ಮೋದಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದ ಓಮನ್
PM Modi: ಪ್ರಧಾನಿ ನರೇಂದ್ರ ಮೋದಿ ಓಮನ್ ಪ್ರವಾಸದಲ್ಲಿದ್ದಾರೆ. ನಿನ್ನೆ ರಾತ್ರಿ ಒಮಾನ್ನ ರಕ್ಷಣಾ ವ್ಯವಹಾರಗಳ ಉಪ ಪ್ರಧಾನ ಮಂತ್ರಿ ಸಯ್ಯದ್ ಶಿಹಾಬ್ ಬಿನ್ ತಾರಿಕ್ ಅಲ್ ಸೈದ್ ಅವರು ಮಸ್ಕತ್ನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
vishakha@vishwavani.news
ಉತ್ತರ ಕನ್ನಡ ಜಿಲ್ಲೆಯ ಶಿರಸಿಯವರಾದ ಇವರು, ಪತ್ರಿಕೋದ್ಯಮದಲ್ಲಿ ಪದವಿಯನ್ನು ಪೂರೈಸಿದ್ದಾರೆ. ವಿಶ್ವವಾಣಿ ಟಿವಿಯ ವೆಬ್ಸೈಟ್ ಮೂಲಕ ವೃತ್ತಿ ಬದುಕನ್ನು ಆರಂಭಿಸಿ ಕೆಲವೇ ತಿಂಗಳುಗಳು ಕಳೆದಿವೆ. ಸದ್ಯ ಉಪ ಸಂಪಾದಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜಕೀಯ, ಕ್ರೈಂ ಹಾಗೂ ಅಂತಾರಾಷ್ಟ್ರೀಯ ಸಂಬಂಧ ನೆಚ್ಚಿನ ವಿಷಯ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್ಆರ್ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲು ಮಾಡಿ ವಿಕಸಿತ್ ಭಾರತ್ – ರೋಜ್ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 ಅನ್ನು (ವಿಬಿ–ಜಿ ರಾಮ್ ಜಿ) ಮಸೂದೆಯನ್ನು ಲೋಕಸಭೆ ಗುರುವಾರ ಅಂಗೀಕರಿಸಿತು.
Gold Rate Today: ಚಿನ್ನದ ದರದಲ್ಲಿ ಇಂದೂ ಸಹ ಏರಿಕೆ ಕಂಡು ಬಂದಿದೆ. ಸೋಮವಾರ ಬೆಂಗಳೂರಿನಲ್ಲಿ 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 30 ರೂ. ಏರಿಕೆ ಕಂಡು ಬಂದಿದ್ದು, 12,360 ರೂ. ಇದೆ. 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ 33 ರೂ. ಏರಿಕೆ ಕಂಡು ಬಂದು ಒಟ್ಟು ಬೆಲೆ 13,484 ರೂ. ಇದೆ.
ಉತ್ತರ ಪ್ರದೇಶದ ಜೌನ್ಪುರದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, 60 ವರ್ಷದ ದಂಪತಿಯನ್ನು ಪುತ್ರನೇ ಕೊಲೆ ಮಾಡಿ, ದೇಹವನ್ನು ಕತ್ತರಿಸಿ, ನದಿಗೆಸಿದಿದ್ದಾನೆ ಎಂದು ತಿಳಿದು ಬಂದಿದೆ. ಎಂಜಿನಿಯರ್ ಆಗಿರುವ ಅಂಬೇಶ್, ತನ್ನ ಹೆತ್ತವರಾದ ಶ್ಯಾಮ್ ಬಹದ್ದೂರ್ (62) ಮತ್ತು ಬಬಿತಾ (60) ಅವರನ್ನು ಕೊಲೆ ಮಾಡಿದ್ದಾನೆ.
ದೆಹಲಿಯಲ್ಲಿ ವಾಯುಮಾಲಿನ್ಯ ಮಿತೀ ಮೀರಿದ್ದು, ವಿಷ ಗಾಳಿ ಜನರ ಜೀವಕ್ಕೆ ಕುತ್ತು ತರುತ್ತಿದೆ. ದೆಹಲಿಯ AQI 400ರ ಗಡಿ ದಾಟಿ ಅಪಾಯಕಾರಿ ಮಟ್ಟ ತಲುಪಿದ್ದು 50% ಜನರಿಗೆ ವರ್ಕ್ ಫ್ರಂ ಹೋಮ್ ಘೋಷಿಸಲಾಗಿದೆ. ಕಠಿಣ ಮಾಲಿನ್ಯ ನಿಯಂತ್ರಣ ಕ್ರಮಗಳ ಭಾಗವಾಗಿ ಬಿಎಸ್-VI ಎಂಜಿನ್ ಹೊಂದಿರದ ಹಳೆಯ ಕಾರುಗಳಿಗೆ ದೆಹಲಿ ಪ್ರವೇಶವನ್ನ ನಿಷೇಧಿಸಲಾಗಿದೆ.
