ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬಳ್ಳಾರಿ

Karnataka Weather: ರಾಜ್ಯದಲ್ಲಿ ಮುಂದಿನ ಒಂದು ವಾರ ಅಬ್ಬರಿಸಲಿದೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಯೆಲ್ಲೋ ಅಲರ್ಟ್‌; ರಾಜ್ಯದಲ್ಲಿ ಮುಂದಿನ ಒಂದು ವಾರ ಅಬ್ಬರಿಸಲಿದೆ ಮಳೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.

Karnataka Weather: ನಾಳೆ ದಕ್ಷಿಣ ಒಳನಾಡು, ಕರಾವಳಿ ಸೇರಿ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಭರ್ಜರಿ ಮಳೆ ನಿರೀಕ್ಷೆ

ನಾಳೆ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಭರ್ಜರಿ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 21 ° C ಆಗಿರಬಹುದು.

cabinet expansion: ಸಚಿವ ಸಂಪುಟ ವಿಸ್ತರಣೆ ಫಿಕ್ಸ್; ಬಿ.ನಾಗೇಂದ್ರ ಮತ್ತೆ ಸಚಿವರಾಗುತ್ತಾರೆ ಎಂದ ಜಮೀರ್ ಅಹ್ಮದ್

10 ದಿನಗಳಲ್ಲಿ ಬಿ.ನಾಗೇಂದ್ರ ಮತ್ತೆ ಸಚಿವರಾಗುತ್ತಾರೆ: ಜಮೀರ್ ಅಹ್ಮದ್

Karnataka Politics: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿರುವ ಸಚಿವ ಜಮೀರ್‌ ಅಹ್ಮದ್‌ ಅವರು, ಬಿ.ನಾಗೇಂದ್ರ ಅವರು ಮತ್ತೆ ಸಚಿವರಾಗುತ್ತಾರೆ. 10 ದಿನಗಳಲ್ಲಿ ಬಿ.ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ಸಿಗಲಿದೆ ಎಂಬ ಭರವಸೆ ಇದೆ. ಇನ್ನು ಸಿದ್ಧರಾಮಯ್ಯನವರೇ ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ ತಿಳಿಸಿದ್ದಾರೆ.

Bellary News: ಬಳ್ಳಾರಿಯು ಗಣಿ ಪ್ರದೇಶ ಮಾತ್ರವಲ್ಲ; ಪ್ರವಾಸೋದ್ಯಮಕ್ಕೂ ಪ್ರಸಿದ್ಧಿ

ಬಳ್ಳಾರಿಯು ಗಣಿ ಪ್ರದೇಶ ಮಾತ್ರವಲ್ಲ; ಪ್ರವಾಸೋದ್ಯಮಕ್ಕೂ ಪ್ರಸಿದ್ಧಿ

ಜಿಲ್ಲೆಯಲ್ಲಿ ಪ್ರವಾಸೋದ್ಯಮ ಸ್ಥಳಗಳಾದ ಬಳ್ಳಾರಿಯ ಏಕಾಶಿಲ ಬೆಟ್ಟ(ಕೋಟೆ), ಸಂಗನಕಲ್ಲು ಗುಡ್ಡ, ರಾಬರ್ಟ್ ಬ್ರೂಸ್‌ಫೂಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯ, ಅವಂಬಾವಿ, ಮಿಂಚೇರಿ ಬೆಟ್ಟ, ದರೋಜಿ ಕರಡಿಧಾಮ, ಸಂಡೂರಿನ ಕುಮಾರಸ್ವಾಮಿ ದೇವಾಲಯ ಮತ್ತು ನಾರಿಹಳ್ಳ ಜಲಾಶಯ, ಕುರುಗೋಡು ಶ್ರೀ ದೊಡ್ಡಬಸವೇಶ್ವರ ದೇವಸ್ಥಾನ, ಭತ್ತದ ನಾಡು ಎಂದೇ ಖ್ಯಾತಿ ಪಡೆದ ಸಿರುಗುಪ್ಪ ಸೇರಿದಂತೆ ಹಲವು ಪ್ರೇಕ್ಷಣೀಯ ಸ್ಥಳಗಳನ್ನು ನೋಡಬಹುದಾಗಿದೆ

Bellary News: ಆರೋಗ್ಯಕರ ಹಾಗೂ ಸ್ವಚ್ಛ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ರವಿ ಬಿಸಗುಪ್ಪಿ

ಆರೋಗ್ಯಕರ ಹಾಗೂ ಸ್ವಚ್ಛ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ರವಿ ಬಿಸಗುಪ್ಪಿ.

