ಇಂಡಿಯಾ ಬ್ಲಾಕ್ ಸಭೆಯಿಂದ ಡಿಎಂಕೆ ಹೊರಗೆ
ಜೂನ್ 8 ರಂದು ನವದೆಹಲಿಯಲ್ಲಿ ನಡೆಯಲಿರುವ ಪ್ರಸ್ತಾವಿತ ಭಾರತ ಬಣ ಸಭೆಯಿಂದ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ (DMK) ದೂರ ಉಳಿಯಲು ನಿರ್ಧರಿಸಿದೆ. ವಿಧಾನಸಭಾ ಚುನಾವಣೆಯ ನಂತರ ತಮಿಳುನಾಡಿನಲ್ಲಿ ನಡೆದ ರಾಜಕೀಯ ಬೆಳವಣಿಗೆ ಬಳಿಕ ಈ ನಿರ್ಧಾರ ಹೊರ ಬಿದ್ದಿದೆ.
ತಮಿಳುನಾಡು ಬಿಜೆಪಿ ಮಾಜಿ ಮುಖ್ಯಸ್ಥ ಕೆ. ಅಣ್ಣಾಮಲೈ ಅವರ ಭವಿಷ್ಯದ ಬಗ್ಗೆ ಊಹಾಪೋಹಗಳು ತೀವ್ರಗೊಂಡಿದ್ದು, ಜೂನ್ 5 ರಂದು ಚೆನ್ನೈನಲ್ಲಿ ಅವರು ಪ್ರಮುಖ ರಾಜಕೀಯ ಘೋಷಣೆ ಮಾಡಲಿದ್ದಾರೆ ಎಂಬ ವರದಿಗಳು ಹೊರಬಿದ್ದಿವೆ. ಕೆಲವು ಮೂಲಗಳು ಅವರು ಪಕ್ಷದಿಂದ ಹೊರಬರುವುದು ಪರಿಣಾಮಕಾರಿಯಾಗಿ ದೃಢಪಟ್ಟಿದೆ ಎಂದು ಸೂಚಿಸಿವೆ.
Wipro faces conversion allegation: TCS ನ ನಾಸಿಕ್ನ ಘಟಕದಲ್ಲಿ ಉದ್ಯೋಗಿಗಳಿಗೆ ಕಿರುಕುಳ ನೀಡಿದ ಘಟನೆ ಬೆನ್ನಲ್ಲೇ, ಇದೀಗ ಪುಣೆಯಲ್ಲಿನ ವಿಪ್ರೋ ಸಂಸ್ಥೆಯ ಹಿಂಜಾವಾಡಿ ಕ್ಯಾಂಪಸ್ನಲ್ಲಿ ಧರ್ಮದ ಆಧಾರದ ಮೇಲೆ ಮಹಿಳಾ ಉದ್ಯೋಗಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.
ಕಳೆದೆರಡು ದಿನದಿಂದ ಏರುತ್ತಿರುವ ಚಿನ್ನದ ಬೆಲೆಯಲ್ಲಿಂದು ಕೊಂಚ ಇಳಿಕೆಯಾಗಿದೆ. ಗುರುವಾರ (ಜೂನ್ 4) ಬೆಂಗಳೂರಿನಲ್ಲಿ 22 ಕ್ಯಾರಟ್ನ 1 ಗ್ರಾಂ ಚಿನ್ನಕ್ಕೆ 10 ರೂ ಇಳಿಕೆ ಕಂಡು ಬಂದಿದ್ದು, 14,310 ರುಪಾಯಿ ಇದ್ದರೆ, 24 ಕ್ಯಾರಟ್ನ 1 ಗ್ರಾಂ ಚಿನ್ನಕ್ಕೆ 11 ರೂ. ಇಳಿಕೆಯಾಗಿ 15,611 ರುಪಾಯಿ ಕಂಡು ಬಂದಿದೆ.
