ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬಳ್ಳಾರಿ

Ballari Firing: ಬಳ್ಳಾರಿ ಗಲಾಟೆಗೆ ಇನ್ನೊಂದು ತಲೆದಂಡ, ಐಜಿ ವರ್ತಿಕಾ ಕಟಿಯಾರ್‌ ವರ್ಗ

ಬಳ್ಳಾರಿ ಗಲಾಟೆಗೆ ಇನ್ನೊಂದು ತಲೆದಂಡ, ಐಜಿ ವರ್ತಿಕಾ ಕಟಿಯಾರ್‌ ವರ್ಗ

ಬಳ್ಳಾರಿ ರೇಂಜ್ ಐಜಿ ಆಗಿದ್ದ ವರ್ತಿಕಾ ಕಟಿಯಾರ್‌ ಅವರು ಈ ಪ್ರಕರಣವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿಲ್ಲ. ಹೀಗಾಗಿ ಇವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಡಿಜಿ- ಐಜಿಪಿ ಕಡೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿತ್ತು. ಹೀಗಾಗಿ ಐಜಿ ವರ್ತಿಕಾ ಕಟಿಯಾರ್‌ ಅವರನ್ನ ಸರ್ಕಾರ ವರ್ಗಾವಣೆಗೊಳಿಸಿದೆ.

ವಾಲ್ಮೀಕಿ ಬ್ಯಾನರ್ ಕಿತ್ತುಹಾಕಿದ್ದೇ ಬಳ್ಳಾರಿ ದುರ್ಘಟನೆಗೆ ಕಾರಣ: ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿ

ವಾಲ್ಮೀಕಿ ಬ್ಯಾನರ್ ಕಿತ್ತುಹಾಕಿದ್ದೇ ಬಳ್ಳಾರಿ ದುರ್ಘಟನೆಗೆ ಕಾರಣ: ಡಿಕೆಶಿ

ಕುಮಾರಸ್ವಾಮಿ, ಜನಾರ್ಧನ ರೆಡ್ಡಿ ಸಂಬಂಧ ಹೇಗಿತ್ತು? ರೆಡ್ಡಿ, ರಾಮುಲು ಸಂಬಂಧ ಏನು ಎಂಬುದು ಗೊತ್ತಿದೆ. ಎರಡು ಬಾರಿ ಶವಪರೀಕ್ಷೆ ಎಂದು ಕುಮಾರಸ್ವಾಮಿಗೆ ಮಾಹಿತಿ ಕೊಟ್ಟವರು ಯಾರು?, ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Ballari Clash Case: ಬಳ್ಳಾರಿ ಗಲಭೆ ವೇಳೆ ಫೈರಿಂಗ್‌; ಬುಲೆಟ್ ಪತ್ತೆ ಹಚ್ಚಲು ಜನಾರ್ದನ ರೆಡ್ಡಿ ಮನೆಗೆ ಬಾಂಬ್ ನಿಷ್ಕ್ರಿಯ ದಳ ಎಂಟ್ರಿ