“ಸ್ವಚ್ಛತಾ ಹಿ ಸೇವಾ ಅಭಿಯಾನವು ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ದೇಶವ್ಯಾಪಿ ನಡೆಯು ತ್ತಿರುವ ಮಹತ್ವದ ಚಳವಳಿಯಾಗಿದೆ. ಇದರ ಮುಖ್ಯ ಗುರಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವ ಜನಿಕರ ಸಕ್ರಿಯ ಭಾಗವಹಿಸುವಿಕೆ ಎಂದರು. ಸ್ವಚ್ಛತೆಯ ಕುರಿತು ಜಾಗೃತಿ ವೃದ್ಧಿ, ಹಾಗೂ ನೈರ್ಮಲ್ಯ ಕಾರ್ಮಿಕರ ಕಲ್ಯಾಣವನ್ನು ಉತ್ತೇಜಿಸುವುದಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಜವಾಬ್ದಾರಿಯ ಭಾವನೆ ಮೂಡಿಸಿ, ಆರೋಗ್ಯಕರ ಹಾಗೂ ಸ್ವಚ್ಛ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ

Bellary News: ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಸಾವು

ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಸಾವು

Boy Dies: ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ಚರಂಡಿ ನೀರಿನಲ್ಲಿ ಬಾಲಕನ ಮೃತದೇಹ ತೇಲಿದೆ. ಬಾಲಕನನ್ನು ಜಿಂದಾಲ್ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ, ನೀರಿನಲ್ಲೇ ಮಗು ಮೃತಪಟ್ಟಿದ್ದ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ.

Shocking news: ಹೆಣ್ಣು ಮಗು ಎಂದು ಕಾಲುವೆಗೆ ಎಸೆದು ಕೊಂದ ಹೆತ್ತ ತಾಯಿ!

ಹೆಣ್ಣು ಮಗು ಎಂದು ಕಾಲುವೆಗೆ ಎಸೆದು ಕೊಂದ ಹೆತ್ತ ತಾಯಿ!

Murder case: ಈ ದಂಪತಿಗಳಿಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮೂರನೇ ಮಗುವಾಗಿ ಎರಡು ತಿಂಗಳ ಹಿಂದೆ ಹೆಣ್ಣು ಮಗು ಜನಿಸಿತ್ತು. ಇದೇ ಕಾರಣಕ್ಕೆ ಪ್ರಿಯಾಂಕಾ ದೇವಿ ಕಾಲುವೆಗೆ ಎಸೆದು ಹಸುಗೂಸು ಕೊಂದಿದ್ದಾರೆ. ಕಾಲುವೆಗೆ ಎಸೆದು ಬಂದು, ಮಗು ಕಾಣುತ್ತಿಲ್ಲ ಎಂದು ಪೊಲೀಸರ ಮುಂದೆ ಕಣ್ಣೀರು ಹಾಕಿದ್ದಾರೆ.

CBI Raid: ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ; ಬಳ್ಳಾರಿ ಕಾರ್ಪೋರೇಟರ್‌ ಮನೆ ಮೇಲೆ ದಾಳಿ

ಬಳ್ಳಾರಿ ಕಾರ್ಪೋರೇಟರ್‌ ಮನೆ ಮೇಲೆ ಸಿಬಿಐ ದಾಳಿ

Valmiki corporation scam: ವಾಲ್ಮೀಕಿ ಹಗರಣಕ್ಕೂ ಮುನ್ನ ಕಾರ್ಪೋರೇಟರ್ ಗೋವಿಂದರಾಜು ಮನೆಯನ್ನು ಮಾಜಿ ಸಚಿವ ನಾಗೇಂದ್ರ ಅವರಿಗೆ ಮಾರಾಟ ಮಾಡಲಾಗಿತ್ತು. ಆದರೆ ಖರೀದಿಯಾಗಿರಲಿಲ್ಲ, ಹಣದ ವಹಿವಾಟು ಆಗಿದ್ದರಿಂದ ಸಿಬಿಐ ದಾಳಿಯಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.

