ಚಮೋಲಿಯಲ್ಲಿ ಮುಂದುವರಿದ ಮಳೆ ಆರ್ಭಟ
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದ ಉಂಟಾದ ಮೇಘಸ್ಫೋಟದಲ್ಲಿ ಕನಿಷ್ಠ 10 ಜನರು ಕಾಣೆಯಾಗಿದ್ದಾರೆ. ಭಾರೀ ಅವಶೇಷಗಳ ಹರಿವಿನ ಪರಿಣಾಮವಾಗಿ, ಆರು ಕಟ್ಟಡಗಳು ಕುಸಿದಿವೆ. ಬುಧವಾರ ತಡರಾತ್ರಿ ನಂದಾ ನಗರದಲ್ಲಿ ಈ ಘಟನೆ ನಡೆದಿದೆ.
vishakha@vishwavani.news
ಉತ್ತರ ಕನ್ನಡ ಜಿಲ್ಲೆಯ ಶಿರಸಿಯವರಾದ ಇವರು, ಪತ್ರಿಕೋದ್ಯಮದಲ್ಲಿ ಪದವಿಯನ್ನು ಪೂರೈಸಿದ್ದಾರೆ. ವಿಶ್ವವಾಣಿ ಟಿವಿಯ ವೆಬ್ಸೈಟ್ ಮೂಲಕ ವೃತ್ತಿ ಬದುಕನ್ನು ಆರಂಭಿಸಿ ಕೆಲವೇ ತಿಂಗಳುಗಳು ಕಳೆದಿವೆ. ಸದ್ಯ ಉಪ ಸಂಪಾದಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜಕೀಯ, ಕ್ರೈಂ ಹಾಗೂ ಅಂತಾರಾಷ್ಟ್ರೀಯ ಸಂಬಂಧ ನೆಚ್ಚಿನ ವಿಷಯ.
ಅಮೆರಿಕದಲ್ಲಿ (America) ಮತ್ತೆ ಗುಂಡಿನ ದಾಳಿ ನಡೆದಿದ್ದು, ಬುಧವಾರ ಮಧ್ಯಾಹ್ನ ಗ್ರಾಮೀಣ ಮಧ್ಯ ಪೆನ್ಸಿಲ್ವೇನಿಯಾದಲ್ಲಿ ನಡೆದ ಗುಂಡಿನ (Shootout) ದಾಳಿಯಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಿಹಾರದ ಚುನಾವಣೆಗೂ ಮುನ್ನ ಕ್ಷೇತ್ರದಲ್ಲಿ ಚುನಾವಣಾ ಚಟುವಟಿಕೆಗಳು ಗರಿದೆರಿದೆ. ಈ ಕುರಿತು ಬಿಹಾರದ ಕೇಂದ್ರ ಸಚಿವ ಹಾಗೂ ಎಲ್ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೊಸ ಹೇಳಿಕೆಯೊಂದನ್ನು ನೀಡಿದ್ದಾರೆ. ನಾನು ತರಕಾರಿಗಳ ಮೇಲೆ ಉಪ್ಪಿನಂತೆ, ನಾನು ಪ್ರತಿ ಕ್ಷೇತ್ರದಲ್ಲಿ 20,000 ರಿಂದ 25,000 ಮತದಾರರ ಮೇಲೆ ಪ್ರಭಾವ ಬೀರಬಲ್ಲೆ ಎಂದು ಅವರು ಹೇಳಿದ್ದಾರೆ.
ಮೊಬೈಲ್ ಅಪ್ಲಿಕೇಶನ್ನಲ್ಲಿ 16 ವರ್ಷದ ಬಾಲಕನೊಂದಿಗೆ ಸ್ನೇಹ ಬೆಳೆಸಿದ ನಂತರ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಬಂಧಿತರ ಪೈಕಿ ಓರ್ವ ರಾಜಕಾರಣಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಕೇಂದ್ರ ಸರ್ಕಾರ ಮಧ್ಯಮ ವರ್ಗದವರ ಮೇಲಿನ ಹೊರೆ ಇಳಿಸಲು ಜಿಎಸ್ಟಿ 2.0 ಪರಿಷ್ಕರಣೆಯನ್ನು ಮಾಡಿದೆ. ಈ ನಿಯಮ ಜಾರಿಗೊಂಡ ಬಳಿಕ ಹಲವು ಉತ್ಪನ್ನಗಳ ಬೆಲೆ ಇಳಿಕೆಗೊಳ್ಳುತ್ತಿವೆ. ಇದೀಗ ಮದರ್ ಡೈರಿ ತನ್ನ ಡೈರಿ ಮತ್ತು ಆಹಾರ ಉತ್ಪನ್ನಗಳ ಶ್ರೇಣಿಯಾದ್ಯಂತ ಬೆಲೆಗಳನ್ನು ಕಡಿತಗೊಳಿಸುತ್ತಿದೆ ಎಂದು ಹೇಳಿದೆ. ಕಡಿಮೆಯಾದ ಬೆಲೆಗಳು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿವೆ.
