ಸರ್ವಪಕ್ಷ ಸಭೆಯಲ್ಲಿ ಸರ್ಕಾರ ನೀಡಿದ ಭರವಸೆಯೇನು?
ಸಂಸತ್ತಿನಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಇಂದು ಮಧ್ಯ ಪ್ರಾಚ್ಯದ ಕುರಿತು ಚರ್ಚೆ ನಡೆಸಲಾಗಿದೆ. ಭಾರತದಲ್ಲಿ ಸದ್ಯಕ್ಕೆ ಇಂಧನದ ಕೊರತೆ ಇಲ್ಲ. ಇಂಧನ ಸಾಗಣೆ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರ ಬುಧವಾರ ರಾಜಕೀಯ ಪಕ್ಷಗಳಿಗೆ ಭರವಸೆ ನೀಡಿದೆ.
ಇರಾನ್ನ ಸುಮಾರು ಶೇ. 90 ರಷ್ಟು ಕಚ್ಚಾ ತೈಲ ಸಾಗಣೆ ನಡೆಯುವ ನಿರ್ಣಾಯಕ ತೈಲ ರಫ್ತು ಕೇಂದ್ರವಾದ ಇರಾನ್ನ ಖಾರ್ಗ್ ದ್ವೀಪವನ್ನು ಅಮೆರಿಕ ವಶಪಡಿಸಿಕೊಳ್ಳಲು ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ. ಕದನ ವಿರಾಮದ ಮಾತುಕತೆ ಸಂದರ್ಭದಲ್ಲಿಯೇ ಈ ವರದಿ ಹೊರಬಿದ್ದಿದೆ.
All-party meeting: ಫೆಬ್ರವರಿ 28 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯ ನಂತರ ಪ್ರಾರಂಭವಾದ ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಸರ್ಕಾರ ಇಂದು ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ. ವರದಿಗಳ ಪ್ರಕಾರ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ
ಕೆಲವು ದಿನಗಳಿಂದ ಭಾರೀ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿಂದು ಮತ್ತೆ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್ನ ಒಂದು ಗ್ರಾಂ ಚಿನ್ನದ ದರದಲ್ಲಿ 345 ರೂ. ಏರಿಕೆಯಾಗಿ 13,445 ರೂ. ಇದ್ದರೆ, 24 ಕ್ಯಾರಟ್ನ ಒಂದು ಗ್ರಾಂ ಚಿನ್ನದರದಲ್ಲಿ 376 ರೂ. ಏರಿಕೆ ಕಂಡು ಬಂದಿದೆ.
Most polluted city in World : ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿ ಬಿಡುಗಡೆಯಾಗಿದ್ದು, ಭಾರತದ ಒಂದು ನಗರ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಅಂದಹಾಗೆ ಇದು ದೆಹಲಿಯಲ್ಲ. ದೆಹಲಿಯನ್ನೇ ಮೀರಿಸುವ ಇನ್ನೊಂದು ನಗರ ಅಗ್ರ ಸ್ಥಾನದಲ್ಲಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ನ ಹೊರವಲಯದಲ್ಲಿರುವ ಲೋನಿ ವಿಶ್ವದಲ್ಲೇ ಅತ್ಯಂತ ಕಲಷಿತ ನಗರ ಎಂಬ ಅಪಖ್ಯಾತಿಗೆ ಒಳಗಾಗಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು. ಈ ವೇಳೆ ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿ ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಕುರಿತು ಚರ್ಚೆ ನಡೆಸಿದ್ದಾರೆ.
13 ವರ್ಷಗಳಿಂದ ಕೋಮಾದಲ್ಲಿದ್ದು ಸುಪ್ರೀಂ ಕೋರ್ಟ್ನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್ ರಾಣಾ ಇಂದು ನಿಧನರಾಗಿದ್ದಾರೆ. ಮಾರ್ಚ್ 14 ರಂದು ಆಸ್ಪತ್ರೆಗೆ ದಾಖಲಾದ ನಂತರ, ಮಾರ್ಚ್ 16 ರಂದು ದಯಾಮರಣ ಪ್ರಕ್ರಿಯೆಯು ಪ್ರಾರಂಭಿಸಲಾಗಿತ್ತು. 2013ರಲ್ಲಿ ನಾಲ್ಕನೇ ಮಹಡಿಯ ಬಾಲ್ಕನಿಯಿಂದ ಆಕಸ್ಮಿಕವಾಗಿ ಬಿದ್ದು ತಲೆಗೆ ತೀವ್ರ ಪೆಟ್ಟು ಮಾಡಿಕೊಂಡಿದ್ದ ಹರೀಶ್ ರಾಣಾ ಅವರು ಅಂದಿನಿಂದ ಕೋಮಾದಲ್ಲಿದ್ದರು. ಮಗನನ್ನು ಅಂದಿನಿಂದಲೂ ಪೋಷಕರು ನೋಡಿಕೊಂಡಿದ್ದರು.