Rock inscription: ಸಂಡೂರಿನಲ್ಲಿ ವಿರೂಪಾಕ್ಷ, ವಿಷ್ಣು ದೇವರ ಆರಾಧನೆ ಕುರಿತ ಅಪ್ರಕಟಿತ ಮ್ಯಾಂಗನೀಸ್ ಶಿಲಾ ಶಾಸನ ಪತ್ತೆ!

ಸಂಡೂರಿನಲ್ಲಿ ವಿರೂಪಾಕ್ಷ, ವಿಷ್ಣು ದೇವರ ಕುರಿತ ಶಿಲಾ ಶಾಸನ ಪತ್ತೆ!

Ballari News: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ನಾರಿಹಳ್ಳ ಜಲಾಶಯದ ಹಿನ್ನೀರಿನ ತಟದಲ್ಲಿರುವ ಶ್ರೀ ಗಂಡಿ ಬಸವೇಶ್ವರ ದೇವಸ್ಥಾನದ ಅವರಣದಲ್ಲಿರುವ ಉಭಯ ದೇವರುಗಳ ಆರಾಧನೆಯನ್ನು ಉಲ್ಲೇಖಿಸುವ ಅಪರೂಪದ ಮ್ಯಾಂಗನೀಸ್ ಶಿಲಾಶಾಸನ ಪತ್ತೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.

Bellary Accident: ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರ ಸಾವು, 12 ಮಂದಿಗೆ ಗಾಯ

ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರ ಸಾವು

Road Accident: ಮಸ್ಕಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈರಾಪುರ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಗಾಯಾಳುಗಳನ್ನು ಬಳ್ಳಾರಿ ಟ್ರಾಮಾ ಕೇರ್ ಸೆಂಟರ್ ಮತ್ತು ಸಿರುಗುಪ್ಪ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Darshan Thoogudeepa: ಬಳ್ಳಾರಿ ಜೈಲಿಗೆ ಹೋಗಲಿದ್ದಾರಾ ದರ್ಶನ್‌? ʼದಾಸʼನ ಮುಂದಿನ ನಡೆ ಏನು?

ಬಳ್ಳಾರಿ ಜೈಲಿಗೆ ಹೋಗಲಿದ್ದಾರಾ ದರ್ಶನ್‌?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬಂದಿದ್ದ ಎ 2 ಆರೋಪಿ ನಟ ದರ್ಶನ್‌ನನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್‌ ಜಾಮೀನು ರದ್ದು ಪಡಿಸಿದ ಬೆನ್ನಲ್ಲೇ ಅವರನ್ನು ಬೆಂಗಳೂರಿನ ಹೊಸಕೆರೆ ಹಳ್ಳಿಯಿಂದ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಇದೀಗ ಅವರನ್ನು ಬಳ್ಳಾರಿ ಜೈಲಿಗೆ ಕಳುಹಿಸಲಾಗುತ್ತದ ಎನ್ನಲಾಗಿದೆ.

Bellary Accident: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ದಂಪತಿ ದುರ್ಮರಣ

ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ದಂಪತಿ ದುರ್ಮರಣ

Road Accident: ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕುಡದರಾಳ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ನಾಗಭೂಷಣ ರೆಡ್ಡಿ (36) ಮತ್ತು ಸಂಧ್ಯಾ (32) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಿರುಗುಪ್ಪ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Boy Death: ನಾಪತ್ತೆಯಾಗಿದ್ದ 4 ವರ್ಷದ ಬಾಲಕ ಶವವಾಗಿ ಬಾವಿಯಲ್ಲಿ ಪತ್ತೆ

ನಾಪತ್ತೆಯಾಗಿದ್ದ 4 ವರ್ಷದ ಬಾಲಕ ಶವವಾಗಿ ಬಾವಿಯಲ್ಲಿ ಪತ್ತೆ

ಬಳ್ಳಾರಿ (Bellary news) ಜಿಲ್ಲೆಯ ಸಿರಗುಪ್ಪ ತಾಲೂಕಿನ ರವಿಹಾಳ ರವಿಹಾಳ ಗ್ರಾಮದ ವೀರೇಶ್ ಪುತ್ರ ಸಿರಿ (4) ಶವವಾಗಿ ಬಾವಿಯಲ್ಲಿ ಪತ್ತೆಯಾಗಿದ್ದಾನೆ. ಎರಡು ದಿನದ ಹಿಂದೆ ಬಾಲಕ ನಾಪತ್ತೆಯಾಗಿದ್ದ. ನಿನ್ನೆ ಸಂಜೆ ಬಾವಿಯಲ್ಲಿ ಸ್ಥಳೀಯರು ಶವ ತೇಲುತ್ತಿರುವುದನ್ನು ನೋಡಿದ್ದಾರೆ.