ಒಂದು ತಿಂಗಳ ಕಾಲ ನಡೆದ ವಿಶೇಷ ತೀವ್ರ ಪರಿಷ್ಕರಣಾ ಕಾರ್ಯವನ್ನು ಪೂರ್ಣಗೊಳಿಸಿದ ನಂತರ, ಭಾರತೀಯ ಚುನಾವಣಾ ಆಯೋಗವು ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ.ಆಯೋಗವು ಕರಡು ಮತದಾರರ ಪಟ್ಟಿಯಿಂದ ಸುಮಾರು 58 ಲಕ್ಷ ಹೆಸರುಗಳನ್ನು ತೆಗೆದುಹಾಕಿದೆ.
ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 2025ರ ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 19 ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ್ದು, ಇದೀಗ ಕೇರಳ ಸರ್ಕಾರ ಅದರ ಪ್ರದರ್ಶನಕ್ಕೆ ಸಜ್ಜಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ತಿಕ್ಕಾಟದ ಕುರಿತು ಸಂಸದ ಶಶಿ ತರೂರ್ ಮಾತನಾಡಿದ್ದಾರೆ.
ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಆಡಳಿತವು ಡಿಸೆಂಬರ್ 16 ರಂದು ಹೊಸ ಘೋಷಣೆಗೆ ಸಹಿ ಹಾಕಿದೆ. ಈಗಾಗಲೇ ಇರುವ ಪ್ರಯಾಣ ನಿರ್ಬಂಧವನ್ನು ಇದೀಗ 20 ದೇಶಗಳಿಗೆ ವಿಸ್ತರಿಸಲಾಗಿದೆ. ಪ್ರಯಾಣ ನಿರ್ಬಂಧಗಳನ್ನು ಎದುರಿಸುತ್ತಿರುವ ಒಟ್ಟು ದೇಶಗಳ ಸಂಖ್ಯೆ 40 ಕ್ಕೆ ತಲುಪಿಸಿದೆ.
ಶ್ವೇತಭವನದ ಹನುಕ್ಕಾ ಸ್ವಾಗತ ಸಮಾರಂಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮೂಲಭೂತವಾದಿ ಇಸ್ಲಾಂ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸುವಂತೆ ರಾಷ್ಟ್ರಗಳಿಗೆ ಕರೆ ನೀಡಿದರು. ಎಲ್ಲಾ ರಾಷ್ಟ್ರಗಳು ಮೂಲಭೂತವಾದಿ ಇಸ್ಲಾಮಿಕ್ ಭಯೋತ್ಪಾದನೆಯ ದುಷ್ಟ ಶಕ್ತಿಗಳ ವಿರುದ್ಧ ಒಟ್ಟಾಗಿ ನಿಲ್ಲಬೇಕು ಎಂದು ಕರೆ ನೀಡಿದ್ದಾರೆ.
ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಸಿಕ್ಕಿದ್ದ ಅಕ್ರಮ ಹಣ ಪ್ರಕರಣದ ತನಿಖೆ ನಡೆಯುತ್ತಿದೆ. ಇದೀಗ ಯಶವಂತ್ ವರ್ಮಾ ಅವರು ತಮ್ಮ ವಿರುದ್ಧದ ಮಹಾಭಿಯೋಗಕ್ಕಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ಮೂವರು ಸದಸ್ಯರ ಸಮಿತಿಯನ್ನು ರಚಿಸುವ ಲೋಕಸಭಾ ಸ್ಪೀಕರ್ ಅವರ ನಿರ್ಧಾರವನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಯಹೂದಿ ಸಭೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ 50 ವರ್ಷದ ಸಾಜಿದ್ ಅಕ್ರಮ್ ಭಾರತೀಯ ಪ್ರಜೆ ಎಂದು ಫಿಲಿಪೈನ್ಸ್ ವಲಸೆ ಬ್ಯೂರೋ ಮಂಗಳವಾರ ದೃಢಪಡಿಸಿದೆ. 50 ವರ್ಷದ ಸಾಜಿದ್ ಅಕ್ರಮ್ ಹಣ್ಣಿನ ಅಂಗಡಿಯೊಂದರ ಮಾಲೀಕನಾಗಿದ್ದ. ಈತ ಪೊಲೀಸರ ಗುಂಡೇಟಿಗೆ ಸ್ಥಳದಲ್ಲೇ ಮೃತಪಟ್ಟಿದ್ದ.
HD Kumaraswamy Birthday: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್. ಡಿ ಕುಮಾರ ಸ್ವಾಮಿಯವರು ಇಂದು 66 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಹೆಚ್ಡಿಕೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಿ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಕುಮಾರಸ್ವಾಮಿ ಅವರಿಗೆ ಹುಟ್ಟು ಹಬ್ಬದ ಶುಭಾಶಯವನ್ನು ತಿಳಿಸಿದರು.
National Herald Case: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ , ರಾಹುಲ್ ಗಾಂಧಿ ಮತ್ತು ಇತರ ಐವರ ವಿರುದ್ಧ ಜಾರಿ ನಿರ್ದೇಶನಾಲಯದ ಹಣ ವರ್ಗಾವಣೆ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳಲು ದೆಹಲಿ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ .
Bengal Assembly Election: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಬಿರುಗಾಳಿ ಎಬ್ಬಿಸುವ ಸಾಧ್ಯತೆ ಹೆಚ್ಚಿದೆ. ನಕಲು ಮತ್ತು ದೋಷಗಳನ್ನು ತೆಗೆದುಹಾಕಲು ವಿಶೇಷ ತೀವ್ರ ಪರಿಷ್ಕರಣೆಯ ನಂತರ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ಒಟ್ಟು 58 ಲಕ್ಷ ಹೆಸರುಗಳನ್ನು ಅಳಿಸಲಾಗಿದೆ ಎಂದು ತಿಳಿದು ಬಂದಿದೆ.
25 ಜನರ ಸಾವಿಗೆ ಕಾರಣವಾದ ಗೋವಾ ನೈಟ್ಕ್ಲಬ್ ಬೆಂಕಿಯ ಆರೋಪಿಗಳಾದ ಲೂಥ್ರಾ ಸಹೋದರರನ್ನು ಮಂಗಳವಾರ ಥೈಲ್ಯಾಂಡ್ನಿಂದ ಭಾರತಕ್ಕೆ ಕರೆತರಲಾಗುತ್ತಿದೆ. ದುರಂತದ ನಂತರ ಸೌರಭ್ ಮತ್ತು ಗೌರವ್ ಫುಕೆಟ್ಗೆ ಪಲಾಯನ ಮಾಡಿದ್ದರು. ಇದೀಗ ಅವರನ್ನು ಗಡಿಪಾರು ಮಾಡಲಾಗಿದ್ದು, ಭಾರತಕ್ಕೆ ಕರೆತರಲಾಗುತ್ತಿದೆ.
ನಟಿ ಶಿಲ್ಪಾ ಶೆಟ್ಟಿ ಒಡೆತನದ ಬಾಸ್ಟಿಯನ್ ರೆಸ್ಟೋರಂಟ್ ವಿರುದ್ಧ ಬೆಂಗಳೂರು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಅನುಮತಿ ಇಲ್ಲದೆ ಹೆಚ್ಚಿನ ಸಮಯ ರೆಸ್ಟೋರಂಟ್ ತೆರೆದಿರುವುದು ಹಾಗೂ ನಿಯಮಗಳನ್ನು ಉಲ್ಲಂಘಿಸಿ ತಡರಾತ್ರಿ ಪಾರ್ಟಿಗಳಿಗೆ ಅವಕಾಶ ನೀಡಲಾಗಿದೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
Jammu and Kashmir: ಉಧಂಪುರದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪಿನ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ. ಪೊಲೀಸ್ ಅಧಿಕಾರಿಯನ್ನು ಪೂಂಚ್ ಜಿಲ್ಲೆಯ ಮೆಂಧರ್ ನಿವಾಸಿ ಅಮ್ಜದ್ ಪಠಾಣ್ ಎಂದು ಗುರುತಿಸಲಾಗಿದೆ.
Kidnap Case: ಪೋರ್ಚುಗಲ್ಗೆ ವಲಸೆ ಹೋಗಲು ಯತ್ನಿಸುತ್ತಿದ್ದ ಭಾರತೀಯ ದಂಪತಿ ಮತ್ತು ಅವರ ಮೂರು ವರ್ಷದ ಮಗಳನ್ನು ಲಿಬಿಯಾದಲ್ಲಿ ಅಪಹರಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಹರಣಾಕಾರರು ಅವರ ಬಿಡುಗಡೆಗೆ 2 ಕೋಟಿ ರೂ. ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿಗೆ ಕೈಕೊಟ್ಟು ಬೇರೊಬ್ಬಳ ಜೊತೆ ಮದುವೆಯಾಗುತ್ತಿದ್ದ ಯುವಕನ ಮದುವೆ ಮಂಟಪಕ್ಕೆ ಬಂದು ಗಲಾಟೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮದುವೆ ನಡೆದು ಮುಗಿದ ಬಳಿಕ ಯುವಕನ ಕುಟುಂಬಸ್ಥರು ಸಂತ್ರಸ್ತೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಭಾರತದ ಮೇಲೆ ಶೇ. 50 ರಷ್ಟು ಸುಂಕ ಹೆಚ್ಚಳಕ್ಕೆ ಮೆಕ್ಸಿಕೋ ಅನುಮೋದನೆ ನೀಡಿದ ನಂತರ, ಭಾರತ ತನ್ನ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು "ಸೂಕ್ತ ಕ್ರಮಗಳನ್ನು" ತೆಗೆದುಕೊಳ್ಳುವ ಎಚ್ಚರಿಕೆ ನೀಡಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಭಾರತೀಯ ರಫ್ತುದಾರರ ಹಿತಾಸಕ್ತಿಗಳನ್ನು ಕಾಪಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಭಾರತ ಕಾಯ್ದಿರಿಸಿದೆ ಎಂದು ತಿಳಿಸಲಾಗಿದೆ.