ಚಿನ್ನದ ದರದಲ್ಲಿಂದು ಯಥಾಸ್ಥಿತಿ; ಬೆಲೆ ನೋಡಿ
ಚಿನ್ನದ ದರದಲ್ಲಿಂದು ಯಥಾಸ್ಥಿತಿ ಕಂಡು ಬಂದಿದೆ. 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,235 ರೂ. ಇದ್ದರೆ 24 ಕ್ಯಾರಟ್ 1 ಗ್ರಾಂ ಚಿನ್ನದ ದರ 5,529 ರೂ. ಇದೆ. 22 ಕ್ಯಾರಟ್ನ 8 ಗ್ರಾಂ ಚಿನ್ನಕ್ಕೆ ನೀವು 1,13,880 ರೂ. ಪಾವತಿಸಬೇಕು.
Lenskart Row: ಲೆನ್ಸ್ಕಾರ್ಟ್ ತನ್ನ ಕಚೇರಿ ಡ್ರೆಸ್ಕೋಡ್ ಮಾರ್ಗಸೂಚಿಯಲ್ಲಿ ಹಿಂದೂ ಸಂಪ್ರದಾಯದ ಕುರುಹುಗಳಾದ ಬಿಂದಿ, ತಿಲಕ ಮತ್ತು ಕೈಗೆ ಕಟ್ಟುವ ದಾರಗಳನ್ನು ನಿಷೇಧಿಸಿ, ಹಿಜಾಬ್ಗೆ ಅನುಮತಿ ನೀಡಿದೆ ಎಂಬ ಆರೋಪ ಇತ್ತೀಚೆಗೆ ಕೇಳಿ ಬಂದಿತ್ತು. ಇದೀಗ ಬಿಜೆಪಿ ಮುಸ್ಲಿಂ ನಾಯಕಿಯೊಬ್ಬರು ಲೆನ್ಸ್ಕಾರ್ಟ್ ಮುಂಬೈನ ಶೋ ರೂಂಗೆ ನುಗ್ಗಿ, ಉದ್ಯೋಗಿಗಳಿಗೆ ತಿಲಕ ಹಚ್ಚಿದ್ದಾರೆ.
ಜರ್ಮನಿಯ ಮೋರ್ಸ್ ನಗರದ ಡ್ಯೂಸ್ಬರ್ಗ್ ಪ್ರದೇಶದ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ ಭುಗಿಲೆದ್ದ ಪರಿಣಾಮ 11 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಧಾರ್ಮಿಕ ಆವರಣದೊಳಗೆ ತೆಗೆದಿದ್ದಾರೆ ಎನ್ನಲಾದ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಗುರುದ್ವಾರದ ಹಣಕಾಸು ಮತ್ತು ನಿರ್ವಹಣೆಯ ವಿವಾದಗಳಿಂದ ಘರ್ಷಣೆ ಉಂಟಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಟೆಕ್ ದೈತ್ಯ ಆ್ಯಪಲ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿಮ್ ಕುಕ್ ಸೆಪ್ಟೆಂಬರ್ನಲ್ಲಿ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂದು ಘೋಷಿಸಿದ ಬಳಿಕ ಕಂಪನಿ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ಅವರನ್ನು ನೇಮಕ ಮಾಡಿದೆ. 2011 ರಿಂದ ಆ್ಯಪಲ್ ಅನ್ನು ಮುನ್ನಡೆಸುತ್ತಿರುವ ಟಿಮ್ ಕುಕ್ ಸೆಪ್ಟೆಂಬರ್ 1 ರಂದು ಸಿಇಒ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ.
