ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Vishakha Bhat Heggar

[email protected]

ಉತ್ತರ ಕನ್ನಡ ಜಿಲ್ಲೆಯ ಶಿರಸಿಯವರಾದ ಇವರು, ಪತ್ರಿಕೋದ್ಯಮದಲ್ಲಿ ಪದವಿಯನ್ನು ಪೂರೈಸಿದ್ದಾರೆ. ವಿಶ್ವವಾಣಿ ಟಿವಿಯ ವೆಬ್‌ಸೈಟ್‌ ಮೂಲಕ ವೃತ್ತಿ ಬದುಕನ್ನು ಆರಂಭಿಸಿ ಕೆಲವೇ ತಿಂಗಳುಗಳು ಕಳೆದಿವೆ. ಸದ್ಯ ಉಪ ಸಂಪಾದಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜಕೀಯ, ಕ್ರೈಂ ಹಾಗೂ ಅಂತಾರಾಷ್ಟ್ರೀಯ ಸಂಬಂಧ ನೆಚ್ಚಿನ ವಿಷಯ.

Articles
ಮದ್ಯ ಸೇವಿಸಿದ್ರಾ ಏರ್‌ ಇಂಡಿಯಾ ಪೈಲಟ್‌? ದಿಢೀರ್​ 300 ಅಡಿ ಆಳಕ್ಕೆ ಕುಸಿದ ಫುಕೆಟ್-ದೆಹಲಿ ವಿಮಾನ

ಮದ್ಯ ಸೇವಿಸಿದ್ರಾ ಏರ್‌ ಇಂಡಿಯಾ ಪೈಲಟ್‌?

ಆಗಸ್ಟ್ 4ರಂದು ಫುಕೆಟ್‌ನಿಂದ ದೆಹಲಿಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನ AI2379 ತೀವ್ರ ಪ್ರಕ್ಷುಬ್ಧತೆಯನ್ನು ಎದುರಿಸಿತ್ತು. ಗಾಳಿಯ ಮಧ್ಯದಲ್ಲಿ ವಿಮಾನ ಇದ್ದಕ್ಕಿದ್ದಂತೆ ಸುಮಾರು 300 ಅಡಿ ಕೆಳಗೆ ದಿಢೀರ್​​ ಇಳಿದಿತ್ತು. ಈ ಘಟನೆಯಿಂದ ಪ್ರಯಾಣಿಕರು ಮತ್ತು ಸಿಬ್ಬಂದಿ ಆತಂಕಗೊಂಡಿದ್ದು, ಅಲ್ಲದೇ ಅವರು ಆರೋಗ್ಯ ಸಮಸ್ಯೆಗೂ ತುತ್ತಾಗಿದ್ದರು.

ಸಂಗೀತ ನಿರ್ದೇಶಕ ಗುರು ಕಿರಣ್‌ಗೆ ಮಾತೃ ವಿಯೋಗ; ಭಾವುಕ ಪೋಸ್ಟ್‌ ಹಂಚಿಕೊಂಡ ವೈರಲ್‌

ಸಂಗೀತ ನಿರ್ದೇಶಕ ಗುರು ಕಿರಣ್‌ಗೆ ಮಾತೃ ವಿಯೋಗ

Guru Kiran's mother passes away: ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ಗುರು ಕಿರಣ್ ಎ. ರತ್ನಕಾಂತಿ ಶೆಟ್ಟಿ ಅವರ ತಾಯಿ ನಿನ್ನೆ ನಿಧನರಾಗಿದ್ದಾರೆ. ತಾಯಿಯ ಅಗಲಿಕೆಯಿಂದ ಕಂಗಾಲಾಗಿರುವ ಗುರು ಕಿರಣ್ ಅವರು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡು ಭಾವುಕರಾಗಿದ್ದಾರೆ. “ತುಂಬಿದ ಹೃದಯದಿಂದ ನಮ್ಮ ಪ್ರೀತಿಯ ತಾಯಿ ಶ್ರೀಮತಿ ಎ. ರತ್ನಕಾಂತಿ ಶೆಟ್ಟಿ ಅವರ ನಿಧನದ ಹೃದಯವಿದ್ರಾವಕ ಸುದ್ದಿಯನ್ನ ಹಂಚಿಕೊಳ್ಳುತ್ತಿದ್ದೇನೆ.

