ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Siddalinga Swamy

[email protected]

Articles
ಬೆಂಗಳೂರಿನಲ್ಲಿ ಕಟ್ಟಡಗಳ ಎತ್ತರದ ನಿರ್ಬಂಧ ಸಡಿಲಿಸಿ; ಕೇಂದ್ರ ರಕ್ಷಣಾ ಸಚಿವರಿಗೆ ಡಿ.ಕೆ.ಶಿವಕುಮಾರ್‌ ಮನವಿ

ಬೆಂಗಳೂರಿನಲ್ಲಿ ಕಟ್ಟಡಗಳ ಎತ್ತರದ ನಿರ್ಬಂಧ ಸಡಿಲಿಕೆಗೆ ಡಿಕೆಶಿ ಮನವಿ

DK Shivakumar: ರಕ್ಷಣಾ ಇಲಾಖೆ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಕಟ್ಟಡಗಳ ಎತ್ತರದ ನಿರ್ಬಂಧಗಳು ಬೆಂಗಳೂರಿನ ಪ್ರಗತಿಗೆ ಅಡ್ಡಿಯಾಗಿದ್ದು, ಸುರಕ್ಷತೆ ಹಾಗೂ ಪ್ರಗತಿಯ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧಗಳನ್ನು ಸಡಿಲಗೊಳಿಸಿ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ.

ಚಿಂಚೋಳಿಯಲ್ಲಿ ಭೀಕರ ಸರಣಿ ಅಪಘಾತ; ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾಗಿ ಬಸ್‌ ಪಲ್ಟಿ, 10 ಮಂದಿಗೆ ಗಂಭೀರ ಗಾಯ

ಚಿಂಚೋಳಿಯಲ್ಲಿ ಭೀಕರ ಸರಣಿ ಅಪಘಾತ; 10 ಜನರಿಗೆ ಗಾಯ

Chincholi Road Accident: ಚಿಂಚೋಳಿ ತಾಲೂಕಿನ ಬೀದರ್-ಮಹಬೂಬ್ ನಗರ ರಾಷ್ಟ್ರೀಯ ಹೆದ್ದಾರಿಯ ಪೋಲಕಪಳ್ಳಿ ತಾಂಡಾ ಬಳಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್, ಸಿಮೆಂಟ್ ಟ್ಯಾಂಕರ್ ಹಾಗೂ ಟಂ ಟಂ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಹತ್ತು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜರುಗಿದೆ.

Karnataka SSLC Result: ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ: ತುಮಕೂರು ಜಿಲ್ಲೆಯಲ್ಲಿ ತಿಪಟೂರು ತಾಲೂಕು ಪ್ರಥಮ ಸ್ಥಾನ

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ: ತಿಪಟೂರು ತಾಲೂಕು ಜಿಲ್ಲೆಗೆ ಪ್ರಥಮ

Karnataka SSLC Result: 2025-26ನೇ ಸಾಲಿನಲ್ಲಿ ತಾಲೂಕಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ತಿಪಟೂರು ತಾಲೂಕಿನಲ್ಲಿ ಒಟ್ಟು 2251 ಮಕ್ಕಳು ಪರೀಕ್ಷೆಯನ್ನು ಬರೆದಿದ್ದು 2190 ವಿದ್ಯಾರ್ಥಿಗಳು ಉತ್ತಿರ್ಣರಾಗಿರುತ್ತಾರೆ. 61 ವಿದ್ಯಾರ್ಥಿಗಳು ಅನುತ್ತಿರ್ಣರಾಗಿದ್ದಾರೆ. ತಾಲೂಕಿನ ಒಟ್ಟು ಫಲಿತಾಂಶ 97.29% ಬಂದಿದ್ದು ಈ ಬಾರಿ ನಮ್ಮ ತಾಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಮಣಿ ತಿಳಿಸಿದ್ದಾರೆ.

ಬಸವಕಲ್ಯಾಣದಲ್ಲಿ ಬಸವೇಶ್ವರರ ರಥೋತ್ಸವದ ವೇಳೆ ಘೋರ ದುರಂತ; ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

ಬಸವಕಲ್ಯಾಣದಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

Bidar News: ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಬಸವೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ ವೇಳೆ ಭೀಕರ ಅವಘಡ ಸಂಭವಿಸಿದೆ. ರಥ ಎಳೆಯುವ ವೇಳೆ ಆಯಾ ತಪ್ಪಿ ಚಕ್ರಕ್ಕೆ ಸಿಲುಕಿ ಗಾಯಗೊಂಡಿದ್ದ ಧನರಾಜ ಚಾಕೂರೆ (65) ಮೃತಪಟ್ಟಿದ್ದಾರೆ.

