಂದೆ-ತಾಯಿ ಮತ್ತು ಗುರುವೂ ಆಗಿರುತ್ತಾರೆ” ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್‌ನ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದ್ದಾರೆ.

ಹಾವೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಸೇವೆ: ರುದ್ರಪ್ಪ ಲಮಾಣಿ

ಹಾವೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಸೇವೆ: ರುದ್ರಪ್ಪ ಲಮಾಣಿ

Haveri News: ಹಾವೇರಿ ಜಿಲ್ಲೆಯ ಆರು ಮಂದಿ ಶಾಸಕರು ಒಂದೇ ಕುಟುಂಬದ ಸದಸ್ಯರಂತೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದು, ಎಲ್ಲರ ವಿಶ್ವಾಸ ಮತ್ತು ಸಹಕಾರದೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ರಾಜ್ಯದ ನೂತನ ಸಚಿವ ರುದ್ರಪ್ಪ ಲಮಾಣಿ ಹೇಳಿದ್ದಾರೆ.

Madhugiri News: ಮಧುಗಿರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಕೆ.ಎನ್. ರಾಜಣ್ಣ

ಮಧುಗಿರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಕೆ.ಎನ್. ರಾಜಣ್ಣ

Madhugiri News: ಮಧುಗಿರಿ ತಾಲೂಕಿನ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಮಾಜಿ ಸಚಿವರು ಹಾಗೂ ಶಾಸಕ ಕೆ.ಎನ್. ರಾಜಣ್ಣ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದ್ದು, ಜನರ ಆಶೋತ್ತರಗಳಿಗೆ ಸ್ಪಂದಿಸುವ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Bengaluru India Nano 2026: ಬೆಂಗಳೂರನ್ನು ಜಾಗತಿಕ 'ಡೀಪ್-ಟೆಕ್' ರಾಜಧಾನಿಯಾಗಿ ಮಾಡುವ ಗುರಿ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರನ್ನು ಜಾಗತಿಕ 'ಡೀಪ್-ಟೆಕ್' ರಾಜಧಾನಿಯಾಗಿ ಮಾಡುವ ಗುರಿ: ಸಿಎಂ

CM DK Shivakumar: ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ 14ನೇ ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನದಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾತನಾಡಿದ್ದಾರೆ. ಬೆಂಗಳೂರು ಭಾರತವನ್ನು ಜಾಗತಿಕ ಐಟಿ ಭೂಪಟದಲ್ಲಿ ನಿಲ್ಲಿಸಿದೆ. ಈಗ ಭಾರತವನ್ನು ಜಾಗತಿಕ 'ಡೀಪ್-ಟೆಕ್' ಭೂಪಟದಲ್ಲಿ ನಿಲ್ಲಿಸುವ ಸಮಯ ಬಂದಿದೆ. ಇದಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಹೇಳಿದ್ದಾರೆ.

ಪಾವಗಡದ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌; ದಾಖಲೆಗಳು ಬೆಂಕಿಗಾಹುತಿ

ಪಾವಗಡದ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌

Pavagada News: ಪಾವಗಡ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪವಿರುವ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಚೇರಿಯಲ್ಲಿದ್ದ ಕೆಲವು ದಾಖಲೆಗಳು ಹಾಗೂ ಕಡತಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.

Utthana Katha Spardhe 2026: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ-2026ಕ್ಕೆ ಕಥೆಗಳ ಆಹ್ವಾನ; ಅ.10 ಕೊನೆಯ ದಿನ

ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಗಳ ಆಹ್ವಾನ

Utthana Katha Spardhe 2026: ಉತ್ಥಾನ ಮಾಸಪತ್ರಿಕೆಯು ಕಳೆದ 6 ದಶಕಗಳಿಂದ ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದೆ. ಈ ಬಾರಿಯ 2026ನೇ ಸಾಲಿನ ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಯನ್ನು ಆಹ್ವಾನಿಸಲಾಗಿದೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

Annabrahma chaturmasya: ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ವಿದ್ಯಾರ್ಥಿಗಳು ಹಾಗೂ ಯುವ ಜನರು ರಾತ್ರಿ ತಡವಾಗಿ ಜಾಗರಣೆ ಮಾಡುವುದನ್ನು ಮತ್ತು ಮೊಬೈಲ್ ಸೇರಿದಂತೆ ಡಿಜಿಟಲ್ ಸಾಧನಗಳ ಅತಿಯಾದ ಬಳಕೆಯನ್ನು ಕಡಿಮೆ ಮಾಡಬೇಕು. ನಿಗದಿತ ಸಮಯದಲ್ಲಿ ಮಲಗಿ, ಬೆಳಗ್ಗೆ ಸಕಾಲದಲ್ಲಿ ಏಳುವ ಅಭ್ಯಾಸ ಬೆಳೆಸಿಕೊಂಡರೆ ಆರೋಗ್ಯಕರ ಜೀವನ ಸಾಧ್ಯವಾಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಆಗಸ್ಟ್‌ 8ರಂದು ವಿಪ್ರ ಉದ್ಯಮಿಗಳ ವಿಬಿಎಫ್‌ ಸಮ್ಮೇಳನ