Bellary News: ಬಳ್ಳಾರಿಯಲ್ಲಿ ಕಸದ ವಾಹನ ಹರಿದು 3 ವರ್ಷದ ಬಾಲಕ ಸಾವು

ಬಳ್ಳಾರಿಯಲ್ಲಿ ಕಸದ ವಾಹನ ಹರಿದು 3 ವರ್ಷದ ಬಾಲಕ ಸಾವು

Bellary News: ಬಳ್ಳಾರಿಯ ಬಾಪೂಜಿ ನಗರದಲ್ಲಿ ಘಟನೆ ನಡೆದಿದೆ. ರಸ್ತೆ ಬದಿ ಆಟ ಆಡುತ್ತಿದ್ದ ಬಾಲಕನ ತಲೆ ಮೇಲೆ ವಾಹನ ಹರಿದು ದುರಂತ ನಡೆದಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪಾಲಿಕೆ ಮೇಯರ್ ನಂದೀಶ್ ಹಾಗೂ ಪೊಲೀಸರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Heart Attack: ನಿಷ್ಕರುಣಿ ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ನಿಷ್ಕರುಣಿ ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

Heart Attack: ಮೃತ ವಿದ್ಯಾರ್ಥಿನಿಯನ್ನು ಕಾಳಂಗೇರಿಯ ದೀಕ್ಷಾ (12) ಎಂದು ಗುರುತಿಸಲಾಗಿದೆ. 6ನೇ ತರಗತಿಯಲ್ಲಿ ಓದುತ್ತಿದ್ದ ದೀಕ್ಷಾ ಎಂದಿನಂತೆ ಸಿದ್ಧಳಾಗಿ ಶಾಲೆಗೆ ಹೋಗುತ್ತಿದ್ದಳು. ಶಾಲೆಗೆ ತೆರಳುವಾಗ ಏಕಾಏಕಿ ಕುಸಿದು ಬಿದ್ದವಳನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ.

Terrorist Arrested: 58 ಜನರನ್ನು ಸಾಯಿಸಿದ ಕೊಯಮತ್ತೂರು ಬಾಂಬ್‌ ಸ್ಫೋಟ ಆರೋಪಿ 27 ವರ್ಷಗಳ ಬಳಿಕ ಕರ್ನಾಟಕದಲ್ಲಿ ಸೆರೆ!

ಕೊಯಮತ್ತೂರು ಬಾಂಬ್‌ ಸ್ಫೋಟ ಆರೋಪಿ 27 ವರ್ಷಗಳ ಬಳಿಕ ಕರ್ನಾಟಕದಲ್ಲಿ ಸೆರೆ!

Terrorist Arrested: ಕರ್ನಾಟಕದಲ್ಲಿ ಶಂಕಿತ ಉಗ್ರ ಸಾದಿಕ್ ರಾಜಾ ಚಲನವಲನಗಳ ಬಗ್ಗೆ ಕೊಯಮತ್ತೂರು ಪೊಲೀಸರು ಹಾಗೂ ಭಯೋತ್ಪಾದಕ ನಿಗ್ರಹ ದಳದ (ಎಟಿಎಸ್‌) ಪೊಲೀಸರು ಖಚಿತ ಮಾಹಿತಿ ಪಡೆದಿದ್ದರು. ಈತ ಕೊಯಮತ್ತೂರು ಬಾಂಬ್ ಬ್ಲಾಸ್ಟ್‌ನ ಮತ್ತೋರ್ವ ಪ್ರಮುಖ ಆರೋಪಿ ಎಸ್‌ಎ ಬಾಷಾ ಸ್ಥಾಪಿಸಿದ ನಿಷೇಧಿತ ಸಂಘಟನೆ ಅಲ್-ಉಮ್ಮಾದ ಕಾರ್ಯಕರ್ತನಾಗಿದ್ದ.