ಮೇ 9ರಂದು ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ: ಗೋವಿಂದ ಕಾರಜೋಳ

ಮೇ 9ರಂದು ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ: ಕಾರಜೋಳ

Govind Karjol: ಮೇ 9ರಂದು ಚಿತ್ರದುರ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್‌ 26ರ ಬೆಳಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

2,000 ರುಪಾಯಿಗೆ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ; ಮಹಿಳೆಯರಿಗೆ ಎಚ್‌.ಡಿ. ಕುಮಾರಸ್ವಾಮಿ ಕಿವಿಮಾತು

2,000 ರುಪಾಯಿಗೆ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ ಎಂದ ಎಚ್‌ಡಿಕೆ

HD Kumaraswamy: ಕಾಂಗ್ರೆಸ್ ಸರ್ಕಾರ ಸಾಲ ಮಾಡಿ ನಿಮ್ಮ ತಲೆಯ ಮೇಲೆ ಹೊರೆ ಹೊರೆಸಿ 2,000 ರುಪಾಯಿ ಗ್ಯಾರಂಟಿ ಕೊಡುತ್ತಿದೆ. ದಿನ ಬೆಳಗ್ಗೆ ಬೆಲೆ ಏರಿಕೆ ಮಾಡಿ ತೆರಿಗೆ ಏರಿಸಿದರೆ 2,000 ರುಪಾಯಿ ಏನು ಬಂತು? ನಾನಾದರೆ 5,000 ರುಪಾಯಿ ಕೊಡುತ್ತಿದ್ದೆ. ನಿಮಗೆ ಗ್ಯಾರಂಟಿ ಬೇಕಾದರೆ ನಾನೇ 5,000 ರುಪಾಯಿ ಕೊಡುತ್ತೇನೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಎಡವಟ್ಟು; ಶಿರಸಿಯ ಅಂಧ ವಿದ್ಯಾರ್ಥಿನಿ ಪರೀಕ್ಷೆಗೆ ಹಾಜರಾಗಿದ್ದರೂ ಗೈರು ಎಂದು ಉಲ್ಲೇಖ

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಎಡವಟ್ಟು; ಆತಂಕದಲ್ಲಿ ಅಂಧ ವಿದ್ಯಾರ್ಥಿನಿ

Sirsi News: ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಣೆ ವೇಳೆ ನಡೆದ ಎಡವಟ್ಟಿನಿಂದ ಅಂಧ ವಿದ್ಯಾರ್ಥಿನಿಯೊಬ್ಬಳ ಭವಿಷ್ಯ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಶಿರಸಿ ನಗರದ ಯೂನಿಯನ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಲೀಸಾ ಖಾನಮ್ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಎಲ್ಲ ಆರು ವಿಷಯಗಳನ್ನೂ ಬರೆದಿದ್ದರೂ, ಫಲಿತಾಂಶದಲ್ಲಿ ಸಮಾಜ ವಿಜ್ಞಾನ ವಿಷಯದಲ್ಲಿ ಗೈರು ಎಂದು ನಮೂದಿಲಾಗಿದೆ.

Karnataka SSLC Result: 623 ಅಂಕ ಗಳಿಸಿದ ಗಣೇಶ್ ಬೋಸ್ಲೆ ಕಲಬುರಗಿಗೆ ಜಿಲ್ಲೆಗೆ ಟಾಪರ್

ಎಸ್‌ಎಸ್‌ಎಲ್‌ಸಿಐಲ್ಲಿ 623 ಅಂಕ ಗಳಿಸಿ ಗಣೇಶ್ ಬೋಸ್ಲೆ ಕಲಬುರಗಿಗೆ ಟಾಪರ್

Karnataka SSLC Exam Result: ಕಲಬುರಗಿ ನಗರದ ಅಜೀಮ್ ಪ್ರೇಮ್‌ಜೀ ಶಾಲೆಯ ವಿದ್ಯಾರ್ಥಿ ಗಣೇಶ್ ಬೋಸ್ಲೆ 625ಕ್ಕೆ 623 ಅಂಕಗಳನ್ನು ಪಡೆಯುವ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