ಮಹಾರಾಷ್ಟ್ರದ ಪಾಲ್ಘರ್ನ ಒಂಬತ್ತು ವರ್ಷದ ಬಾಲಕಿ ಮುಂಬೈನ ಆಸ್ಪತ್ರೆಯಲ್ಲಿ ರೇಬೀಸ್ಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾಳೆ. ಮೃತಳನ್ನು ನಲಸೋಪರಾ ಪಶ್ಚಿಮದಲ್ಲಿರುವ 'ಸುಬೋಧ್ ಸಾಗರ್' ವಸತಿ ಸೊಸೈಟಿಯ ನಿವಾಸಿ ಕಾಶಿಶ್ ಸಹಾನಿ ಎಂದು ಗುರುತಿಸಲಾಗಿದೆ. ನಾಯಿ ಕಚ್ಚಿದ ಬಳಿಕ ಆಕೆಗೆ ಇಂಜೆಕ್ಷನ್ ಹಾಕಿಸಲು ಬಾಲಕಿ ಭಯಪಟ್ಟಿದ್ದಳು.
ಕೈಗಾರಿಕಾ ವಲಯದ ಬಗ್ಗೆ ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರ ತೋರುತ್ತಿರುವ 'ನಿರ್ಲಕ್ಷ್ಯ'ವನ್ನು ಟೀಕಿಸಿದ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು, ಸದ್ಯದ ಪರಿಸ್ಥಿತಿಯನ್ನು ನೋಡಿದರೆ 'ಕರ್ನಾಟಕವನ್ನು ದೇವರೇ ಕಾಪಾಡಬೇಕು" ಎಂದು ರಾಜ್ಯಸಭೆಯಲ್ಲಿ ಕಿಡಿ ಕಾರಿದ್ದಾರೆ. ರಾಜ್ಯಸಭೆಯಲ್ಲಿ ವಿನಿಯೋಗ ಮಸೂದೆಯ ಮೇಲಿನ ಚರ್ಚೆಯಲ್ಲಿ ಅವರು ಮಾತನಾಡಿದರು.
ಇರಾನ್ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಅಮೆರಿಕದೊಂದಿಗೆ ಮಾತುಕತೆ ನಡೆಸಿ ಒಪ್ಪಂದಕ್ಕೆ ಬರಲು ಒಪ್ಪಿಕೊಂಡಿದ್ದಾರೆ. ಇದು ನಡೆಯುತ್ತಿರುವ ಹಗೆತನದ ನಡುವೆ ಸಂಭಾವ್ಯ ರಾಜತಾಂತ್ರಿಕ ಆರಂಭವನ್ನು ಸೂಚಿಸುತ್ತದೆ ಎಂದು ಕೆಲ ಇಸ್ರೇಲ್ ಮಾಧ್ಯಮಗಳು ತಿಳಿಸಿವೆ.
ಇರಾನ್ ವಿರುದ್ಧ ಯುದ್ಧ ಆರಂಭಿಸುವಂತೆ ಅಮೆರಿಕವನ್ನು ಒತ್ತಾಯಿಸಿದವರು ತಮ್ಮ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಎಂದು ಹೇಳುವ ಮೂಲಕ ಟ್ರಂಪ್ ಹೊಸ ಬಾಂಬ್ ಸಿಡಿಸಿದ್ದಾರೆ. ಟ್ರಂಪ್ ಮಾಧ್ಯಮಗಳಿಗೆ ತಿಳಿಸುತ್ತಾ, ಟೆಹ್ರಾನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ಆರಂಭಿಸುವಂತೆ ಸೂಚಿಸಿದ ತಮ್ಮ ತಂಡದಲ್ಲಿನ ಮೊದಲ ವ್ಯಕ್ತಿ ಹೆಗ್ಸೆತ್ ಎಂದು ಹೇಳಿದರು.
