ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Sushmitha Jain

[email protected]

Articles
Vastu Tips: ಲಿವಿಂಗ್ ರೂಮ್ ವಾಸ್ತು: ಮನೆಗೆ ಸುಖ, ಸಮೃದ್ಧಿ ತರಲು ಪಾಲಿಸಬೇಕಾದ ಪ್ರಮುಖ ನಿಯಮಗಳು

ಲಿವಿಂಗ್ ರೂಮ್ ವಾಸ್ತು ಟಿಪ್ಸ್

ವಾಸ್ತು ಶಾಸ್ತ್ರದ ಪ್ರಕಾರ ಲಿವಿಂಗ್ ರೂಮ್‌ನ ದಿಕ್ಕು, ಪ್ರವೇಶ ದ್ವಾರ, ಪೀಠೋಪಕರಣಗಳ ವಿನ್ಯಾಸ, ಬಣ್ಣಗಳ ಆಯ್ಕೆ ಹಾಗೂ ಅಲಂಕಾರಗಳು ಮನೆಯೊಳಗಿನ ಸಕಾರಾತ್ಮಕ ಶಕ್ತಿಯ ಹರಿವಿನ ಮೇಲೆ ಪರಿಣಾಮ ಬೀರುತ್ತವೆ ಎಂದು ನಂಬಲಾಗಿದೆ. ಈ ಸರಳ ವಾಸ್ತು ನಿಯಮಗಳನ್ನು ಪಾಲಿಸುವ ಮೂಲಕ ಮನೆಯಲ್ಲಿ ನೆಮ್ಮದಿ, ಆರೋಗ್ಯ ಮತ್ತು ಸಮೃದ್ಧಿಯ ವಾತಾವರಣವನ್ನು ನಿರ್ಮಿಸಬಹುದು.

ಕೊನೆಗೂ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಲು ಮುಂದಾದ ಸೋನಮ್  ವಾಂಗ್ಚುಕ್; ಕೇಂದ್ರ ಸರ್ಕಾರ ಕಂಡಿಷನ್ಸ್‌ ಒಪ್ಲೇ ಬೇಕು

ಪ್ರತಿಭಟನಾ ವಿದ್ಯಾರ್ಥಿಗಳ ವಿರುದ್ಧ ಕೇಸ್‌ ಬೇಡ: ಸೋನಮ್‌ ವಾಂಗ್ಚುಕ್

Sonam Wangchuk: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟ ಭರವಸೆ ನೀಡಿದರೆ ತಕ್ಷಣವೇ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುವುದಾಗಿ ಹೋರಾಟಗಾರ ಸೋನಮ್ ವಾಂಗ್ಚುಕ್ ತಿಳಿಸಿದ್ದಾರೆ. ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ವಿದ್ಯಾರ್ಥಿಗಳ ಹಕ್ಕುಗಳನ್ನು ಕಾಪಾಡುವಂತೆ ಹಾಗೂ ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಪೊಲೀಸ್ ಪ್ರಕರಣಗಳನ್ನು ದಾಖಲಿಸದಂತೆ ಅವರು ಮನವಿ ಮಾಡಿದ್ದಾರೆ.

"10 ವರ್ಷಗಳಲ್ಲಿ 152 ಪಶ್ನೆಪತ್ರಿಕೆ ಸೋರಿಕೆ, ಒಂದೂ ಶಿಕ್ಷೆಯಾಗಿಲ್ಲ": ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

152 ಪ್ರಶ್ನೆಪತ್ರಿಕೆ ಸೋರಿಕೆ; ಸರ್ಕಾರ ವಿರುದ್ಧ ರಾಹುಲ್ ಕಿಡಿ

Rahul Gandhi: 10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿದ್ದು, ಒಂದೇ ಒಂದು ಪ್ರಕರಣದಲ್ಲೂ ಶಿಕ್ಷೆಯಾಗಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ಜತೆಗೆ ಕೇಂದ್ರ ಸರ್ಕಾರ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಕಿಡಿಕಾರಿದರು. ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ, ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಹೇಳಿಕೆ: ಪಕ್ಷದ ಬಂಡಾಯ ಶಾಸಕ ಮದನ್ ಮಿತ್ರಾಗೆ ಕಾನೂನು ಸಂಕಷ್ಟ

