ಚೆನ್ನಮ್ಮನವರ ಸಮಾಧಿಗೆ ಹಾಲು- ತುಪ್ಪ ಸಮರ್ಪಣೆ
ಮೊನ್ನೆ ನಿಧನರಾದ ಚೆನ್ನಮ್ಮ ಅವರ ಸಮಾಧಿಗೆ ಇಂದು ಕುಟುಂಬ ಸದಸ್ಯರು ಭೇಟಿ ನೀಡಿ ಹಾಲು ತುಪ್ಪ ಸಮರ್ಪಣೆ ಮಾಡಿದರು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಸೇರಿದಂತೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
Gold Rate Today: ಇಂದು ಚಿನ್ನದ ಬೆಲೆಯಲ್ಲಿ ಇಂದು ಭಾರಿ ಏರಿಕೆ ಕಂಡುಬಂದಿದೆ . ಬೆಂಗಳೂರಿನಲ್ಲಿ 22 ಕ್ಯಾರಟ್ನ 1 ಗ್ರಾಂ ಚಿನ್ನಕ್ಕೆ 210 ರುಪಾಯಿ ಏರಿಕೆಯಾಗಿ 13,430 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್ನ 1 ಗ್ರಾಂ ಚಿನ್ನ229 ರುಪಾಯಿ ಏರಿಕೆಯಾಗಿ 14,651 ರುಪಾಯಿಗೆ ಬಂದಿದೆ.
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಲುವನಹಳ್ಳಿ ಗ್ರಾಮದ ಬಳಿ ಕ್ಲೋರೈಡ್ ಕೆಮಿಕಲ್ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಕೆಮಿಕಲ್ ಸೋರಿಕೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಅಪಘಾತದಿಂದ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಕಿಲೋಮೀಟರ್ವರೆಗೆ ವಾಹನ ಸಂಚಾರ ದಟ್ಟಣೆ ಉಂಟಾಗಿದೆ.
CM DK Shivakumar: ಕರ್ನಾಟಕ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆಯಾಗಿದೆ. ಹೈಕಮಾಂಡ್ ನಾಯಕರ ಲಭ್ಯತೆ ಕೊರತೆಯಿಂದ ಪ್ರಕ್ರಿಯೆ ಮುಂದಕ್ಕೆ ಸರಿದಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು (ಜುಲೈ 22) ಬೆಂಗಳೂರಿಗೆ ಮರಳಲಿದ್ದಾರೆ ಎಂದು ತಿಳಿದು ಬಂದಿದೆ.
ಶಿವಾಜಿನಗರದಲ್ಲಿ ಕರ್ತವ್ಯ ನಿರತ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಅಧಿಕಾರಿಗಳ ಹಾಗೂ ಸಿಬ್ಬಂದಿಯ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಪ್ರಮುಖ ಆರೋಪಿ ಬಸವರಾಜ ಪಡುಕೋಟೆ ಸೇರಿದಂತೆ ಒಟ್ಟು 11 ಮಂದಿಯನ್ನು ಬಂಧಿಸಿದ್ದಾರೆ.
Karnataka Weather: ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಜುಲೈ 22 ರಂದು ರಾಜ್ಯದಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಮೇತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬುಧವಾರ ಉತ್ತರ ಒಳನಾಡಿನ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
FIFA World Cup Final: ಯುವಕರ ಇಚ್ಛೆ ಹಾಗೂ ಮನವಿಯಂತೆ ಇಂದು ನಡೆಯಲಿರುವ ಫಿಫಾ ವಿಶ್ವಕಪ್ ಅಂತಿಮ ಪಂದ್ಯ ವೀಕ್ಷಣೆಗೆ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಿಗೆ ಬೆಳಗಿನ ಜಾವ 3.30 ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಹಲವು ದಿನಗಳಿಂದ ಇಳಿಕೆಯಲ್ಲಿದ್ದ ಚಿನ್ನದ ಬೆಲೆಯಲ್ಲಿ ಇಂದು ಏರಿಕ ಕಂಡುಬಂದಿದೆ . ಬೆಂಗಳೂರಿನಲ್ಲಿ 22 ಕ್ಯಾರಟ್ನ 1 ಗ್ರಾಂ ಚಿನ್ನಕ್ಕೆ 13,135 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್ನ 14,329 ರುಪಾಯಿಗೆ ಬಂದಿದೆ. ಇನ್ನು 22 ಕ್ಯಾರಟ್ನ 8 ಗ್ರಾಂ ಚಿನ್ನದ ಬೆಲೆ 1,05,080 ರುಪಾಯಿ ಆಗಿದೆ.