ಇಸ್ಲಾಮಿಕ್‌ ನ್ಯಾಟೋ ಸ್ಥಾಪನೆಗೆ ಪಾಕ್‌, ಟರ್ಕಿ, ಸೌದಿ ಅಡಿಪಾಯ ; ಭಾರತದ ಮೇಲಾಗುವ ಪರಿಣಾಮವೇನು?

ಇಸ್ಲಾಮಿಕ್‌ ನ್ಯಾಟೋ ಸ್ಥಾಪನೆಗೆ ಮುಂದಾದ ಪಾಕ್‌, ಟರ್ಕಿ, ಸೌದಿ

ತೈಲ ಹಾಗೂ ಖನಿಜ ಭರಿತ ಸೌದಿ ಅರೇಬಿಯಾ, ಅಣ್ವಸ್ತ್ರ ಶಕ್ತಿ ಹೊಂದಿರುವ ಪಾಕಿಸ್ತಾನ ಹಾಗೂ ರಕ್ಷಣಾ ಉದ್ಯಮದಲ್ಲಿ ಬೆಳೆಯುತ್ತಿರುವ ಟರ್ಕಿ ನಡುವೆ ರಕ್ಷಣಾ ಒಪ್ಪಂದ ಏರ್ಪಟ್ಟಿದೆ. ಇಸ್ಲಾಮಿಕ್‌ ನ್ಯಾಟೊ ಕುರಿತು ಜೋರಾಗಿ ಚರ್ಚೆ ನಡೆಯುತ್ತಿರುವಾಗಲೇ ಈ ಒಪ್ಪಂದ ನಡೆದಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸೌದಿ ಯುವರಾಜ ಮೊಹಮ್ಮದ್‌ ಬಿನ್‌ ಸಲ್ಮಾನ್‌, ಟರ್ಕಿ ಅಧ್ಯಕ್ಷ ರೆಸೆಪ್‌ ತ್ಯಯಿಪ್‌ ಎರ್ಡೋಗನ್‌ ಮತ್ತು ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ ನಡುವಿನ ಸಭೆಯಲ್ಲಿಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಬ್ರಾಹ್ಮಣರ ದೊಡ್ಡ ಬಂಡವಾಳ ಜ್ಞಾನ ಮತ್ತು ವಿಚಾರಶಕ್ತಿ: ವಿಶ್ವೇಶ್ವರ ಭಟ್

ಬ್ರಾಹ್ಮಣರ ದೊಡ್ಡ ಬಂಡವಾಳ ಜ್ಞಾನ ಮತ್ತು ವಿಚಾರಶಕ್ತಿ: ವಿಶ್ವೇಶ್ವರ ಭಟ್

ಬ್ರಾಹ್ಮಣ ಸಮುದಾಯದ ದೊಡ್ಡ ಬಂಡವಾಳ ಹಣವಲ್ಲ, ಬದಲಾಗಿ ಜ್ಞಾನ, ವಿಚಾರಶಕ್ತಿ, ಪ್ರಾಮಾಣಿಕತೆ ಮತ್ತು ಹೊಸ ಆಲೋಚನೆಗಳನ್ನು ರೂಪಿಸುವ ಸಾಮರ್ಥ್ಯ ಎಂದು ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ತಿಳಿಸಿದರು. ವಿಪ್ರ ವ್ಯಾಪಾರ ವೇದಿಕೆ ವತಿಯಿಂದ ಶನಿವಾರ ಶ್ರೀ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಆಯೋಜಿಸಿದ್ದ ‘ವಿಪ್ರ ಸಮ್ಮಿಲನ-2026’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದಾಂಪತ್ಯ ಕಲಹವನ್ನು ಕ್ರಿಮಿನಲ್ ಕ್ರೌರ್ಯವೆಂದು ಪರಿಗಣಿಸಲಾಗದು; ಕರ್ನಾಟಕ ಹೈಕೋರ್ಟ್