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ತಮ್ಮ ವಯನಾಡ್ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಭೇಟಿ ಸಂದರ್ಭದಲ್ಲಿ ಪ್ರಿಯಾಂಕಾ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಚೆರುವಾಯಲ್ ರಾಮನ್ ಅವರ ಮನೆಯಲ್ಲಿ ಸುಮಾರು ಎರಡೂವರೆ ಗಂಟೆಗಳ ಕಾಲ ಕಳೆದಿದ್ದಾರೆ.
ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಡಗಿದ್ದ (Pakistan) ಭಯೋತ್ಪಾದಕರನ್ನು ಹೊಡೆದುರುಳಿಸುವ ಸಲುವಾಗಿ ಭಾರತ ಕೈಗೊಂಡ ಆಪರೇಷನ್ ಸಿಂದೂರಗೆ ಪಾಕಿಸ್ತಾನ ಬೆಚ್ಚಿಬಿದ್ದಿದೆ. ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದ ತಿಂಗಳುಗಳ ನಂತರ, ಜೈಶ್-ಎ-ಮೊಹಮ್ಮದ್ (ಜೆಇಎಂ) ಕಮಾಂಡರ್ ಬಹಾವಲ್ಪುರದ ಮೇಲಿನ ದಾಳಿಯಲ್ಲಿ ಜೈಶ್ ಉನ್ನತ ಕಮಾಂಡರ್ ಮಸೂದ್ ಅಜರ್ ಕುಟುಂಬ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ ಹುಟ್ಟುಹಬ್ಬದ ದಿನದಂದು ಮಧ್ಯಪ್ರದೇಶದ ಧಾರ್ನಲ್ಲಿ ಸೆಪ್ಟೆಂಬರ್ 17 ರಂದು ದೇಶದ ಅತಿದೊಡ್ಡ ಪಿಎಂ ಮಿತ್ರ ಜವಳಿ ಉದ್ಯಾನವನವನ್ನು ಉದ್ಘಾಟಿಸಲಿದ್ದಾರೆ.ಈ ಯೋಜನೆಯು 300,000 ಕ್ಕೂ ಹೆಚ್ಚು ಜನರಿಗೆ ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ.
ಛತ್ತೀಸ್ಗಢದಲ್ಲಿ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದ್ದು, ಯುವಕ ಯುವತಿಯರ ಬೆತ್ತಲೆ ಪಾರ್ಟಿ ನಡೆಸಲು ತಯಾರಿ ಮಾಡಲಾಗಿತ್ತು ಎಂದು ತಿಳಿದು ಬಂದಿದೆ. ರಾಯ್ಪುರದಲ್ಲಿ ಸೆಪ್ಟೆಂಬರ್ 21 ರಂದು ನಿಗದಿಯಾಗಿತ್ತು ಎನ್ನಲಾದ "ನಗ್ನ ಪಾರ್ಟಿ"ಯ ಪೋಸ್ಟರ್ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ಅಸ್ಸಾಂ ನಾಗರಿಕ ಸೇವೆಯ (ಎಸಿಎಸ್) ಅಧಿಕಾರಿಯೊಬ್ಬರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮುಖ್ಯಮಂತ್ರಿಯವರ ವಿಶೇಷ ಜಾಗೃತ ದಳದ ಅಧಿಕಾರಿಗಳ ತಂಡವು ಅಧಿಕಾರಿ ನೂಪುರ್ ಬೋರಾ ಅವರ ಗುವಾಹಟಿ ನಿವಾಸದ ಮೇಲೆ ದಾಳಿ ನಡೆಸಿದೆ.
ಆಮಿಷವೊಡ್ಡಿ, ವ್ಯಕ್ತಿಗಳನ್ನು ಮನೆಗೆ ಕರೆಸಿ ಚಿತ್ರಹಿಂಸೆ ನೀಡತ್ತಿದ್ದ ಕೇರಳದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಕೊಯಿಪುರಂ ಬಳಿಯ ಚರಲಕುನ್ನು ನಿವಾಸಿಗಳಾದ ಜಯೇಶ್ ಮತ್ತು ಅವರ ಪತ್ನಿ ರೇಶ್ಮಿ ಎಂದು ಗುರುತಿಸಲಾಗಿದೆ. ಮತ್ತೊಂದು ದೂರಿನ ಪ್ರಕಾರ, ವ್ಯಕ್ತಿಯ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.
ವಡಾಲಾ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ತಾಂತ್ರಿಕ ದೋಷದಿಂದಾಗಿ ಸುಮಾರು ಎರಡು ಗಂಟೆಗಳ ಕಾಲ ಮೋನೋರೈಲು ಸೇವೆ ಸ್ಥಗಿತಗೊಂಡಿತ್ತು. ಅದರಲ್ಲಿದ್ದ 17 ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳ ಪ್ರಕಾರ, ಮುಕುಂದರಾವ್ ಅಂಬೇಡ್ಕರ್ ರಸ್ತೆ ಜಂಕ್ಷನ್ನಲ್ಲಿ ಮೋನೋರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.