ಬುಧವಾರ ಭೀಕರ ಬೆಂಕಿ ಅವಘಡದಲ್ಲಿ 21 ಜನರು ಸಾವನ್ನಪ್ಪಿದ ಫ್ಲೋರಿಶ್ ಸ್ಟೇ ಬೆಡ್-ಅಂಡ್-ಬ್ರೇಕ್ಫಾಸ್ಟ್ನ ಮಾಲೀಕ ಲವ್ಕೇಶ್ ಬಜಾಜ್ ಅವರನ್ನು ಬಂಧಿಸಲಾಗಿದೆ. ಡರಾತ್ರಿ ವಿಚಾರಣೆಯ ಸಮಯದಲ್ಲಿ, ಐದು ಅಂತಸ್ತಿನ ಕಟ್ಟಡವನ್ನು ಆವರಿಸಿದ್ದ ಬೆಂಕಿಯಿಂದ ಜನರು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಸ್ಥಳದಿಂದ ಪರಾರಿಯಾಗಿದ್ದಾಗಿ ಅವರು ತಪ್ಪೊಪ್ಪಿಕೊಂಡಿದ್ದಾರೆ.
ಆಕಸ್ಮಿಕವಾಗಿ ಕಾರಿನ ಡಿಕ್ಕಿಯೊಳಗೆ ಸಿಲುಕಿ ಮೂರು ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ ಯಾದಗಿರಿ ತಾಲೂಕಿನ ತೊನಸನಹಳ್ಳಿ (ಎಸ್) ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೊಟ್ಟೂರೇಶ್ವರ ಪೂಜ್ಯರ ಎಂಬುವವರ ಪುತ್ರ ಬಸವಪ್ರಭು (3) ಮೃತಪಟ್ಟ ದುರ್ದೈವಿ ಬಾಲಕ. ಬಸವಪ್ರಭು ಎಂದಿನಂತೆ ತನ್ನ ಸ್ನೇಹಿತರೊಂದಿಗೆ ಮನೆಯ ಮುಂಭಾಗದ ಆವರಣದಲ್ಲಿ ಆಟವಾಡುತ್ತಿದ್ದ.
ಕೇರಳದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಒಂದೂವರೆ ವರ್ಷದ ಅರ್ಷಿದ್ ಎಂಬ ಪುಟ್ಟ ಮಗುವನ್ನು ಮಲ ತಂದೆಯೇ ಕೊಲೆ ಮಾಡಿದ್ದಾನೆ. ಮಗುವನ್ನು ಕೊಲೆ ಮಾಡಿದ ಆರೋಪದ ಮೇಲೆ ತಾಯಿ ಅಖಿಲಾ (24 ವರ್ಷ) ಮತ್ತು ಆಕೆಯ ಲಿವ್-ಇನ್ ಸಂಗಾತಿ ಅಶ್ಕರ್ (31 ವರ್ಷ) ಎಂಬುವವರನ್ನು ನೆಡುಮಂಗಾಡ್ ಪೊಲೀಸರು ಬಂಧಿಸಿದ್ದಾರೆ.
ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ, ತಮಗೆ ಆನ್ ಲೈನ್ನಲ್ಲಿ 23 ಲಕ್ಷ ವಂಚನೆ ಮಾಡಿರುವುದಾಗಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಮಹಿಳೆ ವೈವಾಹಿಕ ವೇದಿಕೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿದ್ದರು. ಇದರಿಂದ ಸ್ಕಾಟ್ಲೆಂಡ್ ನಲ್ಲಿ ಕೆಲಸ ಮಾಡುತ್ತಿರುವ ಡಾ. ವಿಹಾನ್ ಮಿಶ್ರಾ ಹೆಸರಿನ ವ್ಯಕ್ತಿ ಸಂಪರ್ಕಿಸಿದ್ದಾರೆ.