ಅಭಿಷೇಕ್ ಬ್ಯಾನರ್ಜಿ ವಿರುದ್ಧ ಆರೋಪ; ಮದನ್ ಮಿತ್ರಾಗೆ ಲೀಗಲ್ ನೋಟಿಸ್

Abhishek Banerjee: ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಸುಳ್ಳು ಹಾಗೂ ಮಾನಹಾನಿಕರ ಆರೋಪಗಳನ್ನು ಮಾಡಿರುವ ಆರೋಪದ ಮೇಲೆ ಬಂಡಾಯ ಶಾಸಕ ಮದನ್ ಮಿತ್ರಾಗೆ ಕಾನೂನು ನೋಟಿಸ್ ಕಳುಹಿಸಲಾಗಿದೆ. ಪಕ್ಷ ತೊರೆದ ಬಳಿಕ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಮದನ್ ಮಿತ್ರಾ ಮಾಡಿದ್ದ ಗಂಭೀರ ಆರೋಪಗಳು ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿವೆ.

''ಯುವಕರ ವಿಶ್ವಾಸ ಗೆಲ್ಲಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ'': ದೆಹಲಿ ಪ್ರತಿಭಟನೆ ತಾರಕಕ್ಕೇರಿದ ಬೆನ್ನಲ್ಲೇ ಎನ್‌ಡಿಎ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಹೊಸ ಟಾಸ್ಕ್‌

ನೀಟ್ ಅಕ್ರಮ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ ಎಂದ ಪ್ರಧಾನಿ ಮೋದಿ

Narendra Modi: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯಿಸಿ, ಯುವಕರ ವಿಶ್ವಾಸವನ್ನು ಮರುಸ್ಥಾಪಿಸುವಂತೆ ಎನ್‌ಡಿಎ ಸಂಸದರಿಗೆ ಸೂಚಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಿ ಹೇಳಿದ ಅವರು, ವಿದ್ಯಾರ್ಥಿಗಳ ಭವಿಷ್ಯ ರಕ್ಷಿಸಲು ಸರ್ಕಾರ ಬದ್ಧ ಎಂದು ತಿಳಿಸಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಸರ್ಕಾರದಿಂದ ಕಠಿಣ ಕ್ರಮ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆ ರಾಜಕೀಯ ಪ್ರೇರಿತ ಎಂದ ಕೇಂದ್ರ

ನೀಟ್ ಪ್ರಕರಣ: ರಾಜಕೀಯ ಆರೋಪಗಳಿಗೆ ಕೇಂದ್ರದ ತಿರುಗೇಟು

Dharmendra Pradhan: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಕಠಿಣ ಕ್ರಮ ಕೈಗೊಂಡಿದ್ದು, ಸಿಬಿಐ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆಯನ್ನು ರಾಜಕೀಯ ಪ್ರೇರಿತ ಎಂದು ಸರ್ಕಾರ ಹೇಳಿದ್ದು, ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧವಿರುವುದಾಗಿ ಸ್ಪಷ್ಟಪಡಿಸಿದೆ.

ನೀಟ್‌ ವಿವಾದ; ರಾಜಕೀಯಕ್ಕಾಗಿ ಬಳಸಿಕೊಳ್ಳಬೇಡಿ ಎಂದು ರಾಹುಲ್ ಗಾಂಧಿಗೆ ಧರ್ಮೇಂದ್ರ ಪ್ರಧಾನ್ ತಿರುಗೇಟು

ನೀಟ್ ವಿವಾದ: ರಾಹುಲ್ ಗಾಂಧಿ ವಿರುದ್ಧ ಧರ್ಮೇಂದ್ರ ಪ್ರಧಾನ್ ಕಿಡಿ

ನೀಟ್ ಪರೀಕ್ಷೆ ವಿಚಾರವಾಗಿ ರಾಹುಲ್ ಗಾಂಧಿ ನಡೆಸಿದ ಪ್ರತಿಭಟನೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ವಿದ್ಯಾರ್ಥಿಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಬಾರದು ಎಂದು ಹೇಳಿದ ಅವರು, ಸರ್ಕಾರ ನೀಟ್ ವಿಚಾರವನ್ನು ಸಂಸತ್‌ನಲ್ಲಿ ಚರ್ಚಿಸಿ ವಿದ್ಯಾರ್ಥಿಗಳ ಆತಂಕಗಳಿಗೆ ಪರಿಹಾರ ನೀಡಲು ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

Vastu Tips: ಮನೆಯ ಮುಖ್ಯ ಬಾಗಿಲು ಹೀಗಿದ್ದರೆ ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ!

