ಬಳ್ಳಾರಿಯ ಅಬ್ದುಲ್ ಸಲಾಮ್ ಮನೆ ಮೇಲೆ ಎನ್ಐಎ ದಾಳಿ
ದೇಶದ ಭದ್ರತೆಗೆ ಧಕ್ಕೆ ತರಲು ಹೊಂಚು ಹಾಕಿದ್ದ ಉಗ್ರರ ಜಾಲವನ್ನು ಮಟ್ಟಹಾಕಲು ರಾಷ್ಟ್ರೀಯ ತನಿಖಾ ಸಂಸ್ಥೆ, ಇಂದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಪ್ರಮುಖ ನಗರಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ. ಬಳ್ಳಾರಿಯ ಕೌಲ್ ಬಜಾರ್ ನಿವಾಸಿಯಾದ ಅಬ್ದುಲ್ ಸಲಾಂ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿ, ತೀವ್ರ ಶೋಧ ನಡೆಸಿದ್ದಾರೆ.