ದಾಂಪತ್ಯ ಕಲಹವನ್ನು ಕ್ರಿಮಿನಲ್ ಕ್ರೌರ್ಯವೆಂದು ಪರಿಗಣಿಸಲಾಗದು;ಹೈಕೋರ್ಟ್

ವೈವಾಹಿಕ ಹೊಂದಾಣಿಕೆಯ ಕೊರತೆ, ದಾಂಪತ್ಯ ಕಲಹ ಅಥವಾ ವಿವಾಹ ಸಂಬಂಧದ ಅನೈಕ್ಯತೆಯನ್ನು ಕ್ರೌರ್ಯದ ಆರೋಪದಡಿ ಕ್ರಿಮಿನಲ್ ಪ್ರಕರಣವಾಗಿ ಪರಿವರ್ತಿಸಲು ಕ್ರಿಮಿನಲ್ ಕಾನೂನನ್ನು ಬಳಸಲು ಅವಕಾಶ ನೀಡಲಾಗುವುದಿಲ್ಲ ಎಂದು ಕರ್ನಾಟಕ ಹೈ ಕೋರ್ಟ್‌ ಅಭಿಪ್ರಾಯಪಟ್ಟಿದೆ. ಅರ್ಜಿದಾರರು ಹಾಗೂ ದೂರುದಾರ ದಂಪತಿ ಇಬ್ಬರೂ ಪೊಲೀಸ್ ಅಧಿಕಾರಿಗಳಾಗಿದ್ದು, 2023ರಲ್ಲಿ ವಿವಾಹವಾಗಿದ್ದರು. ವಿವಾಹವಾದ ನಾಲ್ಕು ತಿಂಗಳೊಳಗೇ ಪತ್ನಿ ದೂರು ದಾಖಲಿಸಿ, ತಮ್ಮ ಮಧ್ಯೆ ಹೊಂದಾಣಿಕೆ ಬರುತ್ತಿಲ್ಲ ಎಂದು ಆರೋಪಿಸಿದ್ದರು.

ಉತ್ತರ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಉತ್ತರ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಪ್ರಧಾನಿ ಮೋದಿ ವಿಡಿಯೋಗೆ "I'm a criminal", "Millions of lies", ಹಾಡನ್ನು ಬಳಕೆ ಮಾಡಿದ ಬಿಜೆಪಿ; ಭಾರಿ ಟೀಕೆ

ಮೋದಿ ವಿಡಿಯೋಗೆ I'm a criminal ಹಾಡನ್ನು ಬಳಕೆ ಮಾಡಿದ ಬಿಜೆಪಿ!

Narendra Modi: ಭಾರತೀಯ ಜನತಾ ಪಕ್ಷದ (BJP) ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡ ಪ್ರಚಾರದ ವೀಡಿಯೊವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಬಳಸಲಾದ ಹಿನ್ನೆಲೆ ಹಾಡು ಇದೀಗ ಬಾರೀ ಸದ್ದು ಮಾಡುತ್ತಿದೆ. ಪ್ರಧಾನಿ ಮೋದಿ ನಡೆದುಕೊಂಡು ಹೋಗುವುದು ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸುವ ದೃಶ್ಯಗಳನ್ನು ಒಳಗೊಂಡಿರುವ ಈ ವಿಡಿಯೊಗೆ ಅಮೆರಿಕದ ರ‍್ಯಾಪರ್ ಎನ್‌ಎಫ್ (NF) ಅವರ ದಿ ಸರ್ಚ್‌ ಹಾಡನ್ನು ಬಳಸಿಕೊಳ್ಳಾಗಿದೆ.

ರಾಹುಲ್ ಗಾಂಧಿಯ ಫೇವರೆಟ್ ಬಿಜೆಪಿ ನಾಯಕ ಯಾರು ಗೊತ್ತಾ?

ರಾಹುಲ್ ಗಾಂಧಿಯ ಫೇವರೆಟ್ ಬಿಜೆಪಿ ನಾಯಕ ಯಾರು ಗೊತ್ತಾ?