ವಾಸ್ತು ಪ್ರಕಾರ ಮನೆಯ ಮುಖ್ಯ ಬಾಗಿಲಿಗೆ ಈ ನಿಯಮಗಳನ್ನು ಪಾಲಿಸಿ

ಮನೆಯ ಮುಖ್ಯ ಬಾಗಿಲಿನ ಸ್ವಚ್ಛತೆ, ಬೆಳಕು, ನಾಮಫಲಕ, ಅಲಂಕಾರ ಹಾಗೂ ಸರಿಯಾದ ನಿರ್ವಹಣೆ ವಾಸ್ತು ಪ್ರಕಾರ ಸಕಾರಾತ್ಮಕ ವಾತಾವರಣ ಮತ್ತು ಸಮೃದ್ಧಿಗೆ ಸಹಾಯಕವೆಂದು ನಂಬಲಾಗಿದೆ. ಹಾಗಾದ್ರೆ ಬನ್ನಿ ವಾಸ್ತು ಶಾಸ್ತ್ರದ ಸಲಹೆಯಂತೆ ಮನೆ ಬಾಗಿಲಿಗೆ ಸಂಬಂಧಪಟ್ಟಂತೆ ಯಾವ ನಿಯಮಗಳನ್ನು ಪಾಲಿಸಬೇಕು ಎಂಬುದನ್ನು ತಿಳಿಯೋಣ...

ಆಷಾಢ ಬುಧವಾರ 2026: ಗಣೇಶನ ಕೃಪೆ ಪಡೆಯಲು ಈ ಪೂಜೆಗಳು ಮತ್ತು ಪರಿಹಾರಗಳನ್ನು ತಪ್ಪದೆ ಮಾಡಿ

ಗಣೇಶನ ಅನುಗ್ರಹ ಬೇಕೇ? ಆಷಾಢ ಬುಧವಾರ ಹೀಗೆ ಮಾಡಿ

ಆಷಾಢ ಮಾಸದ ಬುಧವಾರದಂದು ಗಣೇಶ ಹಾಗೂ ಶಿವನ ಆರಾಧನೆಗೆ ವಿಶೇಷ ಮಹತ್ವವಿದೆ. ಈ ದಿನ ಗಣೇಶ ಪೂಜೆ, ಮಂತ್ರಜಪ ಹಾಗೂ ಶಿವಲಿಂಗಕ್ಕೆ ಅಭಿಷೇಕ ಮಾಡುವುದರಿಂದ ವಿಘ್ನಗಳು ದೂರವಾಗಿ ಶುಭ ಫಲಗಳು ದೊರೆಯುತ್ತವೆ ಎಂಬ ಧಾರ್ಮಿಕ ನಂಬಿಕೆಯ ಕುರಿತು ಇಲ್ಲಿದೆ ಮಾಹಿತಿ.

ಪ್ರಧಾನಿ ನಿವಾಸದ ಮುಂಭಾಗ ಕಾಂಗ್ರೆಸ್ ಪ್ರತಿಭಟನೆ: "ಅಪಾಯಕಾರಿ ನಡೆ" ಎಂದ ಕೇಂದ್ರ ಸರ್ಕಾರ

ಮೋದಿ ನಿವಾಸ ಬಳಿಯ ಪ್ರತಿಭಟನೆಗೆ ಕೇಂದ್ರ ಸರ್ಕಾರ ಟೀಕೆ

ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಎದುರು ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಗೆ ಕೇಂದ್ರ ಸರ್ಕಾರಿ ಮೂಲಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದನ್ನು ಅಪಾಯಕಾರಿ ನಡೆ ಎಂದು ಬಣ್ಣಿಸಿವೆ. ಪ್ರತಿಭಟನೆ ವೇಳೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಹಲವು ನಾಯಕರು ಪೊಲೀಸರ ವಶಕ್ಕೆ ಪಡೆದ ಘಟನೆ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಪ್ರಧಾನಿ ನರೇಂದ್ರ ಮೋದಿ ನಿವಾಸದ ಹೊರಗೆ ರಾಹುಲ್ ಗಾಂಧಿ ಧರಣಿ: ಆಮ್‌ ಆದ್ಮಿ ಪಾರ್ಟಿಯಿಂದ ವಿರೋಧ; ಕಾಂಗ್ರೆಸ್ ಹೋರಾಟದ ಹಾದಿ ತಪ್ಪಿಸುತ್ತಿದೆ ಎಂದು ಟೀಕೆ