ಬುಲೆಟ್ ಪತ್ತೆ ಹಚ್ಚಲು ಜನಾರ್ದನರೆಡ್ಡಿ ಮನೆಗೆ ಬಾಂಬ್ ಸ್ಕ್ವಾಡ್‌ ಎಂಟ್ರಿ

ಬಳ್ಳಾರಿಯಲ್ಲಿ ಬ್ಯಾನರ್‌ ವಿಚಾರ ಗಲಭೆ ವೇಳೆ ಜನಾರ್ದನ ರೆಡ್ಡಿ ಮನೆ ಮೇಲೆ ಒಟ್ಟು ಏಳು ರೌಂಡ್ ಫೈರಿಂಗ್ ನಡೆದಿದೆ ಎಂಬ ಮಾಹಿತಿ ಇದ್ದು, ಈ ಬಗ್ಗೆ ತಪಾಸಣೆ ನಡೆಸಲಾಗುತ್ತಿದೆ. ಹೀಗಾಗಿ ಬುಲೆಟ್‌ಗಳನ್ನು ಪತ್ತೆ ಹಚ್ಚಲು ಬಾಂಬ್ ನಿಷ್ಕ್ರಿಯ ದಳ, ಪ್ಯಾಲಿಸ್ಟಿಕ್ ಟೀಂ ಮತ್ತು ಸುಕೋ (ಫಾರೆನ್ಸಿಕ್ ಲ್ಯಾಬ್) ಟೀಂನಿಂದ ಪರಿಶೀಲನೆ ಮಾಡಲಾಗುತ್ತಿದೆ.

Ballari Firing: ಬಳ್ಳಾರಿ ಘರ್ಷಣೆ: ಗುಂಡು ಹಾರಿಸಿದ ಸತೀಶ್‌ ರೆಡ್ಡಿಯ ಗನ್‌ಮ್ಯಾನ್‌ ಬಂಧನ, ಎಲ್ಲ ಆರೋಪಿಗಳು ಬೆಂಗಳೂರಿಗೆ ಶಿಫ್ಟ್

ಗುಂಡು ಹಾರಿಸಿದ ಸತೀಶ್‌ ರೆಡ್ಡಿಯ ಗನ್‌ಮ್ಯಾನ್‌ ಬಂಧನ, ‌ಬೆಂಗಳೂರಿಗೆ ಶಿಫ್ಟ್

ಶಾಸಕ ಭರತ್ ರೆಡ್ಡಿ (Bharath Reddy) ಅತ್ಯಾಪ್ತ ಸತೀಶ್ ರೆಡ್ಡಿಯ ಗನ್‌ಮ್ಯಾನ್ ಗುರುಚರಣ್ ಸಿಂಗ್ ಫೈರ್ ಮಾಡಿದ್ದ ಬಂದೂಕಿನ ಬುಲೆಟ್ ತಗುಲಿಯೇ ರಾಜಶೇಖರ್ ಮೃತಪಟ್ಟಿದ್ದಾರೆ. 12 ಎಂಎಂ ಬುಲೆಟ್ ಅನ್ನು ರಾಜಶೇಖರ್ ದೇಹದಿಂದ ಪೋಸ್ಟ್ ಮಾರ್ಟಮ್ ವೇಳೆ ಹೊರ ತೆಗೆಯಲಾಗಿದೆ. ಹೊರ ತೆಗೆದ ಬುಲೆಟ್ ಫೋರೆನ್ಸಿಕ್‌ ಲ್ಯಾಬ್‌ಗೆ ಕಳುಹಿಸಲಾಗಿದೆ. ರಾಜಶೇಖರ್ ಮೃತನ ದೇಹ ಹೊಕ್ಕಿದ್ದು 12 ಎಂಎಂ ಸಿಂಗಲ್‌ಬೋರ್ ಬುಲೆಟ್ ಎಂದು ಖಚಿತವಾಗಿದೆ.

Ballari clash: ನನಗೆ Z ಶ್ರೇಣಿ ಭದ್ರತೆ ಕಲ್ಪಿಸಿ; ಸಿಎಂ, ಗೃಹ ಸಚಿವರಿಗೆ ಜನಾರ್ದನ ರೆಡ್ಡಿ ಪತ್ರ

ನನಗೆ Z ಶ್ರೇಣಿ ಭದ್ರತೆ ಕಲ್ಪಿಸಿ; ಸಿಎಂಗೆ ಜನಾರ್ದನ ರೆಡ್ಡಿ ಪತ್ರ

ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಆತನ ಗೂಂಡಾ ಸಹಚರರು ಪೆಟ್ರೋಲ್ ಬಾಂಬ್, ಬಂದೂಕು ಬಳಸಿ ನನ್ನ ಹತ್ಯೆಗೆ ಯತ್ನಿಸಿದ್ದಾರೆ. ಆದ್ದರಿಂದ ಸರ್ಕಾರ ತುರ್ತಾಗಿ ನನಗೆ ಹಾಗೂ ನನ್ನು ಕುಟುಂಬಕ್ಕೆ ಝಡ್ ಶ್ರೇಣಿ ಅಥವಾ ಅದಕ್ಕೆ ಸಮಾನವಾದ ಉನ್ನತ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಸರ್ಕಾರಕ್ಕೆ ಶಾಸಕ ಜನಾರ್ದನ ರೆಡ್ಡಿ ಮನವಿ ಮಾಡಿದ್ದಾರೆ.