ಮಹಾರಾಷ್ಟ್ರದ ಅಮರಾವತಿಯಲ್ಲಿ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ 350 ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದ ವ್ಯಕ್ತಿಯನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಇದೀಗ ಮತ್ತೊಂದು ಬೆಳವಣಿಗೆಯಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆ ಇಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ರಾಜಸ್ಥಾನದ ಬಲೋತ್ರಾ ಜಿಲ್ಲೆಯ ಭಾರತೀಯ ಸಂಸ್ಕರಣಾಗಾರದಲ್ಲಿ ಸೋಮವಾರ ದೊಡ್ಡ ಬೆಂಕಿ ಕಾಣಿಸಿಕೊಂಡಿದೆ. ಹೊಸ ಸಂಕೀರ್ಣವನ್ನು ನಾಳೆ (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಬೇಕಿತ್ತು. ಭಾರಿ ಬೆಂಕಿ ಕಾಣಿಸಿಕೊಂಡು, ಗಾಳಿಯಲ್ಲಿ ದೊಡ್ಡ ಕಪ್ಪು ಹೊಗೆಯನ್ನು ಎದ್ದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ನಾಸಿಕ್ನ ಟಿಸಿಎಸ್ ಕಂಪನಿಯಲ್ಲಿನ ಮತಾಂತರ ಜಾಲ ಬಯಲಾಗುತ್ತಿದ್ದಂತೆ ಅಂತಹುದೇ ಮತ್ತೊಂದು ಪ್ರಕರಣ ಇದೀಗ ಬಯಲಾಗಿದೆ. ಧಾರ್ಮಿಕ ಮತಾಂತರ, ಕಿರುಕುಳ ಮತ್ತು ಮಹಿಳೆಯರನ್ನು ಇಸ್ಲಾಮಿಕ್ ಉಡುಪು ಧರಿಸುವಂತೆ ಒತ್ತಾಯಿಸುವುದು ಸೇರಿದಂತೆ ಹಲವು ಆರೋಪಗಳ ಮೇಲೆ ನಾಗ್ಪುರ ಮೂಲದ ಎನ್ಜಿಒ ಮುಖ್ಯಸ್ಥನನ್ನು ಬಂಧಿಸಲಾಗಿದೆ.
America- Iran: ಕಳೆದ ವಾರ ನಡೆದಿದ್ದ ಇರಾನ್ ಹಾಗೂ ಅಮೆರಿದ ಶಾಂತಿ ಮಾತುಕತೆ ಮುರಿದು ಬಿದ್ದಿದೆ. ಇದೀಗ ಅಮೆರಿಕದೊಂದಿಗೆ ಎರಡನೇ ಸುತ್ತಿನ ಮಾತುಕತೆಯಲ್ಲಿ ಭಾಗವಹಿಸಲು ಯೋಜಿಸುತ್ತಿಲ್ಲ ಎಂದು ಇರಾನ್ ಹೇಳಿದೆ ಎಂದು ರಾಜ್ಯ ಮಾಧ್ಯಮ ತಿಳಿಸಿದೆ.
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ರಾಜಕೀಯ ಪಕ್ಷಗಳು ಬಂಗಾಳದಾದ್ಯಂತ ಭರ್ಜರಿ ಪ್ರಚಾರ ನಡೆಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಬಂಗಾಳದಾದ್ಯಂತ ರ್ಯಾಲಿ ನಡೆಸುತ್ತಿದ್ದಾರೆ. ಇದೀಗ ಪ್ರಧಾನಿ ರಸ್ತೆ ಬದಿ ನಿಂತು ಮಂಡಕ್ಕಿ ಸವಿಯುತ್ತಿರುವ ಫೋಟೋಗಳು ಎಲ್ಲೆಡೆ ವೈರಲ್ ಆಗಿವೆ
Remedies For Periods Pain: ಹೆಣ್ಣು ಮಕ್ಕಳಿಗೆ ಮುಟ್ಟಿನ ಸಮಯದಲ್ಲಿ ನೋವು ಎನ್ನುವುದು ಸಾಮಾನ್ಯ ಸಂಗತಿ. ಹೊಟ್ಟೆ ನೋವು, ಸೊಂಟ ನೋವು ಕಾಣಿಸಿಕೊಳ್ಳುತ್ತದೆ. ಈ ಮಾಸಿಕ ದಿನಗಳಲ್ಲಿ ನೋವು ನಿವಾರಕಗಳು ಹೆಚ್ಚಾಗಿ ಪರಿಹಾರವಾಗಿದ್ದರೂ, ಅನೇಕ ಮಹಿಳೆಯರು ಈಗ ಮುಟ್ಟಿನ ಚಕ್ರದಲ್ಲಿ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ.
ಮದ್ಯ ಪ್ರಿಯರಿಗೆ ಶಾಕ್ ಕೊಡಲು ಸರ್ಕಾರ ಸಜ್ಜಾಗಿದೆ ಎಂದು ತಿಳಿದು ಬಂದಿದೆ. ಕರ್ನಾಟಕ ಸರ್ಕಾರ ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ ಆಧರಿಸಿ ಹೊಸ ತೆರಿಗೆ ವ್ಯವಸ್ಥೆ ಜಾರಿಗೆ ತರಲು ಕರಡು ಅಧಿಸೂಚನೆ ಹೊರಡಿಸಿದೆ. ಇದರಿಂದ ವಿಸ್ಕಿ, ರಮ್ ಸೇರಿದಂತೆ ಸಾಮಾನ್ಯ ಮದ್ಯಗಳ ಬೆಲೆ ಕನಿಷ್ಠ ಶೇ.20ರಷ್ಟು ಹೆಚ್ಚಾಗಲಿದೆ.