ನೈಋತ್ಯ ಮುಂಗಾರು ಈ ಬಾರಿ ಕೇರಳಕ್ಕೆ ಪ್ರವೇಶಿಸುವುದು ವಿಳಂಬವಾಗಿದೆ. ಈ ಸಲವೂ ಮೇ 26ರ ಹೊತ್ತಿಗೆ ಮುಂಗಾರು ಪ್ರವೇಶ ಆಗಲಿದೆ ಎಂದು ಮೊದಲು IMD ಹೇಳಿತ್ತು. ಆದರೆ ಇದೀಗ ಮತ್ತೆ ವಿಳಂಬವಾಗಿದೆ. , ಈ ಸಲ ನೈಋತ್ಯ ಮಾನ್ಸೂನ್ ಜೂ.3-4ಕ್ಕೆ ಕೇರಳಕ್ಕೆ ಪ್ರವೇಶ ಆಗಲಿದೆ. ಅದಕ್ಕೂ ಮೊದಲು ಮಾನ್ಸೂನ್ ಪ್ರಭಾವ ಇಲ್ಲ ಎಂದು ಹೇಳಲಾಗಿತ್ತು.
ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಚಿವ ಸಂಪುಟ ಸೇರಲು ಆಕಾಂಕ್ಷಿ ಶಾಸಕರ ಭರ್ಜರಿ ಲಾಬಿ ಮತ್ತು ಕಸರತ್ತು ಶುರುವಾಗಿದೆ. ಸದ್ಯ ಹಲವರು ದೆಹಲಿಗೆ ತೆರಳಿದ್ದು, ಹೈಕಮಾಂಡ್ ಮನವೊಲಿಸಲು ಕಸರತ್ತು ನಡೆಸಲಾಗುತ್ತಿದೆ. ಇನ್ನು ಮೂವರನ್ನು ಉಪಮುಖ್ಯಮಂತ್ರಿ ಮಾಡುವಂತೆ ಹೈಕಮಾಂಡ್ ಮುಂದೆ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಡುವಿನ ಇತ್ತೀಚಿನ ಫೋನ್ ಸಂಭಾಷಣೆ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಮಾಧ್ಯಮ ವರದಿಗಳ ಪ್ರಕಾರ, ಡೊನಾಲ್ಡ್ ಟ್ರಂಪ್ ಲೆಬನಾನ್ನಲ್ಲಿ ಇಸ್ರೇಲ್ ಮಿಲಿಟರಿ ಕ್ರಮದ ಬಗ್ಗೆ ತೀವ್ರ ಕೋಪಗೊಂಡಿದ್ದರು ಮತ್ತು ನೆತನ್ಯಾಹು ಅವರನ್ನು ತೀವ್ರವಾಗಿ ಖಂಡಿಸಿದ್ದಾರೆ ಎಂದು ವರದಿಯಾಗಿದೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದೇಶದ ನಗರಗಳಲ್ಲಿ ಆತ್ಮಹತ್ಯೆ ದರಗಳ ಕುರಿತಾದ ಡೇಟಾ, ಬೆಂಗಳೂರನ್ನು ಕಳವಳಕಾರಿ ಸ್ಥಾನದಲ್ಲಿರಿಸಿದೆ. ಮಹಾನಗರಗಳಲ್ಲಿ ಬೆಂಗಳೂರು ಆತ್ಮಹತ್ಯೆಗಳ ಸಂಖ್ಯೆಯಲ್ಲಿ ದೆಹಲಿಯ ನಂತರ ಎರಡನೇ ಸ್ಥಾನದಲ್ಲಿದೆ. NCRB ಡೇಟಾ ಹೇಳುವ ಪ್ರಕಾರ, 84.99 ಲಕ್ಷ ಜನಸಂಖ್ಯೆಯೊಂದಿಗೆ ಬೆಂಗಳೂರಿನಲ್ಲಿ 2403 ಆತ್ಮಹತ್ಯೆಗಳನ್ನು ತೋರಿಸುತ್ತದೆ. ಇದು ನಗರದ ಆತ್ಮಹತ್ಯೆ ದರವನ್ನು 28.3 ಎಂದು ಉಲ್ಲೇಖಿಸುತ್ತದೆ.
ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ನಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲವಾಗಿದ್ದು, ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಸೇನೆಯ ಚಿನಾರ್ ಕಾರ್ಪ್ಸ್ ಪ್ರಕಾರ, ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ ಉರಿ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.