Bellary Clash: ಸಿಎಂ ಭೇಟಿಯಾದ ಶಾಸಕ ಭರತ್‌ ರೆಡ್ಡಿ; ಬಳ್ಳಾರಿ ಗಲಭೆ ಬಗ್ಗೆ ಚರ್ಚೆ

ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಳ್ಳಾರಿ ಶಾಸಕ ಭರತ್‌ ರೆಡ್ಡಿ

ತೋರಣಗಲ್‌ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಶಾಸಕ ಭರತ್‌ ರೆಡ್ಡಿ ಭೇಟಿಯಾಗಿದ್ದಾರೆ. ಮುಖ್ಯಮಂತ್ರಿಗಳು ಕೇವಲ ರಾಜಕೀಯ ನಾಯಕರಲ್ಲದೆ, ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಂದಲೂ ಘಟನೆಯ ವರದಿಯನ್ನು ಪಡೆದಿದ್ದಾರೆ. ತನಿಖೆ ಪಾರದರ್ಶಕವಾಗಿ ನಡೆಸಿ ಎಂದು ಸಿಎಂ ಸೂಚಿಸಿದ್ದಾರೆ ಎನ್ನಲಾಗಿದೆ.

Ballari Firing: ಶಾಸಕ ಭರತ್‌ ರೆಡ್ಡಿ ಮೇಲೂ ಕೇಸ್‌, ಸತೀಶ್‌ ರೆಡ್ಡಿ ಗನ್‌ ಮ್ಯಾನ್‌ಗಳು ನಾಪತ್ತೆ

ಭರತ್‌ ರೆಡ್ಡಿ ಮೇಲೂ ಕೇಸ್‌, ಸತೀಶ್‌ ರೆಡ್ಡಿ ಗನ್‌ ಮ್ಯಾನ್‌ಗಳು ನಾಪತ್ತೆ

ಶಾಸಕ ನಾರಾ ಭರತ್, ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ ಹಾಗೂ ನಾರಾ ಸೂರ್ಯನಾರಾಯರೆಡ್ಡಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಲಾಟೆ ವೇಳೆ ಸತೀಶ್ ರೆಡ್ಡಿಯ ಖಾಸಗಿ ಗನ್ ಮ್ಯಾನ್‌ಗಳು ಗುಂಡು ಹಾರಿಸಿದ್ದರು. ಗನ್ ಮ್ಯಾನ್‌ಗಳ ಐದು ಗನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸತೀಶ ರೆಡ್ಡಿಗೆ ಸಂಬಂಧಿಸಿದ ಎಲ್ಲಾ ನಾಲ್ಕು ಗನ್ ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ.

