ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

ವಿದ್ಯಾ ಇರ್ವತ್ತೂರು

[email protected]

ಕಾರ್ಕಳ ತಾಲೂಕಿನ ಇರ್ವತ್ತೂರಿನವರಾದ ಇವರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದು ಕನ್ನಡಪ್ರಭ ದಿನಪತ್ರಿಕೆಯಲ್ಲಿ ಉಪ ಸಂಪಾದಕಿಯಾಗಿ ವೃತ್ತಿ ಜೀವನ ಪ್ರಾರಂಭಿಸಿದರು. ಬಳಿಕ ಉದಯವಾಣಿ ದಿನಪತ್ರಿಕೆಯಲ್ಲಿ ಹಿರಿಯ ಉಪಸಂಪಾದಕಿಯಾಗಿ ಕಾರ್ಯನಿರ್ವಹಿಸಿದ್ದು, ನವಸಮಾಜ, ನ್ಯೂಸ್ ಆ್ಯರೋ, ವಿಸ್ತಾರ ನ್ಯೂಸ್ ವೆಬ್‌ಸೈಟ್‌ನಲ್ಲೂ ಕಾರ್ಯ ನಿರ್ವಹಿಸಿದ್ದಾರೆ. ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುಮಾರು 16 ವರ್ಷ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದು, ಬರವಣಿಗೆ, ಓದು, ಪ್ರವಾಸ ಇವರ ನೆಚ್ಚಿನ ಹವ್ಯಾಸ. 2024ರ ಆಗಸ್ಟ್‌ನಿಂದ ವಿಶ್ವವಾಣಿ ವೆಬ್‌ಸೈಟ್‌ಗೆ ಸುದ್ದಿ, ವಿಶೇಷ ಲೇಖನಗಳನ್ನು ಬರೆಯುತ್ತಿದ್ದಾರೆ.

Articles
24 ಗಂಟೆಗಳಲ್ಲಿ 20ಕ್ಕೂ ಹೆಚ್ಚು ಕಾಶ್ಮೀರಿಗಳ ಸಾವು; ಪಿಒಕೆಯಲ್ಲಿ ಪಾಕಿಸ್ತಾನ ಸೇನೆಯ ಅಟ್ಟಹಾಸ

ಪಾಕಿಸ್ತಾನ ಸೇನೆಯ ಅಟ್ಟಹಾಸ; ಪಿಒಕೆಯ ರಸ್ತೆಗಳಲ್ಲಿ ಬೀಳುತ್ತಿದೆ ಹೆಣ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಸೇನಾ ಪಡೆಯು ನಡೆಸಿರುವ ದೌರ್ಜನ್ಯದಿಂದ ಕಳೆದ 24 ಗಂಟೆಗಳಲ್ಲಿ 20ಕ್ಕೂ ಹೆಚ್ಚು ಕಾಶ್ಮೀರಿಗಳು ಸಾವನ್ನಪ್ಪಿದ್ದಾರೆ. ಪಿಒಕೆಯಲ್ಲಿ ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ ಬಳಿಕ ಸ್ಥಳೀಯರ ಮೇಲೆ ಪೊಲೀಸ್ ದೌರ್ಜನ್ಯವು ಹೆಚ್ಚಾಗಿದ್ದು, ಈವರೆಗೆ 80ಕ್ಕೂ ಹೆಚ್ಚು ಮಂದಿಯನ್ನು ಕೊಲ್ಲಲಾಗಿದೆ ಎನ್ನಲಾಗಿದೆ.

ಸಿಜೆಪಿ ಆಯ್ತು ಈಗ ಮಾಜಿ ಪೊಲೀಸರ ಸರದಿ: ಮತ್ತೊಂದು ಹೋರಾಟಕ್ಕೆ ಸಾಕ್ಷಿಯಾಗಲಿದೆ ದೆಹಲಿಯ ಜಂತರ್‌ ಮಂತರ್‌; ತಮ್ಮ ಮೇಲಿನ ಹಲ್ಲೆ ಖಂಡಿಸಿ ಮಾಜಿ ಖಾಕಿ ಪಡೆಯಿಂದ ಪ್ರತಿಭಟನೆ