ಉತ್ತರಾಖಂಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವಾಲಯಕ್ಕೆ ಪ್ರಯಾಣಿಸುವ ಭಕ್ತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮವಾಗಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಭಕ್ತರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ (Mohammed Nalapad)ಗೆ ಮತ್ತೆ ಸಂಕಷ್ಟ ಎದುರಾಗಿದೆ. ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ (ED) ಸಮನ್ಸ್ ನೀಡಿದ್ದು, ನಾಳೆ (ಜೂ.1) ಸೋಮವಾರದಂದೇ ವಿಚಾರಣೆ ಹಾಜರಾಗುವಂತೆ ಸೂಚಿಸಿದೆ.
ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಮಳೆ, ಜಲಾವೃತ ರಸ್ತೆಯಲ್ಲಿ ಸಿಲುಕಿದ್ದ ಅಂಗವಿಕಲ ವ್ಯಕ್ತಿರೊಬ್ಬರನ್ನ ಪೊಲೀಸ್ ಕಾನ್ಸ್ಟೆಬಲ್ ಒಬ್ಬರು ಹೆಗಲ ಮೇಲೆ ಹೊತ್ತು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾಗಿರುವ ಘಟನೆ ನಡೆದಿದೆ. ಮೃತರನ್ನು ಹೈದರಾಬಾದ್ ಮೂಲದ ಯುವನ ಚಂದ್ರ(5), ಸತೀಶ್(35), ಮಂತ್ರಾಲಯ ಗ್ರಾಮದ ರಾಘವೇಂದ್ರ(25), ಧನುಷ್(23) ಉರವಕೊಂಡದ ಸಂಧ್ಯಾ(22) ಎಂದು ಗುರುತಿಸಲಾಗಿದೆ. ಮತ್ತೋರ್ವ ಯುವತಿ ಅಪರ್ಣಾ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸೋನಾರ್ಪುರ್ ಪ್ರದೇಶದಲ್ಲಿ ಶನಿವಾರ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ದಾಳಿ ಮಾಡಲಾಗಿದೆ ಎಂದು ಹೇಳಲಾಗಿದೆ. ಬ್ಯಾನರ್ಜಿ ಅವರು ಚುನಾವಣೋತ್ತರ ಹಿಂಸಾಚಾರ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲು ತೆರಳಿದ್ದ ವೇಳೆ ಅವರ ಮೇಲೆ ದಾಳಿ ನಡೆದಿದೆ ಎಂದು ಹೇಳಲಾಗಿದೆ.
ಈ ವರ್ಷ ದೇಶದಲ್ಲಿ ನೈಋತ್ಯ ಮಾನ್ಸೂನ್ ಮೇಲೆ 'ಎಲ್ ನಿನೋ' ಪ್ರಭಾವ ಬೀರುವ ಸಾಧ್ಯತೆಯಿದೆ. ದೇಶವು ಅಧಿಕ ತಾಪಮಾನ ಮತ್ತು ಮಳೆ ಕೊರತೆಯನ್ನು ಎದುರಿಸಬೇಕಾಗಬಹುದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಕಳೆದ 3 ವರ್ಷಗಳಲ್ಲಿ ದೇಶ ಕಂಡ ಅತ್ಯಂತ ಕಡಿಮೆ ಮಳೆಯ ಮಟ್ಟವನ್ನು ತಲುಪಲಿದೆ ಎಂದು ತಿಳಿದು ಬಂದಿದೆ.
ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಾದಗಳನ್ನು ಸುಪ್ರೀಂ ಕೋರ್ಟ್ ಗುರುವಾರ ಆಲಿಸಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿನ "ಲೋಪ"ಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಪ್ರಧಾನಿ ನರೇಂದ್ರ ಮೋದಿ ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.
ನಿನ್ನೆ ಭಾರೀ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿಂದು ಕೊಂಚ ಏರಿಕೆಯಾಗಿದೆ. 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 145 ರೂ. ಏರಿಕೆಯಾಗಿ 14,450 ರೂ. ಇದ್ದರೆ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 158 ರೂ. ಏರಿಕೆಯಾಗಿ 15,764 ರೂ. ಇದೆ.