Karnataka SSLC Result: 623 ಅಂಕ ಗಳಿಸಿ ಹಾವೇರಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ನಿವೇದಿತಾ

ಎಸ್ಸೆಸ್ಸೆಲ್ಸಿಯಲ್ಲಿ 623 ಅಂಕ ಗಳಿಸಿದ ಹಾವೇರಿ ಜಿಲ್ಲೆಯ ನಿವೇದಿತಾ

Haveri News: ಎಸ್‌ಎಸ್‌ಎಲ್‌ಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಹಾವೇರಿ ಜಿಲ್ಲೆಗೆ ವಿದ್ಯಾರ್ಥಿನಿ ನಿವೇದಿತಾ ಅಜ್ಜಮ್ಮನವರ 625ಕ್ಕೆ 623 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದಾರೆ. ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಸ್ಪಂದನ ಪ್ರೌಢಶಾಲೆಯ ವಿದ್ಯಾರ್ಥಿನಿ ನಿವೇದಿತಾ ಪರಶುರಾಮ ಅಜ್ಜಮ್ಮನವರ 625ರಲ್ಲಿ 623 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.

Wind Energy: ಪವನ ಶಕ್ತಿ ಸಾಮರ್ಥ್ಯದಲ್ಲಿ ಜಾಗತಿಕವಾಗಿ 4ನೇ ಸ್ಥಾನದಲ್ಲಿದೆ ಭಾರತ: ಪ್ರಲ್ಹಾದ್ ಜೋಶಿ‌

ಪವನ ಶಕ್ತಿ ಸಾಮರ್ಥ್ಯದಲ್ಲಿ ಜಾಗತಿಕವಾಗಿ 4ನೇ ಸ್ಥಾನದಲ್ಲಿದೆ ಭಾರತ: ಜೋಶಿ‌

Pralhad Joshi: 150 ಮೀಟರ್ ಹಬ್ ಎತ್ತರದಲ್ಲಿ ಭಾರತದ ಪವನ ಶಕ್ತಿ ಸಾಮರ್ಥ್ಯ ಸುಮಾರು 1164 GW ಎಂಬ ಅಂದಾಜಿದ್ದು, 2030ರ ವೇಳೆಗೆ 100 GW ಮತ್ತು 2036ರ ವೇಳೆಗೆ 156 GW ಪವನ ಶಕ್ತಿಯನ್ನು ಸಾಧಿಸುತ್ತದೆ ಮತ್ತು 2070ರ ವೇಳೆಗೆ ನಿವ್ವಳ-ಶೂನ್ಯ ಗುರಿಗೆ ಗಮನಾರ್ಹ ಕೊಡುಗೆ ನೀಡುತ್ತದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tesla Model Y L: ಒಂದೇ ಚಾರ್ಜ್‌ಗೆ 681 ಕಿ.ಮೀ. ರೇಂಜ್‌; ಭಾರತಕ್ಕೆ ಲಗ್ಗೆ ಇಟ್ಟ ಟೆಸ್ಲಾ ಹೊಸ ಕಾರು!

ಒಂದೇ ಚಾರ್ಜ್‌ಗೆ 681 ಕಿ.ಮೀ. ರೇಂಜ್‌; ಹೊಸ ಟೆಸ್ಲಾ ಕಾರು ಮಾರುಕಟ್ಟೆಗೆ!

Tesla EV Car: ಟೆಸ್ಲಾ ಭಾರತದಲ್ಲಿ ತನ್ನ ಹೊಚ್ಚ ಹೊಸ, ಎಲ್ಲಾ ವೈಶಿಷ್ಟ್ಯಗಳನ್ನೊಳಗೊಂಡ 6-ಸೀಟರ್ ಕಾರು 'ಮಾಡೆಲ್ ವೈ ಎಲ್' ಅನ್ನು ಬಿಡುಗಡೆ ಮಾಡಿದೆ. ಮುಂಬೈನ ಬಲ್ಲಾರ್ಡ್ ಪಿಯರ್ ಡೌನ್‌ಟೌನ್ ಎಕ್ಸ್‌ಪೀರಿಯೆನ್ಸ್ ಸೆಂಟರ್‌ನಲ್ಲಿ ಈ ನೂತನ ಕಾರನ್ನು ಅನಾವರಣಗೊಳಿಸಲಾಗಿದೆ.