Ballari firing: ಶಾಸಕ ಜನಾರ್ದನ ರೆಡ್ಡಿ ನಿವಾಸದಲ್ಲಿ ಇನ್ನೊಂದು ಬುಲೆಟ್‌ ಪತ್ತೆ

ಶಾಸಕ ಜನಾರ್ದನ ರೆಡ್ಡಿ ನಿವಾಸದಲ್ಲಿ ಇನ್ನೊಂದು ಬುಲೆಟ್‌ ಪತ್ತೆ

ನನ್ನ ಹತ್ಯೆಗೆ ಸಂಚು ನಡೆಸಿದ್ದಾರೆ. 7-8 ಬಾರಿ ಫೈರಿಂಗ್‌ ಆಗಿದೆ. ನಿನ್ನೆ ಒಂದು ಗುಂಡು ಪತ್ತೆಯಾಗಿತ್ತು, ಇಂದು ಮತ್ತೊಂದು ಬುಲೆಟ್‌ ಕ್ಯಾಪ್‌ ಪತ್ತೆಯಾಗಿದೆ. ಜಾತಿ ನಿಂದನೆ, ಕೊಲೆ ಯತ್ನ ಆರೋಪದ ಅಡಿಯಲ್ಲಿ 15 ಜನರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ. ರೆಡ್ಡಿ ಕಡೆಯವರೂ ಭರತ್‌ ರಡ್ಡಿ ಹಾಗೂ ಬೆಂಬಲಿಗರ ಮೇಲೂ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಬಳ್ಳಾರಿ ಘರ್ಷಣೆ; ಮೊದಲು ಕಾಂಗ್ರೆಸ್‌ ಶಾಸಕನನ್ನು ಒಳಗೆ ಹಾಕಿ ಎಂದ ವಿಜಯೇಂದ್ರ

ಮೊದಲು ಬಳ್ಳಾರಿ ಕಾಂಗ್ರೆಸ್‌ ಶಾಸಕನನ್ನು ಒಳಗೆ ಹಾಕಿ: ವಿಜಯೇಂದ್ರ ಕಿಡಿ

BY Vijayendra: ಮಾಜಿ ಸಚಿವ ಮತ್ತು ಶಾಸಕ ಜಿ. ಜನಾರ್ಧನ ರೆಡ್ಡಿ ಅವರ ಬಳ್ಳಾರಿಯ ನಿವಾಸಕ್ಕೆ ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ನಿನ್ನೆ ಇಲ್ಲಿನ ಶಾಸಕ ನಾ.ರಾ.ಭರತ್ ರೆಡ್ಡಿ ನೇತೃತ್ವದಲ್ಲಿ ಗೂಂಡಾಗಿರಿ ನಡೆದಿದೆ. ಬ್ಯಾನರ್ ವಿಚಾರದಲ್ಲಿ ಗಲಾಟೆ, ದೊಂಬಿ ಎಬ್ಬಿಸಿ ಸಾವಿರಾರು ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರ ಜತೆ ಗೂಂಡಾಗಳನ್ನು ಕರೆದುಕೊಂಡು ಬಂದು ಗೂಂಡಾಗಿರಿ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಳ್ಳಾರಿ ಗಲಭೆ; ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ಎಸ್‌ಪಿ ಪವನ್ ನೆಜ್ಜೂರ್ ಅಮಾನತು

ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಬಳ್ಳಾರಿ ಎಸ್‌ಪಿ ಅಮಾನತು

ಬಳ್ಳಾರಿಯಲ್ಲಿ ವಾಲ್ಮೀಕಿ ಮಹರ್ಷಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಬ್ಯಾನರ್‌ ಕಟ್ಟುವ ವಿಚಾರಕ್ಕೆ ಘರ್ಷಣೆ ನಡೆದಿತ್ತು. ಈ ವೇಳೆ ಕಲ್ಲು ತೂರಾಟ ಸೇರಿ ಅಹಿತಕರ ಘಟನೆಗಳು ನಡೆದಿದ್ದವು. ಪರಿಸ್ಥಿತಿಯನ್ನು ನಿಭಾಯಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿಲ್ಲ ಎಂದು ನೂತನ ಎಸ್‌ಪಿ ಪವನ್ ನೆಜ್ಜೂರ್ ಅವರನ್ನು ಸಸ್ಪೆಂಡ್‌ ಮಾಡಲಾಗಿದೆ.