ಸಿಜೆಪಿ ಬಳಿಕ ಜಂತರ್ ಮಂತರ್‌ನಲ್ಲಿ ದೆಹಲಿಯ ಮಾಜಿ ಪೊಲೀಸರಿಂದ ಧರಣಿ

ಕಾಕ್ರೋಚ್ ಜನತಾ ಪಕ್ಷದಿಂದ ಇತ್ತೀಚೆಗೆ ನಡೆದ ದೊಡ್ಡ ಮಟ್ಟದ ಪ್ರತಿಭಟನೆಗೆ ಸಾಕ್ಷಿಯಾಗಿದ್ದ ದೆಹಲಿಯ ಜಂತರ್ ಮಂತರ್‌ ಈಗ ಮತ್ತೊಂದು ಪ್ರತಿಭಟನೆಗೆ ಕೇಂದ್ರವಾಗಲಿದೆ. ಇಲ್ಲಿ ಪ್ರತಿಭಟನೆ ನಡೆಸಲು ದೆಹಲಿಯ ಮಾಜಿ ಪೊಲೀಸರು ಅನುಮತಿ ಕೋರಿ ದೆಹಲಿ ಪೊಲೀಸ್ ಆಯುಕ್ತ ಅನುರಾಗ್ ಕುಮಾರ್ ಅವರಿಗೆ ದೆಹಲಿ ಪೊಲೀಸ್ ಫೆಡರೇಶನ್ ವತಿಯಿಂದ ಪತ್ರ ಬರೆಯಲಾಗಿದೆ.

ʼʼಕೇಂದ್ರ ಸರ್ಕಾರ ಮಾತ್ರವಲ್ಲ ನಿಮ್ಮನ್ನೂ ವಿರೋಧಿಸುತ್ತೇವೆʼʼ: ರಾಹುಲ್ ಗಾಂಧಿಗೆ ಎಚ್ಚರಿಕೆ ಸಂದೇಶ ರವಾನಿಸಿದ ಸಿಜೆಪಿ

ರಾಹುಲ್ ಗಾಂಧಿ ಅವರನ್ನು ಕೂಡ ವಿರೋಧಿಸುತ್ತೇವೆ: ಸಿಜೆಪಿ

ಸಿಜೆಪಿ ಪ್ರತಿಭಟನೆಯಲ್ಲಿ ಎಲ್ಲರ ಗಮನ ಸೆಳೆದ ವ್ಯಾಪಾರಿ ಎಂಡಿ ಇರ್ಫಾನ್ ಅವರು ಕೊಟ್ಟಿರುವ ಭರವಸೆ ಈಡೇರದಿದ್ದರೆ ನಿಮ್ಮನ್ನು ಕೂಡ ವಿರೋಧಿಸುತ್ತೇವೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ನಾನು ಪ್ರಧಾನಿ ನರೇಂದ್ರ ಮೋದಿಗಿಂತ ಮೊದಲು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಬಯಸುತ್ತೇನೆ ಎಂದರು.

ರಸ್ತೆ ಅಪಘಾತದಂತೆ ಬಿಂಬಿಸಿ ಕೊಲೆ: 2014ರ ಮಂಗಳೂರು ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ

2014ರ ಮಂಗಳೂರು ಕೊಲೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ

ಸುಮಾರು ಹತ್ತು ವರ್ಷಕ್ಕಿಂತಲೂ ಹಿಂದೆ ಮಂಗಳೂರಿನಲ್ಲಿ ನಡೆದಿರುವ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರಿಗೆ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಲಾಗಿದೆ. 2014ರ ಮೇ 15ರಂದು ರಸ್ತೆ ಅಪಘಾತದಲ್ಲಿ ಗಂಗಾಧರ ಪಾಂಗಳ ಎಂಬವರು ಸಾವನ್ನಪ್ಪಿದ್ದು, ತನಿಖೆ ವೇಳೆ ಇದು ವೈಯಕ್ತಿಕ ದ್ವೇಷದಿಂದ ಪ್ರೇರಿತವಾದ ಯೋಜಿತ ಕೊಲೆ ಎಂಬುದು ಬಹಿರಂಗಗೊಂಡಿತ್ತು.