ಮೋದಿ ನಿವಾಸದ ಎದುರು ರಾಹುಲ್ ಧರಣಿಗೆ ಆಪ್‌ ಟೀಕೆ

Rahul Gandhi: ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಹೊರಗೆ ಮಂಗಳವಾರ ಧರಣಿ ನಡೆಸಿದರು. ಈ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ಟೀಕಿಸಿದರೆ, ಸಿಜೆಪಿ ರಾಹುಲ್ ಅವರ ನಡೆಗೆ ಬೆಂಬಲ ಸೂಚಿಸಿ ಸರ್ಕಾರದ ಮೇಲೆ ಒತ್ತಡ ತರುವ ಪ್ರಯತ್ನ ಎಂದು ಹೇಳಿದೆ.

ದೆಹಲಿ ಪ್ರತಿಭಟನೆಯ ನಡುವೆ ಬರ್ಗರ್ ತಿಂದ ಸಿಜೆಪಿ ವಕ್ತಾರ ವಿಜೇತ ದಹಿಯಾಗೆ ಕೋಕ್

ಬರ್ಗರ್ ವಿವಾದ: ಸಿಜೆಪಿ ವಕ್ತಾರ ವಿಜೇತ ದಹಿಯಾ ಹುದ್ದೆಯಿಂದ ವಜಾ

Vijeta Dahiya: ದೆಹಲಿ ಪ್ರತಿಭಟನೆಯ ವೇಳೆ ಮಾಲ್‌ನಲ್ಲಿ ಬರ್ಗರ್ ತಿನ್ನುತ್ತಿರುವ ವಿಡಿಯೊ ವೈರಲ್ ಆದ ಬಳಿಕ ಸಿಜೆಪಿ ತನ್ನ ವಕ್ತಾರ ವಿಜೇತ ದಹಿಯಾ ಅವರನ್ನು ಹುದ್ದೆಯಿಂದ ವಜಾಗೊಳಿಸಿದೆ. ದಹಿಯಾ ತಾವು ಪ್ರತಿಭಟನೆ ಬಳಿಕ ಹಸಿವಾಗಿತ್ತೆಂದು ಆಹಾರ ಸೇವಿಸಲು ತೆರಳಿದ್ದೆ ಎಂದು ಸ್ಪಷ್ಟನೆ ನೀಡಿದರೂ ಪಕ್ಷ ಅವರ ನಡೆ ಅಸಂವೇದನಾಶೀಲ ಎಂದು ಶಿಸ್ತು ಕ್ರಮ ಕೈಗೊಂಡಿದೆ.

ಉತ್ತರಾಖಂಡದಲ್ಲಿ ಭಾರಿ ಮಳೆ: ಚಾರ್ ಧಾಮ್ ಯಾತ್ರೆ ಸ್ಥಗಿತ

ಉತ್ತರಾಖಂಡದಲ್ಲಿ ಮಳೆ ಅಬ್ಬರ: ಚಾರ್ ಧಾಮ್ ಯಾತ್ರೆ ಸ್ಥಗಿತ

Uttarakhand Rains: ಉತ್ತರಾಖಂಡದಲ್ಲಿ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಗುಡ್ಡ ಕುಸಿದು ರಸ್ತೆಗಳು ಬಂದ್‌ ಆಗಿವೆ. ಅಪಘಾತದಲ್ಲಿ ಮಗು ಕೊಚ್ಚಿಹೋಗಿ ಮೃತಪಟ್ಟರೆ, ಸಿಡಿಲಿಗೆ ವ್ಯಕ್ತಿ ಬಲಿಯಾಗಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಚಾರ್ ಧಾಮ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ರಾಜ್ಯದಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಭಾರತ–ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ವಿರೋಧ: ಶಂಭು ಗಡಿಯಲ್ಲಿ ಮತ್ತೆ ರೈತರ ಪ್ರತಿಭಟನೆ; ದೆಹಲಿ ಚಲೋ ತಡೆದ ಪೊಲೀಸರು