Bellary Firing: ಜನಾರ್ದನ ರೆಡ್ಡಿ ನೀಚ ರಾಜಕೀಯ ಮಾಡ್ತಿದ್ದಾನೆ: ಶಾಸಕ ಭರತ್ ರೆಡ್ಡಿ ವಾಗ್ದಾಳಿ

ಜನಾರ್ದನ ರೆಡ್ಡಿ ನೀಚ ರಾಜಕೀಯ ಮಾಡ್ತಿದ್ದಾನೆ: ಶಾಸಕ ಭರತ್ ರೆಡ್ಡಿ ವಾಗ್ದಾಳಿ

ಮೃತ ರಾಜಶೇಖರಗೆ ಸರ್ಕಾರದಿಂದ ಹಾಗೂ ವೈಯಕ್ತಿಕವಾಗಿ ಪರಿಹಾರ ಕೊಡ್ತೇವೆ. ಆಂಧ್ರ ತೆಲಂಗಾಣ ಯಾವ ಕಡೆಯಿಂದಾದ್ರೂ ಜನರನ್ನು ಕರೆಸಲಿ ನಮಗೇನು ಆಗಲ್ಲ. ಜನಾರ್ದನ ರೆಡ್ಡಿ ದ್ವೇಷದ ರಾಜಕೀಯಕ್ಕೆ ಓರ್ವ ಬಲಿಯಾಗಿಯಾದ್ದಾನೆ ಎಂದು ಶಾಸಕ ಭರತ್ ರೆಡ್ಡಿ ಕಿಡಿಕಾರಿದ್ದಾರೆ.

Bellari Firing: ಬಳ್ಳಾರಿ ಗಲಾಟೆ: ಹತ್ತು ಜನರ ಮೇಲೆ ಪ್ರಕರಣ ದಾಖಲು, ಬುಲೆಟ್‌ ಖಾಸಗಿ ರಿವಾಲ್ವರ್‌ನದ್ದು

ಬಳ್ಳಾರಿ ಗಲಾಟೆ: ಹತ್ತು ಜನರ ಮೇಲೆ ಪ್ರಕರಣ, ಬುಲೆಟ್‌ ಖಾಸಗಿ ರಿವಾಲ್ವರ್‌ನದು

ರಾಜಶೇಖರ್‌ಗೆ ತಾಗಿದ ಬುಲೆಟ್ ಸರ್ಕಾರಿ ಗನ್ ಮ್ಯಾನ್‌ನದ್ದಲ್ಲ. ಬುಲೆಟ್ ಹಾರಿದ್ದು ಖಾಸಗಿ ಗನ್ ಮ್ಯಾನ್‌ನ ರಿವಾಲ್ವರ್‌ನಿಂದ ಎಂದು ಘಟನಾ ಸ್ಥಳದ ಉಸ್ತುವಾರಿ ಎಸ್ಪಿ ರಂಜಿತ್ ಕುಮಾರ್ ಖಚಿತ ಪಡಿಸಿದ್ದಾರೆ. ನಿನ್ನೆ ಗಲಾಟೆ ವೇಳೆ ರಾಜಶೇಖರ್‌ ಸಾವಾಗಿದೆ. ಅದು ಪೊಲೀಸರು ಫೈರ್ ಮಾಡಿದಾಗ ತಗುಲಿರುವ ಬುಲೆಟ್ ಅಲ್ಲ. ಅದು ಖಾಸಗಿ ರಿವಾಲ್ವರ್ ಬುಲೆಟ್. ಇದರ ಬಗ್ಗೆ ತನಿಖೆ ಮಾಡ್ತೇವೆ ಎಂದಿದ್ದಾರೆ.

Bellari Firing: ಬಳ್ಳಾರಿ ಗಲಾಟೆ: ಜನಾರ್ದನ ರೆಡ್ಡಿ ಮೇಲೇ ಫೈರಿಂಗ್, ಪೆಟ್ರೋಲ್‌ ಬಾಂಬ್‌ ತಂದಿದ್ರು:‌ ಶ್ರೀರಾಮುಲು ಆರೋಪ