Dharwad Akashvani: 'ಧಾರವಾಡ ಆಕಾಶವಾಣಿ ಕೇಂದ್ರ' ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ ಆದೇಶ: ಜೋಶಿ ಮನವಿಗೆ ಸ್ಪಂದನೆ

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ ಆದೇಶ

Pralhad Joshi: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಮನವಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಸ್ಪಂದಿಸಿದ್ದು, ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಪ್ರಸಾರ ಭಾರತಿಗೆ ಆದೇಶಿಸಿದ್ದಾರೆ.

ಸಾಫ್ಟ್‌ವೇರ್ ವಿನ್ಯಾಸ, ಅಭಿವೃದ್ಧಿ ಕಾರ್ಯಗಳಿಗೆ ಎಐ: ಓಪನ್ಎಐ ಜತೆ ಕೈ ಜೋಡಿಸಿದ ಕಾಗ್ನಿಜೆಂಟ್

ಓಪನ್ಎಐನ 'ಕೋಡೆಕ್ಸ್' ಅಳವಡಿಸಿಕೊಳ್ಳಲು ಕಾಗ್ನಿಜೆಂಟ್ ಒಪ್ಪಂದ

Cognizant: ಪ್ರಖ್ಯಾತ ಐಟಿ ಸೇವಾ ಸಂಸ್ಥೆ ಕಾಗ್ನಿಜೆಂಟ್, ಎಂಟರ್‌ಪ್ರೈಸ್ ಗ್ರಾಹಕರಿಗೆ ಎಐ ತಂತ್ರಜ್ಞಾನದ ಗರಿಷ್ಠ ಲಾಭ ಒದಗಿಸಲು ಓಪನ್ಎಐ ಜತೆ ಮಹತ್ವದ ಪಾಲುದಾರಿಕೆ ಮಾಡಿಕೊಂಡಿದೆ. ಈ ಒಪ್ಪಂದದ ಅಡಿಯಲ್ಲಿ ಓಪನ್ಎಐನ 'ಕೋಡೆಕ್ಸ್' ತಂತ್ರಜ್ಞಾನವನ್ನು ಕಾಗ್ನಿಜೆಂಟ್ ತನ್ನ ಸಾಫ್ಟ್‌ವೇರ್ ಎಂಜಿನಿಯರಿಂಗ್ ವಿಭಾಗದಲ್ಲಿ ಅಳವಡಿಸಿಕೊಳ್ಳಲಿದೆ.

ಪ್ರಧಾನಿ ಮೋದಿ ವಿರುದ್ಧ ಲಘು ಹೇಳಿಕೆ; ಖರ್ಗೆ ಕ್ಷಮೆಯಾಚಿಸಲಿ ಎಂದು ಜೋಶಿ ಆಗ್ರಹ

ಪ್ರಧಾನಿ ಮೋದಿ ವಿರುದ್ಧ ಖರ್ಗೆ ಹೇಳಿಕೆಗೆ ಜೋಶಿ ತೀವ್ರ ಖಂಡನೆ

Pralhad Joshi: ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಈರ್ವರೂ ಘನತೆ, ಗೌರವ ಮರೆತು ಪ್ರಧಾನಿ ವಿರುದ್ಧ ಕೆಳಮಟ್ಟದ ಭಾಷಣ ಮಾಡಿರುವುದು ದುರಹಂಕಾರದ ಪರಮಾವಧಿ. ಇದು ಅವರ ನೀಚ ರಾಜಕಾರಣವನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಕಿಡಿಕಾರಿದ್ದಾರೆ.

Akshaya Tritiya: ಇನ್‌ಸ್ಟಾಮಾರ್ಟ್‌ನಲ್ಲಿ 2 ಲಕ್ಷದ ಚಿನ್ನ-ಬೆಳ್ಳಿ ಆರ್ಡರ್‌ ಮಾಡಿದ ಬೆಂಗಳೂರಿಗ; ಬಂಗಾರದ ಖರೀದಿ 49 ಪಟ್ಟು ಹೆಚ್ಚಳ!