ವಕ್ಫ್ ತಿದ್ದುಪಡಿ ಕಾಯ್ದೆ 2025 ರಲ್ಲಿನ ನಿಬಂಧನೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಡೆಹಿಡಿದಿದ್ದು, ಒಬ್ಬ ವ್ಯಕ್ತಿಯು ವಕ್ಫ್ ರಚಿಸಲು ಐದು ವರ್ಷಗಳ ಕಾಲ ಮುಸ್ಲಿಂ ಆಗಿರಬೇಕು ಎಂದು ಆದೇಶಿಸಿದೆ. ವಕ್ಫ್ ಪ್ರಕರಣದಲ್ಲಿ ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ, ಮೇ 22 ರಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠವು ಈ ವಿಷಯಗಳ ಕುರಿತು ಮಧ್ಯಂತರ ಆದೇಶಗಳನ್ನು ಕಾಯ್ದಿರಿಸಿತ್ತು.
ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ನಕ್ಸಲರ ಹಿರಿಯ ಕಮಾಂಡರ್ ಸೇರಿದಂತೆ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 209 ಕೋಬ್ರಾ ಘಟಕ ಮತ್ತು ರಾಜ್ಯ ಪೊಲೀಸರ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಗೋರ್ಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಂತಿತ್ರಿ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆಯಿತು.
ವಿದೇಶಗಳಲ್ಲಿ ಭಾರತೀಯರ ಮೇಲೆ ಹೆಚ್ಚುತ್ತಿರುವ ಹಲ್ಲೆಯ ನಡುವೆ ಇದೀಗ ಆಘಾತಕಾರಿ ಸುದ್ದಿಯೊಂದು ಹೊರ ಬಂದಿದೆ. ಅಮೆರಿಕದ ಏಜೆನ್ಸಿಯೊಂದಿಗೆ (America) ನಿಯಮಿತ ತಪಾಸಣೆಗೆ ಹೋಗಿದ್ದಕ್ಕಾಗಿ 73 ವರ್ಷದ ಸಿಖ್ ಮಹಿಳೆಯನ್ನು ಕ್ಯಾಲಿಫೋರ್ನಿಯಾದ ವಲಸೆ ಅಧಿಕಾರಿಗಳು ಬಂಧಿಸಿದ್ದಾರೆ.
ದೆಹಲಿ ಕ್ಯಾಂಟ್ ಮೆಟ್ರೋ ನಿಲ್ದಾಣದ ಬಳಿಯ ರಿಂಗ್ (Road Accident) ರಸ್ತೆಯಲ್ಲಿ ಭಾನುವಾರ ಬಿಎಂಡಬ್ಲ್ಯು ಕಾರು ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಹಣಕಾಸು ಸಚಿವಾಲಯದ (Finance Ministry) ಹಿರಿಯ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗ್ಗೆ ಏಳುತ್ತಿದ್ದಂತೆ ಭುಜವೆಲ್ಲ ನೋವು, ಕುತ್ತಿಗೆ ತಿರುಗಿಸಲಾಗುತ್ತಿಲ್ಲವೇ? ಹೇಗೋ ಮಲಗಿದ್ದೀರಿ, ಅದಕ್ಕೇ ನೋವಾಗಿದೆ ಎಂದು ಭಾವಿಸಿದಿರೇ? ಇರಬಹುದು… ಹಾಗಿಲ್ಲದೆಯೂ ಇರಬಹುದು! ನೀವು ಬಳಸುತ್ತಿರುವ ದಿಂಬು ಹೇಗಿದೆ ಎಂಬುದನ್ನು ಗಮನಿಸಿದ್ದೀರಾ? ನಮ್ಮ ಕುತ್ತಿಗೆಯೆಂದರೆ ಸ್ನಾಯುಗಳು, ಟೆಂಡನ್ಗಳು, ಲಿಗಮೆಂಟ್ಗಳು ಮತ್ತು ಸಣ್ಣ ವೆರ್ಟೆಬ್ರೆಗಳ ಸಂಕೀರ್ಣ ಹಂದರ. ಮೇಲಿಂದ ಕೆಳಗಿನವರೆಗೆ ಎಲ್ಲವೂ ಸರಿ ಇರಬೇಕು ಎಂದರೆ ಕುತ್ತಿಗೆಯ ಆರೋಗ್ಯವೂ ಸರಿ ಇರಬೇಕು.
ಹುತ್ತಗಾರ ಗ್ರಾಮ ಪಂಚಾಯತದ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಜುಲೈನಲ್ಲಿ ಪಿಎಸ್ಐ ಸಂತೋಷ್ ಕುಮಾರ್ ನೇತೃತ್ವದಲ್ಲಿ, ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿತ್ತು.