N Tippanna: ಮಾಜಿ ಸಂಸದ, ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್‌ ತಿಪ್ಪಣ್ಣ ನಿಧನ

ಮಾಜಿ ಸಂಸದ, ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್‌ ತಿಪ್ಪಣ್ಣ ನಿಧನ

N Tippanna: ಸಮಾಜಸೇವೆ ಸಲ್ಲಿಸಿದ ಎನ್​ ತಿಪ್ಪಣ್ಣ ಅವರಿಗೆ ಬಳ್ಳಾರಿ ಜಿಲ್ಲೆಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ 8ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಎನ್​ ತಿಪ್ಪಣ್ಣ ಸೇವೆ ಸಲ್ಲಿಸಿದ್ದರು.

Kannada Sahitya Sammelana 2025: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಲೇಖಕಿ ಬಾನು ಮುಷ್ತಾಕ್‌ ಆಯ್ಕೆ

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಲೇಖಕಿ ಬಾನು ಮುಷ್ತಾಕ್‌ ಆಯ್ಕೆ

Senior writer Banu Mushtaq: ಬಳ್ಳಾರಿಯ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಬಾನು ಮುಸ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

Self Harming: ಮೂವರು ಮಕ್ಕಳ ಜೊತೆ ಕೃಷಿ ಹೊಂಡಕ್ಕೆ ಜಿಗಿದು ತಾಯಿ ಆತ್ಮಹತ್ಯೆ

ಮೂವರು ಮಕ್ಕಳ ಜೊತೆ ಕೃಷಿ ಹೊಂಡಕ್ಕೆ ಜಿಗಿದು ತಾಯಿ ಆತ್ಮಹತ್ಯೆ

ಸಂಜೆಯಾದರೂ ಕುರಿಗಳು ಮತ್ತು ಪತ್ನಿ ಮಕ್ಕಳು ಹಿಂದಿರುಗದ ಹಿನ್ನೆಲೆಯಲ್ಲಿ ಪತಿ ಕುಮಾರ್ ಹುಡುಕಾಟ ನಡೆಸಿದ್ದಾನೆ. ಕೃಷಿ ಹೊಂಡದ ಬಳಿ ನಿಂತಿದ್ದ ಕುರಿಗಳನ್ನು ನೋಡಿ ಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾನೆ. ಪತ್ನಿ ಮಕ್ಕಳು ಕಾಣದಿದ್ದಾಗ ಕೃಷಿ ಹೊಂಡದಲ್ಲಿ ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ.

Bellary News: ಮೊಬೈಲ್‌ನಲ್ಲಿ ಬರೋಬ್ಬರಿ 13 ಸಾವಿರ ಮಹಿಳೆಯರ ಅಶ್ಲೀಲ ಫೋಟೋ, ವಿಡಿಯೋ ಪತ್ತೆ; ಸಂಡೂರಿನಲ್ಲಿ ಕಾಮುಕ ಅರೆಸ್ಟ್

ಕಾಮುಕನ ಮೊಬೈಲ್‌ನಲ್ಲಿ 13 ಸಾವಿರ ಮಹಿಳೆಯರ ಅಶ್ಲೀಲ ಫೋಟೋ, ವಿಡಿಯೋ ಪತ್ತೆ!

Bellary News: ನಕಲಿ‌ ಖಾತೆ ಸೃಷ್ಟಿಸಿ ಮಹಿಳೆ ಹಾಗೂ ಯುವತಿಯರ ನಗ್ನ ಪೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಕಾಮುಕನನ್ನು ಬಳ್ಳಾರಿಯ ಸಂಡೂರಿನಲ್ಲಿ ಬಂಧಿಸಲಾಗಿದೆ. ವಿದ್ಯಾರ್ಥಿನಿಯೊಬ್ಬಳು ನೀಡಿದ್ದ ದೂರಿನ ಅನ್ವಯ ಕೇಸ್ ದಾಖಲಿಸಿಕೊಂಡಿಸಿದ್ದ ಮುಂಬೈ ಪೊಲೀಸರು, ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

Janardhana Reddy: ಜನಾರ್ದನ ರೆಡ್ಡಿ ಶಿಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ, ಶಾಸಕ ಸ್ಥಾನ ಏನಾಗುತ್ತೆ?

ಜನಾರ್ದನ ರೆಡ್ಡಿ ಶಿಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ, ಶಾಸಕ ಸ್ಥಾನ ಏನಾಗುತ್ತೆ?