ಇನ್‌ಸ್ಟಾಮಾರ್ಟ್‌ನಲ್ಲಿ 2 ಲಕ್ಷದ ಚಿನ್ನ-ಬೆಳ್ಳಿ ಆರ್ಡರ್‌ ಮಾಡಿದ ಬೆಂಗಳೂರಿಗ

Instamart: 2026ರ ಅಕ್ಷಯ ತೃತೀಯ ದಿನದಂದು ಕ್ವಿಕ್ ಕಾಮರ್ಸ್ ದೈತ್ಯ 'ಇನ್‌ಸ್ಟಾಮಾರ್ಟ್' ದಾಖಲೆಯ ಮಟ್ಟದ ವಹಿವಾಟು ನಡೆಸಿದೆ. ಹಬ್ಬದ ಖರೀದಿ ಎಂದರೆ ಕೇವಲ ಚಿನ್ನವಷ್ಟೇ ಅಲ್ಲ ಎಂಬುದನ್ನು ಬೆಂಗಳೂರಿನ ಗ್ರಾಹಕನೊಬ್ಬ ಸಾಬೀತು ಮಾಡಿದ್ದಾನೆ. ಈತ ಒಂದೇ ಆರ್ಡರ್‌ನಲ್ಲಿ ಬರೋಬ್ಬರಿ 1,99,917 ರೂ. ಮೌಲ್ಯದ ವಸ್ತುಗಳನ್ನು ಖರೀದಿಸಿದ್ದಾನೆ! ಇದರಲ್ಲಿ 1.65 ಲಕ್ಷ ರುಪಾಯಿ ಮೌಲ್ಯದ ಬೆಳ್ಳಿಯ ಗಟ್ಟಿಗಳು, 31,800 ರುಪಾಯಿ ಮೌಲ್ಯದ ಚಿನ್ನದ ನಾಣ್ಯಗಳು ಇದ್ದವು.

Women Reservation Bill: ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ ಸಿದ್ದರಾಮಯ್ಯ

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ

CM Siddaramaiah: ಪ್ರಸ್ತುತ ಮಹಿಳಾ ಮೀಸಲಾತಿ ಬಿಲ್ ಅನ್ನು ಕಾಂಗ್ರೆಸ್ ವಿರೋಧಿಸಿತು ಎಂದು ಬಿಜೆಪಿ ಸುಳ್ಳುಪ್ರಚಾರ ಮಾಡುತ್ತಿದೆ. ಆದರೆ ಕಾಂಗ್ರೆಸ್ ಎಂದಿಗೂ ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾಸಿಕ್ ಟಿಸಿಎಸ್, ಹುಬ್ಬಳ್ಳಿ ಜಿಮ್ ಪ್ರಕರಣ; ಸಮಗ್ರ ತನಿಖೆಗೆ ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಮನವಿ

ನಾಸಿಕ್ ಟಿಸಿಎಸ್, ಹುಬ್ಬಳ್ಳಿ ಜಿಮ್ ಪ್ರಕರಣ; ಸಮಗ್ರ ತನಿಖೆಗೆ ಆಗ್ರಹ

ಮಹಾರಾಷ್ಟ್ರದ ನಾಸಿಕ್‌ನ ಐಟಿ ಕಂಪನಿಯಲ್ಲಿ ಬಹಿರಂಗಗೊಂಡಿರುವ ಗಂಭೀರ ಪ್ರಕರಣದ ಹಿನ್ನೆಲೆ ರಾಜ್ಯದ ವಿವಿಧ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಮತ್ತು ಜಿಮ್‌ಗಳಲ್ಲಿ ಮಹಿಳಾ ಸುರಕ್ಷತೆ, ಧಾರ್ಮಿಕ ಒತ್ತಡ ಮತ್ತು ಕಾರ್ಯಸ್ಥಳದ ದುರ್ಬಳಕೆ ಕುರಿತಾಗಿ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳು, ಗೃಹ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಯಿತು.