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಿಜೆಯಲ್ಲಿ ತನ್ನ ನೆಚ್ಚಿನ ನಾಯಕ ಯಾರು ಎಂದು ಹೇಳಿದ್ದಾರೆ. ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ತಮ್ಮ ನೆಚ್ಚಿನ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜಕಾರಣಿ ಎಂದು ಹೆಸರಿಸಿದ್ದಾರೆ.

ವಿಧಾನ ಪರಿಷತ್‌ ಸ್ಪೀಕರ್‌ ಸ್ಥಾನಕ್ಕೆ ಬಸವರಾಜ ಹೊರಟ್ಟಿ ದಿಢೀರ್‌ ರಾಜೀನಾಮೆ; ಸಿಎಂ ಭೇಟಿ ವೇಳೆ ಆಗಿದ್ದೇನು?

ವಿಧಾನ ಪರಿಷತ್‌ ಸ್ಪೀಕರ್‌ ಸ್ಥಾನಕ್ಕೆ ಬಸವರಾಜ ಹೊರಟ್ಟಿ ದಿಢೀರ್‌ ರಾಜೀನಾಮೆ

Basavaraj Horatti: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಇಂದು ರಾಜೀನಾಮೆ ನೀಡಿದ್ದಾರೆ. ಕರ್ನಾಟಕ ವಿಧಾನ ಪರಿಷತ್‌ನ ಸಭಾಪತಿ ಸ್ಥಾನಕ್ಕೆ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಅವರು ಸಹಿ ಹಾಕಿದ್ದಾರೆ.

Gold Price Today On August 7th 2026: ಚಿನ್ನದ ದರದಲ್ಲಿಂದು ಕೊಂಚ ಏರಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿಂದು ಕೊಂಚ ಏರಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿ ಇಂದು ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 15 ರೂ. ಏರಿಕೆಯಾಗಿ 13,740 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 16 ರೂ. ಏರಿಕೆಯಾಗಿ 14,989 ರೂ. ಇದೆ.

‘ಒತ್ತಡದ ಬದುಕಿನಲ್ಲಿ ಮಾನಸಿಕ ಆರೋಗ್ಯಕ್ಕೂ ಆದ್ಯತೆ ನೀಡಿ’ : ಮಾನ್ವಿತಾ ಕಾಮತ್

ಒತ್ತಡದ ಬದುಕಿನಲ್ಲಿ ಮಾನಸಿಕ ಆರೋಗ್ಯಕ್ಕೂ ಆದ್ಯತೆ ನೀಡಿ; ಮಾನ್ವಿತಾ ಕಾಮತ್‌

ಆರೋಗ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವೈದ್ಯರು ಹಾಗೂ ಆರೋಗ್ಯ ವಲಯದ ಸಾಧಕರನ್ನು ಗೌರವಿಸುವ ಉದ್ದೇಶದಿಂದ ವಿಶ್ವವಾಣಿ ಟಿವಿ ಆಯೋಜಿಸಿದ್ದ ‘ಪ್ರೈಡ್ ಆಫ್ ಹೆಲ್ತ್‌ಕೇರ್ ಅವಾರ್ಡ್’ಕಾರ್ಯಕ್ರಮವು ಬುಧವಾರ (ಆ. 5) ಸಂಜೆ ಬೆಂಗಳೂರಿನ ರಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್‌ ಆಗಮಿಸಿದ್ದರು.