Hosapete Road Accident: ಹೊಸಪೇಟೆ ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಬೈಕ್, ಕಾರು, ಬಸ್ಗೆ ಲಾರಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
Deepika Padukone and Ranveer Singh: ಬಾಲಿವುಡ್ ನಟರಾದ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಭಾನುವಾರ ತಮ್ಮ ಎರಡನೇ ಮಗುವನ್ನು ನಿರೀಕ್ಷಿಸುತ್ತಿರುವುದಾಗಿ ಇನ್ಸ್ಟಾಗ್ರಾಮ್ನಲ್ಲಿ ಘೋಷಿಸಿದ್ದಾರೆ. ಸೆಪ್ಟೆಂಬರ್ 2024 ರಲ್ಲಿ ತಮ್ಮ ಮೊದಲ ಮಗು ಮಗಳು ದುವಾಳನ್ನು ಸ್ವಾಗತಿಸಿದ್ದರು.
ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ವಿನಯ್ ಕುಲಕರ್ಣಿ ಅವರ ಪರ ಪುತ್ರಿ ದೀಪಾಲಿ ವಿ. ಕುಲಕರ್ಣಿ ಭಾವನಾತ್ಮಕ ಬರಹವೊಂದನ್ನು ಬರೆದುಕೊಂಡು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.
Vinay Kulakarni: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಸಜಾ ಬಂಧಿ ಖೈದಿ ನಂಬರ್ ನೀಡಲಾಗಿದೆ.
ಹಲವು ದಿನಗಳಿಂದ ಎಲ್ಲೆಡೆ ಕಾಣಿಸಿಕೊಳ್ಳುತ್ತಿದ್ದ ಹಕ್ಕಿಜ್ವರ ಬೆಂಗಳೂರಿಗೂ ಕಾಲಿಟ್ಟಿದೆ. ಬೆಂಗಳೂರಿನ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಕಿನಂದು ಹಕ್ಕಿಜ್ವರ ಧೃಡಪಟ್ಟಿದೆ ಎಂದು ತಿಳಿದು ಬಂದಿದೆ.
Karnataka Weather: ರಾಜ್ಯಾದ್ಯಂತ ಬಿಸಿಲಿನ ತಾಪಮಾನ ಏರುತ್ತಲೇ. ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
Women's Quota Bill: ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸದಿರುವ ಮೂಲಕ ವಿರೋಧ ಪಕ್ಷವು ತಪ್ಪು ಮಾಡಿದೆ ಮತ್ತು ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂಪುಟ ಸಭೆಯಲ್ಲಿ ಮಾತನಾಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿ, ವಿರೋಧ ಪಕ್ಷಗಳು ಪರಿಣಾಮಗಳನ್ನು ಎದುರಿಸಬೇಕು ಮತ್ತು ಮಹಿಳೆಯರಿಗೆ ಉತ್ತರಿಸಬೇಕು ಎಂದು ಹೇಳಿದ್ದಾರೆ.
Ballary parachute training: ಯೋಧರ ಪ್ಯಾರಾಚೂಟ್ ತರಬೇತಿ ಅವಧಿಯಲ್ಲಿ ದುರಂತವೊಂದು ಸಂಭವಿಸಿದ್ದು, 50 ಅಡಿ ಮೇಲಿನಿಂದ ಜಿಗಿದ ಇಬ್ಬರು ಯೋಧರ ಕಾಲು ಮುರಿದಿದೆ ಎಂದು ವರದಿಯಾಗಿದೆ. ಬಳ್ಳಾರಿ ಹೊರವಲಯದ ಪೀಡಿಹಳ್ಳಿ ಪ್ಯಾರಾಚೂಟ್ ತರಬೇತಿ ನಡೆಯುತ್ತಿತ್ತು. ಬಳ್ಳಾರಿಯ ಐಟಿಐ ಕಾಲೇಜು ಮೈದಾನಕ್ಕೆ ಬಂದಿಳಿದ ಸೇನಾ ಹೆಲಿಕಾಪ್ಟರ್ ಮೂಲಕ ಚಿನ್ನರಾಜ್ ಅವರನ್ನು ಬೆಂಗಳೂರಿಗೆ ಕರೆದೊಯ್ಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.