ಇನ್ನುಮುಂದೆ ರಾಜ್ಯದ ಶಾಲೆಗಳು ಹಾಗೂ ಆಸ್ಪತ್ರೆಗಳ ಕ್ಯಾಂಟೀನ್ಗಳಲ್ಲಿ ಜಂಕ್ ಫುಡ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಶಾಲೆ ಹಾಗೂ ಆಸ್ಪತ್ರೆಗಳ ಕ್ಯಾಂಟೀನ್ಗಳಲ್ಲಿ ಜಂಕ್ ಫುಡ್ಗೆ ಸಂಪೂರ್ಣ ನಿಷೇಧ ಹೇರಬೇಕು. ಈ ಕ್ರಮವನ್ನು ಮೊದಲು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.
SIR ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೆವಾಡಿ ಗ್ರಾಮದಲ್ಲಿ ನಡೆದಿದೆ. ಗದಗ ಜಿಲ್ಲೆ ಬಾಗೆವಾಡಿಯ ರತ್ನಮ್ಮ ಬಳಿಗಾರ (43) ಮೃತ ಮಹಿಳೆ. ಎಸ್ಐಆರ್ ಹಿನ್ನೆಲೆ ರತ್ನಮ್ಮ ಬಿಎಲ್ಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧನದ ಸುದ್ದಿ ಕೇಳಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದಾರೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತುರ್ತು ಪೆರೋಲ್ ಕೋರಿ ಜೈಲಾಧಿಕಾರಿಗಳಿಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ರಾಜ್ಯದಲ್ಲಿನ ಬರ ಪರಿಸ್ಥಿತಿ ಮತ್ತು ಅದನ್ನು ನಿರ್ವಹಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಭಾನುವಾರ ತುರ್ತು ಸಚಿವ ಸಂಪುಟ ಸಭೆ ಕರೆದಿರುವುದಾಗಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಅಣೆಕಟ್ಟುಗಳಲ್ಲಿ ನೀರನ್ನು ಸದ್ಯಕ್ಕೆ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಕಾಯ್ದಿರಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಮಳೆ ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.
ಶುದ್ಧ ಹಾಗೂ ವೈಜ್ಞಾನಿಕ ಆಹಾರ ಕ್ರಮದ ಜಾಗೃತಿ ಮೂಡಿಸಲು ಶ್ರೀ ರಾಮಚಂದ್ರಾಪುರ ಮಠವು ಈ ಬಾರಿ ವಿಶಿಷ್ಟವಾದ 'ಅನ್ನಬ್ರಹ್ಮ ಚಾತುರ್ಮಾಸ್ಯ' ವ್ರತವನ್ನು ಹಮ್ಮಿಕೊಂಡಿದೆ. ಶ್ರೀಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ 33ನೇ ಚಾತುರ್ಮಾಸ್ಯ ವ್ರತವು ಉತ್ತರ ಕನ್ನಡದ ಗೋಕರ್ಣದ ಅಶೋಕೆಯ ಮೂಲ ಮಠದದಲ್ಲಿ ಜರುಗಲಿದೆ.
ಹಲವು ದಿನಗಳಿಂದ ಇಳಿಕೆಯಲ್ಲಿದ್ದ ಚಿನ್ನದ ಬೆಲೆಯಲ್ಲಿ ಇಂದು ಏರಿಕ ಕಂಡುಬಂದಿದೆ . ಬೆಂಗಳೂರಿನಲ್ಲಿ 22 ಕ್ಯಾರಟ್ನ 1 ಗ್ರಾಂ ಚಿನ್ನಕ್ಕೆ 70 ರುಪಾಯಿ ಏರಿಕೆಯಾಗಿ 13,135 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್ನ 1 ಗ್ರಾಂ ಚಿನ್ನ 76 ರುಪಾಯಿ ಏರಿಕೆಯಾಗಿ 14,329 ರುಪಾಯಿಗೆ ಬಂದಿದೆ.
ಭೀಕರ ರಸ್ತೆ ಅಪಘಾತದಲ್ಲಿ ತುಂಡಾಗಿ ಬಿದ್ದಿದ್ದ ಕೈಯನ್ನು ಹಿಡಿದು ಯುವಕನೊಬ್ಬ ಆಸ್ಪತ್ರೆಗೆ ಬಂದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಯುವಕ ಕೈ ಮಣಿಕಟ್ಟಿನ ಭಾಗದಲ್ಲಿ ಸಂಪೂರ್ಣವಾಗಿ ಕತ್ತರಿಹೋದರೂ ಧೈರ್ಯ ಕಳೆದುಕೊಳ್ಳದೆ, ಕತ್ತರಿಸಿದ ಕೈಯನ್ನೇ ಹಿಡಿದು ಆಸ್ಪತ್ರೆಗೆ ಬಂದಿದ್ದಾನೆ. ರೋಹನ್ ಎಂಬ ಯುವಕ ಸ್ನೇಹಿತರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರು ಪಲ್ಟಿಯಾಗಿದೆ.