ದೆಹಲಿ ಚಲೋಗೆ ಮತ್ತೆ ಬ್ರೇಕ್; ಶಂಭು ಗಡಿಯಲ್ಲಿ ರೈತರನ್ನು ತಡೆದ ಪೊಲೀಸರು

Farmers' March: ಭಾರತ–ಅಮೆರಿಕ ಪ್ರಸ್ತಾವಿತ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯಲಿರುವ ಕಿಸಾನ್ ಮಹಾಪಂಚಾಯತ್‌ನಲ್ಲಿ ಭಾಗವಹಿಸಲು ಪಂಜಾಬ್‌ನಿಂದ ಹೊರಟಿದ್ದ ನೂರಾರು ರೈತರನ್ನು ಹರಿಯಾಣ ಪೊಲೀಸರು ಶಂಭು ಗಡಿಯಲ್ಲಿ ತಡೆದರು. ಭಾರೀ ಬ್ಯಾರಿಕೇಡ್‌ಗಳು ಮತ್ತು ಭದ್ರತಾ ವ್ಯವಸ್ಥೆಯ ನಡುವೆಯೇ ರೈತರಿಗೆ ದೆಹಲಿ ಪ್ರವೇಶ ನಿರಾಕರಿಸಲಾಯಿತು. ಇದನ್ನು ಖಂಡಿಸಿದ ರೈತರು ಶಂಭು ಗಡಿಯಲ್ಲೇ ಪ್ರತಿಭಟನೆ ಆರಂಭಿಸಿ, ವ್ಯಾಪಾರ ಒಪ್ಪಂದದ ಸಂಪೂರ್ಣ ವಿವರಗಳನ್ನು ಸಾರ್ವಜನಿಕರ ಮುಂದಿಡಬೇಕು ಹಾಗೂ ರೈತರು ಸೇರಿ ಎಲ್ಲ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಿದ ಬಳಿಕವೇ ಯಾವುದೇ ಒಪ್ಪಂದಕ್ಕೆ ಸಹಿ ಹಾಕಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ಭಯೋತ್ಪಾದನೆಗೆ ಶಾಶ್ವತ ತೆರೆ ಬಿದ್ದರೆ ಮಾತ್ರ ಸಿಂಧು ಜಲ ಒಪ್ಪಂದ: ಪಾಕಿಸ್ತಾನಕ್ಕೆ ಭಾರತದ ಖಡಕ್ ಸಂದೇಶ

ಸಿಂಧು ಜಲ ಒಪ್ಪಂದ ಪುನರಾರಂಭಕ್ಕೆ ಉಗ್ರವಾದವೇ ಅಡ್ಡಿ: ಭಾರತ

Indus Waters Treaty: ಸಿಂಧು ಜಲ ಒಪ್ಪಂದವು ಈಗಿನ ರೂಪದಲ್ಲಿ ಮತ್ತೆ ಜಾರಿಗೆ ಬರುವುದಿಲ್ಲ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಪಾಕಿಸ್ತಾನ ಗಡಿ ದಾಟಿ ನಡೆಯುತ್ತಿರುವ ಭಯೋತ್ಪಾದನೆಯನ್ನು ಶಾಶ್ವತವಾಗಿ ನಿಲ್ಲಿಸಿದರೆ ಮಾತ್ರ ಹೊಸ ಚೌಕಟ್ಟಿನಲ್ಲಿ ಜಲ ಹಂಚಿಕೆ ಕುರಿತು ಮಾತುಕತೆ ಸಾಧ್ಯ ಎಂದು ಭಾರತ ಸ್ಪಷ್ಟಪಡಿಸಿದೆ.

ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಸಿಜೆಪಿ ಪ್ರತಿಭಟನೆ: 178ಕ್ಕೂ ಹೆಚ್ಚು ಮಂದಿಗೆ ಗಾಯ, 4 ಎಫ್‌ಐಆರ್ ದಾಖಲು

ಸಿಜೆಪಿ ಪ್ರತಿಭಟನೆಗೆ ಹಿಂಸಾತ್ಮಕ ತಿರುವು; ದೆಹಲಿ ಪೊಲೀಸರಿಂದ 4 ಎಫ್‌ಐಆರ್

Cockroach Janta Party: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ. ಘರ್ಷಣೆಯಲ್ಲಿ 118ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಸುಮಾರು 60 ಪ್ರತಿಭಟನಾಕಾರರು ಗಾಯಗೊಂಡಿದ್ದು, ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಉಕ್ರೇನ್‌ನಲ್ಲಿ ಸರಕು ಹಡಗಿನ ಮೇಲೆ ದಾಳಿ; ನಾಲ್ವರು ಭಾರತೀಯರು ಸಾವು