ಸಿಜೆಪಿ ಪ್ರತಿಭಟನೆ ವೇಳೆ ಹಲ್ಲೆ: ತಲೆ ಬುರುಡೆ ಮುರಿದು ಗಾಯಗೊಂಡಿದ್ದ ಬಿಹಾರದ ಬಿಡಿಒ ಸ್ಥಿತಿ ಗಂಭೀರ

ತಲೆ ಬುರುಡೆ ಒಡೆಯುವಂತೆ ಬಿಡಿಒ ಮೇಲೆ ಹಲ್ಲೆ , ಗಂಭೀರ ಗಾಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಬಿಹಾರದ ಛಪ್ರಾದಲ್ಲಿ ಬಿಹಾರ ಬ್ಲಾಕ್ ಅಭಿವೃದ್ಧಿ ಅಧಿಕಾರಿ ತಲೆಗೆ ಭಾರಿ ತೂಕದ ಬ್ಯಾಟ್ ನಿಂದ ಹೊಡೆತ ಬಿದ್ದಿದ್ದು, ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದ್ದು, ಪಾಟ್ನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಜೆಪಿ ಪ್ರತಿಭಟನಾಕಾರರ ವಿರುದ್ಧ ಕ್ರಮವಿಲ್ಲ: ಬಿಹಾರದ ಬಳಿಕ ಅಸ್ಸಾಂನಲ್ಲೂ ಘೋಷಣೆ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ಕೈಬಿಟ್ಟ ಬಿಹಾರ, ಅಸ್ಸಾಂ

ಕೇಂದ್ರ ಸರ್ಕಾರವು ಸಿಜೆಪಿ ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ ಎಂದು ಭರವಸೆ ನೀಡಿದ ಬೆನ್ನಲ್ಲೇ ಎನ್ ಡಿಎ ಸರ್ಕಾರ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಕೂಡ ಸಿಜೆಪಿ ಪ್ರತಿಭಟನಾಕಾರರ ವಿರುದ್ಧ ಯಾವುದೇ ಪ್ರಕರಣ ದಾಖಲಿಸುವುದಿಲ್ಲ ಎಂದು ಘೋಷಿವೆ. ಬಿಹಾರದಲ್ಲಿ ಇದು ಘೋಷಣೆಯಾದ ಬೆನ್ನಲ್ಲೇ ಅಸ್ಸಾಂನಲ್ಲೂ ಈ ಘೋಷಣೆಯನ್ನು ಮಾಡಲಾಗಿದೆ.

ಪ್ರೀತಿಯಲ್ಲಿ ಬಿದ್ದ ಮೇಲೆ ಯುವಕ-ಯುವತಿಯರಿಗೆ ಮನೆಯವರೇ ವೈರಿಗಳಾಗುವುದೇಕೆ? ಇದರ ಹಿಂದಿರುವ ವೈಜ್ಞಾನಿಕ ಕಾರಣ ಏನು? ಇಂಟ್ರೆಸ್ಟಿಂಗ್‌ ಮಾಹಿತಿ ಇಲ್ಲಿದೆ

ಪ್ರೀತಿಯಲ್ಲಿ ವಂಚನೆಗೂ ಇರುತ್ತೆ ಸಾಕಷ್ಟು ಯೋಜನೆ

Vishwavani Health: ಪ್ರೀತಿಯಲ್ಲಿ ಮೋಸ ಮಾಡುವುದು, ಮೋಸ ಹೋಗುವುದು, ತಪ್ಪು ಮಾಡುವುದು ಸಾಮಾನ್ಯ ಎಂಬಂತಾಗಿದೆ. ಆದರೆ ಇದರ ಹಿಂದೆ ಸಾಕಷ್ಟು ಯೋಜನೆ ಇರುತ್ತದೆ. ಇದು ಏಕಾಏಕಿ ನಡೆಯುವುದಿಲ್ಲ. ಇದಕ್ಕಾಗಿ ಕನಿಷ್ಠ ಆರು ತಿಂಗಳಾದರೂ ಬೇಕಾಗುತ್ತದೆ. ಇದು ಪೋಷಕರಿಗೆ ಗೊತ್ತೇ ಇಲ್ಲ ಎನ್ನುವುದು ಸಾಧ್ಯವಿಲ್ಲ. ಅವರು ಮಕ್ಕಳಲ್ಲಿ ಆಗಿರುವ ಬದಲಾವಣೆಯನ್ನು ಗಮನಿಸದೇ ಇರುವುದು ಇದಕ್ಕೆ ಮುಖ್ಯ ಕಾರಣವಾಗಿರುತ್ತದೆ ಎನ್ನುತ್ತಾರೆ ಮೈಸೂರು ವಿವಿಯ ಡಾ. ಸುತ್ತೂರು ಮಾಲಿನಿ.