Tamil Nadu Assembly Election: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎನ್ಡಿಎ ತನ್ನ ಸೀಟು ಹಂಚಿಕೆ ವ್ಯವಸ್ಥೆಯನ್ನು ಅಂತಿಮಗೊಳಿಸಿದ್ದು, ಒಟ್ಟು 234 ಕ್ಷೇತ್ರಗಳಲ್ಲಿ ಎಐಎಡಿಎಂಕೆ 178 ಸ್ಥಾನಗಳಲ್ಲಿ ಮತ್ತು ಬಿಜೆಪಿ 27 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಮೂಲಗಳ ಪ್ರಕಾರ, ಇತರ ಮೈತ್ರಿ ಪಾಲುದಾರರಿಗೆ ಸಹ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ.
Women's Reservation Act: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸುತ್ತಿದ್ದು, 2011 ರ ಜನಗಣತಿಯನ್ನು ಆಧರಿಸಿ ಹೊಸ ಶಾಸನವನ್ನು ಜಾರಿಗೆ ತರಲು ಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Narendra Modi Speech: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಹಾರ್ಮೊಜ್ ಜಲಸಂಧಿಯ ಬಿಕ್ಕಟ್ಟಿನ ನಡುವೆ ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಸಭೆಯಲ್ಲಿ ಈ ಕುರಿತು ಮಾತನಾಡಿದ್ದಾರೆ. ಭಾರತವು ಇಂಧನ-ಸುರಕ್ಷಿತವಾಗಿದೆ ಎಂದು ಅವರು ಹೇಳಿದ್ದಾರೆ. ನಾವು 27 ದೇಶಗಳಿಂದ ಆಮದು ಮಾಡಿಕೊಳ್ಳುತ್ತಿದ್ದೆವು, ಆದರೆ ಇಂದು ನಾವು 41 ದೇಶಗಳಿಂದ ಶಕ್ತಿಯನ್ನು ಆಮದು ಮಾಡಿಕೊಳ್ಳುತ್ತೇವೆ ಎಂದು ಮೋದಿ ತಿಳಿಸಿದರು.
ದೇಶಕ್ಕೆ ಬಲಿದಾನ ಮಾಡಿದವರ ಬಗ್ಗೆ ಹಲವಾರು ಚಿತ್ರಗಳು ಈಗಾಗಲೇ ತೆರೆ ಮೇಲೆ ಬಂದಿದೆ. ಅವುಗಳ ಸಾಲಿನಲ್ಲಿ ಇದೀಗ ಧರುಂಧರ್ ಮತ್ತು ಧುರಂಧರ್: ದಿ ರಿವೆಂಜ್ ಸಿನಿಮಾವೂ ಸೇರಿದೆ. ಭಾರತೀಯನೊಬ್ಬ ಶತ್ರು ದೇಶದಲ್ಲಿಯೇ ಬೇಹುಗಾರಿಕೆ ನಡೆಸಿ ದೇಶಕ್ಕಾಗಿ ತನ್ನ ಜೀವನವನ್ನೇ ತ್ಯಾಗ ಮಾಡಿದ ಕಥಾ ಹಂದರವನ್ನು ಚಿತ್ರ ಒಳಗೊಂಡಿದೆ.
ಕೆನಡಾದ ಮಾಂಟ್ರಿಯಲ್ನಿಂದ ಬರುತ್ತಿದ್ದ ವಿಮಾನವು ಟ್ರಕ್ಗೆ ಡಿಕ್ಕಿ ಹೊಡೆದಿದೆ. ವಿಮಾನ ನಿಲ್ದಾಣದ ರನ್ವೇ 4 ರಲ್ಲಿ ಒಳಬರುವ ಏರ್ ಕೆನಡಾ ಎಕ್ಸ್ಪ್ರೆಸ್ CRJ-900 ವಿಮಾನ ಮತ್ತು ಅಗ್ನಿಶಾಮಕ ಎಂಜಿನ್ ಡಿಕ್ಕಿ ಹೊಡೆದ ನಂತರ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಫ್ಲೈಟ್-ಟ್ರ್ಯಾಕಿಂಗ್ ವೆಬ್ಸೈಟ್ ವರದಿ ಮಾಡಿದೆ.
ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಉಭಯ ದೇಶಗಳು ದಾಳಿ ನಡೆಸುತ್ತಿವೆ. ಇರಾನ್ ಭಾನುವಾರ ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ತನ್ನ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಕಳುಹಿಸಿದ್ದು, ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಅವರ ಯುದ್ಧ ವಿರೋಧಿ ಹೇಳಿಕೆಗಳನ್ನು ಬರೆಯಲಾಗಿದೆ.