ರಷ್ಯಾ ದಾಳಿಗೆ 4 ಭಾರತೀಯರು ಬಲಿ

ಉಕ್ರೇನ್‌ನ ಒಡೆಸಾ ಬಂದರಿನಿಂದ ಹೊರಟಿದ್ದ MV Golden Leo ವಾಣಿಜ್ಯ ಹಡಗಿನ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ನಾಲ್ವರು ಭಾರತೀಯ ಸಿಬ್ಬಂದಿ ಮೃತಪಟ್ಟಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂತ್ರಸ್ತರಿಗೆ ನೆರವು ಒದಗಿಸುತ್ತಿದೆ. ಈ ದಾಳಿಯು ಕಪ್ಪು ಸಮುದ್ರ ಪ್ರದೇಶದಲ್ಲಿ ಹೆಚ್ಚುತ್ತಿರುವ ರಷ್ಯಾ-ಉಕ್ರೇನ್ ಸಂಘರ್ಷದ ತೀವ್ರತೆಯನ್ನು ಮತ್ತೊಮ್ಮೆ ಬಿಂಬಿಸಿದೆ.

ಸಂಸತ್ ಮುತ್ತಿಗೆಗೆ ಸಿಜೆಪಿ ಯತ್ನ: ಲಾಠಿಚಾರ್ಜ್, ಆಶ್ರುವಾಯು ಪ್ರಯೋಗ; ಇಂದು ದೆಹಲಿಯಲ್ಲಿ ಏನೆಲ್ಲಾಯ್ತು?

ಸಿಜೆಪಿ ಸಂಸತ್ ಮಾರ್ಚ್‌ಗೆ ಪೊಲೀಸ್ ತಡೆ

CJP: ದೇಶದ ಪ್ರಮುಖ ಪರೀಕ್ಷೆಗಳ ಅಕ್ರಮಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ದೆಹಲಿಯಲ್ಲಿ ಸಂಸತ್ ಭವನದತ್ತ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಲಾಠಿಚಾರ್ಜ್ ಹಾಗೂ ಆಶ್ರುವಾಯು ಪ್ರಯೋಗ ನಡೆಸಿದ್ದು, ಕೇಂದ್ರ ದೆಹಲಿಯ ಕೆಲ ಭಾಗಗಳಲ್ಲಿ ಇಂಟರ್‌ನೆಟ್‌ ಸೇವೆಯನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಘಟನೆ ಮುಂಗಾರು ಅಧಿವೇಶನದ ಮೊದಲ ದಿನವೇ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಉಪವಾಸ ಮುಂದುವರಿಸಿದ ಸೋನಮ್ ವಾಂಗ್ಚುಕ್: ಸರ್ಕಾರದ ಸಂಧಾನಕ್ಕೂ ಮಣಿಯದೆ ಹೋರಾಟ

ಮುಂದುವರಿದ ಸೋನಮ್ ವಾಂಗ್ಚುಕ್ ಉಪವಾಸ

Sonam Wangchuk: ನೀಟ್ ಪರೀಕ್ಷೆ ಅಕ್ರಮಗಳ ವಿರುದ್ಧ ನಡೆಯುತ್ತಿರುವ ಹೋರಾಟದ ನಡುವೆ ಸೋನಮ್ ವಾಂಗ್ಚುಕ್ ತಮ್ಮ 23ನೇ ದಿನದ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಯುವ ಪ್ರತಿಭಟನಾಕಾರರಿಗೆ ಸಂಸದರೊಂದಿಗೆ ಭೇಟಿಗೆ ಅವಕಾಶ ಸಿಗುವವರೆಗೆ ಉಪವಾಸ ಕೈಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ಜೆ.ಪಿ. ನಡ್ಡಾ ಸಿಜೆಪಿ ಪ್ರತಿನಿಧಿಗಳೊಂದಿಗೆ ಸಂಧಾನ ಸಭೆ ನಡೆಸಿದ್ದು, ದೆಹಲಿ ಹೈಕೋರ್ಟ್ ವಾಂಗ್ಚುಕ್ ಅವರ ವೈದ್ಯಕೀಯ ವರದಿಗಳನ್ನು ಸಲ್ಲಿಸುವಂತೆ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.