ಬೆಂಗಳೂರಿನಲ್ಲಿ ಆಗಸ್ಟ್‌ 8ಕ್ಕೆ ವಿಪ್ರ ಉದ್ಯಮಿಗಳ ವಿಬಿಎಫ್‌ ಸಮ್ಮೇಳನ

VBF Conference: ವಿಪ್ರ ಬಿಸಿನೆಸ್‌ ಫೋರಮ್‌ ಆಶ್ರಯದಲ್ಲಿ ವಿಪ್ರ ಉದ್ಯಮಿಗಳ ಸಮ್ಮೇಳನವು ಬೆಂಗಳೂರಿನಲ್ಲಿ ಆಗಸ್ಟ್‌ 8ರಂದು ಶನಿವಾರ ನಡೆಯಲಿದೆ. ನಗರದ ಕೆಜಿ ರಸ್ತೆಯಲ್ಲಿರುವ ಎಫ್‌ಕೆಸಿಸಿಐ ಸಂಸ್ಥೆಯ ಸರ್‌ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಈ ಸಮ್ಮೇಳನ ಅದ್ಧೂರಿಯಾಗಿ ನಡೆಯಲಿದೆ.

Karnataka Cabinet expansion: ಹಾವೇರಿ ಶಾಸಕ ರುದ್ರಪ್ಪ ಲಮಾಣಿಗೆ ಎರಡನೇ ಬಾರಿಗೆ ಒಲಿದು ಬಂದ ಸಚಿವ ಸ್ಥಾನ

ಶಾಸಕ ರುದ್ರಪ್ಪ ಲಮಾಣಿಗೆ ಎರಡನೇ ಬಾರಿಗೆ ಒಲಿದು ಬಂದ ಸಚಿವ ಸ್ಥಾನ

Rudrappa Lamani: ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಎರಡನೇ ಬಾರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಅವರು ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದು, ಶಿಕ್ಷಣ, ನೀರಾವರಿ, ಮೂಲಸೌಕರ್ಯ ಹಾಗೂ ಸಾಮಾಜಿಕ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ್ದಾರೆ.

ಕರ್ನಾಟಕಕ್ಕೆ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ; ಪ್ರಧಾನಿ ಮೋದಿಗೆ ಸಿಎಂ ಡಿ.ಕೆ.ಶಿವಕುಮಾರ್ ಮನವಿ

ಕರ್ನಾಟಕಕ್ಕೆ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ: ಪಿಎಂ ಮೋದಿಗೆ ಸಿಎಂ ಮನವಿ

CM DK Shivakumar: ನಮ್ಮ ಸರ್ಕಾರ ಕೂಡ ವಿವೇಕಾನಂದರ ಆಲೋಚನೆ ಹೊಂದಿದೆ. ಯುವ ಯುಗ, ನವ ಯುಗ ನಮ್ಮ ಸರ್ಕಾರದ ಘೋಷಣೆ. ನಾವು ಟೀಮ್ ಕರ್ನಾಟಕವಾಗಿ ಕೆಲಸ ಮಾಡಬೇಕು. ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಯುವಕರು ಒಂದಾಗಬೇಕು, ಅವರ ಕಲೆ, ಕ್ರೀಡೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಯುವಕರ ಸಂಘ ಸ್ಥಾಪಿಸಲು ಮುಂದಾಗಿದ್ದೇವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಹಾವೇರಿಯಲ್ಲಿ ವರುಣನ ಆರ್ಭಟ: ರೈತರ ಮುಖದಲ್ಲಿ ಮಂದಹಾಸ, ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ

ಹಾವೇರಿಯಲ್ಲಿ ವರುಣನ ಆರ್ಭಟ: ರೈತರ ಮುಖದಲ್ಲಿ ಮಂದಹಾಸ

Haveri News: ಹಾವೇರಿ ಜಿಲ್ಲೆಯ ರೈತರಿಗೆ ಶನಿವಾರ ಸುರಿದ ಧಾರಾಕಾರ ಮಳೆ ಹೊಸ ಆಶಾಕಿರಣ ಮೂಡಿಸಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಧ್ಯಾಹ್ನದ ವೇಳೆಗೆ ಸುರಿದ ಉತ್ತಮ ಮಳೆಯಿಂದ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳು ತಂಪಾದ ವಾತಾವರಣಕ್ಕೆ ಸಾಕ್ಷಿಯಾದವು.

ಕಬಿನಿ ತುಂಬುತ್ತಿದೆ, ಜಲಾಶಯ ತುಂಬಿದಾಗ ನೀರನ್ನು ಹರಿಸಲೇಬೇಕು ಎಂದ ಸಿಎಂ ಡಿ.ಕೆ. ಶಿವಕುಮಾರ್

ಕಬಿನಿ ತುಂಬುತ್ತಿದೆ, ಜಲಾಶಯ ತುಂಬಿದಾಗ ನೀರನ್ನು ಹರಿಸಲೇಬೇಕು: ಸಿಎಂ

CM DK Shivakumar: ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್‌, ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಅಣೆಕಟ್ಟು ತುಂಬಿದಾಗ ನೀರು ಹರಿಸಲೇಬೇಕಾಗುತ್ತದೆ. ಅದನ್ನು ಹಿಡಿದಿಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Loading...