Pakistan Hikes High-Octane Fuel Price: ಮಧ್ಯ ಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಜಗತ್ತಿನಾದ್ಯಂತ ಇಂಧನ ಕೊರತೆ ಉಂಟಾಗಿದ್ದು, ಪಾಕಿಸ್ತಾನದಲ್ಲಿ ಏಕಾಏಕಿ ಪೆಟ್ರೋಲ್ ಬೆಲೆ ಹೆಚ್ಚಾಗಿದೆ. ವರದಿಯ ಪ್ರಕಾರ, ಹಾರ್ಮೊಜ್ ಜಲಸಂಧಿಯ ಸಂಘರ್ಷದ ಬಳಿಕ ಇಂಧನ ಬೆಲೆಗಳು ಶೇಕಡಾ 200 ರಷ್ಟು ಹೆಚ್ಚಾಗಿದೆ. ಪಾಕಿಸ್ತಾನ ಭಾನುವಾರ ಹೆಚ್ಚಿನ ಆಕ್ಟೇನ್ ಇಂಧನದ ಬೆಲೆಯನ್ನು ತೀವ್ರವಾಗಿ ಹೆಚ್ಚಿಸಲು ನಿರ್ಧರಿಸಿದೆ.
Hormuz: ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ನಡುವೆ ಇರಾನ್ ಇದೀಗ ಹೊಸ ನಿಯಮವನ್ನು ಜಾರಿಗೆ ತಂದಿದೆ. ಹಾರ್ಮೊಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಸುಂಕ ಅಥವಾ ಸಾರಿಗೆ ಶುಲ್ಕ ವಿಧಿಸಲು ಇರಾನ್ ಮುಂದಾಗಿದೆ ಎಂದು ತಿಳಿದು ಬಂದಿದೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಇನ್ನೂ ಶಮನವಾಗಿಲ್ಲ. ಈ ನಡುವೆ ಪಾಕಿಸ್ತಾನ ಮತ್ತೆ ತನ್ನ ಹಳೇ ಚಾಳಿಯನ್ನು ಮುಂದುವರಿಸಿದ್ದು, ಭಾರತಕ್ಕೆ ಬೆದರಿಕೆ ಹಾಕಿದೆ. ಪಾಕಿಸ್ತಾನದ ಮಾಜಿ ಹೈಕಮಿಷನರ್ ಅಬ್ದುಲ್ ಬಾಸಿತ್ ಅಮೆರಿಕಾ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಭಾರತದ ಮೇಲೆ ದಾಳಿ ನಡೆಸುತ್ತೇವೆ ಎಂದು ಅವರು ಹೇಳಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ (RBI) ಎಲ್ಲಾ ಡಿಜಿಟಲ್ ವಹಿವಾಟುಗಳಿಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿತರಲಿದೆ. ಡಿಜಿಟಲ್ ಪಾವತಿ ಪರಿಸರ ವ್ಯವಸ್ಥೆಯು ಏಪ್ರಿಲ್ 1, 2026 ರಿಂದ ಪ್ರಮುಖ ಪರಿವರ್ತನೆಗೆ ಸಜ್ಜಾಗಿದೆ. ಎಲ್ಲಾ ಡಿಜಿಟಲ್ ಪಾವತಿಗಳಿಗೆ ಎರಡು ಅಂಶಗಳ ದೃಢೀಕರಣ ಕಡ್ಡಾಯವಾಗಿದೆ.
ಅನಿಲ್ ಕುಂಬ್ಳೆ ಸರ್ಕಲ್ನಲ್ಲಿ ಐಷಾರಾಮಿ ಲಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾರು ಡ್ರಿಫ್ಟಿಂಗ್ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಅನುಕಂಪದ ಅಲೆಯಲ್ಲಿಉಪಚುನಾವಣೆ ಗೆಲ್ಲಲು ಆಡಳಿತಾರೂಢ ಕಾಂಗ್ರೆಸ್ ಕುಟುಂಬ ರಾಜಕಾರಣಕ್ಕೆ ಮತ್ತೆ ಮಣೆ ಹಾಕಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಹಾಗೂ ಬಾಗಲಕೋಟೆಯಲ್ಲಿ ಎಚ್.ವೈ.ಮೇಟಿ ಕಿರಿಯ ಪುತ್ರ ಉಮೇಶ್ ಮೇಟಿಗೆ ಪಕ್ಷದ ವತಿಯಿಂದ ಇದೀಗ ಅಧಿಕೃತವಾಗಿ ಟಿಕೆಟ್ ಘೋಷಣೆಯಾಗಿದೆ.