ಪ್ರತಿಯೊಬ್ಬರ ಧ್ವನಿಗೂ ಸಂಸತ್‌ನಲ್ಲಿ ಅವಕಾಶ ಸಿಗಬೇಕು ಎಂದ ಪ್ರಧಾನಿ ನರೇಂದ್ರ ಮೋದಿ; ಮೊದಲ ದಿನವೇ ಸಂಸತ್ ಕಲಾಪಕ್ಕೆ ಅಡ್ಡಿ

ಅಧಿವೇಶನದ ಮೊದಲ ದಿನವೇ ಲೋಕಸಭೆ-ರಾಜ್ಯಸಭೆಯಲ್ಲಿ ಗದ್ದಲ

Parliament Monsoon Session: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ವಾಸ್ತವಾಂಶಗಳ ಆಧಾರದ ಮೇಲೆ ಚರ್ಚೆ ನಡೆಸುವಂತೆ ಸಂಸದರಿಗೆ ಕರೆ ನೀಡಿದರು. ಆದರೆ ಅಧಿವೇಶನ ಆರಂಭವಾದ ಕೆಲವೇ ನಿಮಿಷಗಳಲ್ಲಿ ನೀಟ್-ಯುಜಿ ಸೇರಿ ಹಲವು ವಿಷಯಗಳ ಕುರಿತು ಪ್ರತಿಪಕ್ಷಗಳ ಪ್ರತಿಭಟನೆಯಿಂದ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪವನ್ನು ಮುಂದೂಡಲಾಯಿತು.

ರಸ್ತೆ ಅಪಘಾತದಲ್ಲಿ ಗಾಯಗೊಂಡ ಯುವತಿಗೆ ನೆರವಾದ ಚಿರಾಗ್ ಪಾಸ್ವಾನ್; ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದ ಕೇಂದ್ರ ಸಚಿವ

ವಿಐಪಿ ಬೆಂಗಾವಲು ನಿಲ್ಲಿಸಿ ಗಾಯಾಳು ಯುವತಿಗೆ ನೆರವಾದ ಚಿರಾಗ್ ಪಾಸ್ವಾನ್

Viral Video: ಪಂಜಾಬ್‌ನಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಯುವತಿಯನ್ನು ಗಮನಿಸಿದ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ತಮ್ಮ ವಿಐಪಿ ಬೆಂಗಾವಲು ನಿಲ್ಲಿಸಿ, ಅಧಿಕೃತ ವಾಹನದಲ್ಲೇ ಆಸ್ಪತ್ರೆಗೆ ಕಳುಹಿಸಿ ತಕ್ಷಣ ಚಿಕಿತ್ಸೆ ದೊರೆಯುವಂತೆ ಕ್ರಮ ಕೈಗೊಂಡರು. ಚಿಕಿತ್ಸೆ ಆರಂಭವಾಗಿದೆ ಎಂಬ ದೃಢೀಕರಣ ಪಡೆದ ಬಳಿಕವೇ ಅವರು ತಮ್ಮ ಪ್ರಯಾಣ ಮುಂದುವರಿಸಿದರು.

''ಸಂಸತ್ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಬೇಕುʼʼ: ಆಸ್ಪತ್ರೆಯಿಂದ ಹೊರ ಹೋಗಲು ಅನುಮತಿ ಕೋರಿದ ಸೋನಮ್‌ ವಾಂಗ್ಚುಕ್

ಆಸ್ಪತ್ರೆಯಿಂದ ಹೊರ ಹೋಗಲು ಅನುಮತಿ ಕೋರಿದ ವಾಂಗ್ಚುಕ್

Sonam Wangchuk: ಲಡಾಖ್‌ನ ಪರಿಸರ ಹೋರಾಟಗಾರ ಸೋನಮ್‌ ವಾಂಗ್ಚುಕ್ ತಮ್ಮ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿ, 'ಸಂಸತ್ ಚಲೋ' ಪ್ರತಿಭಟನೆಯಲ್ಲಿ ಭಾಗವಹಿಸಲು ಸಫ್ದರ್‌ಜಂಗ್ ಆಸ್ಪತ್ರೆಯಿಂದ ತಾತ್ಕಾಲಿಕವಾಗಿ ಹೊರ ಹೋಗಲು ಅನುಮತಿ ಕೋರಿದ್ದಾರೆ. ಈ ನಡುವೆ ಅವರ ಪತ್ನಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದು, ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಗಿ ಭದ್ರತೆ ಜಾರಿಯಾಗಿದೆ.