ಇಡಿ ದಾಳಿ: ಕೇಂದ್ರ ಸರ್ಕಾರ ಕಾಂಗ್ರೆಸ್‌ನವರನ್ನು ಟಾರ್ಗೆಟ್‌ ಮಾಡಿದೆ ಎಂದ ಸಿಎಂ

ಇಡಿ ದಾಳಿ: ಕೇಂದ್ರ ಸರ್ಕಾರ ಕಾಂಗ್ರೆಸ್‌ನವರನ್ನು ಗುರಿಯಾಗಿಸಿದೆ: ಸಿಎಂ

CM Siddaramaiah: ಬಿಜೆಪಿಯವರೇ ಮಹಿಳಾ ಮೀಸಲಾತಿ ವಿರೋಧಿಗಳು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನಕ್ಕೆ 73, 74 ನೇ ತಿದ್ದುಪಡಿಗಳನ್ನು ತಂದು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದಿದ್ದು ಕಾಂಗ್ರೆಸ್. ಅದನ್ನು ರಾಜ್ಯಸಭೆಯಲ್ಲಿ ಕೆಡವಿದವರು ಎನ್.ಡಿ. ಎ ಈಗ ರಾಜಕೀಯಕ್ಕಾಗಿ ಕ್ಷೇತ್ರ ಮರು ವಿಂಗಡಣೆ ಸೇರಿಸಿ ಮಸೂದೆ ಮಂಡಿಸಿದ್ದಾರೆ. ನಮ್ಮದು ಕ್ಷೇತ್ರ ಮರು ವಿಂಗಡಣೆಗೆ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಣಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೂಮಳೆಯ ಸ್ವಾಗತ Video

ಹುಣಸೂರಿನಲ್ಲಿ ಬಸವ ಮಹಾದ್ವಾರ ಲೋಕಾರ್ಪಾಣೆಗೊಳಿಸಿದ ಸಿಎಂ

CM Siddaramaiah: ಮೈಸೂರು ಜಿಲ್ಲೆಯ ಹುಣಸೂರಿಗೆ ಸೋಮವಾರ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳು ಜೆಸಿಬಿ ಮೂಲಕ ಹೂಮಳೆಯ ಸುರಿಸುವ ಮೂಲಕ ಸ್ವಾಗತ ಕೋರಿದರು. ಮಾದಳ್ಳಿಯ ಶ್ರೀ ಉಕ್ಕಿನಕಂತೆ ಮಠದಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಸವ ಮಹಾದ್ವಾರವನ್ನು ಲೋಕಾರ್ಪಣೆಗೊಳಿಸಿದರು. ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿ, ಶ್ರೀ ನಟರಾಜ ಸ್ವಾಮೀಜಿ, ಶ್ರೀ ಸಾಂಬ ಸದಾಶಿವ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು.

Basava Jayanti 2026: ಬಸವಣ್ಣನವರ ವಿಚಾರಗಳನ್ನು ನಮ್ಮ ಸರ್ಕಾರ ಅನುಸರಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ವಿಚಾರಗಳನ್ನು ನಮ್ಮ ಸರ್ಕಾರ ಅನುಸರಿಸುತ್ತಿದೆ: ಸಿಎಂ

CM Siddaramaiah: ವೈರುಧ್ಯತೆಯ ಸಮಾಜದಲ್ಲಿ ಬದಲಾವಣೆ ತರಲು ಬುದ್ಧ, ಬಸವಾದಿ ಶರಣರು ಶ್ರಮಿಸಿದ್ದರು. ಆದರೂ ಇಂದಿಗೂ ಜಾತಿವ್ಯವಸ್ಥೆ ಪ್ರಚಲಿತವಾಗಿದೆ. ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ. ಎಲ್ಲರಿಗೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಶಕ್ತಿ ದೊರಕಿದಾಗ ಮಾತ್ರ ಚಲನೆಯಿಲ್ಲದ ಜಾತಿವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Swiggy Headquarters: ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಪ್ರಧಾನ ಕಚೇರಿ ಸ್ಥಳಾಂತರಿಸಿದ 'ಸ್ವಿಗ್ಗಿ'; ಪರಿಸರ ಸ್ನೇಹಿ ನೂತನ ಕ್ಯಾಂಪಸ್‌ನ ವಿಶೇಷತೆಗಳೇನು?

ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಪ್ರಧಾನ ಕಚೇರಿ ಸ್ಥಳಾಂತರಿಸಿದ 'ಸ್ವಿಗ್ಗಿ'

Swiggy: 'ಸ್ವಿಗ್ಗಿ' ತನ್ನ ಕಾರ್ಪೊರೇಟ್ ಪ್ರಧಾನ ಕಚೇರಿಯನ್ನು ಬೆಂಗಳೂರಿನ ಐಟಿ ಕಾರಿಡಾರ್ 'ವೈಟ್‌ಫೀಲ್ಡ್‌' ಗೆ ಸ್ಥಳಾಂತರಿಸಿದೆ. ತನ್ನ ಹೊಸ ಕಚೇರಿಯನ್ನು ʼದಿ ಎವೆರಿಡೇ ಎನೇಬಲರ್ʼ ಎಂಬ ಪರಿಕಲ್ಪನೆಯಡಿ ವಿನ್ಯಾಸಗೊಳಿಸಿದೆ. ಕಚೇರಿಯ ಒಳಾಂಗಣವು ಸ್ವಿಗ್ಗಿಯ ಕಾರ್ಯವೈಖರಿಯನ್ನು ಪ್ರತಿಬಿಂಬಿಸುವಂತಿದೆ.