ನಾಡಿನ ಆರೋಗ್ಯ ಸಾಧಕರಿಗೆ ವಿಶ್ವವಾಣಿ ಟಿವಿ ಗೌರವ ಸಚಿವ ಯು ಟಿ ಖಾದರ್‌ ಶ್ಲಾಘನೆ

ವೈದ್ಯರು ಕೇವಲ ಸಂಬಳಕ್ಕಾಗಿ ಕೆಲಸ ಮಾಡಲ್ಲ, ಅದೊಂದು ಸೇವೆ; ಯು.ಟಿ ಖಾದರ್‌

ಆರೋಗ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವೈದ್ಯರು ಹಾಗೂ ಆರೋಗ್ಯ ವಲಯದ ಸಾಧಕರನ್ನು ಗೌರವಿಸುವ ಉದ್ದೇಶದಿಂದ ವಿಶ್ವವಾಣಿ ಟಿವಿ ಆಯೋಜಿಸಿದ್ದ ‘ಪ್ರೈಡ್ ಆಫ್ ಹೆಲ್ತ್‌ಕೇರ್ ಅವಾರ್ಡ್’ಕಾರ್ಯಕ್ರಮವು ಬುಧವಾರ (ಆ. 5) ಸಂಜೆ ಬೆಂಗಳೂರಿನ ರಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆಗೈದ 17 ಮಂದಿ ಸಾಧಕರನ್ನು ಸನ್ಮಾನಿಸಲಾಗಿದೆ.

ಆರೋಗ್ಯ ಕ್ಷೇತ್ರದ ಸಾಧಕರಿಗೆ ಗೌರವ; ವಿಶ್ವವಾಣಿ ಟಿವಿಯ ‘ಪ್ರೈಡ್ ಆಫ್ ಹೆಲ್ತ್‌ಕೇರ್ʼ ಅವಾರ್ಡ್ ಪ್ರದಾನ

ವಿಶ್ವವಾಣಿ ಟಿವಿಯ ‘ಪ್ರೈಡ್ ಆಫ್ ಹೆಲ್ತ್‌ಕೇರ್ʼ ಅವಾರ್ಡ್ ಪ್ರದಾನ

ಆರೋಗ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವೈದ್ಯರು ಹಾಗೂ ಆರೋಗ್ಯ ವಲಯದ ಸಾಧಕರನ್ನು ಗೌರವಿಸುವ ಉದ್ದೇಶದಿಂದ ವಿಶ್ವವಾಣಿ ಟಿವಿ ಆಯೋಜಿಸಿದ್ದ ‘ಪ್ರೈಡ್ ಆಫ್ ಹೆಲ್ತ್‌ಕೇರ್ ಅವಾರ್ಡ್’ಕಾರ್ಯಕ್ರಮವು ಬುಧವಾರ (ಆ. 6) ಸಂಜೆ ಬೆಂಗಳೂರಿನ ರಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ಯಶಸ್ವಿಯಾಗಿ ನಡೆಯಿತು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಉಮ್ಮರ್ ಫಾರೂಕ್  ಬಂಧಿಸಿದ NIA

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಯನ್ನು ಬಂಧಿಸಿದ NIA

Praveen Nettaru Murder: BJP ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಎಂ.ಆರ್.ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕೇರಳದ ಕೊಚ್ಚಿಯಲ್ಲಿ ಬಂಧಿಸಿದೆ. ಈ ಮೂಲಕ ಪ್ರಕರಣದಲ್ಲಿ ಎನ್‌ಐಎ ಬಂಧಿಸಿರುವ ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

Gold Price Today On August 5th 2026: ಚಿನ್ನದ ದರದಲ್ಲಿಂದು ಕೊಂಚ ಏರಿಕೆ; ಬೆಲೆ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿಂದು ಕೊಂಚ ಏರಿಕೆ; ಬೆಲೆ ಇಲ್ಲಿದೆ ನೋಡಿ

ಚಿನ್ನದ ದರದಲ್ಲಿ ಇಂದು ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 160ರೂ. ಏರಿಕೆಯಾಗಿ 13,360 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 175 ರೂ. ಇಳಿಕೆಯಾಗಿ 14,575 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,06,880 ರೂ. ಇದ್ದರೆ, 10 ಗ್ರಾಂಗೆ 1,33,600 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 13,36,000 ರೂ. ಪಾವತಿಸಬೇಕಾಗುತ್ತದೆ.