ಪ್ರತಿಭಟನೆಯ ಮೊದಲ ದಿನವೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲು ಮುಂದಾಗಿದ್ದರು, ಆದರೆ...ಪಕ್ಷದೊಳಗಿನ ಗುಟ್ಟು ಬಿಟ್ಟುಕೊಟ್ಟ ಬಿಜೆಪಿ ನಾಯಕ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಮೊದಲೇ ಸಿದ್ಧವಾಗಿದ್ದರು: ಬಿಜೆಪಿ ನಾಯಕ

ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾದ ಮೊದಲ ದಿನವೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲು ಸಿದ್ಧವಾಗಿದ್ದರು ಎಂದು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿ ಹೇಳಿದ್ದಾರೆ. ಪ್ರತಿಭಟನೆ ಬಳಿಕ ಅದರ ಕ್ರೆಡಿಟ್ ಪಡೆಯಲು ಕಾಂಗ್ರೆಸ್ ಪ್ರಯತ್ನಿಸಿತ್ತು ಎಂದು ಅವರು ತಿಳಿಸಿದ್ದಾರೆ.

ಭಾರತ ಬಾಹ್ಯಾಕಾಶಕ್ಕೆ ಉಪಗ್ರಹ ಕಳುಹಿಸಿದರೆ ಪಾಕಿಸ್ತಾನ ಗಡಿಯಾಚೆಗೆ ಭಯೋತ್ಪಾದಕರನ್ನು ಕಳುಹಿಸುತ್ತಿದೆ: ರಾಜನಾಥ್ ಸಿಂಗ್

ಲಡಾಖ್‌ನ ದ್ರಾಸ್‌ನಲ್ಲಿ ಕಾರ್ಗಿಲ್ ವಿಜಯ್ ದಿವಸ್

ಭಾರತವು ನವೋದ್ಯಮಗಳ ಸಂಸ್ಕೃತಿಯನ್ನು ಪೋಷಿಸುತ್ತಿದೆ. ಆದರೆ ಪಾಕಿಸ್ತಾನವು ಭಯೋತ್ಪಾದಕತೆಯನ್ನು ಪೋಷಿಸುವಲ್ಲಿ ನಿರತವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಲಡಾಖ್‌ನ ದ್ರಾಸ್‌ನಲ್ಲಿ ಅವರು ಕಾರ್ಗಿಲ್ ವಿಜಯ್ ದಿವಸ್ ನಲ್ಲಿ ಮಾತನಾಡಿ, ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಗೆ ನಿರಂತರ ಬೆಂಬಲ ನೀಡುತ್ತಿದೆ ಎಂದು ಹೇಳಿದರು.

ಯುನೆಸ್ಕೋ ವಿಶ್ವ ಪರಂಪರೆ ತಾಣ ಪಟ್ಟಿಗೆ ಸಾರನಾಥ ಸೇರ್ಪಡೆ; ಇದೊಂದು ಹೆಮ್ಮೆಯ ಕ್ಷಣ ಎಂದ ಪ್ರಧಾನಿ ಮೋದಿ

ಸಾರನಾಥ ಯುನೆಸ್ಕೋ ವಿಶ್ವ ಪರಂಪರೆ ತಾಣ ಪಟ್ಟಿಗೆ ಸೇರ್ಪಡೆ

ಉತ್ತರ ಪ್ರದೇಶದ ಪ್ರಾಚೀನ ಬೌದ್ಧ ತಾಣವಾದ 'ಸಾರಾನಾಥ' ವನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿ ಗುರುತಿಸಲಾಗಿದೆ. ಈ ಮೂಲಕ ಇದು ಭಾರತದ 45ನೇ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿದೆ. ಈ ಕುರಿತು ಸಾಮಾಜಿಕ ಮಾಧ್ಯಮದ ಎಕ್ಸ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತ ಪಡಿಸಿ ಇದೊಂದು ಹೆಮ್ಮೆಯ ಕ್ಷಣ ಎಂದು ಬಣ್ಣಿಸಿದ್ದಾರೆ.