ಹೊಸ ಜನಗಣತಿಯ ನಂತರ ಕ್ಷೇತ್ರ ಮರುವಿಂಗಡಣೆ ಮಾಡುವುದು ಸೂಕ್ತ: ಸಿಎಂ ಸಿದ್ದರಾಮಯ್ಯ

ಹೊಸ ಜನಗಣತಿಯ ನಂತರ ಕ್ಷೇತ್ರ ಮರುವಿಂಗಡಣೆ ಮಾಡುವುದು ಸೂಕ್ತ: ಸಿಎಂ

CM Siddaramaiah: ಸಂವಿಧಾನಕ್ಕೆ 73, 74ನೇ ತಿದ್ದುಪಡಿಯನ್ನು ತಂದಿದ್ದು ಕಾಂಗ್ರೆಸ್ ಪಕ್ಷ. ಸ್ಥಳೀಯ ಸಂಸ್ಥೆಗಳಲ್ಲಿ 50% ಮಹಿಳಾ ಮೀಸಲಾತಿ ತಂದಿದ್ದು ಕೂಡ ಕಾಂಗ್ರೆಸ್ ಪಕ್ಷವೇ. 2023ರಲ್ಲಿಯೇ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದು ಆಗಲೇ ಅದನ್ನು ಜಾರಿ ಮಾಡಬೇಕಿತ್ತು, ಇಲ್ಲಿಯವರೆಗೆ ಏಕೆ ಕಾಯಬೇಕಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಹಿಳಾ ಮೀಸಲು ವಿರೋಧಿಸಿ ಕಾಂಗ್ರೆಸ್ ಅಪರಾಧಿ ಸ್ಥಾನದಲ್ಲಿ ನಿಂತಿದೆ: ಜೋಶಿ

ಮಹಿಳಾ ಮೀಸಲು ವಿರೋಧಿಸಿ ಕಾಂಗ್ರೆಸ್ ಅಪರಾಧಿ ಸ್ಥಾನದಲ್ಲಿ ನಿಂತಿದೆ: ಜೋಶಿ

Pralhad Joshi: ಕಾಂಗ್ರೆಸ್ ಪಕ್ಷ ಶೇ.33ರಷ್ಟು ಮಹಿಳಾ ಮೀಸಲಾತಿ ಬೆಂಬಲಿಸದೇ ಇರುವುದು "ಮಹಿಳಾ ವಿರೋಧಿ" ಎಂಬುದನ್ನು ರುಜುವಾತುಪಡಿಸಿದೆ. ದೇಶದ ಒಳಿತಿಗೆ ಯಾವತ್ತೂ ಹೀಗೆ ವಿರೋಧವಾಗೇ ನಡೆದುಕೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.

ಮಹಿಳಾ ವಿರೋಧಿ ನಡೆಯಿಂದ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೆ ಮುಖಭಂಗ ಆಗಲಿದೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ದಿನಗಳಲ್ಲಿ ಕಾಂಗ್ರೆಸ್ಸಿಗೆ ಮುಖಭಂಗ ಆಗಲಿದೆ: ಛಲವಾದಿ

Chalavadi Narayanaswamy: ಕಾಂಗ್ರೆಸ್ ಪಕ್ಷ ಇರುವುದೇ ದೇಶವನ್ನು ಪೋಷಣೆ ಮಾಡಲಿಕ್ಕಲ್ಲ. ಶೋಷಣೆ ಮಾಡಲಿಕ್ಕೆ ಎಂಬುದು ಸ್ಪಷ್ಟವಾಗಿ ಗೊತ್ತಾಗಿದೆ. ಮಸೂದೆಗೆ ಕಾಂಗ್ರೆಸ್, ಅವರ ಮಿತ್ರ ಪಕ್ಷಗಳಿಂದ ಆದ ಸೋಲು ದೇಶದಲ್ಲಿರುವ ಶೇ.50 ಮಹಿಳೆಯರಿಗೆ ಮಾಡಿದ ದ್ರೋಹ, ಅನ್ಯಾಯ, ಶೋಷಣೆ ಎಂದು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

Loading...