ಚಾತುರ್ಮಾಸ ಆರಂಭ ಯಾವಾಗ? ದಿನಾಂಕ, ಮಹತ್ವ, ಧಾರ್ಮಿಕ ಆಚರಣೆಗಳ ವಿವರ ಇಲ್ಲಿದೆ

ಚಾತುರ್ಮಾಸ ಯಾವಾಗ? ಇಲ್ಲಿದೆ ಉತ್ತರ

Chaturmas 2026: ಹಿಂದೂ ಧರ್ಮ ಅತ್ಯಂತ ಪವಿತ್ರ ಅವಧಿಯಾದ ಚಾತುರ್ಮಾಸವು 2026ರಲ್ಲಿ ಜುಲೈ 25ರಂದು ಆರಂಭವಾಗಿ ನವೆಂಬರ್ 20ರಂದು ಮುಕ್ತಾಯವಾಗಲಿದೆ. ಈ ನಾಲ್ಕು ತಿಂಗಳು ಭಕ್ತಿ, ಉಪವಾಸ, ಜಪ, ಧ್ಯಾನ, ದಾನ ಮತ್ತು ಆತ್ಮ ಸಂಯಮಕ್ಕೆ ಮೀಸಲಾಗಿದ್ದು, ಈ ಅವಧಿಯಲ್ಲಿ ಶುಭ ಕಾರ್ಯಗಳಿಗಿಂತ ಆಧ್ಯಾತ್ಮಿಕ ಸಾಧನೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಚಾತುರ್ಮಾಸದ ಮಹತ್ವ, ಪಾಲಿಸಬೇಕಾದ ನಿಯಮಗಳು ಹಾಗೂ ಮಾಡಬೇಕಾದ ಮತ್ತು ಮಾಡಬಾರದ ಕಾರ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ.

Health Tips: ರೋಗ ನಿರೋಧಕ ಶಕ್ತಿಯಿಂದ ಕೂದಲಿನ ಆರೈಕೆಯವರೆಗೆ...ನೆಲ್ಲಿಕಾಯಿಯ 14 ಲಾಭಗಳು ಇಲ್ಲಿವೆ

ನೆಲ್ಲಿಕಾಯಿ ತಿನ್ನುವುದರಿಂದ ಸಿಗುವ 14 ಅದ್ಭುತ ಪ್ರಯೋಜನಗಳಿವು

Health Benefits of Amla: ಆಯುರ್ವೇದ ಹಾಗೂ ಆಧುನಿಕ ಪೌಷ್ಟಿಕಾಂಶ ವಿಜ್ಞಾನದ ಪ್ರಕಾರ, ನೆಲ್ಲಿಕಾಯಿ ವಿಟಮಿನ್ ಸಿ, ಆ್ಯಂಟಿ ಆಕ್ಸಿಡೆಂಟ್‌ಗಳು ಮತ್ತು ಫೈಬರ್‌ನ ಸಮೃದ್ಧ ಮೂಲ. ಇದು ರೋಗ ನಿರೋಧಕ ಶಕ್ತಿ, ಜೀರ್ಣಕ್ರಿಯೆ, ಹೃದಯದ ಆರೋಗ್ಯ, ರಕ್ತದಲ್ಲಿನ ಸಕ್ಕರೆ ನಿಯಂತ್ರಣ, ಯಕೃತ್ತು, ಚರ್ಮ, ಕೂದಲು, ಕಣ್ಣು ಮತ್ತು ಮೆದುಳಿನ ಆರೋಗ್ಯವನ್ನು ಬೆಂಬಲಿಸುವಲ್ಲಿ ಸಹಕಾರಿ ಎಂದು ಪರಿಗಣಿಸಲಾಗಿದೆ. ಆರೋಗ್ಯಪೂರ್ಣ ಜೀವನಶೈಲಿಯ ಭಾಗವಾಗಿ ಮಿತ ಪ್ರಮಾಣದಲ್ಲಿ ನೆಲ್ಲಿಕಾಯಿ ಸೇವಿಸುವುದು ಉತ್ತಮ ಎನ್ನುತ್ತಾರೆ ತಜ್ಞರು.

Loading...