ಇದು ಕೇವಲ ಆರಂಭ.. ಸಿಜೆಪಿ ಇನ್ನೂ ಬಹಳ ದೂರ ಸಾಗಬೇಕಿದೆ: ಪ್ರತಿಭಟನೆ ಕೊನೆಗೊಂಡ ಬಳಿಕ ಮೊದಲ ವಿಡಿಯೋ ಸಂದೇಶ ಹಂಚಿಕೊಂಡ ಅಭಿಜೀತ್ ದಿಪ್ಕೆ

ಪ್ರತಿಭಟನೆ ಮುಕ್ತಾಯದ ಬಳಿಕ ಅಭಿಜೀತ್ ದಿಪ್ಕೆ ಹೇಳಿದ್ದೇನು?

ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ಕಳೆದ 37 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯು ಶನಿವಾರ ಕೊನೆಗೊಂಡಿದ್ದು, ಇದರ ಬಳಿಕ ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಮೊದಲ ವಿಡಿಯೋ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ತಮ್ಮ ಬೆಂಬಲಿಗರಿಗೆ ಧನ್ಯವಾದ ಹೇಳಿದ್ದು, ಕೇಂದ್ರ ಸರ್ಕಾರದ ಭರವಸೆಯ ಕಾರಣದಿಂದ ಅಂತಿಮವಾಗಿ ತನಗೆ ಈಗ ವಿಶ್ರಾಂತಿ ಪಡೆಯಲು ಸಾಧ್ಯವಾಗಿದೆ ಎಂದು ಹೇಳಿದರು.

ಜಂತರ್ ಮಂತರ್ ಸ್ವಚ್ಛತೆ, ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ ಸಿಜೆಪಿ ಎಚ್ಚರಿಕೆ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಏನಾಯಿತು?

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಏನೆಲ್ಲಾ ನಡೆಯಿತು?

ದೆಹಲಿಯ ಜಂತರ್ ಮಂತರ್ ನಲ್ಲಿ ಕಳೆದ 37 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಶನಿವಾರ ಕೊನೆಗೊಂಡಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯ ಬಳಿಕ ಕಾಕ್ರೋಚ್ ಜನತಾ ಪಕ್ಷದ ನಾಯಕರು ಪ್ರತಿಭಟನೆಯನ್ನು ಹಿಂತೆಗೆದುಕೊಂಡರು. ಇದರ ಬಳಿಕ ನಡೆದ ಬೆಳವಣಿಗೆಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ.

ಹಿಂಸೆ ಬೇಡ ಸಂವಾದ ಬಳಸಿ: ಸಿಜೆಪಿ ನಾಯಕರಿಗೆ ಅಣ್ಣಾ ಹಜಾರೆ ಸಲಹೆ

ಹಿಂಸಾಚಾರದಿಂದ ಪರಿಹಾರ ಸಿಗುವುದಿಲ್ಲ: ಅಣ್ಣಾ ಹಜಾರೆ

ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ಹಿಂಸೆಗಿಂತ ಸಂವಾದವನ್ನು ಆಯ್ಕೆ ಮಾಡಿಕೊಳ್ಳಿ. ಉದ್ವಿಗ್ನತೆ, ಘರ್ಷಣೆಯಿಂದ ಪರಿಹಾರ ವಿಳಂಬವಾಗುತ್ತದೆ. ಸಾರ್ವಜನಿಕ ಸಮಸ್ಯೆಗಳನ್ನು ಶಾಂತಿಯುತವಾಗಿ ಪ್ರಜಾಪ್ರಭುತ್ವ ವಿಧಾನಗಳ ಮೂಲಕ ಪರಿಹರಿಸಬೇಕು ಎಂದು ತಿಳಿಸಿದರು.