ಬಳ್ಳಾರಿ ಗಲಾಟೆ: ಜನಾರ್ದನ ರೆಡ್ಡಿ ಮೇಲೇ ಫೈರಿಂಗ್:‌ ಶ್ರೀರಾಮುಲು ಆರೋಪ

ನಾನು ಮನಸ್ಸು ಮಾಡಿದ್ರೆ ಬಳ್ಳಾರಿ ಭಸ್ಮ ಮಾಡ್ತೇನೆ ಅಂತ ಭರತ್ ರೆಡ್ಡಿ ಹೇಳಿದ್ದಾರೆ. ಯಾವನೋ ಒಬ್ಬ ಪೆಟ್ರೋಲ್ ಬಾಂಬ್ ಎಸೆದಿದ್ದಾನೆ. ಅವರ ಮನೆ ಸುಡ್ತಿದ್ದೆ ಅಂತ ಭರತ್ ರೆಡ್ಡಿ ಅಂದಿದ್ದಾರೆ. ಅದಕ್ಕಾಗಿ ಅವರು ಎಲ್ಲವನ್ನೂ ತಂದಿದ್ದಾರೆ. ಜನಾರ್ದನ ರೆಡ್ಡಿ ಅವರ ಮನೆ ಸುಡ್ತಿದ್ದೆ, ಬಳ್ಳಾರಿಯನ್ನ ಭಸ್ಮ ಮಾಡ್ತೇನೆ ಅನ್ನೋದನ್ನ ಕೇಳಿದ್ರೆ ಪೆಟ್ರೋಲ್ ಬಾಂಬ್ ಅವರೇ ತಂದಿದ್ದು ಎಂದು ಭರತ್ ರೆಡ್ಡಿ ವಿರುದ್ಧ ಶ್ರೀರಾಮುಲು ಗಂಭೀರ ಆರೋಪ ಮಾಡಿದರು.

Bellari Firing: ಬಳ್ಳಾರಿ ಗಲಾಟೆ ಪ್ರಕರಣ: ಜನಾರ್ದನ ರೆಡ್ಡಿ, ಶ್ರೀರಾಮುಲು ಮೇಲೆ ಎಫ್‌ಐಆರ್

ಬಳ್ಳಾರಿ ಗಲಾಟೆ ಪ್ರಕರಣ: ಜನಾರ್ದನ ರೆಡ್ಡಿ, ಶ್ರೀರಾಮುಲು ಮೇಲೆ ಎಫ್‌ಐಆರ್

ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನೆಲೆ ಹಾಗೂ ಬಳ್ಳಾರಿಯ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಸಂಬಂಧ ಬಳ್ಳಾರಿಯ ಬ್ರೂಸ್‌ಫೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಅಲಿಖಾನ್, ದಮ್ಮೂರ ಶೇಖರ್, ಮೋತ್ಕರ್ ಶ್ರೀನಿವಾಸ್, ಪ್ರಕಾಶ್ ರೆಡ್ಡಿ, ರಮಣ, ಪಾಲನ್ನ, ದಿವಾಕರ್ ಹಾಗೂ ಮಾರುತಿ ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ಮಧ್ಯೆ ಗಲಾಟೆ; ಓರ್ವ ಸಾವು

ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಗಲಾಟೆ; ಓರ್ವ ಸಾವು

Janardhana Reddy: ಬಳ್ಳಾರಿಯ ಹವಂಬಾವಿ ಏರಿಯಾದಲ್ಲಿರುವ ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಓರ್ವ ಮೃತಪಟ್ಟಿದ್ದಾನೆ ಎಂದು ವರದಿಯೊಂದು ತಿಳಿಸಿದೆ. ಜತೆಗೆ ಸ್ಥಳದಲ್ಲಿ ಉದ್ವಿಗ್ನ ಸನ್ನಿವೇಶ ನಿರ್ಮಾಣವಾಗಿದೆ.