Janardhana Reddy: ಜನಪ್ರತಿನಿಧಿಗಳ ಕಾಯಿದೆ ಪ್ರಕಾರ, ಯಾವುದೇ ಶಾಸಕ ಅಥವಾ ಸಂಸದ ಎರಡು ವರ್ಷಕ್ಕೂ ಮೇಲ್ಪಟ್ಟ ಅವಧಿಗೆ ಜೈಲುಶಿಕ್ಷೆಗೆ ಒಳಗಾದರೆ, ಅವರ ಶಾಸಕ ಸ್ಥಾನ ತಕ್ಷಣದಿಂದಲೇ ರದ್ದಾಗುತ್ತದೆ. ಆದರೆ ಎರಡು ತಿಂಗಳ ಒಳಗೆ ಆತ ಮೇಲ್ಮನವಿ ಮೂಲಕ ಈ ಶಿಕ್ಷೆಯನ್ನು ರದ್ದುಗೊಳಿಸಿಕೊಂಡರೆ ಅಥವಾ ತಡೆಯಾಜ್ಞೆ ತಂದರೆ, ಆಗ ಆ ಸ್ಥಾನ ಅವರಲ್ಲಿಯೇ ಉಳಿಯುತ್ತದೆ.

Valmiki Scam: ವಾಲ್ಮೀಕಿ ಹಗರಣ: ಕಾಂಗ್ರೆಸ್‌ನ ಸಂಸದ, ಇಬ್ಬರು ಶಾಸಕರ ಮನೆ ಮೇಲೆ ಇಡಿ ದಾಳಿ

ವಾಲ್ಮೀಕಿ ಹಗರಣ: ಕಾಂಗ್ರೆಸ್‌ನ ಸಂಸದ, ಇಬ್ಬರು ಶಾಸಕರ ಮನೆ ಮೇಲೆ ಇಡಿ ದಾಳಿ

Valmiki Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ತುಕಾರಾಂ ಅವರ ಪಾತ್ರ ಇದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ತುಕಾರಾಂ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಸಂಡೂರಿನಲ್ಲಿರುವ ಸಂಸದ ತುಕಾರಾಂ ಮನೆಯಲ್ಲಿ ಇಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

Sandur Accident: ಸಂಡೂರಿನಲ್ಲಿ ಭೀಕರ ಅಪಘಾತ; ಟಿಪ್ಪರ್‌ ಲಾರಿ-ಕಾರು ಡಿಕ್ಕಿಯಾಗಿ ನಾಲ್ವರ ದುರ್ಮರಣ

ಸಂಡೂರಿನಲ್ಲಿ ಟಿಪ್ಪರ್‌ ಲಾರಿ-ಕಾರು ಡಿಕ್ಕಿಯಾಗಿ ನಾಲ್ವರ ದುರ್ಮರಣ

Sandur Accident: ಬಳ್ಳಾರಿ ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ಅಪಘಾತ ನಡೆದಿದೆ. ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್​ ಲಾರಿ ಮತ್ತು ಕಾರು ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ದುರ್ಮರಣ ಹೊಂದಿದ್ದಾರೆ.

Amara Premi Arun Movie: ʼಅಮರ ಪ್ರೇಮಿ ಅರುಣ್ʼ ಚಿತ್ರ ಏ.25ಕ್ಕೆ ರಿಲೀಸ್‌

ʼಅಮರ ಪ್ರೇಮಿ ಅರುಣ್ʼ ಚಿತ್ರ ಏ.25ಕ್ಕೆ ರಿಲೀಸ್‌

Amara Premi Arun Movie: ಪ್ರವೀಣ್ ಕುಮಾರ್ ಜಿ. ಬರವಣಿಗೆ ಹಾಗೂ ನಿರ್ದೇಶನದ ʼಅಮರ ಪ್ರೇಮಿ ಅರುಣ್ʼ ಚಿತ್ರ ಈ ವಾರ (ಏಪ್ರಿಲ್ 25) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಳ್ಳಾರಿ ಭಾಗದ ಪ್ರೇಮ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಹರಿಶರ್ವ ಅಭಿನಯಿಸಿದ್ದಾರೆ. ನಾಯಕಿಯಾಗಿ ದೀಪಿಕಾ ಆರಾಧ್ಯ ಇದ್ದಾರೆ. ಈ ಕುರಿತ ವಿವರ ಇಲ್ಲಿದೆ.

Loading...