ಉಚಿತ ಟ್ಯೂಷನ್ ನೀಡುವುದಾಗಿ ಹೇಳಿ ಲೈಂಗಿಕ ಕಿರುಕುಳ: ಉಪನ್ಯಾಸಕನನ್ನು ಥಳಿಸಿ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು

ಮೊಟ್ಟೆಯಿಂದ ಹೊಡೆದು ಶೂ ಹಾರ ಹಾಕಿ ಉಪನ್ಯಾಸಕನ ಮೆರವಣಿಗೆ

ವಿದ್ಯಾರ್ಥಿನಿಯೊಬ್ಬಳಿಗೆ ಉಚಿತ ಟ್ಯೂಷನ್ ಕೊಡಿಸುವುದಾಗಿ ಹೇಳಿ ಲೈಂಗಿಕ ಕಿರುಕುಳ ನೀಡಿದ ಉಪನ್ಯಾಸಕನನ್ನು ಥಳಿಸಿ ಮೆರವಣಿಗೆ ನಡೆಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಗೋಬರ್ದಂಗ ಹಿಂದೂ ಕಾಲೇಜಿನ ಅತಿಥಿ ಉಪನ್ಯಾಸಕನ ವಿರುದ್ಧ ಗೋಬರ್ದಂಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಬಂಧಿಸಲಾಗಿದೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು: ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಸೋನಮ್ ವಾಂಗ್ಚುಕ್ ಹೇಳಿದ್ದೇನು?

ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ಸುಮಾರು ಎರಡು ತಿಂಗಳ ಕಾಲ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಫಲವಾಗಿ ಶನಿವಾರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ಬೆಂಬಲವಾಗಿ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರು 26 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದು, ಸರ್ಕಾರದ ಭರವಸೆಯ ಬಳಿಕ ಗುರುವಾರ ರಾತ್ರಿ ಉಪವಾಸವನ್ನು ಅಂತ್ಯಗೊಳಿಸಿದ್ದರು. ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಅವರು ಇದೀಗ ತಮ್ಮ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಅಭಿಜಿತ್ ದೀಪ್ಕೆಗೆ ಟೈಫಾಯ್ಡ್; ಸಿಜೆಪಿ ನೇತೃತ್ವದ ಪ್ರತಿಭಟನೆ ಮುಂದುವರಿಯುವುದೇ?

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಗೆ ಟೈಫಾಯ್ಡ್ ಪತ್ತೆ

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ. ಇದು ಸಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪ್ರತಿಭಟನೆ ಮುಂದುವರಿಯಲಿದೆ ಎಂದು ಹೇಳಿರುವ ಅವರು ಈ ಕುರಿತು ಸಾಮಾಜಿಕ ಮಾಧ್ಯಮದ ಎಕ್ಸ್ ಖಾತೆಯಲ್ಲಿ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ.

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಮಾಸ್ಟರ್ ಮೈಂಡ್ ಬಿಹಾರದಲ್ಲಿ ಬಂಧನ

ಟಿಇಟಿ ಪ್ರಶ್ನೆ ಪತ್ರಿಕೆ ಸೋರಿಕೆ: ಮಾಸ್ಟರ್ ಮೈಂಡ್ ಬಂಧನ

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಮಾಸ್ಟರ್ ಮೈಂಡ್ ಬಿಜೇಂದ್ರ ಗುಪ್ತಾನನ್ನು ಬಿಹಾರದಲ್ಲಿ ಬಂಧಿಸಲಾಗಿದೆ. ಬಿಜೇಂದ್ರ ಗುಪ್ತಾ ದೇಶಾದ್ಯಂತ ನಡೆಯುವ ಹಲವಾರು ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆತನ ಪತ್ತೆಗಾಗಿ ಬಿಹಾರದ ಹಲವಾರು ಕಡೆ ಮಹಾರಾಷ್ಟ್ರ ಪೊಲೀಸರು ಶೋಧ ಕಾರ್ಯಾಚರಣೆಯನ್ನು ನಡೆಸಿದ್ದರು.