ಅಪ್ರಾಪ್ತ ಬಾಲಕನೊಬ್ಬ ಜುಲೈ 10 ರಂದು ತನ್ನ ಲಿವ್ ಇನ್ ಪಾರ್ಟ್ನರ್ ಆಗಿದ್ದ 16 ವರ್ಷದ ಬಾಲಕಿಯನ್ನು ನಾಡಬಂದೂಕಿನಿಂದ ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿಯು ಇತರ ಇಬ್ಬರೊಂದಿಗೆ ಸೇರಿ ಆಕೆಯ ಮೃತದೇಹವನ್ನು ತಮ್ಮ ಕೃಷಿ ಜಮೀನಿನಲ್ಲಿ ಹೂತುಹಾಕಿದ್ದನು ಎಂದು ತಿಳಿದು ಬಂದಿದೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3,395 ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜೂನ್ 08, 2026 ರಿಂದ ಅಧಿಕೃತವಾಗಿ ಪ್ರಾರಂಭವಾಗಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 03, 2026 ಕೊನೆಯ ದಿನಾಂಕವಾಗಿತ್ತು.
Teachers recruitment: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 15,000 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಈ ಅನುಮೋದನೆ ನೀಡಲಾಗಿದೆ.
Karnataka Weather: ಕೆಲ ದಿನಗಳಿಂದ ತಗ್ಗಿದ್ದ ಮಳೆಯಾರ್ಭಟ ನಿನ್ನೆಯಿಂದ ಮತ್ತೆ ಜೋರಾಗಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಶನಿವಾರ ಆರೆಂಜ್ ಅಲರ್ಟ್ ನೀಡಲಾಗಿದೆ. ಜುಲೈ 18 ಶನಿವಾರದಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
EPFO: ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ನೌಕರರ ಭವಿಷ್ಯ ನಿಧಿ ಸಂಸ್ಥೆ ನೌಕರರ ಭವಿಷ್ಯ ನಿಧಿ ಮತ್ತು ವಿವಿಧ ನಿಬಂಧನೆಗಳ ಕಾಯ್ದೆ, 1952 ರ ಸೆಕ್ಷನ್ 14ಬಿ ಮತ್ತು ಸಾಮಾಜಿಕ ಭದ್ರತೆ, 2020ರ ಸಂಹಿತೆಯ ಸೆಕ್ಷನ್ 128ರ ಅಡಿಯಲ್ಲಿ ಹದಂಡ ವಿಧಿಸುವುದಕ್ಕೆ ಸಂಬಂಧಿಸಿದ ವಿವಾದಗಳ ಪರಸ್ಪರ ಸೌಹಾರ್ದಯುತ ಇತ್ಯರ್ಥಕ್ಕೆ ಅನುಕೂಲವಾಗುವಂತೆ ಪರಿಹಾರ ಉಪಕ್ರಮವಾದ "ವಿಶ್ವಾಸ್, 2026" ಅನ್ನು ಪ್ರಾರಂಭಿಸಿದೆ.
Supreme Court: 4 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ಸಕಾಲಿಕ ಚಿಕಿತ್ಸೆ ನೀಡಲು ವಿಫಲವಾಗಿ ಆಕೆಯ ಸಾವಿಗೆ ಕಾರಣವಾದ ಆರೋಪದ ಮೇಲೆ ಉತ್ತರ ಪ್ರದೇಶದ ಗಾಜಿಯಾಬಾದ್ನ ಎರಡು ಖಾಸಗಿ ಆಸ್ಪತ್ರೆಗಳು ಮತ್ತು ಅವುಗಳ ವೈದ್ಯರ ವಿರುದ್ಧ ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಪ್ರೀತಿ ನಿರಾಕರಿಸಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿಯೇ ಯುವತಿಯನ್ನು ಕೊಂದಿದ್ದ ಆರೋಪಿ ಚೇತನ್ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಕಕ್ಕೆಪದವು ನಿವಾಸಿಯಾಗಿದ್ದ ಲಾವಣ್ಯಳನ್ನು ಆಕೆಯ ದೂರದ ಸಂಬಂಧಿ ಆರೋಪಿ ಚೇತನ್ ನಿನ್ನೆ ಕೊಲೆ ಮಾಡಿದ್ದ.