Road Accident: ನಿಯಂತ್ರಣ ತಪ್ಪಿ ಕಾರು ಪಲ್ಟಿ, ಒಂದೇ ಕುಟುಂಬದ ಮೂವರು ಸಾವು

ನಿಯಂತ್ರಣ ತಪ್ಪಿ ಕಾರು ಪಲ್ಟಿ, ಒಂದೇ ಕುಟುಂಬದ ಮೂವರು ಸಾವು

ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಸೇರಿ 3 ಜನ ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸಿರುಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮದುವೆಗೆ ಒಪ್ಪದ ಪ್ರಿಯಕರ; ಬಳ್ಳಾರಿಯಲ್ಲಿ ವಿಡಿಯೊ ಮಾಡುತ್ತಲೇ ವಿವಾಹಿತ ಮಹಿಳೆ ಆತ್ಮಹತ್ಯೆ

ಮದುವೆಗೆ ಒಪ್ಪದ ಪ್ರಿಯಕರ; ವಿಡಿಯೊ ಮಾಡುತ್ತಲೇ ವಿವಾಹಿತ ಮಹಿಳೆ ಆತ್ಮಹತ್ಯೆ

Bellary News: ಮಹಿಳೆಗೆ ಈಗಾಗಲೇ ಮದುವೆಯಾಗಿ ಮಕ್ಕಳಿದ್ದು, ಪತಿಯಿಂದ ದೂರವಿದ್ದಳು. ಈ ನಡುವೆ ಯುವಕನೊಬ್ಬನ ಜತೆ ಸ್ನೇಹವಾಗಿತ್ತು. ಆ ಸ್ನೇಹ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ. ಹೀಗಾಗಿ ತನ್ನನ್ನು ಮದುವೆ ಆಗುವಂತೆ ಪ್ರಿಯಕರನಿಗೆ ಒತ್ತಾಯ ಮಾಡಿದ್ದಳು. ಆದರೆ, ವಿಚಾರದಲ್ಲಿ ಇಬ್ಬರ ನಡುವೆ ಜಗಳ ನಡೆದು, ಮಹಿಳೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

Valmiki Corporation scam: ಮಾಜಿ ಸಚಿವ ನಾಗೇಂದ್ರಗೆ ಸೇರಿದ 8.07 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ ಮಾಡಿದ ಇಡಿ

ಮಾಜಿ ಸಚಿವ ನಾಗೇಂದ್ರಗೆ ಸೇರಿದ 8.07 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ

former minister B Nagendra: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್​ಗಳಡಿಯಲ್ಲಿ ವಸತಿ ಮತ್ತು ವಾಣಿಜ್ಯ ಆಸ್ತಿ ಸೇರಿ 4 ಸ್ಥಿರಾಸ್ತಿಗಳನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಇದರಿಂದ ಈ ಪ್ರಕರಣದಲ್ಲಿ ಈವರೆಗೆ ಜಪ್ತಿ ಮಾಡಿದ ಒಟ್ಟು ಮೊತ್ತ 13.01 ಕೋಟಿ ರೂ.ಗಳಾಗಿದೆ.

Karnataka Weather: ಇಂದು ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ

ಇಂದು ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ

ಕರ್ನಾಟಕ ರಾಜ್ಯ ಹವಾಮಾನ: ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಳವಾಗುತ್ತಿದೆ. ಮುಂದಿನ ಎರಡು ದಿನ ಕನಿಷ್ಠ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ನಂತರ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಮುಂದಿನ 5 ದಿನ ಹವಾಮಾಣ ಹೇಗಿರಲಿದೆ ಎಂಬ ಕುರಿತ ಮಾಹಿತಿ ಇಲ್ಲಿದೆ.