3 ದಿನಗಳಲ್ಲಿ ಕ್ರಮ ಕೈಗೊಳ್ಳಿ ಇಲ್ಲದಿದ್ದರೆ ಸೇಫ್ ಹಾರ್ಬರ್ ಕಳೆದುಕೊಳ್ಳಿ; ಮೆಟಾಗೆ ಕೇಂದ್ರದಿಂದ ಎಚ್ಚರಿಕೆ

ಮೆಟಾಗೆ ಖಡಕ್‌ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

ಪ್ರಧಾನಿ ನರೇಂದ್ರ ಮೋದಿಯವರ ಜುಲೈ 23 ರ ವೀಡಿಯೊವನ್ನು ತಾತ್ಕಾಲಿಕವಾಗಿ ತೆಗೆದುಹಾಕಿದ್ದರ ಹಿಂದೆ ಇರುವವರನ್ನು ಮೂರು ದಿನಗಳಲ್ಲಿ ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸಂಸದೀಯ ಸಮಿತಿಯು ಮೆಟಾಗೆ ಕಠಿಣ ಎಚ್ಚರಿಕೆ ನೀಡಿದೆ.

ಸುಬ್ಬಾರೆಡ್ಡಿಗೆ ತಪ್ಪಿದ ಸಚಿವ ಸ್ಥಾನ; ಚಿಕ್ಕಬಳ್ಳಾಪುರ ಬಂದ್‌ಗೆ ಕೈ ಕಾರ್ಯಕರ್ತರ ಕರೆ

ಚಿಕ್ಕಬಳ್ಳಾಪುರ ಬಂದ್‌ಗೆ ಕೈ ಕಾರ್ಯಕರ್ತರ ಕರೆ; ಕಾರಣವೇನು?

ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗಿ ಅಧೀಕಾರ ಸ್ವೀಕರಿಸಿದ ಬಳಿಕ ಬರೋಬ್ಬರಿ 2 ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದೆ. ಈ ಬಾರಿ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಕೈತಪ್ಪಿದ ವಿಚಾರವಾಗಿ ಆತಂಕರಿಕವಾಗಿ ಅಸಮಾಧಾನ ಬುಗಿಲೆದಿದ್ದು, 20 ಶಾಸಕರು ಈಗಾಗಲೇ ಸಚಿವ ಸ್ಥಾನ ಮಿಸ್‌ ಆಗಿರುವ ಹಿನ್ನಲೆ ನೇರವಾಗಿ ಪಕ್ಷದ ವಿರುದ್ಧ ಬೇಸರ ಹೊರಹಾಕಿದ್ದಾರೆ.

ಪ್ರಚೋದನಕಾರಿ ದ್ವೇಷ ಭಾಷಣ; ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗೆ ಜೈಲು ಶಿಕ್ಷೆ

ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗೆ ಜೈಲು ಶಿಕ್ಷೆ!

Riyaz Parangipete: 11 ವರ್ಷಗಳ ಹಳೆಯ ಪ್ರಚೋದನಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆಗೆ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದೆ.

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿಂದು ಭಾರಿ ಮಳೆ ಮುನ್ಸೂಚನೆ

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿಂದು ಭಾರಿ ಮಳೆ ಮುನ್ಸೂಚನೆ

Karnataka weather: ಆಗಸ್ಟ್‌ ತಿಂಗಳಿನಲ್ಲಿ ರಾಜ್ಯಾದ್ಯಂತ ಮಳೆಯಬ್ಬರ ಹೆಚ್ಚಿದ್ದು, ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ವಿಶೇಷವಾಗಿ ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ಸಚಿವರಿಗೆ ಜಿಲ್ಲಾವಾರು ಬರ ಪರಿಶೀಲನೆ ಜವಾಬ್ದಾರಿ ಹಂಚಿಕೆ;  ಯಾವ ಜಿಲ್ಲೆಗೆ ಯಾರು ಉಸ್ತುವಾರಿ? ಇಲ್ಲಿದೆ ಮಾಹಿತಿ

ಸಚಿವರಿಗೆ ಜಿಲ್ಲಾವಾರು ಬರ ಪರಿಶೀಲನೆ ಜವಾಬ್ದಾರಿ ಹಂಚಿಕೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಂಡುಬರುತ್ತಿರುವ ಅತಿವೃಷ್ಟಿ ಮತ್ತು ಅನಾವೃಷ್ಠಿಯಂತಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಸಿಎಂ ಡಿಕೆ ಶಿವಕುಮಾರ್‌ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಂಪುಟದ ನೂತನ ಸಚಿವರಿಗೆ ಇದೀಗ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.