ಜಂತರ್ ಮಂತರ್ ಪ್ರತಿಭಟನೆ: ಭದ್ರತಾ ಸಿಬ್ಬಂದಿ ಮೇಲೆ ಹರಿತವಾದ ಆಯುಧಗಳಿಂದ ದಾಳಿ;  2,500ಕ್ಕೂ ಹೆಚ್ಚು ಅಪರಾಧಿಗಳ ಗುರುತು ಪತ್ತೆ

ಜಂತರ್ ಮಂತರ್ ಪ್ರತಿಭಟನೆ: 2,500 ಕ್ಕೂ ಹೆಚ್ಚು ಅಪರಾಧಿಗಳ ಗುರುತು ಪತ್ತೆ

ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಕ್ಷದಿಂದ ನಡೆಯುತ್ತಿದ್ದ ಪ್ರತಿಭಟನೆ ವೇಳೆ ದೆಹಲಿ ಪೊಲೀಸರ ಮೇಲೆ ಹರಿತವಾದ ಆಯುಧಗಳಿಂದ ದಾಳಿ ನಡೆಸಲಾಗಿದೆ. ಈವರೆಗೆ 15 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು, 2,500ಕ್ಕೂ ಹೆಚ್ಚು ಅಪರಾಧಿಗಳ ಗುರುತು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮ್ಮ ವೈಫಲ್ಯಕ್ಕೆ ವಿದ್ಯಾರ್ಥಿಗಳು  ಪ್ರಶ್ನೆ ಪತ್ರಿಕೆ ಸೋರಿಕೆ ನೆಪ ಮಾಡಿದ್ದಾರೆ: ವಿವಾದ ಹುಟ್ಟುಹಾಕಿದ ಬಿಜೆಪಿ ನಾಯಕ ನಿಶಿಕಾಂತ್ ದುಬೆ

ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ನೆಪ ಎಂದ ಬಿಜೆಪಿ ಸಂಸದ

ಕಳಪೆ ಸಾಧನೆಗಾಗಿ ಕೆಲವು ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ನೆಪವಾಗಿ ಬಳಸುತ್ತಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆಗಳ ಬದಲು ಅಧ್ಯಯನದತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿದ್ದಾರೆ. ಅವರು ಸಂಸತ್ತು ಭವನದ ಸಂಕೀರ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.

ಸಾಹಿತ್ಯೋತ್ಸವ– 2026: ವಿದ್ಯಾರಣ್ಯ ಕನ್ನಡ ಕೂಟದಿಂದ  ಶಿಕಾಗೋದಲ್ಲಿ ಸಾಹಿತ್ಯ, ಸಂಸ್ಕೃತಿ ಹಾಗೂ ಭಾಷೆ ಸೊಗಡಿನ ಅನಾವರಣ

ವಿದ್ಯಾರಣ್ಯ ಕನ್ನಡ ಕೂಟ ಸಾಹಿತ್ಯೋತ್ಸವ

ವಿದ್ಯಾರಣ್ಯ ಕನ್ನಡ ಕೂಟದ ವತಿಯಿಂದ ಶಿಕಾಗೋದಲ್ಲಿ “ಸಾಹಿತ್ಯೋತ್ಸವ – 2026” ಕಾರ್ಯಕ್ರಮವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಇಂಡಿಯಾ ಹಬ್‌ನಲ್ಲಿ ಇತ್ತೀಚೆಗೆ ನಡೆದ ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ, ಸಂಸ್ಕೃತಿ ಹಾಗೂ ಭಾಷೆಯ ಸೊಗಡನ್ನು ಅನಾವರಣಗೊಳಿಸಲಾಗಿದ್ದು, ಅಪಾರ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಯಿತು.

5-10 ವರ್ಷ ಜೈಲು, 1 ಕೋಟಿ ರುಪಾಯಿ ದಂಡ: ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ಕಾನೂನು ಬಿಗಿಗೊಳಿಸಲು ಮುಂದಾದ ಮೋದಿ ಸರ್ಕಾರ

ಸಾರ್ವಜನಿಕ ಪರೀಕ್ಷೆ ಕಾಯ್ದೆ 2024ಕ್ಕೆ ತಿದ್ದುಪಡಿಗೆ ಸಿದ್ಧತೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ದೇಶಾದ್ಯಂತ ಉಂಟಾಗಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಈಗ ಕೇಂದ್ರ ಸರ್ಕಾರವು ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯದ ವಿಧಾನಗಳ ತಡೆಗಟ್ಟುವಿಕೆ) ಕಾಯ್ದೆ 2024ಕ್ಕೆ ತಿದ್ದುಪಡಿಗಳನ್ನು ತರಲು ಸಿದ್ಧತೆ ನಡೆಸುತ್ತಿದೆ. ಕಾಕ್ರೋಚ್ ಜನತಾ ಪಕ್ಷದ ಆಂದೋಲನದ ನಡುವೆ ಈ ಕುರಿತು ಕೇಂದ್ರ ಸರ್ಕಾರ ಘೋಷಣೆಯನ್ನು ಕೂಡ ಮಾಡಿದೆ.