Karnataka Weather: ಡಿ.13ರವರೆಗೆ ಬೆಳಗಾವಿ, ಬಾಗಲಕೋಟೆ ಸೇರಿ 7 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ

ಡಿ.13ರವರೆಗೆ ಬೆಳಗಾವಿ ಸೇರಿ 7 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚಾಗುತ್ತಿದೆ. ಕರ್ನಾಟಕದ ಸಮತಟ್ಟಾದ ಪ್ರದೇಶಗಲ್ಲಿ ಬೀದರ್‌ನಲ್ಲಿ ಗುರುವಾರ ಮುಂಜಾನೆ ಅತಿ ಕನಿಷ್ಠ ತಾಪಮಾನ 9 ಡಿಗ್ರಿ ಸೆ. ದಾಖಲಾಗಿದೆ. ಇನ್ನು ಮುಂದಿನ ಎರಡು ದಿನ ರಾಜ್ಯದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ತಿಳಿಸಿದೆ.

Karnataka Weather: ಯೆಲ್ಲೋ ಅಲರ್ಟ್; ಮುಂದಿನ ಮೂರು ದಿನ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ !

ರಾಜ್ಯದಲ್ಲಿ ಮುಂದಿನ 3 ದಿನ ಶೀತ ಗಾಳಿ ಎಚ್ಚರಿಕೆ; ಮಾರ್ಗಸೂಚಿ ಬಿಡುಗಡೆ

ಕರ್ನಾಟಕ ಹವಾಮಾನ ವರದಿ: ರಾಜ್ಯದ ಸಮತಟ್ಟಾದ ಪ್ರದೇಶಗಲ್ಲಿ ಬೀದರ್‌ನಲ್ಲಿ ಬುಧವಾರ ಮುಂಜಾನೆ ಅತಿ ಕನಿಷ್ಠ ತಾಪಮಾನ 9.2 ಡಿಗ್ರಿ ಸೆ. ದಾಖಲಾಗಿದೆ. ಇನ್ನು ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Janardhan Reddy: 100 ಕೋಟಿ ರೂ. ಮೌಲ್ಯದ ಭೂಹಗರಣ, ಜನಾರ್ದನ ರೆಡ್ಡಿ ಪುತ್ರನ ಹೆಸರು; ಹೈಕೋರ್ಟ್‌ ನೋಟಿಸ್

100 ಕೋಟಿಯ ಭೂಹಗರಣ, ಜನಾರ್ದನ ರೆಡ್ಡಿ ಪುತ್ರನ ಹೆಸರು; ಹೈಕೋರ್ಟ್‌ ನೋಟಿಸ್

ಕಿರೀಟಿ ರೆಡ್ಡಿ ಹಾಗೂ ಸಹವರ್ತಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಕಬಳಿಸಿದ (Land grabbing) ಆರೋಪ ಕೇಳಿ ಬಂದಿದೆ. ಈ ಬಗ್ಗೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ರಿಟ್ ಅರ್ಜಿ ಸಹ ಸಲ್ಲಿಕೆಯಾಗಿದೆ. ಬಳ್ಳಾರಿಯ ಗೋವರ್ಧನ ಎಂಬವರು ಧಾರವಾಡ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣವನ್ನು ಸಿಐಡಿ ಅಥವಾ ಎಸ್ಐಟಿ ತನಿಖೆಗೆ ವಹಿಸುವಂತೆ ಗೋವರ್ಧನ್ ಮನವಿ ಮಾಡಿದ್ದಾರೆ.

Karnataka Weather: ಮುಂದಿನ 2 ದಿನ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಉಳಿದೆಡೆ ಒಣ ಹವೆ

ಮುಂದಿನ 2 ದಿನ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಬಹುತೇಕ ಕಡೆ ಶನಿವಾರ ಕೂಡ ಒಣ ಹವೆಯ ವಾತಾವರಣ ಕಂಡುಬಂದಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ.

Karnataka Weather: ರಾಜ್ಯದಲ್ಲಿ ಹೆಚ್ಚಿದ ಚಳಿಯ ತೀವ್ರತೆ; ವಿಜಯಪುರನಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ಹೆಚ್ಚಿದ ಚಳಿಯ ತೀವ್ರತೆ; ವಿಜಯಪುರನಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚಿದ್ದು, ಹಗಲಲ್ಲೂ ಮೈ ನಡುಗುವ ವಾತಾವರಣವಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Loading...