ನಟಿ ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್  ಬಂಧನ

ನಟಿ ತ್ರಿಷಾ ಕುರಿತು ಅಸಭ್ಯ ಹೇಳಿಕೆ; ಉದಯನಿಧಿ ಸ್ಟಾಲಿನ್ ಬಂಧನ

Udhayanidhi Stalin Arrested: ನಟಿ ತ್ರಿಷಾ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ತಮಿಳುನಾಡು ಪೊಲೀಸರು ಮಂಗಳವಾರ ಬೆಳಿಗ್ಗೆ ಅವರ ಮನೆಯಲ್ಲಿಯೇ ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಸೋಮವಾರ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಆಯೋಜಿಸಲಾಗಿದ್ದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ವಿಜಯ್‌ ಹಾಗೂ ತ್ರಿಷಾ ಕುರಿತು ಅಸಭ್ಯವಾಗಿ ಮಾತನಾಡಿದ್ದರು ಎಂದು ಟಿವಿಕೆ ಕಾರ್ಯಕರ್ತರು ದೂರು ನೀಡಿದ್ದರು.

Gold Price Today On August 4th 2026: ಚಿನ್ನದ ದರದಲ್ಲಿಂದು ಕೊಂಚ ಇಳಿಕೆ;  ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ; ಬೆಲೆ ಇಲ್ಲಿದೆ

ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂ. ಇಳಿಕೆಯಾಗಿ 13,200 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 22 ರೂ. ಇಳಿಕೆಯಾಗಿ 14,400 ರೂ. ಇದೆ.

ಡಾಬರ್‌ಗೆ ಶಾಕ್‌ ನೀಡಿದ ಫೆಸ್ಸಿ; 100% ಪ್ಯೂರ್‌ ಲೇಬಲ್‌ ಇರುವ ಆಹಾರ ಮಾರಾಟ ನಿಷೇಧ

100% ಪ್ಯೂರ್‌ ಲೇಬಲ್‌ ಇರುವ ಆಹಾರ ಮಾರಾಟ ನಿಷೇಧ

FSSAI: ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ ಡಾಬರ್ ಇಂಡಿಯಾ 'ಶೇಕಡಾ 100' ಹಕ್ಕುಗಳನ್ನು ಹೊಂದಿರುವ ಹಲವಾರು ಆಹಾರ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಿದೆ. ಇಂತಹ ಲೇಬಲ್‌ಗಳು ಗ್ರಾಹಕರನ್ನು ದಾರಿ ತಪ್ಪಿಸಬಹುದು ಫೆಸ್ಸಿ ಅಭಿಪ್ರಾಯ ಪಟ್ಟಿದೆ.

ಸಚಿವ ಸಂಪುಟದಲ್ಲಿ ಮಹಿಳೆಯರಿಗೇಕಿಲ್ಲ ಸ್ಥಾನ? ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದೇನು?

ಸಚಿವ ಸಂಪುಟದಲ್ಲಿ ಮಹಿಳೆಯರಿಗೇಕಿಲ್ಲ ಸ್ಥಾನ? ಸಿಎಂ ಹೇಳಿದ್ದೇನು?

ಬುಧವಾರದಿಂದಲೇ ನೂತನ ಸಚಿವರುಗಳು ತಮಗೆ ಜವಾಬ್ದಾರಿ ವಹಿಸುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಬಗ್ಗೆ ಅಲ್ಲಿನ ಸ್ಥಳಗಳಿಗೆ ಹೋಗಿ, ಪರಿಶೀಲನೆ ಮಾಡಬೇಕು. ನಂತರ ಕಂದಾಯ ಸಚಿವರಿಗೆ ವರದಿ ಸಲ್ಲಿಸಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ದೇಶನ ನೀಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದರು.

Loading...