ಪ್ರತಿಭಟನಾಕಾರರ ಮೇಲೆ ಯಾವುದೇ ಕೇಸಿಲ್ಲ; ಕೇಂದ್ರ ಸರ್ಕಾರದ ಭರವಸೆ: ಸೋನಮ್ ವಾಂಗ್ಚುಕ್

ಸೋನಮ್ ವಾಂಗ್ಚುಕ್ ಗೆ ಸರ್ಕಾರ ನೀಡಿರುವ ಭರವಸೆ ಏನು?

ಕೇಂದ್ರ ಸರ್ಕಾರ ನೀಡಿರುವ ಭರವಸೆಯ ಕಾರಣದಿಂದ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ಗುರುವಾರ ಕಳೆದ 26 ದಿನಗಳಿಂದ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಯಾವುದೇ ಕೇಸು ದಾಖಲಿಸುವುದಿಲ್ಲ ಎಂದು ಹೇಳಿರುವುದು ತಾನು ಉಪವಾಸ ಅಂತ್ಯಗೊಳಿಸಲು ಮುಖ್ಯ ಕಾರಣ ಎಂದಿರುವ ಅವರು ಸರ್ಕಾರ ನೀಡಿರುವ ಭರವಸೆಯ ಕುರಿತು ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಕಸ್ಟಡಿಯಲ್ಲಿದ್ದ ಸಹೋದ್ಯೋಗಿ ಗುಂಡು ಹಾರಿಸಿದ್ದರಿಂದ ಇಬ್ಬರು ಬಿಎಸ್‌ಎಫ್ ಯೋಧರು ಸಾವು

ಇಬ್ಬರು ಬಿಎಸ್‌ಎಫ್ ಯೋಧರು ಸಾವು

ಪಶ್ಚಿಮ ಬಂಗಾಳದಲ್ಲಿ ಕಸ್ಟಡಿಯಲ್ಲಿದ್ದ ಬಿಎಸ್‌ಎಫ್ ಕಾನ್‌ಸ್ಟೆಬಲ್ ಒಬ್ಬ ರೈಫಲ್ ನಿಂದ ಗುಂಡು ಹಾರಿಸಿದ್ದರಿಂದ ಇಬ್ಬರು ಬಿಎಸ್‌ಎಫ್ ಯೋಧರು ಸಾವನ್ನಪ್ಪಿದ್ದಾರೆ. ಈ ಘಟನೆ ಮಾಲ್ಡಾದ ಶಿಬಿರದಲ್ಲಿ ನಡೆಸಿದೆ. ಬಂಧಿತ ಬಿಎಸ್‌ಎಫ್ ಕಾನ್‌ಸ್ಟೆಬಲ್ ಮಾನಸಿಕ ಒತ್ತಡದಿಂದ ಬಳಲುತ್ತಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಸೋನಮ್ ವಾಂಗ್ಚುಕ್  ಉಪವಾಸ ಮುಷ್ಕರ ಅಂತ್ಯಕ್ಕೂ ಮೊದಲು ಏನೆಲ್ಲಾ ನಡೆಯಿತು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯಕ್ಕೂ ಮೊದಲು ನಡೆದಿರುವ ಬೆಳವಣಿಗೆಗಳು

ಕಳೆದ ಜೂನ್ 28ರಿಂದ ಉಪವಾಸ ಸತ್ಯಾಗ್ರಹದಲ್ಲಿರುವ ಸೋನಮ್ ವಾಂಗ್ಚುಕ್ ಅವರು ಗುರುವಾರ ರಾತ್ರಿ ಉಪವಾಸ ಮುಷ್ಕರವನ್ನು ಕೊನೆಗೊಳಿಸಿದ್ದಾರೆ. ಇದಕ್ಕೂ ಮೊದಲು ಅವರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಯಲ್ಲಿ ಕೇಂದ್ರದ ಹಿರಿಯ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದರು.

Loading...